ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಈದಲ್ ಫಿತ್ರ್: ಗುರಿ ಸಾಧಿಸಿದವರ ಸಂಭ್ರಮ ಸಹಜೀವಿಗಳೊಂದಿಗೆ ಸದಾಚಾರದ ಪ್ರತಿಜ್ಞೆ

Posted by Vidyamaana on 2024-04-09 20:20:16 |

Share: | | | | |


ಈದಲ್ ಫಿತ್ರ್: ಗುರಿ ಸಾಧಿಸಿದವರ ಸಂಭ್ರಮ ಸಹಜೀವಿಗಳೊಂದಿಗೆ ಸದಾಚಾರದ ಪ್ರತಿಜ್ಞೆ

ತನ್ನೆಲ್ಲಾ ಸ್ವಾತಂತ್ರ್ಯಗಳನ್ನು ಸ್ವಯಂ ಪ್ರೇರಿತನಾಗಿ ತಡೆದು ಸೃಷ್ಟಿಕರ್ತನಿಗೆ ಸಂಪೂರ್ಣ ಶರಣಾಗತಿ ಸಲ್ಲಿಸುವ ವ್ರತಾಚರಣೆಯ ಮೂಲಕ ದೈಹಿಕ ಮತ್ತು ಆತ್ಮೀಯ ಪರಿಶುದ್ಧಿಯನ್ನು ಪಡೆದ ಮನುಷ್ಯನಿಗೆ ತನ್ನ ಸಂತೋಷವನ್ನು ಪ್ರಕಟಪಡಿಸಲು ಅಲ್ಲಾಹನು ನಿಗದಿಪಡಿಸಿದ ಪವಿತ್ರ ದಿನವಾಗಿದೆ ಈದ್. ಇದು ಸ್ರಷ್ಟಿಯನ್ನು  ಸ್ರಷ್ಟಿಕರ್ತನೆಡೆಗೆ ಮತ್ತಷ್ಟು ನಿಕಟಗೊಳಿಸುವ ಗುರಿ ಸಾಧಿಸಿದವರ ಹಬ್ಬವಾಗಿದೆ.

   ಅಲ್ಲಾಹು ಅಕ್ಬರ್.... ವಲಿಲ್ಲಾಹಿಲ್ ಹಮ್ದ್ -ತಕ್ಬೀರ್ ಮೊಳಗಿಸುತ್ತಾ ಗುರಿಸಾಧಿಸಿದ ಸಂತೋಷವನ್ನು ಪ್ರಕಟಿಸುತ್ತಾ ತನ್ನ ಸಹಜೀವಿಗಳೊಂದಿಗೆ ಸೇರಿ ಸದಾಚಾರದ ಪ್ರತಿಜ್ಞೆಗೈಯ್ಯುತ್ತಾನೆ.

      ಹಬ್ಬಗಳಿಗೆ ಅರಬಿ ಭಾಷೆಯಲ್ಲಿ ಈದ್ ಎನ್ನಲಾಗುತ್ತಿದ್ದು ಒಳಿತು ಮತ್ತು ಔದಾರ್ಯಗಳು ಎಂಬ ಅರ್ಥದ ಜೊತೆಗೆ ಸಂಭ್ರಮ ಸಡಗರದೊಂದಿಗೆ ಪುನರಾವರ್ತನೆಯಾಗುವ ಹಬ್ಬ ಎಂಬ ವಿವರಣೆಯೂ ಇದೆ.

     ರಂಝಾನ್ ಉಪವಾಸದ ಮುಕ್ತಾಯದ ವೇಳೆ ಬರುವ ಈದುಲ್ ಫಿತ್ರ್ ಹಬ್ಬವು ಮನುಷ್ಯನ ಆತ್ಮದ ರೋಗಗಳಾದ ಮದ, ಮೋಹ, ಅಹಂಕಾರ,ಲೋಭಾದಿಗಳನ್ನು ಮೆಟ್ಟಿನಿಂತು ವಿಶೇಷ ತರಬೇತಿ ಪಡೆದು ಶುದ್ಧ ಪ್ರಕೃತಿಗೆ ಮರಳುವ ಸ್ಥಿತಿಯನ್ನುಂಟುಮಾಡುತ್ತದೆ. 

ಆ ಮೂಲಕ ಮನುಷ್ಯನು ತನ್ನನ್ನು ಹೊಸ ಬದುಕಿಗೆ ತೆರೆದುಕೊಳ್ಳುತ್ತಾನೆ. 

   ರಂಝಾನ್ ತಿಂಗಳ ಕೊನೆಯ ಸೂರ್ಯಾಸ್ತಮಾನದೊಂದಿಗೆ ಪ್ರಾರಂಭಿಸಿ ಆ ದಿನ ಸೂರ್ಯಾಸ್ತದವರೆಗೆ ಮುಂದುವರೆದು ಈ ದಿನದಲ್ಲಿ ವಿಶೇಷ ಸ್ನಾನ ಮಾಡಿ ಸೂರ್ಯೋದಯದ ಬಳಿಕ ವಿಶೇಷ ನಮಾಜಿಗೆ ಸಿದ್ದರಾಗುತ್ತಾರೆ. ಸೂರ್ಯನುದಯಿಸಿ ಸುಮಾರು 20 ನಿಮಿಷಗಳ ನಂತರ ನಮಾಝಿನ ಸಮಯವಾಗಲಿದ್ದು ಮಧ್ಯಾಹ್ನದೊಂದಿಗೆ ಕೊನೆಗೊಳ್ಳುತ್ತದೆ.ಪುರುಷರು ಮಸೀದಿಯಲ್ಲಿ ಸಾಮೂಹಿಕವಾಗಿಯೂ ಸ್ತ್ರೀಯರು ಮನೆಗಳಲ್ಲಿಯೂ ಇದನ್ನು ನಿರ್ವಹಿಸುತ್ತಾರೆ. ದಾನ ಧರ್ಮಗಳಿಗೂ ಸತ್ಕಾರ್ಯಗಳಿಗೂ ಕುಟುಂಬ ಸಂಬಂಧವನ್ನು ಸದೃಢಗೊಳಿಸುವುದಕ್ಕೂ ಈ ಹಬ್ಬವು ಬಹಳ ಉಪಕಾರಿ. ಫಿತ್ರ್ ಝಕಾತ್ ಎಂಬ ಕಡ್ಡಾಯ ದಾನವು ಆ ದಿನದ ಪ್ರಮುಖ ಆರಾಧನೆಗಳಲ್ಲೊಂದಾಗಿದೆ.

   

HSRP ನಂಬರ್ ಪ್ಲೇಟ್ ಅಳವಡಿಕೆ ದಿನಾಂಕದ ಬಿಗ್‌ ಅಪ್ಡೇಟ್ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Posted by Vidyamaana on 2024-02-12 06:39:50 |

Share: | | | | |


HSRP ನಂಬರ್ ಪ್ಲೇಟ್ ಅಳವಡಿಕೆ ದಿನಾಂಕದ ಬಿಗ್‌ ಅಪ್ಡೇಟ್ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ಹೈಸೆಕ್ಯೂರಿಟಿ ನಂಬರ್ ಪ್ಲೇಟ್ (High Security number plate-HSRP) ಕುರಿತು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಈಗಾಗಲೇ ಹಲವು ಗಡುವುಗಳನ್ನು ನೀಡಿ ವಿಸ್ತರಿಸಿದೆ. ಫೆಬ್ರವರಿ 17 ಕೊನಯ ದಿನವಾಗಿದೆ. ಆದರೂ, ಜನರು ಕೊನೇ ಅವಧಿಯಲ್ಲಿ ಹೆಚ್ಚೆಚ್ಚು ರಿಜಿಸ್ಟರ್ ಮಾಡಲು ಮುಂದಾಗುತ್ತಿದ್ದು, ಅಪ್ಲೋಡ್ ಸಮಸ್ಯೆಯಾಗಲಿದೆ.ಈಗ ಪುನಃ ದಿನಾಂಕ ವಿಸ್ತರಣೆಗೆ ಒತ್ತಡ ಕೇಳಿ ಬಂದಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಾರಿಗೆ ಇಲಾಖೆ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನೇಕ ಇಲಾಖೆಗಳನ್ನ ಸಿಎಂ ಸಭೆ ಕರೆದಿದ್ದರು. ಅದೇ ರೀತಿ ಸಾರಿಗೆ ಇಲಾಖೆಯವರು ಕೂಡ ಭಾಗಿಯಾಗಿದ್ದರು. ಆಟೋ ಟ್ಯಾಕ್ಸಿ, ಲಾರಿ ಅಸೋಷಿಯಷನ್ ಅವರು ಎಲ್ಲಾ ಬಂದಿದ್ದರು. ಅವರ ಬೇಡಿಕೆಗಳನ್ನ ಕೂಡ ಇಟ್ಟಿದ್ದಾರೆ. ಜೊತೆಗೆ, ನಮ್ಮ ಸರ್ಕಾರ ಬಂದಮೇಲೆ ಸಾಕಷ್ಟು ಬೇಡಿಕೆ ಈಡೇರಿಸಿದ್ದೇವೆ ಎಂದರು. ಇಂದು ಹೊಸ ಬೇಡಿಕೆಗಳನ್ನೂ ಸಹ ಇಟ್ಟಿದ್ದಾರೆ. ಮುಂದಿನದ್ದು ಬಜೆಟ್ ದಿನ ನೋಡೋಣ ಎಂದು ಹೇಳಿದ್ದೇವೆ ಎಂದು ಹೇಳಿದರು.


ಇನ್ನು ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಮಾಡಿಸಲು ಫೆ.17ನೇ ತಾರೀಕು ಲಾಸ್ಟ ಡೇಟ್ ಇದೆ. ಹಿಂದೆ ಒಂದು ಸರಿ ಮುಂದಕ್ಕೆ ಹಾಕಿದ್ದೆವು. ಈಗ ಮತ್ತೆ ಮುಂದಕ್ಕೆ ಹಾಕಿ ಅಂತಾ ಹೇಳ್ತ ಇದಾರೆ. ಇನ್ನು ಒಂದುವಾರ ಸಮಯ ಇದೆ. ಎಲ್ಲಾ ಕೊನೇನಲ್ಲಿ ಅರ್ಜಿ ಹಾಕೋಕೆ ಬರ್ತಾರೆ. ಒತ್ತಡ ಜಾಸ್ತಿ ಆಗಿ ಅಪ್ಲೋಡ್ ಆಗೋಲ್ಲ ಅದೊಂದು ಸಮಸ್ಯೆ ಇದೆ. ಇನ್ನು ಟೈಮ್ ಇದೆ ನೋಡೋಣ ಎಂದುಸಾರಿಗೆ ಸಚೊವ ರಾಮಲಿಂಗಾರೆಡ್ಡಿ ಅವರು ಬಿಗ್ ಅಪ್ಡೇಟ್ ನೀಡಿದರು.

ಜು.26 – ನಾಳೆಯಿಂದ ಎಂ ಸಂಜೀವ ಶೆಟ್ಟಿಯಲ್ಲಿ ವಸ್ತ್ರ ಮೇಳ

Posted by Vidyamaana on 2023-07-25 15:47:47 |

Share: | | | | |


ಜು.26 – ನಾಳೆಯಿಂದ ಎಂ ಸಂಜೀವ ಶೆಟ್ಟಿಯಲ್ಲಿ ವಸ್ತ್ರ ಮೇಳ


ಪುತ್ತೂರು: ಮನೆಮಾತಾಗಿರುವ ಎಂ.ಸಂಜೀವ ಶೆಟ್ಟಿ ಜವುಳಿ ಮಳಿಗೆಯಲ್ಲಿ ಜುಲೈ 26ರಿಂದ ಆಟಿ ಸೇಲ್ ಆರಂಭಗೊಳ್ಳಲಿದೆ.

ಪುತ್ತೂರಿನವರಷ್ಟೇ ಅಲ್ಲ, ಹತ್ತೂರಿನ ಮಂದಿಯೂ ಮೆಚ್ಚುವ ಹೆಸರಾಂತ ವಸ್ತ್ರ ಮಳಿಗೆ ಪುತ್ತೂರಿನ ಎಂ.ಸಂಜೀವ ಶೆಟ್ಟಿ. ಹಾಗಾಗಿ ಎಂ. ಸಂಜೀವ ಶೆಟ್ಟಿಯ ಆಟಿ ಸೇಲ್’ಗೆ ಗ್ರಾಹಕರು ಕಾತರದಿಂದ ಕಾಯುತ್ತಿದ್ದು, ಇದೀಗ ಆ ದಿನ ಹತ್ತಿರ ಬಂದಿದೆ.

ಪ್ರಖ್ಯಾತ ಮಿಲ್’ಗಳಲ್ಲಿ ತಯಾರಾದ ವಸ್ತ್ರಗಳನ್ನು ನೇರವಾಗಿ ಖರೀದಿಸುವುದೇ ಎಂ. ಸಂಜೀವ ಶೆಟ್ಟಿಯ ವಿಶೇಷತೆ. ಹಾಗಾಗಿ ಕಡಿಮೆ ಲಾಭಾಂಶವನ್ನಿಟ್ಟುಕೊಂಡು, ಅತೀ ಕಡಿಮೆ ದರದಲ್ಲಿ ಗ್ರಾಹಕರ ಕೈಗೆ ನೀಡಲಾಗುತ್ತದೆ. ಸಾರಿ ಸೇರಿದಂತೆ ಇನ್ನಿತರ ಜವುಗಳಿಗಳು ಆಟಿ ಸೇಲ್’ನಲ್ಲಿ ಮಾರಾಟಗೊಳ್ಳಲಿದೆ.

ಎಂ. ಸಂಜೀವ ಶೆಟ್ಟಿಯ ಆಟಿ ಸೇಲ್’ನಲ್ಲಿ ಪುತ್ತೂರು, ಸುಳ್ಯ, ಬೆಳ್ತಂಗಡಿ, ಮಡಿಕೇರಿ, ಮೈಸೂರು, ಬೆಂಗಳೂರಿನ ಜನರು ಪಾಲ್ಗೊಳ್ಳುತ್ತಾರೆ.

ಕೊಯಿಲ ಯುವಕ ಸಂದೇಶ್ ಮಾಸ್ಕತ್ ನಲ್ಲಿ ಆತ್ಮಹತ್ಯೆ

Posted by Vidyamaana on 2023-05-30 01:47:06 |

Share: | | | | |


ಕೊಯಿಲ ಯುವಕ ಸಂದೇಶ್ ಮಾಸ್ಕತ್ ನಲ್ಲಿ ಆತ್ಮಹತ್ಯೆ

ರಾಮಕುಂಜ: ವಿದೇಶದಲ್ಲಿ ಉದ್ಯೋಗದಲ್ಲಿರುವ ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ಅಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನ ಮೇ 28ರಂದು ನಡೆದಿದೆ.

ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ.ಮೋನಪ್ಪ ಪೂಜಾರಿಯವರ ಪುತ್ರ ಸಂದೇಶ್ (32ವ.) ಆತ್ಮಹತ್ಯೆ ಮಾಡಿಕೊಂಡವರು. ಇವರು ಓಮನ್ ದೇಶದ ಮಸ್ಕತ್‌ನಲ್ಲಿ ಕಂಪನಿಯೊಂದರಲ್ಲಿ ಲೈನ್ ಸೇಲ್ ಉದ್ಯೋಗ ಮಾಡುತ್ತಿದ್ದು, ಎಂಟು ತಿಂಗಳ ಹಿಂದೆಯಷ್ಟೆ ಕೆಲಸಕ್ಕೆ ಸೇರಿದ್ದರು. ಇವರ ಸಹೋದರ ಸಂತೋಷ್ ಕೂಡಾ ಮಸ್ಕತ್‌ನಲ್ಲೇ ಉದ್ಯೋಗದಲ್ಲಿದ್ದು ಇಬ್ಬರು ಒಂದೇ ಕೊಠಡಿಯಲ್ಲಿ ವಾಸವಾಗಿದ್ದರು. ಇವರ ಸಂಬಂಧಿ ಯುವಕ ಕೊಯಿಲ ಗ್ರಾಮದ ಅಂಬಾ ನಿವಾಸಿ ಚರಣ್ ಎಂಬವರು ಸಹ ಮಸ್ಕತ್‌ನಲ್ಲಿ ಉದ್ಯೋಗದಲ್ಲಿದ್ದು ಇವರು ಇನ್ನೊಂದು ಕೊಠಡಿಯಲ್ಲಿ ವಾಸವಾಗಿದ್ದರು. ಮೇ 29ರಂದು ಸಂದೇಶ್ ಅವರು ಬೇಗ ಕೆಲಸ ಮುಗಿಸಿ ಕೊಠಡಿಗೆ ಬಂದವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇದಾದ ಕೆಲ ಹೊತ್ತಿನ ಬಳಿಕ ಚರಣ್‌ ಅವರು ಸಂದೇಶ ಇರುವ ಕೊಠಡಿಗೆ ಬಂದು ನೋಡಿದಾಗ ಕೊಠಡಿ ಬಾಗಿಲು ಬಂದ್ ಆಗಿತ್ತು. ಕರೆದರೂ ಯಾವುದೇ ಉತ್ತರ ಬಾರದೇ ಇದ್ದಾಗ ಸಂಶಯಗೊಂಡು ಗಾಬರಿಯಿಂದ ಸಂದೇಶರವರ ಸಹೋದರ ಸಂತೋಷ್‌ ಕರೆ ಮಾಡಿ ಕರೆಸಿಕೊಂಡಿದ್ದಾರೆ. ಸಂತೋಷ್ ತನ್ನಲ್ಲಿದ್ದ ಕೀಯಿಂದ ಕೊಠಡಿಯ ಬಾಗಿಲು ತೆರೆದು ನೋಡಿದಾಗ ಸಂದೇಶ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಸ್ಕತ್‌ನಲ್ಲೇ ಮೃತದೇಹದ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ಮುಗಿದು ಮ೦ಗಳವಾರ ಅಥವಾ ಬುಧವಾರ ಮೃತದೇಹ ಊರಿಗೆ ಆಗಮಿಸುವ ನಿರೀಕ್ಷೆ ಇದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

8 ತಿಂಗಳ ಹಿಂದೆಯಷ್ಟೇ ಉದ್ಯೋಗಕ್ಕೆ ತೆರಳಿದ್ದರು: ಸಂದೇಶ್ ಸಹೋದರ ಸಂತೋಷರವರು 7 ವರ್ಷಗಳಿಂದ ಮಸ್ಕತ್‌ನಲ್ಲಿ ಉದ್ಯೋಗದಲ್ಲಿದ್ದಾರೆ. ಆದರೆ ಮೃತ ಸಂದೇಶ ಕಳೆದ ಕೆಲವು ವರ್ಷಗಳಿಂದ ಚೆನ್ನೈನಲ್ಲಿ ಹೋಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದವರು 8 ತಿಂಗಳ ಹಿಂದೆಯಷ್ಟೇ ಮತ್‌ಗೆ ತೆರಳಿದ್ದರು. ಆರಂಭದಲ್ಲಿ ವಿಸಿಟಿಂಗ್ ವೀಸಾದಲ್ಲಿ ಮಸ್ಕತ್‌ಗೆ ತೆರಳಿದ್ದ ಸಂದೇಶ್ ಬಳಿಕ ಅಲ್ಲಿನ ಕೆಲಸದ ವೀಸಾ ಪಡೆದು ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಸ್ಥೆಯಲ್ಲಿ ಉತ್ತಮ ವೇತನ ಹಾಗೂ ಯಾವುದೇ ಕಿರಿಕಿರಿ ಇಲ್ಲದ ಉದ್ಯೋಗ ಇದ್ದು ಯಾವುದೇ ಸಮಸ್ಯೆಗಳೂ ಇರಲಿಲ್ಲ. ಅಣ್ಣ ತಮ್ಮ ಜೊತೆಯಾಗಿಯೇ ಇದ್ದು ಸಂತೋಷವಾಗಿಯೇ ಇದ್ದರು. ಕೇವಲ ಒಂದು ಲೈನ್ ಸಾರಿ ಅಣ್ಣ ಎಂದು ಬರೆದಿಟ್ಟು ಸಂದೇಶ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಸಂದೇಶ್‌ ತಾಯಿ ವಿಮಲ, ಸಹೋದರರಾದ ಮಸ್ಕತ್‌ನಲ್ಲಿ ಉದ್ಯೋಗದಲ್ಲಿರುವ ಸಂತೋಷ್ ಹಾಗೂ ಊರಿನಲ್ಲಿ ಆಟೋ ಚಾಲಕನಾಗಿರುವ ಸತೀಶ್ ಅವರನ್ನು ಅಗಲಿದ್ದಾರೆ.

ಪುತ್ತೂರು ಅಕ್ರಮ ಸಕ್ರಮ ಸಮಿತಿ ರಚಿಸಿ ಸರಕಾರದ ಆದೇಶ

Posted by Vidyamaana on 2023-09-14 21:54:25 |

Share: | | | | |


ಪುತ್ತೂರು ಅಕ್ರಮ ಸಕ್ರಮ ಸಮಿತಿ ರಚಿಸಿ ಸರಕಾರದ ಆದೇಶ

ಮಂಗಳೂರು: ದ.ಕ. ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ(ಅಕ್ರಮ ಸಕ್ರಮ) ಸಮಿತಿಯನ್ನು ರಚಿಸಿ ಸರಕಾರ ಆದೇಶ ಹೊರಡಿಸಿದೆ.ಸಮಿತಿಯ ಅಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ, ಸಾಮಾನ್ಯ ಸದಸ್ಯರಾಗಿ ಎಂ ಮಹಮ್ಮದ್ ಬಡಗನ್ನೂರು, ಮಹಿಳಾ ಸದಸ್ಯರಾಗಿ ಶ್ರೀಮತಿ ರೂಪರೇಖಾ ಆಳ್ವ, ಪರಿಶಿಷ್ಟ ಜಾತಿ ಪ್ರವರ್ಗದಿಂದ ರಾಮಣ್ಣ ಪಿಲಿಂಜ, ಸದಸ್ಯ ಕಾರ್ಯದರ್ಶಿಯಾಗಿ ತಾಲೂಕಿನ ತಹಶೀಲ್ದಾರ್ ಅವರನ್ನು ನಾಮನಿರ್ದೇಶನ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಬಂಟ್ವಾಳ; ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ 3ನೇ ಮಹಡಿಯಿಂದ ಬಿದ್ದು ಯುವಕ ಸಾವು

Posted by Vidyamaana on 2023-06-30 16:40:35 |

Share: | | | | |


ಬಂಟ್ವಾಳ; ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ 3ನೇ ಮಹಡಿಯಿಂದ ಬಿದ್ದು ಯುವಕ ಸಾವು

ಬಂಟ್ವಾಳ; ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ 3ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಬಂಟ್ವಾಳದ ಕೈಕಂಬದಲ್ಲಿ ನಡೆದಿದೆ.

ಆಚಾರಿಪಲ್ಕೆ ನಿವಾಸಿ ಯತೀಶ್ (32) ಮೃತ ಯುವಕ. ಯತೀಶ್ ಕೈಕಂಬದ ಹೋಲಿ ಫ್ಯಾಮಿಲಿ ವಸತಿ ನಿಲಯದ ಮನೆಯೊಂದರ ಡಿಶ್ ರಿಪೇರಿ ಮಾಡುವ ವೇಳೆ ಆಯತಪ್ಪಿ 3ನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ.

ಈ ವೇಳೆ ವಸತಿ ನಿಲಯದ ಕೆಳ ಭಾಗದಲ್ಲಿರುವ ಬಾವಿಯ ಮೇಲೆ ಹಾಕಿದ್ದ ಕಬ್ಬಿಣದ ರಕ್ಷಣಾ ಬೇಲಿಯ ಮೇಲೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡ ಯತೀಶ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.



Leave a Comment: