Posted by vidyamaana on 2024-07-03 19:23:39 |
ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್ನಲ್ಲಿ ಸದಸ್ಯರಾಗಿರುತ್ತಾರೆ.
ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.
Posted by Vidyamaana on 2023-08-12 01:45:46 |
ನವದೆಹಲಿ: ಭಾರತವು ತಿಂಗಳ ಹಿಂದಷ್ಟೇ ಚಂದ್ರನಲ್ಲಿಗೆ ಬಾಹ್ಯಾಕಾಶ ನೌಕೆ ಉಡಾವಣೆ ಮಾಡಿತ್ತು. ಅದಿನ್ನೂ ಚಂದ್ರನ ಕಕ್ಷೆಯಲ್ಲಿದ್ದು ಅಂಗಳಕ್ಕೆ ಇಳಿಯಲು ಸಾಧ್ಯವಾಗಿಲ್ಲ. ಬಾಹ್ಯಾಕಾಶ ಕ್ಷೇತ್ರದಲ್ಲಿ ಅಗಾಧ ಸಾಧನೆ ಮಾಡಿರುವ ರಷ್ಯಾ ಈಗ ತರಾತುರಿಯಲ್ಲಿ ಚಂದ್ರನೆಡೆಗೆ ನೌಕೆ ಕಳಿಸಿಕೊಟ್ಟಿದೆ. ಸುಮಾರು 50 ವರ್ಷಗಳ ಬಳಿಕ ಮೊದಲ ಬಾರಿ ದಿಢೀರ್ ಎಂಬಂತೆ ಚಂದ್ರನೆಡೆಗೆ ನೌಕೆಯನ್ನು ಕಳುಹಿಸಿದ್ದು ಜಗತ್ತಿನ ಗಮನ ಸೆಳೆದಿದೆ.
ಒಂದು ವರ್ಷದಿಂದ ಉಕ್ರೇನ್ನೊಂದಿಗೆ ಸಂಘರ್ಷದಲ್ಲಿ ತೊಡಗಿರುವ ರಷ್ಯಾ ಈಗ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಸಾಧನೆಗೆ ಹೆಜ್ಜೆ ಇಟ್ಟಿದೆ. ಅಂದಹಾಗೆ, 1976ರ ಬಳಿಕ ರಷ್ಯಾ ಮೊದಲ ಬಾರಿಗೆ ಚಂದ್ರನೆಡೆಗೆ ಕುತೂಹಲದ ದೃಷ್ಟಿ ಬೀರಿದೆ.
ಲೂನಾ-25 ಪ್ರೋಬ್ ಅನ್ನು ಹೊತ್ತ ರಾಕೆಟ್ ಗುರುವಾರ ಮಧ್ಯಾಹ್ನ ವೇಳೆಗೆ ವೊಸ್ಟೊಚ್ನಿ ಕಾಸ್ಮೊಡ್ರೋಮ್ನಿಂದ ಉಡಾವಣೆಯಾಗಿದೆ ಎಂದು ರಷ್ಯಾದ ಬಾಹ್ಯಾಕಾಶ ಸಂಸ್ಥೆ ರೋಸ್ಕೋಸ್ಮಾಸ್ ತಿಳಿಸಿದೆ. ಈ ನೌಕೆಯು ಒಂದೇ ವಾರದ ಅಂತರದಲ್ಲಿ ಅಂದರೆ, ಆಗಸ್ಟ್ 21ರ ವೇಳೆಗೆ ಚಂದ್ರನ ಅಂಗಳ ತಲುಪಲಿದೆ.
ಕೇವಲ 5 ದಿನಗಳಲ್ಲಿ ಚಂದ್ರನ ಕಕ್ಷೆಯನ್ನು ತಲುಪಲಿದ್ದು ಅಲ್ಲಿಂದ ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಇಳಿಯುವುದಕ್ಕೆ ತಯಾರಿ ನಡೆಸಲಿದೆ. ಇದೇ ಮೊದಲ ಬಾರಿಗೆ, ಭೂಮಿಯಿಂದ ಕಳಿಸಲ್ಪಟ್ಟ ನೌಕೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯುವ ಸಾಹಸ ಮಾಡಲಿದೆ. ಇಲ್ಲಿವರೆಗೆ ಚಂದ್ರನ ಮೇಲೆ ನಡೆಸಲಾಗಿರುವ ಎಲ್ಲಾ ಕಾರ್ಯಾಚರಣೆಗಳು ಸಮಭಾಜಕ ವಲಯದಲ್ಲಿ ಮಾತ್ರ ಇಳಿದಿವೆ ಎಂದು ರೋಸ್ಕೊಸ್ಮಾಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Posted by Vidyamaana on 2024-07-02 09:55:22 |
ಬೀದರ್: ರಾತ್ರಿ ಅಂತ್ಯಸಂಸ್ಕಾರ ಮಾಡಿದ್ದ ಒಂದೂವರೆ ವರ್ಷದ ಮಗುವಿನ ಮೃತದೇಹ ಬೆಳಗ್ಗೆ ಉಯ್ಯಾಲೆಯಲ್ಲಿ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರು, ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿರುವ ಘಟನೆ ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದಲ್ಲಿ ನಡೆದಿದೆ.
ಮಂಠಾಳ ಗ್ರಾಮದ ನಿವಾಸಿ ಅಂಬಯ್ಯಸ್ವಾಮಿ ಎಂಬುವವರ ಒಂದೂವರೆ ವರ್ಷದ ದೀಪ್ತಿ ಅನಾರೋಗ್ಯದಿಂದ ಜೂನ್ 29ರ ಸಂಜೆ ಸಾವನ್ನಪ್ಪಿದ್ದಳು.
Posted by Vidyamaana on 2024-04-18 17:11:23 |
ಬೆಂಗಳೂರು : ಲೋಕಸಭಾ ಚುನಾವಣೆ ಮತದಾನದ ಬಳಿಕ ಚುನಾವಣೋತ್ತರ ಸಮೀಕ್ಷೆಯನ್ನು ನಿಷೇಧಿಸಿ ಚುನಾವಣಾ ಆಯೋಗವು ಖಡಕ್ ಆದೇಶ ಹೊರಡಿಸಿದೆ.
ಈ ಕುರಿತಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದಂತ ಸೂರಳ್ ಕರ್ ವಿಕಾರ್ ಕಿಶೋರ್ ಅವರು ಎಲ್ಲಾ ಮಾಧ್ಯಮಗಳ ಸಂಪಾದಕರು, ವರದಿಗಾರರು, ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಿಗೆ ಪತ್ರ ಬರೆದಿದ್ದಾರೆ.
Posted by Vidyamaana on 2024-06-10 19:13:11 |
ಮುಂಬೈ: ಬಾಲಿವುಡ್ ನಟಿ ನೂರ್ ಮಾಲಾಬಿಕಾ ದಾಸ್ ಮುಂಬೈನ ಅಪಾರ್ಟ್ ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
2023ರಲ್ಲಿ ಬಿಡುಗಡೆಗೊಂಡಿದ್ದ ದಿ ಟ್ರಯಲ್ ವೆಬ್ ಸರಣಿಯಲ್ಲಿ ನಟಿ ಕಾಜೋಲ್ ಜತೆ ಮಾಲಾಬಿಕಾ ದಾಸ್ ನಟಿಸಿದ್ದರು.