ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

ಸುದ್ದಿಗಳು News

Posted by vidyamaana on 2024-06-30 19:31:43 |

Share: | | | | |


ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

ಕೋಟ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್‍ತಿ (97) ವಯೋಸಹಜ ಅಸೌಖ್ಯದಿಂದ

ಜೂ.30ರಂದು ನಿಧನ ಹೊಂದಿದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ

 Share: | | | | |


ಮೂಡುಬಿದಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ; ವಿದ್ಯಾರ್ಥಿನಿ ಕೇರಳದಲ್ಲಿ ಮದುವೆಯಾಗಿ ಪತ್ತೆ

Posted by Vidyamaana on 2024-02-26 16:07:51 |

Share: | | | | |


ಮೂಡುಬಿದಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ; ವಿದ್ಯಾರ್ಥಿನಿ ಕೇರಳದಲ್ಲಿ ಮದುವೆಯಾಗಿ ಪತ್ತೆ

ಮೂಡುಬಿದಿರೆ: ಮೂಡುಬಿದಿರೆಯ ಖಾಸಗಿ ಕಾಲೇಜಿನ ಬಿ.ಪಿ.ಟಿ ಪ್ರಥಮ ವರ್ಷದ ವಿದ್ಯಾರ್ಥಿನಿ ಆದಿರಾ ಎಂಬಾಕೆಯು ಫೆ. 23 ರಿಂದ ನಾಪತ್ತೆಯಾಗಿದ್ದು, ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಾಪತ್ತೆಯಾದ ವಿದ್ಯಾರ್ಥಿನಿಯು ಮೂಲತಃ ಉಡುಪಿ ಜಿಲ್ಲೆ ಕೊಲ್ಲೂರಿನವಳಾಗಿರುವ ಆದಿರಾ. ಈಕೆ ಮೂಡುಬಿದಿರೆಯ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದು, ವಿದ್ಯಾಗಿರಿಯಲ್ಲಿರುವ ಶಾಂಭವಿ ಹಾಸ್ಟೆಲ್ ನ ಸಿ. ವಿಭಾಗದಲ್ಲಿ ವಾಸ್ತವ್ಯವಿದ್ದಳು.

ಈಕೆಯು ಕಾಲೇಜಿನ ಬಕ್ಸ್ ನಲ್ಲಿ ಇತರ ವಿದ್ಯಾರ್ಥಿಗಳೊಂದಿಗೆ ಫೆಬ್ರವರಿ 23 ಶುಕ್ರವಾರದಂದು ಬೆಳಿಗ್ಗೆ 7-45 ಕ್ಕೆ ಹಾಸ್ಟೆಲ್ ನಿಂದ ಬಂದು ಮೂಡುಬಿದಿರೆ ಕನ್ನಡಭವನದ ಬಳಿ ಇಳಿದು ಹೋದಾಕೆ ಕಾಲೇಜಿಗೂ ಹೋಗದೆ, ಹಾಸ್ಟೆಲ್ ಗೂ ಹೋಗದೆ, ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳು.ಇದೀಗ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಎಂಬಂತೆ ಆದಿರಾ ಕೇರಳದಲ್ಲಿ ಮದುವೆಯಾಗಿ ಪತ್ತೆಯಾಗಿದ್ದಾಳೆ. ಈಕೆ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು ಕೇರಳಕ್ಕೆ ತೆರಳಿ ಮದುವೆಯಾಗುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ ಎಂದು ತಿಳಿದು ಬಂದಿದೆ.

ಪರ್ಬ ಪರ್ಬ ಎಲ್ಲಾಂಜಿ ಐತಾರ ಬಂಟರ ಭವನೊಡ್

Posted by Vidyamaana on 2023-07-21 02:09:52 |

Share: | | | | |


ಪರ್ಬ  ಪರ್ಬ ಎಲ್ಲಾಂಜಿ ಐತಾರ ಬಂಟರ ಭವನೊಡ್

ಪುತ್ತೂರು: ಯುವ ಬಂಟರ ಸಂಘ ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ಯುವ ಬ೦ಟರ ದಿನಾಚರಣೆಯ ಪ್ರಯುಕ್ತ ಜು. 23 ರಂದು ತುಳುನಾಡ ಬ೦ಟೆರೆ ಪರ್ಬ-2023 ಎನ್ನುವ ವಿಶಿಷ್ಟ ಸಾಂಸ್ಕೃತಿಕ ಸ್ಪರ್ಧೆಗಳು ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ ಎಂದು ಯುವ ಬಂಟರ ಸಂಘದ ಅಧ್ಯಕ್ಷ ಶಶಿರಾಜ್‌ ರೈ ಮುಂಡಾಳೆಗುತ್ತುರವರು ತಿಳಿಸಿದ್ದಾರೆ. ತುಳುನಾಡ ಬಂಟೆರೆ ಪರ್ಬ ಕಾರ್ಯಕ್ರಮದಲ್ಲಿ ತುಳುನಾಡು ಮತ್ತು ಬಂಟ ಸಂಸ್ಕೃತಿಯ ಪ್ರದರ್ಶನಕ್ಕೆ ಮಾತ್ರ ಅವಕಾಶವನ್ನು ನೀಡಲಾಗಿದೆ. ಕಳೆದ ವರ್ಷ ನನ್ನ ಅವಧಿಯಲ್ಲಿ ಹಿರಿಯ ಬಂಟ ಚೇತನಗಳ ಸ್ಮರಣೆ ಮಾಡುವ ಬಂಟ ಸ್ಮೃತಿ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದೇವೆ. ಈ ಬಾರಿ, ಗಾಂಧಿವಾದಿಯಾಗಿ ಇತ್ತೂರಿನ ಅಭಿವೃದ್ಧಿಗೆ ಬಹಳಷ್ಟು ಕೊಡುಗೆಯನ್ನು ನೀಡಿರುವ ನಿವೃತ್ತ ತಹಶೀಲ್ದಾರ್ ಚಿಲ್ಲೆತ್ತಾರು ಕೋಚಣ್ಣ ರೈ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ರಥವನ್ನು ಸಮರ್ಪಿಸಿದ ಜಯಕರ್ನಾಟಕ ಸಂಸ್ಥಾಪಕ ಎನ್. ಮುತ್ತಪ್ಪ ರೈ ಹಾಗೂ ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾಗಿ ಹಲವಾರು ಬಂಟರ ಅಭಿವೃದ್ಧಿಗೆ ಸಹಕಾರಿಯಾಗಿದ್ದ ಡಾ. ಮುಂಡಾಳೆಗುತ್ತು ತಿಮ್ಮಪ್ಪ ರೈರವರುಗಳ ಸ್ಮೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಸವಣೂರು ವಿಶ್ವಜಿತ್ ಶೆಟ್ಟಿಯವರು ಬ೦ಟ ಸಮಾಜದ ಪರವಾಗಿ ಗೌರವ ಸ್ವೀಕರಿಸಲಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆ:

ಕಾರ್ಯಕ್ರಮವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್‌ ಕುಮಾರ್ ರೈ ಮಾಲಾಡಿರವರು ಉದ್ಘಾಟಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ, ಮುಂಬಯಿ ಹೇರಂಭಾ ಗ್ರೂಪ್‌ನ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, ಇಂಟರ್‌ನ್ಯಾಶನಲ್ ಸಿವಿಲ್ ಸರ್ವೆ೦ಟ್ ನಿತ್ಯಾನಂದ ಶೆಟ್ಟಿ,ಮುಂಬಯಿ ನಿವೃತ್ತ ಪೊಲೀಸ್ ಡೆಟಿ ಕಮಿಷನರ್ ಶಾರ್ಪ್‌ ಶೂಟರ್ ಖ್ಯಾತಿಯ ಪ್ರಕಾಶ್ ಭಂಡಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಯುಕ್ತ ವಾಣಿ ಎಸ್ ಆಳ್ವ, ಉದ್ಯಮಿಗಳಾದ ಗುಣರಂಜನ್ ಶೆಟ್ಟಿ, ಪ್ರಕಾಶ್ ರೈ ದೇರ್ಲ, ಮಾಜಿ ಶಾಸಕರಾದ ಶಕುಂತಳಾ ಟಿ.ಶೆಟ್ಟಿ, ಮಲ್ಲಿಕಾ ಪ್ರಸಾದ್‌ ಸಹಿತ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಜೊತೆಯಾಗಲಿದ್ದಾರೆ.

ಈ ಕಾರ್ಯಕ್ರಮವು ಒಂದು ಈವೆಂಟ್ ರೀತಿಯಲ್ಲಿ ನಡೆಯಲಿದ್ದು, ಸಭಾ ಕಾರ್ಯಕ್ರಮವು ಚಿಕ್ಕದಾಗಿ ಚೊಕ್ಕದಾಗಿ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಖ್ಯಾತ ನಿರೂಪಕ ನಿತೇಶ್ ಎಕ್ಕಾರುರವರು ಕಾರ್ಯಕ್ರಮದ ಮುಖ್ಯ ನಿರೂಪಕರಾಗಿರುತ್ತಾರೆ ಎಂದು ಶಶಿರಾಜ್ ರೈ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಸಿನಿಮಾ ತಾರೆಯರು:

          ಕಾರ್ಯಕ್ರಮದ ಮಧ್ಯೆ ನಮ್ಮನ್ನು ರಂಜಿಸಲು ನಮ್ಮೂರಿನ ಬಂಟಿ ತಾರೆಯರಾದ ವಿಜಯ್‌ ಕುಮಾರ್ ಕೊಡಿಯಾಲ್‌ಬೈಲ್‌, ರೂಪೇಶ್ ಶೆಟ್ಟಿ, ರಚನಾ ಶೆಟ್ಟಿ, ಯಶ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಸುಂದರ ರೈ ಮಂದಾರ, ಗಾಯಕ ನಿಶಾನ್ ರೈ ಮಠಂತಬೆಟ್ಟು, ಸಂಗೀತ ನಿರ್ದೇಶಕ ಪ್ರಸಾದ್, ಪ್ರೋ ಕಬಡ್ಡಿ ಆಟಗಾರ ಪ್ರಶಾಂತ್ ರೈ ಕೈಕಾರ ಸೇರಿದಂತೆ ಹಲವಾರು ಮಂದಿ ಸಾಧಕರು ಭಾಗವಹಿಸಲಿದ್ದಾರೆ ಎಂದು ಶಶಿರಾಜ್ ರೈ ಮುಂಡಾಳೆಗುತ್ತು ತಿಳಿಸಿದರು.

ಕಾರ್ಯಕ್ರಮದ ಸಂಚಾಲಕರುಗಳಾದ ಹರ್ಷಕುಮಾರ್ ರೈ ಮಾಡಾವು, ಭಾಗ್ಯಶ್ ರೈ ಕೆಯ್ಯೂರು ತಾಲೂಕು ಯುವ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ರಂಜಿನಿ ಶೆಟ್ಟಿ, ಕೋಶಾಧಿಕಾರಿ ಅಶೋಕ್ ಶೆಟ್ಟಿ ಕೆ.ಸಿ., ಉಪಾಧ್ಯಕ್ಷ ಗಣೇಶ್‌ ಶೆಟ್ಟಿ ನೆಲ್ಲಿಕಟ್ಟೆ, ರವಿಪ್ರಸಾದ್ ಶೆಟ್ಟಿ ಬನ್ನೂರು, ವಿದ್ಯಾರ್ಥಿ ಬಂಟರ ಸಂಘದ ಅಧ್ಯಕ್ಷ ಪವನ್‌ ಶೆಟ್ಟಿ ಕಂಬಳತಡ್ಡ ಪ್ರತಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

       ತುಳುನಾಡ ಬಂಟೆರೆ ಪರ್ಬ ಕಾರ್ಯಕ್ರಮ ವೈಶಿಷ್ಟ್ಯಪೂರ್ಣವಾದ ಕಾರ್ಯಕ್ರಮವಾಗಿ ಮೂಡಿಬರಲಿದೆ. ಸುಮಾರು 3 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ. ಮಧ್ಯಾಹ್ನದ ಭೋಜನದ ವ್ಯವಸ್ಥೆ ಮುತ್ತಪ್ಪ ರೈಯವರ ಕುಟುಂಬಸ್ಥರು ಮತ್ತು ಮನೆಯವರಿಂದ ನಡೆಯಲಿದೆ. ಬೆಳಿಗ್ಗೆ 9 ರಿಂದ ಸಂಜೆ 6 ರತನಕ ನಿರಂತರವಾಗಿ ನಡೆಯುವ ಕಾರ್ಯಕ್ರಮದಲ್ಲಿ ಬಂಟ ಬಾಂಧವರು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿ ಪ್ರೋತ್ಸಾಹವನ್ನು ನೀಡಬೇಕಾಗಿ ವಿನಂತಿ, ಕಾರ್ಯಕ್ರಮವು ಬಂಟರ ಯಾನೆ ನಾಡವರ ಮಾತೃಸಂಘ, ಪುತ್ತೂರು ತಾಲೂಕು ಸಮಿತಿ, ತಾಲೂಕು ಬಂಟರ, ಮಹಿಳಾ ಹಾಗೂ ವಿದ್ಯಾರ್ಥಿ ಬಂಟರ ಸಂಘದ ಸಹಕಾರದಲ್ಲಿ ನಡೆಯಲಿದೆ. ಯುವ ಬಂಟರ ಸಂಘದ ಆಶ್ರಯದಲ್ಲಿ ಪ್ರತಿ ವರ್ಷ ನಡೆಯುವ ಗಣಹೋಮ, ಶ್ರೀ ಸತ್ಯ ನಾರಾಯಣ ಪೂಜೆಯು ಜು. 22 ರಂದು ಪುತ್ತೂರು ಬಂಟರ ಭವನದಲ್ಲಿ ಬೆಳಿಗ್ಗೆ ನಡೆಯಲಿದೆ.

ಶಶಿರಾಜ್ ರೈ ಮುಂಡಾಳಗುತ್ತು-ಅಧ್ಯಕ್ಷರು ತಾಲೂಕು ಯುವ ಬಂಟರ ಸಂಘ ಪುತ್ತೂರು.

ಸುರತ್ಕಲ್: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಫಾಝಿಲ್ ಸಹೋದರ ಆದಿಲ್ ಗೆ ಹಲ್ಲೆ.

Posted by Vidyamaana on 2023-02-08 16:23:20 |

Share: | | | | |


ಸುರತ್ಕಲ್: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಫಾಝಿಲ್ ಸಹೋದರ  ಆದಿಲ್ ಗೆ ಹಲ್ಲೆ.

ಸುರತ್ಕಲ್: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಫಾಝಿಲ್ ಅವರ ಸಹೋದರ ಆದಿಲ್ ಎಂಬವರಿಗೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಕಾಟಿಪಳ್ಳದ ಗಣೇಶ್ ಪುರ ಎಂಬಲ್ಲಿ ನಡೆದಿದೆ.

ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿದ್ದಾರೆ.

ಭಾರೀ ಮಳೆ ಹಿನ್ನಲೆ : ನಾಳೆ (ಜೂ. 27) ದ.ಕ. ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

Posted by Vidyamaana on 2024-06-26 19:19:30 |

Share: | | | | |


ಭಾರೀ ಮಳೆ ಹಿನ್ನಲೆ : ನಾಳೆ (ಜೂ. 27) ದ.ಕ. ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

ಮಂಗಳೂರು: ಜೂನ್ 27ರಂದು ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ನಾಳೆ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇದರ ಪ್ರಕಟನೆ ಹೀಗಿದೆ:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ.

ಬಿಜೆಪಿ ದ.ಕ. ಜಿಲ್ಲಾ ಮಹಿಳಾ ಮೋರ್ಚಾ ಸಮಿತಿ ಪದಾಧಿಕಾರಿಗಳ ನೇಮಕ : ಕಾರ್ಯದರ್ಶಿಯಾಗಿ ಪುತ್ತೂರಿನ ಯಶಸ್ವಿನಿ ಶಾಸ್ತ್ರಿ

Posted by Vidyamaana on 2024-02-28 12:22:37 |

Share: | | | | |


ಬಿಜೆಪಿ ದ.ಕ. ಜಿಲ್ಲಾ ಮಹಿಳಾ ಮೋರ್ಚಾ ಸಮಿತಿ ಪದಾಧಿಕಾರಿಗಳ ನೇಮಕ : ಕಾರ್ಯದರ್ಶಿಯಾಗಿ ಪುತ್ತೂರಿನ ಯಶಸ್ವಿನಿ ಶಾಸ್ತ್ರಿ

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಮಹಿಳಾ ಮೋರ್ಚಾ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಆದೇಶಿಸಲಾಗಿದೆ.


ಅಧ್ಯಕ್ಷರಾಗಿ ಡಾ. ಮಂಜುಳಾ ಎ ರಾವ್, ಕಾರ್ಯದರ್ಶಿಯಾಗಿ ಪುತ್ತೂರಿನ ಯಶಸ್ವಿನಿ ಶಾಸ್ತ್ರಿ ಹಾಗೂ ಇತರ ವಿಭಾಗಗಳಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.


ಜಿಲ್ಲಾ ಮಹಿಳಾ ಮೋರ್ಚಾ ಸಮಿತಿ ವಿವರ..:

ಹೊಸ ಡ್ರೆಸ್ ಧರಿಸಲು ಸಂಸತ್ತಿನ ಭದ್ರತಾ ಸಿಬ್ಬಂದಿಗಳು ನಕಾರ ಕಾರಣವೇನು ಗೊತ್ತಾ

Posted by Vidyamaana on 2023-09-21 09:49:36 |

Share: | | | | |


ಹೊಸ ಡ್ರೆಸ್ ಧರಿಸಲು ಸಂಸತ್ತಿನ ಭದ್ರತಾ ಸಿಬ್ಬಂದಿಗಳು ನಕಾರ ಕಾರಣವೇನು ಗೊತ್ತಾ

ನವದೆಹಲಿ:ಹೊಸ ಸಂಸತ್ತಿನ ಕಟ್ಟಡಕ್ಕಾಗಿ ಸರ್ಕಾರ ತಂದ ಹೊಸ ಬಟ್ಟೆಗಳನ್ನು ಸಂಸತ್ತಿನ ಭದ್ರತಾ ವಿಭಾಗವು ಇನ್ನು ಮುಂದೆ ಧರಿಸುವುದಿಲ್ಲ, ಹಲವಾರು ಭದ್ರತಾ ಸಿಬ್ಬಂದಿಗಳು ಬಟ್ಟೆಗಳ ವಸ್ತುವು ಸಿಂಥೆಟಿಕ್ ಮತ್ತು ಶಾಖವನ್ನು ಉಂಟುಮಾಡುತ್ತದೆ ಎಂದು ದೂರಿದರು.ಬುಧವಾರ ಬೆಳಿಗ್ಗೆ ತುರ್ತು ಸಭೆಯ ನಂತರ, ಹಳೆಯ ನೇವಿ ಬ್ಲೂ ಸಫಾರಿ ಸೂಟ್‌ಗಳನ್ನು ಧರಿಸಲು ನಿರ್ಧಾರ ತೆಗೆದುಕೊಳ್ಳಲಾಯಿತು.ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿಯ ವಿನ್ಯಾಸಗಳೊಂದಿಗೆ ಟೇಬಲ್ ಆಫೀಸ್, ನೋಟಿಸ್ ಆಫೀಸ್ ಮತ್ತು ಪಾರ್ಲಿಮೆಂಟರಿ ರಿಪೋರ್ಟಿಂಗ್ ವಿಭಾಗಗಳಲ್ಲಿನ ಸಿಬ್ಬಂದಿ ಸದಸ್ಯರು ಮತ್ತು ಭದ್ರತಾ ಸಿಬ್ಬಂದಿಯ ಬಟ್ಟೆಗಳನ್ನು ಸರ್ಕಾರ ಬದಲಾಯಿಸಿದೆ. ಟೇಬಲ್, ನೋಟಿಸ್ ಮತ್ತು ಸಂಸದೀಯ ವರದಿ ವಿಭಾಗಗಳ ಅಧಿಕಾರಿಗಳ ಶರ್ಟ್‌ಗಳ ಮೇಲೆ ಕಮಲದ ಚಿತ್ರಗಳು ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿವೆ.


ಭದ್ರತಾ ಸಿಬ್ಬಂದಿಯ ಸದಸ್ಯರಿಗೆ ಅವರು ಧರಿಸಿದ್ದ ನೇವಿ ಬ್ಲೂ ಸಫಾರಿ ಸೂಟ್‌ಗಳ ಬದಲಿಗೆ ಮಿಲಿಟರಿ ಶೈಲಿಯ ಮರೆಮಾಚುವ ಉಡುಪುಗಳನ್ನು ನೀಡಲಾಯಿತು. ಆದಾಗ್ಯೂ, ಹಲವಾರು ಸಿಬ್ಬಂದಿಗಳಿಂದ ದೂರುಗಳ ನಂತರ, ಮುಂದಿನ ಸೂಚನೆಯವರೆಗೆ ಸಫಾರಿ ಸೂಟ್‌ಗಳಿಗೆ ಹಿಂತಿರುಗಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.


ಸೆಕ್ರೆಟರಿಯಟ್ ನೌಕರರು, ಮೊದಲು ಬಂಧಗಳಧರಿಸುತ್ತಾರೆ, ಈಗ ಮೆಜೆಂಟಾ ಬಣ್ಣದ ನೆಹರೂ ಜಾಕೆಟ್‌ಗಳು, ಕಮಲದ ಮೋಟಿಫ್‌ಗಳ ಕೆನೆ ಬಣ್ಣದ ಶರ್ಟ್‌ಗಳು ಮತ್ತು ಖಾಕಿ ಪ್ಯಾಂಟ್‌ಗಳನ್ನು ನೀಡಲಾಗುತ್ತದೆ. ಸದನದ ಮಹಡಿಯಲ್ಲಿದ್ದ ಮಾರ್ಷಲ್‌ಗಳಿಗೆ ಮಣಿಪುರಿ ಪೇಟಗಳನ್ನು ನೀಡಲಾಯಿತು.


ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡ ಬಳಿಕವೂ ಸಮವಸ್ತ್ರ ಬದಲಾವಣೆ ಬಗ್ಗೆ ಲೋಕಸಭೆಯ ಕೆಲ ಸದಸ್ಯರು ದೂರಿದರು ಎಂದು ಮೂಲಗಳು ತಿಳಿಸಿವೆ. "ಲೋಕಸಭೆಯ ಹಲವಾರು ಸದಸ್ಯರು ತಮ್ಮ ಆಸನ ವ್ಯವಸ್ಥೆಗಳ ಬಗ್ಗೆ ಆಕ್ಷೇಪಣೆಗಳನ್ನು ಎತ್ತಿದ್ದಾರೆ, ಏಕೆಂದರೆ ಕೆಲವರು ಮುಂಭಾಗಕ್ಕೆ ತೆರಳಿದರು ಮತ್ತು ಅನೇಕರು ಹಿಂದೆ ಸರಿಯಬೇಕಾಯಿತು" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಶುಕ್ರವಾರ ಮುಕ್ತಾಯಗೊಳ್ಳಲಿರುವ ಐದು ದಿನಗಳ ಅಧಿವೇಶನವು ಮಂಗಳವಾರ ಹೊಸ ಕಟ್ಟಡಕ್ಕೆ ಪರಿವರ್ತನೆಯನ್ನು ಕಂಡಿದೆ. ಕೆಲವು ಕಾಮಗಾರಿಗಳು ಇನ್ನೂ ಹಳೆಯ ಕಟ್ಟಡದ ಹಿನ್ನಲೆಯಲ್ಲಿ ಬಾಕಿ ಇವೆ ಎಂದು ಸಚಿವರೊಬ್ಬರ ಸಿಬ್ಬಂದಿ ತಿಳಿಸಿದರು



Leave a Comment: