ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


ಬಲ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಸುಜ್ಞಾನ ರಂಗಮಂದಿರ ಉದ್ಘಾಟನೆ

Posted by Vidyamaana on 2024-02-02 12:31:52 |

Share: | | | | |


ಬಲ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಸುಜ್ಞಾನ ರಂಗಮಂದಿರ ಉದ್ಘಾಟನೆ

ಕಡಬ: ಬಲ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ ಹಾಗೂ ಪೂರ್ವ ವಿದ್ಯಾರ್ಥಿಗಳು ಹಾಗೂ ಬಲ್ಯ ಶಾಲೆಯ ಸಮಸ್ತ ವಿದ್ಯಾಭಿಮಾನಿಗಳ ಸಹಕಾರದಿಂದ ಸುಮಾರು ಆರು ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲ್ಪಟ್ಟ ನೂತನ ರಂಗಮಂದಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ನೂತನ  *ಪ್ರತಿಭಾ ಸುಜ್ಞಾನ* ರಂಗಮಂದಿರವನ್ನು  ಶ್ರೀ ಬಿ.ಎಂ ಲಿಂಗಪ್ಪ ಗೌಡ ಬಾಬ್ಲುಬೆಟ್ಟು ಅವರು ಉದ್ಘಾಟಿಸಿ ಶುಭ ಹಾರೈಸಿದರು. ಬಳಿಕ  ಕುಟ್ರುಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಸುಮನಾರವರು ಸಭಾ ಕಾರ್ಯಕ್ರಮವನ್ನು  ದೀಪ ಬೆಳಗಿಸಿ ಉದ್ಘಾಟಿಸಿದರು, ಈ ಸಂದರ್ಭದಲ್ಲಿ ನೂತನ ರಂಗಮಂದಿರ ನಿರ್ಮಾಣದ ಶ್ರಮಿಕರಿಗೆ ಗೌರವಾರ್ಪಣೆ, ನೂತನ ರಂಗ ಮಂದಿರ ನಿರ್ಮಾಣಕ್ಕೆ ಧನ ಸಹಾಯ ಹಾಗೂ ಶಾಲೆಗೆ ವಸ್ತುರೂಪದ ಕೊಡುಗೆ ನೀಡಿದವರಿಗೆ ಗೌರವಾರ್ಪಣೆ ನಡೆಯಿತು. ಪೂರ್ವ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ನಡೆದ ಕ್ರೀಡಾಸಂಭ್ರಮ 2023-24 ಕ್ರೀಡಾಕೂಟದ ಬಹುಮಾನ  ವಿತರಣೆ, ಪೂರ್ವ ವಿದ್ಯಾರ್ಥಿ ಸಂಘದ ಅಧಿಕಾರ ಹಸ್ತಾಂತರ  ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ 

