ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಅಧಿಕಾರ ಸ್ವೀಕಾರ

ಸುದ್ದಿಗಳು News

Posted by vidyamaana on 2024-07-05 10:22:02 |

Share: | | | | |


ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಅಧಿಕಾರ ಸ್ವೀಕಾರ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಇಂದು ಮಂಗಳೂರಿನ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಿಷ್ಯಂತ್ ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗಾವಣೆಯಾಗಿದ್ದರು.

2016 ರ ಕರ್ನಾಟಕ ಕೇಡರ್ ನ IPS ಅಧಿಕಾರಿ ಯತೀಶ್ ಎನ್ ಈ ಹಿಂದೆ ಮಂಡ್ಯ ಎಸ್ಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದರು. ಇನ್ನೂ ಹಲವಾರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 Share: | | | | |


ಪುತ್ತೂರು: ಅನಿತಾ ಬೀಡಿ ವರ್ಕ್ ಕಂಪೆನಿ ಮಾಲೀಕ ಮಹಮ್ಮದ್ ಆಲಿ ಮನೆ ಮೇಲೆ ಐಟಿ ದಾಳಿ

Posted by Vidyamaana on 2023-10-10 15:03:12 |

Share: | | | | |


ಪುತ್ತೂರು: ಅನಿತಾ ಬೀಡಿ ವರ್ಕ್ ಕಂಪೆನಿ ಮಾಲೀಕ ಮಹಮ್ಮದ್ ಆಲಿ ಮನೆ ಮೇಲೆ ಐಟಿ ದಾಳಿ

ಉಪ್ಪಿನಂಗಡಿ ಸಮೀಪದ ಪೆರ್ನೆ ಎಂಬಲ್ಲಿರುವ ಅನಿತಾ ಬೀಡಿ ವರ್ಕ್ಸ್ ಮಾಲೀಕರ ಮಹಮ್ಮದ್ ಆಲಿ ಯಾನೆ ಮಮ್ಮು ಅವರ ಮನೆ ಮೇಲೆ ಐಟಿ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಪೆರ್ನೆ ಸಮೀಪ ಇರುವ ಅವರ ಮನೆ ಬಳಿಯೇ ಅನಿತಾ ಬೀಡಿ ಕಂಪೆನಿ ಕಾರ್ಯ ನರ್ವಹಿಸುತ್ತಿದೆ. ಆದಾಯ ತೆರಿಗೆ ಇಲಾಖೆಯ ಹಲವು ಅಧಿಕಾರಿಗಳಿಂದ ಮನೆ ಮತ್ತು ವರ್ಕ್ ಶಾಪ್ ಗೆ ಏಕ ಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಲವ್‌ ಮಾಡ್ತಿದ್ದ ಹುಡ್ಗಿನ ಬೆಂಗ್ಳೂರಿಗೆ ಕರೆಸಿ, ಸ್ನೇಹಿತ ಚೇತನ್ ನೊಂದಿಗೆ ಸೇರಿ ಅತ್ಯಾಚಾರ ಮಾಡಿದ ಪ್ರಿಯಕರ ಪುರುಷೋತ್ತಮ್

Posted by Vidyamaana on 2023-06-08 16:48:08 |

Share: | | | | |


ಲವ್‌ ಮಾಡ್ತಿದ್ದ ಹುಡ್ಗಿನ ಬೆಂಗ್ಳೂರಿಗೆ ಕರೆಸಿ, ಸ್ನೇಹಿತ ಚೇತನ್ ನೊಂದಿಗೆ ಸೇರಿ ಅತ್ಯಾಚಾರ ಮಾಡಿದ ಪ್ರಿಯಕರ ಪುರುಷೋತ್ತಮ್

ಬೆಂಗಳೂರು: ಜೀವನದಲ್ಲಿ ಇನ್ನುಮುಂದೆ ಜೊತೆಯಾಗಿ ಇರ್ತೀನಿ, ಕಣ್ಣಲ್ಲಿ ಕಣ್ಣಿಟ್ಟು ನೋಡ್ಕೋತೀನಿ ಎಂದು ಭರವಸೆ ನೀಡಿದ್ದ ಪ್ರೀತಿಸಿದ ಹುಡುಗನನ್ನು ನಂಬಿಕೊಂಡು ತುಮಕೂರಿನಿಂದ ಬೆಂಗಳೂರಿಗೆ ಬಂದ ಹುಡುಗಿಯ ಮೇಲೆ ಪ್ರೀತಿಸಿದ ಯುವಕ ಹಾಗೂ ಆತನ ಸ್ನೇಹಿತ ಸೇರಿಕೊಂಡು ಅತ್ಯಾಚಾರ ಮಾಡಿರುವ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಹೆಣ್ಣು ಮಕ್ಕಳಿಗೆ ಅಥವಾ ಮಹಿಳೆಯರಿಗೆ ಎಲ್ಲಿಗೆ ಹೋದರೂ ರಕ್ಷಣೆ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ತಂದೆ- ತಾಯಿಯನ್ನು ಬಿಟ್ಟು ಮತ್ತೊಬ್ಬ ವ್ಯಕ್ತಿಯನ್ನು ಹೆಣ್ಣು ನಂಬುವುದಾದರೆ ಅದು ಪ್ರೀತಿಸಿದ ಹುಡುಗ ಅಥವಾ ಗಂಡ ಮಾತ್ರ. ಆದರೆ, ಇಲ್ಲಿ ಜೀವನಪೂರ್ತಿ ನಿನ್ನ ಜೊತೆಗಿರ್ತೀನಿ ಎಂದು ಭರವಸೆ ನೀಡಿದ ಪ್ರೀತಿಸಿದ ಯುವಕನನ್ನು ನಂಬಿಕೊಂಡು ಬಂದ ಯುವತಿಯ ಮೇಲೆ ಅತ್ಯಾಚಾರ ನಡೆದು ಹೋಗಿದೆ. ಅದು ಕೂಡ, ಪ್ರೀತಿಸಿದ ಯುವಕ ತಾನು ಮಾತ್ರವಲ್ಲದೇ ತನ್ನ ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರ ಮಾಡಿದ್ದು, ಸಂತ್ರಸ್ತ ಯವತಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾಳೆ. ಗಿರಿನಗರದಲ್ಲಿ ಸ್ನೇಹಿತನ ಜೊತೆಗೂಡಿ ಅತ್ಯಾಚಾರ: ಯುವತಿಯ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ ಘಟನೆ ನಡೆದಿರುವುದು ಬೆಂಗಳೂರಿನ ಗಿರಿನಗರದ ಈರಣ್ಣಗುಡ್ಡೆಯಲ್ಲಿ. ಅತ್ಯಾಚಾರಕ್ಕೊಳಗಾದ ಯುವತಿ ತುಮಕೂರು ನಗರದವಳಾಗಿದ್ದು, ಪ್ಯಾರಾಮೆಡಿಕಲ್‌ ಅಭ್ಯಾಸ ಮಾಡುತ್ತಿದ್ದಳು. ಪ್ರೀತಿಸಿದ ಹುಡುಗಿಯ ಮೇಲೆ ಪ್ರಿಯಕರ ಹಾಗು ಸ್ನೇಹಿತನಿಂದ ಅತ್ಯಾಚಾರ ನಡೆದಿದೆ. ಪುರುಷೋತ್ತಮ್ ಹಾಗು ಚೇತನ್ ಬಂಧಿತ ಆರೋಪಿಗಳು. ಪುರುಷೋತ್ತಮ್ ಹಾಗು ಯುವತಿ ಒಂದು ವರ್ಷದಿಂದ ಲವ್ ಮಾಡುತ್ತಿದ್ದರು. ಮೂಲತಃ ತುಮಕೂರಿನ ನಿವಾಸಿಯಾದ ಯುವತಿ ಕಾಲೇಜಿನಲ್ಲಿ ಓದುತ್ತಿದ್ದು, ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು.

ಮುಂಬೈ ಹೋರ್ಡಿಂಗ್‌ ದುರಂತ: ರಹಸ್ಯ ಕಾರ್ಯಾಚರಣೆ ನಡೆಸಿ ಆರೋಪಿಯ ಬಂಧಿಸಿದ ಪೊಲೀಸರು

Posted by Vidyamaana on 2024-05-17 22:41:35 |

Share: | | | | |


ಮುಂಬೈ ಹೋರ್ಡಿಂಗ್‌ ದುರಂತ: ರಹಸ್ಯ ಕಾರ್ಯಾಚರಣೆ ನಡೆಸಿ ಆರೋಪಿಯ ಬಂಧಿಸಿದ ಪೊಲೀಸರು

ಮುಂಬೈ ನಲ್ಲಿ ಜಾಹೀರಾತು ಫಲಕ ಬಿದ್ದು 16 ಜೀವಗಳನ್ನು ಬಲಿ ಪಡೆದಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ರಹಸ್ಯ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಮುಂಬೈನ ಘಾಟ್ಕೋಪರ್ ಹೋರ್ಡಿಂಗ್(Hoarding)​ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಹಸ್ಯ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಮುಂಬೈನಲ್ಲಿ ಸೋಮವಾರ ಬೀಸಿದ ಬಿರುಗಾಳಿಗೆ ಘಾಟ್ಕೋಪರ್​ನ ಪೆಟ್ರೋಲ್​ ಬಂಕ್ ಮೇಲೆ ಬೃಹತ್ ಗಾತ್ರದ ಹೋರ್ಡಿಂಗ್​ ಬಿದ್ದಿತ್ತು. ಇದರ ಕೆಳಗೆ ಸಾಕಷ್ಟು ಮಂದಿ ಸಿಲುಕಿಕೊಂಡಿದ್ದರು. ಇವರ ರಕ್ಷಣೆಗೆ ಕೇಂದ್ರ ವಿಪತ್ತು ನಿರ್ವಹಣಾ ತಂಡ ಧಾವಿಸಿತ್ತು. ಸುಮಾರು 66 ಗಂಟೆಗಳ ಕಾರ್ಯಾಚರಣೆ ಗುರುವಾರ ಅಂತ್ಯಗೊಂಡಿದ್ದು, 16 ಮಂದಿ ಶವಗಳು ಪತ್ತೆಯಾಗಿದೆ.

ಸಂಸತ್ತಿನೊಳಗೆ ಹೋಗಲು ವಿಸಿಟರ್ಸ್ ಪಾಸ್ ಪಡೆಯುವುದು ಹೇಗೆ? ಪ್ರೋಟೋಕಾಲ್​​ಗಳು ಹೇಗೆ?

Posted by Vidyamaana on 2023-12-13 20:12:38 |

Share: | | | | |


ಸಂಸತ್ತಿನೊಳಗೆ ಹೋಗಲು ವಿಸಿಟರ್ಸ್ ಪಾಸ್ ಪಡೆಯುವುದು ಹೇಗೆ? ಪ್ರೋಟೋಕಾಲ್​​ಗಳು ಹೇಗೆ?

 ಸಂಸತ್​​​​ ಒಳಗೆ ಬಂದು ಅಶ್ರುವಾಯು ಸಿಡಿಸಿದ ಮೈಸೂರಿನ ವ್ಯಕ್ತಿ ಸೇರಿ ಇಬ್ಬರನ್ನು ಬಂಧಿಸಲಾಗಿದೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಮೈಸೂರು ಸಂಸದ ಪ್ರತಾಪ್​​​ ಸಿಂಹ ಅವರ ಪಿಎ ವಿಸಿಟರ್ಸ್ ಪಾಸ್ ನೀಡಿದ್ದಾರೆ ಎಂದು ಹೇಳಲಾಗಿದೆ. ಆದರೆ ವಿಸಿಟರ್ಸ್ ಪಾಸ್ ಪಡೆಯಬೇಕಾದರೆ ಏನು ಮಾಡಬೇಕು.ಅಲ್ಲಿಯ ಭದ್ರತಾ ಹಂತಗಳು ಹೇಗಿರುತ್ತದೆ ಎಂಬ ಮಾಹಿತಿ ಇಲ್ಲಿದೆ. Parliament security breach) ಉಂಟಾಗಿದ್ದು, ಸಾಗರ್​​ ಶರ್ಮ ಮತ್ತು ಮನೋರಂಜನ್‌​​ ಎಂಬ ಇಬ್ಬರು ಯುವಕರು ಸಂಸತ್​​​ ಅಧಿವೇಶದಲ್ಲಿ ನಿಂತ ಅಶ್ರುವಾಯು ಸಿಡಿಸಿದ ಘಟನೆ ನಡೆದಿದೆ. ಇದೀಗ ಒಟ್ಟು ನಾಲ್ಕು ಜನರನ್ನು ಬಂಧಿಸಿದ್ದಾರೆ. ಬಂಧನವಾಗಿರುವ ನಾಲ್ವರಲ್ಲಿ ಒಬ್ಬ ಮೈಸೂರಿನ ಮನೋಹರ್​​ ಎಂದು ಹೇಳಲಾಗಿದೆ. ಇವರಿಗೆ ಸಂಸತ್​​​ ಒಳಗೆ ಹೋಗಲು ಮೈಸೂರಿನ ಸಂಸದ ಪ್ರತಾಪ್​​​​ ಸಿಂಹ ಅವರ ಪಿಎ ಪಾಸ್​​​ ನೀಡಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ಈ ವಿಸಿಟರ್ಸ್ ಪಾಸ್ ಎಂದರೇನು? ಸಂಸತ್​​ ಒಳಗೆ ಒಬ್ಬ ಸಾಮಾನ್ಯ ವ್ಯಕ್ತಿ ಹೋಗಬೇಕಾದರೆ ಯಾವೆಲ್ಲ ಕ್ರಮ ಮತ್ತು ಭದ್ರತೆಗಳನ್ನು ಪರಿಶೀಲನೆ ಮಾಡಲಾಗುತ್ತದೆ ಎಂಬುದನ್ನು ಇಲ್ಲಿ ತಿಳಿಯಿರಿ.


ಪಾಸ್​​ ಪಡೆಯುವುದು ಮತ್ತು ಪ್ರೋಟೋಕಾಲ್​​ಗಳು ಹೇಗೆ?


ಸಂಸತ್ತಿನ ಸಂಕೀರ್ಣದೊಳಗೆ ಹೋಗಲು ನೀಡುವ ಗ್ಯಾಲರಿ ಪಾಸ್‌ಗಳ ವಿತರಣೆಯ ನಿಯಂತ್ರಣ ಪ್ರೋಟೋಕಾಲ್​​​​​​ ಹೊಂದಿರುತ್ತದೆ. ಸಂಸತ್ತಿನ ಸದಸ್ಯರು ಮಾತ್ರ ಇದಕ್ಕೆ ಅರ್ಜಿ ಸಲ್ಲಿಸಬಹುದು, ಪತ್ರಕರ್ತರು, ಮಾಧ್ಯಮ ಮಿತ್ರರು ವೀಕ್ಷಕರಾಗಿ ಈ ಪಾಸ್ ಪಡೆಯಬಹುದು​​​ , ಪ್ರತಿ ಪಾಸ್‌ಗೆ ವಿಶಿಷ್ಟ ಐಡಿಯನ್ನು ನಿಗದಿಪಡಿಸಲಾಗಿದೆ. ಈಗಾಗಲೇ ಈ ಪಾಸ್​​​ ಐಡಿಯಲ್ಲೂ ಬೇರೆ ಬೇರೆ ವಿಧಗಳಿವೆ. ಪ್ರೇಕ್ಷಕರ ಗ್ಯಾಲರಿಗೆ ಪಾಸ್​​​​ ಪಡೆಯಬೇಕಾದರೆ ಸಂಸದ ಸಹಿ ಕೂಡ ಇರಬೇಕು. ಒಂದು ಪಾಸ್​​​ನಲ್ಲಿ ಇಬ್ಬರು ಹೋಗಬಹುದು. ಆ ಪಾಸಿನಲ್ಲಿ ಒಬ್ಬ ಮತ್ತು ಪ್ಲಸ್​​​ ಎಂದು ನಮೂದಿಸಿರುತ್ತಾರೆ. ಇನ್ನು ವಿದ್ಯಾರ್ಥಿಗಳು ಈ ಪಾಸ್​​​ ಪಡೆಯಬೇಕಾದರೆ ಶಾಲೆಯಿಂದ ಒಂದು ಪತ್ರವನ್ನು ಪಡೆದು, ಅದಕ್ಕೆ ಸಂಸದರ ಸಹಿ ಇದ್ದು, ನಂತರ ಹೋಗಬಹುದು.


ಭದ್ರತಾ ರಕ್ಷಕರ ಕಾರ್ಯ


ಸಂಸತ್ತಿನ ಒಳಗೆ ಹಲವು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿರುತ್ತದೆ. ಇದನ್ನು ನೋಡಿಕೊಳ್ಳುವವರು ಜಂಟಿ ಕಾರ್ಯದರ್ಶಿ. ಇದರಲ್ಲಿ ದೆಹಲಿ ಪೊಲೀಸ್, ಸಂಸತ್ತು ರಕ್ಷಕರು ಮತ್ತು ವಿವಿಧ ಮಿತ್ರ ಭದ್ರತಾ ಏಜೆನ್ಸಿಗಳನ್ನು ಒಳಗೊಂಡಿರುತ್ತಾರೆ. ಇನ್ನು ಸಂಸತ್ತಿನಲ್ಲಿ ಭದ್ರತಾ ವ್ಯವಸ್ಥೆಯನ್ನು ಬಹು-ಪದರದಿಂದ ವಿನ್ಯಾಸಗೊಳಿಸಲಾಗಿದೆ. ಅತ್ಯಾಧುನಿಕ ತಂತ್ರಜ್ಞಾನಗಳು ಮತ್ತು ಸಾಂಪ್ರದಾಯಿಕ ಭದ್ರತಾ ಕ್ರಮಗಳನ್ನು ಒಳಗೊಂಡಿದೆ. ಇಲ್ಲಿ ಟೈರ್ ಕಿಲ್ಲರ್‌ಗಳು ಮತ್ತು ರೋಡ್ ಬ್ಲಾಕರ್‌ಗಳನ್ನು ಅಳವಡಿಸಿಕೊಳ್ಳಲಾಗಿದೆ.


ಪ್ರದೇಶವಾರು ಜವಾಬ್ದಾರಿ


ಇನ್ನು ಇಲ್ಲಿ ಪ್ರದೇಶವಾರು ಜವಾಬ್ದಾರಿಗಳನ್ನು ಹೊಂದಿರುತ್ತದೆ. ಭದ್ರತಾ ಅಧಿಕಾರಿ/ಸಹಾಯಕ ನಿರ್ದೇಶಕರು (ಭದ್ರತೆ) ಸಂಸತ್ ಭವನದ ಕಟ್ಟಡದೊಳಗೆ ಹೋಗುವ ವ್ಯಕ್ತಿಗಳ ಪಾಸ್‌ಗಳನ್ನು ಸರಿಯಾಗಿ ಪರಿಶೀಲಿಸುತ್ತಾರೆ ಮತ್ತು ಅವರನ್ನು ಕೂಡ ಪರಿಶೀಲಿಸುತ್ತಾರೆ. ಯಾವುದೇ ಅನುಮಾನ ಬಂದರು ಅವುಗಳನ್ನು ಹಿರಿಯ ಅಧಿಕಾರಿಗಳಿಗೆ ಹೇಳುತ್ತಾರೆ. ಅಲ್ಲಿ ಅನುಮಾನಾಸ್ಪ ವಿಚಾರಗಳು ತಿಳಿದುಬಂದಲ್ಲಿ ತಕ್ಷಣ ಆ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಾರೆ.


ಸಂಸತ್​​​ ಗ್ಯಾಜೆಟ್‌, ಡೋರ್-ಫ್ರೇಮ್ ಮೆಟಲ್ ಡಿಟೆಕ್ಟರ್‌ ಅಳವಡಿಕೆ


ಭದ್ರತಾ ಶಸ್ತ್ರಾಗಾರವು ಡೋರ್-ಫ್ರೇಮ್ ಮೆಟಲ್ ಡಿಟೆಕ್ಟರ್‌ಗಳು, ಆಧುನಿಕ ಗ್ಯಾಜೆಟ್‌ಗಳು ಮತ್ತು ವಾಹನದ ಪ್ರವೇಶವನ್ನು ನಿಯಂತ್ರಿಸುವ ರೇಡಿಯೋ ಫ್ರೀಕ್ವೆನ್ಸಿ ಟ್ಯಾಗ್‌ಗಳನ್ನು ವ್ಯವಸ್ಥಿತವಾಗಿ ನಿರ್ಮಿಸಲಾಗಿದೆ. ಈ ಮೂಲಕ ಸಂಸತ್ತಿನಲ್ಲಿ ಸಂದರ್ಶಕನನ್ನು ಪರೀಕ್ಷಿಸಲಾಗುತ್ತದೆ ಮತ್ತು ಅವರ ಬ್ಯಾಗ್‌ಗಳನ್ನು ಕನಿಷ್ಠ ಮೂರು ಬಾರಿ ಪರಿಶೀಲಿಸಲಾಗುತ್ತದೆ. ಮೆಟಲ್ ಡಿಟೆಕ್ಟರ್‌ಗಳಲ್ಲಿ ಪರಿಶೀಲಿಸಿದ ನಂತರ ಮತ್ತೆ ಎರಡನೇ ಹಂತದ ಭದ್ರತಾ ತಪಾಸಣೆ ಮಾಡಲಾಗುತ್ತದೆ.ಸಂದರ್ಶಕರ ಗ್ಯಾಲರಿಗೆ ಪ್ರವೇಶಿಸುವ ಮೊದಲು ಮತ್ತೊಂದು ಭದ್ರತಾ ತಪಾಸಣೆ ಮಾಡಲಾಗುತ್ತದೆ.


ಶಸ್ತ್ರಾಸ್ತ್ರ ನಿಷೇಧ


ಸಂಸತ್ತಿನ ಕೆಲವು ಸದಸ್ಯರಿಗೆ ಭದ್ರತಾ ಸಿಬ್ಬಂದಿಗಳನ್ನು ನೀಡಲಾಗಿದೆ. ಆದರೆ ಅವರು ಅಧಿವೇಶನದ ಒಳಗೆ ಬರುವಂತಿಲ್ಲ. ಸಂಸತ್ ಭವನದ ಸಂಕೀರ್ಣದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಪ್ರತಿ ಗೇಟ್‌ನಲ್ಲಿ ನಿಖರವಾದ ತಪಾಸಣೆ ನಂತರವೇ ಭದ್ರತಾ ಸಿಬ್ಬಂದಿಗೆ ಸಂಸತ್ತಿನ ಒಳಗೆ ಬರಬಹುದು


ಭದ್ರತಾ ಗುರುತಿಸುವಿಕೆ ಮತ್ತು ಸಮನ್ವಯ


ಸಂಸತ್ತಿನ ಒಳಗಿನ ಪ್ರವೇಶವು ವಿವಿಧ ಭದ್ರತಾ ಏಜೆನ್ಸಿಗಳ ನಡುವೆ ಗುರುತಿಸುವಿಕೆ ಮತ್ತು ಪರಿಶೀಲನೆ ಹಾಗೂ ಸಮನ್ವಯವನ್ನು ಸಾಧಿಸಲಾಗುತ್ತದೆ.ದೆಹಲಿ ಪೊಲೀಸ್, ಪಾರ್ಲಿಮೆಂಟ್ ಡ್ಯೂಟಿ ಗ್ರೂಪ್, ಇಂಟೆಲಿಜೆನ್ಸ್ ಬ್ಯೂರೋ, ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ ಮತ್ತು ನ್ಯಾಷನಲ್ ಸೆಕ್ಯುರಿಟಿ ಗಾರ್ಡ್‌ ಸಂಸತ್ತಿನ ಭದ್ರತಾ ಸೇವೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.

ಹೊಸ ಟ್ರೆಂಡ್ ಸೃಷ್ಟಿಸಿದ ಮೋದಿ ಎಐ ವಾಯ್ಸ್ - ಮೋದಿ ವಾಯ್ಸನಲ್ಲಿ ಕನ್ನಡ ಹಾಡು ಕೂಡ ಕೇಳಬಹುದು : ಹೇಗೆ ಗೊತ್ತಾ?

Posted by Vidyamaana on 2023-10-05 06:42:29 |

Share: | | | | |


ಹೊಸ ಟ್ರೆಂಡ್ ಸೃಷ್ಟಿಸಿದ ಮೋದಿ ಎಐ ವಾಯ್ಸ್ - ಮೋದಿ ವಾಯ್ಸನಲ್ಲಿ ಕನ್ನಡ ಹಾಡು ಕೂಡ ಕೇಳಬಹುದು : ಹೇಗೆ ಗೊತ್ತಾ?

ಆಧುನಿಕ ಕಾಲಘಟ್ಟದಲ್ಲಿ ಕೃತಕ ಬುದ್ಧಿಮತ್ತೆ ಎಲ್ಲೆಡೆ ಸದ್ದು ಮಾಡುತ್ತಿದ್ದು, ಇದೀಗ ಪ್ರಸಿದ್ಧರ ಧ್ವನಿಗಳನ್ನು ನಕಲು ಮಾಡಲು ಕೂಡ ಎಐ ಬಳಕೆಯಾಗುತ್ತಿದೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲರ್‌ಗಳಿಗೆ, ಮೆಮ್‌ ಪೇಜ್‌ಗಳಿಗೆ ಇದೊಂದು ಹೊಸ ಅಸ್ತ್ರವಾಗಿದೆ.ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ಅವರ ಎಐ ಆಧಾರಿತ ಧ್ವನಿ ಬಳಸಿದ ವಿಡಿಯೋಗಳು ಟ್ರೋಲ್‌ ಆಗುತ್ತಿದೆ. ಈಚೆಗೆ ಭಾರತದಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಪಾಲ್ಗೊಂಡ ವಿವಿಧ ದೇಶಗಳ ಮಹಿಳಾ ಅಧಿಕಾರಿಗಳ ಜತೆ ಮೋದಿ ನಡೆಸಿದ ಮಾತುಕತೆಯ ವಿಡಿಯೋಗೆ ಎಐ ವಾಯ್ಸ್‌ ಬಳಸಿ ಟ್ರೋಲ್ ಮಾಡಲಾಗಿದೆ. ಇವರಲ್ಲದೆ ಇನ್ನೂ ಹಲವು ಖ್ಯಾತರ ವಿಡಿಯೋಗಳಿಗೆ ಅವರ ಧ್ವನಿಯನ್ನು ನಕಲು ಮಾಡಿ ಟ್ರೋಲ್ ಮಾಡುತ್ತಿದ್ದಾರೆ.


ಗೂಗಲ್‌ನಲ್ಲಿ ಎಐ ವಾಯ್ಸ್‌ ಚೇಂಜರ್ ಅಂತಾ ಟೈಪಿಸಿದರೆ ಸಾವಿರಾರು ವಾಯ್ಸ್ ಎಐ ವೆಬ್‌ಸೈಟ್‌ಗಳು ಬರುತ್ತವೆ. ಅಲ್ಲದೇ ಆ್ಯಪ್ ಗಳು ಲಭ್ಯವಿವೆ. ಯಾರಿಗೆ ಯಾವ ಮೂಲ ಧ್ವನಿಯಲ್ಲಿ ಯಾರ ಎಐ ಬೇಕಾಗಿರುತ್ತದೋ ಅದನ್ನು ಆಯ್ಕೆ ಮಾಡಿಕೊಂಡರೆ ಅದು ಸಿದ್ಧವಾಗುತ್ತದೆ. ಬಳಕೆದಾರರು ಇವುಗಳನ್ನು ಬಳಸಿಕೊಂಡು ತಮಗೆ ಬೇಕಾದವರ ಧ್ವನಿಗಳನ್ನು ನಕಲು ಮಾಡಬಹುದು.ಉದಾಹರಣೆಗೆ ಕನ್ನಡದ ಉಸಿರೇ.. ಉಸಿರೇ ಹಾಡನ್ನು ಪ್ರಧಾನಿ ಮೋದಿ ಅವರ ಧ್ವನಿಯಲ್ಲಿ ಕೇಳಬೇಕಾದರೆ ಉಸಿರೇ ಉಸಿರೇ ಹಾಡಿನ ಕ್ಲಿಪ್ ಅಥವಾ ಲಿಂಕ್ ಅನ್ನು ಹಾಕಿ ಮೋದಿ ಧ್ವನಿಗೆ ಬದಲಿಸಬಹುದು.ಇದನ್ನು ಮನರಂಜನಾತ್ಮಕವಾಗಿ ಮಾಡಲು ಶುರುಮಾಡಿದ್ದು, ಇದೀಗ ಮೋಸದಾಟಕ್ಕೂ ಬಳಕೆಯಾಗುತ್ತಿರುವುದು ಬೆಳಕಿಗೆ ಬಂದಿದೆ.

ಕೆಲಸ ಸಿಗದ ಚಿಂತೆಯಲ್ಲಿ ನೇತ್ರಾವತಿಗೆ ಹಾರಿದ ಪುತ್ತೂರಿನ ಯುವಕ

Posted by Vidyamaana on 2024-02-19 14:19:11 |

Share: | | | | |


ಕೆಲಸ ಸಿಗದ ಚಿಂತೆಯಲ್ಲಿ ನೇತ್ರಾವತಿಗೆ ಹಾರಿದ ಪುತ್ತೂರಿನ ಯುವಕ

ಬಂಟ್ವಾಳ : ಪದವೀಧರನಾಗಿಯೂ ನಿರುದ್ಯೋಗಿಯಾಗಿರುವ ಚಿಂತೆಯಲ್ಲಿ ಪುತ್ತೂರಿನ ಯುವಕನೋರ್ವ ಪಾಣೆಮಂಗಳೂರಿನ ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಸೋಮವಾರ ನಡೆದಿದೆ.


ಪುತ್ತೂರಿನ ಆನಂದ ಎಂಬವರ ಪುತ್ರ ನಿಶ್ಚಿತ್ (38) ಎಂಬಾತನೇ ಪಾಣೆಮಂಗಳೂರಿನಲ್ಲಿ ನೇತ್ರಾವತಿಗೆ ಹಾರಲು ಯತ್ನಿಸಿದ ಯುವಕ. ಈತ ಎಂ ಎಸ್ ಡಬ್ಲ್ಯು ಪದವೀಧರನಾಗಿದ್ದು, ಸೂಕ್ತ ಉದ್ಯೋಗ ದೊರೆಯದ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೊಳಗಾಗಿ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ. 


ದ್ವಿಚಕ್ರ ವಾಹನದಲ್ಲಿ ಬಂದಿದ್ದ ಈತ  ವಾಹನ ನಿಲ್ಲಿಸಿ ನದಿಗೆ ಹಾರುವ ಸಿದ್ದತೆಯಲ್ಲಿದ್ದಾಗ ಗಮನಿಸಿದ ಸ್ಥಳೀಯ ನಿವಾಸಿ ಯುವಕರಾದ ಹನೀಫ್@ಹನೀಫ್ ಬಾಯಿ,  ಸಲ್ಮಾನ್ ಫಾರಿಸ್, ಇರ್ಫಾನ್ ಖಲೀಲ್, ನೌಫಲ್ ಸಿ ಪಿ, ತಸ್ಲೀಂ ಆರೀಫ್, ಮುಖ್ತಾರ್ ಅಕ್ಕರಂಗಡಿ, ಪಿ.ಎಂ. ಆರಿಫ್ ಹಾಗೂ ಮಮ್ಮು ಗೂಡಿನಬಳಿ ಅವರ ತಂಡ ಸಕಾಲದಲ್ಲಿ ಕಾರ್ಯಪ್ರವೃತ್ತರಾಗಿ ನಿಶ್ಚಿತ್ ನನ್ನು ಆತ್ಮಹತ್ಯೆಯ ದವಡೆಯಿಂದ ಪಾರು ಮಾಡಿ 112 ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರು ಆತನ ವಿಚಾರಣೆ ನಡೆಸುತ್ತಿದ್ದಾರೆ.

Recent News


Leave a Comment: