Posted by vidyamaana on 2024-07-05 10:22:02 |
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಇಂದು ಮಂಗಳೂರಿನ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಿಷ್ಯಂತ್ ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗಾವಣೆಯಾಗಿದ್ದರು.
2016 ರ ಕರ್ನಾಟಕ ಕೇಡರ್ ನ IPS ಅಧಿಕಾರಿ ಯತೀಶ್ ಎನ್ ಈ ಹಿಂದೆ ಮಂಡ್ಯ ಎಸ್ಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದರು. ಇನ್ನೂ ಹಲವಾರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Posted by Vidyamaana on 2023-09-07 12:33:10 |
ಪುತ್ತೂರು: ನನ್ನ ಹೆಸರು ಹೇಳಿಕೊಂಡು ಕೆಲವರು ಸರಕಾರಿ ಇಲಾಖೆಯ ಅಧಿಕಾರಿಗಳ ಬಳಿ, ಉದ್ಯಮಿಗಳ ಬಳಿ ಹಣ ಕೇಳುತ್ತಿದ್ದಾರೆ ಎಂಬ ವಿಚಾರ ನನ್ನ ಗಮನಕ್ಕೆ ಬಂದಿದ್ದು ನನ್ನ ಹೆಸರು ಹೇಳಿ ಯಾರಾದರು ಹಣ ಕೇಳಿದರೆ ಕೊಡಬೇಕಾದ ಅವಶ್ಯಕತೆಯಿಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ತಿಳಿಸಿದ್ದಾರೆ.
ಕಳೆದ ಹಲವಾರು ದಿನಗಳಿಂದ ಈ ರೀತಿಯ ವಿಚಾರಗಳು ನಡೆಯುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ನಾನು ಯಾವುದೇ ಅಧಿಕಾರಿಗಳ ಬಳಿಯಾಗಲಿ, ಉದ್ಯಮಿಗಳ ಬಳಿಯಾಗಲಿ ಚುನಾವಣೆಗೆ ಮುನ್ನವೂ ಹಣ ಕೇಳಿಲ್ಲ ಆ ಬಳಿಕವೂ ಕೇಳಿಲ್ಲ ಇನ್ನು ಕೇಳುವುದೂ ಇಲ್ಲ ಅದರ ಅಗತ್ಯತೆ ನನಗಿಲ್ಲ. ನನ್ನ ಹೆಸರಿನಲ್ಲಿ ಯಾರಾದರೂ ಅಧಿಕಾರಿಗಳ ಬಳಿ , ಉದ್ಯಮಿಗಳ ಬಳಿ ಹಣ ಕೇಳಿದರೆ ಅವರು ಕೊಡಬೇಕಾದ ಅಗತ್ಯವಿಲ್ಲ. ಶಾಸಕರು ಹೇಳಿರಬಹುದೇ ಎಂಬ ಅನುಮಾನವೇ ಬೇಡ ನಾನು ಯಾರಲ್ಲೂ ಹಣ ಕಲೆಕ್ಷನ್ ಮಾಡಲು ಹೇಳಿಯೂ ಇಲ್ಲ , ಮುಂದಕ್ಕೆ ಹೇಳುವುದೂ ಇಲ್ಲಎಂದು ಶಾಸಕರು ಸ್ಪಷ್ಟಪಡಿಸಿದ್ದಾರೆ.
Posted by Vidyamaana on 2023-10-25 06:59:17 |
ಮೈಸೂರು: ವಿಜಯದಶಮಿಯ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯನ್ನು ಲಕ್ಷಾಂತರ ಜನರು ವೀಕ್ಷಿಸಿದರು. ನಾಡದೇವತೆ ಚಾಮುಂಡೇಶ್ವರಿ ವಿರಾಜಮಾನಳಾಗಿದ್ದ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಅರಮನೆ ಆವರಣದಿಂದ ಬನ್ನಿಮಂಟಪ ದವರೆಗೂ ಅಭಿಮನ್ಯು ಆನೆ ಯಶಸ್ವಿಯಾಗಿ ಹೊತ್ತು ಸಾಗಿತು. ಇತರ 14 ಗಜಪಡೆಗಳು ಅಭಿಮನ್ಯುವಿಗೆ ಸಾಥ್ ನೀಡಿದವು. ಕರ್ನಾಟಕದ ಅಶ್ವದಳ ಪೊಲೀಸರ ನೇತೃತ್ವದಲ್ಲಿ ಮೆರವಣಿಗೆ ನಡೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ,ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು. ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ನಂದಿಧ್ವಜ ಪೂಜೆಯಲ್ಲಿ ಪಾಲ್ಗೊಳ್ಳುವುದರೊಂದಿಗೆ ಕಲಾತಂಡಗಳು, ಸ್ತಬ್ಧಚಿತ್ರಗಳ ಮರವಣಿಗೆ ಆರಂಭವಾಯಿತು.
ಅರಮನೆ ಮುಂಭಾಗದಿಂದ ನಡೆದ ಮೆರವಣಿಗೆಯಲ್ಲಿ ರಾಜ್ಯದ 31 ಜಿಲ್ಲೆಗಳು ಮತ್ತು ವಿವಿಧ ಪ್ರಮುಖ ಸರ್ಕಾರಿ ಇಲಾಖೆಗಳ ಭವ್ಯವಾದ ಸ್ತಬ್ಧಚಿತ್ರಗಳು ಆಕರ್ಷಣೀಯವಾಗಿದ್ದವು. ಬಳ್ಳಾರಿ ಜಿಲ್ಲೆ ಹಕ್ಕಿ-ಪಿಕ್ಕಿ ಬುಡಕಟ್ಟು ಜನಾಂಗದ ಸಾಂಸ್ಕೃತಿಕ ಅಂಶಗಳನ್ನು ಪ್ರದರ್ಶಿಸಿದರೆ, ಬೆಳಗಾವಿ ಜಿಲ್ಲೆ ಐತಿಹಾಸಿಕ ಮಹಾಲಿಂಗೇಶ್ವರ ದೇವಸ್ಥಾನದ ಮಾದರಿಯನ್ನು ಪ್ರದರ್ಶಿಸಿತು.
ಬೆಂಗಳೂರು ನಗರ ಜಿಲ್ಲೆ ಇಸ್ರೋದ ಚಂದ್ರಯಾನ-3 ಸಾಧನೆಯನ್ನು ಪ್ರದರ್ಶಿಸಿತು. ಕೋಲಾರ ಗಾರುಡಿ ನೃತ್ಯವನ್ನು ಪ್ರಸ್ತುತಪಡಿಸಿದರೆ, ಬೀದರ್ ವಿಶಿಷ್ಟ ವನ್ಯಜೀವಿಗಳ ಮೇಲೆ ಕೇಂದ್ರೀಕರಿಸಿತು ಮತ್ತು ಚಾಮರಾಜನಗರ ಪ್ರಸಿದ್ಧ ಮಲೆ ಮಹದೇಶ್ವರ ದೇವಸ್ಥಾನದ ಮಾದರಿಯನ್ನು ಪ್ರದರ್ಶಿಸಿತು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ಪತ್ತಿಯಾಗುವ ವೈವಿಧ್ಯಮಯ ಸಸ್ಯ ಮತ್ತು ಪ್ರಾಣಿಗಳ ಜೊತೆಗೆ ಸುಗಂಧಭರಿತ ಕಾಫಿಯ ಪ್ರದರ್ಶನವನ್ನು ರಚಿಸಿತು. ಈ 10 ದಿನಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಕುಸ್ತಿ ಕೂಡ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ಮೆರವಣಿಗೆಯು ಅರಮನೆಯಿಂದ ಬನ್ನಿಮಂಟಪಕ್ಕೆ ತಲುಪುತ್ತಿದ್ದಂತೆ ಉತ್ಸವ ಮುಕ್ತಾಯವಾಯಿತು.
ದಸರಾ ಮಹೋತ್ಸವದ ಗ್ರ್ಯಾಂಡ್ ಫಿನಾಲೆ ವೀಕ್ಷಿಸಲು ಸಾವಿರಾರು ಜನರು ನೆರೆದಿದ್ದರು. ಪ್ರಪಂಚದಾದ್ಯಂತದ ಜನರು ಈ ಭವ್ಯವಾದ ದೃಶ್ಯಗಳನ್ನು ವೀಕ್ಷಿಸಲು ಮೈಸೂರಿಗೆ ಭೇಟಿ ನೀಡಿದರು. ಚಾಮುಂಡೇಶ್ವರಿ ದೇವಿಯು ಮಹಿಷಾಸುರನನ್ನು ಕೊಂದಿದ್ದರಿಂದ ಕೆಟ್ಟದ್ದರ ಮೇಲೆ ಒಳ್ಳೆಯದು ವಿಜಯ ಎಂಬುದರ ಸಂಕೇತವಾಗಿ ವಿಜಯದಶಮಿ ಅಥವಾ ದಸರಾವನ್ನು ಆಚರಿಸಲಾಗುತ್ತದೆ.
Posted by Vidyamaana on 2023-07-29 11:24:46 |
ದಾವಣಗೆರೆ: ಖಾಸಗಿ ಕ್ಷಣದ ವಿಡಿಯೋ ವೈರಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿಗಳಿಬ್ಬರು ಸಾವಿನ ಹಾದಿ ಹಿಡಿದಿರುವ ಆಘಾತಕಾರಿ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ.ಮೃತರನ್ನು ಆಲೂರಟ್ಟಿ ತಾಂಡಾದ ರತನ್ (20) ಮತ್ತು ಜಗಳೂರು ತಾಲೂಕಿನ ಗ್ರಾಮವೊಂದರ ಯುವತಿ ಎಂದು ಗುರುತಿಸಲಾಗಿದೆ. ಇಬ್ಬರೂ ದಾವಣಗೆರೆಯ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ವಿದ್ಯಾರ್ಥಿಗಳಾಗಿದ್ದರು. ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳದುಬಂದಿದೆ.
ಕಾಲೇಜಿನ ಟೆರೆಸ್ ಮೇಲೆ ಇಬ್ಬರು ಏಕಾಂತದಲ್ಲಿರುವುದನ್ನು ಗಮನಿಸಿ, ಅರಿವಿಗೆ ಬಾರದಂತೆ ಪಕ್ಕದ ಕಟ್ಟದಿಂದ ಮೊಬೈಲ್ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ವಾಟ್ಸ್ಆ್ಯಪ್ಗಳಲ್ಲಿಯೂ ವಿಡಿಯೋ ಹರಿದಾಡಿತ್ತು. ಅಲ್ಲದೆ, ಕೆಲ ವೆಬ್ಸೈಟ್ಗಳಲ್ಲೂ ಸುದ್ದಿ ಪ್ರಕಟವಾಗಿತ್ತುಖಾಸಗಿ ವಿಡಿಯೋ ವೈರಲ್ ಆಗಿ, ತಲೆತಗ್ಗಿಸುವಂತಾಗಿದ್ದಕ್ಕೆ ತೀವ್ರ ಮನನೊಂದಿದ್ದ ವಿದ್ಯಾರ್ಥಿನಿ ನಿನ್ನೆ ಆತ್ಮಹತ್ಯೆಗೆ ಶರಣಾದಳು. ಆಕೆಯ ಸಾವಿನ ಸುದ್ದಿ ಕೇಳಿದ ಆಲೂರಟ್ಟಿ ತಾಂಡಾದ ರತನ್ ಸಹ ಸಾವನ್ನಪ್ಪಿದ್ದಾನೆ. ರತನ್ ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದ. ನಿನ್ನೆ ಸಂಜೆ ಆಲೂರಟ್ಟಿ ತಾಂಡಕ್ಕೆ ಆಗಮಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಕ್ಕಳನ್ನು ಕಳೆದುಕೊಂಡ ಪಾಲಕರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ಯುವಕ ಮತ್ತು ಯುವತಿಯ ಪಾಲಕರು ಪ್ರತ್ಯೇಕವಾಗಿ ದೂರು ದಾಖಲಿಸಿದ್ದಾರೆ.
Posted by Vidyamaana on 2023-10-19 21:09:46 |
ವಿಟ್ಲ : ರಜಾ ಹಿನ್ನೆಲೆ ಬೀಚ್ ಗೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದು, ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ.
ವಿಟ್ಲ ಮೂಲದ ದಿಗಂತ (15) ದಿವ್ಯರಾಜ್ (15) ತೇಜಸ್ (14) ಕೀರ್ತನ್ (16) ಅಶ್ಮಿತಾ (15) ನಿಶಾ (15) ಇವರೆಲ್ಲರೂ ಕುಳಾಯಿ ಚಿತ್ರಾಪುರ ಬೀಚ್ ಗೆ ನೀರಲ್ಲಿ ಆಟ ಆಡಲು ತೆರಳಿದಾಗ ನೀರಿನ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಇವರನ್ನು ಹತ್ತಿರದ ಮೀನುಗಾರರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದು, ನಾಲ್ಕು ಜನ ಆರೋಗ್ಯವಾಗಿದ್ದು, ತೇಜಸ್ ಎಂಬ ಬಾಲಕನನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ನಿಶಾ ಎಂಬ ಬಾಲಕಿಯು ಮೃತಪಟ್ಟಿರುತ್ತಾರೆ.
ನಿಶಾ ಮತ್ತು ಅಶ್ವಿತಾ ನೇಪಾಳ ಮೂಲದವರು ಎಂದು ವರದಿಯಾಗಿದೆ.
Posted by Vidyamaana on 2023-06-20 01:32:04 |
ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜೂ 20 ರಂದು
ಬೆಳಿಗ್ಗೆ 10 ಖಾಸಗಿ ಕಾರ್ಯಕ್ರಮ (official)
ಅಪರಾಹ್ನ 4 ಗಂಟೆಗೆ ಹಿರೆಬಂಡಾಡಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮತ್ತು
ಸಂಜೆ 5 ಗಂಟೆಗೆ ಉಪ್ಪಿನಂಗಡಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ.
Posted by Vidyamaana on 2023-10-24 16:56:01 |
ಸ್ಟಾಂಡ್ -ಅಪ್ ಕಾಮಿಡಿಯನ್ ವಿದುಷಿ ಸ್ವರೂಪ್ ವೇಶ್ಯಾವಾಟಿಕೆಯನ್ನು "ಕೂಲ್ ಪ್ರೊಫೆಷನ್" ಎಂದು ಕರೆಯುವ ವೀಡಿಯೊ ವೈರಲ್ ಆದ ನಂತರ ಭಾರಿ ಟ್ರೋಲ್ ಗೆ ಗುರಿಯಾಗಿದ್ದು, ನೆಟ್ಟಿಗರು ಆಕೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಟ್ಯಾಂಡ್-ಅಪ್ ಕಾಮಿಡಿಯನ್ ವಿದುಷಿ ಸ್ವರೂಪ್ ವೇಶ್ಯಾವಾಟಿಕೆಯನ್ನು "ಕೂಲ್ ಪ್ರೊಫೆಶನ್" ಎಂದು ಕರೆಯುವ ವೀಡಿಯೊ ವೈರಲ್ ಆದ ನಂತರ ಭಾರಿ ಟ್ರೋಲ್ ಗೆ ಗುರಿಯಾಗಿದ್ದು, ನೆಟ್ಟಿಗರು ಆಕೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ವಿಡಿಯೋ ಕ್ಲಿಪ್ನಲ್ಲಿ ವಿದುಷಿ ಸ್ವರೂಪ್ ವೇಶ್ಯಾವಾಟಿಕೆಯನ್ನು ಕೂಲ್ ಪ್ರೊಫೆಶನ್ ಎಂದು ಕರೆಯುವ ಮೂಲಕ ತಮ್ಮ ಹಾಸ್ಯ ಕಾರ್ಯಕ್ರಮ ಪ್ರಾರಂಭಿಸಿದ್ದಾರೆ. ಆನಂತರ ವೃತ್ತಿಯಲ್ಲಿನ ಅನುಭವ ಮತ್ತು ಅದು ಉಳಿದವುಗಳಿಂದ ಹೇಗೆ ಭಿನ್ನವಾಗಿದೆ ಎಂಬುದನ್ನು ಹೇಳಿದ್ದಾರೆ. ಇದಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಾನಾ ರೀತಿಯಲ್ಲಿ ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಕೆಲವರು ಆಕೆಯನ್ನು ಬೆಂಬಲಿಸಿದ್ದಾರೆ.