ಪೂರ್ವ ವಿದ್ಯಾರ್ಥಿ ಸಂಘ ಹಾಗೂ ನೂತನ ರಂಗಮಂದಿರ ಸಮಿತಿಯ ಅಧ್ಯಕ್ಷರಾದ ಬಿ ಎಂ ಪೂರ್ಣೇಶ್ ಗೌಡ ಬಾಬ್ಲುಬೆಟ್ಟು ರವರು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.  ಶಾಲೆಯ ಪೂರ್ವ ವಿದ್ಯಾರ್ಥಿ, ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಗುಡ್ಡಪ್ಪ ಗೌಡ ನೆಲ್ಲ-ಬಲ್ಯ ಇವರು ದಿಕ್ಸೂಚಿ ಭಾಷಣ ಮಾಡಿದರು.  ಎಸ್ ಡಿ ಎಂ ಸಿ ಅಧ್ಯಕ್ಷ ವಿಲ್ಸನ್ ವಿ. ಟಿ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಶ್ರೀಮತಿ ಮೀನಾಕ್ಷಿ ನೆಲ್ಲ, ಶ್ರೀ ಪ್ರಕಾಶ್ ಬಾಕಿಲ, ಶ್ರೀಮತಿ ಪುಷ್ಪಾ.ಕೆ, ಶ್ರೀ ತುಕ್ರಪ್ಪ ನೆಲ್ಲ , ಶ್ರೀ ಕೆ.ಆರ್. ಆಚಾರ್ಯ ಪುತ್ತೂರು, ಶ್ರೀ ವಾಣಿ ನಾಗೇಶ್ ಬನಾರಿ, ಶ್ರೀ ರವಿ ಪ್ರಸಾದ್ ಆಲಾಜೆ, ಶ್ರೀ ನಾರಾಯಣ ಕೊಲ್ಲಿಮಾರು,  ಶ್ರೀ ವಿಮಲ್ ಕುಮಾರ್ ನೆಲ್ಯಾಡಿ, ಶ್ರೀ ಸತೀಶ್ಚಂದ್ರ ಶೆಟ್ಟಿ, ಶ್ರೀ ಶೇಖರ ಗೌಡ ದೇರಾಜೆ, ಶ್ರೀ ಕೊರಗಪ್ಪ ಗೌಡ ಪುಳಿತ್ತಡಿ, ಶ್ರೀ ತಿಮ್ಮಣ್ಣ ಭಟ್ ದೇವರಡ್ಕ , ಶ್ರೀಮತಿ ಅಮ್ಮಣಿ , ಶ್ರೀ ಜನಾರ್ದನ ಗೌಡ , ಹಾಗೂ ಶಾಲಾ ನಾಯಕ ಧನುಷ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 600ಕ್ಕಿಂತ ಹೆಚ್ಚು ಜನ , ಪೂರ್ವ ವಿದ್ಯಾರ್ಥಿಗಳು, ಊರ ಪರ ಊರ ಶಾಲಾ ವಿದ್ಯಾಭಿಮಾನಿಗಳು, ಗಣ್ಯರು ಭಾಗವಹಿಸಿದ್ದರು .ಈ ಹಿಂದೆ ಬಲ್ಯ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿದ ಗುರುಗಳಾದ  ರುಕ್ಮಿಣಿ ಪಿಜಕಳ, ಪೆರ್ಗಡೆ ಗೌಡ ದೇರಾಜೆ,  ಅಚ್ಚಮ್ಮ, ಜಿ. ಮಾಯಿಲಪ್ಪ ಇವರನ್ನು ಗೌರವಿಸಲಾಯಿತು. ನೂತನ ರಂಗಮಂದಿರಕ್ಕೆ ಹಾಗೂ ಶಾಲೆಗೆ ವಿಶೇಷವಾಗಿ ಸಹಕರಿಸಿದ ಹಲವಾರು ಜನರನ್ನು ಗೌರವಿಸಲಾಯಿತು.

  ಸಭಾ ಕಾರ್ಯಕ್ರಮದ ಬಳಿಕ ಶಾಲಾ ಮಕ್ಕಳಿಂದ ಮತ್ತು ಪೂರ್ವ ವಿದ್ಯಾರ್ಥಿಗಳಿಂದ ಊರವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಲೆಯ 

ಮುಖ್ಯ ಶಿಕ್ಷಕಿ ಪುಷ್ಪಾ. ಕೆ  ಸ್ವಾಗತಿಸಿ, ರಂಗ ಮಂದಿರ ನಿರ್ಮಾಣ ಸಮಿತಿಯ ಕೋಶಾಧಿಕಾರಿ ಗಣೇಶ್ ಭಟ್ ದೇವರಡ್ಕ ವಂದಿಸಿದರು, ಶೇಖರಗೌಡ ಪನ್ಯಾಡಿ  ಕಾರ್ಯಕ್ರಮ ನಿರೂಪಿಸಿದರು, ರಂಗಮಂದಿರ ನಿರ್ಮಾಣ ಸಮಿತಿಯ ಉಪಾಧ್ಯಕ್ಷರಾದ ಉದಯ್ ಕುಮಾರ್ ಪುತ್ತಿಲ ಹಾಗೂ ಶಾಲಾ ಶಿಕ್ಷಕಿಯರು ಸಹಕರಿಸಿದರು.

BURNING TRAIN : ಬೆಂಕಿ ಅನಾಹುತ : ಧಗಧಗಿಸಿದ ರೈಲು..! - VIDEO

Posted by Vidyamaana on 2024-06-03 21:20:29 |

Share: | | | | |


BURNING TRAIN : ಬೆಂಕಿ ಅನಾಹುತ : ಧಗಧಗಿಸಿದ ರೈಲು..! - VIDEO

ನವದೆಹಲಿ : ನೋಡ ನೋಡುತ್ತಿದ್ದಂತೆಯೇ ರೈಲೊಂದು ಹೊತ್ತಿ ಉರಿದ ಘಟನೆ ನವದೆಹಲಿಯಲ್ಲಿ ನಡೆದಿದೆ 

ದಕ್ಷಿಣ ದೆಹಲಿಯ ತುಘಲಕಾಬಾದ್ ರೈಲು ನಿಲ್ದಾಣದ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಪ್ರಯಾಣಿಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಷ್ಟರಲ್ಲಿ ಪಕ್ಕದಲ್ಲಿದ್ದ ಮತ್ತೊಂದು ರೈಲು ಬೆಂಕಿ ತಗುಲಿದೆ

ಡೀಪ್‌ ಫೇಕ್‌ ಕಂಟಕ ; ಭಾರತೀಯ ವ್ಯವಸ್ಥೆಯ ಅತ್ಯಂತ ದೊಡ್ಡ ಬೆದರಿಕೆ ಇದು ಬಹಳ ಜಾಗರೂಕರಾಗಿರಬೇಕು ಎಂದ ಪ್ರಧಾನಿ ಮೋದಿ

Posted by Vidyamaana on 2023-11-17 19:56:03 |

Share: | | | | |


ಡೀಪ್‌ ಫೇಕ್‌ ಕಂಟಕ ; ಭಾರತೀಯ  ವ್ಯವಸ್ಥೆಯ ಅತ್ಯಂತ ದೊಡ್ಡ ಬೆದರಿಕೆ ಇದು ಬಹಳ ಜಾಗರೂಕರಾಗಿರಬೇಕು ಎಂದ ಪ್ರಧಾನಿ ಮೋದಿ

ಹೊಸದಿಲ್ಲಿ, ನ.17: ಡೀಪ್‌ ಫೇಕ್‌ ಗಳು ಪ್ರಸ್ತುತ ಭಾರತೀಯ ವ್ಯವಸ್ಥೆಯು ಎದುರಿಸುತ್ತಿರುವ ದೊಡ್ಡ ಬೆದರಿಕೆಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.


ಇದು ಸಮಾಜದಲ್ಲಿ ಅವ್ಯವಸ್ಥೆಯನ್ನು ಉಂಟುಮಾಡಬಹುದು. ಹೆಚ್ಚುತ್ತಿರುವ ಸಮಸ್ಯೆಯ ಬಗ್ಗೆ ಜನರಿಗೆ ಶಿಕ್ಷಣ ನೀಡಬೇಕು ಎಂದು ಪ್ರಧಾನಿ ಮಾಧ್ಯಮಗಳಿಗೆ ಒತ್ತಾಯಿಸಿದರು.


ದೆಹಲಿಯ ಬಿಜೆಪಿಯ ಪ್ರಧಾನ ಕಛೇರಿಯಲ್ಲಿ ಬಿಜೆಪಿಯ ದೀಪಾವಳಿ ಮಿಲನ್ ಕಾರ್ಯಕ್ರಮದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಡೀಪ್‌ ಫೇಕ್‌ ಗಳಿಗಾಗಿ ಕೃತಕ ಬುದ್ಧಿಮತ್ತೆಯನ್ನು ದುರುಪಯೋಗಪಡಿಸಿಕೊಳ್ಳುವಾಗ ನಾಗರಿಕರು ಮತ್ತು ಮಾಧ್ಯಮಗಳು ಬಹಳ ಜಾಗರೂಕರಾಗಿರಬೇಕು ಎಂದು ಹೇಳಿದರು.


ಪ್ರಜಾಪ್ರಭುತ್ವದ ಸಮಗ್ರತೆಗೆ ಡೀಪ್‌ಫೇಕ್‌ಗಳು ಹೇಗೆ ಗಣನೀಯ ಸವಾಲುಗಳನ್ನು ಒಡ್ಡುತ್ತಿವೆ? ನಕಲಿ ಮತ್ತು ನೈಜ ಕ್ಲಿಪ್‌ಗಳ ನಡುವೆ ವ್ಯತ್ಯಾಸ ಕಂಡುಹಿಡಿಯುವುದು ಕಷ್ಟಕರವಾಗಿದೆ. ಇದು ಇತ್ತೀಚೆಗೆ ರಾಜಕಾರಣಿಗಳನ್ನೂ ಗುರಿ ಮಾಡಲಾಗುತ್ತಿದೆ, ಕೃತಕ ವಾಯ್ಸ್‌ಓವರ್‌, ನಕಲಿ ವೀಡಿಯೋ ಕ್ಲಿಪ್‌ಗಳನ್ನು ಬಳಸಿ ರಾಜಕಾರಣಿಗಳನ್ನ ಗುರಿಯಾಗಿಸಲಾಗುತ್ತಿದೆ. ಇಂತಹ ಎಲ್ಲ ಸಮಸ್ಯೆಗಳ ಬಗ್ಗೆ ಅರಿತುಕೊಂಡು ಸಾರ್ವಜನಿಕರು ಎಚ್ಚರದಿಂದಿರಬೇಕು ಎಂದು ಕಿವಿಮಾತು ಹೇಳಿದ್ದಾರೆ.


ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಗರ್ಬಾ ನೃತ್ಯ ಮಾಡುತ್ತಿರುವ ಡೀಪ್‌ ಫೇಕ್‌ ವಿಡಿಯೋ ಉಲ್ಲೇಖಿಸಿ ಮಾತನಾಡಿದ್ದು, ತಾನು ಚಿಕ್ಕಂದಿನಿಂದಲೂ ಗರ್ಬಾ ನೃತ್ಯ ಮಾಡಿಲ್ಲ ಎಂದು ಹೇಳಿದ್ದಾರೆ.


ವೈರಲ್‌ ವೀಡಿಯೋದಲ್ಲಿ ಪ್ರಧಾನಿಯನ್ನೇ ಹೋಲುವ ವ್ಯಕ್ತಿಯೊಬ್ಬರು ಕೆಲ ಮಹಿಳೆಯರೊಂದಿಗೆ ನೃತ್ಯ ಮಾಡುವುದು ಕಂಡುಬಂದಿತ್ತು. ಆದ್ರೆ ಮಾಧ್ಯಮ ಸಂಸ್ಥೆಯೊಂದು ಅದನ್ನು ಫ್ಯಾಕ್ಟ್‌ಚೆಕ್‌ಗೆ ಒಳಪಡಿಸಿದಾಗ ವೀಡಿಯೋದಲ್ಲಿದ್ದ ವ್ಯಕ್ತಿ ಪ್ರಧಾನಿಯಲ್ಲ, ವಿಕಾಸ್‌ ಮಹಂತೆ ಎನ್ನುವ ನಟ‌ ಎಂದು ತಿಳಿದುಬಂದಿತ್ತು.


ಇತ್ತೀಚೆಗೆ ಡೀಪ್‌ ಫೇಕ್‌ ವೀಡಿಯೋಗಳು ಹೆಚ್ಚಾಗುತ್ತಿದ್ದು, ಸಹಜವಾಗಿಯೇ ನಟಿಯರಿಗೆ ಆತಂಕ ಹೆಚ್ಚಿಸಿದೆ. ಇಂತಹ ವಿಡಿಯೋಗಳನ್ನು ಮಾಡುವವರ ವಿರುದ್ಧ ಆದಷ್ಟು ಬೇಗ ಕಠಿಣ ಕ್ರಮಕ್ಕೆ ಮುಂದಾಗಿ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ನಟಿ ರಶ್ಮಿಕಾ ಮಂದಣ್ಣ ಅವರ ಬಳಿಕ ಕಾಜೋಲ್, ಕತ್ರಿನಾ ಕೈಫ್‌ ಅವರ ಡೀಪ್‌ಫೇಕ್ ವೀಡಿಯೋಗಳೂ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ

ಗೃಹಲಕ್ಷ್ಮಿ ಯೋಜನೆ ದುಡ್ಡಲ್ಲಿ ಮೊಬೈಲ್ ಖರೀದಿಸಿದ ಹಾವೇರಿಯ ಮಹಿಳೆ

Posted by Vidyamaana on 2024-04-29 14:57:20 |

Share: | | | | |


ಗೃಹಲಕ್ಷ್ಮಿ ಯೋಜನೆ ದುಡ್ಡಲ್ಲಿ ಮೊಬೈಲ್ ಖರೀದಿಸಿದ ಹಾವೇರಿಯ ಮಹಿಳೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಮಹಿಳೆಯೊಬ್ಬರು ಮೊಬೈಲ್ ಖರೀದಿಸಿದ್ದು, ವಾಲ್ಪೇಪರ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೋಟೋ ಹಾಕಿಕೊಂಡು ಸಂತಸ ವ್ಯಕ್ತಪಡಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ಥಕತೆಯ ಮನೋಭಾವ ವ್ಯಕ್ತಪಡಿಸಿದ್ದಾರೆ.

ಹಾವೇರಿ ಕಾಂಗ್ರೆಸ್ ಸಮಾವೇಶದಲ್ಲಿ ಮಹಿಳೆಯೊಬ್ಬರು ತಾವು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣ ಕೂಡಿಟ್ಟು ಮೊಬೈಲ್ ಖರೀದಿ ಮಾಡಿರುವುದಾಗಿ ಹೇಳಿಕೊಂಡಿದ್ದು, ಮೊಬೈಲ್ ವಾಲ್ ಪೇಪರ್ ನಲ್ಲಿ ಸಿಎಂ ಹಾಕಿಕೊಂಡಿರುವುದನ್ನು ತೋರಿಸಿದ್ದಾರೆ. ಈ ಕುರಿತ ಫೋಟೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಬನ್ನೂರು, ಉಪ್ಪಿನಂಗಡಿ,ನಿಡ್ಪಳ್ಳಿ, ಚರ್ಚ್ ಗಳಿಗೆ ಭೇಟಿ.

Posted by Vidyamaana on 2023-04-30 05:22:52 |

Share: | | | | |


ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಬನ್ನೂರು, ಉಪ್ಪಿನಂಗಡಿ,ನಿಡ್ಪಳ್ಳಿ, ಚರ್ಚ್ ಗಳಿಗೆ  ಭೇಟಿ.

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭಾನುವಾರ ಬೆಳಿಗ್ಗೆ  ಬನ್ನೂರು, ಉಪ್ಪಿನಂಗಡಿ, ನಿಡ್ಪಳ್ಳಿ ಚರ್ಚ್ ಗಳಿಗೆ  ಭೇಟಿ ನೀಡಿದರು.

ಮೂಡುಬಿದಿರೆ; ಕಾಲೇಜು ವಿದ್ಯಾರ್ಥಿ ಸ್ವಾತಿಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ.

Posted by Vidyamaana on 2023-06-19 03:48:57 |

Share: | | | | |


ಮೂಡುಬಿದಿರೆ; ಕಾಲೇಜು ವಿದ್ಯಾರ್ಥಿ ಸ್ವಾತಿಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ.

ಮೂಡುಬಿದಿರೆ:ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುರಸಭೆ ವ್ಯಾಪ್ತಿಯ ಅಲಂಗಾರಿನಲ್ಲಿ ನಡೆದಿದೆ.


ಮೂಡುಬಿದಿರೆ ಎಸ್.ಎನ್.ಎಂ ಪಾಲಿಟೆಕ್ನಿಕ್‌ನ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಸಾತ್ವಿಕ್(21) ಆತ್ಮಹತ್ಯೆ ಮಾಡಿಕೊಂಡವರು.


ಭಾನುವಾರ ಬೆಳಗ್ಗೆ ಸಾತ್ವಿಕ್‌ನನ್ನು ಆತನ ತಾಯಿ ಎಬ್ಬಿಸುವಾಗ ಕೋಪಗೊಂಡಿದ್ದು, ಕೆಲವು ನಿಮಿಷಗಳ ಬಳಿಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಮಗನನ್ನು ಎಬ್ಬಿಸಿ, ಪರೀಕ್ಷೆ ಹತ್ತಿರ ಬಂದಿದೆ, ಬೇಗ ಎದ್ದು ಓದು ಎಂದು ಬುದ್ದಿವಾದ ಹೇಳಿದರೆನ್ನಲಾಗಿದೆ.ಇಷ್ಟಕ್ಕೆ ಕೋಪಗೊಂಡ ಸಾತ್ವಿಕ್‌ ಕೋಣೆಯ ಬಾಗಿಲು ಮುಚ್ಚಿ ಶಾಲನ್ನು ಫ್ಯಾನಿಗೆ ಕಟ್ಟಿ ಆತ್ಮಹತ್ಯೆಗೈದಿದ್ದಾನೆ ಎನ್ನಲಾಗಿದೆ.

ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ಷುಲ್ಲಕ ಕಾರಣಕ್ಕೆ ಪ್ರತಿಭಾವಂತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡರೇ ಅಥವಾ ಬೇರೆ ಏನಾದರೂ ಕಾರಣ ಇದೆಯಾ ಎನ್ನುವುದು ಪೊಲೀಸ್ ತನಿಖೆಯಲ್ಲಿ ತಿಳಿದು ಬರಬೇಕಿದೆ.



Leave a Comment: