ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಶಾಸಕರ ಐಶಾರಾಮಿ ಕಚೇರಿಗೆ ನಗರಸಭೆಯ ತೆರಿಗೆ ಹಣ ವಿನಿಯೋಗ ಖಂಡನೀಯ

Posted by Vidyamaana on 2023-08-30 02:07:54 |

Share: | | | | |


ಶಾಸಕರ ಐಶಾರಾಮಿ ಕಚೇರಿಗೆ ನಗರಸಭೆಯ ತೆರಿಗೆ ಹಣ ವಿನಿಯೋಗ ಖಂಡನೀಯ

ಪುತ್ತೂರು: ಪುತ್ತೂರಿನಲ್ಲಿ ಶಾಸಕರ ಕಚೇರಿ ಲೋಕಾರ್ಪಣೆ ಆಗಿದೆ. ಇದಕ್ಕೆ ನಾವೆಲ್ಲ ಸಂತೋಷ ಪಡಬೇಕು. ಆದರೆ ಆ ಕಚೇರಿಗೆ ನಗರಸಭೆಯ ತೆರಿಗೆ ಹಣವನ್ನು ವಿನಿಯೋಗಿಸಿದ್ದು ಖಂಡನೀಯ. ಪುತ್ತೂರು ನಗರಸಭೆಯ ರೂ. 31ಲಕ್ಷ ವೆಚ್ಚ ಮಾಡಿ ಶಾಸಕರ ಐಶಾರಾಮಿ ಕಚೇರಿ ನಿರ್ಮಾಣ ಆಗಿದೆ. ಈ ಹಣವನ್ನು ನಗರಸಭೆಗೆ ಜಿಲ್ಲಾಧಿಕಾರಿಗಳು ಹಿಂದಿರುಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನ ಬಿಜೆಪಿ ನೇತೃತ್ವದಲ್ಲಿ ನಗರಸಭೆ ಸದಸ್ಯರೊಂದಿಗೆ ಪುತ್ತೂರು ನಗರಸಭೆಯ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಎಚ್ಚರಿಕೆ ನೀಡಿದ್ದಾರೆ.


ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಶಾಸಕ ಅಶೋಕ್ ರೈ ಅವರ ಕಚೇರಿ ಮಾಡಲು ಅನುದಾನ ಎಲ್ಲಿಂದ ಬಂತು ಎಂಬುದನ್ನು ಯಾರು ನೋಡಿರಿಲ್ಲ. ಪುತ್ತೂರಿನ ಇತಿಹಾಸದಲ್ಲಿ ಶಾಸಕರಾಗಿದ್ದ ಸದಾನಂದ ಗೌಡ, ಶಕುಂತಳಾ ಶೆಟ್ಟಿ, ಮಲ್ಲಿಕಾಪ್ರಸಾದ್, ನಾನು ಕೂಡಾ ಸೇರಿದಂತೆ ಯಾರು ಕೂಡಾ ಐಶಾರಾಮದ ಕಚೇರಿ ಮಾಡಿಲ್ಲ. ಜನಾಮಾನ್ಯರ ತೆರಿಗೆ ಹಣದಲ್ಲಿ ಕಚೇರಿ ಮಾಡದೆ ತಾಲೂಕು ಪಂಚಾಯತ್, ತಾಲೂಕು ಆಡಳಿತ ಸೌಧದಲ್ಲೇ ಕಚೇರಿ ಮಾಡಿದ್ದೆವು. ಜನಸಾಮಾನ್ಯರಿಗೆ ಸುಲಭವಾಗಿ ಶಾಸಕರು ಸಿಗಬೇಕೆಂಬ ನಿಟ್ಟಿನಲ್ಲಿ ಎಲ್ಲಾ ಕಡೆ ಸರಕಾರಿ ಕಚೇರಿಯಲ್ಲೇ ಮಾಡಲಾಗಿತ್ತು. ಆದರೆ ಪುತ್ತೂರು ಶಾಸಕರು ತಮ್ಮ ಕಚೇರಿಗೆ ನಗರಸಭೆಯ ರೂ. 31ಲಕ್ಷವನ್ನು ವಿನಿಯೋಗಿಸಿದ್ದಾರೆ. ಪುತ್ತೂರು ನಗರಸಭೆಯ ಜನರ ತೆರಿಗೆ ಹಣದಲ್ಲಿ ಈ ಕಚೇರಿಗೆವಿನಿಯೋಗ ಮಾಡುವ ಕೆಲಸದ ಬದಲು ಅದು ಪುತ್ತೂರಿನ ಅಭಿವೃದ್ಧಿಗೆ ವಿನಿಯೋಗ ಆಗಬೇಕಾಗಿತ್ತು. ನಗರಸಭೆಯ ಸದಸ್ಯರಿಗೆ ಅನುದಾನ ಹಂಚಿಕೆ ಮಾಡಿದಲ್ಲಿ ಅವರು ತಮ್ಮ ತಮ್ಮ ವಾರ್ಡ್‌ಗಳ ಅಭಿವೃದ್ಧಿಗೆ ವಿನಿಯೋಗಿಸುತ್ತಿದ್ದರು. ಆದರೆ ಇಲ್ಲಿ ಶಾಸಕರು ಸೂಚನೆ ಕೊಟ್ಟು ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳು ನಗರಸಭೆಯ ಜನಪ್ರತಿನಿಧಿಗಳ ಗಮನಕ್ಕೂ ತಾರದೆ ನಿರ್ಣಯ ಮಾಡಿ ಅನುದಾನವನ್ನು ಶಾಸಕರ ಕಚೇರಿಗೆ ವಿನಿಯೋಗಿಸಲು ನೀಡಿರುವುದು ಖಂಡನೀಯ. ಈ ನಡುವೆ ಪುಡಾ ಕಚೇರಿನ್ನು ಖಾಸಗಿ ಕಟ್ಟಡಕ್ಕೆ ವರ್ಗಾವಣೆ ಮಾಡುವ ಮೂಲಕ ನಗರಸಭೆಗೆ ಪುಡಾದ ಬಾಡಿಗೆಯಿಂದ ಬರುವ ಅನುದಾನವು ಕಡಿತವಾಗಿದೆ. ಇದೀಗ ಪುಡಾವು ಹೆಚ್ಚುವರಿ ರೂ. 16ಸಾವಿರ ಬಾಡಿಗೆ ಕೊಡಬೇಕಾಗಿ ಬಂದಿದೆ. ಒಂದು ಶಾಸಕರ ಕಚೇರಿಗಾಗಿ ಎಷ್ಟು ಖರ್ಚನ್ನು ಸರಕಾರದ ಖಜಾನೆಯಿಂದ ಖರ್ಚು ಮಾಡುತ್ತಾರೆ ಎಂಬುದು ಜನಸಾಮಾನ್ಯರು ಯೋಚನೆ ಮಾಡಬೇಕು. ಭ್ರಷ್ಟಾಚಾರದ ಬಗ್ಗೆ ನಾವು ಮಾತನಾಡುತ್ತೇವೆ. ಆದರೆ ಎಲ್ಲಿಂದ ಭ್ರಷ್ಟಾಚಾರ ಆಗುತ್ತಿದೆ. ಎಲ್ಲಿ ಸರಕಾರದ ಹಣ ಪೋಲಾಗುತ್ತಿದೆ. ಇದನ್ನು ಯೋಚನೆ ಮಾಡಬೇಕು. ಅದಕ್ಕಾಗಿ ಪುತ್ತೂರು ನಗರಸಭೆಯ ಜನರು ತೆರಿಗೆ ರೂಪದಲ್ಲಿ ನಗರಸಭೆಗೆ ಕಟ್ಟಿದ ಹಣವನ್ನು ಮತ್ತೆ ನಗರಭೆಗೆ ಜಿಲ್ಲಾಧಿಕಾರಿಯವರು ಕೊಡಿಸಬೇಕು. ಆ ಹಣದಿಂದ ನಗರಸಭೆಯ ಸದಸ್ಯರು ತಮ್ಮ ತಮ್ಮ ವಾರ್ಡ್‌ಗಳಲ್ಲಿ ಅಭಿವೃದ್ಧಿ ಮಾಡಬಹುದು. ಇಲ್ಲವಾದಲ್ಲಿ ಮುಂದಿನ ದಿನ ಬಿಜೆಪಿಯಿಂದ ನಗರಸಭೆಯ ಮುಂದೆ ಪ್ರತಿಭಟನೆ ಅನಿವಾರ್ಯವಾಗಬಹುದು ಎಂದು ಅವರುಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ನಾನು ಶಾಸಕನಾಗಿದ್ದ ಸಂದರ್ಭ ಲೋಕೋಪಯೋಗಿ ಇಲಾಖೆಯವರು ನೇರ ಸರಕಾರದಿಂದ ನೀಡಿದ ರೂ. 3ಲಕ್ಷದಲ್ಲಿ ನನ್ನ ಕಚೇರಿ ನಿರ್ಮಾಣ ಆಗಿದೆ ಎಂದರು. ಆದರೆ ಈಗಿನ ಶಾಸಕರು ಒಂದು ಕಚೇರಿಗಾಗಿ ಇಷ್ಟೊಂದು ಹೊರೆ ಭರಿಸುವುದು ಅಗತ್ಯವಿತ್ತಾ ಎಂದು ಪ್ರಶ್ನಿಸಿದರು

 ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್.ಶೆಟ್ಟಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಚಂದ್ರ, ಸದಸ್ಯೆ ಗೌರಿ ಬನ್ನೂರು ಉಪಸ್ಥಿತರಿದ್ದರು.

ಕೊಂಬೆಟ್ಟು: ವಿದ್ಯುತ್ ಸುರಕ್ಷತಾ ಸಪ್ತಾಹ

Posted by Vidyamaana on 2023-07-08 16:42:46 |

Share: | | | | |


ಕೊಂಬೆಟ್ಟು: ವಿದ್ಯುತ್ ಸುರಕ್ಷತಾ ಸಪ್ತಾಹ

ಪುತ್ತೂರು: ಮೆಸ್ಕಾಂನ ಪುತ್ತೂರು ಉಪವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ವಿದ್ಯುತ್ ಸುರಕ್ಷತಾ ಸಪ್ತಾಹ ಕೊಂಬೆಟ್ಟು ಜ್ಯೂನಿಯರ್ ಕಾಲೇಜಿನಲ್ಲಿ ಜರಗಿತು.ಪುತ್ತೂರು ನಗರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಎ. ಮಾತನಾಡಿ, ವಿದ್ಯುತ್ ಬಳಕೆ ಮತ್ತು ಎಚ್ಚರಿಕೆ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಸಹಕರಿಸಿದರು. ಸಹಾಯಕ ಇಂಜಿನಿಯರ್ ರಾಜೇಶ್ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು.

ಮೆಸ್ಕಾಂ ಪವರ್ ಮ್ಯಾನ್ ಗಳಾದ ಶಂಕರ ತಳ್ಳಿ, ಹೇಮಂತ್ ಮತ್ತು ಸಂತೋಷ್ ಜಾದವ್ ಉಪಸ್ಥಿತರಿದ್ದರು.

ವೈದ್ಯಕೀಯ ವೃತ್ತಿ ಆರಂಭಿಸಬೇಕಾಗಿದ್ದ ಮಂಗಳೂರಿನ ಯುವ ವೈದ್ಯೆ ಡಾ.ಸ್ವಾತಿ ಶೆಟ್ಟಿ ಮಲಗಿದ್ದಲ್ಲೇ ಸಾವು

Posted by Vidyamaana on 2024-04-17 07:33:11 |

Share: | | | | |


ವೈದ್ಯಕೀಯ ವೃತ್ತಿ ಆರಂಭಿಸಬೇಕಾಗಿದ್ದ ಮಂಗಳೂರಿನ ಯುವ ವೈದ್ಯೆ ಡಾ.ಸ್ವಾತಿ ಶೆಟ್ಟಿ ಮಲಗಿದ್ದಲ್ಲೇ ಸಾವು

ಉಳ್ಳಾಲ ತಾಲೂಕಿನ ನರಿಂಗಾನ‌ ನಿವಾಸಿ, ದಂತ ವೈದ್ಯಕೀಯ ಪದವಿ ಪೂರೈಸಿದ್ದ ಸ್ವಾತಿ ಶೆಟ್ಟಿ (24) ಮಂಗಳವಾರ ಬೆಳಗ್ಗೆ ಪಾಂಡೇಶ್ವರದ ಪಿಜಿಯಲ್ಲಿ ಸಂಶಯಾಸ್ಪದ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ. 


ಎ.ಜೆ. ಆಸ್ಪತ್ರೆಯಲ್ಲಿ ಬಿಡಿಎಸ್ ಪದವಿ ಪೂರೈಸಿದ್ದ ಸ್ವಾತಿ ಪಾಂಡೇಶ್ವರದ ಕ್ಲಿನಿಕ್ ಒಂದರಲ್ಲಿ ಎ.16ರ ಮಂಗಳವಾರದಿಂದಲೇ ಕೆಲಸಕ್ಕೆ ಹಾಜರಾಗಬೇಕಿತ್ತು. ನಿನ್ನೆಯಷ್ಟೇ ತಾಯಿ ಜೊತೆಗೆ ಪಾಂಡೇಶ್ವರ ಕ್ಲಿನಿಕ್ ಗೆ ಬಂದು ಕೆಲಸದ ಬಗ್ಗೆ ಮಾತನಾಡಿ, ಅಲ್ಲಿನ ಪಿಜಿಯಲ್ಲಿ ಉಳಿದುಕೊಂಡಿದ್ದರು. ಪಾಂಡೇಶ್ವರ ಪೊಲೀಸ್ ಠಾಣೆ ಹಿಂಭಾಗದ ಪಿಜಿಯಲ್ಲಿ ಸೋಮವಾರ ಸಂಜೆಯಿಂದ ಉಳಿದಿದ್ದರು. ರಾತ್ರಿ ತಾಯಿ ಜತೆಗೆ ಮೊಬೈಲ್ ನಲ್ಲಿ ಮಾತನಾಡಿದ್ದ ಯುವತಿ, ವಿಪರೀತ ತಲೆನೋವು ಎಂದು ಹೇಳಿದ್ದರು. ಬಳಿಕ ನಾಳೆ ಮಾತನಾಡುತ್ತೇನೆ ಎಂದು ಹೇಳಿ ಫೋನ್ ಕಟ್ ಮಾಡಿದ್ದರು

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್

Posted by Vidyamaana on 2023-04-15 14:44:59 |

Share: | | | | |


ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್

ಬಂಟ್ವಾಳ: ಬಂಟ್ವಾಳ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶನಿವಾರ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಾರ್ಥನೆಗೈದು ಸಹಸ್ರಾರು ಕಾರ್ಯಕರ್ತ ರೊಂದಿಗೆ ಕಾಲ್ನಡಿಗೆಯ ಮೂಲಕ ಸಾಗಿ ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಸ್ಕೂಟರ್ ಗೆ ಬಿಎಂಟಿಸಿ ಬಸ್ ಡಿಕ್ಕಿ: ವಿದ್ಯಾರ್ಥಿನಿ ಕುಸುಮಿತಾ ಮೃತ್ಯು

Posted by Vidyamaana on 2024-02-02 21:32:38 |

Share: | | | | |


ಸ್ಕೂಟರ್ ಗೆ ಬಿಎಂಟಿಸಿ ಬಸ್ ಡಿಕ್ಕಿ: ವಿದ್ಯಾರ್ಥಿನಿ  ಕುಸುಮಿತಾ ಮೃತ್ಯು

ಬೆಂಗಳೂರು: ಬಿಎಂಟಿಸಿ ಬಸ್ಸೊಂದು ಬೈಕ್ ಡಿಕ್ಕಿಯಾಗಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಂಗಳೂರಿನ ಹರಿಶ್ಚಂದ್ರ ಘಾಟ್ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.



ಕೆಂಗೇರಿಯ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತಿದ್ದ ಮಲ್ಲೇಶ್ವರ ನಿವಾಸಿ ಯುವತಿ ಕುಸುಮಿತಾ (21) ಇಂದು ಬೆಳಗ್ಗೆ 8.30ಕ್ಕೆ ಕಾಲೇಜಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.


ಕೂಡಲೇ ಅವರನ್ನು ಸ್ಥಳೀಯ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ

ಸುಳ್ಯ ; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪುತ್ತೂರು ಮೂಲದ ವಸಂತ ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ

Posted by Vidyamaana on 2024-02-07 15:51:50 |

Share: | | | | |


ಸುಳ್ಯ ; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪುತ್ತೂರು ಮೂಲದ ವಸಂತ ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಸುಳ್ಯ, ಫೆ 07: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಿಗ್ಗೆ ಸುಳ್ಯದಲ್ಲಿ ಸಂಭವಿಸಿದೆ.


ಪುತ್ತೂರು ತಿಂಗಳಾಡಿಯ ವಸಂತ ಆತ್ಮಹತ್ಯೆಗೈದ ವ್ಯಕ್ತಿ. ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ದಾಖಲಾಗಿದ್ದ ಇವರು, ಇಂದು ಮುಂಜಾನೆ ಆರು ಗಂಟೆಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಇವರು ಪಿಟ್ಸ್ ರೋಗಿಯಾಗಿದ್ದರು ಎಂದು ತಿಳಿದುಬಂದಿದೆ.


ಮೃತರು ಪತ್ನಿ, ಒರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.



Leave a Comment: