ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ಮಂಗಳೂರಿನಲ್ಲಿ ಭವಾನಿ ಬಸ್ ಮಾಲಕ ಪ್ರಜ್ವಲ್ ಆತ್ಮಹತ್ಯೆ

Posted by Vidyamaana on 2024-02-28 16:48:11 |

Share: | | | | |


ಮಂಗಳೂರಿನಲ್ಲಿ ಭವಾನಿ ಬಸ್ ಮಾಲಕ ಪ್ರಜ್ವಲ್ ಆತ್ಮಹತ್ಯೆ

ಮಂಗಳೂರು, ಫೆ.28: ಮಂಗಳೂರಿನಲ್ಲಿ ಖಾಸಗಿ ಬಸ್‌ ವ್ಯವಹಾರ ನೋಡಿಕೊಳ್ಳುತ್ತಿದ್ದ ನಗರದ ಬಜಾಲ್‌ ನಿವಾಸಿ ಪ್ರಜ್ವಲ್‌ ಡಿ. (35) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಇವರು ಭವಾನಿ ಬಸ್‌ನ ಮಾಲಕರಾಗಿದ್ದ ದಿ. ದೇವೇಂದ್ರ ಅವರ ಎರಡನೇ ಪುತ್ರ. ಮಂಗಳವಾರ ಬೆಳಗ್ಗೆ ಜೆ.ಎಂ. ರೋಡ್‌ನ‌ಲ್ಲಿರುವ ಸ್ವಗೃಹದಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.


ತನ್ನ ಸಹೋದರನ ಜೊತೆ ಸೇರಿ ಪ್ರಜ್ವಲ್‌ ಬಸ್ಸಿನ ವ್ಯವಹಾರ ನೋಡಿಕೊಳ್ಳುತ್ತಿದ್ದರು. ಬ್ಯಾಂಕ್ ಸಾಲ ಹೊಂದಿದ್ದ ಇವರಿಗೆ ಬ್ಯಾಂಕ್‌ನವರು ಕಿರುಕುಳ ನೀಡುತ್ತಿದ್ದರೆಂಬ ಆರೋಪ ಇದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರು ಪತ್ನಿ ಮತ್ತು ನಾಲ್ಕು ವರ್ಷದ ಮಗುವನ್ನು ಅಗಲಿದ್ದಾರೆ.

ಬಂಟ್ವಾಳ: ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಲಾರಿ

Posted by Vidyamaana on 2023-09-22 12:52:00 |

Share: | | | | |


ಬಂಟ್ವಾಳ: ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಲಾರಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಶುಕ್ರವಾರ ದಾಸಕೋಡಿ ಎಂಬಲ್ಲಿ ನಡೆದಿದೆ.


ಚಾಲಕ ಮತ್ತು ಕ್ಲೀನರ್ ಇಬ್ಬರು ಅಲ್ಪಸ್ವಲ್ಪ ಪ್ರಮಾಣದ ಗಾಯಗಳಿಂದ ಪಾರಾಗಿದ್ದಾರೆ.

ಬೆಂಗಳೂರು ಕಡೆಯಿಂದ ಮಂಗಳೂರಿಗೆ ಇದ್ದಿಲು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಚರಂಡಿಗೆ ಬಿದ್ದಿದ್ದು, ಈ ಘಟನೆ ಮುಂಜಾನೆ ಸುಮಾರು 4.30 ರವೇಳೆ ಸಂಭವಿಸಿದೆ ಎನ್ನಲಾಗಿದೆ.

ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 10

Posted by Vidyamaana on 2023-09-10 05:57:57 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 10

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಸೆ 10 ರಂದು


8.45 ಕ್ಕೆ ಪೆರುವಾಯಿ ಫಾತಿಮಾ ಮಾತೆಯ ದೇವಾಲಯ ಸಭಾಭವನ ಶಿಲ್ಯಾನಾಸ, ಸನ್ಮಾನ



11 ಗಂಟೆ ಮೂಡಬಿದ್ರೆ ದ ಕ ಜಿಲ್ಲಾ ಕಂಬಳ ಸಮಿತಿಯ ಮಹಾಸಭೆ


4.30 ಕ್ಕೆ ಮಹಿಷಮರ್ಧಿನಿ ದೇವಸ್ಥಾನ ಕೋಡಿಂಬಾಡಿಯಲ್ಲಿ ಸಭೆ


5.30 ಯುವ ಶಕ್ತಿ ಗೆಳೆಯರ ಬಳಗದ ವತಿಯಿಂದ ಕೋಡಿಂಬಾಡಿ ಶಾಲೆಯಲ್ಲಿ‌ ಅಷ್ಟಮಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ

ಏಳೇ ತಿಂಗಳ್ಡ್ ಶೆಟ್ಟರ್ ಗ್ ಕಾಂಗ್ರೆಸ್ ಬೊಡಿಂಡ್ - ಶೆಟ್ಟರ್ ಮೂಲಗ್ ಬತ್ತೆರ್..!

Posted by Vidyamaana on 2024-01-25 15:54:27 |

Share: | | | | |


ಏಳೇ ತಿಂಗಳ್ಡ್ ಶೆಟ್ಟರ್ ಗ್ ಕಾಂಗ್ರೆಸ್ ಬೊಡಿಂಡ್ - ಶೆಟ್ಟರ್ ಮೂಲಗ್ ಬತ್ತೆರ್..!

ನವದೆಹಲಿ, ಜ.25: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್ 

 ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa), ಬಿವೈ ವಿಜಯೇಂದ್ರ (BY Vijayendra), ಕೇಂದ್ರ ಸಚಿವ ಭುಪೇಂದ್ರ ಯಾದವ್​, ರಾಜೀವ್​ ಚಂದ್ರಶೇಖರ್​ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.ಪಕ್ಷ ಸೇರ್ಪಡೆಗೂ ಮುನ್ನ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ​ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದರು.


ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್


ಪಕ್ಷ ಸೇರ್ಪಡೆಗೂ ಮುನ್ನ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜೀನಾಮೆಗೂ ಮುನ್ನ ಶೆಟ್ಟರ್ ಅವರು ಹೊರಟ್ಟಿಗೆ ಕರೆ ಮಾಡಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದರು. ಈ ವೇಳೆ ಪತ್ರದ ಮೂಲಕ ಬೇಡ, ನೇರವಾಗಿ ಬಂದು ರಾಜೀನಾಮೆ ನೀಡುವಂತೆ ಸೂಚಿಸಿದ್ದರು.

ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ: ಶೆಟ್ಟರ್

ಪಕ್ಷ ಸೇರ್ಪಡೆ ನಂತರ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಶೆಟ್ಟರ್, ನಾನು ಪಕ್ಷಕ್ಕೆ ವಾಪಸಾಗಬೇಕೆಂದು ನಾಯಕರ ಅಪೇಕ್ಷೆ ಇತ್ತು. ಅಮಿತ್​ ಶಾ ಅವರು ಅತ್ಯಂತ ಗೌರವದಿಂದ ಬರಮಾಡಿಕೊಂಡರು. ನಾನು ಬಿಜೆಪಿ ಮರು ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸ ಆಗಿದೆ. ನಾನು ಪರಿಷತ್​ ಸ್ಥಾನಕ್ಕೆ ರಾಜೀನಾಮೆಯನ್ನೂ ಸಲ್ಲಿಸಿದ್ದೇನೆ. ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದೇನೆ. ಇ-ಮೇಲ್​ ಮೂಲಕ ರಾಜೀನಾಮೆಯನ್ನ ನೀಡಿದ್ದೇನೆ ಎಂದರು.


ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು. ನಾನು ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ. ಕಾಂಗ್ರೆಸ್​ನವರು ಕೂಡ ಒಳ್ಳೇ ಗೌರವ, ಸ್ಥಾನಮಾನ ನೀಡಿದ್ದರು. ಕಾಂಗ್ರೆಸ್​ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಮಂಗಳೂರು ಮಾದಕ ವಸ್ತು ಕೊಕೇನ್ ಪತ್ತೆ: ಇಬ್ಬರು ಆರೋಪಿಗಳ ಬಂಧನ

Posted by Vidyamaana on 2024-03-19 08:03:50 |

Share: | | | | |


ಮಂಗಳೂರು ಮಾದಕ ವಸ್ತು ಕೊಕೇನ್ ಪತ್ತೆ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು, ಮಾ.20: ಗೋವಾದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ ಕೊಕೇನ್ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ 35 ಗ್ರಾಂ ಕೊಕೇನ್ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಂಬ್ಲಮೊಗರು ಕೊಳಂಜಹಿಟ್ಟು ಸದಕತ್.ಯು ಯಾನೆ ಶಾನ್ ನವಾಝ್(31) ಮತ್ತು ಅಂಬ್ಲಮೊಗರು ಸೇನರಬೆಟ್ಟು ಅಶ್ಫಕ್ ಯಾನೆ ಅಶ್ಫಾ (25) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ವಶದಲ್ಲಿದ್ದ ದ್ವಿಚಕ್ರ ವಾಹನ ಮತ್ತು ಅದರಲ್ಲಿ ಸಾಗಾಟ ಮಾಡುತ್ತಿದ್ದ 2,72,000 ರೂ. ಮೌಲ್ಯದ 35 ಗ್ರಾಂ ನಿಷೇಧಿತ ಮಾದಕ ವಸ್ತು ಕೊಕೇನ್, 3 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪಕ, ನಗದು ರೂ. 5560 ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 4,00,000 ಆಗಿರುತ್ತದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಮಂಗಳೂರು ನಗರಕ್ಕೆ ಗೋವಾದಿಂದ ಮಾದಕ ವಸ್ತುವಾದ ಕೊಕೇನ್ ಅನ್ನು ಖರೀದಿಸಿಕೊಂಡು ಸಾಗಾಟ, ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್ ಶ್ಯಾಮ್ ಸುಂದರ್ ಎಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ ದ್ವಿಚಕ್ರ ವಾಹನದಲ್ಲಿ ಕೊಕೇನ್ ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪತ್ತೆ ಹಚ್ಚಿದರು.

ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ನವಾಝ್ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ಹಾಗೂ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್‌ಐ ಗಳಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ಹತ್ತೂರ ಒಡೆಯನ ಸಮಕ್ಷಮದಲ್ಲಿ ಸಂಪನ್ನಗೊಳ್ಳಲಿದೆ ಭಕ್ತಿ ಭಾವದ ಶ್ರೀನಿವಾಸ ಕಲ್ಯಾಣೋತ್ಸವ

Posted by Vidyamaana on 2023-12-21 06:27:24 |

Share: | | | | |


ಹತ್ತೂರ ಒಡೆಯನ ಸಮಕ್ಷಮದಲ್ಲಿ ಸಂಪನ್ನಗೊಳ್ಳಲಿದೆ ಭಕ್ತಿ ಭಾವದ ಶ್ರೀನಿವಾಸ ಕಲ್ಯಾಣೋತ್ಸವ

ಪುತ್ತೂರು : ಪುತ್ತಿಲ ಪರಿವಾರ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಆಶ್ರಯದಲ್ಲಿ ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಎದುರಿನ ದೇವರ ಮಾರು ಗದ್ದೆಯಲ್ಲಿ ಡಿ.24 ಮತ್ತು 25 ರಂದು ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಸನಾತನ ಸಮಾಗಮ ಕಾರ್ಯಕ್ರಮ ನಡೆಯುವುದು ಎಂದು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಮತ್ತು ಸ್ವಾಗತ ಸಮಿತಿಯ ಸಂಚಾಲಕ ಪ್ರಸನ್ನಕುಮಾರ್ ಮಾರ್ತ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.


ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಎದುರಿನ ಗದ್ದೆಯಲ್ಲಿ ಇದೇ ಮೊದಲ ಬಾರಿಗೆ  ಶ್ರೀನಿವಾಸ ಕಲ್ಯಾಣೋತ್ಸವ ನಡೆಯುವುದು. ಡಿ.24ರಂದು ಬೆಳಿಗ್ಗೆ 6.30ರಿಂದ ಭಜನಾ ಕಾರ್ಯಕ್ರಮ. ಸಂಜೆ 4ಗಂಟೆಗೆ ನಗರದ ಬೊಳುವಾರಿನಲ್ಲಿ ಶ್ರೀದೇವಿ,ಭೂದೇವಿ ಸಹಿತ ಶ್ರೀನಿವಾಸ ದೇವರನ್ನು ಭಕ್ತಿಪೂರ್ವಕ ಸ್ವಾಗತಿಸಿ, ಬಳಿಕ ಅಲ್ಲಿಂದ ಮಹಾಲಿಂಗೇಶ್ವರ ದೇವಳದ ಗದ್ದೆ ತನಕ ಪುಷ್ಪವೃಷ್ಠಿ, ವಿದ್ವಾಂಸರ ವೇದಪಠಣ,ಶಂಕನಾದ, ಚೆಂಡೆವಾದ್ಯಗಳ ಪೋಷದೊಂದಿಗೆ ಶ್ರೀ ದೇವರ ಭವ್ಯ ಶೋಭಾಯಾತ್ರೆ ನಡೆಯಲಿದೆ.

ಸಂಜೆ 5.30ಕ್ಕೆ ದ.ಕ.ಮತ್ತು ಉಡುಪಿ ಜಿಲ್ಲೆಯ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಸನಾತನ ಸಮಾಗಮ ಕಾರ್ಯಕ್ರಮ ನೆಡೆಯಲಿದೆ. ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ,ಎಡನೀರು ಮಠದ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ,ಆನೆಗುಂಡಿ ಮಹಾಸಂಸ್ಥಾನಂ ಸರಸ್ವತೀ ಪೀಠದ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ, ಚಿತ್ರಾಪುರ ಮಠದ ವಿದ್ಯೇಂದ್ರ ತೀರ್ಥ ಸ್ವಾಮೀಜಿ, ಮಂಗಳೂರು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ.ಧರ್ಮಪಾಲನಾಥ ಸ್ವಾಮೀಜಿ, ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ, ಅರೆಮಾದೇನಹಳ್ಳಿ ವಿಶ್ವಕರ್ಮ ಪೀಠದ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ, ಮಾಣಿಲ ಕ್ಷೇತ್ರದ ಮೋಹನದಾಸ ಪರಮಹಂಸ ಸ್ವಾಮೀಜಿ, ಕೇಮಾರು ಮಠದ ಈಶ ವಿಠಲದಾಸ ಸ್ವಾಮೀಜಿ, ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಕನ್ಯಾನ ಕಣಿಯೂರು ಕ್ಷೇತ್ರದ ಮಹಾಬಲ ಸ್ವಾಮೀಜಿ, ಕನ್ಯಾಡಿ ಮಠದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ,ವಿಟ್ಲ ಯೋಗೀಶ್ವರ ಮಠದ ರಾಜಗುರು ಯೋಗಿ ಶ್ರದ್ಧಾನಾಥ ಜೀ, ಕುಕ್ಕಾಜೆ ಕಾಳಿಕಾಂಬಾ ಆಂಜನೇಯ ಕ್ಷೇತ್ರದ ಕೃಷ್ಣ ಗುರೂಜಿ ಭಾಗವಹಿಸುವರು.  ಬಳಿಕ ರಾಜ್ಯದ ಪ್ರತಿಷ್ಠಿತ ತಂಡಗಳಿಂದ ಸಾಂಸ್ಕೃತಿ ಕಾರ್ಯಕ್ರಮ, ಅನ್ನಸಂತರ್ಪಣೆ ನಡೆಯುವುದು ಎಂದು ಅವರು ತಿಳಿಸಿದರು.


ಡಿ.25ರಂದು ಬೆಳಿಗ್ಗೆ 6ಗಂಟೆಗೆ ಸುಪ್ರಭಾತ ಪೂಜೆ ಆರಂಭಗೊಳ್ಳುವುದು.ಅಪರಾಹ್ನ ಗಂಟೆ 2ರಿಂದ ಭಜನೋತ್ಸವ ನಡೆಯಲಿದೆ.ಸಂಜೆ 6ಗಂಟೆಗೆ ವೈಭವದ ಕಲ್ಯಾಣೋತ್ಸವ, ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಸುಮಾರು 50 ಸಾವಿರ ಮಂದಿಗೆ ಲಡ್ಡು ಪ್ರಸಾದ ವಿತರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.


ಹೊರೆಕಾಣಿಕೆ ಸಮರ್ಪಣೆ

ಡಿ.23ರಂದು ಗ್ರಾಮ ಮಟ್ಟಗಳಲ್ಲಿ ಹೊರೆಕಾಣಿಕೆ ಸಂಗ್ರಹಿಸಿ, ಸಂಜೆ 5 ಗಂಟೆಗೆ ನಗರದ ದರ್ಬೆ ಯಿಂದ ಮಹಾಲಿಂಗೇಶ್ವರ ದೇವಳ ಗದ್ದೆ ತನಕ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದ ಸ್ವಾಗತ ಸಮಿತಿಯ ಸಂಚಾಲಕ ಪ್ರಸನ್ನಕುಮಾರ್ ಮಾರ್ತ ಅವರು ಕಾರ್ಯಕ್ರಮಕ್ಕೆ ಬೇಕಾಗುವ ದಿನಸಿ ಸಾಮಾಗ್ರಿಗಳನ್ನು ನೀಡಿ ಅನ್ನದಾನಕ್ಕೆ ಸಹಕರಿಸುವಂತೆ ವರ್ತಕರಲ್ಲಿ ಮನವಿ ಮಾಡಿಕೊಂಡರು.


ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್ ಬನ್ನೂರು, ಸ್ವಯಂ ಸೇವಕ ಸಮಿತಿಯ ಸಂಚಾಲಕ ಅನಿಲ್ ತೆಂಕಿಲ, ಪ್ರಚಾರ ಮತ್ತು ಮಾಧ್ಯಮ ಸಮಿತಿಯ ಸಂಚಾಲಕ ನವೀನ್ ರೈ ಪಂಜಳ, ಕಾರ್ಯದರ್ಶಿ ಪ್ರಜ್ವಲ್ ಘಾಟೆ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.



Leave a Comment: