ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಸ್ವ ಗ್ರಾಮದ ಕೋಡಿಂಬಾಡಿ ಗೆ ಭರ್ಜರಿ ಗಿಫ್ಟ್ ಕೊಟ್ಟ ಶಾಸಕರು

Posted by Vidyamaana on 2023-12-23 09:16:57 |

Share: | | | | |


ಸ್ವ ಗ್ರಾಮದ ಕೋಡಿಂಬಾಡಿ ಗೆ ಭರ್ಜರಿ ಗಿಫ್ಟ್ ಕೊಟ್ಟ ಶಾಸಕರು

ಪುತ್ತೂರು: ಶಾಸಕರಾದ ಅಶೋಕ್ ರೈ ಯವರ ಸ್ವಗ್ರಾಮ ಕೋಡಿಂಬಾಡಿಗೆ ಮೊದಲ ಬಾರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಗ್ರಾಮದ ವಿವಿಧ ರಸ್ತೆ ಕಾಮಗಾರಿಗೆ ಒಟ್ಟು ೫೫ ಲಕ್ಷ ರೂ ಅನುದಾನವನ್ನು ಬಿಡುಗಡೆ ಮಾಡಿದ್ದು ಅದರ ಶಿಲಾನ್ಯಾಸ ಕಾಮಗಾರಿ ಡಿ. ೨೨ ರಂದು ನಡೆಯಿತು.


ಕೋಡಿಂಬಡಿ ಗ್ರಾಮದ ಕೆದಿಕಂಡೆ-ಪುಣ್ಕೆತ್ತಡಿ ರಸ್ತೆ, ಕಲ್ಪನೆ -ಪಿಲಗುಂಡ ರಸ್ತೆ೧೦ ಲಕ್ಷ , ಬೆಳ್ಳಿಪ್ಪಾಡಿ ಕೊಡಿಮರ ಕಠಾರ ರಸ್ತೆ೧೦ ಲಕ್ಷ . ಕೊಡಿಮರ ಬಾರ್ತೋಲಿ ರಸ್ತೆ, ಕಜೆ ಬೆಳ್ಳಿಪ್ಪಾಡಿ ರಸ್ತೆಗೆ ೧೦ ಲಕ್ಷ , ದಾರಂದ ಕುಕ್ಕು ಬದಿನಾರು ರಸ್ತೆಗೆ ೧೦ ಲಕ್ಷ  ಒಟ್ಟು ೫೫ ಲಕ್ಷ ಅನುದಾನ ಬಿಡುಗಡೆಯಾಗಿದ್ದು ಚುನಾವಣಾ ಪೂರ್ವದಲ್ಲಿ ತನ್ನ ಗ್ರಾಮಸ್ಥರಿಗೆ ಕೊಟ್ಟ ಭರವಸೆಯನ್ನು ಈಡೇರಿಸಿದ್ದಾರೆ.


ಅನುದಾನಗಳ ಭರಪೂರವೇ ಬರುತ್ತಿದೆ

ಗ್ಯಾರಂಟಿ ಯೋಜನೆ ಮಾಡಿ ಸರಕಾರದಿಂದ ಅನುದಾನ ಬರುತ್ತಿಲ್ಲ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಅಪಪ್ರಚಾರ ಮಾಡುವವರು ಕೋಡಿಂಬಡಿಗೆ ಬಂದು ನೋಡಲಿ, ಇಂದಿನಿಂದ ಪ್ರತೀ ದಿನ ಶಿಲಾನ್ಯಾಸ ಕಾರ್ಯ ನಡೆಯುತ್ತಲೇ ಇರುತ್ತದೆ. ಪುತ್ತೂರು ವಿಧಾನಸಭಾ ಕ್ಷೇತ್ರದಾದ್ಯಂತ ಅಭಿವೃದ್ದಿ ಕಾರ್ಯ ನಡೆಯಲಿದೆ. ಎಲ್ಲಾ ಗ್ರಾಮಗಳಿಗೂ ಸಮಾನ ರೀತಿಯಲ್ಲಿ ಅನುದಾನವನ್ನು ಹಂಚಿಕೆ ಮಾಡುತ್ತೇನೆ. ಕ್ಷೇತ್ರದಲ್ಲಿ ಮುಂದೆ ಅಭಿವೃದ್ದಿ ಕಾರ್ಯಗಳು ನಡೆಯಲಿದ್ದು ಅಪಪ್ರಚಾರ ಮಾಡುವವರು ಒಮ್ಮೆ ಇದನ್ನು ತಿಳಿದುಕೊಳ್ಳಲಿ. ಬೆಳ್ಳಿಪ್ಪಾಡಿ ಗ್ರಾಮದ ಕಠಾರದಲ್ಲಿ ಕೆಎಂಎಫ್ ಡೈರಿ ಶಿಫ್ಟ್ ಆಗಲಿದೆ ಇದರಿಂದ ಆ ಬಾಗದ ಸಂಪೂರ್ಣವಾಗಿ ಅಭಿವೃದ್ದಿಯಾಗಲಿದೆ, ಅಲ್ಲಿನ ರಸ್ತೆಗಳಿಗೂ ಕಾಂಕ್ರೀಟ್ ಭಾಗ್ಯ ದೊರೆಯಲಿದೆ ಎಂದು ಶಾಸಕರು ಹೇಳಿದರು.


ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ದಿ


ಪುತ್ತೂರು ವಿಧಾನಸಭಾ ಕ್ಷೆತ್ರದಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ದಿ ಕೆಲಸಗಳು ನಡೆಯಲಿದೆ. ಈಗಾಗಲೇ ಕುಡಿಯುವ ನೀರು, ಕೆಎಂಎಫ್, ಕಬಕದಲ್ಲಿ ಕ್ರಿಕೆಟ್ ಮೈದಾನ, ಪುತ್ತೂರು ನಗರದಲ್ಲಿ ಚರಂಡಿ ಕಾಮಗಾರಿ, ಉಪ್ಪಿನಂಗಡಿ ದೇವಳದ ವಠಾರದಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯಲಿದೆ. ಚುನವಣೆ ಪೂರ್ವದಲ್ಲಿ ಜನತೆಗೆ ಕೊಟ್ಟ ಭರವಸೆಯನ್ನು ಒಂದೊಂದಾಗಿ ಈಡೇರಿಸುವ ಕೆಲಸವನ್ನು ಮಾಡಲಿದ್ದೇನೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದರು.

ಬಿಜೆಪಿಯವರು ಮಂಗವೇ ಮಾಡಿದ್ದು

ನಮ್ಮ ರಸ್ತೆಯನ್ನು ಕಾಂಕ್ರೀಟ್ ಮಾಡಿಲ್ಲ, ನಾವು ಬಿಜೆಪಿ ಶಾಸಕರಿರುವಾಗ ಮನವಿ ಮಾಡಿದ್ದೆವು ಆದರೆ ನಯಾ ಪೈಸೆ ಅನುದಾನ ಕೊಟ್ಟಿಲ್ಲ, ನಾವೇನು ಪಾಕಿಸ್ತಾನದಲ್ಲಿದ್ದೇವಾ ಎಂಬ ಭಾವನೆ ನಮ್ಮಲ್ಲಿತ್ತು ಎಂದು ಸುಬ್ರಹ್ಮಣ್ಯ ಶೆಟ್ಟಿ ರೆಂಜಾಜೆ ಗುತ್ತು ಆರೋಪ ಮಾಡಿದರು. ಕೊಡ್ತೇವೆ, ಇಡ್ತೇವೆ ಎಂದು ಹೇಳಿ ನಮ್ಮನ್ನು ಬಿಜೆಪಿಯವರು ಮಂಗವೇ ಮಾಡಿದ್ದಾರೆ, ಬೆಳ್ಳಿಪ್ಪಾಡಿ -ಕಜೆ ರಸ್ತೆ ಭಾರತದಲ್ಲಿದೆ ಎಂಬುದು ಈಗ ನಮಗೆ ಅನುಭವವಾಯಿತು ಎಂದು ಹೇಳಿದರು. ಕೇಶವ ಭಂಡಾರಿ ಕೈಪ ಮಾತನಾಡಿ ನಾವು ಈ ಹಿಂದೆ ಅನುದಾನ ಕೇಳಲು ಹೋದಾಗ ನಿಮ್ಮ ಏರಿಯದಲ್ಲಿ ಓಟು ಕಮ್ಮಿ ಇದೆ , ಸ್ವಲ್ಪ ಓಟು ಹೆಚ್ಚು ಮಾಡಿಸಿ ಅನುದಾನ ಇಡುತ್ತೇವೆ ಎಂದು ಬಿಜೆಪಿಯವರು ಹೇಳಿದ್ದರು, ಆದರೆ ಇಂದು ಅದಾವುದನ್ನು ಕೇಳದೆ ನಮ್ಮ ರಸ್ತೆಗೆ ಅನುದಾನ ಇಡುವ ಮೂಲಕ ಶಾಸಕರಾದ ಅಶೋಕ್ ರೈಯವರು ಅನುದಾನ ಹಂಚಿಕೆಯಲ್ಲಿ ಅಥವಾ ಅಭಿವೃದ್ದಿ ಯಲ್ಲಿ ರಾಜಕೀಯ ಮಾಡುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದರು.

ಇನ್ನು ಅಭಿವೃದ್ದಿ ಪರ್ವ ಆರಂಭ: ಡಾ.ರಾಜಾರಾಂ


ಮುಂದಿನ ದಿನಗಳಲ್ಲಿ ಪುತ್ತೂರು ಕ್ಷೇತ್ರ ನಿರಂತರ ಅಭಿವೃದ್ದಿ ಹೊಂದಲಿದೆ. ಅಶೋಕ್ ರೈಯವರು ಶಾಸಕರಾಗಿ ಕೇವಲ ಏಳು ತಿಂಗಳಲ್ಲಿ ಸಾವಿರಾರು ಕೋಟಿ ಅನುದಾನವನ್ನು ತಂದಿದ್ದಾರೆ ಇದು ಯಾರಿಗೂ ಸಾಧ್ಯವಾಗಿಲ್ಲ. ಕ್ಷೇತ್ರದ ಗಲ್ಲಿಗಲ್ಲಿಗಳ ರಸ್ತೆಗಳು, ಕುಡಿಯುವ ನೀರು ಸೇರಿದಂತೆ ಬಹು ಅಪೇಕ್ಷಿತ ಕಾಮಗಾರಿಗಳು ಮುಂದೆ ನಡೆಯಲಿದೆ. ಅಭಿವೃದ್ದಿ ಆಗಬೇಕಾದರೆ ಕಾಂಗ್ರೆಸ್ ಶಾಸಕರಿರಬೇಕು, ಕಾಂಗ್ರೆಸ್ ಸರಕಾರ ಇರಬೇಕು ಎಂದು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅದ್ಯಕ್ಷರಾದ ಡಾ. ರಾಜಾರಾಂ ಕೆ ಬಿ ಹೇಳಿದರು.

ದಾರಂದಕುಕ್ಕು ಅಂಗನವಾಡಿ ಇಂಟರ್‌ಲಾಕ್ ಉದ್ಘಾಟನೆ


ದಾರಂದ ಕುಕ್ಕು ಅಂಗನವಾಡಿಯ ಅಂಗಳಕ್ಕೆ ಹಾಕಿರುವ ಇಂಟರ್ ಲಾಕ್ ವ್ಯವಸ್ಥೆಯನ್ನು ಶಾಸಕರು ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮತನಾಡಿದ ಶಾಸಕರು ಪುಟ್ಟ ಮಕ್ಕಳಿಗೆ ಎಳವೆಯಲ್ಲೇ ಉತ್ತಮ ವಾತಾವರಣವನ್ನು ಕಲ್ಪಿಸಿಕೊಡಬೇಕಾಗಿದ್ದು ನಮ್ಮ ಕರ್ತವ್ಯವಾಗಿದೆ. ಸಣ್ಣ ಪ್ರಾಯದಲ್ಲೇ ಮಕ್ಕಳು ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಂಡಲ್ಲಿ ಮುಂದೆ ದೊಡ್ಡವರಾದಾಗ ಅದು ಜೀವನದಲ್ಲಿ ಅಳವಡಿಕೆಯಗುತ್ತದೆ. ಅಂಗನವಾಡಿ ಕೇಂದ್ರಗಳು ಪುಟ್ಟ ಹೃದಯಗಳ ಸಮ್ಮಿಲನ ಕೇಂದ್ರವಾಗಿದೆ. ಮಕ್ಕಳನ್ನು ಅಂಗನವಾಡಿಗೆ ಸೇರಿಸುವ ಮೂಲಕ ಪೋಷಕರು ಅವುಗಳನ್ನು ಉಳಿಸಿ ಬೆಳೆಸುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು ಇದೇ ಸಂದರ್ಬದಲ್ಲಿ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯನ್ನು ಶಾಸಕರು ಗೌರವಿಸಿದರು.


ವಾರದಲ್ಲಿ ಮೂರು ದಿನ ಕ್ಯಾಂಪ್


ಸರಕಾರದ ಗೃಹಲಕ್ಷ್ಮಿ ಯೋಜನೆಯಲ್ಲಿ ಹಣ ಬಾರದೇ ಇರುವ ಅನೇಕ ಕುಟುಂಬಗಳಿದ್ದು ಅವರಿಗೆ ಅವರವರ ಗ್ರಾಮದಲ್ಲೇ ಕ್ಯಾಂಪ್ ಮಾಡುವ ಮೂಲಕ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಪ್ರಭಾರ ಸಿಡಿಪಿಒ ಮಂಗಳಾರವರು ತಿಳಿಸಿದರು. ಕ್ಯಾಂಪ್ ನಡೆಸಿ ಸಮಸ್ಯೆ ಪರಿಹಾರ ಶಾಸಕರು ಇಲಾಖೆಗೆ ಸೂಚನೆಯನ್ನು ನೀಡಿದ್ದರು. ಅದರಂತೆ ಡಿ.೨೭,೨೮ ಮತ್ತು ೨೯ ರಂದು ಮೂರು ದಿನ ಎಲ್ಲಾ ಗ್ರಾಪಂ ಕಚೇರಿಗಳಲ್ಲಿ ಕ್ಯಾಂಪ್ ನಡೆಯಲಿದೆ. ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಶಾಕರು ಇದೇ ಸಂದರ್ಬದಲ್ಲಿ ಮನವಿ ಮಾಡಿದರು.


ಕೇಳಿಕೇಳಿ ಸಾಕಾಗಿ ಹೋಗಿದೆ

ದಾರಂದಕುಕ್ಕು ಬದಿನಾರು ರಸ್ತೆಗೆ ಕಾಂಕ್ರೀಟ್ ಮಾಡಿಸಿ ಎಂದು ನಮಗೆ ಕೇಳಿ ಕೇಳಿ ಸಾಕಾಗಿ ಹೋಗಿದೆ. ಕಳೆದ ೧೫ ವರ್ಷಗಳಿಂದ ಮನವಿ ಮಾಡುತ್ತಿದ್ದೇವೆ ಈ ಬರಿ ನಮಗೆ ಯೋಗ ಕೂಡಿ ಬಂದಿದೆ. ನಮ್ಮ ರಸ್ತೆಗೆ ೧೦ ಲಕ್ಷ ಅನುದಾನ ಇಡುವ ಮೂಲಕ ೧೫ ವರ್ಷಗಳ ಬೇಡಿಕೆಯನ್ನು ಶಾಸಕರು ಈಡೇರಿಸಿದ್ದಾರೆ ಎಂದು ಬದಿನಾರು ನಿವಾಸಿಗಳು ಶಾಸಕರಲ್ಲಿ ತಿಳಿಸಿದರು.


ಕಾರ್ಯಕ್ರಮದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಮಾಜಿ ಅಧ್ಯಕ್ಷರಾದ ಮುರಳೀಧರ್ ರೈ ಮಠಂತಬೆಟ್ಟು, ಕೋಡಿಂಬಾಡಿ ಗ್ರಾಪಂ ಅಧ್ಯಕ್ಷೆಮಲ್ಲಿಕಾ ಅಶೋಕ್ ಪೂಜರಿ, ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಸದಸ್ಯರಾದ ಜಗನ್ನಾಥ ಶೆಟ್ಟಿ ನಡುಮನೆ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮೋನಪ್ಪ ಗೌಡ ಪಮ್ಮನಮಜಲು, ಕಾರ್ಯದರ್ಶಿಗಳಾದ ಯೋಗೀಶ್ ಸಾಮಾನಿ ಮಠಂತಬೆಟ್ಟು, ಬೂತ್ ಅಧ್ಯಕ್ಷರುಗಳಾದ ಪ್ರಭಾಕರ ಸಾಮಾನಿ, ಪದ್ಮನಾಭ ಶೆಟ್ಟಿ ರೆಂಜಾಜೆ, ಶಿವಪ್ರಸಾದ್ ರೈ ಮಟಂತಬೆಟ್ಟು, ವಿಕ್ರಂ ಶೆಟ್ಟಿಕೋಡಿಂಬಾಡಿ, ಕೇಶವ ಗೌಡ ಬರಮೇಲು, ಬನ್ನೂರು ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರಭಟ್, ರಾಜಶೇಖರ್ ಜೈನ್ ನೀರ್ಪಾಜೆ, ನೆಕ್ಕಿಲಾಡಿ ವಲಯ ಅಧ್ಯಕ್ಷೆ ಅನಿಮಿನೇಜಸ್, ಇಬ್ರಾಹಿಂ ಸೇಡಿಯಾಪು, ಅಶ್ರಫ್ ಬಸ್ತಿಕ್ಕಾರ್, ಮೋನಪ್ಪ ಶೆಟ್ಟಿ ಕಠಾರ, ಶ್ರೀನಿವಾಸ ಶೆಟ್ಟಿ ಕಠಾರ, ಗ್ರಾಪಂ ಸದಸ್ಯೆ ಪುಷ್ಪಾವತಿ, ಪದ್ಮಪ್ಪ ಪೂಜಾರಿ ಪರನೀರು, ಹರೀಶ್ ಕಜೆ,  ಬೆಳ್ಳಿಪ್ಪಾಡಿ ಶಾಲಾ ಮುಖ್ಯ ಗುರು ಯಶೋಧ, ಗ್ರಾಪಂ ಸದಸ್ಯೆ ಭವ್ಯ ವಿದ್ಯಾಪ್ರಸಾದ್, ಪುಷ್ಪಾ ಲೋಕಯ್ಯ ನಾಯ್ಕ, ಪ್ರೇಮ ಈಶ್ವರ ನಾಯ್ಕ, ಗಣೇಶ್ ಶೆಟ್ಟಿ ಕಠಾರ, ಉಮೇಶ್ ಶೆಟ್ಟಿ ಕಠಾರ, ವಾಸುದೇಶವ ಆಚಾರ್ಯ ಕೊಡಪಡ್ಯ,ಶೀಲಾ ಲೋಕನಾಥ ಶೆಟ್ಟಿ, ಸಂತೋಷ್ ರೈ ಕೆದಿಕಂಡೆ ಗುತ್ತು,ಚಂಧ್ರಶೇಖರ್ ರೈ ಕೆದಿಕಂಡೆ ಗುತ್ತು, ಮಾಜಿ ಮಂಡಲ ಪಂಚಾಯತ್ ಸದಸ್ಯೆ ಗಿರಿಜಾ ರೈ ಕೆದಿಕಂಡೆ ಮತ್ತಿತರರು ಉಪಸ್ಥಿತರಿದ್ದರು. ನಿರಂಜನ್ ರೈ ಮಠಂತಬೆಟ್ಟು ಸ್ವಾಗತಿಸಿದರು.ಸುದೇಶ್ ಶೆಟ್ಟಿ ವಂದಿಸಿದರು. ವಲಯ ಕಾರ್ಯದರ್ಶಿ ಯೋಗೀಶ್ ಸಾಮಾನಿ ಕಾರ್ಯಕ್ರಮ ನಿರೂಪಿಸಿದರು.

ಕಮಲ ಬಿಟ್ಟು ಡಿವಿಎಸ್ ಕೈ ಹಿಡಿಯೋದು ಫಿಕ್ಸ್

Posted by Vidyamaana on 2024-03-19 16:51:09 |

Share: | | | | |


ಕಮಲ ಬಿಟ್ಟು ಡಿವಿಎಸ್ ಕೈ ಹಿಡಿಯೋದು ಫಿಕ್ಸ್

ಬೆಂಗಳೂರು, ಮಾ.19: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ(DV S

non

ananda Gowda) ಅವರು ಕಾಂಗ್ರೆಸ್ (Congress) ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಸಂಪರ್ಕದಲ್ಲಿರುವುದನ್ನು ಗೌಡ್ರು ಹೇಳಿದ್ದಾರೆ. ಇಂದು ಒಕ್ಕಲಿಗರ ಸಂಘದೊಂದಿಗೆ ಸಭೆ ನಡೆಸಿದ ಸದಾನಂದಗೌಡ, ಸುದೀರ್ಘ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಸದಾನಂದ ಗೌಡ ಅವರ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷರು ಘೋಷಿಸಿದ್ದಾರೆ.

ನಾಳೆ ಸುದ್ದಿಗೋಷ್ಠಿ ನಡೆಸಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ ಎಂದು ಹೇಳಿದ ಸದಾನಂದಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷರು, ನಿರ್ದೇಶಕರ ಜತೆ ಸಭೆ ನಡೆಸಿದ್ದೇನೆ. ಒಂದಷ್ಟು ವಿಚಾರಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಈಗ ಯಾವುದನ್ನೂ ನಾನು ಹೇಳುವುದಿಲ್ಲ. ಎಲ್ಲವನ್ನೂ ನಾಳೆ ಹೇಳುತ್ತೇನೆ ಎಂದರು.ಸದಾನಂದಗೌಡ ನಿರ್ಧಾರಕ್ಕೆ ಒಕ್ಕಲಿಗರ ಸಂಘದ ಬೆಂಬಲ

ಸಭೆ ಬಳಿಕ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ, ಸದಾನಂದಗೌಡರು ಏನೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೆಂಬಲವಿದೆ. ನಾಳೆ ಅವರೇ ಸುದ್ದಿಗೋಷ್ಠಿ ಮಾಡಿ ಎಲ್ಲಾ ಹೇಳುತ್ತಾರೆ ಎಂದರು.ಒಕ್ಕಲಿಗ ಸಮುದಾಯಕ್ಕೆ ಮೂರು ಪಕ್ಷಗಳಲ್ಲೂ ಅನ್ಯಾಯ ಆಗಿದೆ. ಬಿಜೆಪಿಯಲ್ಲಿ ಲಿಂಗಾಯತ ಸಮುದಾಯಕ್ಕೆ 8 ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯದ ಇಬ್ಬರಿಗೆ ಮಾತ್ರ ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯಕ್ಕೂ ಎಂಟು ಕಡೆ ಟಿಕೆಟ್ ಕೊಡಬೇಕು. ಬಿಜೆಪಿಯಲ್ಲಿ ಸಿ.ಟಿ.ರವಿ, ಪ್ರತಾಪ್ ​ಸಿಂಹಗೆ ಟಿಕೆಟ್ ಕೊಟ್ಟಿಲ್ಲ. ನಮ್ಮ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ದ.ಕ.ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ

Posted by Vidyamaana on 2024-03-11 07:24:23 |

Share: | | | | |


ದ.ಕ.ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ

ಪುತ್ತೂರು:ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ಗೆ ನೂತನ ಪದಾಧಿಕಾರಿಗಳ ನೇಮಕವಾಗಿದ್ದು ಪುತ್ತೂರು,ಉಪ್ಪಿನಂಗಡಿ ಮತ್ತು ಕಡಬದ ಐವರಿಗೆ ಅವಕಾಶ ನೀಡಲಾಗಿದೆ.ವಿಧಾನಪರಿಷತ್ ಶಾಸಕರೂ ಆಗಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರು ನೂತನ ಪದಾಧಿಕಾರಿಗಳನ್ನು ನೇಮಿಸಿ ಆದೇಶಿಸಿದ್ದಾರೆ.

ಹೊಸದಾಗಿ ಎಂಟು ಮಂದಿ ಸಕ್ರಿಯ ಕಾರ್ಯಕರ್ತರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ, ನಾಲ್ವರನ್ನು ಉಪಾಧ್ಯಕ್ಷರಾಗಿ ಮತ್ತು 8 ಮಂದಿಯನ್ನು  ಕಾರ್ಯದರ್ಶಿಗಳಾಗಿ ನೇಮಕಗೊಳಿಸಲಾಗಿದೆ. ಉಪ್ಪಳಿಗೆಯ ಕೃಷ್ಣಪ್ರಸಾದ್ ಆಳ್ವ, ಕಡಬದ ಸಿ.ಜೆ.ಸೈಮನ್, ಉಪ್ಪಿನಂಗಡಿಯ ಅಬ್ದುಲ್ ನಝೀರ್ ಮಠ, ಅಶ್ರಫ್ ಬಸ್ತಿಕಾರ್ ಅವರನ್ನು ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕಗೊಳಿಸಲಾಗಿದೆ.ಅರ್ಷದ್ ದರ್ಬೆ ಅವರನ್ನು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನೇಮಕಗೊಳಿಸಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಕೃಷ್ಣಪ್ರಸಾದ್ ಆಳ್ವ ಅವರು ಈ ಹಿಂದೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಕೆಡಿಪಿ ನಾಮನಿರ್ದೇಶಿತ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.ಪ್ರಸ್ತುತ ಅವರು ಭೂನ್ಯಾಯ ಮಂಡಳಿ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.ಉಪ್ಪಿನಂಗಡಿಯ ಅಬ್ದುಲ್ ನಝೀರ್ ಮಠ ಅವರು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕಾಂಗ್ರೆಸ್‌ನ ಕಾರ್ಯದರ್ಶಿಯಾಗಿ, ಜಿಲ್ಲಾ  ಯುವ ಕಾಂಗ್ರೆಸ್‌ ಉಪಾಧ್ಯಕ್ಷ, ರಾಜ್ಯ ಇಂಟಕ್ ಕಾರ್ಯದರ್ಶಿಯಾಗಿ, ಕೆಪಿಸಿಸಿ ಕಾರ್ಮಿಕ ವಿಭಾಗದ ಉಪಾಧ್ಯಕ್ಷರಾಗಿ ಹುದ್ದೆ ನಿರ್ವಹಿಸಿದ್ದು, ಪ್ರಸ್ತುತ ಕೆಪಿಸಿಸಿ ಅಲ್ಪಸಂಖ್ಯಾತ ಘಟ ಕದ ರಾಜ್ಯ ಕಾರ್ಯದರ್ಶಿಯಾಗಿರುತ್ತಾರೆ. ಉಪ್ಪಿನಂಗಡಿಯ ಆಶ್ರಫ್ ಬಸ್ತಿಕಾರ್ ಅವರು ಉಪ್ಪಿನಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಪುತ್ತೂರು ತಾಲೂಕು ಕೆಡಿಪಿ ಸದಸ್ಯರಾಗಿ,  ಗಾಂಪಾ ಗೆಳೆಯರು ಸಂಘಟನೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ನ ವಕ್ತಾರ ಹಾಗೂ ಉಪಾಧ್ಯಕ್ಷರಾಗಿರುತ್ತಾರೆ.ಕಡಬ  ನಿವಾಸಿಯಾಗಿರುವ ಸೈಮನ್ ಸಿ.ಜೆ.ಅವರು ವಿದ್ಯಾರ್ಥಿಯಾಗಿದ್ದಾಗ ಎನ್.ಎಸ್.ಯು.ಐ. # ಕಾರ್ಯದರ್ಶಿಯಾಗಿ ಬಳಿಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಜಿಲ್ಲಾ  ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಇದೀಗ ಜಿಲ್ಲಾ ಪ್ರಧಾನ  ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಈ ಅರ್ಷದ್ ದರ್ಬೆ ಅವರು ಈ ಹಿಂದೆ ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸಹಿತ ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು.

ಆರು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾದ ಮುಸ್ಕಾತ್ ತಾಜ್ ಮನನೊಂದು ನೇಣಿಗೆ ಶರಣು

Posted by Vidyamaana on 2023-12-07 04:26:35 |

Share: | | | | |


ಆರು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾದ ಮುಸ್ಕಾತ್ ತಾಜ್ ಮನನೊಂದು ನೇಣಿಗೆ ಶರಣು

ಚಿಕ್ಕಬಳ್ಳಾಪುರ: ಪತಿಯ ಜೊತೆಗಿನ ವೈಮನಸ್ಸಿನಿಂದ ಪತ್ನಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡವರು ಮುಸ್ಕಾತ್ ತಾಜ್ (21)


ಮುಸ್ಕಾತ್ ತಾಜ್ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ವೆಂಕಟಗಿರಿಕೋಟೆಯಲ್ಲಿರುವ ಪತಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರು ತಿಂಗಳ ಹಿಂದೆ ಆಜಾಮ್ ಎಂಬಾತನನ್ನು ಪ್ರೀತಿಸಿದ್ದ ಈಕೆ ನಂತರ ವಿವಾಹ ಮಾಡಿಕೊಂಡಿದ್ದರು. ಪತಿ ಆಜಾಮ್ ವಿರುದ್ಧ ಪತ್ನಿಯ ಪೋಷಕರು ಕೊಲೆ ಆರೋಪ ಹೊರಿಸಿದ್ದಾರೆ. ಚಿಂತಾಮಣಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮಿಜೋರಾಂನಲ್ಲಿ ಸಂಘಟನೆಗಳ ಬೆದರಿಕೆ: ಮೈತೆಯ್ ಗಳ ಏರ್ ಲಿಫ್ಟ್ ಗೆ ಸಿದ್ಧತೆ

Posted by Vidyamaana on 2023-07-23 13:52:04 |

Share: | | | | |


ಮಿಜೋರಾಂನಲ್ಲಿ   ಸಂಘಟನೆಗಳ ಬೆದರಿಕೆ: ಮೈತೆಯ್ ಗಳ ಏರ್ ಲಿಫ್ಟ್ ಗೆ ಸಿದ್ಧತೆ

ಐಜ್ವಾಲ್‌: ಮಣಿಪುರದಲ್ಲಿ ಹಿಂಸಾಚಾರದಲ್ಲಿ ತೊಡಗಿರುವ ಎರಡು ಸಮುದಾಯಗಳಲ್ಲಿ ಒಂದಾದ ಮೈತೆಯ್ ಸಮುದಾಯದ ಜನರಿಗೆ ಮಿಜೋರಾಂನಲ್ಲಿ ಮಾಜಿ ಉಗ್ರಗಾಮಿಗಳ ಸಂಘಟನೆ ಬೆದರಿಕೆ ಹಾಕಿದ ಬೆನ್ನಲ್ಲೇ ಐಜ್ವಾಲ್‌ನಿಂದ ವಿಮಾನದಲ್ಲಿ ಕರೆ ತರಲು ಮಣಿಪುರ ಸರಕಾರ ಯೋಜಿಸಿದೆ.

ಮಿಜೋರಾಂ ಸರಕಾರ ಸುರಕ್ಷತೆ ಗಾಗಿ ತಮ್ಮ ತಾಯ್ನಾಡಿಗೆ ಮರಳುವಂತೆ ಮೈತೆಯ್ ಗಳನ್ನು ಕೇಳಿಕೊಂಡ ನಂತರ ಈ ನಿರ್ಧಾರವನ್ನು ಮಣಿಪುರ ಸರಕಾರ ಕೈಗೊಂಡಿದೆ.

ಮೇ 4 ರಂದು ಪುರುಷರ ಗುಂಪು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ ಹಲ್ಲೆ ನಡೆಸಿದ ಘಟನೆಯ ಬಗ್ಗೆ ಮಿಜೋ ಯುವಕರಲ್ಲಿ ಭಾರೀ ಆಕ್ರೋಶ ಇದೆ ಎಂದು ಭದ್ರತಾ ಪಡೆಗಳು ಹೇಳಿದೆ.

ಮಣಿಪುರ ಸರಕಾರವು ಐಜ್ವಾಲ್-ಇಂಫಾಲ್ ಮತ್ತು ಐಜ್ವಾಲ್-ಸಿಲ್ಚಾರ್ ನಡುವೆ ವಿಶೇಷ ATR ವಿಮಾನಗಳ ಮೂಲಕ ಮಿಜೋರಾಂನಿಂದ ಜನರನ್ನು ಏರ್ಲಿಫ್ಟ್ ಮಾಡಲು ಯೋಜಿಸುತ್ತಿದೆ. ಮಿಜೋರಾಂ ಪೊಲೀಸರು ಐಜ್ವಾಲ್ ನಗರದಲ್ಲಿ ಮೈತೆಯ್ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಿದೆ

ಏಳೇ ತಿಂಗಳ್ಡ್ ಶೆಟ್ಟರ್ ಗ್ ಕಾಂಗ್ರೆಸ್ ಬೊಡಿಂಡ್ - ಶೆಟ್ಟರ್ ಮೂಲಗ್ ಬತ್ತೆರ್..!

Posted by Vidyamaana on 2024-01-25 15:54:27 |

Share: | | | | |


ಏಳೇ ತಿಂಗಳ್ಡ್ ಶೆಟ್ಟರ್ ಗ್ ಕಾಂಗ್ರೆಸ್ ಬೊಡಿಂಡ್ - ಶೆಟ್ಟರ್ ಮೂಲಗ್ ಬತ್ತೆರ್..!

ನವದೆಹಲಿ, ಜ.25: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್ 

 ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa), ಬಿವೈ ವಿಜಯೇಂದ್ರ (BY Vijayendra), ಕೇಂದ್ರ ಸಚಿವ ಭುಪೇಂದ್ರ ಯಾದವ್​, ರಾಜೀವ್​ ಚಂದ್ರಶೇಖರ್​ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.ಪಕ್ಷ ಸೇರ್ಪಡೆಗೂ ಮುನ್ನ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ​ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದರು.


ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್


ಪಕ್ಷ ಸೇರ್ಪಡೆಗೂ ಮುನ್ನ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜೀನಾಮೆಗೂ ಮುನ್ನ ಶೆಟ್ಟರ್ ಅವರು ಹೊರಟ್ಟಿಗೆ ಕರೆ ಮಾಡಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದರು. ಈ ವೇಳೆ ಪತ್ರದ ಮೂಲಕ ಬೇಡ, ನೇರವಾಗಿ ಬಂದು ರಾಜೀನಾಮೆ ನೀಡುವಂತೆ ಸೂಚಿಸಿದ್ದರು.

ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ: ಶೆಟ್ಟರ್

ಪಕ್ಷ ಸೇರ್ಪಡೆ ನಂತರ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಶೆಟ್ಟರ್, ನಾನು ಪಕ್ಷಕ್ಕೆ ವಾಪಸಾಗಬೇಕೆಂದು ನಾಯಕರ ಅಪೇಕ್ಷೆ ಇತ್ತು. ಅಮಿತ್​ ಶಾ ಅವರು ಅತ್ಯಂತ ಗೌರವದಿಂದ ಬರಮಾಡಿಕೊಂಡರು. ನಾನು ಬಿಜೆಪಿ ಮರು ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸ ಆಗಿದೆ. ನಾನು ಪರಿಷತ್​ ಸ್ಥಾನಕ್ಕೆ ರಾಜೀನಾಮೆಯನ್ನೂ ಸಲ್ಲಿಸಿದ್ದೇನೆ. ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದೇನೆ. ಇ-ಮೇಲ್​ ಮೂಲಕ ರಾಜೀನಾಮೆಯನ್ನ ನೀಡಿದ್ದೇನೆ ಎಂದರು.


ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು. ನಾನು ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ. ಕಾಂಗ್ರೆಸ್​ನವರು ಕೂಡ ಒಳ್ಳೇ ಗೌರವ, ಸ್ಥಾನಮಾನ ನೀಡಿದ್ದರು. ಕಾಂಗ್ರೆಸ್​ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಧನ್ಯವಾದ ತಿಳಿಸುತ್ತೇನೆ ಎಂದರು.



Leave a Comment: