ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 11

Posted by Vidyamaana on 2023-09-11 08:58:28 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 11

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಸೆ 11 ರಂದು


ಬೆಳಿಗ್ಗೆ 9.30 ಮಂಗಳೂರಿನ‌ ನಹರೂ‌ಮೈದಾನದಲ್ಲಿ‌ ಸಚಿವರ ಕಾರ್ಯಕ್ರಮ


10.30 ಕ್ಕೆ ಬಂಟರ ಭವನದಲ್ಲಿ ರಾಜ್ಯ ಅತ್ಲೆಟಿಕ್ ಒಕ್ಕೂಟದ ಸಭೆ


11.30 ಕ್ಕೆ ಆರ್ಯಾಪು ಸಹಕಾರಿ‌ಸಂಘದ ಮಹಾಸಭೆ


12.30 ಕ್ಕೆ ಬನ್ನೂರು ಸಹಕಾರಿ ಸಂಘದ ಮಹಾಸಭೆ


ಸಂಜೆ 4 ಗಂಟೆಗೆ ಸುದ್ದಿ ಚಾನೆಲ್ ನಲ್ಲಿ ಸಾರ್ವಜನಿಕರ ಜೊತೆ‌ಸಂವಾದ , ಫೋನ್ ಇನ್ ಕಾರ್ಯಕ್ರಮ ಲೈವ್

 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ

ಉಡುಪಿಯಲ್ಲಿ ನಾಲ್ವರು ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ: ವಿಕೃತಿ ಮೆರೆದ ಹಿಂದೂ ಮಂತ್ರ ಪೇಜ್ ವಿರುದ್ಧ ಪ್ರಕರಣ ದಾಖಲು

Posted by Vidyamaana on 2023-11-17 12:41:26 |

Share: | | | | |


ಉಡುಪಿಯಲ್ಲಿ ನಾಲ್ವರು ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ: ವಿಕೃತಿ ಮೆರೆದ ಹಿಂದೂ ಮಂತ್ರ ಪೇಜ್ ವಿರುದ್ಧ ಪ್ರಕರಣ ದಾಖಲು

ಉಡುಪಿ: ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆಗೆ  ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಸಂಭ್ರಮಿಸಿ ಸಂದೇಶ ಹರಿಬಿಟ್ಟಿದ್ದು, ಹಿಂದೂ ಮಂತ್ರ ಎಂಬ ಹೆಸರಿನ ಖಾತೆ ವಿರುದ್ಧ ಉಡುಪಿಯ ಸೆನ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


‘ಹಿಂದು ಮಂತ್ರ’ ಎಂಬ ಪೇಜ್‌ನಲ್ಲಿ ಕೊಲೆ ಆರೋಪಿಯನ್ನು ಸಾಧಕನಂತೆ ಬಿಂಬಿಸಿರುವುದು ಕಂಡುಬಂದಿದೆ.


ಉಡುಪಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣ ಸಂಬಂಧ ಕಿಡಿಗೇಡಿಗಳು ಹತ್ಯೆಯನ್ನು ಸಂಭ್ರಮಿಸಿ ಹಿಂದೂ ಮಂತ್ರ ಹೆಸರಿನ ಇನ್ ಸ್ಟಾಗ್ರಾಮ್ ಪೇಜ್ ನಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್ ನಲ್ಲಿ, 15 ನಿಮಿಷದಲ್ಲಿ ನಾಲ್ಕು ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ ನಿರ್ಮಿಸಿದ್ದಾನೆ ಎಂದು ಶೀರ್ಷಿಕೆ ಬರೆಯಲಾಗಿದೆ. ಅಲ್ಲದೆ, ಹತ್ಯೆಯ ಆರೋಪಿ ಪ್ರವೀಣ್ ಅರುಣ್ ಚೌಗುಲೆ ತಲೆಗೆ ಕಿರೀಟದ ಎಮೋಜಿ ತೊಡಿಸಲಾಗಿದೆ. ಇದರೊಂದಿಗೆ, ಉಡುಪಿಯ ಹುಡುಗಿಯರ ವಿಚಾರದಲ್ಲಿ ಯಾರು ಕೂಡ ಬರಲಿಲ್ಲ. ಹೀಗಾಗಿ ನಾವು ಕೂಡ ಈ ವಿಚಾರಕ್ಕೆ ಬರುವುದಿಲ್ಲ ಎಂದು ಬರೆಯಲಾಗಿದೆ

ಕುದ್ರೋಳಿ ದೇವಸ್ಥಾನದಲ್ಲಿ ವಿಶೇಷ ಅರ್ಚನೆಯಲ್ಲಿ ಪಾಲ್ಗೊಂಡು ಪ್ರಚಾರ ಕಾರ್ಯ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

Posted by Vidyamaana on 2024-03-31 11:17:03 |

Share: | | | | |


ಕುದ್ರೋಳಿ ದೇವಸ್ಥಾನದಲ್ಲಿ ವಿಶೇಷ ಅರ್ಚನೆಯಲ್ಲಿ ಪಾಲ್ಗೊಂಡು ಪ್ರಚಾರ ಕಾರ್ಯ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

ಮಂಗಳೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಬೆಳಗ್ಗೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ಪ್ರಚಾರ ಕಾರ್ಯ ಆರಂಭಿಸಿದರು.

ಫಾಸ್ಟಾಗ್‌ಗಳಿಗೆ ಕೆವೈಸಿ ಪೂರ್ಣಗೊಳಿಸದಿದ್ದರೆ ಜ.31ರಿಂದ ಫಾಸ್ಟಾಗ್‌ ಖಾತೆಗಳು ನಿಷ್ಟ್ರಿಯ

Posted by Vidyamaana on 2024-01-17 09:31:21 |

Share: | | | | |


ಫಾಸ್ಟಾಗ್‌ಗಳಿಗೆ ಕೆವೈಸಿ ಪೂರ್ಣಗೊಳಿಸದಿದ್ದರೆ ಜ.31ರಿಂದ ಫಾಸ್ಟಾಗ್‌ ಖಾತೆಗಳು ನಿಷ್ಟ್ರಿಯ

ಹೊಸದಿಲ್ಲಿ: ಫಾಸ್ಟಾಗ್‌ಗಳಿಗೆ ಕೆವೈಸಿ ಪೂರ್ಣಗೊಳಿಸದಿದ್ದರೆ ಜ.31ರಿಂದ ಫಾಸ್ಟಾಗ್‌ ಖಾತೆಗಳು ನಿಷ್ಟ್ರಿಯವಾಗಲಿವೆ ಎಂದು ಈಗಾಗಲೇ ಎನ್‌ಎಚ್‌ಎಐ ಎಚ್ಚರಿಸಿದೆ. ಫಾಸ್ಟಾಗ್‌ಗೆ ಕೆವೈಸಿ ಪೂರ್ಣಗೊಂಡಿದೆಯೇ, ಇಲ್ಲವೇ ಎಂಬ ಸ್ಥಿತಿಗತಿ ತಿಳಿಯುವುದು ಹೇಗೆ ಹಾಗೂ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.


ಪರಿಶೀಲನೆ ಹೇಗೆ?

ಬಳಕೆದಾರರು https://fastag.ihmcl.com ವೆಬ್‌ಸೈಟ್‌ಗೆ ಭೇಟಿ ನೀಡಬೇಕು.

ಲಾಗಿನ್‌ ಆಗಲು ನೋಂದಾಯಿತ ಮೊಬೈಲ್‌ ಸಂಖ್ಯೆ, ಪಾಸ್‌ವರ್ಡ್‌ ಮತ್ತು ಬಳಿಕ ಮೊಬೈಲ್‌ಗೆ ಬರುವ ಒಟಿಪಿ ಬೇಕಾಗಲಿದೆ.

ಒಮ್ಮೆ ಲಾಗಿನ್‌ ಆದ ಅನಂತರ, ಡ್ಯಾಶ್‌ಬೋರ್ಡ್‌ಗೆ ತೆರಳಿ, “ಮೈ ಪ್ರೊಫೈಲ್‌’ ವಿಭಾಗದ ಮೇಲೆ ಕ್ಲಿಕ್‌ ಮಾಡಬೇಕು.

ಇಲ್ಲಿ ನಿಮ್ಮ ಕೈವೈಸಿ ಪ್ರಕ್ರಿಯೆ ಪೂರ್ಣಗೊಂಡಿದೆಯೇ ಎಂಬ ಸ್ಥಿತಿಗತಿ ಹಾಗೂ ನೀವು ಸಲ್ಲಿಸಿರುವ ಪ್ರೊಫೈಲ್‌ ವಿವರ ಸಿಗಲಿದೆ.

ಪೂರ್ಣಗೊಳ್ಳದಿದ್ದರೆ ಏನು ಮಾಡಬೇಕು?

ಪ್ರೊಫೈಲ್‌ ವಿಭಾಗದಲ್ಲಿ, ಕೆವೈಸಿ ಎಂಬ ಉಪ ವಿಭಾಗವಿದೆ. ಅಲ್ಲಿ ಕ್ಲಿಕ್‌ ಮಾಡಿ ನೀವು ನಿಮ್ಮ ಕೆವೈಸಿ ಅಪ್‌ಡೇಟ್‌ ಮಾಡಬಹುದು.

ಬಳಕೆದಾರರು ಗುರುತು, ವಿಳಾಸದ ದಾಖಲೆಗಳನ್ನು ಸಲ್ಲಿಸಬೇಕು. ಪಾಸ್‌ಪೋರ್ಟ್‌ ಗಾತ್ರದ ಫೋಟೋ ಕೂಡ ಅಗತ್ಯ.

ಒಮ್ಮೆ ಪರಿಶೀಲಿಸಿ, ಅನಂತರ ದೃಢೀಕರಿಸಬೇಕಾಗುತ್ತದೆ.

ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಅನಂತರ, “ಪ್ರೊಸೀಡ್‌’ ಕ್ಲಿಕ್‌ ಮಾಡಿ ದರೆ ಕೈವೈಸಿ ಪೂರ್ಣಗೊಳ್ಳಲಿದೆ.

ಉಪ್ಪಳ : ಹಾಡಹಗಲೇ ವಾಹನದ ಗಾಜು ಒಡೆದು ಎಟಿಎಂಗೆ ತುಂಬಲು ತಂದಿದ್ದ ಹಣ ಕಳವು

Posted by Vidyamaana on 2024-03-27 17:16:13 |

Share: | | | | |


ಉಪ್ಪಳ : ಹಾಡಹಗಲೇ ವಾಹನದ ಗಾಜು ಒಡೆದು ಎಟಿಎಂಗೆ ತುಂಬಲು ತಂದಿದ್ದ ಹಣ ಕಳವು

ಕಾಸರಗೋಡು, ಮಾ.27: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆಗೈದ ಘಟನೆ ಉಪ್ಪಳಪೇಟೆಯಲ್ಲಿ ನಡೆದಿದೆ.


ವಾಹನದ ಗಾಜನ್ನು ಒಡೆದು ಹಣ ದರೋಡೆ ಮಾಡಿದ್ದಾರೆ. ಉಪ್ಪಳ ಪೇಟೆಯಲ್ಲಿರುವ ಆಕ್ಸಿಸ್ ಬ್ಯಾಂಕ್ ನ ಎ ಟಿ ಎಂ ಮೆಷಿನ್ ಗೆ ಹಣ ತುಂಬಿಸಲು ಬಂದಿದ್ದ ಸಂದರ್ಭ ಈ ಘಟನೆ ನಡೆದಿದೆ.


ವಾಹನದಲ್ಲಿದ್ದ ನೌಕರರು ವಾಹನ ನಿಲ್ಲಿಸಿ ಎಟಿಎಂ ಮೆಷಿನ್ ತೆರೆದು ವಾಹನದಲ್ಲಿದ್ದ ಹಣದ ಬಾಕ್ಸನ್ನು ತೆಗೆದುಕೊಂಡು ಹೋಗಲು ಮರಳಿ ಬಂದಾಗ ವಾಹನದ ಗಾಜು ಹುಡಿಯಾದ ಸ್ಥಿತಿಯಲ್ಲಿ ಕಂಡುಬಂದಿದೆ. ಪರಿಶೀಲಿಸಿದಾಗ 50 ಲಕ್ಷ ರೂ. ಇದ್ದ ಬಾಕ್ಸ್ ನಾಪತ್ತೆಯಾಗಿತ್ತು. ಖಾಸಗಿ ಏಜೆನ್ಸಿಯ ವಾಹನದಲ್ಲಿ ಹಣವನ್ನು ತಂದು ಎಟಿಎಂ ಗೆ ತುಂಬಿಸಲಾಗುತ್ತಿತ್ತು. ವಾಹನದ ಗಾಜನ್ನು ಒಡೆದು ಕೃತ್ಯ ನಡೆಸಲಾಗಿದೆ.


ಮಂಜೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದು , ವಾಹನದ ಚಾಲಕ ಮತ್ತು ನೌಕರನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸಮೀಪದ ಸಿಸಿಟಿವಿ ಕ್ಯಾಮರಾ ಮೂಲಕ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುತ್ತೂರು ನಗರದ ರಕ್ಷಣೆಗೆ ಆರಕ್ಷಕ ಸಿಬ್ಬಂದಿ ಗಳ ಕೊರತೆ

Posted by Vidyamaana on 2023-09-08 21:29:28 |

Share: | | | | |


ಪುತ್ತೂರು ನಗರದ ರಕ್ಷಣೆಗೆ ಆರಕ್ಷಕ ಸಿಬ್ಬಂದಿ ಗಳ ಕೊರತೆ

ಪುತ್ತೂರು: ಸರಣಿ ಅಪರಾಧ ಪ್ರಕರಣಗಳು, ಬೆಚ್ಚಿಬೀಳಿಸುವ ದರೋಡೆಯಂತಹ ಪ್ರಕರಣಗಳು, ಬೆನ್ನುಬೆನ್ನಿಗೇ ಸಾಲಾಗಿ ನಿಂತಿರುವ ಹಬ್ಬಗಳು... ಸೂಕ್ಷ್ಮ ಪ್ರದೇಶಗಳಲ್ಲಿ ಮೊದಲ ಸಾಲಿನಲ್ಲಿ ಗುರುತಿಸಿಕೊಂಡಿದೆ ಪುತ್ತೂರು. ಹಾಗಾಗಿ ಆರಕ್ಷಕ ಸಿಬ್ಬಂದಿ ಅಥವಾ ಪೊಲೀಸ್ ವ್ಯವಸ್ಥೆ ಸರ್ವಸನ್ನದ್ಧ ವಾಗಿ ಇರಬೇಕತ್ತು. ಆದರೆ ಹಾಗಿಲ್ಲ ಎನ್ನುವುದೇ ಇಲ್ಲಿನ ವಾಸ್ತವ.

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮುಖ್ಯ ಹುದ್ದೆಯಾದ ಪಿ.ಎಸ್.ಐ (ಸಬ್ ಇನ್ಸ್‌ಪೆಕ್ಟರ್) ಹುದ್ದೆಯೇ ಖಾಲಿ ಇರುವುದು ದುರಂತವೇ ಸರಿ.

ಪುತ್ತೂರು ನಗರ ಠಾಣೆಯಲ್ಲಿ ಒಟ್ಟು 4 ಹುದ್ದೆಗಳಿದ್ದು, ಅದರಲ್ಲಿ 3 ಹುದ್ದೆಗಳು ಖಾಲಿಯಾಗಿವೆ. ಅಂದರೆ ಒಂದು ಹುದ್ದೆ ಮಾತ್ರ ಭರ್ತಿಯಾಗಿದೆ.

ಪಿ.ಎಸ್.ಐ. ಶ್ರೀಕಾಂತ್ ರಾಥೋಡ್ ಅವರ ವರ್ಗಾವಣೆ ಬಳಿಕ ಕಾನೂನು ಸುವ್ಯವಸ್ಥೆಯ ಹುದ್ದೆಯೂ ತೆರವಾಗಿದ್ದು, ಖಾಲಿ ಇರುವ ಹುದ್ದೆಗಳ ಜವಾಬ್ದಾರಿಯೆಲ್ಲಾ ಪೊಲೀಸ್ ನಿರೀಕ್ಷಕ (ಇನ್ಸ್‌ಪೆಕ್ಟರ್)ರ ಮೇಲೆ ಬಿದ್ದಿದೆ‌.

ಇದನ್ನು ಕಳ್ಳರು ಗಮನಿಸಿದಂತಿದೆಯೋ ಏನೋ!? ಪುತ್ತೂರೇ ಬೆಚ್ಚಿಬೀಳಿಸುವಂತಹ ಘಟನೆಗಳು ಒಂದರ ಬೆನ್ನಿಗೆ ಇನ್ನೊಂದರಂತೆ ಬಂದೆರಗುತ್ತಿದೆ. ಸರಣಿ ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳ ಕೊರತೆ ಇದ್ದು, ಕೃತ್ಯ ಘಟಿಸಿದ ಬಳಿಕವಷ್ಟೇ ಕ್ರಮ ಕೈಗೊಳ್ಳುವ ಭರವಸೆ ನೀಡುವಂತಾಗಿದೆ. ಶಾಸಕರೂ ಇದರ ಬಗ್ಗೆ ಮುತುವರ್ಜಿ ವಹಿಸಿ, ತಕ್ಷಣ ತೆರವಾಗಿರುವ ಹುದ್ದೆಗಳನ್ನು ಭರ್ತಿ ಮಾಡುವತ್ತ ಗಮನಹರಿಸುವ ಜರೂರತ್ತು ಇದೆ.


ವಾರದೊಳಗೆ ಭರ್ತಿ: ಶಾಸಕ ಅಶೋಕ್ ರೈ

ಪಿ.ಎಸ್.ಐ. ಹುದ್ದೆ ಖಾಲಿ ಆಗಿರುವ ಬಗ್ಗೆ ಮಾಹಿತಿ ಇದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಗೆ ಪೊಲೀಸ್ ಅಧಿಕಾರಿಗಳು ಬರಲು ಕೇಳುವುದೇ ಇಲ್ಲ. ಹಾಗಾಗಿ ಪೊಲೀಸ್ ಠಾಣೆಯ ಪ್ರಮುಖ ಹುದ್ದೆಗಳೆಲ್ಲ ಖಾಲಿಯಾಗಿವೆ. ವಾರದೊಳಗೆ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.

- ಅಶೋಕ್ ಕುಮಾರ್ ರೈ, ಶಾಸಕರು, ಪುತ್ತೂರು



Leave a Comment: