Posted by vidyamaana on 2024-07-03 13:36:16 |
ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.
ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.
ಮದುವೆಯಾಗಿದ್ದ ಶ್ರೀಕಾಂತ್!
ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Posted by Vidyamaana on 2023-09-15 09:06:27 |
ಮುಂಬೈ: ವಿರೋಧ ಪಕ್ಷದ ಮೈತ್ರಿಕೂಟ ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟ್ ಇನ್ಕ್ಲೂಸಿವ್ ಅಲೈಯನ್ಸ್ (INDIA) ಈಗ ಕೆಲವು ಟಿವಿ ಆ್ಯಂಕರ್ಗಳನ್ನು ಬಹಿಷ್ಕರಿಸಿದೆ.
ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ಬುಧವಾರ ನಡೆದ ಸಮನ್ವಯ ಸಮಿತಿಯ ಮೊದಲ ಸಭೆಯಲ್ಲಿ INDIA ಮೈತ್ರಿಕೂಟ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ವಾಸ್ತವವಾಗಿ, ಮಾಧ್ಯಮದ ಒಂದು ವಿಭಾಗವು ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂದು ವಿರೋಧ ಪಕ್ಷಗಳು ಹಲವು ಬಾರಿ ಆರೋಪಿಸಿವೆ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಭೇಟಿಗೆ ಮಾಧ್ಯಮಗಳು ಅಗತ್ಯ ಪ್ರಸಾರವನ್ನು ನೀಡಲಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.ಮೈತ್ರಿಕೂಟದ ಸಮನ್ವಯ ಸಮಿತಿಯ ಮೊದಲ ಸಭೆಯು ದೆಹಲಿಯ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ನಡೆಯಿತು. ಶರದ್ ಪವಾರ್ ಹೊರತುಪಡಿಸಿ, ಕಾಂಗ್ರೆಸ್ನ ಕೆಸಿ ವೇಣುಗೋಪಾಲ್, ಡಿಎಂಕೆಯ ಟಿಆರ್ ಬಾಲು, ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್, ಜನತಾ ದಳದ (ಯುನೈಟೆಡ್) ಸಂಜಯ್ ಝಾ, ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡಾ, ಶಿವಸೇನೆಯ (ಯುಬಿಟಿ) ಸಂಜಯ್ ರಾವತ್, ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಿದ್ದರು.
ಭಾರತ ಮೈತ್ರಿಯಿಂದ ಬಹಿಷ್ಕರಿಸಿದ ಆಂಕರ್ಗಳು:
* ಅದಿತಿ ತ್ಯಾಗಿ
* ಅಮನ್ ಚೋಪ್ರಾ
* ಅಮಿಶ್ ದೇವಗನ್
* ಆನಂದ ನರಸಿಂಹನ್
* ಅರ್ನಾಬ್ ಗೋಸ್ವಾಮಿ
* ಅಶೋಕ್ ಶ್ರೀವಾಸ್ತವ
* ಚಿತ್ರಾ ತ್ರಿಪಾಠಿ
* ಗೌರವ್ ಸಾವಂತ್
* ನಾವಿಕ ಕುಮಾರ್
* ಪ್ರಾಚಿ ಪರಾಶರ
* ರೂಬಿಕಾ ಲಿಯಾಕತ್
* ಶಿವ ಆರೂರ್
* ಸುಧೀರ್ ಚೌಧರಿ
* ಸುಶಾಂತ್ ಸಿನ್ಹಾ
Posted by Vidyamaana on 2023-06-12 10:26:23 |
ಪುತ್ತೂರು: ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದೇವೆ ನಮಗೊಂದು ಮೂರು ಸೆಂಟ್ಸ್ ಜಾಗ ಕೊಡಿ ಎಂದು ಅನೇಕ ಅರ್ಜಿಗಳು ಗ್ರಾಮೀಣ ಭಾಗದಿಂದ ಬಂದಿದ್ದು ಪ್ರತೀ ಗ್ರಾಮದಲ್ಲಿ ಎರಡರಿಂದ ಮೂರು ಎಕ್ರೆ ಜಾಗ ಗುರುತಿಸಿ ಅದನ್ನು ಮನೆ ಇಲ್ಲದ ಬಡವರಿಗೆ ಹಂಚಿಕೆ ಮಾಡುವಲ್ಲಿ ಕ್ರಮಕೈಗೊಳ್ಳಲಿದ್ದೇನೆ ಈ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಿದ್ದು ಈಗಾಗಲೇ ಜಾಗ ಹುಡಕುವಂತೆ ಕಂದಾಯ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.
ಕೆಯ್ಯೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಎ ಕೆ ಜಯರಾಮ ರೈ ಅವರ ನಿವಾಸದಲ್ಲಿ ಜೂ. ೧೨ ರಂದು ನಡೆದ ಕೆಯ್ಯೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಬೂತ್ ಮಟ್ಟದಲ್ಲಿ ಪಕ್ಷವನ್ನು ಕಟ್ಟುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡಬೇಕಿದೆ. ಅಭಿವೃದ್ದಿ ಕೆಲಸ ನಾನು ಮಾಡುತ್ತೇನೆ ಅದನ್ನು ಪ್ರಚಾರ ಮಾಡುವ ಮತ್ತು ಇದು ಕಾಂಗ್ರೆಸ್ ಸರಕಾರ ಮಾಡಿದ ಕೆಲಸ ಎಂಬುದನ್ನು ಗ್ರಾಮದ ಮನೆಮನೆಗೂ ತಲುಪಿಸುವ ಕೆಲಸವನ್ನು ಎಲ್ಲಾ ಕಾರ್ಯಕರ್ತರು ಮಾಡಬೇಕು. ಬಾಕಿ ಇರುವ ೯೪ ಸಿ, ಅಕ್ರಮಸಕ್ರಮ ಕಡತಗಳನ್ನು ಶೀಘ್ರ ವಿಲೇವಾರಿ ಮಾಡಲಿದ್ದು ಗ್ರಾಮಗಳಲ್ಲಿ ಅರ್ಜಿಗಳು ಬಾಕಿ ಇರುವ ಫಲಾನುಭವಿಗಳು ಸ್ಥಳೀಯ ವಲಯ ಮತ್ತು ಬೂತ್ ಅಧ್ಯಕ್ಷರನ್ನು ಸಂಪರ್ಕಿಸಿ ಅವರಲ್ಲಿ ಮಾಹಿತಿ ನೀಡಬೇಕು. ಪಕ್ಷ ಬೇದವಿಲ್ಲದೆ ಎಲ್ಲರ ಅರ್ಜಿಗಳನ್ನು ನಯಾ ಪೈಸೆ ಲಂಚವಿಲ್ಲದೆ ಮಾಡಿಕೊಡುತ್ತೇನೆ ಎಂದು ಹೇಳಿದ ಅವರು ವಲಯ ಮತ್ತು ಬೂತ್ ಅಧ್ಯಕ್ಷರ ಮೂಲಕವೇ ಫಲಾನುಭವಿಗಳು ಕಡತಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಸೂಚನೆಯನ್ನು ನೀಡಿದರು.
ಮುಂದಿನ ದಿನಗಳಲ್ಲಿ ಪ್ರತೀ ಬೂತ್ , ವಲಯ ಮಟ್ಟದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ. ಅಭಿವೃದ್ದಿ ಕೆಲಸಗಳು ಏನಾಗಬೇಕು ಎಂಬುದರ ಬಗ್ಗೆ ಮಾಹಿತಿ ನೀಡುವ ಕೆಲಸವನ್ನು ವಲಯಾಧ್ಯಕ್ಷರುಗಳು ಮಾಡಬೇಕು.ಕಟ್ಟಕಡೇಯ ಕಾರ್ಯಕರ್ತನಿಗೂ ಸರಕಾರದ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ನಾನು ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಜನರ ಶಾಸಕ. ಬೇರೆ ಪಕ್ಷದ ಕಾರ್ಯಕರ್ತರು ಅರ್ಜಿಯನ್ನು ನೀಡಿದರೂ ಅದನ್ನು ಸ್ವೀಕರಿಸಬೇಕು ಅಭಿವೃದ್ದಿಯಲ್ಲಿ ರಾಜಕೀಯ ಮಾಡಬಾರದು. ಅಭಿವೃದ್ದಿ ಮತ್ತು ಜನರ ಸೇವೆ ಮಾಡುವ ಮೂಲಕ ನಾವು ಪಕ್ಷವನ್ನು ಗಟ್ಟಿಗೊಳಿಸಬೇಕು. ಮುಂದಿನ ೨೫ ವರ್ಷಗಳ ಕಾಲ ಪುತ್ತೂರಿನಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರೇ ಇರುವಲ್ಲಿ ನಾವು ಈಗಲೇ ತಯಾರಿ ಮಾಡಬೇಕು ಎಂದು ಕಾರ್ಯಕರ್ತರಿಗೆ ಸೂಚನೆ ನೀಡಿದರು.
ಬೂತ್ , ವಲಯ ಅಧ್ಯಕ್ಷರಿಗೆ ಶಕ್ತಿ ಬಂದಿದೆ: ಹೇಮನಾಥ ಶೆಟ್ಟಿ
ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಮಾತನಾಡಿ ಪುತ್ತೂರಿನಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾದ ಮೇಲೆ ಇಲಾಖೆಗಳಲ್ಲಿ ಅಭೂತಪೂರ್ವ ಬದಲಾವಣೆ ಆರಂಭವಾಗಿದೆ. ಲಂಚವಿಲ್ಲದೆ ಅಧಿಕಾರಿಗಳು ಕೆಲಸ ಮಾಡಲು ಆರಂಭಿಸಿದ್ದಾರೆ ಇದು ಒಳ್ಳೆಯ ಬೆಳವಣಿಗೆಯಾಗಿದೆ. ಬೂತ್ ಮತ್ತು ವಲಯ ಅಧ್ಯಕ್ಷರಿಗೆ ಶಾಸಕರು ಶಕ್ತಿ ತುಂಬುವ ಕೆಲಸವನ್ನು ಶಾಸಕರು ಮಾಡುತ್ತಿದ್ದು ಇದರಿಂದ ಪಕ್ಷದ ಕಾರ್ಯಕರ್ತರಿಗೆ ಹುಮ್ಮಸ್ಸು ಬಂದಿದೆ. ಇದೇ ಕಾರ್ಯ ಎಂದೆಂದೂ ಮುಂದುವರೆಯಬೇಕಿದೆ ಎಂದು ಹೇಳಿದರು. ಅಭಿವೃದ್ದಿ ವಿಚಾರದಲ್ಲಿ ಒಲವು ಮತ್ತು ಪಕ್ಷಾತೀತವಾಗಿ ಎಲ್ಲರನ್ನೂ ಒಗ್ಗೂಡಿಸಿ ಕೊಂಡೊಯ್ಯುವ ಶಕ್ತಿ ಶಾಸಕರಲ್ಲಿದೆ ಎಂದು ಹೇಳಿದರು.
ಏನೂ ಇರಲಿಲ್ಲ ಈಗ ಶಕ್ತಿ ಬಂದಿದೆ: ಎಂ ಬಿ
ಮೊನ್ನೆಯ ತನಕ ನಮಗೆ ಯಾವುದೇ ಶಕ್ತಿ ಇರಲಿಲ್ಲ, ಅಶೋಕ್ ರೈ ಕಾಂಗ್ರೆಸ್ ಶಾಸಕರಾಗಿ ಅಯ್ಕೆಯಾದ ಬಳಿಕ ನಮಗೆ ಶಕ್ತಿ ಬಂದಿದೆ. ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಎಲ್ಲೆಲ್ಲೂ ಗೌರವ ಸಿಗುತ್ತಿದೆ. ನಮ್ಮದೇ ಸರಕಾರ ರಾಜ್ಯದಲ್ಲಿದೆ. ಕಾರ್ಯಕರ್ತರು ಧೈರ್ಯವಾಗಿ ಇಂದು ಮಾತನಾಡುವ ವಾತಾವರಣ ನಿರ್ಮಾಣವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಹೇಳಿದರು. ಮುಂದಿನ ದಿನಗಳಲ್ಲಿ ಅಭಿವೃದ್ದಿಯ ಜೊತೆಗೆ ಪಕ್ಷವನ್ನು ಕಟ್ಟುವ ಕೆಲಸವನ್ನು ಎಲ್ಲರೂ ಜೊತೆಯಾಗಿ ಮಾಡಬೇಕಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಅಮಲರಾಮಚಂದ್ರ, ಫಾರೂಕ್ ಬಾಯಬ್ಬೆ, ದಾಮೋದರ ಪೂಜರಿ, ಕಾಂಗ್ರೆಸ್ ಮುಖಂಡರುಗಳಾದ ಸಂತೋಷ್ ರೈ ಇಳಂತಜೆ, ಮೌರಿಶ್ ಮಸ್ಕರೇನಸ್, ಬಟ್ಯಪ್ಪ ರೈ ದೇರ್ಲ, ಗ್ರಾಪಂ ಸದಸ್ಯ ಹನೀಫ್ ಕೆ ಎಂ, ಅಬ್ದುಲ್ ಖಾದರ್ ಮೇರ್ಲ, ವಿಶ್ವನಾಥ ಪೂಜಾರಿ, ಜಗನ್ನಾಥ ಶೆಟ್ಟಿ ನೆಲ್ಲಿಕಟ್ಟೆ, ಗ್ರಾಪಂ ಸದಸ್ಯರಿಗಳಾದ ಜಯಂತ ಪುಜಾರಿ, ಸೇಸಪ್ಪ, ಅಮಿತಾ, ಸೇದು ನಾಯರ್, ಬೋಳೋಡಿ ಚಂದ್ರಹಾಸ ರೈ, ಶೀನಪ್ಪ ರೈ, ಆದರ್ಶ ರೈ ಕೆಯ್ಯೂರು, ಪುರಂದರ್ ರೈ ನಿಶ್ಮಿತಾ, ಮೆಲ್ವಿನ್ ಮೊಂತೆರೋ ಕುಂಬ್ರ, ಲ್ಯಾನ್ಸಿ ಮಸ್ಕರೇನಸ್ ಪುತ್ತೂರು ಮೊದಲಾದವರು ಉಪಸ್ಥಿತರಿದ್ದರು. ವಲಯ ಕಾಂಗ್ರೆಸ್ ಅಧ್ಯಕ್ಷ ಎಕೆ ಜಯರಾಮ ರೈ ಸ್ವಾಗತಿಸಿ ವಂದಿಸಿದರು. ದಾಮೋದರ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.
Posted by Vidyamaana on 2024-02-05 15:54:33 |
ಪುತ್ತೂರು: ಬೊಳುವಾರಿನಲ್ಲಿರುವ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫೆ.6ರಂದು ಸಾಯಂಕಾಲ 5.30ರಿಂದ ಉಚಿತ ಲೇಸರ್ ಸ್ಟೋನ್ ಕ್ಯಾಂಪ್ ನಡೆಯಲಿದೆ.
ಖ್ಯಾತ ಮೂತ್ರಶಾಸ್ತ್ರಜ್ಞ ಡಾ. ಅಭೀಷ್ ಹೆಗ್ಡೆರವರು ತಪಾಸಣೆ ನಡೆಸಲಿದ್ದಾರೆ. ಈ ಆನ್ ಲೈನ್ ನ್ಯೂಸ್ ಸಂದರ್ಭದಲ್ಲಿ ಎಲ್ಲಾ ರೀತಿಯ ಮೂತ್ರ ಕಲ್ಲಿನ ಮತ್ತು ಪ್ರಾಸ್ಟೇಟ್ನ ಲೇಸರ್ ಚಿಕಿತ್ಸೆಗೆ ಸಂಬಂದಪಟ್ಟ ತಪಾಸಣೆ ನಡೆಯಲಿದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನೋಂದಾವಣೆಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9449991115, 9188656671ಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Posted by Vidyamaana on 2023-10-11 14:36:06 |
ಬೆಳ್ತಂಗಡಿ: ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಪರಿಸರದಲ್ಲಿ ಆಕ್ಟೋಬರ್ 10 ರಂದು ಸಂಜೆ ಮಹಾಮಸ್ತಕಾಭಿಷೇಕದ ಪ್ರಯುಕ್ತ ಜಿನ ಭಜನಾ ಸ್ಪರ್ಧೆಗೆ ತರಬೇತಿ ಪಡೆಯುತ್ತಿದ್ದಾಗ ವ್ಯಕ್ತಿಯೊರ್ವ ಸ್ಥಳಕ್ಕೆ ತೆರಳಿ ಅವಾಚ್ಯ ಶಬ್ದಗಳಿಂದ ಬೈದಿರುವುದಲ್ಲದೆ, ಮಚ್ಚು ತೋರಿಸಿ ಜೀವ ಬೆದರಿಕೆ ಹಾಕಿರುವುದಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಮುಂಡೂರಿನ ಆನಂದ ಆಚಾರ್ಯ (38) ಎಂಬಾತನು ಅಕ್ಟೋಬರ್ 10 ರಂದು ಸಂಜೆ ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ವಲಯ ಮಟ್ಟದ ಜಿನ ಭಜನಾ ಸ್ಪರ್ದೆಗೆ ಮಹಿಳೆಯರು,ಮಕ್ಕಳು ಸೇರಿ ಸುಮಾರು 70 ಮಂದಿ ಅಭ್ಯಾಸ ನಡೆಸುತ್ತಿದ್ದರು,ಪ್ರವಾಸಿಗರು ಕೂಡ ಇದ್ದರು. ಈ ಸಂದರ್ಭ ಅಲ್ಲಿಗೆ ತೆರಳಿ ಮಚ್ಚು ತೋರಿಸಿ, ಬೊಬ್ಬೆ ಹಾಕಿ ಬೆದರಿಕೆ ಹಾಕಿದ್ದು ಕೂಡಲೇ ಸ್ಥಳಿಯರು ವೇಣೂರು ಪೋಲಿಸ್ ಠಾಣೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಪೋಲೀಸರು ಆಗಮಿಸಿ ಮಚ್ಚನ್ನು ವಶಪಡಿಸಿಕೊಂಡು.ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Posted by Vidyamaana on 2023-05-13 02:57:54 |
ಪುತ್ತೂರು: ಮತಗಟ್ಟೆ ಕೊಠಡಿಯ ಬೀಗ ಮರೆತು ಬಂದದ್ದರಿಂದ ಮತಗಟ್ಟೆ ಕೊಠಡಿಯ ಬೀಗವನ್ನು ಒಡೆದು ಒಳಪ್ರವೇಶಿಸಿದ ವಿಲಕ್ಷಣ ಘಟನೆಗೆ ಮಂಗಳೂರು ಸಾಕ್ಷಿಯಾಯಿತು ಎಂದು ತಿಳಿದುಬಂದಿದೆ,
ಬಳಿಕ ನಡೆದ ಮತ ಎಣಿಕೆಯ ಆರಂಭದಲ್ಲಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ ಕಾಯ್ದುಕೊಂಡರೆ, ನಂತರ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಸುರತ್ಕಲ್ ಎನ್.ಐ.ಟಿ.ಕೆ. ಆವರಣದಲ್ಲಿ ನಡೆಯುತ್ತಿರುವ ಮತ ಎಣಿಕೆಗಾಗಿ ಎಲ್ಲರೂ ಬಂದು ಸೇರಿದ್ದರು. ಅಷ್ಟರಲ್ಲಿ ಅಧಿಕಾರಿಯೋರ್ವರು ಕೀ ಮರೆತು ಬಂದಿರುವುದು ಬೆಳಕಿಗೆ ಬಂದಿತು. ಪುನಃ ಹಿಂದಿರುಗಿ ಕೀ ತರುವಷ್ಟು ಸಮಯ ಇಲ್ಲದೇ ಇರುವುದರಿಂದ ಬಾಗಿಲಿನ ಕೀಯನ್ನು ಮುರಿದು ಒಳಪ್ರವೇಶಿಸಲಾಯಿತು. ಬಳಿಕ ಮತ ಎಣಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು ಎಂದು ಹೇಳಲಾಗಿದೆ. ಬಳಿಕ ನಡೆದ ಅಂಚೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಅಂತೂ ಮತ ಎಣಿಕೆ ಪ್ರಕ್ರಿಯೆಗೆ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳು ಕಾರ್ಯಕ್ಷಮತೆ ಮೆರೆದರು.
Posted by Vidyamaana on 2023-05-04 23:33:29 |
ಪುತ್ತೂರು: ಹುಟ್ಟೂರು ಕೋಡಿಂಬಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಯವರು ಚುನಾವಣಾ ಪ್ರಚಾರ ಸಭೆ ನಡೆಸಿದರು. ಕಿಕ್ಕಿರಿದು ತುಂಬಿದ್ದ ಸಭೆಯಲ್ಲಿ ಮಾತನಾಡಿದ ಅಶೋಕ್ ರೈಯವರು ನಾನುಕೋಡಿಂಬಾಡಿಯ ಹುಡುಗ, ಹತ್ತೂರಲ್ಲಿ ನಾಲ್ಕು ಅಕ್ಷರ ಕಲಿಸಿದ ಸಂಜೀವ ರೈಯವರ ಪುತ್ರ ಈ ಸಲ ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದು ನಿಮ್ಮೆಲ್ಲರ ಆಶೀರ್ವಾದವನ್ನು ಬೇಡುತ್ತಿದ್ದೇನೆ, ನೀವು ನನ್ನನ್ನು ಮನೆಮಗನಾಗಿ ಸ್ವೀಕರಿಸಿ ಆಶೀರ್ವಾದ ಮಾಡುತ್ತೀರಿ ಎಂಬ ಪೂರ್ಣ ನಂಬಿಕೆ ನನ್ನಲ್ಲಿದೆ. ಹುಟ್ಟೂರಿನ ಸಹೋದರ, ಸಹೋದರಿಯರು, ಬಂಧುಗಳು ತಾಯ೦ದಿರು, ಅಕ್ಕಂದಿರು, ಅಣ್ಣಂದಿರು ಮಾಡುವ ಆಶೀರ್ವಾದ ಅದು ದೊಡ್ಡ ಆಶೀರ್ವಾದ ಎಂಬ ನಂಬಿಕೆ ನನಗಿದೆ. ತಾಯಿ ಮಹಿಷ ಮರ್ಧಿನಿಯಲ್ಲಿಅನುಮತಿ ಪಡೆದು ನಾನು ಚುನಾವಣೆಗೆ ನಿಂತಿದ್ದೇನೆ, ತಾಯಿಯ ಆಶೀರ್ವಾದದ ಜೊತೆಗೆ ಹುಟ್ಟೂರಿನ ಬಂಧುಗಳ ಆಶೀರ್ವಾದವನ್ನು ನಾನು ಬೇಡುತ್ತಿದ್ದೇನೆ. ಚುನಾವಣೆಯಲ್ಲಿ ನನಗೆ ಮತ ಹಾಕುವ ಮೂಲಕ ಗೆಲ್ಲಿಸಿ, ನಾನು ಗೊತ್ತಿದ್ದೋ ಗೊತ್ತಿಲ್ಲದೆಯೋ ಏನಾದರೂ ತಪ್ಪು ಮಾಡಿದ್ದರೆ ನಿಮ್ಮ ಮನೆ ಮಗನಾಗಿ ನನ್ನನ್ನು ಕ್ಷಮಿಸಿ ಎಂದು ಸೇರಿದ್ದ ಸಾವಿರಾರು ಮಂದಿ ಕೋಡಿಂಬಾಡಿಯ ಜನತೆಗೆ ಕೈಮುಗಿದು ಬೇಡಿಕೊಂಡರು. ನಾನು ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಳಿಕ ನನಗೆ ಬಿಜೆಪಿಯಿಂದ ಅನೇಕ ಕಿರುಕುಳ ಆರಂಭವಾಗಿದೆ. ನಾನು ಹೋದಲ್ಲೆಲ್ಲಾ ಬಂದಲ್ಲೆಲ್ಲಾ ನನ್ನ ಹಿಂದೆಯೇ ಜನರನ್ನು, ಅಧಿಕಾರಿಗಳನ್ನು ಕಳುಹಿಸಿ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ, ಎಲ್ಲಾ ಹಿಂಸೆಗಳನ್ನು ಸಹಿಸಿ ನಾನು ಹಲವು ದಿನಗಳಿಂದ ಕ್ಷೇತ್ರದಾದ್ಯಂತ ಕ್ರಯಿಸಿದ್ದೇನೆ, ಜನರ ಸಮಸ್ಯೆಗಳನ್ನು ಅರಿತುಕೊಂಡಿದ್ದೇನೆ, ಭರವಸೆಯನ್ನು ನೀಡಿದ್ದೇನೆ ಆಶೀರ್ವಾದ ಮಾಡುವುದಾಗಿ ಹೇಳಿದ್ದಾರೆ. ಸುಮಾರು 22 ಸಾವಿರ ಬಡ ಕುಟುಂಬಗಳಿಗೆ ನೆರವು ನೀಡಿದ್ದೇನೆ, ಬಡವರಿಗೆ ಮಾಡಿದ ದಾನದ ಶಕ್ತಿ ನನಗೆ ಆಶೀರ್ವಾದ ರೂಪದಲ್ಲಿ ಸಿಗಬಹುದು ಎಂಬ ನಂಬಿಕೆ ಇದೆ ಎಂದು ಮಾರ್ಮಿಕವಾಗಿ ಹೇಳಿದರು.