ಕುತ್ತಾರು ಮದನಿ ನಗರ ದುರಂತ ಪ್ರಕರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ; ಶೀಘ್ರ ಪರಿಹಾರ ಒದಗಿಸಲು ಸೂಚನೆ

ಸುದ್ದಿಗಳು News

Posted by vidyamaana on 2024-06-30 19:50:01 |

Share: | | | | |


ಕುತ್ತಾರು ಮದನಿ ನಗರ ದುರಂತ ಪ್ರಕರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ; ಶೀಘ್ರ ಪರಿಹಾರ ಒದಗಿಸಲು ಸೂಚನೆ

ಮಂಗಳೂರು , ಜೂ. 30: ಕುತ್ತಾರು ಮದನಿ ನಗರದಲ್ಲಿ ಇತೀಚೆಗೆ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣದ ಘಟನಾ ಸ್ಥಳಕ್ಕೆ ರವಿವಾರ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪರಿಶೀಲಿಸಿದರು.

ಸಂತ್ರಸ್ತರಿಗೆ ಶೀಘ್ರ ಪರಿಹಾರವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಇದೇ ಸಂದರ್ಭ, ಉಳ್ಳಾಲ- ಸೋಮೇಶ್ವರ ಭಾಗದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಕಡಲ್ಕೊರೆತ ತೀವ್ರಗೊಂಡಿರುವ ಉಚ್ಚಿಲ, ಮೊಗವೀರಪಟ್ನ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಕ್ಕೆ ಭೇಟಿ ನೀಡಿದರು. 


ಸಮುದ್ರತೀರದ ಮನೆಗಳಲ್ಲಿ ವಾಸವಾಗಿರುವವರು ಎಚ್ಚರಿಕೆ ವಹಿಸುವಂತೆ ಸೂಚಿಸಿದ ಸಂಸದ ಕ್ಯಾ. ಬ್ರಿಜೇಶ್, ಅಪಾಯದಂಚಿನಲ್ಲಿ ಇರುವ ಮನೆಮಂದಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಉಳ್ಳಾಲ ತಾಲೂಕು ತಹಶಿಲ್ದಾರರಾದ ಪ್ರದೀಪ್ ಕುರುಡೇಕರ್, ಬಂದರು ಇಲಾಖೆಯ ಇಂಜಿನಿಯರ್ ಪ್ರವೀಣ್, ಉಳ್ಳಾಲ ತಾಲೂಕು ಕಂದಾಯ ನಿರೀಕ್ಷಕರು ಪ್ರಮೋದ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂತೋಷ್ ಬೋಳಿಯಾರ್ ಮೊದಲಾದವರು ಉಪಸ್ಥಿತರಿದ್ದರು.

 Share: | | | | |


ಸ್ನೇಹಿತರ ಬೆಟ್ಟಿಂಗ್ - ಯುವತಿಯ ಹಿಂಭಾಗ ಟಚ್ ಮಾಡಿದ ಪೋಲಿ ಇದೀಗ ಪೊಲೀಸರ ಅತಿಥಿ!

Posted by Vidyamaana on 2024-01-31 20:32:27 |

Share: | | | | |


ಸ್ನೇಹಿತರ ಬೆಟ್ಟಿಂಗ್ - ಯುವತಿಯ ಹಿಂಭಾಗ ಟಚ್ ಮಾಡಿದ ಪೋಲಿ ಇದೀಗ ಪೊಲೀಸರ ಅತಿಥಿ!

ಬೆಂಗಳೂರು :ಇತ್ತೀಚೆಗೆ ನಮ್ಮೂರ ಹೋಟೆಲ್‌ನಲ್ಲಿ ನಿಂತಿದ್ದ ಯುವತಿಗೆ ಅಲ್ಲೇ ಇದ್ದ ಯುವಕನೋರ್ವ ಯುವತಿಯ ಹಿಂದಿನ ಭಾಗಕ್ಕೆ ಬೇಕಂತಲೇ ಟಚ್‌ ಮಾಡಿ ಕೀಟಲೆ ಮಾಡಿ ಅಲ್ಲಿಂದ ಎಸ್ಕೇಪ್‌ ಆಗಿದ್ದ. ಈ ಕುರಿತು ಯುವತಿಯ ಪೋಷಕರು ನೀಡಿದ ದೂರಿಯನನ್ವಯ ವಿಜಯನಗರ ಪೊಲೀಸರು ಕೇಸು ದಾಖಲಿಸಿದ್ದು, ಇದೀಗ ಆರೋಪಿ ಚಂದನ್‌ ಎಂಬಾತನನ್ನು ಬಂಧಿಸಿದ್ದಾರೆ.


ಡಿ.30 ರಂದು ಸಂಜೆ 7.30ರ ಸುಮಾರಿಗೆ ಸ್ನೇಹಿತೆಯೊಂದಿಗೆ ನಮ್ಮೂರ ಹೋಟೆಲ್‌ಗೆ ತಿಂಡಿ ತಿನ್ನಲೆಂದು ಯುವತಿ ಬಂದಿದ್ದು, ಆಕೆಯನ್ನು ಕಂಡ ಯುವಕ ಬೇಕೆಂತಲೇ ಆಕೆಯ ಸೊಂಟದ ಹಿಂಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ. ಕೂಡಲೇ ಯುವತಿ ತರಾಟೆ ತೆಗೆದುಕೊಂಡಾಗ ಅಲ್ಲಿಂದ ಓಡಿ ಹೋಗಿದ್ದ. ಈ ಘಟನೆ ಸಂಬಂಧ ವೀಡಿಯೋ ಜ.18 ರಂದು ವೈರಲ್‌ ಆಗಿತ್ತು. ಯುವತಿ ಪೋಷಕರು ಪೊಲೀಸರಿಗೆ ಈ ಕುರಿತು ದೂರು ನೀಡಿದ್ದು, ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಕಾಮುಕ ಚಂದನ್‌ನನ್ನು ಬಂಧಿಸಿದ್ದಾರೆ.


ಗ್ಯಾಸ್‌ ಸಿಲಿಂಡರ್‌ ಡೆಲಿವರಿ ಕೆಲಸ ಮಾಡುವ ವೃತ್ತಿ ಮಾಡಿಕೊಂಡಿದ್ದ ಆರೋಪಿ ಚಂದನ್‌, ಹಂಪಿನಗರ ನಿವಾಸಿ. ಘಟನೆ ನಡೆದ ದಿನ ಸ್ನೇಹಿತರೊಂದಿಗೆ ಸಿನಿಮಾ ನೋಡಿಕೊಂಡು ಬಂದ ಚಂದನ್‌ ಭರ್ಜರಿ ಪಾರ್ಟಿ, ಕಂಠ ಪೂರ್ತಿ ಕುಡಿದು ಊಟಕ್ಕೆ ಎಂದು ವಿಜಯನಗರ ಹೋಟೆಲ್‌ಗೆ ಬಂದಿದ್ದ. ಊಟ ಮುಗಿಸಿ ಹೋಟೆಲ್‌ ಹೊರಗೆ ಚಂದನ್‌ ಗ್ಯಾಂಗ್‌ ಮಾತಾಡಿಕೊಂಡು ನಿಂತಿದ್ದರು.


ಈ ಸಂದರ್ಭದಲ್ಲಿ ಯುವತಿ ಅಲ್ಲಿಗೆ ಬಂದಿದ್ದಾಳೆ. ಇದನ್ನು ಕಂಡ ಸ್ನೇಹಿತನೋರ್ವ ಆಕೆಯನ್ನು ಮುಟ್ಟಿದರೆ ಐದು ಸಾವಿರ ಕೊಡುತ್ತೀನಿ ಎಂದು ಚಂದನ್‌ಗೆ ಹೇಳಿದ್ದಾನೆ. ಅಷ್ಟಕ್ಕೇ ಚಂದನ್‌ ಕುಡಿದ ಅಮಲಿನಲ್ಲಿ ಹಿಂಬದಿಯಿಂದ ಹೋಗಿ ಯುವತಿಗೆ ಮುಟ್ಟಿ ಅನುಚಿತವಾಗಿ ವರ್ತನೆ ಮಾಡಿ ಕಾಲ್ಕಿತ್ತಿದ್ದ. ನಂತರ ಯುವತಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದು, ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಳು. ಇದೀಗ ಪೊಲೀಸರು ಆರೋಪಿ ಚಂದನ್‌ನನ್ನು ಬಂಧಿಸಿ ಜೈಲಿಗೆ ಕಳಿಸಿದ್ದಾರೆ.

ಇಸ್ರೇಲ್ ವಿರುದ್ಧ ಅಧಿಕೃತ ಯುದ್ಧ ಘೋಷಿಸಿದ ಯೆಮನ್ ಮಿಸೈಲ್ ದಾಳಿ ಆರಂಭ

Posted by Vidyamaana on 2023-11-01 07:28:09 |

Share: | | | | |


ಇಸ್ರೇಲ್ ವಿರುದ್ಧ ಅಧಿಕೃತ ಯುದ್ಧ ಘೋಷಿಸಿದ ಯೆಮನ್ ಮಿಸೈಲ್ ದಾಳಿ ಆರಂಭ

ಯೆಮನ್: ಹಮಾಸ್ ದಾಳಿಯ ನೆಪದಲ್ಲಿ ಇಸ್ರೇಲ್ ಪ್ಯಾಲೆಸ್ತೀನ್ ನಾಗರಿಕರನ್ನು ಬೇಟೆಯಾಡುತ್ತಿದ್ದು, ಅಂತಾರಾಷ್ಟ್ರೀಯ ಕಾನೂನನ್ನು, ವಿಶ್ವಸಂಸ್ಥೆಯ ಸಲಹೆಗಳನ್ನು ಎಲ್ಲ ಮೀರುತ್ತಿದೆ. ದಾಳಿ ಮುಂದುವರೆಸುವ ಹೇಳಿಕೆಗಳನ್ನೂ ನೀಡುತ್ತಿದೆ. ಪ್ಯಾಲೆಸ್ತಿನಿಯನ್ ನಾಗರಿಕರ ಸಾವು ನೋವಿನ ಬಗ್ಗೆ, ಮಿಲಿಯಾಂತರ ಜನರ ನಿರಾಶ್ರಿತರಾಗಿರುವುದರ ಬಗ್ಗೆ ಕೆಲವು ಮುಸ್ಲಿಂ ರಾಷ್ಟ್ರಗಳು ಕೆರಳಿ ಕೆಂಡಾಮಂಡಲವಾಗಿದೆ. ದಾಳಿ ನಿಲ್ಲಿಸುವ ಎಚ್ಚರಿಕೆ ಮೀರಿದ ಇಸ್ರೇಲ್ ವಿರುದ್ಧ ಇದೀಗ ಯೆಮೆನ್ ಅಧಿಕೃತವಾಗಿ ಯುದ್ಧ ಘೋಷಿಸಿದೆ.

ಯೆಮೆನ್ ಭದ್ರತಾ ಪಡೆ ಮುಖ್ಯಸ್ಥ ಯುದ್ಧ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಇಸ್ರೇಲ್ ಮೇಲೆ ಮಿಸೈಲ್‌ಗಳು ತೂರಿ ಬಂದಿದೆ.

ಯೆಮನ್ ಯುದ್ಧ ಘೋಷಣೆ ಕುರಿತು ಭದ್ರತಾ ಪಡೆ ವಕ್ತಾರ ಯಹ್ಯಾ ಸೆರಿ ವಿಡಿಯೋ ಮೂಲಕ ಘೋಷಣೆ ಮಾಡಿದ್ದಾರೆ. ಯುದ್ಧ ಘೋಷಣೆ ಬೆನ್ನಲ್ಲೇ ಬ್ಯಾಲಿಸ್ಟಿಕ್ ಮಿಸೈಲ್ ದಾಳಿ ಆರಂಭಗೊಂಡಿದೆ.

ಪ್ಯಾಲೆಸ್ತಿನ್ ಸಹೋದರ,ಸಹೋದರಿಯರಿಗೆ ನಾವು ಹೋರಾಟ ಆರಂಭಿಸಿದ್ದೇವೆ ಎಂದು ಯೆಮೆನ್ ಹೇಳಿದೆ. ಇಸ್ರೇಲ್ ದಾಳಿ ನಿಲ್ಲಿಸುವವರೆಗೆ ಯೆಮೆನ್ ಶಸಸ್ತ್ರ ಪಡೆಗಳು ಭೀಕರ ದಾಳಿ ನಡೆಸಲಿದೆ ಎಂದೂ ಹೇಳಿದೆ. ಇಸ್ರೇಲ್ ಘೋರ ಪರಿಣಾಮ ಎದುರಿಸಬೇಕಾಗಲಿದೆ ಎಂದು ಕೂಡ ಯೆಮೆನ್ ಎಚ್ಚರಿಸಿದೆ.

ಬಿಜೆಪಿ ಟಿಕೇಟ್ ಡೀಲ್ ಪ್ರಕರಣ : ವಜ್ರಾದೇಹಿ ಸ್ವಾಮಿಜೀಗೆ ಸಿಸಿಬಿ ನೋಟೀಸ್

Posted by Vidyamaana on 2023-10-10 16:50:37 |

Share: | | | | |


ಬಿಜೆಪಿ ಟಿಕೇಟ್ ಡೀಲ್ ಪ್ರಕರಣ : ವಜ್ರಾದೇಹಿ ಸ್ವಾಮಿಜೀಗೆ ಸಿಸಿಬಿ ನೋಟೀಸ್

ಬೆಂಗಳೂರು: ಬಿಜೆಪಿ ಟಿಕೆಟ್ ಡೀಲ್ ವಿಷಯವಾಗಿ


ಹಿಂದೂ ಮುಖಂಡೆ ಚೈತ್ರ ಕುಂದಾಪುರ (Chaithra


Kundapura) ಹಾಗೂ ಹಾಲಶ್ರೀ ಸ್ವಾಮಿಜಿ


ಬಂಧನವಾಗಿ ತಿಂಗಳು ಕಳೆದ ನಂತರ ದಕ್ಷಿಣ ಕನ್ನಡದ ಪ್ರಮುಖ ಹಿಂದೂ ಪರ ಇರುವ ಸ್ವಾಮಿಜೀಗೆ ವಿಚಾರಣೆಗೆ ಹಾಜರಾಗಲು ನೋಟಿಸ್


ಜಾರಿಯಾಗಿದೆ.ಉದ್ಯಮಿ ಗೋವಿಂದ ಬಾಬು ಪೂಜಾರಿಗೆ


ಬೈಂದೂರಿನ ಬಿಜೆಪಿ ಟಿಕೇಟ್ ನೀಡುವ ವಿಚಾರವಾಗಿ ಡೀಲ್ ನಡೆದು ಚೈತ್ರ ಕುಂದಾಪುರ ಬಂಧನ ಆದ ನಂತರ ಚೈತ್ರ ಇಡಿ ಗೆ ಬರೆದ ಪತ್ರದಲ್ಲಿ ವಜ್ರಾದೇಹಿ ಶ್ರೀ, ಚಕ್ರವರ್ತಿ ಸೂಲಿಬೆಲೆ, ಹಾಗೂ ಸಿಟಿ ರವಿ ಹೆಸರು ಉಲ್ಲೇಖವಾಗಿತ್ತು.ಇದೀಗ ಸಿಸಿಬಿ ಮಂಗಳೂರು ಗುರುಪುರ ವಜ್ರಾದೇಹಿ ಮಠದ ರಾಜಶೇಖರಾನಂದ ಸ್ವಾಮಿಜೀಗೇ ನೋಟಿಸ್ ಜಾರಿ ಮಾಡಿದೆಬೆಂಗಳೂರು ನಗರ ಸಿಸಿಬಿ ಮಹಿಳಾ ಸಂರಕ್ಷಣಾ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ

ಬೆಂಗಳೂರು ಸಿಸಿಬಿ ಸಹಾಯಕ ಪೊಲೀಸ್ಕಮಿಷನರ್ ರವರಾದ ರೀನಾ ಸುವರ್ಣ ಅವರು ವಜ್ರಾದೇಹಿ ಶ್ರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಒಂದು ವರದಿಗೆ ಅಲುಗಾಡಿದ ಅದಾನಿ ಸಾಮ್ರಾಜ್ಯ- ನಂ.1 ಶ್ರೀಮಂತ ಪಟ್ಟದಿಂದ 16 ನೇ ಸ್ಥಾನಕ್ಕೆ ಇಳಿದ ಗೌತಮ್ ಅದಾನಿ : 8 ಲಕ್ಷ 19 ಸಾವಿರದ 134 ಕೋಟಿ ನಷ್ಟ

Posted by Vidyamaana on 2023-02-02 15:09:34 |

Share: | | | | |


ಒಂದು ವರದಿಗೆ ಅಲುಗಾಡಿದ ಅದಾನಿ ಸಾಮ್ರಾಜ್ಯ- ನಂ.1 ಶ್ರೀಮಂತ ಪಟ್ಟದಿಂದ 16 ನೇ ಸ್ಥಾನಕ್ಕೆ ಇಳಿದ ಗೌತಮ್ ಅದಾನಿ : 8 ಲಕ್ಷ 19 ಸಾವಿರದ 134 ಕೋಟಿ ನಷ್ಟ

ನವದೆಹಲಿ (ಫೆ.2): ಕಳೆದ ವಾರ ಅದಾನಿ (Adani) ಗ್ರೂಪ್‌ ಕಂಪನಿಗಳ ಮೇಲೆ ಅಮೆರಿಕದ ಶಾರ್ಟ್‌ ಸೆಲ್ಲರ್ ಹಾಗೂ ಸಂಶೋಧನಾ ಸಂಸ್ಥೆ ಹಿಂಡೆನ್‌ಬರ್ಗ್‌ ವಂಚನೆ ಹಾಗೂ ಮೋಸದ ಆರೋಪ ಮಾಡಿತ್ತು. ಅಲ್ಲಿಂದ ಇಲ್ಲಿಯವರೆಗೂ ಷೇರುಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ನಷ್ಟಗಳನ್ನು ಕಂಡಿತ್ತು.ಷೇರು ಮಾರುಕಟ್ಟೆಯಲ್ಲಿ ಕಂಪನಿಯ ಷೇರುಗಳು ಕುಸಿತ ಕಾಣುತ್ತಿರುವ ಹಿನ್ನಲೆಯಲ್ಲಿ 20 ಸಾವಿರ ಕೋಟಿಗೂ ಹೆಚ್ಚಿನ ಫಾಲೋಆನ್‌ ಪಬ್ಲಿಕ್‌ ಆಫರ್‌ (ಎಫ್‌ಪಿಓ) ಜೊತೆ ಮುಂದುವರಿಯುವುದು ಸರಿಯಲ್ಲ ಎಂದಿದ್ದ ಅದಾನಿ ಗ್ರೂಪ್‌, ಇದನ್ನು ರದ್ದು ಮಾಡಿತ್ತು. ಸಂಪೂರ್ಣವಾಗಿ ಎಫ್‌ಪಿಓ ಮಾರಾಟವಾಗಿದ್ದರಿಂದ 20 ಸಾವಿರ ಕೋಟಿ ರೂಪಾಯಿಯನ್ನು ಹೂಡಿಕೆದಾರರಿಗೆ ವಾಪಸ್‌ ಮಾಡುವುದಾಗಿ ತಿಳಿಸಿತ್ತು.ಷೇರು ಕುಸಿತ ಕಾಣುತ್ತಿರುವ ಹಂತದಲ್ಲಿ ಎಫ್‌ಪಿಒ ಜೊತೆ ಮುಂದುವರಿಯುವುದು ನೈತಿಕವಾಗಿ ಸರಿಯಲ್ಲ ಎಂದು ಗೌತಮ್‌ ಅದಾನಿ ಕೂಡ ಹೇಳಿದ್ದಾರೆ.

ಈ ನಡುವೆ ಕಂಪನಿಯ ಒಟ್ಟು ಷೇರುಗಳಿಂದಾದ ನಷ್ಟ 100 ಬಿಲಿಯನ್‌ ಡಾಲರ್‌ ಎಂದು ಹೇಳಲಾಗಿದೆ. ಭಾರತೀಯ ರೂಪಾಯಿಯಲ್ಲಿ 8 ಲಕ್ಷದ 19 ಸಾವಿರದ 134 ಕೋಟಿ ರೂ ನಷ್ಟ ಎಂದು ಹೇಳಲಾಗಿದೆ. ಇದರೊಂದಿಗೆ ಏಷ್ಯಾದ ಮೊದಲ ಶ್ರೀಮಂತ ಎಂಬ ಫೋರ್ಬ್ಸ್ ಪಟ್ಟಿಯಲ್ಲಿದ್ದ ಅದಾನಿ ಏಕಾಏಕಿ 16 ನೇ ಸ್ಥಾನಕ್ಕೆ ಕುಸಿದಿದ್ದಾರೆ.ಅದಾನಿ ಸಮೂಹದ ಷೇರುಗಳು ಭಾರಿ ಕುಸಿತ ಕಾಣುತ್ತಿರುವುದು ಹೂಡಿಕೆದಾರರಲ್ಲಿ ತೀವ್ರ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹೂಡಿಕೆದಾರರಿಗೆ ಎದುರಾಗಿರುವ ಅಪಾಯದ ಬಗ್ಗೆ ಚರ್ಚಿಸಲು ದೈನಂದಿನ ಸಂಸದೀಯ ಕಲಾಪವನ್ನು ಮೊಟಕುಗೊಳಿಸಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿದವು.

ಈ ನಡುವೆ ಅದಾನಿ ಸಮೂಹ ಸಂಸ್ಥೆಗಳಿಗೆ ನೀಡಿದ ಸಾಲಗಳ ಕುರಿತಂತೆ ಭಾರತೀಯ ಬ್ಯಾಂಕ್‌ಗಳಿಂದ ರಿಸರ್ವ್‌ ಬ್ಯಾಂಕ್‌ ಮಾಹಿತಿ ಕೇಳಿದೆ ಎಂದು ವರದಿಯಾಗಿದೆ.

ಈ ನಡುವೆ ಸಂಸತ್‌ ಅಧಿವೇಶನದಲ್ಲಿ ಹಿಂಡೆನ್‌ಬರ್ಗ್‌ ಮಾಡಿರುವ ಆರೋಪಗಳ ಬಗ್ಗೆ ಚರ್ಚೆ ನಡೆಸಲು ಸಮಯ ಮೀಸಲಿಡುವಂತೆ ಭಾರತದ ಸಂಸದರು ಆಗ್ರಹಿಸಿದ್ದಾರೆ. ಅದಾನಿ ಗ್ರೂಪ್‌ನಲ್ಲಿ ಸರ್ಕಾರಿ ಮಾಲೀಕತ್ವದ ಭಾರತೀಯ ಜೀವ ವಿಮಾ ನಿಗಮ ಹಾಗೂ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಕೂಡ ದೊಡ್ಡ ಹೂಡಿಕೆದಾರರಾಗಿದ್ದಾರೆ. LIC ಶೇರ್ ಮೌಲ್ಯ ಕುಸಿತವಾಗಿದೆ.ಗುರುವಾರ ಮುಂಬೈನ ಬಿಎಸ್‌ಇ ಆರಂಭಿಕ ವಹಿವಾಟಿನಲ್ಲಿ ಅದಾನಿ ಸಮೂಹದ ಎಲ್ಲಾ 10 ಷೇರುಗಳು ಕೂಡ ಕುಸಿದವು. ಅದಾನಿ ಎಂಟರ್‌ಪ್ರೈಸಸ್‌, ಅದಾನಿ ಟ್ರಾನ್ಸ್‌ಮಿಷನ್‌ ಮತ್ತು ಅದಾನಿ ಪೋರ್ಟ್ಸ್‌ ನಷ್ಟವನ್ನು ಶೇ.10ರಷ್ಟು ಕಂಡಿದೆ. ಹಿಂಡೆನ್‌ಬರ್ಗ್‌ ವರದಿಯಿಂದ ಅದಾನಿ ಕಂಪನಿ ಷೇರುಗಳ ಮಾರಾಟ ವಿಪರೀತವಾಗಿ ಹೆಚ್ಚಾಗಿದೆ.

ಗುರುವಾರ ಮಾರುಕಟ್ಟೆಗಳು ಪ್ರಾರಂಭವಾಗುವ ಸ್ವಲ್ಪ ಸಮಯದ ಮೊದಲು ಬಿಡುಗಡೆಯಾದ ವೀಡಿಯೊದಲ್ಲಿ ಸಂಸ್ಥಾಪಕ ಗೌತಮ್ ಅದಾನಿ, ತಮ್ಮ ಕಂಪನಿಗಳ ಆರ್ಥಿಕ ಸ್ಥಿತಿಗತಿ ಬಗ್ಗೆ ಇರುವ ಕಳವಳಗಳನ್ನು ತಳ್ಳಿಹಾಕಿದರು. ಎಫ್‌ಪಿಓ ರದ್ದು ಮಾಡಿದ್ದರಿಂದ ಈಗಾಗಲೇ ನಡೆಯುತ್ತಿರುವ ಯೋಜನೆಗಳು ಹಾಗೂ ಭವಿಷ್ಯದ ಯೋಜನೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.

ಹೂಡಿಕೆದಾರರನ್ನು ರಕ್ಷಣೆ ಮಾಡುವ ಕಾರಣದಿಂದ ಎಫ್‌ಪಿಓ ಮಾರಾಟವನ್ನು ರದ್ದು ಮಾಡಿದ್ದೇವೆ. ಯಾಕೆಂದರೆ, ಪ್ರಸ್ತುತ ಮಾರುಕಟ್ಟೆಯಲ್ಲಿ ನಮ್ಮ ಷೇರುಗಳು ದೊಡ್ಡ ಮಟ್ಟದಲ್ಲಿ ಇಳಿಕೆ ಕಾಣುತ್ತಿವೆ. ಎಫ್‌ಪಿಓಗೆ ಈಗ ತಾನೆ ಸಹಿ ಹಾಕಿರುವ ಈ ಹೂಡಿಕೆದಾರರು ಇದರಿಂದ ದೊಡ್ಡ ಮಟ್ಟದ ನಷ್ಟ ಕಾಣುತ್ತಾರೆ. ಆ ಕಾರಣದಿಂದ ಎಫ್‌ಪಿಓ ರದ್ದು ಮಾಡಿದ್ದಾಗಿ ಹೇಳಿದ್ದಾರೆ.ನನಗೆ ನನ್ನ ಹೂಡಿಕೆದಾರರ ಹಿತವೇ ಅಗ್ರಸ್ಥಾನದಲ್ಲಿ ನಿಲ್ಲುತ್ತದೆ. ಮತ್ತೆಲ್ಲವೂ ನಂತರದ ಸ್ಥಾನದಲ್ಲಿರುತ್ತದೆ ಎಂದು ವಿಡಿಯೋದಲ್ಲಿ ಅದಾನಿ ಹೇಳಿದ್ದಾರೆ. ಹೂಡಿಕೆದಾರರಿಗೆ ಆಗಬಹುದಾದ ನಷ್ಟವನ್ನು ಗಮನದಲ್ಲಿಟ್ಟುಕೊಂಡು ಮಾರಾಟವನ್ನು ಹಿಂಪಡೆದುಕೊಳ್ಳಲಾಗಿದೆ ಎಂದಿದ್ದಾರೆ.

ಅದಾನಿ ಗ್ರೂಪ್‌ ಈವರೆಗೂ 8.4 ಟ್ರಿಲಿಯನ್‌ ರೂಪಾಯಿ ಅಂದರೆ, 102 ಬಿಲಿಯನ್‌ ಯುಎಸ್‌ ಡಾಲರ್‌ ಹಣವನ್ನು ಷೇರುಮಾರುಕಟ್ಟೆಯಿಂದ ಕಳೆದುಕೊಂಡಿದೆ. ಅದಾನಿ ಗ್ರೂಪ್‌ನ ಒಟ್ಟು 10 ಲಿಸ್ಟೆಡ್ ಕಂಪನಿಗಳಿದ್ದು, ಮುಂಬೈ ಮಾರುಕಟ್ಟೆಯಲ್ಲಿ ಎಲ್ಲಾ 10 ಷೇರುಗಳು ಆರಂಭದಲ್ಲಿ ಕುಸಿದರೂ ಬಳಿಕ ಚೇತರಿಕೆ ಕಂಡಿದ್ದವು. ಅದಾನಿ ಎಂಟರ್‌ಪ್ರೈಸಸ್‌ ಕಂಪನಿಯ ಷೇರುಗಳು ಗುರುವಾರ ಒಂದೇ ದಿನ ಶೇ. 18ರಷ್ಟು ಕುಸಿದಿದೆ

ಮಂಗಳೂರು : ಮಹಿಳಾ ಸಿಬ್ಬಂದಿಗೆ ಹಲ್ಲೆ ಆರೋಪ- ಆಪತ್ ಬಾಂಧವ ಆಸಿಫ್ ಅರೆಸ್ಟ್

Posted by Vidyamaana on 2023-10-12 15:13:36 |

Share: | | | | |


ಮಂಗಳೂರು : ಮಹಿಳಾ ಸಿಬ್ಬಂದಿಗೆ ಹಲ್ಲೆ ಆರೋಪ- ಆಪತ್ ಬಾಂಧವ ಆಸಿಫ್ ಅರೆಸ್ಟ್

ಮಂಗಳೂರು: ಅನಾಥ ರೋಗಿಗಳಿಗೆ ಸಹಾಯ ಮಾಡುತ್ತಿದ್ದ ಮುಲ್ಕಿ ನಿವಾಸಿ ಆಪತ್ಥಾಂಧವ ಎಂದೇ ಗುರುತಿಸಲ್ಪಟ್ಟಿದ್ದ ಆಸಿಫ್ ಅವರನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬ್ಬಂದಿಗೆ ಹಲ್ಲೆ ನಡೆಸಿರುವ ಆರೋಪದ ಮೇರೆಗೆ ಬಂಧಿಸಿದ್ದಾರೆ. ಆಸಿಫ್ ಬುಧವಾರ ಸಂಜೆ ವೆಸ್ಲಾಕ್ ಆಸ್ಪತ್ರೆಗೆ ಇಬ್ಬರು ರೋಗಿಗಳನ್ನು ಕರೆತಂದಿದ್ದರು ಎನ್ನಲಾಗಿದೆ. ಈ ಸಂದರ್ಭ ಸೆಕ್ಯುರಿಟಿ ಗಾರ್ಡ್ ವಾಹನವನ್ನು ಹೊರಗೆ ಒಯ್ಯುವಂತೆ ಸೂಚಿಸಿದಾಗ ತಾನು ರೋಗಿಗಳನ್ನು ಅಡ್ಮಿಷನ್ ಮಾಡಿಸುತ್ತಿದ್ದೇನೆ, ಸ್ವಲ್ಪ ಹೊತ್ತು ಕಾಯಿರಿ ಎಂದು ಆಸಿಫ್ ಹೇಳಿದ್ದಾರೆ. ಆದರೆ ಕೆಲವು ಹೊತ್ತಿನ ಬಳಿಕವೂ ಆ್ಯಂಬುಲೆನ್ಸ್ ತೆರವು ಮಾಡದಿದ್ದಾಗ ಮಹಿಳಾ ಸಿಬ್ಬಂದಿ ಆಕ್ಷೇಪಿಸಿದರು. ಈ ಸಂದರ್ಭ ಆಸಿಫ್ ಮತ್ತು ಮಹಿಳಾ ಸಿಬ್ಬಂದಿಯ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ತನ್ನನ್ನು ದೂಡಿ ಹಾಕಿ ಆಸಿಫ್ ಹಲ್ಲೆ ಮಾಡಿದ್ದಾರೆ ಎಂದು ಮಹಿಳಾ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಪೊಲೀಸರು ಆಸಿಫ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಾಯುಕ್ತ ಪೊಲೀಸರು​ ದಾಳಿ ಮಾಡ್ತಿದ್ದಂತೆ 5 ಸಾವಿರ ರೂ. ಲಂಚದ ಹಣ ನುಂಗಿದ ಕಂದಾಯ ಅಧಿಕಾರಿ

Posted by Vidyamaana on 2023-07-25 01:59:35 |

Share: | | | | |


ಲೋಕಾಯುಕ್ತ ಪೊಲೀಸರು​ ದಾಳಿ ಮಾಡ್ತಿದ್ದಂತೆ 5 ಸಾವಿರ ರೂ. ಲಂಚದ ಹಣ ನುಂಗಿದ ಕಂದಾಯ ಅಧಿಕಾರಿ

ಜಬಲ್ಪುರ: ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಸಿಕ್ಕಿಬೀಳುತ್ತೇನೆ ಎಂಬ ಭಯದಲ್ಲಿ ಲಂಚವಾಗಿ ಪಡೆದಿದ್ದ 5 ಸಾವಿರ ರೂ. ಹಣವನ್ನು ಕಂದಾಯ ಅಧಿಕಾರಿಯೊಬ್ಬ ನುಂಗಿ ನೀರು ಕುಡಿದಿರುವ ಘಟನೆ ಮಧ್ಯಪ್ರದೇಶದ ಕತ್ನಿಯಲ್ಲಿ   ಸೋಮವಾರ ದಂದು ನಡೆದಿದೆ.ಅಧಿಕಾರಿ ಗಜೇಂದ್ರ ಸಿಂಗ್​ ತನ್ನ ಖಾಸಗಿ ಕಚೇರಿಯಲ್ಲಿ 5 ಸಾವಿರ ರೂ. ಲಂಚ ತೆಗೆದುಕೊಳ್ಳುತ್ತಿದ್ದ ಸಂಗತಿ ಗೊತ್ತಾದ ಹಿನ್ನೆಲೆ ಮಧ್ಯಪ್ರದೇಶದ ಲೋಕಾಯುಕ್ತ ಸ್ಪೆಷಲ್​ ಪೊಲೀಸ್​ ಎಸ್ಟಾಬ್ಲಿಶ್​ಮೆಂಟ್ (ಎಸ್​ಪಿಇ) ರೆಡ್​ಹ್ಯಾಂಡ್​ ಆಗಿ ಹಿಡಿಯಲು ಬಲೆ ಬೀಸಿದ್ದರು. ಹಣ ಪಡೆಯುವಾಗ ದಾಳಿ ಮಾಡುತ್ತಿದ್ದಂತೆ ಹೆದರಿದ ಗಜೇಂದ್ರ ಸಿಂಗ್​ ಲಂಚದ ಹಣವನ್ನು ನುಂಗಿದನು ಎಂದು ಎಸ್​ಇಪಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್​ ಸಾಹು ತಿಳಿಸಿದ್ದಾರೆಅಧಿಕಾರಿ ಗಜೇಂದ್ರ ಸಿಂಗ್, ಜಮೀನು ವಿವಾದವನ್ನು ಬಗೆಹರಿಸಲು ಬರ್ಖೇದಾ ಗ್ರಾಮದ ಚಂದನ್ ಸಿಂಗ್ ಲೋಧಿಯಿಂದ 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಬಳಿಕ ಚಂದನ್ ಸಿಂಗ್ ಜಬಲ್‌ಪುರದ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಲೋಕಾಯುಕ್ತರ ತಂಡ ಬಲೆ ಬೀಸಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಆದರೆ ಗಜೇಂದ್ರ ಸಿಂಗ್ ಲಂಚವಾಗಿ ಪಡೆದಿದ್ದ 500 ರೂಪಾಯಿಯ 9 ನೋಟುಗಳನ್ನು ನುಂಗಿದ್ದಾನೆ.


ಈ ವೇಳೆ 7 ಸದಸ್ಯರ ಲೋಕಾಯುಕ್ತ ತಂಡ ನೋಟುಗಳನ್ನು ತೆಗೆಯಲು ಪ್ರಯತ್ನಿಸಿತು. ಆದರೆ ಸಾಧ್ಯವಾಗದಿದ್ದಾಗ ಗಜೇಂದ್ರ ಸಿಂಗ್​ನನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದರು. ನಂತರ ಹಣವನ್ನು ವಾಪಸ್​ ತೆಗೆಯಲಾಯಿತು. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅಧಿಕಾರಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ.ಈ ಸಂಬಂಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಗಜೇಂದ್ರ ಸಿಂಗ್​ನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ



Leave a Comment: