ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ: ಹಲವರಿಗೆ ಗಂಭೀರ ಗಾಯ

Posted by Vidyamaana on 2024-03-01 15:13:41 |

Share: | | | | |


ಬೆಂಗಳೂರು  ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ: ಹಲವರಿಗೆ ಗಂಭೀರ ಗಾಯ

ಬೆಂಗಳೂರು: ಇಂದಿರಾನಗರದ ಪ್ರಸಿದ್ಧ ಹೊಟೆಲ್ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟವಾಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ.

ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಪೋಟವಾಗುತ್ತಿದ್ದಂತೆಯೇ ಜನರು ಭಯಭೀತರಾಗಿ ಓಡಿಡಾಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಪುತ್ತೂರಿನಲ್ಲಿ ನೂರುಲ್ ಹುದಾ ರಿವೈವ್ ಸ್ನೇಹಕೂಟ, ಪ್ರಾರ್ಥನಾ ಮಜ್ಲಿಸ್

Posted by Vidyamaana on 2024-06-27 17:14:01 |

Share: | | | | |


ಪುತ್ತೂರಿನಲ್ಲಿ ನೂರುಲ್ ಹುದಾ ರಿವೈವ್ ಸ್ನೇಹಕೂಟ, ಪ್ರಾರ್ಥನಾ ಮಜ್ಲಿಸ್

ಪುತ್ತೂರು, ಜೂನ್ ೨೧: ಮಾಡನ್ನೂರು ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿಯ ದಶಮಾನೋತ್ಸವದ ಹಿನ್ನೆಲೆಯಲ್ಲಿ ಪುತ್ತೂರು ವಲಯ ಮಟ್ಟದ ರಿವೈವ್ ಸ್ನೇಹ ಕೂಟ ಹಾಗೂ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಪ್ರಾರ್ಥನಾ ಮಜ್ಲಿಸ್  ಜೂನ್ ೨೬ರಂದು ಬುಧವಾರ ರಾತ್ರಿ ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಅಶ್ಮಿ ಕಂಫರ್ಟ್‌ನಲ್ಲಿ ನಡೆಯಿತು.

ಪ್ರಾರ್ಥನಾ ಮಜ್ಲಿಸ್‌ಗೆ ಸೈಯ್ಯದ್ ಎಸ್.ಎಂ. ಯಹ್ಯಾ ತಂಳ್ ಪೋಲ್ಯ ನೇತೃತ್ವ ನೀಡಿದರು. ಸ್ನೇಹಕೂಟವನ್ನು ಪುತ್ತೂರು ಜಂಇಯ್ಯತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ದಾರಿಮಿ ಸಂಪ್ಯ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಬುಶ್ರಾ ಅಬ್ದುಲ್ ಅಝೀಝ್ ಅವರು ಮಾತನಾಡಿ ಸಂಸ್ಥೆಯ ಬೆಳವಣಿಗೆಯಲ್ಲಿ ಎಲ್ಲರ ಸಹಕಾರವನ್ನು ಕೋರಿದರು.

ಮನೆಯಲ್ಲಿ ಇರುವೆಗಳ ಸಮಸ್ಯೆ ಕಾಡುತ್ತಿದೆಯೇ

Posted by Vidyamaana on 2023-05-22 10:40:02 |

Share: | | | | |


ಮನೆಯಲ್ಲಿ ಇರುವೆಗಳ ಸಮಸ್ಯೆ ಕಾಡುತ್ತಿದೆಯೇ

    ಅನೇಕ ಮನೆಗಳಲ್ಲಿ, ಅಡುಗೆಮನೆ ಅಥವಾ ಆಹಾರವನ್ನು ಸಂಗ್ರಹಿಸುವ ಪ್ರದೇಶವು ಸೋಂಕಿತ ಪ್ರದೇಶವಾಗಿರುತ್ತದೆ. ಈ ಇರುವೆಗಳ ಹಿಡಿತದಿಂದ ಪಾರಾಗಲು  ಹಲವು ರೀತಿಯ ಸ್ಪ್ರೇಗಳನ್ನು ಬಳಸಲಾಗುತ್ತದೆ. ಆದರೆ ಯಾವುದೇ ಫಲಿತಾಂಶವಿಲ್ಲದೆ ಗೃಹಿಣಿಯರು ಹತಾಶರಾಗುತ್ತಾರೆ. ಅಂತಹವರಿಗಾಗಿ ಇರುವೆಗಳ ಹಿಡಿತದಿಂದ ಪಾರಾಗಲು ಬೆಸ್ಟ್ ಟಿಪ್ಸ್ ತಂದಿದ್ದೇವೆ. ಈ ಟಿಪ್ಸ್ ಪ್ರಕಾರ ಯಾವುದೇ ಕೆಮಿಕಲ್  ಬಳಸಬೇಕಿಲ್ಲ.. ಅಡುಗೆ ಮನೆಯ ಸಾಮಾಗ್ರಿಗಳನ್ನು ಸಮಂಜಸವಾಗಿ ಬಳಸಿದರೆ ಸಾಕು ಕರಿಮೆಣಸು ಇರುವೆಗಳನ್ನು ಹಿಮ್ಮೆಟ್ಟಿಸಲು ಉತ್ತಮವಾಗಿ ಸಹಾಯ ಮಾಡುತ್ತದೆ. ಹೌದು, ಕಾಳುಮೆಣಸಿನ ಕಾಟಕ್ಕೆ ಇರುವೆಗಳು ಓಡಿಹೋಗುವುದು ಖಚಿತ. ಅದಕ್ಕಾಗಿ ಅಡುಗೆ ಮನೆಯಲ್ಲಿ ಇರುವೆ ಸ್ಪ್ರೇ ಬದಲು ಅಲ್ಲೊಂದು ಇಲ್ಲೊಂದು ಕಾಳುಮೆಣಸನ್ನು ಹಾಕಿದರೆ ಪರವಾಗಿಲ್ಲ.

ಇರುವೆಗಳನ್ನು ತೊಡೆದುಹಾಕಲು, ಒಂದು ಬಾಟಲಿಯಲ್ಲಿ ಎರಡು ಕಪ್ ನೀರಿನಲ್ಲಿ ಸ್ವಲ್ಪ ಪುದೀನಾ ಎಣ್ಣೆಯನ್ನು ಸೇರಿಸಿ ಮತ್ತು ಇರುವೆ ಇರುವಲ್ಲಿ ಸಿಂಪಡಿಸಿ. ಸಿಂಪಡಿಸುವಾಗ ಸಾಕುಪ್ರಾಣಿಗಳನ್ನು ಅವುಗಳಿಂದ ದೂರವಿರಿಸಲು ಮರೆಯಬೇಡಿಹಾಗೆಯೇ ಎರಡು ಲೋಟ ನೀರಿನಲ್ಲಿ ಟ್ರೀ ಆಯಿಲ್ ಸೇರಿಸಿ ಚಿಮುಕಿಸಿ, ಈ ನೀರಿನಲ್ಲಿ ಹತ್ತಿ ಉಂಡೆಗಳನ್ನು ಅದ್ದಿ ಅಡುಗೆ ಮನೆಯಲ್ಲಿಟ್ಟರೆ ಒಳ್ಳೆಯ ಫಲಿತಾಂಶ ಸಿಗುತ್ತದೆ.

ದಾಲ್ಚಿನ್ನಿ ಇರುವೆಗಳನ್ನು ತೊಡೆದುಹಾಕಲು ಸಹ ಸಹಾಯ ಮಾಡುತ್ತದೆ. ಹತ್ತಿಯ ಉಂಡೆಗಳನ್ನು ದಾಲ್ಚಿನ್ನಿ ಎಣ್ಣೆಯಲ್ಲಿ ಅದ್ದಿ ಇರುವೆಗಳು ಓಡಾಡುವ ಸ್ಥಳಗಳಲ್ಲಿ ಇಟ್ಟರೆ ಅವು ಬರದಂತೆ ತಡೆಯುತ್ತವೆ.

ಬಿಳಿ ವಿನೆಗರ್ ಅನ್ನು ಇರುವೆಗಳಿರುವಲ್ಲಿ ಸಿಂಪಡಿಸಬಹುದು ಮತ್ತು ಉತ್ತಮ ಫಲಿತಾಂಶವನ್ನು ಕಾಣಬಹುದು.

ಹಾಗೆಯೇ ಎರಡು ಲೋಟ ನೀರಿಗೆ ಬೇವಿನ ಎಣ್ಣೆ ಹಾಕಿ ಬಾಟಲಿಯಲ್ಲಿ ಸ್ಪ್ರೇ ಮಾಡಿದರೆ ಇರುವೆಗಳು ನಿಮ್ಮ ಬರುವುದಿಲ್ಲ.

ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಸೆ. 23ರ ವರೆಗೆ ಸಿಸಿಬಿ ಕಸ್ಟಡಿಗೆ

Posted by Vidyamaana on 2023-09-13 17:16:46 |

Share: | | | | |


ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಸೆ. 23ರ ವರೆಗೆ ಸಿಸಿಬಿ ಕಸ್ಟಡಿಗೆ

ಬೆಂಗಳೂರು: ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರುಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರ ಕುಂದಾಪುರ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್ನನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.


ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದು ಇಬ್ಬರು ಆರೋಪಿಗಳನ್ನು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

ಪುತ್ತೂರಿನ ದಿನೇಶ್ ಬೇಕರಿ ಮಾಲಕರಾಗಿದ್ದ ದಿನೇಶ್ ಹೃದಯಾಘಾತದಿಂದ ನಿಧನ

Posted by Vidyamaana on 2023-06-01 04:47:04 |

Share: | | | | |


ಪುತ್ತೂರಿನ ದಿನೇಶ್ ಬೇಕರಿ ಮಾಲಕರಾಗಿದ್ದ ದಿನೇಶ್ ಹೃದಯಾಘಾತದಿಂದ ನಿಧನ

ಪುತ್ತೂರು: ಪುತ್ತೂರಿನ ದಿನೇಶ್ ಬೇಕರಿ ಮಾಲಕರಾಗಿದ್ದ ದಿನೇಶ್(43ವ) ಅವರು ಮೂಡಬಿದ್ರೆಯ ಮನೆಯಲ್ಲಿ ಮೇ 31ರ ತಡ ರಾತ್ರಿ ಹೃದಯಾಘಾತದಿಂದ ನಿಧನರಾದರು ನಿಧನರಾದರು.ಬೇಕರಿ ಉದ್ಯಮದಲ್ಲಿ ಹೆಸರು ಪಡೆದ ದಿ.ಐತ್ತಪ್ಪ ಭಂಡಾರಿ ಅವರು ಪುತ್ತೂರು ಬಸ್ ನಿಲ್ದಾಣದ ಬಳಿ, ಬೊಳುವಾರು ಸಮೀಪ ಸಹಿತ ಒಟ್ಟು ಮೂರು ದಿನೇಶ್ ಬೇಕರಿ ಸಂಸ್ಥೆಯನ್ನು ಹೊಂದಿದ್ದರು ಅವರ ಅನಾರೋಗ್ಯದ ಸಂದರ್ಭದಲ್ಲಿ ಪತ್ನಿ ಭಾರತಿ ಮತ್ತು ಪುತ್ರ ದಿನೇಶ್ ಅವರು ಬೇಕರಿ ಉದ್ಯಮ ನಡೆಸುತ್ತಿದ್ದರು.ಮೃತರು ಪತ್ನಿ, ಪುತ್ರ ಮತ್ತು ವಿದೇಶದಲ್ಲಿ ಉದ್ಯಮದಲ್ಲಿರುವ ಸಹೋದರರಾದ ಮಹೇಶ್, ಗಣೇಶ್, ಯತೀಶ್ ಅವರನ್ನು ಅಗಲಿದ್ದಾರೆ.

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸುಮಾ

Posted by Vidyamaana on 2023-08-14 03:17:04 |

Share: | | | | |


ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸುಮಾ

ಬೆಳ್ತಂಗಡಿ: ಅನಾರೋಗ್ಯದಿಂದ ಬಳಲಿ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ಯುವತಿ ಲೋ ಬಿಪಿ ಆಗಿ ಹೃದಯಾಘಾತಗಾಗಿ ಮೃತಪಟ್ಟ ಘಟನೆ ಆ 13 ರಂದು  ನಡೆದಿದೆ.


ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ  ರಾಜು ದೇವಾಡಿಗ ಮತ್ತು ಸರೋಜ ದಂಪತಿಗಳ ಮಗಳು ಸುಮಾ (19) ಮೃತಪಟ್ಟ ಯುವತಿಯಾಗಿದ್ದಾಳೆ.


ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದ ವಿದ್ಯಾರ್ಥಿನಿ ಸುಮ ಮನೆಗೆ ಬಂದಿದ್ದಳು. ಆಗಸ್ಟ್ 9 ರಂದು ಅನಾರೋಗ್ಯದ ಕಾರಣದಿಂದ ಸ್ಥಳೀಯ ಆಸ್ಪತ್ರೆಗೆ ತೆರಳಿ ಮಾತ್ರೆಗಳನ್ನು ಪಡೆದು ಮನೆಗೆ ತೆರಳಿದ್ದಳು. ನಂತರ ಆಗಸ್ಟ್11 ರಂದು ಮತ್ತೆ ಅನಾರೋಗ್ಯ ಜಾಸ್ತಿಯಾದ ಕಾರಣ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ದು ಗುಣಮುಖವಾಗಿರುವ ಕಾರಣ ತನ್ನ ಅಕ್ಕನ ಮನೆ ಬಳ್ಳಮಂಜಕ್ಕೆ ತೆರಳಿದ್ದು. ಆಗಸ್ಟ್ 13 ರಂದು ಸಂಜೆ ಮತ್ತೆ ಅಸ್ವಸ್ಥಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಲೋ ಬಿಪಿ ಉಂಟಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.



Leave a Comment: