ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಪತ್ನಿ ಶೀಲ ಶಂಕಿಸಿದ ಪತಿ; ಎದೆಗೆ ಇರಿದು ಕೊಲೆ ಮಾಡಿದ ಪತ್ನಿ

Posted by Vidyamaana on 2023-12-21 16:33:16 |

Share: | | | | |


ಪತ್ನಿ ಶೀಲ ಶಂಕಿಸಿದ ಪತಿ; ಎದೆಗೆ ಇರಿದು ಕೊಲೆ ಮಾಡಿದ ಪತ್ನಿ

ಬೆಂಗಳೂರು ; ರಾತ್ರಿ ವೇಳೆ ಫೋನ್‌ ನಲ್ಲಿ ಯಾರ ಜೊತೆಯೋ ಹರಟೆ ಹೊಡೆಯುತ್ತಿದ್ದ ಪತ್ನಿಯ ಬಗ್ಗೆ ಕುಡುಕ ಪತಿ ಅನುಮಾನ ಪಟ್ಟಿದ್ದಾನೆ. ಯಾರ ಜೊತೆಯೋ ನಿನಗೆ ಅನೈತಿಕ ಸಂಬಂಧ ಇದೆ ಎಂದು ಜಗಳ ತೆಗೆದಿದ್ದಾನೆ. ಈ ಜಗಳ ವಿಕೋಪಕ್ಕೆ ತಿರುಗಿ ರೋಸಿಹೋದ ಪತ್ನಿ, ಪತಿಯ ಎದೆಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾಳೆ.ಬೆಂಗಳೂರಿನ ಹುಳಿಮಾವಿನ ಕಾಲೇಜೊಂದರಲ್ಲಿ ಈ ಘಟನೆ ನಡೆದಿದೆ.


ಈ ಕಾಲೇಜಿನಲ್ಲಿ ದಂಪತಿ ಸೆಕ್ಯೂರಿಟಿ ಗಾರ್ಡ್‌ ಹಾಗೂ ಹೌಸ್‌ ಕೀಪಿಂಗ್‌ ಕೆಲಸ ಮಾಡುತ್ತಾರೆ. ನಿನ್ನೆ ಸಂಜೆ ಮನೆಯಿಂದ ಹೊರಹೋಗಿದ್ದ ಪತ್ನಿ ಉಮೇಶ್‌ ದಾಳಿ ಕಂಠಪೂರ್ತಿ ಕುಡಿದು ಮಧ್ಯರಾತ್ರಿ ಬಂದಿದ್ದ. ಈ ವೇಳೆ ಪತ್ನಿ ಮನಿಷಾ ದಾಮಿ ಮೊಬೈಲ್‌ನಲ್ಲಿ ಯಾರ ಜೊತೆಯೂ ಮಾತನಾಡುತ್ತಿದ್ದಳು. ಇದರಿಂದ ಅನುಮಾನಗೊಂಡು ಪತಿ ಉಮೇಶ್‌ ದಾಮಿ ಜಗಳ ತೆಗೆದಿದ್ದಾನೆ.


ಆರೋಪಿ ಮನಿಷಾಳನ್ನು ಹುಳಿಮಾವು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ಧಾರೆ.

ನಮ್ಮ ಮೆಟ್ರೋಗೆ ಬಲಿಯಾದ ಯುವಕ ಯಾರು?

Posted by Vidyamaana on 2024-03-21 20:21:00 |

Share: | | | | |


ನಮ್ಮ ಮೆಟ್ರೋಗೆ ಬಲಿಯಾದ ಯುವಕ ಯಾರು?

ಬೆಂಗಳೂರು, (ಮಾರ್ಚ್ 21): ಇತ್ತೀಚೆಗೆ ನಮ್ಮ ಮೆಟ್ರೋ (Namma Metro )ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದೆ. ಈ ಹಿಂದೆ ಮೆಟ್ರೋ ಹಳಿಗೆ ಹಾರಿದ ಪ್ರಕರಣಗಳು ನಡೆದಿದ್ದವು. ಆದ್ರೆ, ಯಾವುದೇ ಸಾವು-ನೋವು ಸಂಭವಿಸಿರಲಿಲ್ಲ. ಆದ್ರೆ, ಇಂದು (ಮಾರ್ಚ್ .21) ಮಧ್ಯಾಹ್ನ 2:10ರ ಸುಮಾರಿಗೆ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ (Athiguppe Metro) ರೈಲು ಬರುವಾಗ ಯುವಕ ಹಳಿಗೆ ಜಿಗಿದಿದ್ದಾನೆ. ಪರಿಣಾಮ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಿಂದ ಸುಮಾರು ಎಂಟು ಅಡಿ ದೂರದಲ್ಲಿ ಯುವಕನ ದೇಹವನ್ನು ರೈಲು ಎಳೆದೊಯ್ದಿದೆ. ಇದರಿಂದ ಯುವಕನ ದೇಹ ಎರಡು ತುಂಡಾಗಿದೆ. ಸದ್ಯ ಯುವಕನ ಮೃತದೇಹವನ್ನು ಹೊರಗೆ ತೆಗೆದು ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡ ಯುವಕನನನ್ನು ಧ್ರುವ್ ಟಕ್ಕರ್ ಎಂದು ಗುರುತಿಸಲಾಗಿದ್ದು, ಆತನ ಕುಟುಂಬಕ್ಕೆ ಮತ್ತು ಕಾಲೇಜಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ.ಮಟ್ರೋ ರೈಲು ಬರುವ ಹಲವು ನಿಮಿಷಗಳ ಕಾಲ ಮೊದಲೇ ಧ್ರುವ್ ಟಕ್ಕರ್ ಅತ್ತಿಗುಪ್ಪೆ ನಿಲ್ದಾಣಕ್ಕೆ ಬಂದಿದ್ದ. ನಂತರ ನಿಲ್ದಾಣದ ಬಲ ಭಾಗದ ತುದಿಗೆ ಹೋಗಿ ನಿಂತಿದ್ದ. ಧ್ರುವ್ ಟಕ್ಕರ್ ಜೊತೆಗೆ ಒರ್ವ ಯುವತಿ ಹಾಗೂ ಮತ್ತೊರ್ವ ಯುವಕ ಇದ್ದ. ಹಾಗೇ ಮೂವರು ಮಾತನಾಡುತ್ತಾ ಮಾತನಾಡುತ್ತಾ ನಿಂತಿದ್ದರು. ನಂತರ ರೈಲು ಬರುವ ಸಮಯದಲ್ಲಿ . ಧ್ರುವ್ ಟ್ರಾಕ್ ಮೇಲೆ ಹಾರಿದ್ದಾನೆ. ಜೊತೆಗಿದ್ದವರು ಎಳೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಆದ್ರೆ ರೈಲು ಹತ್ತಿರ ಬಂದಾಗ ಸ್ಥಳದಿಂದ ಓಡಿ ಹೋಗಿದ್ದಾರೆ. ಪರಿಣಾಮ ರೈಲು ಸ್ವಲ್ಪ ದೂರ ಎಳೆದೊಯ್ದಿದ್ದು, ರುಂಡ-ಮುಂಡ ಬೇರೆ-ಬೇರೆಯಾಗಿದೆ. ರೈಲಿನ ಕೆಳಗೆ ಸಿಲುಕಿದ್ದ ಮೃತದೇಹವನ್ನು ಹೊರಗೆ ತೆಗೆದು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.ಡಿಸಿಪಿ ಎಸ್‌.ಗಿರೀಶ್‌ ಹೇಳಿದ್ದಿಷ್ಟು

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಎಸ್‌.ಗಿರೀಶ್‌ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, 19 ರಿಂದ 20 ವರ್ಷದ ಹುಡುಗನ ಸಾವಾಗಿದೆ. ಮೃತ ಧ್ರುವ್ ಟಕ್ಕರ್ ಮಹಾರಾಷ್ಟ್ರದ ಮುಂಬೈ ಮೂಲದವನು. ಈತ ನ್ಯಾಷನಲ್ ಲಾ ಕಾಲೇಜ್ ಫಸ್ಟ್ ಇಯರ್ ವಿದ್ಯಾರ್ಥಿ ಎಂದು ಮಾಹಿತಿ ನೀಡಿದರು.

ಸದ್ಯ ವಿದ್ಯಾರ್ಥಿ ಸಾವಿನ ಬಗ್ಗೆ ಕಾಲೇಜು ಮತ್ತು ಆತನ ಕುಟುಂಬಕ್ಕೆ ಪೊಲೀಸರು ಮಾಹಿತಿ ರವಾನಿಸಿದ್ದು, ಧ್ರುವ್ ಟಕ್ಕರ್ ಏಕೆ ಆತ್ಮಹತ್ಯೆ ಮಾಡಿಕೊಂಡ? ಆತ್ಮಹತ್ಯೆಗೆ ಕಾರಣವೇನು? ಎನ್ನುವುದರ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇನ್ನು ಸ್ಥಗಿತಗೊಂಡಿದ್ದ ಮೆಟ್ರೋ ಸಂಚಾರ ಮತ್ತೆ ಪುನಾರಂಭವಾಗಿದೆ.

ಆ. 1ರಂದು ವಿಶ್ವ ಜನಸಂಖ್ಯಾ ದಿನಾಚರಣೆ

Posted by Vidyamaana on 2023-07-28 08:19:47 |

Share: | | | | |


ಆ. 1ರಂದು ವಿಶ್ವ ಜನಸಂಖ್ಯಾ ದಿನಾಚರಣೆ

ಪುತ್ತೂರು: ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಪ್ರಗತಿ ಪ್ಯಾರಾ ಮೆಡಿಕಲ್ ಕಾಲೇಜು, ಹೆಚ್.ಪಿ.ಆರ್. ಪ್ಯಾರಾ ಮೆಡಿಕಲ್ ಕಾಲೇಜಿನ ಆಶ್ರಯದಲ್ಲಿ ಆ. 1ರಂದು ಬೆಳಿಗ್ಗೆ 10ಕ್ಕೆ ಪುತ್ತೂರು ಪುರಭವನದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ 2023 ನಡೆಯಲಿದೆ.

ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸುವರು. ಡಿ.ಎಚ್.ಓ. ಡಾ. ಕಿಶೋರ್ ಕುಮಾರ್ ಎಂ. ಅಧ್ಯಕ್ಷತೆ ವಹಿಸುವರು. ಎಸಿ ಗಿರೀಶ್ ನಂದನ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ದೀಪಾ ಪ್ರಭು, ತಹಸೀಲ್ದಾರ್ ಶಿವಶಂಕರ್, ತಾ.ಪಂ. ಇಓ ನವೀನ್ ಕುಮಾರ್ ಭಂಡಾರಿ, ನಗರಸಭೆ ಪೌರಾಯುಕ್ತ ಮಧು ಎಸ್. ಮನೋಹರ್, ಪ್ರಗತಿ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲೆ ಪ್ರೀತಾ ಹೆಗ್ಡೆ, ಹೆ.ಪಿ.ಆರ್. ಪ್ಯಾರಾ ಮೆಡಿಕಲ್ ಕಾಲೇಜಿನ ಇಮ್ನೀಸ್ ಮುಖ್ಯ ಅತಿಥಿಯಾಗಿರುವರು.

ಪುತ್ತೂರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ವಿಭಾಗ ಪ್ರಾಧ್ಯಾಪಕ ನರೇಂದ್ರ ರೈ ದೇರ್ಲ ಸಂಪನ್ಮೂಲ ವ್ಯಕ್ತಿಯಾಗಿರುವರು ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಬದರುದ್ದೀನ್ ಎಂ.ಎಸ್., ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌

ಬಿಪಿಎಲ್ ಕಾರ್ಡ್​ಗೆ ಹೆಚ್ಚಿದ ಬೇಡಿಕೆ

Posted by Vidyamaana on 2023-05-25 04:25:36 |

Share: | | | | |


ಬಿಪಿಎಲ್ ಕಾರ್ಡ್​ಗೆ ಹೆಚ್ಚಿದ ಬೇಡಿಕೆ

ಬೆಂಗಳೂರು :ಕಾಂಗ್ರೆಸ್  ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಿಪಿಎಲ್ ಕಾರ್ಡ್​ಗಳಿಗೆ ಬೇಡಿಕೆ ಹೆಚ್ಚಿದ್ದು, ಕಾರ್ಡ್ ಪಡೆಯಲು ಜನ ಮುಗಿಬೀಳುತ್ತಿದ್ದಾರೆ. ಸರ್ಕಾರದ ವಿವಿಧ ಯೋಜನೆ ಫಲಾನುಭವಿ ಗಳಾಗಬೇಕೆಂಬ ಆಸೆಗಣ್ಣಿನಿಂದ ಕಾಯುತ್ತಿರುವ ಜನರಿಗೆ ಸಿಗುತ್ತಿಲ್ಲ ಹೊಸ ಬಿಪಿಎಲ್ ಕಾರ್ಡ್ ಸಿಗುತ್ತಿಲ್ಲ.ಸುಮಾರು 2.88 ಲಕ್ಷ ಬಿಪಿಎಲ್ ಕಾರ್ಡ್ ಅರ್ಜಿಗಳು ವಿಲೇವಾರಿಗಾಗಿ ಕಾಯುತ್ತಿವೆ.

ರಾಜ್ಯದಲ್ಲಿ 2023 ಜನವರಿಯಿಂದ ಮೇ 20ರವರೆಗೆ ತುರ್ತು ಆರೋಗ್ಯ ಸೇವಾ ಸೌಲಭ್ಯಕ್ಕಾಗಿ ಹೊಸ ಪಡಿತರ ಚೀಟಿ ಪಡೆಯಲು ಸುಮಾರು 4.25 ಲಕ್ಷ ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಎರಡು ತಿಂಗಳಿಂದ ಸರ್ವರ್, ದಾಖಲೆಗಳ ಸಮಸ್ಯೆ, ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹೊಸ ಅರ್ಜಿಗಳ ವಿಲೇವಾರಿ, ಹೊಸ ಕಾರ್ಡ್ ವಿತರಣೆ ಕಾರ್ಯ ಸ್ಥಗಿತಗೊಂಡಿದೆ. ಇದರಿಂದಾಗಿ ಅರ್ಜಿ ಸಲ್ಲಿಸಿರುವ ಜನರು ಕಾರ್ಡ್​ಗಳಿಗಾಗಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ.ರಾಜ್ಯದಲ್ಲಿ ಮೇ 14 ರಿಂದ 20ರ ನಡುವಿನ ಅವಧಿಯಲ್ಲಿ ಹೊಸ ಬಿಪಿಎಲ್ ಕಾರ್ಡ್​ಗಾಗಿ ಬರೋಬ್ಬರಿ 78 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ತುರ್ತು ಆರೋಗ್ಯ ಚಿಕಿತ್ಸೆಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮಾತ್ರ ಮೇ 18ರಿಂದ ವಿಲೇವಾರಿ ಮಾಡಿ ವಿತರಣೆ ಮಾಡಲಾಗುತ್ತಿದೆ. ಇನ್ನುಳಿದ ಹೊಸ ಅರ್ಜಿಗಳ ವಿಲೇವಾರಿ ಸ್ಥಗಿತಗೊಳಿಸಿದೆ. ಹೊಸ ಸರ್ಕಾರದ ಆದೇಶದ ಬಳಿಕ ಮುಂದಿನ ಅರ್ಜಿಗಳ ವಿಲೇವಾರಿ ಪ್ರಕ್ರಿಯೇ ಆರಂಭವಾಗಲಿದೆ.

2023 ಜನವರಿಗೆ ರಾಜ್ಯದಲ್ಲಿ ಬಿಪಿಎಲ್, ಅಂತ್ಯೋದಯ, ಎಪಿಎಲ್ ಸೇರಿ ಸುಮಾರು 5.28 ಕೋಟಿ ಜನರು ರೇಷನ್ ಕಾರ್ಡ್ ಫಲಾನುಭವಿಗಳಾಗಿದ್ದು, ಇವರಲ್ಲಿ ಸುಮಾರು 4.50ಲಕ್ಷಕ್ಕೂ ಅಧಿಕ ಅನರ್ಹ ಬಿಪಿಎಲ್ ಕಾರ್ಡ್​ಗಳನ್ನು ರದ್ದುಪಡಿಸಲಾಗಿದೆ. ಜತೆಗೆ ಹೊಸ ಬಿಪಿಎಲ್ ಕಾರ್ಡ್​ಗಾಗಿ ಸುಮಾರು 4.25 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ ಕೆಲ ಅನರ್ಹಗೊಂಡಿರುವ ಕಾರ್ಡ್​ದಾರರು ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಹೊಸ ಬಿಪಿಎಲ್ ಅರ್ಜಿಗಳನ್ನು ಮರು ಪರಿಶೀಲನೆ ನಡೆಸಲಾಗುತ್ತಿದೆ. ಸದ್ಯ ಹೊಸದಾಗಿ ಬಿಪಿಎಲ್ ಕಾರ್ಡ್​ಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಸಮಸ್ಯೆ ಇಲ್ಲ. ಆದರೆ, ಹೊಸ ಬಿಪಿಎಲ್ ಕಾರ್ಡ್ ಗಳ ವಿತರಣೆ, ಅರ್ಜಿಗಳ ವಿಲೇವಾರಿ ಕೆಲಸ ಬಂದ್ ಆಗಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ಗ್ಯಾರಂಟಿ ಯೋಜನೆಗಳಿಂದ ಬೇಡಿಕೆ: ಕಾಂಗ್ರೆಸ್​ನ ಐದು ಗ್ಯಾರಂಟಿ ಯೋಜನೆಗಳ ಘೊಷಣೆ ನಂತರ ಮತ್ತು ಚುನಾವಣೆ ಫಲಿತಾಂಶದ ಬಳಿಕ ಬಿಪಿಎಲ್ ಕಾರ್ಡ್​ಗಳಿಗೆ ಬೇಡಿಕೆ ಹೆಚ್ಚಿದೆ. ಅಲ್ಲದೆ, ಪ್ರತಿ ನಿತ್ಯ 8ರಿಂದ 10 ಜನರು ಹೊಸದಾಗಿ ಬಿಪಿಎಲ್ ಕಾರ್ಡ್​ಗಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಇವರಲ್ಲಿ ನಗರ ಪ್ರದೇಶಗಳಲ್ಲಿನ ಜನರೇ ಅಧಿಕ ಸಂಖ್ಯೆಯಲ್ಲಿ ದ್ದಾರೆ. ನೂತನ ಸರ್ಕಾರದ ಸೂಚನೆಯ ಬಳಿಕ ಹೊಸ ಕಾರ್ಡ್ ಗಳ ವಿತರಣೆ, ಅರ್ಜಿಗಳ ವಿಲೇವಾರಿ ಕೆಲಸ ಆರಂಭವಾಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮೂಡುಬಿದಿರೆ: ಹೆಣ್ಣಿನ ಸ್ವರದಲ್ಲಿ ಕರೆ ಮಾಡಿ ಬ್ಲ್ಯಾಕ್ ಮೇಲ್ -ಬಿರಾವು ಧನಂಜಯ ಬಂಧನ

Posted by Vidyamaana on 2023-02-25 06:24:25 |

Share: | | | | |


ಮೂಡುಬಿದಿರೆ: ಹೆಣ್ಣಿನ ಸ್ವರದಲ್ಲಿ ಕರೆ ಮಾಡಿ ಬ್ಲ್ಯಾಕ್ ಮೇಲ್ -ಬಿರಾವು ಧನಂಜಯ ಬಂಧನ

ಮೂಡುಬಿದಿರೆ: ಫೆ 25 ಮಹಿಳೆಯ ದ್ವನಿಯನ್ನು ಅನುಕರಣೆ ಮಾಡಿ ವ್ಯಕ್ತಿಗೆ ಕರೆ ಮಾಡಿ ಬ್ಲ್ಯಾಕ್ ಮೇಲೆ ಹಣ ಪೀಕಿಸಿದ ವ್ಯಕ್ತಿಯನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ.ಆರೋಪಿಯನ್ನು ಮೂಡುಬಿದಿರೆ ಸಮೀಪದ ಬಿರಾವು ಧನಂಜಯ ಎಂದು ಗುರುತಿಸಲಾಗಿದೆ.

ಬೈಕಂಪಾಡಿಯ ಕಂಪೆನಿಯೊಂದರ ಉದ್ಯೋಗಿ ಹೊಸಬೆಟ್ಟು ನಿವಾಸಿಯೋರ್ವರಿಗೆ ಉಷಾ ಎಂದು ಪರಿಚಯಿಸಿಕೊಂಡು ಹೆಣ್ಣಿನ ಸ್ವರದಲ್ಲಿ ಕರೆ, ವೀಡಿಯೋ ಕಾಲ್‌ ಮಾಡಿ, ಯಾವುದೋ ಹುಡುಗಿಯ ಖಾಸಗಿ ಅಂಗಗಳನ್ನು ತೋರಿಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಿದ ಆರೋಪ ಈತನ ಮೇಲಿದೆಆರೋಪಿ ಬಿರಾವು ಧನಂಜಯವು, ಹೊಸಬೆಟ್ಟು ನಿವಾಸಿಗೆ ಕರೆ ಮಾಡಿ 25 ಸಾವಿರ ಹಣ ಕೊಡಬೇಕು, ಇಲ್ಲವಾದಲ್ಲಿ ಈ ವೀಡಿಯೋ ಕ್ಲಿಪ್ಪಿಂಗನ್ನು ಬೇರೆಯವರಿಗೆ ಕಳುಹಿಸುವುದಾಗಿ ಬೆದರಿಸಿದ್ದ. ಕಂಗಾಲಾಗಿ ಸಂತ್ರಸ್ತರು ಒಮ್ಮೆ 2 ಸಾವಿರ ಗೂಗಲ್‌ ಪೇ ಮಾಡಿದ್ದರು. ಬಳಿಕವೂ ಪದೇಪದೆ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದ. ಕೊನೆಗೆ ಸುರತ್ಕಲ್‌ ಠಾಣೆಗೆ ದೂರು ನೀಡಿದರು. ಸುರತ್ಕಲ್‌ ಪೊಲೀಸರು ಉಷಾ ಹೆಸರಿನ ಧನಂಜಯನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪುತ್ತೂರಿನ ರೀಮಾ ಪೂಟ್ ವೇರ್ ಮಾಲಕ ಖಾಸೀಂ ನಿಧನ

Posted by Vidyamaana on 2023-10-05 20:33:27 |

Share: | | | | |


ಪುತ್ತೂರಿನ ರೀಮಾ ಪೂಟ್ ವೇರ್ ಮಾಲಕ ಖಾಸೀಂ ನಿಧನ


ಪುತ್ತೂರು: ಇಲ್ಲಿನ ಪಡೀಲ್ ನಿವಾಸಿ, ರೀಮಾ ಪುಟ್ ವೇರ್ ಮಾಲಕ ಖಾಸೀಂ ಅವರು ಹೃದಯಾಘಾತದಿಂದ ನಿಧನರಾದರು.

ನಾಳೆ (ಅ. 6) ಖಾಸಿಂ ಅವರ ಮನೆಯಲ್ಲಿ ಮೌಲೀದ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕೆ ಆಮಂತ್ರಿಸಲು ನೆರೆಹೊರೆ, ಸಂಬಂಧಿಕರ ಮನೆಗೆ ತೆರಳುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರ ಸಲಹೆಯಂತೆ ಮಂಗಳೂರಿಗೆ ಕರೆದುಕೊಂಡು ಹೋಗುವ ದಾರಿಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಇವರು ಹಲವಾರು ವರ್ಷಗಳ ಹಿಂದೆ ಪುತ್ತೂರಿನಲ್ಲಿ ಕಟ್ಲೇರಿ ಅಂಗಡಿ ವ್ಯಾಪಾರಸ್ತರಾಗಿದ್ದ ಮರ್ಹೂಮ್ ಇಸ್ಮಾಯಿಲ್ ಅವರ ಮಗ. ಖಾಸೀಂ ಅವರು ಪುತ್ತೂರಿನ  ಶ್ರೀಧರ ಭಟ್ ಬ್ರದರ್ಸ್ ಮೆಡಿಕಲ್‌ ಶಾಪ್ ನ ಮುಂಭಾಗ ರೀಮಾ ಪುಟ್ ವೇರ್ ನಡೆಸುತ್ತಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.



Leave a Comment: