ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ATM ಗ್ರಾಹಕರಿಗೆ ಬಿಗ್ ಶಾಕ್ : ನಗದು ಹಿಂಪಡೆಯುವಿಕೆ ಪ್ರತಿ ವಹಿವಾಟಿಗೆ 23ರೂ.ವರೆಗೆ ಶುಲ್ಕ ಹೆಚ್ಚಳ

Posted by Vidyamaana on 2024-06-19 11:31:50 |

Share: | | | | |


ATM ಗ್ರಾಹಕರಿಗೆ ಬಿಗ್ ಶಾಕ್ : ನಗದು ಹಿಂಪಡೆಯುವಿಕೆ ಪ್ರತಿ ವಹಿವಾಟಿಗೆ 23ರೂ.ವರೆಗೆ ಶುಲ್ಕ ಹೆಚ್ಚಳ

ನವದೆಹಲಿ : ಎಟಿಎಂ ಬಳಸುವ ಗ್ರಾಹಕರಿಗೆ ಎಟಿಎಂ ಇಂಡಸ್ಟ್ರೀ ಒಕ್ಕೂಟ (CATMI) ಬಿಗ್‌ ಶಾಕ್‌ ನೀಡಿದ್ದು, ಎಟಿಎಂನಿಂದ ನಗದು ಹಿಂಪಡೆಯುವಿಕೆಗೆ ವಿನಿಮಯ ಶುಲ್ಕವನ್ನು ಹೆಚ್ಚಿಸಲು ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ಮತ್ತು ನ್ಯಾಷನಲ್‌ ಪೇಮೆಂಟ್ಸ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ (NPCI) ಗೆ ಮನವಿ ಮಾಡಿದೆ.

ಜುಲೈ 1 ರಿಂದ ಎಟಿಎಂನಿಂದ ಹಣವನ್ನು ಹಿಂಪಡೆಯುವುದು ದುಬಾರಿಯಾಗಲಿದೆ. ಭಾರತದಲ್ಲಿ ಹೆಚ್ಚಿನ ಜನರು ಹಣವನ್ನು ವಿತ್ ಡ್ರಾ ಮಾಡಲು ಎಟಿಎಂ ಬಳಸುತ್ತಾರೆ ಆದರೆ ಜುಲೈ 1 ರಿಂದ ಬ್ಯಾಂಕ್ ಶಾಖೆಯಿಂದ ಹಣವನ್ನು ಹಿಂಪಡೆಯುವುದು ದುಬಾರಿಯಾಗಲಿದೆ.

ಏಕೆಂದರೆ ಎಟಿಎಂ ನಿರ್ವಾಹಕರು ಶುಲ್ಕವನ್ನು ಹೆಚ್ಚಿಸಲು ಒತ್ತಾಯಿಸುತ್ತಿದ್ದಾರೆ. ಎಟಿಎಂ ನಿರ್ವಾಹಕರು ಇಂಟರ್ಚೇಂಜ್ ಶುಲ್ಕವನ್ನು ಹೆಚ್ಚಿಸಲು ಒತ್ತಾಯಿಸಿದ್ದಾರೆ. ಇಂಟರ್ಚೇಂಜ್ ಶುಲ್ಕವು ಎಟಿಎಂಗಳಿಂದ ಹಣವನ್ನು ಹಿಂಪಡೆಯುವಾಗ ಗ್ರಾಹಕರು ಪಾವತಿಸುವ ಶುಲ್ಕವಾಗಿದೆ. ಇದರ ಶುಲ್ಕವನ್ನು ಹೆಚ್ಚಿಸಿದರೆ, ಎಟಿಎಂಗಳಿಂದ ಹಣವನ್ನು ಹಿಂಪಡೆಯುವ ಗ್ರಾಹಕರು ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಕರ್ನಾಟಕ ಮುಸ್ಲಿಂ ಜಮಾಹತ್ ಹಾಗೂ ಎಸ್ ವೈ ಎಸ್ ಪಡೀಲ್ ಯೂನಿಟ್ ವತಿಯಿಂದ ರಂಝಾನ್ ಕಿಟ್ ವಿತರಣಿ

Posted by Vidyamaana on 2023-04-02 10:46:05 |

Share: | | | | |


ಕರ್ನಾಟಕ ಮುಸ್ಲಿಂ ಜಮಾಹತ್ ಹಾಗೂ ಎಸ್ ವೈ ಎಸ್ ಪಡೀಲ್ ಯೂನಿಟ್ ವತಿಯಿಂದ ರಂಝಾನ್ ಕಿಟ್ ವಿತರಣಿ

ಪುತ್ತೂರು : ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ವೈ ಎಸ್ ಪಡೀಲ್   ಯೂನಿಟ್ ವತಿಯಿಂದ ರಂಝಾನ್ ಕಿಟ್ ವಿತರಣಿ ಕಾರ್ಯಕ್ರಮವು ಮಾ 31ರಂದು ಪಡೀಲ್ ನಲ್ಲಿ ನಡೆಯಿತ್ತು.  ಅಬ್ದುಲ್ ರಝಾಕ್ ಖಾಸಿಮಿ ಕೂರ್ನಡ್ಕ ದುವಾ ನೆರವೇರಿಸಿದರು.

ಗೋದಾಮಿನಲ್ಲಿ ಕಾರ್ಮಿಕರ ಮೇಲೆ ಮೆಕ್ಕೆಜೋಳದ ನಿಟ್ಟು ಕುಸಿತ

Posted by Vidyamaana on 2023-12-04 21:38:52 |

Share: | | | | |


ಗೋದಾಮಿನಲ್ಲಿ ಕಾರ್ಮಿಕರ ಮೇಲೆ ಮೆಕ್ಕೆಜೋಳದ ನಿಟ್ಟು ಕುಸಿತ

ವಿಜಯಪುರ : ನಗರದ ಖಾಸಗಿ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮೆಕ್ಕೆಜೋಳ ತುಂಬಿದ್ದ ಚೀಲ ನಿಟ್ಟು ಕುಸಿದು ಸುಮಾರು 10ಕ್ಕೂ ಹೆಚ್ಚು ಕಾರ್ಮಿಕರು ಚೀಲದ ಅಡಿಯಲ್ಲಿ ಸಿಲುಕಿರುವ ಘಟನೆ ನಡೆದಿದೆ. ರಕ್ಷಿಸಲ್ಪಟ್ಟ ಮೂವರು ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಾತ್ರಿ ವೇಳೆ ಕತ್ತಲಲ್ಲೂ ರಕ್ಷಣ ಕಾರ್ಯಾಚರಣೆ ಮುಂದುವರೆದಿದೆ.



ಸೋಮವಾರ ಸಂಜೆ ಬಿಹಾರ ಮೂಲದ ಕಾರ್ಮಿಕರು ನಗರದ ಕೈಗಾರಿಕಾ ಪ್ರದೇಶದಲ್ಲಿರುವ ರಾಜಗುರು ಇಂಡಸ್ಟ್ರೀಸ್ ಸಂಸ್ಥೆಯ ಗೋದಾಮಿನಲ್ಲಿ ಧಾನ್ಯಗಳ ಚೀಲಗಳನ್ನು ಜೋಡಿಸುವ ಕೆಲಸದಲ್ಲಿ ನಿರತರಾಗಿದ್ದರು.ಈ ಹಂತದಲ್ಲಿ ಚೀಲಗಳ ನಿಟ್ಟು ಜೋಡಿಸುವ ಕೆಲಸದಲ್ಲಿ ತೊಡಗಿದ್ದಾಗಲೇ ಏಕಾಏಕಿ ತುಂಬಿದ ಚೀಲಗಳ ನಿಟ್ಟು ಕುಸಿದು ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರ ಬಿದ್ದಿದೆ. ಇದರಿಂದಾಗಿ ಸುಮಾರು 20-25 ಕಾರ್ಮಿಕರು ಕುಸಿದ ಚೀಲಗಳ ಅಡಿಯಲ್ಲಿ ಸಿಲುಕಿದ್ದು, ಜೀವನ್ಮರಣದೊಂದಿಗೆ ಹೋರಾಟ ನಡೆಸಿದ್ದಾಗಿ ಪ್ರತ್ಯಕ್ಷದರ್ಶಿ ಕಾರ್ಮಿಕರು ವಿವರಿಸಿದ್ದಾರೆ.


ಬಿಹಾರ ಮೂಲದ ಸುಮಾರು 50ಕ್ಕೂ ಹೆಚ್ಚು ಕಾರ್ಮಿಕರು ರಾಜಗುರು ಇಂಡಸ್ಟ್ರೀಸ್ ಅವರ ಫುಡ್ ಪ್ರೊಸೆಸಿಂಗ್ ಘಟಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಸೋಮವಾರ ಸಂಜೆ ಮೆಕ್ಕೆಜೋಳ ತುಂಬಿದ್ದ ಚೀಲಗಳನ್ನು ನಿಟ್ಟಿನಂತೆ ಜೋಡಿಸುವ ಕೆಲಸದಲ್ಲಿ ತೊಡಗಿದ್ದರು.


ಸ್ಥಳದಲ್ಲಿರುವ ಕಾರ್ಮಿಕರು ಹೇಳುವ ಪ್ರಕಾರ ಮೆಕ್ಕೆಜೋಳದ ಚೀಲಗಳ ಅಡಿಯಲ್ಲಿ ಸುಮಾರು 25 ಕಾರ್ಮಿಕರು ಸಿಲುಕಿದ್ದು, 3-4 ಕಾರ್ಮಿಕರು ರಕ್ಷಣೆಗೆ ಕೂಗಿಕೊಳ್ಳುವ ಧ್ವನಿ ಕೇಳಿಸುತ್ತಿದೆ ಎಂದು ವಿವರಿಸಿದ್ದಾರೆ.ಘಟನೆಯಲ್ಲಿ ಗಾಯಗೊಂಡಿರುವ ಸುಮಾರು 3 ಕಾರ್ಮಿಕರರನ್ನು ನಗರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಿದ್ದು, ರಕ್ಷಣಾ ಕಾರ್ಯಾಚರಣೆ ಸಂಸರ್ಭದಲ್ಲಿ ಸೊಂಟದ ವರೆಗೆ ಚೀಲದ ನಿಟ್ಟಿಯಲ್ಲಿ ಸಿಲಕುರಿತು ಮೂವರು ಕಾರ್ಮಿಕರು ಪತ್ತೆಯಾಗಿದ್ದಾರೆ. ಆತಂಕದಲ್ಲಿರುವ ಕಾರ್ಮಿಕರಿಗೆ ಆತ್ಮ ಸ್ಥೈರ್ಯ ತುಂಬುತ್ತಿರುವ ಅಧಿಕಾರಿಗಳು, ಕುಡಿಯಲು ನೀರು ಒದಗಿಸಿದ್ದಾರೆ.ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, 3 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಇರಿಸಸಲಾಗಿದೆ. 5 ಜೆಸಿಬಿ ಯಂತ್ರಗಳ ಸಹಾಯದಿಂದ ಅಪಾಯದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಿಸುವ ಕಾರ್ಯಾಚರಣೆ ನಡೆದಿದೆ.



ರಕ್ಷಿಸಲ್ಪಡುವ ಕಾರ್ಮಿಕರನ್ನು ತುರ್ತಾಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸಲು ಸ್ಥಳದಲ್ಲಿ 5 ಅಂಬ್ಯುಲೆನ್ಸ್‍ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಗೋದಾಮುಗಳಲ್ಲಿ ರಾತ್ರಿ ವೇಳೆ ಸೂಕ್ತ ಬೆಳಕಿನ ವ್ಯವಸ್ಥೆ ಇಲ್ಲ. ಹೀಗಾಗಿ ರಾತ್ರಿ ವೇಳೆ ಕಾರ್ಯಾರಣೆಗೆ ಹೆಚ್ಚಿನ ಬೆಳಕಿಗಾಗಿ 2 ಜನರೇಟರ್ ತರಿಸಲಾಗಿದೆ.


ಕಾರ್ಯಚರಣೆಯಲ್ಲಿ ತೊಡಗಿರುವ ತಂಡಗಳ ಅಧಿಕಾರಿಗಳ ಮಾಹಿತಿ ಪ್ರಕಾರ ಮೂವರು ಕಾರ್ಮಿಕರು ಚೀಲಗಳ ಅಡಿಯಲ್ಲಿ ಸಿಲುಕಿದ್ದರೂ ಸುರಕ್ಷಿತವಾಗಿರುವುದು ಗೋಚರಿಸುತ್ತಿದೆ. ಇನ್ನೂ ಸುಮಾರು 10ಕ್ಕೂ ಹೆಚ್ಚು ಕಾರ್ಮಿಕರು ಚೀಲಗಳ ಅಡಿಯಲ್ಲಿ ಇರುವ ಸಾಧ್ಯತೆ. ಪೂರ್ಣ ಕಾರ್ಯಾಚರಣೆಯ ಬಳಿಕವೇ ಅಪಾಯಕ್ಕೆ ಸಿಲುಕಿರುವ ಕಾರ್ಮಿಕರ ನಿಖರ ಸಂಖ್ಯೆ ಬಹಿರಂಗವಾಗಲಿದೆ ಎಂದು ಹೇಳಿದ್ದಾರೆ.


ಅವಘಡ ಸಂಭಸಿರುವ ಗೋದಾಮಿನಲ್ಲಿ ಭಾರಿ ಪ್ರಮಾಣ ಧಾನ್ಯ ತುಂಬಿರುವ ಚೀಲಗಳನ್ನು ನಿಟ್ಟಾಗಿ ಒಟ್ಟಿದ್ದು, ಕಾರ್ಯಾಚರಣೆ ವೇಳೆ ಮತ್ತೆ ಕುಸಿಯುವ ಭೀತಿ ಇದೆ. ಹೀಗಾಗಿ ಮನುಷ್ಯರು ನೇರವಾಗಿ ಕಾರ್ಯಚರಣೇ ನಡೆಸದೆ ಜೆಸಿಬಿ ಯಂತ್ರಗಳ ಸಹಾಯದಿಂದ ಸೂಕ್ಷ್ಮವಾಗಿ ರಕ್ಷಣ ಕಾರ್ಯಾಚರಣೆ ನಡೆಸಿದ್ದಾರೆ.


ವಿಷಯ ತಿಳಿಯುತ್ತಲೇ ಸ್ಥಳಕ್ಕೆ ತೆರಳಿ ಬೀಡುಬಿಟ್ಟಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್, ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯ ಮೇಲೆ ನಿಗಾ ವಹಿಸಿದ್ದಾರೆ.

ಕಲ್ಲಡ್ಕ ಮ್ಯೂಸಿಯಂ ವೀಕ್ಷಿಸಿದ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್

Posted by Vidyamaana on 2024-06-30 19:51:42 |

Share: | | | | |


ಕಲ್ಲಡ್ಕ ಮ್ಯೂಸಿಯಂ ವೀಕ್ಷಿಸಿದ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್

ಬಂಟ್ವಾಳ : ತಾಲೂಕಿನ ವಿವಿಧ ಕಡೆಗಳಿಗೆ ತೆರಳಿ ಮಳೆಹಾನಿ ಬಗ್ಗೆ ವೀಕ್ಷಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಜಿಲ್ಲೆಯಲ್ಲಿಯೇ ಖ್ಯಾತಿ ಪಡೆದಿರುವ ಕಲ್ಲಡ್ಕದ ಯಾಸೀರ್ ಅವರ ಅಪರೂಪದ ವಸ್ತುಗಳ ಸಂಗ್ರಹವಿರುವ ಕಲ್ಲಡ್ಕ ಮ್ಯೂಸಿಯಂಗೆ ಭೇಟಿ ನೀಡಿದರು.ಹಿಂದಿನ ಕಾಲದ ವಸ್ತುಗಳು, ನಾಣ್ಯ, ಪತ್ರಿಕೆಗಳ ಸಂಗ್ರಹವನ್ನು ವೀಕ್ಷಿಸಿ ರೋಮಾಂಚನಗೊಂಡ ಅವರು ಯಾಸೀರ್ ಅವರ ವಸ್ತುಗಳ ಸಂಗ್ರಹಣ ಕೌಶಲ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

WhatsApp ಬಳಕೆದಾರರಿಗೆ ಗುಡ್ ನ್ಯೂಸ್

Posted by Vidyamaana on 2023-07-24 06:57:08 |

Share: | | | | |


WhatsApp ಬಳಕೆದಾರರಿಗೆ ಗುಡ್ ನ್ಯೂಸ್

ನವದೆಹಲಿ :(ಜು.24) ಮೆಟಾ ಮಾಲೀಕತ್ವದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವ್ಯಾಟ್ಸ್‌ಆಯಪ್ ಇದೀಗ ಹೊಸ ಫೀಚರ್ಸ್ ಬಿಡುಗಡೆ ಮಾಡಿದೆ. ಪ್ರಮುಖವಾಗಿ ಬಳಕೆದಾರರ ಬಹುದಿನಗಳ ಬೇಡಿಕೆಯನ್ನು ವ್ಯಾಟ್ಸ್‌ಆಯಪ್ ಈಡೇರಿಸಿದೆ. ಇದೀಗ ವ್ಯಾಟ್ಸ್‌ಆಯಪ್‌ ವಿಡಿಯೋ ಕಾಲ್ ವೇಳೆ ಲ್ಯಾಂಡ್‌ಸ್ಕೇಪ್ ಮೂಡ್ ಪ್ರವರ್ತಿಸಲಿದೆಇಷ್ಟು ದಿನ ವಿಡಿಯೋ ಕಾಲ್ ಮಾಡುವಾಗ ಕೇವಲ ಪೋರ್ಟ್ರೈಟ್ ಮೂಡ್ ಮಾತ್ರ ಅನಮತಿ ನೀಡುತ್ತಿತ್ತು. ಆದರೆ ಹೊಸ ಫೀಚರ್‌ನಿಂದ ವಿಡಿಯೋ ಕಾಲ್ ಮಾಡುಲ ಬಳಕೆದಾರರು ಮೊಬೈಲ್‌ನ್ನು ಪೋರ್ಟ್ರೈಟ್ ಅಥವಾ ಲ್ಯಾಂಡ್‌ಸ್ಕೇಪ್ ಯಾವುದೇ ಮೂಡ್‌ನಲ್ಲೂ ಕರೆ ಮಾಡಿ ಸಂಭಾಷಣೆ ನಡೆಸಬಹುದು. ಹೊಸ ಫೀಚರ್ ಇದಕ್ಕೆ ಅನುಮತಿ ನೀಡಲಿದೆ.ವಿಡಿಯೋ ಕಾಲ್ ವೇಳೆ ಲ್ಯಾಂಡ್‌ಸ್ಕೇಪ್ ಮೂಡ್‌ನಲ್ಲಿ ಮೊಬೈಲ್ ಇಟ್ಟು ಸಂಭಾಷಣೆ ನಡೆಸಲು ಅಥವಾ ಇನ್ನಿತರ ಕಾರಣಗಳಿಗೆ ಬಳಕೆದಾರರು ಬಹುದಿನಗಳಿಂದ ಬೇಡಿಕೆ ಇಟ್ಟಿದ್ದರು. ಇದೀಗ ಬಳಕೆದಾರರು ಮೊಬೈಲ್‌ನ್ನು ಲ್ಯಾಂಡ್‌ಸ್ಕೇಪ್ ಮೂಡ್‌ನತ್ತ ತಿರುಗಿಸಿದರೆ ವಿಡಿಯೋ ಕಾಲ್‌ಗೆ ಯಾವುದೇ ಸಮಸ್ಯೆ ಇಲ್ಲ. ಕರೆಯಲ್ಲಿರುವ ವ್ಯಕ್ತಿ ಅಥವಾ ಚಿತ್ರಗಳು ಉಲ್ಟಾ ಕಾಣುವುದಿಲ್ಲ. ಬಳಕೆದಾರರ ಮುಂದಿದ್ದ ಸಮಸ್ಯೆಯೊಂದನ್ನು ವ್ಯಾಟ್ಸ್‌ಆಯಪ್ ಬಗೆಹರಿಸಿದೆ.ಲ್ಯಾಂಡ್‌ಸ್ಕೋಪ್ ಮೂಡ್ ವಿಡಿಯೋ ಕಾಲ್ ಜೊತೆಗೆ ಕಾಲ್ ಸೈಲೆಂಟ್ ಫೀಚರನ್ನು ವ್ಯಾಟ್ಸ್‌ಆಯಪ್ ಪರಿಚಯಿಸಿದೆ. ಈ ಮೂಲಕ ಅನಗತ್ಯ, ಸ್ಪ್ಯಾಮ್ ಕಾಲ್, ಅಪರಿಚಿತ ಕರೆಗಳನ್ನು ನಿರ್ಬಂಧಿಸಲು ಸಾಧ್ಯವಿದೆ. ವ್ಯಾಟ್ಸ್‌ಆಯಪ್ ಸೆಟ್ಟಿಂಗ್ ಮೂಲಕ ಪ್ರೈವೈಸ್ ಕಾಲ್ ಆಯ್ಕೆ ಮಾಡಿದರೆ ಕಿರಿಕಿರಿಯಿಂದ ದೂರ ಉಳಿಯಲು ಸಾಧ್ಯವಿದೆ. ಅಪರಿಚಿತ ಮತ್ತು ಸ್ಪಾಯಮ್‌ ಕರೆಗಳ ಕಿರಿಕಿರಿಯಿಂದ ಬಳಕೆದಾರರಿಗೆ ಮುಕ್ತಿ ನೀಡಲು ಫೋನ್‌ನಲ್ಲಿ ಸೇವ್‌ ಆಗಿಲ್ಲದ ನಂಬರ್‌ಗಳಿಂದ ಬರುವ ಫೋನ್‌ ಕರೆಗಳನ್ನು ಸ್ವಯಂಚಾಲಿತವಾಗಿ ಸೈಲೆಂಟ್‌ ಮಾಡುವ ಹೊಸ ಫೀಚರನ್ನು ವಾಟ್ಸಾಪ್‌ ಬಿಡುಗಡೆ ಮಾಡಿದೆ. ಇದಕ್ಕಾಗಿ ವಾಟ್ಸಾಪ್‌ ಸೆಟ್ಟಿಂಗ್‌ನಲ್ಲಿ ಸೈಲೆಂಟ್‌ ಅನ್‌ನೋನ್‌ ನಂಬ​ರ್‍ಸ್ ಆಯ್ಕೆಯನ್ನು ಎನೇಬಲ್‌ ಮಾಡಿದರೆ ಸಾಕು. ಗೊತ್ತಿಲ್ಲದ ನಂಬರ್‌ಗಳಿಂದ ಬರುವ ಕರೆಗಳನ್ನು ವಾಟ್ಸಾಪ್‌ ಸೈಲೆಂಟ್‌ ಮಾಡಲಿದೆ. ಈ ಹೊಸ ಫೀಚರನ್ನು ಮಂಗಳವಾರ ಘೋಷಿಸಿದ ಮೆಟಾ ಸಿಇಒ ಮಾರ್ಕ್ ಜ್ಯೂಕರ್‌ ಬಗ್‌ರ್‍, ಈಗ ವಾಟ್ಸಾಪ್‌ ಅನ್‌ನೋನ್‌ ಕಾಲ್‌ಗಳನ್ನು ಸೈಲೆಂಟ್‌ ಮಾಡಲಿದೆ.ಆಯಂಡ್ರಾಯ್ಡ್‌ ಮತ್ತು ಐಫೋನ್‌ ಬಳಕೆದಾರರು ಈಗ ಈ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.


ಇಷ್ಟಕ್ಕೇ ವ್ಯಾಟ್ಸ್‌ಆಯಪ್ ಹೊಸ ಫೀಚರ್ ಕತೆ ಮುಗಿದಿಲ್ಲ. ಇದೀಗ ವ್ಯಾಟ್ಸ್‌ಆಯಪ್ ಚಾಟ್ ಟ್ರಾನ್ಸ್‌ಫರ್ ಆಯ್ಕೆಯನ್ನು ನೀಡಿದೆ. ಒಂದು ಫೋನ್‌ನಿಂದ ಮತ್ತೊಂದು ಫೋನ್‌ಗೆ ವ್ಯಾಟ್ಸ್‌ಆಯಪ್‌ನ ಚಾಟ್‌ಗಳನ್ನು ಯಾವುದೇ ಅಡೆ ತಡೆ ಇಲ್ಲದೆ ಟ್ರಾನ್ಸ್‌ಫರ್ ಮಾಡಲು ಈ ಫೀಚರ್‌ನಿಂದ ಸಾಧ್ಯವಿದೆ. ಹಳೇ ಫೋನ್‌ನಿಂದ ಹೊಸ ಫೋನ್‌ಗೆ ಚಾಟ್ ಟ್ರಾನ್ಸ್‌ಫರ್ ಸುಲಭವಾಗಿ ಮಾಡಲು ಸಾಧ್ಯವಿದೆ. ಹೊಸ ಫೀಚರ್‌ನಿಂದ ಐಫೋನ್‌ಗೂ ಚಾಟ್ ಟ್ರಾನ್ಸ್‌ಫರ್ ಮಾಡಲು ಸಾಧ್ಯವಿದೆ. ಇದರ ಜೊತೆಗೆ ವ್ಯಾಟ್ಸ್‌ಆಯಪ್ ಹೊಸ ಹೊಸ ಸ್ಟಿಕ್ಕರ್ ಬಿಡುಗಡೆ ಮಾಡಿದೆ

ಕೋಟೆ ಬೆಟ್ಟಕ್ಕೆ ಬಂದಿದ್ದ ಪುತ್ತೂರು ಪ್ರವಾಸಿಗರ ಮೇಲೆ ಹಲ್ಲೆ! ಚಿನ್ನದ ಸರ ಕಿತ್ತೋಯ್ದ ಆರೋಪಿಗಳು

Posted by Vidyamaana on 2024-06-24 06:31:55 |

Share: | | | | |


ಕೋಟೆ ಬೆಟ್ಟಕ್ಕೆ ಬಂದಿದ್ದ ಪುತ್ತೂರು ಪ್ರವಾಸಿಗರ ಮೇಲೆ ಹಲ್ಲೆ! ಚಿನ್ನದ ಸರ ಕಿತ್ತೋಯ್ದ ಆರೋಪಿಗಳು

ಮಡಿಕೇರಿ: ಕೋಟೆಬೆಟ್ಟ (Kotebetta) ಪ್ರವಾಸಕ್ಕೆಂದು ಆಗಮಿಸಿದ ಪ್ರವಾಸಿಗರ (Tourists) ಮೇಲೆ ಬೈಕಿನಲ್ಲಿ ಬಂದ ಇಬ್ಬರು ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಘಟನೆ ಕೊಡಗು (Kodagu) ಜಿಲ್ಲೆಯಲ್ಲಿ ನಡೆದಿದೆ.ಮಕ್ಕಳು, ಮಹಿಳೆಯರು ಸೇರಿದಂತೆ ಪುತ್ತೂರಿನಿಂದ ಕುಟುಂಬವೊಂದು ಕೋಟೆಬೆಟ್ಟ ಪ್ರವಾಸಿ ತಾಣಕ್ಕೆ ಆಗಮಿಸಿದ್ದರು.



Leave a Comment: