Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10
ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.
ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.
Posted by Vidyamaana on 2024-01-13 08:25:36 |
ಗದಗ: ಪ್ರಾಂಶುಪಾಲರ ಮೊಬೈಲ್ ಕಳ್ಳತನ ಮಾಡಿದ ದುಷ್ಕರ್ಮಿಗಳು ಮೊಬೈಲ್ನ ಆನ್ಲೈನ್ ಆಯಪ್ ಮೂಲಕ ₹1.40 ಲಕ್ಷ ಹಣ ವರ್ಗಾವಣೆ ಮಾಡಿಕೊಂಡ ಘಟನೆ ನರಗುಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.ಪ್ರಾಂಶುಪಾಲರಾದ ಶ್ರೀಕಾಂತ ಕೃಷ್ಣಾಜಿ ಜೋಷಿ ಅವರು ಎಂದಿನಂತೆ ಕಾಲೇಜ್ಗೆ ತೆರಳುತ್ತಿದ್ದ ವೇಳೆ ಬಸ್ ನಿಲ್ದಾಣದಲ್ಲಿ ದುಷ್ಕರ್ಮಿಗಳು 20 ಸಾವಿರ ಮೌಲ್ಯದ ಮೊಬೈಲ್ ಅನ್ನು ಪ್ರಾಂಶುಪಾಲರ ಜೇಬಿನಿಂದ ಕಳ್ಳತನ ಮಾಡಿದ್ದಾರೆ.ಬಳಿಕ ಮೊಬೈಲ್ನಲ್ಲಿದ್ದ ಎಸ್ಬಿಐ ಖಾತೆಯ ಯುಪಿಐ ಬಳಸಿಕೊಂಡು ಬರೋಬ್ಬರಿ 1 ಲಕ್ಷದ 40 ಸಾವಿರ ರೂಗಳನ್ನ ತಮ್ಮ ಅಕೌಂಟ್ಗೆ ವರ್ಗಾವಣೆ ಮಾಡಿಕೊಂಡಿದ್ದಾರೆ.
ಮೊದಲು ₹75 ಸಾವಿರ, ₹50 ಸಾವಿರ ಹಾಗೂ ₹15 ಸಾವಿರ ಎಂಬಂತೆ ಒಟ್ಟು ಮೂರು ಹಂತದಲ್ಲಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Posted by Vidyamaana on 2023-11-18 22:08:30 |
ಉಪ್ಪಿನಂಗಡಿ : ಯಾವುದೇ ಸಮಾಜ ಪ್ರಗತಿ ಪಥದಲ್ಲಿ ಸಾಗಬೇಕಿದ್ದರೆ ಕಾಲದ ಬೇಡಿಕೆಯನುಸಾರಉತ್ತಮ ದರ್ಜೆಯ ಶಿಕ್ಷಣದ ಅಗತ್ಯವಿದೆ. ನಮ್ಮ ಗಂಡು ಮಕ್ಕಳಂತೆ ಹೆಣ್ಮಕ್ಕಳಿಗೂ ಶಿಕ್ಷಣ ವನ್ನು ನೀಡಿ ಅವರನ್ನು ಸುಶಿಕ್ಷಿತರನ್ನಾಗಿ ರೂಪಿಸುವುದರೆ ಮಾತ್ರ ಮುಂದಿನ ಪೀಳಿಗೆ ಇಲ್ಲಿ ಸ್ವಾಭಿನಾನದಿಂದ ಬದುಕಲು ಸಾಧ್ಯ. ಆದರೆ ಯಾವುದೋ ಅಪರೂಪದ ಕಹಿ ಘಟನೆಗಳನ್ನು ಮುಂದಿಟ್ಟು ಮಹಿಳಾ ಶಿಕ್ಷಣ ವನ್ನು ಕೀಳಂದಾಜಿಸುವುದು,ಮತ್ತು ಅಡ್ಡಿ ಪಡಿಸುವುದು ಸಮಂಜಸವಲ್ಲ ಎಂದು ಕೆಮ್ಮಾರ ಶಂಸುಲ್ ಉಲಮಾ ಮಹಿಳಾ ಕಾಲೇಜ್ ಅಧ್ಯಕ್ಷ ಎಸ್.ಬಿ. ಮುಹಮ್ಮದ್ ದಾರಿಮಿ ಹೇಳಿದರು.
ಅವರು ಕೆಮ್ಮಾರ ಶಂಸುಲ್ ಉಲಮಾ ಮಹಿಳಾ ಶರೀಅತ್ ಕಾಲೇಜ್ ನಲ್ಲಿ ಇತ್ತೀಚೆಗೆ ಪುತ್ತೂರು ಮೌಂಟನ್ ವ್ಯೂ ಕಾಲೇಜ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ನಡೆದ ಸಮಸ್ತ ದ ಫಾಳಿಲಾ- ಫಳೀಲಾ ಕಾಲೇಜ್ ಗಳ ರಾಜ್ಯ ಮಟ್ಟದ ಹಿಯಾ ಫಿಯೆಸ್ಟ ಸ್ಪರ್ಧಾ ಕಾರ್ಯಕ್ರಮದಲ್ಲಿ ದ್ವಿತೀಯ ಸ್ಥಾನ ಪಡೆದ ಕೆಮ್ಮಾರ ಶಂಸುಲ್ ಉಲಮಾ ಮಹಿಳಾ ಕಾಲೇಜ್ ವಿದ್ಯಾರ್ಥಿನಿಯರನ್ನು ಆಡಳಿತ ಸಮಿತಿ ವತಿಯಿಂದ ಅಭಿನಂದಿಸಿ ಮಾತನಾಡುತ್ತಿದ್ದರು.
ಸುಸಂಸ್ಕೃತ ಸಮಾಜ ರೂಪಿಸುವಲ್ಲಿ ಧಾರ್ಮಿಕ ಶ್ರದ್ಧೆ, ಭಕ್ತಿಯೂ ಮುಖ್ಯವಾಗಿದ್ದು, ಆದ್ದರಿಂದ ಮಕ್ಕಳಿಗೆ ಲೌಕಿಕ ಶಿಕ್ಷಣದ ಜೊತೆಗೆ ಸಾಕಷ್ಟು ಮೌಲ್ಯಯುತ ಧಾರ್ಮಿಕ ಶಿಕ್ಷಣವನ್ನೂ ಸಮನ್ವಯಿಸಿ ನೀಡುವುದು ಅಗತ್ಯ, ಈ ನಿಟ್ಟಿನಲ್ಲಿ ಉಲಮಾ ಸಂಘಟನೆಯಾದ ಸಮಸ್ತದ ಅಧೀನದಲ್ಲಿ ಮಹಿಳೆಯರಿಗಾಗಿ ಪಿಯು ಜೊತೆಗೆ ಫಾಳಿಲಾ - ಫಳೀಲಾ ಸಮನ್ವಯ ಶಿಕ್ಷಣ ವ್ಯವಸ್ಥೆ ಹಾಗೂ ಪ್ರತಿಭೆಗಳನ್ನು ಪೋಷಿಸುವ ಸಲುವಾಗಿ ಇತ್ತಿಚೇಗೆ ರಾಜ್ಯ ಮಟ್ಟದಲ್ಲಿ ಏರ್ಪಡಿಸಲಾದ ಹಿಯಾ ಫಿಯೆಸ್ಟ ಕಾರ್ಯಕ್ರಮಗಳು ಅಭಿನಂದಾರ್ಹವಾಗಿದೆ ಎಂದು ಅವರು ಹೇಳಿದರು.
ಸಮಾರಂಭದಲ್ಲಿ ಸಂಸ್ಥೆಯ ಉಸ್ತಾದರಾದ ಅಬ್ದುರ್ರಹ್ಮಾನ್ ಫೈಝಿ ಪೆರಿಯಡ್ಕ , ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಕಾಲೇಜ್ ನ ಉಸ್ತಾದ್ ಕೆ.ಎಂ.ಎ.ಕೊಡುಂಗಾಯಿ ಮೊದಲಾದವರು ಮಾತನಾಡಿದರು.
ಕಾಲೇಜ್ ನ ಉಪನ್ಯಾಸಕಿಯರ ನೇತೃತ್ವದಲ್ಲಿ ವಿವಿಧ ಪ್ರತಿಭಾ ಕಾರ್ಯಕ್ರಮ ಮತ್ತು ಸ್ಮರಣಿಕೆ ವಿತರಣೆ ನಡೆಯಿತು.
Posted by Vidyamaana on 2023-06-16 09:01:27 |
ಪುತ್ತೂರು: ಮುಂಬಯಿಯ ಜಿಯೋ ಕನ್ವೆನ್ಸ್ಯನ್ ಸೆಂಟರ್ ನಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಅಖಿಲ ಭಾರತ ಶಾಸಕಾಂಗ ಸಮ್ಮೇಳನಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಭಾಗವಹಿಸಿದರು. ಶಾಸಕರಿಗೆ ತರಬೇತಿ ಸೇರಿದಂತೆ ಶಾಸಕಾಂಗ ವಿಚಾರದಲ್ಲಿ ಮಾಹಿತಿ ಕಾರ್ಯಾಗಾರವೂ ಇಲ್ಲಿ ನಡೆಯುತ್ತದೆ. ದೇಶಾಧ್ಯಂತ ಸುಮಾರು2000 ಮಂದಿ ವಿವಿಧ ರಾಜ್ಯಗಳ ಶಾಸಕರು ಈ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ. ನಾಳೆ ಶನಿವಾರ ಸಮಾವೇಶ ಕೊನೆಗೊಳ್ಳಲಿದೆ.
Posted by Vidyamaana on 2023-05-21 05:37:23 |
ಪುತ್ತೂರು: ನಮ್ಮ ನಡಿಗೆ ಮಹಾಲಿಂಗೇಶ್ವರನ ನಡೆಗೆ ಕಾಲ್ನಡಿಗೆ ಜಾಥಾ ಹಲವು ಕಾರಣಗಳಿಂದ ಗಮನ ಸೆಳೆದಿದೆ.
ಕಾರ್ಯಕ್ರಮ ಶಿಸ್ತುಬದ್ಧವಾಗಿ ಮೂಡಿಬರಲು ಸಾಕಷ್ಟು ತಯಾರಿಗಳನ್ನು ನಡೆಸುವ ಜೊತೆಗೆ, ಇಲ್ಲಿ ನಡೆಯುವ ಸಮಾರಂಭ ಮುಂದಿನ ಹಲವು ಹೆಜ್ಜೆಗಳನ್ನು ಮುಂದಿಡುವಲ್ಲಿ ಮಹತ್ವಪೂರ್ಣ ಎನಿಸಿಕೊಂಡಿದೆ.
ಕಾರ್ಯಕರ್ತರಿಗೆ, ಮತದಾರರಿಗೆ ಕೃತಜ್ಞತೆಯ ಜೊತೆಗೆ ದರ್ಬೆ ವೃತ್ತದಿಂದ ಮಹಾಲಿಂಗೇಶ್ವರ ದೇವರ ನಡೆಯವರೆಗೆ ಕಾಲ್ನಡಿಗೆ ಜಾಥಾ ನಡೆಯಲಿದೆ. ಚುನಾವಣೆಯುದ್ಧಕ್ಕೂ ಬೆನ್ನು ಸಹಾಯವಾಗಿ ನಿಂತು ಕಾಪಾಡಿದ ಮಹಾಲಿಂಗೇಶ್ವರನಿಗೆ ಸಮರ್ಪಣಾ ಭಾವದಿಂದ ನಡೆಯುವ ಕಾರ್ಯಕ್ರಮವಿದು. ಆದರೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ನೀಡಿರುವ ಸೂಚನೆಗಳು ಗಮನ ಸೆಳೆಯುತ್ತಿವೆ.
ಕಾರ್ಯಕರ್ತರಿಗೆ ಅಭಿಮಾನಿಗಳಿಗೆ ನೀಡಿರುವ ಸೂಚನೆ ಹೀಗಿವೆ:
ಕಾಲ್ನಡಿಗೆ ಜಾಥಾದಲ್ಲಿ ಅರುಣ್ ಕುಮಾರ್ ಪುತ್ತಿಲ ಅವರು ಬರಿಗಾಲಿನಲ್ಲಿ ನಡೆಯಲಿದ್ದಾರೆ. ಇವರ ಜೊತೆ ಬರಿಗಾಲಿನಲ್ಲಿ ಬರಲು ಕಾರ್ಯಕರ್ತರಿಗೆ ಅವಕಾಶವಿದೆ. ಹಾಗೆಂದು ನಿರ್ಬಂಧವಿಲ್ಲ ಎನ್ನುವುದನ್ನು ಕೂಡ ಗಮನಿಸಬೇಕು.
ಮಹಾಲಿಂಗೇಶ್ವರ ದೇವರಿಗೆ ಜಯಘೋಷ ಹೊರತುಪಡಿಸಿ ಬೇರಾವುದೇ ಘೋಷಣೆಗಳನ್ನು ಜಾಥಾದುದ್ದಕ್ಕೂ ಕೂಗುವಂತಿಲ್ಲ. ಇದರೊಂದಿಗೆ ಭಜನೆ, ಓಂ ನಮಃ ಶಿವಾಯ, ಮಂತ್ರ ಪಠಣಕ್ಕಷ್ಟೇ ಅವಕಾಶ.
ಮಾಲಾರ್ಪಣೆ, ಹಾರಾರ್ಪಣೆಗೂ ಅವಕಾಶ ಇಲ್ಲ.
ದರ್ಬೆಯಿಂದ ಸಮಾರೋಪ ಆಗುವ ಮಹಾಲಿಂಗೇಶ್ವಲರ ದೇವರ ರಥಬೀದಿಯವರೆಗಿನ ಜಾಥಾದಲ್ಲಿ ನೂಕುನುಗ್ಗಲು ಆಗದಂತೆ ಶಿಸ್ತಿನಿಂದ ಕಾಲ್ನಡಿಗೆಯಲ್ಲಿ ಪಾಲ್ಗೊಳ್ಳಬೇಕು.
ಬಿಳಿ ಬಣ್ಣದ ಶರ್ಟ್ ಮತ್ತು ಕೇಸರಿ ಪಂಚೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ದಿಕ್ಸೂಚಿ ಭಾಷಣಗಾರನಾರು?
ಮತದಾರರ ತೀರ್ಪುನ್ನು ಗೌರವಿಸುವ ನಿಟ್ಟಿನಲ್ಲಿ, ಚುನಾವಣೆ ಸಂದರ್ಭ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸೇವಾ ಸಮರ್ಪಣಾ ಸಮಾರಂಭ ಮಹತ್ವ ಪಡೆದುಕೊಂಡಿದೆ. ಇದರೊಂದಿಗೆ ಕಾರ್ಯಕ್ರಮದ ದಿಕ್ಸೂಚಿ ಭಾಷಣಗಾರರ ಹೆಸರನ್ನು ಗೌಪ್ಯವಾಗಿಟ್ಟಿರುವುದು ಕಾರ್ಯಕ್ರಮದ ಹೈಲೈಟ್ಸ್. ಇದುವರೆಗೆ ಯಾರು ದಿಕ್ಸೂಚಿ ಭಾಷಣ ಮಾಡುತ್ತಾರೆ ಎಂಬ ಹೆಸರನ್ನು ಹೊರ ಬಿಟ್ಟಿಲ್ಲ. ಇದು ಕೊನೆವರೆಗೂ ಗೌಪ್ಯವಾಗಿಯೇ ಇರುತ್ತದೆ.
ಮುಂದಿನ 5 ವರ್ಷಗಳ ಕೆಲಸ ಮುಂದಿಡುತ್ತೇವೆ:ಅರುಣ್ ಕುಮಾರ್ ಪುತ್ತಿಲ
ಪುತ್ತಿಲ ಅವರು ತಿಳಿಸಿದ್ದಾರೆ. ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ಚುನಾವಣೆ ಸಂದರ್ಭದಲ್ಲಿ ನಮಗೆ ಮತವನ್ನು ನೀಡಿದಎಲ್ಲಾ ಮತದಾರ ಬಾಂಧವರಿಗೆ ಮತ್ತು ಸತ್ಯಾಸತ್ಯತೆಯನ್ನು ಅತ್ಯಂತ ಪಾರದರ್ಶಕವಾಗಿ ಸಮಾಜದ ಮುಂದೆ ಇಟ್ಟಿರುವ ಎಲ್ಲಾ ಮಾಧ್ಯಮ ಮಿತ್ರರಿಗೆ ಕೃತಜ್ಞತೆ ಅರ್ಪಿಸಿದ ಅವರು, ಚುನಾವಣೆಯಲ್ಲಿ ಕೊನೆಯ ಕ್ಷಣದಲ್ಲಿ ಸಣ್ಣ ಅಂತರದಿಂದ ನಮಗೆ ಸೋಲು ಬಂದಿದೆ. ಮತದಾರರ ತೀರ್ಮಾನವನ್ನು ನಾವು ಗೌರವಿಸುತ್ತೇವೆ.ಈ ನಿಟ್ಟಿನಲ್ಲಿ ಕಾರ್ಯಕರ್ತರಿಗೆ ಅಭಿನಂದನಾ ಸಭೆಯು ಮೇ 21ರಂದು ಸಂಜೆ ಗಂಟೆ 4ಕ್ಕೆ ನಡೆಯಲಿದೆ. ದರ್ಬೆ ವೃತ್ತದಿಂದ ಬರಿ ಕಾಲಿನಲ್ಲಿ ಪಾದಯಾತ್ರೆ ನಡೆಯಲಿದೆ. ಧರ್ಮಾಧಾರಿತವಾದ ರಾಜಕಾರಣ ಮತ್ತು ಹಿಂದುತ್ವವನ್ನು ಪ್ರತಿಪಾದನೆ ಮಾಡುವ ಸಂಕಲ್ಪದ ಜೊತೆಗೆ ಮಹಾಲಿಂಗೇಶ್ವರ ದೇವರ ನಡೆಯಲ್ಲೇ ಎಲ್ಲಾ ಕಾರ್ಯಚಟುವಟಿಕೆ ಮಾಡಿದ್ದೆವು. ಅದಕ್ಕಾಗಿ ಮತದಾರರಿಗೆ ಕೃತಜ್ಞತೆ ಮತ್ತು ಚುನಾವಣೆ ಸಂದರ್ಭದಲ್ಲಿ ನಮಗೆ ಶಕ್ತಿಯನ್ನು ನೀಡಿದ ದೇವರಿಗೆ ವಂದನೆ ಸಲ್ಲಿಸುವ ನಿಟ್ಟಿನಲ್ಲಿ ದರ್ಬೆಯಿಂದ ಪಾದಯಾತ್ರೆ ಮೂಲಕ ದೇವರಿಗೆ ವಂದನೆ ಸಲ್ಲಿಸಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಮುಂದಿನ 5 ವರ್ಷಗಳ ಕಾಲ ಯಾವ ರೀತಿ ಕೆಲಸ ಮಾಡಬೇಕು ಮತ್ತು ಮುಂದಿನ ನಮ್ಮ ನಡೆ ಏನು ಎಂಬುದನ್ನು ಸಮಾವೇಶದಲ್ಲಿ ತಿಳಿಸಲಿದ್ದೇವೆ.
Posted by Vidyamaana on 2023-12-31 19:10:51 |
ಕಲಬುರಗಿ: ಬೆಳಗಾವಿ ಜಿಲ್ಲೆಯ ಹಾಸ್ಟೆಲ್ನಲ್ಲಿ ವಾರ್ಡನ್ ಆಗಿರುವ ಮಹಿಳೆಯೊಬ್ಬಳು ಕೆಎಎಸ್ ಅಧಿಕಾರಿಯಾಗಿರುವ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಇದನ್ನು ನೋಡಿದ್ದಕ್ಕೆ ತನ್ನ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಆರೋಪಿಸಿ 9 ವರ್ಷದ ಮಗಳು ಇಲ್ಲಿನ ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.ಘಟನೆ ಬೈಲಹೊಂಗಲದಲ್ಲಿ ನಡೆದಿದ್ದರಿಂದ ನಗರದ ಪೋಕ್ಸೊ ನ್ಯಾಯಾಲಯದ ಸೂಚನೆ ಮೇರೆಗೆ ಪ್ರಕರಣವನ್ನು ಬೈಲಹೊಂಗಲ ಠಾಣೆಗೆ ಶುಕ್ರವಾರ ವರ್ಗಾಯಿಸಲಾಗಿದೆ.
9 ವರ್ಷದ ಬಾಲಕಿ ನೀಡಿದ ದೂರಿನ ಅನ್ವಯ ಆಕೆಯ ತಾಯಿ ಹಾಗೂ ಕೆಎಎಸ್ ಅಧಿಕಾರಿ ರಾಮನಗೌಡ ಕನ್ನೊಳ್ಳಿ ಎಂಬುವವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಕಲಬುರಗಿಯ ಸರಸ್ವತಿ ಗೋದಾಮು ಬಳಿಯ ನಿವಾಸಿಯಾಗಿದ್ದ ಬಾಲಕಿಯ ತಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆ ಬಳಿಕ ತಾಯಿಯ ಸ್ವಂತ ಊರಾದ ಬೆಳಗಾವಿ ಜಿಲ್ಲೆಯ ಪಟ್ಟಣವೊಂದರಲ್ಲಿ ವಾಸವಾಗಿದ್ದಳು. ಈ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್ ಆಗಿರುವ ತಾಯಿ ತನ್ನ ಹಿರಿಯ ಅಧಿಕಾರಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ಹಲವು ಬಾರಿ ಖಾಸಗಿ ಕ್ಷಣಗಳನ್ನು ನನ್ನ ಎದುರೇ ಕಳೆದಿದ್ದರು. ಯಾರ ಬಳಿಯೂ ಹೇಳದಂತೆ ಸಾಕಷ್ಟು ದೈಹಿಕ, ಮಾನಸಿಕ ಹಿಂಸೆ ನೀಡಿದ್ದರು ಎಂದುಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.
ನಮ್ಮ ಸಂಬಂಧಕ್ಕೆ ಮಗಳು ಅಡ್ಡಿಯಾಗುತ್ತಾಳೆ. ಹೀಗಾಗಿ, ಆಕೆಯನ್ನು ಸಾಯಿಸಿ ಬಿಡುತ್ತೇನೆ ಎಂದೂ ತಾಯಿ ಹಲವು ಬಾರಿ ಹೇಳಿದ್ದಳು. ಆಕ್ಷೇಪಾರ್ಹ ಭಂಗಿಯಲ್ಲಿ ಇದ್ದುದನ್ನು ನೋಡಿದ್ದೇನೆ. ಹೀಗಾಗಿ, ನನ್ನ ಮೇಲೆ ಬಿಸಿ ನೀರನ್ನು ಎರಚಿ ದೈಹಿಕ ಹಿಂಸೆ ನೀಡಿದ್ದಾಳೆ. ಹೊಡೆತದಿಂದ ಗಾಯವಾದರೂ ಆಸ್ಪತ್ರೆಗೆ ಸೇರಿಸಿಲ್ಲ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.
ಎರಡನೇ ಆರೋಪಿಯಾಗಿರುವ ರಾಮನಗೌಡ ವಿಜಯಪುರದ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದರು.