ಎಸ್ ಪಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

ಸುದ್ದಿಗಳು News

Posted by vidyamaana on 2024-07-01 12:44:53 |

Share: | | | | |


ಎಸ್ ಪಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

ಹಾಸನ: ಪೊಲೀಸ್‌ ಕಾನ್‌ಸ್ಟೇಬಲ್‌ (Police Constable) ಒಬ್ಬ ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು (Stabbed) ಕೊಂದುಹಾಕಿದ (Murder Case) ಘಟನೆ ಹಾಸನದಲ್ಲಿ ನಡೆದಿದೆ.ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್‌ಸ್ಟೇಬಲ್‌, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ.

ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಪೊಲೀಸ್ ಗಂಡನ ವಿರುದ್ಧ ದೂರು ನೀಡಲೆಂದು ಪತ್ನಿ ಮಮತಾ(37) ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ್ದರು. ಇದೇ ವೇಳೆ, ಹಿಂಬಾಲಿಸಿ ಬಂದಿದ್ದ ಲೋಕನಾಥ್ ಹಾಸನ ಎಸ್ಪಿ ಕಚೇರಿ ಎದುರಲ್ಲೇ ಪತ್ನಿಯ ಎದೆಗೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ.‌

ಮಹಿಳೆಯನ್ನು ಕೂಡಲೇ ಪೊಲೀಸರು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾಳೆ.‌ ಆರೋಪಿ ಪತಿ ಲೋಕನಾಥ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 Share: | | | | |


ಮಂಜನಾಡಿ ಯುವಕನಿಗೆ ಒಲಿದ ಕೇರಳದ 25 ಕೋಟಿ ಲಾಟರಿ!

Posted by Vidyamaana on 2023-09-22 12:30:15 |

Share: | | | | |


ಮಂಜನಾಡಿ ಯುವಕನಿಗೆ ಒಲಿದ ಕೇರಳದ 25 ಕೋಟಿ ಲಾಟರಿ!

ಉಳ್ಳಾಲ, ಸೆ.21: ಮಂಜನಾಡಿ ನಿವಾಸಿ ಯುವಕನಿಗೆ ಕೇರಳದ 25 ಕೋಟಿ ರೂ. ಲಾಟರಿ  ಒಲಿದಿರುವ ಸುದ್ದಿ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಯುವಕನಿಗೆ ಅಭಿನಂದನೆ ಹೇಳಿ ಸ್ನೇಹಿತರು ಫೋನ್ ಮಾಡಲೆತ್ನಿಸಿದಾಗ ಅಸಲಿಯತ್ತು ಹೊರಬಿದ್ದಿದೆ. 


ಮಂಜನಾಡಿ ಮೊಂಟೆಪದವು ನಿವಾಸಿ ಆಸೀಫ್ ಎಂಬವರಿಗೆ ಸೆ.20ರಂದು ಡ್ರಾಗೊಂಡಿದ್ದ 25 ಕೋಟಿ ಲಾಟರಿ ಒಲಿದಿರುವುದಾಗಿ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಹರಿದಾಡಿತ್ತು.‌ ಬೆಂಗಳೂರಿನಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿರುವ ಆಸೀಫ್, ನಿನ್ನೆ ಊರಿಗೆ ಕಾರಿನಲ್ಲಿ ಬರುತ್ತಿದ್ದಾಗ ಮೊಬೈಲ್ ಗೆ ಕರೆಗಳ ಮೇಲೆ ಕರೆಗಳು ಬರುತ್ತಲೇ ಇತ್ತು. ಕರೆ ಸ್ವೀಕರಿಸುತ್ತಿದ್ದಂತೆ ಶುಭಾಶಯಗಳ ಸರಮಾಲೆಯೇ ಬರುತಿತ್ತು. ಹೆಚ್ಚು ವಿಚಾರಿಸುತ್ತಿದ್ದಂತೆಯೇ, ರೂ. 25 ಕೋಟಿ ಲಾಟರಿ ಟಿಕೆಟ್ ಒಲಿದಿರುವುದಾಗಿ ಸ್ನೇಹಿತರೊಬ್ಬರು ತಿಳಿಸಿದ್ದಾರೆ‌. 


ಕೇರಳ ಲಾಟರಿಯನ್ನೇ ಖರೀದಿಸದ ನನಗೆ ಹೇಗೆ 25 ಕೋಟಿ ಒಲಿಯುವುದು ಎಂದು ತನ್ನಷ್ಟಕ್ಕೆ ಆಸಿಫ್ ಮೌನವಾಗಿದ್ದರು. ಹೀಗೆ ರಾತ್ರಿ ವರೆಗೂ ಕರೆಗಳು ನಿರಂತರವಾಗಿ ಬರುತ್ತಲೇ ಇದ್ದವು. ಇವರ ಮೌನದಿಂದಾಗಿ ಕೋಟಿ ಗೆದ್ದಿರುವುದು ಖಾತ್ರಿಯಾದ ಜನರು ಮೆಸೇಜ್, ಫೋನ್ ಮಾಡುತ್ತಲೇ ಇದ್ದರು. ನಿಜವಾಗಿಯೂ ಲಾಟರಿ ಒಲಿಯುತ್ತಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಿ ಪೊಲೀಸ್ ಠಾಣೆಯಲ್ಲಿ ಕೂರಬೇಕಿತ್ತು. 


ಈ ಕುರಿತು ಆಸೀಫ್ ಸ್ನೇಹಿತರಲ್ಲಿ ವಿಚಾರಿಸಿದಾಗ, ವಾಟ್ಸ್ ಆ್ಯಪ್ ಲಿಂಕ್ ಬರುತ್ತಿದ್ದು, ಅದನ್ನು ಬಳಸಿ ತಮ್ಮ ಸ್ನೇಹಿತರ ಭಾವಚಿತ್ರ ಹಾಗೂ ಹೆಸರನ್ನು ಹಾಕಿ ಮಜಾ ತೆಗೆದುಕೊಳ್ಳುವ ಪರಿಪಾಠ ನಡೆಯುತ್ತಿರುವುದು ತಿಳಿದುಬಂದಿದೆ. ಈ ಹಿಂದೆಯೂ ಇಂತಹದ್ದೇ ಪ್ರಕರಣ ನಡೆದಿರುವ ಬಗ್ಗೆ ಕೆಲವರು ಹೇಳುತ್ತಿದ್ದಾರೆ.

ಉಡುಪಿಯಲ್ಲಿ ಗ್ಯಾಂಗ್ ವಾರ್: ಇಬ್ಬರು ಆರೋಪಿಗಳ ಬಂಧನ

Posted by Vidyamaana on 2024-05-25 11:35:04 |

Share: | | | | |


ಉಡುಪಿಯಲ್ಲಿ ಗ್ಯಾಂಗ್ ವಾರ್: ಇಬ್ಬರು ಆರೋಪಿಗಳ ಬಂಧನ

ಉಡುಪಿ: ನಡು ರಸ್ತೆಯಲ್ಲಿ ಗ್ಯಾಂಗ್ ವಾರ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಕಾಪುವಿನ ಗರುಡ ಗ್ಯಾಂಗಿನ ಆಶಿಕ್ ಮತ್ತು ರಕೀಬ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಜ: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರವಾಗಿ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ

Posted by Vidyamaana on 2023-04-30 06:05:43 |

Share: | | | | |


 ಸಾಜ: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರವಾಗಿ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ

ಪುತ್ತೂರು: ವಿಧಾನ ಸಭಾ ಚುನಾವಣೆಯ ಪ್ರಯುಕ್ತ ಬಿಜೆಪಿ ಪಕ್ಷದ ಅಭ್ಯರ್ಥಿ ಆಶಾ ತಿಮ್ಮಪ್ಪ ರವರ ಪರವಾಗಿ ಸಾಜ ವಾರ್ಡ್ ನ ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರದ ವಠಾರ 105ರಲ್ಲಿ ಮಹಾ ಸಂಪರ್ಕ ಅಭಿಯಾನ ಮತ್ತು ಪ್ರಣಾಳಿಕೆ ನೀಡುವ ಕಾರ್ಯಕ್ರಮ ಕ್ಕೆ ಚಾಲನೆ ನೀಡಲಾಯಿತು.

ಮುಕ್ವೆ ನಿವಾಸಿ ಸಯ್ಯದ್ ಅಮೀರ್ ಸಾಹೇಬ್ ನಿಧನ

Posted by Vidyamaana on 2023-10-26 16:24:15 |

Share: | | | | |


ಮುಕ್ವೆ ನಿವಾಸಿ ಸಯ್ಯದ್ ಅಮೀರ್ ಸಾಹೇಬ್ ನಿಧನ

ಪುತ್ತೂರು: ಇಲ್ಲಿನ ಮುಕ್ವೆ ನಿವಾಸಿ ಸಯ್ಯದ್ ಅಮೀರುದ್ದಿನ್ (ಅಮೀರ್ ಸಾಹೇಬ್) ಅಲ್ಪ ಕಾಲದ ಸೌಖ್ಯದಿಂದ  ಇಂದು (ಅ.26) ನಿಧರಾಗಿದ್ದಾರೆ.

ಇವರು ಈ ಹಿಂದೆ ಹಲವಾರು ವರ್ಷಗಳ ಕಾಲ ಸೌದಿ ಅರೇಬಿಯಾದ ಅಲ್ - ಕೋಬರ್ ನಲ್ಲಿ ABT ಕಂಪನಿಯ ಚಾಲಕರಾಗಿ ಉದ್ಯೋಗದಲ್ಲಿದ್ದ ಹಾಗೂ ಈ ಹಿಂದೆ ಬೊಂಬಾಯಿಲ್ಲಿ ವಾಹನ ಚಾಲಕರಾಗಿದ್ದ ಹಾಗೂ ಬಳಿಕ ಊರಲ್ಲಿದ್ದು ಮುಕ್ವೆಯಲ್ಲಿ  ವಾಸವಾಗಿದ್ದರು ಮೃತರು ಪತ್ನಿ ಪುತ್ರ ಸಯ್ಯದ್ ಮನ್ನಾನ್ , ಪುತ್ರಿಯರು ಹಾಗೂ ಸಹೋದರರನ್ನು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ನಾಪತ್ತೆಯಾಗಿದ್ದ ವಿದ್ಯಾರ್ಥಿ ಅಂಕಿತ್ ನಾಯಕ್ ಬೆಂಗಳೂರಿನಲ್ಲಿ ಪತ್ತೆ

Posted by Vidyamaana on 2023-06-26 17:14:25 |

Share: | | | | |


ನಾಪತ್ತೆಯಾಗಿದ್ದ ವಿದ್ಯಾರ್ಥಿ ಅಂಕಿತ್ ನಾಯಕ್ ಬೆಂಗಳೂರಿನಲ್ಲಿ ಪತ್ತೆ

ವಿಟ್ಲ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಅಂಕಿತ್ ನಾಯಕ್ (17) ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಮಂಜೇಶ್ವರ ಠಾಣಾ ವ್ಯಾಪ್ತಿಯ ಅನಂತಗಿರಿ ನಿವಾಸಿ, ಅಡ್ಯನಡ್ಕ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್ ನಾಯಕ್ (17) ನಾಪತ್ತೆಯಾಗಿದ್ದ ಬಾಲಕ. ಭಾನುವಾರ ಸಂಜೆಯಿಂದ ಬಾಲಕ ನಾಪತ್ತೆಯಾಗಿದ್ದು, ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಬಾಲಕ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ನದಿಗೆ ಹಾರಿ ಆತ್ಮಹತ್ಯೆಗೈದ ಪುತ್ತೂರಿನ ವಿಘ್ನೇಶ್ ಕಾಮತ್

Posted by Vidyamaana on 2023-03-26 10:04:37 |

Share: | | | | |


ನದಿಗೆ ಹಾರಿ ಆತ್ಮಹತ್ಯೆಗೈದ ಪುತ್ತೂರಿನ  ವಿಘ್ನೇಶ್ ಕಾಮತ್

ಪುತ್ತೂರು: ಇಲ್ಲಿನ ಕೋರ್ಟ್ ರೋಡಿನಲ್ಲಿರುವ ಅಂಗಡಿಯೊಂದರ ಮಾಲಕ ದಿವಂಗತ ವಿಠಲ್ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್ (೩೨) ಅವರು ಭಾನುವಾರ ಮಧ್ಯಾಹ್ನ ನೇತ್ರಾವತಿ ನದಿಗೆ ಹಾರಿ ಆತಹತ್ಯೆಗೈದಿದ್ದಾರೆ.

ಕೆಮ್ಮಿಂಜೆ ನಿವಾಸಿಯಾಗಿರುವ ಇವರು, ಕೋರ್ಟ್ ರೋಡಿನಲ್ಲಿ ಜನರಲ್ ಸ್ಟೋರ್ ನಡೆಸುತ್ತಿದ್ದರು. ಕೆಲವು ದಿನಗಳ ಹಿಂದೆಯೂ ಒಮ್ಮೆ ಆತ್ಮಹತ್ಯೆಗೆ ಯತ್ನ ನಡೆಸಿದ್ದರು ಎಂದು ಹೇಳಲಾಗಿದೆ.ನೇತ್ರಾವತಿ ಸೇತುವೆಯ ಬಳಿ ದ್ವಿಚಕ್ರ ಜೂಪಿಟಾರ್ (KA21v3955) ಇದ್ದು ಯಾರು ಇಲ್ಲದ ಬಗ್ಗೆ ಸಂಶಯಗೊಂಡ ಸ್ಥಳೀಯ ಈಜುಗಾರರಾದ ಇಬ್ರಾಹಿಂ, ಮುಹಮ್ಮದ್ ಮಮ್ಮು ನೇತೃತ್ವದ ಯುಕವರ ತಂಡ ನೇತ್ರವತಿ ನದಿಯ ಅಸುಪಾಸು ಹುಡುಕಾಡಿದಾಗ  ನದಿಯಲ್ಲಿ ಮೃತದೇಹಯೊಂದು ನದಿಯಲ್ಲಿ ತೆಲುತೀತು ನಂತರ ಯುವಕರ ತಂಡ ನೀರಿಗೆ  ಇಳಿದು ನೀರಿನಿಂದ ಮೃತ ದೇಹವನ್ನು ಮೇಲಕ್ಕೆತ್ತುವಲ್ಲಿ ಸಫಲರಾಗಿದ್ದಾರು  ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಯ ಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.ಮೃತರು ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ.




Leave a Comment: