ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ :ರಾಜ್ಯ ಸರ್ಕಾರ ಆದೇಶ

ಸುದ್ದಿಗಳು News

Posted by vidyamaana on 2024-07-05 17:43:40 |

Share: | | | | |


ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ :ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡಿ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ .ಈ ಮೂಲಕ ಆಟೋ, ಕ್ಯಾಬ್ ಚಾಲಕರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.ಕಳೆದ ವರ್ಷ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗಿತ್ತು.

ಈ ವೇಳೆ ಸರ್ಕಾರದಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೂ, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡುವಂತೆ ಸಾರಿಗೆ ಸಂಘಟನೆಗಳು ಸರ್ಕಾರಕ್ಕೆ ಹಲವು ಬಾರಿ ಒತ್ತಾಯಿಸಿತ್ತು ಸಾರಿಗೆ ಸಂಘಟನೆಗಳ ಮನವಿ ಬೆನ್ನಲ್ಲೇ ಸಾರಿಗೆ ಇಲಾಖೆ ಅಧಿಕಾರಿಗಳು ಅನಧಿಕೃತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ವಿರುದ್ದ ಕ್ರಮಕ್ಕೆ ಮುಂದಾಗಿದೆ.

ಈ ಹಿನ್ನೆಲೆ ಸಾರಿಗೆ ಅಧಿಕಾರಿಗಳು ನಗರದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೀಜ್ ಮಾಡಲು ಮುಂದಾಗಿದ್ದು. 11 ತಂಡವನ್ನು ರಚಿಸಿ ಆರ್ಟಿಓ ಅಧಿಕಾರಿಗಳ ನೇತೃತ್ವದಲ್ಲಿ ಸೀಜ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.ರಾಜ್ಯಾದ್ಯಂತ ಜು.5ರಿಂದ ಕಡ್ಡಾಯವಾಗಿ ಎಲೆಕ್ಟ್‌ಇಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿದ್ದು, ಒಂದು ವೇಳೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಕಂಡುಬಂದಲ್ಲಿ ಕೂಡಲೇ ಅವುಗಳನ್ನು ಜಪ್ತಿ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

 Share: | | | | |


ಅರಿಯಡ್ಕ ಗ್ರಾ.ಪಂ. ಸದಸ್ಯ ಶಂಕರ್ ಆತ್ಮಹತ್ಯೆ

Posted by Vidyamaana on 2023-12-03 19:41:12 |

Share: | | | | |


ಅರಿಯಡ್ಕ ಗ್ರಾ.ಪಂ. ಸದಸ್ಯ ಶಂಕರ್ ಆತ್ಮಹತ್ಯೆ

ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.


ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತಿನ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆ ಮಾಡಿಕೊಂಡವರು.


ಬಂಗ್ಲೆಗುಡ್ಡೆ ಮನೆಯ ಶಂಕರ ಅವರು ಸುಮಾರು 5 ವರ್ಷಗಳ ಹಿಂದೆ ದೋಳಂತೋಡಿ ಎಂಬಲ್ಲಿ ಜಾಗ ಖರೀದಿ ಮಾಡಿ ಸೊಸೈಟಿ ಮತ್ತು ಇತರ ಸಂಘಗಳಲ್ಲಿ ಸಾಲ ಮಾಡಿದ್ದರು. ಇತ್ತೀಚೆಗೆ ಸಾಲದ ಬಗ್ಗೆ ಹಾಗೂ ಅದನ್ನು ಕಟ್ಟುವ ಬಗ್ಗೆ ಯೋಚನೆ ಮಾಡುತ್ತಿದ್ದು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರು ಎನ್ನಲಾಗಿದೆ. ಡಿ.3ರಂದು ಮನೆಯವರು ಮಲಗಿದ್ದಾಗ ಮನೆಯ ಒಳಗಡೆಯೇ ಬೈರಸನ್ನೇ ನೇಣಾಗಿ ಬಳಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಮರುದಿನ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.


ಕ್ಷಮಿಸು ವನಿತಾ:

ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ, ನನ್ನ ಸಾವಿಗೆ ನಾನೇ ಕಾರಣ. ಕ್ಷಮಿಸು ವನಿತಾ. ಮಕ್ಕಳನ್ನು ನೋಡಿಕೋ ಎಂಬುದಾಗಿ ಬರೆದಿದ್ದರು. ಮೃತರ ಪತ್ನಿ ವನಿತಾ ನೀಡಿದ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿಸೆಂಬರ್ 14 ರಿಂದ ಮಂಗಳೂರು ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ರದ್ದು

Posted by Vidyamaana on 2023-12-13 07:34:28 |

Share: | | | | |


ಡಿಸೆಂಬರ್ 14 ರಿಂದ ಮಂಗಳೂರು ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ರದ್ದು

ಮಂಗಳೂರು: ಡಿಸೆಂಬರ್ 14 ರಿಂದ ಡಿಸೆಂಬರ್ 22 ರವರೆಗೆ ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಿನ್ಸಿಪಲ್ ಚೀಫ್ ಮ್ಯಾನೇಜರ್ ಮಾಹಿತಿ ನೀಡಿದ್ದಾರೆ.


ನೈಋತ್ಯ ರೈಲ್ವೆಯ ಹಾಸನ ಜಂಕ್ಷನ್ ರೈಲು ನಿಲ್ದಾಣದಲ್ಲಿ ಯಾರ್ಡ್ ನಲ್ಲಿ ವಿವಿಧ ಕಾಮಗಾರಿಗಳ ಹಿನ್ನಲೆ ಡಿಸೆಂಬ‌ರ್ 14 ರಿಂದ ಡಿಸೆಂಬರ್ 22 ರವರೆಗೆ ಬೇರೆ ಬೇರೆ ದಿನಗಳಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ ಎಲ್ಲಾ ರೈಲುಗಳನ್ನು ರದ್ದುಗೊಳಿಸಲಿದೆ ಎಂದು ಅವರು ತಿಳಿಸಿದ್ದಾರೆ.


ರೈಲು ಸಂಖ್ಯೆ 16511 ಬೆಂಗಳೂರು- ಮಂಗಳೂರು- ಕಣ್ಣೂರು ಮತ್ತು ರೈಲು ಸಂಖ್ಯೆ 16595 ಬೆಂಗಳೂರು- ಕಾರವಾರ ಪಂಚಗಂಗಾ ಸೂಪರ್ ಫಾಸ್ಟ್ ಎಕ್ಸೆಸ್ ಅನ್ನು ಡಿಸೆಂಬ‌ರ್ 16 ರಿಂದ ಡಿಸೆಂಬರ್ 20 ತನಕ ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 16512 ಕಣ್ಣೂರು- ಮಂಗಳೂರು-ಬೆಂಗಳೂರು ಮತ್ತು ರೈಲು ಸಂಖ್ಯೆ 16596 ಕಾರವಾರ – ಬೆಂಗಳೂರು ಪಂಚಗಂಗಾ ಎಕ್ಸೆಸ ಡಿಸೆಂಬರ್ 17 ರಿಂದ ಡಿಸೆಂಬರ್ 21 ತನಕ ರದ್ದುಗೊಳಿಸಲಾಗಿದೆ.


ವಾರದಲ್ಲಿ ಮೂರು ದಿನ ಸಂಚರಿಸುವ ರೈಲು ಸಂಖ್ಯೆ 16575 ಯಶವಂತಪುರ-ಮಂಗಳೂರು ಜಂಕ್ಷನ್ ಗೋಮಟೇಶ್ವರ ಎಕ್ಸ್‌ಪ್ರೆಸ್‌ನ್ನು ಡಿಸೆಂಬರ್ 14, 17, 19 ಮತ್ತು 21 ರಂದು ರದ್ದುಗೊಳಿಸಲಾಗಿದೆ.ಮಂಗಳೂರು ಜಂಕ್ಷನ್- ಯಶವಂತಪುರ ಗೋಮಟೇಶ್ವರ 관령 16576) v 15, 18, 20 총 22 ರಂದು ರದ್ದುಗೊಳಿಸಲಾಗಿದೆ. ವಾರದಲ್ಲಿ ಮೂರು ದಿನ ಸಂಚರಿಸುವ ಯಶವಂತಪುರ- ಕಾರವಾರ ಎಕ್ಸ್‌ಪ್ರೆಸ್‌ ನಂಬರ್ 16515 ಪ್ರಯಾಣವನ್ನು ಡಿಸೆಂಬರ್ 13, 15,18,20 ಮತ್ತು 22 ರಂದು ರದ್ದುಪಡಿಸಲಾಗಿದೆ.


ವಾರದಲ್ಲಿ ಮೂರು ದಿನ ಸಂಚರಿಸುವ ಕಾರವಾರ- ಯಶವಂತಪುರ ನಂಬರ್ 16516 ನಂಬರ್ ರೈಲು ಸೇವೆಯನ್ನು ಡಿಸೆಂಬರ್ 14, 16, 19, 21 ಮತ್ತು 23 ರಂದು ರದ್ದುಗೊಳಿಸಲಾಗಿದೆ. ಡಿಸೆಂಬರ್ 16 ಮತ್ತು 17 ರಂದು ಯಶವಂತಪುರ- ಮಂಗಳೂರು ಜಂಕ್ಷನ್ ಸಾಪ್ತಾಹಿಕ ರೈಲ್(16539/ 16540) ಓಡಾಟವನ್ನು ಕ್ರಮವಾಗಿ ರದ್ದುಪಡಿಸಲಾಗಿದೆ. ಲಭ್ಯ ರೈಲು ಮಾರ್ಗ ಈ ಅವಧಿಯಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು- ಮುರ್ಡೇಶ್ವರ-ಬೆಂಗಳೂರು (ರೈಲು ಸಂಖ್ಯೆ. 16585/ 586) ರಾಜಧಾನಿಯನ್ನು ಕರಾವಳಿಯೊಂದಿಗೆ ಸಂಪರ್ಕಿಸುವ ಏಕೈಕ ರೈಲು ಆಗಿರುತ್ತದೆ.

ಕ್ರೈಸ್ತ ಬಾಂಧವರಿಂದ ಚರ್ಚ್ ಗಳಲ್ಲಿ ಶ್ರದ್ಧಾ ಭಕ್ತಿಯ ಗುಡ್ ಫ್ರೈಡೇ ಆಚರಣೆ

Posted by Vidyamaana on 2023-04-08 06:51:01 |

Share: | | | | |


ಕ್ರೈಸ್ತ ಬಾಂಧವರಿಂದ ಚರ್ಚ್ ಗಳಲ್ಲಿ ಶ್ರದ್ಧಾ ಭಕ್ತಿಯ ಗುಡ್ ಫ್ರೈಡೇ ಆಚರಣೆ

ಪುತ್ತೂರು:ಏ .7 ರಂದು ಪ್ರಭು ಯೇಸುಕ್ರಿಸ್ತರನ್ನು ಶಿಲುಬೆಗೇರಿಸುವ ದಿನವಾದ ಗುಡ್‌ ಫ್ರೈಡೇ(ಶುಭ ಶುಕ್ರವಾರ) ದಿನವನ್ನು ವಿಶ್ವದಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದು, ಪುತ್ತೂರು ತಾಲೂಕಿನ ಚರ್ಚ್ಗಳಲ್ಲಿಯೂ ಗುಡ್‌ ಫ್ರೈಡೇ ದಿನವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಅದರಂತೆ ಪುತ್ತೂರಿನ ಮಾಯಿದೆ ದೇವುಸ್ ಚರ್ಚ್, ಮರೀಲಿನ ಸೆಕ್ರೇಡ್ ಹಾರ್ಟ್ ಚರ್ಚ್, ಬನ್ನೂರಿನ ಸಂತ ಅಂತೋನಿ ಚರ್ಚ್, ಉಪ್ಪಿನಂಗಡಿ ದೀನರ ಕನ್ಯಾಮಾತಾ ದೇವಾಲಯ, ಬೆಳ್ಳಾರೆ ಚರ್ಚ್ ಸಹಿತಿ ಇನ್ನಿತರ ಚರ್ಚ್ ಗಳಲ್ಲಿ ಗುಡ್‌ ಫ್ರೈಡೇ ದಿನವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಆಯಾ ಚರ್ಚ್‌ ನ ಪಾಲನಾ ಸಮಿತಿಯ ಉಪಾಧ್ಯಕ್ಷ, ಕಾರ್ಯದರ್ಶಿ, ಚರ್ಚ್ ಪಾಲನಾ ಸಮಿತಿ ಸದಸ್ಯರು, ಸ್ಯಾಕ್ರಿಸ್ಟಿಯನ್, ಗುರಿಕಾರರು, ಧರ್ಮಭಗಿನಿಯರು, ವೇದಿ ಸೇವಕರು, ಗಾಯನ ಮಂಡಳಿ ಸದಸ್ಯರು ಸಹಕರಿಸಿದರು. ನೂರಾರು ಸಂಖ್ಯೆಯಲ್ಲಿ ಭಕ್ತರು ಧಾರ್ಮಿಕ ವಿಽವಿಧಾನಗಳಲ್ಲಿ ಪಾಲ್ಗೊಂಡರು.

ಮಾಯಿದೆ ದೇವುಸ್ ಚರ್ಚ್ನಲ್ಲಿ ಗುಡ್‌ ಫ್ರೈಡೇ ದಿನದ ಅಂಗವಾಗಿ ಯೇಸುಕ್ರಿಸ್ತರ ಪೂಜ್ಯ ಶರೀರದೊಂದಿಗೆ ಕ್ರೈಸ್ತ ವಿಶ್ವಾಸಿ ಭಕ್ತರು ಚರ್ಚ್-ಕೋರ್ಟ್ರೋಡ್-ಎಂ.ಟಿರೋಡ್ ಮುಖೇನ ಯೇಸುಕ್ರಿಸ್ತರ ಸ್ಮರಣಾ ಮೆರವಣಿಗೆಯನ್ನು ಶ್ರದ್ಧಾ ಭಕ್ತಿಯಿಂದ ಹಮ್ಮಿಕೊಳ್ಳಲಾಯಿತು. ಬನ್ನೂರು ಚರ್ಚ್ನಲ್ಲಿ ಚರ್ಚ್ನಿಂದ ಆನೆಮಜಲು ಕೋರ್ಟ್ ಮುಖೇನ ಸಾಗಿ ಪುನಹ ಚರ್ಚ್ಗೆ ಆಗಮಿಸುವ ಹಾದಿಯಲ್ಲಿ ಯೇಸುಕ್ರಿಸ್ತರ ಶಿಲುಬೆಯ ಹಾದಿಯ 14 ಸ್ಥಳಗಳನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಮಾಯಿದೆ ದೇವುಸ್ ಚರ್ಚ್ನಲ್ಲಿ ಪ್ರಧಾನ ಧರ್ಮಗುರು ವಂ|ಲಾರೆನ್ಸ್ ಮಸ್ಕರೇನ್ಹಸ್, ಸಹಾಯಕ ಧರ್ಮಗುರು ವಂ|ಕೆವಿನ್ ಲಾರೆನ್ಸ್ ಡಿ ಸೋಜ, ವಂ|‌ಸ್ಟ್ಯಾನಿ ಪಿಂಟೋ, ವಂ|ಅಶೋಕ್ ರಾಯನ್ ಕ್ರಾಸ್ತಾ, ಬನ್ನೂರು ಚರ್ಚ್ ನಲ್ಲಿ ವಂ|ಬಾಲ್ತಜಾರ್ ಪಿಂಟೋ, ಹಿರಿಯ ಧರ್ಮಗುರು ವಂ|ಆಲ್ಪೋನ್ಸ್ ಮೊರಾಸ್, ಮರೀಲು ಚರ್ಚ್ ನಲ್ಲಿ ವಂ|ವಲೇರಿಯನ್ ಫ್ರ್ಯಾಂಕ್, ವಂ|ಡೆನ್ಜಿಲ್ ಲೋಬೊ, ಉಪ್ಪಿನಂಗಡಿ ಚರ್ಚ್‌ ನ ಲ್ಲಿ ವಂ|ಅಬೆಲ್ ಲೋಬೊ ನೇತೃತ್ವದಲ್ಲಿ ನಡೆಯಿತು.

ಶಿಲುಬೆಯ ಮೇಲೆ ಯೇಸುಕ್ರಿಸ್ತರು ಪ್ರಾಣ ಬಿಟ್ಟ ದಿನ ಇಡೀ ವಿಶ್ವಕ್ಕೆ ಬೇಸರದ ದಿನ(ಕಪ್ಪು ದಿನ)ವಾಗಿ ಪರಿಣಮಿಸಿದರೂ, ತನ್ನನ್ನು ತಾನು ಸಮರ್ಪಿಸಿಕೊಂಡು ಜನರಲ್ಲಿ ಪರಸ್ಪರ ಸೌಹಾರ್ದತೆ, ಮಾನವೀಯತೆ, ಪ್ರೀತಿ, ಕ್ಷಮಾಪಣಾ ಗುಣವನ್ನು ಬೋಽಸಿದ್ದು ಕ್ರೈಸ್ತ ಬಾಂಧವರಿಗೆ ಶುಭ ಶುಕ್ರವಾರವಾಗಿ ಪರಿಣಮಿಸಿದೆ. ಯೇಸುಕ್ರಿಸ್ತರ ಶಿಲುಬೆಯು ನಮ್ಮಲ್ಲಿ ಹೊಸ ಜೀವನ, ಸಾಂತ್ವನವುಳ್ಳ, ಸಮಾಧಾನದ ಪ್ರತೀಕವಾಗಿದೆ ಮಾತ್ರವಲ್ಲದೆ ಕುಟುಂಬದ ಪಾವಿತ್ರ‍್ಯತೆಯನ್ನು ಹೆಚ್ಚಿಸುತ್ತದೆ. ಯೇಸುಕ್ರಿಸ್ತರು ಸಾವಿಗೆ ಶರಣಾಗಲಿಲ್ಲ. ಸಾವನ್ನು ಲೆಕ್ಕಿಸದೆ ತಾವು ನಂಬಿದ ಮೌಲ್ಯಗಳಿಗಾಗಿ ನಿಂತರು. ಆತನ ಹಿಂಬಾಲಕರಾದ ನಾವು ಸಹ ನಿಲ್ಲಬೇಕಾದ್ದು ಅವರ ಮೌಲ್ಯಗಳಿಗಾಗಿ, ಸಾಗಬೇಕಾದ್ದು ಅವರದೇ ಗುರಿಯತ್ತ. ಶಿಲುಬೆಯ ಮೇಲೆ ಪ್ರಾಣ ಬಿಟ್ಟ ಪ್ರಭು ಯೇಸುಕ್ರಿಸ್ತರು ನಮ್ಮಲ್ಲಿ ಪರಸ್ಪರ ಕ್ಷಮೆ, ಬೆಳಕು ಚೆಲ್ಲುವ ಮತ್ತು ಅರ್ಪಣಾ ಭಾವದ ಮೌಲ್ಯಗಳನ್ನು ಎತ್ತಿ ತೋರಿಸುತ್ತದೆ. ಆದ್ದರಿಂದ ಯೇಸುಕ್ರಿಸ್ತರ ಶಿಲುಬೆಯ ಮುಖಾಂತರದ ಪ್ರಾಣ ತ್ಯಾಗ ಮನುಜನ ಪಾಪ ಪರಿಹಾರಕ್ಕಾಗಿದೆ ಎಂಬುದು ಗುಡ್‌ ಫ್ರೈಡೇ ದಿನದ ಸಂದೇಶವಾಗಿದೆ.

ಪುತ್ತಿಲ ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ | ದರ್ಬೆಯಲ್ಲಿ ಸಾವಿರಾರು ಸಂಖ್ಯೆಯ ಜಮಾಯಿಸಿದ ಕಾರ್ಯಕರ್ತರು

Posted by Vidyamaana on 2023-04-17 05:59:48 |

Share: | | | | |


ಪುತ್ತಿಲ ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ | ದರ್ಬೆಯಲ್ಲಿ ಸಾವಿರಾರು ಸಂಖ್ಯೆಯ ಜಮಾಯಿಸಿದ ಕಾರ್ಯಕರ್ತರು

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅರುಣ್ ಕುಮಾರ್ ಪುತ್ತಿಲ ರವರು ಇಂದು ನಾಮಪತ್ರ ಸಲ್ಲಿಸಲಿದ್ದು, ದರ್ಬೆ ವೃತ್ತದಿಂದ ಪುತ್ತೂರು ತಾಲೂಕು ಆಡಳಿತ ಸೌಧದ ವರೆಗೆ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆ ದರ್ಬೆ ಜಂಕ್ಷನ್ ನಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ.ಹಿಂದೂ ಕಾರ್ಯಕರ್ತರ ಒತ್ತಾಯದ ಮೇರೆಗೆ ಪುತ್ತಿಲ ರವರು ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಪುತ್ತಿಲ ಪರ ಪ್ರಚಾರ ನಡೆಸಲು ಸಾವಿರಾರು ಕಾರ್ಯಕರ್ತರು ಜಮಾವಣೆಗೊಂಡಿದ್ದರು.

ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಶೇರು ಪ್ರಮಾಣ ಪತ್ರ ವಿತರಣಾ ಸಮಾರಂಭ

Posted by Vidyamaana on 2023-08-29 07:34:23 |

Share: | | | | |


ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಶೇರು ಪ್ರಮಾಣ ಪತ್ರ ವಿತರಣಾ ಸಮಾರಂಭ

ಪುತ್ತೂರು: ತೆಂಗು ಕೃಷಿಯನ್ನು ವೈಜ್ಞಾನಿಕ ಪದ್ಧತಿಯಲ್ಲಿ ನಡೆಸಿದಾಗ ಅಧಿಕ ಇಳುವರಿ ಪಡೆಯಲು ಸಾಧ್ಯ. ಉಪಬೆಳೆ ಎನ್ನುವ ಮನಸ್ಥಿತಿಯಿಂದ ಹೊರಬರಬೇಕು ಎಂದು ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ವಿಜ್ಞಾನಿ ಡಾ.ರಶ್ಮಿ ಆರ್. ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ತೆಂಗು ಉತ್ಪಾದಕರ ಕಂಪನಿ ಮತ್ತು ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇದರ ಜಂಟಿ ಸಹಯೋಗದಲ್ಲಿ ಆ. 28ರಂದು ಜೈನ ಭವನದಲ್ಲಿ ನಡೆದ ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಮತ್ತು ಶೇರು ಪ್ರಮಾಣ ಪತ್ರ ವಿತರಣೆ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ತೆಂಗಿಗೆ ವಿಶೇಷ ಆಶಕ್ತಿ ನೀಡದೇ ಇರುವುದರಿಂದ ಇಂದು ಇಳುವರಿ ಕಡಿಮೆಯಾಗಿದೆ. ಜೊತೆಗೆ ಸಮಗ್ರ ಪೋಷಕಾಂಶಗಳ ಕೊರತೆಯಿಂದ ನುಸಿ ರೋಗಗಳಂತ ಕಾಯಿಲೆಗಳು ಬಾಧಿಸುತ್ತಿವೆ. ಆದ್ದರಿಂದ ಕರಾವಳಿಯ ಈ ಭಾಗದಲ್ಲಿ ಮಣ್ಣಿಗೆ ಆವಶ್ಯಕವಾದ ಸಾರಜನಕ, ರಂಜಕ, ಪೊಟ್ಯಾಶ್ಗಳಂತ ಪ್ರಧಾನ ಪೋಷಕಾಂಶ ನೀಡಬೇಕು. ಮಣ್ಣು ಪರೀಕ್ಷೆಯೂ ಅಗತ್ಯವಾಗಿದ್ದು, ಕನಿಷ್ಠ 2 ವರ್ಷಕ್ಕೊಮ್ಮೆ ಮಣ್ಣು ಪರೀಕ್ಷೆ ಮಾಡುವ ಸಂಪ್ರದಾಯ ರೂಢಿಸಿಕೊಳ್ಳಬೇಕು. ಹೀಗೆ ಪ್ರತಿ ಹಂತದಲ್ಲೂ ತೆಂಗಿಗೆ ವಿಶೇಷ ಆಸಕ್ತಿ ವಹಿಸಿ ಕೆಲಸ ಮಾಡಿದಾಗ ಪ್ರಧಾನ ಬೆಳೆಯಾಗಿ, ಉತ್ತಮ ಇಳುವರಿ ಪಡೆಯಲು ಸಾಧ್ಯ ಎಂದರು.

ಬೆಂಬಲ ಬೆಲೆಗೆ ಆಗ್ರಹಿಸಿ ಅ. 2ರಂದು ರಾಜಭವನ ಚಲೋ: ರವಿಕಿರಣ್ ಪುಣಚ

ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಮಾತನಾಡಿ, ತೆಂಗಿನಕಾಯಿಯ ಮೌಲ್ಯವರ್ಧನೆಯ ಗುಟ್ಟು ಎಲ್ಲರಿಗೂ ತಿಳಿದಿದೆ. ಆದರೆ ಇದರಿಂದ ಎಷ್ಟು ಆದಾಯ ಬರಬಹುದು ಎನ್ನುವ ಆಲೋಚನೆ ಯಾರಿಗೂ ಇಲ್ಲ. ಒಂದು ಮರದಿಂದ 3 ಸಾವಿರ ರೂ.ದಿಂದ 5 ಸಾವಿರ ರೂ.ವರೆಗೆ ಆದಾಯ ಪಡೆಯಬಹುದು. ಆದ್ದರಿಂದ ರೈತರು ಈ ದಿಶೆಯಲ್ಲಿ ಆಲೋಚನೆ ಮಾಡಬೇಕು. ಇಷ್ಟೆಲ್ಲಾ ಇದ್ದರೂ, ರಾಜಕೀಯದ ಇಚ್ಚಾಶಕ್ತಿಯ ಕೊರತೆಯಿಂದಾಗಿ ತೆಂಗಿನಕಾಯಿಯನ್ನು ಖರೀದಿಸಲು ಸರಕಾರಿ ವ್ಯವಸ್ಥೆಗಳು ಇಲ್ಲ ಎನ್ನುವುದು ಬೇಸರದ ಸಂಗತಿ. ಆದ್ದರಿಂದ ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ 20 ಸಾವಿರ ರೂ. ಬೆಂಬಲ ಬೆಲೆಯನ್ನು ಕೇಂದ್ರ ಸರಕಾರ ನಿಗದಿಪಡಿಸಬೇಕು ಹಾಗೂ ರಾಜ್ಯ ಸರಕಾರ 5 ಸಾವಿರ ರೂ. ಪ್ರೋತ್ಸಾಹ ಧನ ನೀಡಬೇಕು ಎಂಬ ಆಗ್ರಹವನ್ನು ಮುಂದಿಟ್ಟುಕೊಂಡು ಅಕ್ಟೋಬರ್ 2ರಂದು ತಿಪಟೂರಿನಿಂದ ರಾಜಭವನ ಚಲೋ ಪಾದಯಾತ್ರೆ ನಡೆಯಲಿದೆ. ಅಕ್ಟೋಬರ್ 9ರಂದು ಫ್ರೀಡಂ ಪಾರ್ಕಿನಲ್ಲಿ ಬೃಹತ್ ಕಲ್ಮಿನೇಷನ್ ನಡೆಯಲಿದೆ ಎಂದರು.

ರೈತರೇ ವಿಜ್ಞಾನಿಗಳಾಗಬೇಕು: ಕಡಮಜಲು ಸುಭಾಷ್ ರೈ

ವಿಜಯ ಕರ್ನಾಟಕ ಸೂಪರ್ ಸ್ಟಾರ್ ಪ್ರಶಸ್ತಿ ಪುರಸ್ಕೃತ ಕೃಷಿಕ ಕಡಮಜಲು ಸುಭಾಸ್ ರೈ ಮಾತನಾಡಿ, ಉಪಬೆಳೆಯಾಗಿರುವ ತೆಂಗಿಗೆ ವೈಜ್ಞಾನಿಕ ವಿಧಾನ ಅಳವಡಿಸಿಕೊಳ್ಳಬೇಕು. ಇದರಿಂದ ಅಧಿಕ ಲಾಭ ಗಳಿಸಲು ಸಾಧ್ಯ. ಬದುಕಿಗೆ ಪೂರಕವಾಗಿ ಸಮಗ್ರ ಕೃಷಿ ಮಾಡಿದಾಗ ಆರ್ಥಿಕ ಅಭಿವೃದ್ಧಿ ಸಾಧ್ಯ. ಇದಕ್ಕಾಗಿ ಲ್ಯಾಬಿನಲ್ಲಿ ಆಗುವ ಪ್ರಯೋಗಗಳನ್ನು ಮಣ್ಣಿಗೆ ತರುವ ಕೆಲಸ ಆಗಬೇಕು. ಈ ಕೆಲಸವನ್ನು ಕೃಷಿಕರೇ ಮಾಡಬೇಕಾಗಿದೆ ಎಂದರು.

ಕ್ಷಿಪ್ರಸಾಲಕ್ಕಾಗಿ ಒಡಂಬಡಿಕೆ: ಪೂರ್ಣಿಮಾ ಎನ್.

ಮಾನಸಗಂಗಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಎನ್. ಮಾತನಾಡಿ, ರೈತರಿಗೆ ಅಗತ್ಯವಿರುವ ಕೃಷಿ ಸಲಕರಣೆ, ರಸಗೊಬ್ಬರಗಳನ್ನು ಪೂರೈಸುವ ದೃಷ್ಟಿಯಿಂದ ಕ್ಷಿಪ್ರ ಗತಿಯಲ್ಲಿ ಸಾಲ ಸೌಲಭ್ಯ ನೀಡಲು ನಮ್ಮ ಸಂಘ ಮುಂದೆ ಬಂದಿದೆ. ಈ ನಿಟ್ಟಿನಲ್ಲಿ ತೆಂಗು ಉತ್ಪಾದಕರ ಕಂಪೆನಿ ಹಾಗೂ ಮಾನಸಗಂಗಾಗ ಸಹಕಾರ ಸಂಸ್ಥೆಯು ಒಡಂಬಡಿಕೆ ಮಾಡಿಕೊಂಡಿದೆ ಎಂದರು.

ಗಣೇಶ ಚತುರ್ಥಿ ಬಳಿಕ ತೆಂಗು ಖರೀದಿ: ಕುಸುಮಾಧರ ಎಸ್.ಕೆ.

ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ತೆಂಗು ಉತ್ಪಾದಕರ ಕಂಪನಿ ಅಧ್ಯಕ್ಷ ಕುಸುಮಾಧರ ಎಸ್.ಕೆ. ಮಾತನಾಡಿ, ತೆಂಗಿಗೆ ಮೌಲ್ಯವರ್ಧನೆ ಮಾಡಿ, ಉತ್ತಮ ಬೆಲೆ ಒದಗಿಸುವುದೇ ನಮ್ಮ ಉದ್ದೇಶ. ಇದಕ್ಕಾಗಿ ಬೇರೆ ಬೇರೆ ಯೋಜನೆಗಳನ್ನು ಅಳವಡಿಸಿಕೊಳ್ಳಲಾಗಿದೆ. ಕಲ್ಪರಸ ಯೋಜನೆಯ ಜಾರಿಗಾಗಿ ದೊಡ್ಡತೋಟದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಗಣೇಶ ಚತುರ್ಥಿ ಬಳಿಕ ಅಲ್ಲಿ ತೆಂಗಿನಕಾಯಿ ಖರೀದಿಸಲಾಗುವುದು. ತೆಂಗಿನಕಾಯಿ ಕೀಳಲು ಜನರ ಸಮಸ್ಯೆ ಇದೆ ಎನ್ನುವ ಕಾರಣಕ್ಕಾಗಿ, ಟೋಲ್ ಫ್ರೀ ಸಹಾಯವಾಣಿಯನ್ನು ನೀಡಲಾಗಿದೆ. ಸದಸ್ಯರ ಉತ್ತಮ ಯೋಜನೆಗಳಿಗೆ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ 100 ಕೋಟಿ ರೂ.ವರೆಗೆ ಸಾಲ ಒದಗಿಸುವ ಯೋಜನೆಯೂ ಇದೆ. ಮಾತ್ರವಲ್ಲ, ಕಲ್ಪ ಸಮೃದ್ಧಿ ಯೋಜನೆಯಡಿ ಠೇವಣಿ ಇಟ್ಟರೆ ಶೇ. 12ರವರೆಗೆ ಬಡ್ಡಿ ನೀಡಲಾಗುವುದು ಎಂದು ಮಾಹಿತಿ ನೀಡಿದ ಅವರು, ಸಂಸ್ಥೆ ಪ್ರಾರಂಭಗೊಂಡು 2 ವರ್ಷ ಪೂರೈಸಿದೆ. ಈ 2 ವರ್ಷದಲ್ಲಿ 14 ಸಾವಿರ ರೈತರನ್ನು ಹೊಂದಿದ್ದು, ದೇಶದಲ್ಲೇ ಪ್ರಥಮ ಸಂಸ್ಥೆ ಎನ್ನುವ ಹಿರಿಮೆಗೂ ಪಾತ್ರವಾಗಿದೆ ಎಂದರು.

ನಿರ್ದೇಶಕಿ ಲತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸದಸ್ಯ ರೈತರಾದ ಎ. ಜತೀಂದ್ರ ಶೆಟ್ಟಿ, ಜಗನ್ನಾಥ ರೈ ಡಿ, ಐತ್ತಪ್ಪ ನಾಯ್ಕ್, ಆಯಿಷಾ, ದುಗ್ಗಪ್ಪ ಗೌಡ, ಐತ್ತಪ್ಪ ರೈ ಅವರಿಗೆ ಇದೇ ಸಂದರ್ಭ ಶೇರು ಪ್ರಮಾಣ ಪತ್ರ ವಿತರಿಸಲಾಯಿತು.

ನಿಶ್ಮಿತಾ ಪ್ರಾರ್ಥಿಸಿದರು. ನಿರ್ದೇಶಕ ಗಿರಿಧರ್ ಸ್ವಾಗತಿಸಿದರು. ನಿರ್ದೇಶಕಿ ಲತಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಳ್ಯ ಕಚೇರಿ ಮೇಲ್ವಿಚಾರಕಿ ಅಪರ್ಣಾ ವಂದಿಸಿದರು. ಡಾ.ರಾಜೇಶ್ ಬೆಜ್ಜಂಗಳ ಕಾರ್ಯಕ್ರಮ ನಿರೂಪಿಸಿದರು.

ಬೆಳ್ತಂಗಡಿ : ಸವಣಾಲು ಎರಡು ಬೈಕ್ ಗಳ ನಡುವೆ ಅಪಘಾತ ಹೆನ್ರಿ ಡಿಸೋಜಾ ಸ್ಥಳದಲ್ಲಿಯೇ ಮೃತ್ಯು, ಇನ್ನೊಬ್ಬರಿಗೆ ಗಂಭೀರ ಗಾಯ

Posted by Vidyamaana on 2023-03-30 08:41:43 |

Share: | | | | |


ಬೆಳ್ತಂಗಡಿ : ಸವಣಾಲು ಎರಡು  ಬೈಕ್ ಗಳ ನಡುವೆ ಅಪಘಾತ  ಹೆನ್ರಿ ಡಿಸೋಜಾ ಸ್ಥಳದಲ್ಲಿಯೇ ಮೃತ್ಯು, ಇನ್ನೊಬ್ಬರಿಗೆ ಗಂಭೀರ ಗಾಯ

ಬೆಳ್ತಂಗಡಿ : ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ, ಇನ್ನೋರ್ವ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯ ಸವಣಾಲಿನಲ್ಲಿ  ಮಾ 30 ರಂದು ನಡೆದಿದೆ .

ಬೆಳ್ತಂಗಡಿ ತಾಲೂಕಿನ ಸವಣಾಲು ಮಸೀದಿ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಅಳದಂಗಡಿಯ ಕುರ್ದಲಬೆಟ್ಟು ನಿವಾಸಿ ಹೆನ್ರಿ ಡಿಸೋಜಾ(62) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೊಂದು ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಕರಂಬಾರು ನಿವಾಸಿ ಕರುಣಾಕರ ಹೆಗ್ಡೆ (60) ಗಂಭೀರ ಗಾಯಗೊಂಡಿದ್ದು ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇಸ್ಪೆಕ್ಟರ್  ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Recent News


Leave a Comment: