Posted by vidyamaana on 2023-11-07 04:42:13 |
ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.
ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Posted by Vidyamaana on 2024-06-09 11:35:00 |
ದಕ್ಷಿಣ ಕನ್ನಡ, ಕಾಸರಗೋಡಿನಲ್ಲಿ ಉತ್ತಮ ಕ್ರಿಕೆಟ್ ಆಟಗಾರ ಎಂದೇ ಗುರುತಿಸಿಕೊಂಡಿದ್ದ, ಕುಂಬ್ಳೆಯ ನಾಯ್ಕಾಪು ನಿವಾಸಿ ಮಂಜು (24 ವ.) ಶನಿವಾರ ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ ಬೆಳಿಗ್ಗೆ ಕಂಡುಬಂದಿದ್ದಾರೆ.
Posted by Vidyamaana on 2024-01-20 07:27:01 |
ಮಂಗಳೂರು; ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಯುವಕ- ಯುವತಿ ಕದ್ರಿ ಪಾರ್ಕಿಗೆ ಬಂದಿದ್ದಾಗ, ಯುವಕರ ಗುಂಪು ಯುವ ಜೋಡಿಯನ್ನು ಹಿಂದು- ಮುಸ್ಲಿಂ ಅನ್ಕೊಂಡು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದೆ.
ದೇರಳಕಟ್ಟೆಯ ಯೆನಪೋಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಮತ್ತು ನಂತೂರಿನ ಜಿಎನ್ಎಂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಜೊತೆಗೆ ಶುಕ್ರವಾರ ಬೆಳಗ್ಗೆ ಕದ್ರಿ ಪಾರ್ಕಿಗೆ ಆಗಮಿಸಿದ್ದರು. ಅವರು ಬಸ್ಸಿನಲ್ಲಿ ಬರುತ್ತಿದ್ದಾಗಲೇ ಹಿಂಬಾಲಿಸಿದ್ದ ಇತರೇ ವಿದ್ಯಾರ್ಥಿಗಳ ತಂಡ ಕದ್ರಿ ಪಾರ್ಕ್ ಬರುತ್ತಲೇ ಅಡ್ಡಗಟ್ಟಿ ಪ್ರಶ್ನೆ ಮಾಡಿದ್ದಾರೆ. ಯುವಕ- ಯುವತಿ ಕೇರಳ ಮೂಲದವರಾಗಿದ್ದು ಮಲೆಯಾಳಂ ಮಾತನಾಡುತ್ತಿದ್ದರು. ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಅನ್ಕೊಂಡು ಪ್ರಶ್ನೆ ಮಾಡಿ, ಇಬ್ಬರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೆ, ಅವರ ವಿಡಿಯೋ, ಫೋಟೋ ರೆಕಾರ್ಡ್ ಮಾಡಿದ್ದಾರೆ.
ಅಷ್ಟರಲ್ಲಿ ಕದ್ರಿ ಪೊಲೀಸರು ಸ್ಥಳಕ್ಕೆ ಬಂದು ಯುವಕ- ಯುವತಿಯನ್ನು ರಕ್ಷಿಸಿದ್ದು, ಹಲ್ಲೆಗೆ ಮುಂದಾಗಿದ್ದ ಮೂವರು ಯುವಕರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿತರನ್ನು ನಿತಿನ್(18) ಮತ್ತು ಹರ್ಷ (18) ಎಂದು ಗುರುತಿಸಿದ್ದು, ಇನ್ನೊಬ್ಬ 17 ವರ್ಷದವನು. ಈ ಮೂವರು ಕೂಡ ವಿದ್ಯಾರ್ಥಿಗಳಾಗಿದ್ದು, ಹಲ್ಲೆಗೆ ಯತ್ನಿಸಿ ಪೊಲೀಸ್ ಕೇಸು ಎದುರಿಸುತ್ತಿದ್ದಾರೆ. ಕದ್ರಿ ಠಾಣೆಯಲ್ಲಿ ಇವರ ವಿರುದ್ಧ 341, 504, 509, 354ಬಿ, 354ಡಿ ಸೆಕ್ಷನ್ ಅಡಿ ಕೇಸು ದಾಖಲಾಗಿದೆ.
Posted by Vidyamaana on 2023-11-04 16:44:06 |
ಬೆಂಗಳೂರು:ಪುತ್ತೂರು ಶಾಸಕರು ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರು ಅಶೋಕ್ ಕುಮಾರ್ ರೈವರು ಇಂದು ಕರ್ನಾಟಕ ಬ್ಯಾಂಕ್ ಕಾರ್ಯನಿರ್ವಾಹಕ ನೀರ್ದೆಶಕರು ಶೇಖರ್ ರಾವ್ ರವರನ್ನು ಭೇಟಿಯಾಗಿ ಬೆಂಗಳೂರು ಕಂಬಳ ನಮ್ಮ ಕಂಬಳ ಕ್ಕೆ ಆಮಂತ್ರಣ ಪತ್ರ ಕೊಟ್ಟು ಆಹ್ವಾನಿಸಲಾಯಿತು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಮುಳಿಯ ಜ್ಯುವೆಲ್ಸ್ ನ ಮುಖ್ಯ ಆಡಳಿತ ನಿರ್ದೇಶಕ ಮುಳಿಯ ಕೇಶವ ಪ್ರಸಾದ್ ಮತ್ತು ಸಚಿನ್ ಶೆಟ್ಟಿ ಉಪಸ್ಥಿತರಿದ್ದರು
Posted by Vidyamaana on 2024-02-12 22:10:33 |
ಬೆಂಗಳೂರು : ರಾಜ್ಯ ಸರ್ಕಾರ ಫೆಬ್ರವರಿ 1ರಿಂದ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ 185ರಿಂದ 195ಕ್ಕೆ ಏರಿಸಿ ಮದ್ಯಪ್ರಿಯರ ಕಿಸಿಗೆ ಕೈ ಹಾಕಲು ಮಂದಾಗಿತ್ತು. ಆದರೆ ಈಗ ರಾಜ್ಯ ಸರ್ಕಾರಕ್ಕೆ ಮದ್ಯಪ್ರಿಯರೇ ಶಾಕ್ ಕೊಟ್ಟಿದ್ದಾರೆ.ಫೆಬ್ರವರಿ 1ರಂದು ಎಇಡಿ ಹೆಚ್ಚಳದ ನಂತರ ಬಿಯರ್ ಮಾರಾಟದಲ್ಲಿ ಕಡಿಮೆಯಾಗಿದೆ ಎನ್ನಲಾಗಿದೆ.ಈ ನಡುವೆ ಗಿ ಪ್ರತಿ ಬಾಟಲಿ ಬಿಯರ್ ದರವು ಕನಿಷ್ಠ 8 ರೂ.ಗಳಿಂದ ಗರಿಷ್ಠ 15 ರೂ.ವರೆಗೆ ಹೆಚ್ಚಳವಾಗಿದೆ. ಹೀಗಾಗಿ ಮದ್ಯಪ್ರಿಯರು ಬಿಯರ್ ಖರೀದಿಗೆ ನಿರಾಸಕ್ತಿ ತೋರಿದ್ದರಿಂದ ರಾಜ್ಯದೆಲ್ಲೆಡೆ ಫೆಬ್ರವರಿ 1ರಿಂದಲೂ ಬಿಯರ್ ಮಾರಾಟದಲ್ಲಿ ಕಡಿಮೆಯಾಗಿದೆ ಎನ್ನಲಾಗಿದೆ. ಹಲವು ಮದ್ಯ ಪ್ರಿಯರು ಕಡಿಮೆ ಬೆಲೆಯ ಬಿಯರ್ ಬ್ರ್ಯಾಂಡ್ಗಳತ್ತ ಮುಖ ಮಾಡುತ್ತಿದ್ದಾರೆ. ಮತ್ತೆ ಕೆಲ ಮದ್ಯಪ್ರಿಯರು ಬಿಯರ್ ಖರೀದಿ ಪ್ರಮಾಣ ಕಡಿಮೆ ಮಾಡಲು ಮುಂದಾಗುತ್ತಿದ್ದಾರೆ ಎನ್ನಲಾಗಿದೆ. ದುಬಾರಿ ಬ್ರ್ಯಾಂಡ್ಗಳ ಬಿಯರ್ಗಳಿಗೆ ಮೊದಲಿದ್ದಂತೆ ಬೇಡಿಕೆ ಇಲ್ಲ. ಬಹುತೇಕ ಕಡಿಮೆ ಬೆಲೆಯ ಬಿಯರ್ಗಳನ್ನು ಕೊಂಡುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
Posted by Vidyamaana on 2023-04-21 11:46:41 |
ರಿಯಾದ್: ಸೌದಿ ಅರೇಬಿಯಾದಲ್ಲಿ ಮಸೀದಿಗೆ ತೆರಳಲು ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಮಂಗಳೂರಿನ ಯುವಕ ಮೃತಪಟ್ಟಿರೋ ಘಟನೆ ನಡೆದಿದೆ.
ಸಜಿಪದ ಕೋಣೆಕಣಿ ಮೂಲದ ಖಾಸಿಮ್ ಮತ್ತು ಮೈನಬಾ ದಂಪತಿ ಪುತ್ರ ಸಿರಾಜುದ್ದೀನ್ ಮೃತಪಟ್ಟ ಯುವಕ. ಈತ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.