Posted by vidyamaana on 2023-08-18 08:29:00 |
ಬೆಳ್ತಂಗಡಿ: ರೋಗಿಯೊಬ್ಬರನ್ನು ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.
ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
Posted by Vidyamaana on 2024-05-06 07:15:02 |
ಬಂಟ್ವಾಳ: ತಾಲ್ಲೂಕಿನ ನಾವೂರು ಎಂಬಲ್ಲಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಇಂದು ಸಂಜೆ ಮೃತಪಟ್ಟ ದುರಂತ ನಡೆದಿದೆ.
ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ಮರಿಯಂ ನಾಶಿಯಾ (14 ) ಮೃತ ಬಾಲಕಿಯರು. ಬಾಲಕಿಯರು ನಾವೂರು ಸಮೀಪದ ಮೈಂದಾಳದಲ್ಲಿ ಸಂಬಂಧಿಕರ ಮನೆಗೆ ಬಂದಿದ್ದರು. ಮನೆಯವರೊಂದಿಗೆ ಸಂಜೆ ಮಕ್ಕಳು ಸ್ಥಳೀಯ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ.
Posted by Vidyamaana on 2023-10-17 13:44:15 |
ಮಂಗಳೂರು : ಕ್ರಿಕೆಟ್ ವಿಶ್ವಕಪ್ ಮ್ಯಾಚ್ ಗಳು ನಡೆಯುತ್ತಿದ್ದರೆ ಮಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಹೆಚ್ಚಾಗಿ ನಡೆಯುತ್ತಿದ್ದು, ಇದೀಗ ಪೊಲೀಸರು ಬೆಟ್ಟಿಂಗ್ ದಂಧೆಯ ಬುಡಕ್ಕೆ ಕೈ ಹಾಕಿದ್ದಾರೆ. ಈಗಾಗಲೇ ಸತತ ಕಾರ್ಯಾಚರಣೆ ನಡೆಸುತ್ತಿರುವ ಮಂಗಳೂರು ಪೊಲೀಸರು ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿರುವವರನ್ನು ಕಂಬಿ ಹಿಂದೆ ನಿಲ್ಲಿಸುತ್ತಿದ್ದಾರೆ.ಇಂದು ಎರಡು ಪ್ರತ್ಯೇಕ ಪ್ರಕರಣದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿರುವ ಐವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮೊದಲ ಪ್ರಕರಣದಲ್ಲಿ ಮೂಡಬಿದರೆಯ ಮಾರ್ಪಾಡಿ ಗ್ರಾಮದ ಅಲಂಗಾರು ಎಂಬಲ್ಲಿರುವ ಎಸ್.ಐ ಸ್ಪೋರ್ಟ್ಸ್ ಅಂಗಡಿಯ ಮುಂಭಾಗದಲ್ಲಿ ನವೀದ್ ಎಂಬಾತನು ಪ್ರಸಾದ್ ಮತ್ತು ಉಮೇಶ್ ಎಂಬುವರಿಂದ ಹಣವನ್ನು ಪಡೆದು Comfort Zone 247 ಎಂಬ ಮೋಬೈಲ್ ವೆಬ್ ಸೈಟ್ ನಲ್ಲಿ ಕ್ರಿಕೇಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ನವೀದ್ ಎಂಬಾತನನ್ನು ಹಿಡಿದು ವಿಚಾರಿಸಿದಾಗ ಈ ದಿನ ನಡೆಯುತ್ತಿದ್ದ ಶ್ರೀಲಂಕ ಮತ್ತು ಆಸ್ಪ್ರೇಲಿಯಾ ಕ್ರಿಕೆಟ್ ಮ್ಯಾಚ್ ನಲ್ಲಿ ಬೆಟ್ಟಿಂಗ್ ನಲ್ಲಿ ತೊಡಗಿದ್ದಾಗಿ ತಿಳಿಸಿದ್ದಾನೆ. ಬಂಧಿತ ಆರೋಪಿಗಳನ್ನು ಮೂಡಬಿದಿರೆ ನವೀದ್(30), ಉಮೇಶ್ (40), ಪ್ರಸಾದ್ ದೇವಾಡಿಗ(35) ಎಂದು ಗುರುತಿಸಲಾಗಿದೆ.ಮತ್ತೊಂದು ಪ್ರಕರಣ ಮೂಡಬಿದರೆಯ ಮಾರ್ಪಾಡಿ ಗ್ರಾಮದ ಒಂಟಿಕಟ್ಟೆ ಎಂಬಲ್ಲಿರುವ ಕಡಲಕೆರೆ ಪಾರ್ಕ್ ನಲ್ಲಿ ಸುಖೇಶ್ ಆಚಾರ್ಯ ಎಂಬಾತನು ಪುರಂದರ್ ಎಂಬಾತನಿಂದ ಹಣವನ್ನು ಪಡೆದು allpaanel.com/m/home ಎಂಬ ಮೋಬೈಲ್ ವೆಬ್ ಸೈಟ್ ನಲ್ಲಿ ಕ್ರಿಕೇಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಸುಖೇಶ್ ಆಚಾರ್ಯ ಎಂಬಾತನನ್ನು ಹಿಡಿದು ವಿಚಾರಣೆ ನಡೆಸಿದಾಗ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿರುವುದಾಗಿ ತಿಳಿಸಿದ್ದಾನೆ. ಬಂಧಿತರ ಆರೋಪಿಗಳನ್ನು ಮೂಡಬಿದಿರೆ ನಿವಾಸಿಗಳಾಗಿ ಸುಖೇಶ್ ಆಚಾರ್ಯ ಮತ್ತು ಪುರಂದರ ಕುಲಾಲ್ ಎಂದು ಗುರುತಿಸಲಾಗಿದೆ.
ಎರಡೂ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ.
Posted by Vidyamaana on 2024-04-07 19:26:58 |
ಬೆಂಗಳೂರು : ನೇಣು ಬಿಗಿದುಕೊಂಡು ರೌಡಿ ಶೀಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ದಿನ್ನೂರಿನಲ್ಲಿ ನಡೆದಿದೆ. ಅರುಣ್ ಅಲಿಯಾಸ್ ಚಿನ್ನಿ(28) ಆತ್ಮಹತ್ಯೆಗೆ ಶರಣಾದ ರೌಡಿ ಶೀಟರ್ ಆಗಿದ್ದು, 2019ರಲ್ಲಿ ಲೋಕನಾಥ್ ಎಂಬಾತನ ಕೊಲೆ ಪ್ರಕರಣದಲ್ಲಿ ಅರುಣ್ ಜೈಲುಪಾಲಾಗಿದ್ದ.ನಂತರ ಜಾಮೀನಿನ ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದ. ಇತ್ತೀಚಿಗೆ ಅರುಣ್ ಮಾನಸಿಕ ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ.
Posted by Vidyamaana on 2023-12-07 04:29:12 |
ಬೆಂಗಳೂರು: ಆನೇಕಲ್ ತಾಲೂಕಿನ ಹೆಬ್ಬಗೋಡಿಯ
ಎಸ್ಎಫ್ಎಸ್ ಶಾಲೆಯ ವಿದ್ಯಾರ್ಥಿನಿ ಬಾಸ್ಕೆಟ್ ಬಾಲ್ ಆಟವಾಡುವಾಗ ದಿಢೀರನೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ಬಾಲಕಿಯ ಹೆಸರು ಚಾರ್ವಿ (16). ಮಧ್ಯಾಹ್ನ ಆಟವಾಡುತ್ತಿದ್ದಾಗ ಕುಸಿದು ಬಿದ್ದು ಬಾಲಕಿಗೆ ಮೂಗಿನಿಂದ ರಕ್ತಸ್ರಾವವಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆದರೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾಳೆ. ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Posted by Vidyamaana on 2024-04-08 20:29:36 |
ಕರೀಂನಗರ: ತಂದೆ ತಾಯಿಗೆ (Parents) ಮಕ್ಕಳ ಮೇಲೆ ಹಲವು ನಿರೀಕ್ಷೆಗಳಿರುತ್ತವೆ. ಅವರಿಗೆ ಒಳ್ಳೆಯ ವಿದ್ಯಾಭ್ಯಾಸ (Education) ಕೊಡಿಸಬೇಕು, ವಿದ್ಯಾವಂತರನ್ನಾಗಿ ಮಾಡಿ ಒಳ್ಳೆ ಕೆಲಸ ಸಿಗುವಂತೆ ಮಾಡಬೇಕೆನ್ನುವ ಕನಸಿರುತ್ತವೆ. ಆದರೆ ಇತ್ತೀಚಿನ ದಿನಗಳಲ್ಲಿ ಮಕ್ಕಳು ತಂದೆ ತಾಯಿ ಪ್ರೀತಿಯನ್ನೇ (Love) ಕಡೆಗಣಿಸಿ ತಾವೂ ಪ್ರೀತಿಸಿದ ಹುಡುಗಿ, ಹುಡುಗರ ಜೊತೆ ಹೋಗಿ ಮದುವೆಯಾಗುತ್ತಿದ್ದಾರೆ.ಆದರೆ ಇದರಿಂದ ಪೋಷಕರು ಅನುಭವಿಸುವ ಮಾನಸಿಕ ಯಾತನೆ ಹೇಳತೀರದು. ಇಂತಹದ್ದೇ ಘಟನೆ ತೆಲಂಗಾಣದ (Telangana) ಸಿರಿಸಿಲ್ಲದಲ್ಲಿ ನಡೆದಿದೆ.
ಪ್ರೀತಿಸಿದ ಯುವಕ ಜೊತೆ ಪರಾರಿಯಾದ ಯುವತಿ
ರಾಜಣ್ಣ ಸಿರಿಸಿಲ್ಲ ನಿವಾಸಿ ಮುರಳಿ ಎಂಬಾತನ ಮಗಳು ಬಿ.ಟೆಕ್ ಓದುತ್ತಿದ್ದಳು. ಮುರಳಿ ತನ್ನ ಮಗಳನ್ನ ಕಷ್ಟಪಟ್ಟು ಸುತ್ತಿದ್ದರು. ಆದರೆ ಮನೆಯವರಿಗೆ ದ್ರೋಹ ಮಾಡಿ ಆಕೆ ತಾನು ಪ್ರೀತಿಸಿದ ಯುವಕನನ್ನು ಮದುವೆಯಾಗಿ ದೂರ ಹೋಗಿದ್ದಾಳೆ. ಈ ಮನನೊಂದ ಪೋಷಕರು ತನ್ನ ಮಗಳು ಸತ್ತಿದ್ದಾಳೆಂದು ಶ್ರದ್ದಾಂಜಲಿ ಫ್ಲೆಕ್ಸಿ ಮಾಡಿ ಮನೆಯ ಮುಂಭಾಗದ ಗೋಡೆಯ ಮೇಲೆ ಹಾಕಿದ್ದಾರೆ.