Posted by vidyamaana on 2024-07-03 19:28:29 |
ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.
ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.
ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.
ಕಾರ್ಯಕ್ರಮದಲ್ಲಿ ಟ್ರಸ್ಟ್ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.
Posted by Vidyamaana on 2023-01-12 09:34:36 |
ಪುತ್ತೂರು: ನಗರಸಭೆಯಲ್ಲಿ ಅರ್ಜಿಗಳು ಯಾವುದೇ ಪೆಂಡಿಂಗ್ ಇಲ್ಲ. ನಾನು ಪೌರಾಯುಕ್ತರು ಪ್ರತಿ ಸೋಮವಾರ ಅಧಿಕಾರಿ, ಸಿಬ್ಬಂದಿಗಳ ಸಭೆ ನಡೆಸಿ ಯಾವ ಯಾವ ಪೈಲ್ ಪೆಂಡಿಂಗ್ ಇದೆ. ಯಾಕೆ ಪೆಂಡಿಂಗ್ ಇದೆ ಎಂದು ಪರಿಶೀಲನೆ ನಡೆಸುತ್ತೇವೆ. ಒಂದು ವೇಳೆ ಅರ್ಜಿಗಳ ವಿಲೇವಾರಿ ವಿಳಂಬವಾದಲ್ಲಿ ಪೌರಾಯುಕ್ತರು ಕ್ರಮ ಕೈಗೊಳ್ಳಲಿದ್ದಾರೆ ಎಂದು ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರು ಹೇಳಿದರು.
Posted by Vidyamaana on 2023-04-02 10:46:05 |
ಪುತ್ತೂರು : ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ವೈ ಎಸ್ ಪಡೀಲ್ ಯೂನಿಟ್ ವತಿಯಿಂದ ರಂಝಾನ್ ಕಿಟ್ ವಿತರಣಿ ಕಾರ್ಯಕ್ರಮವು ಮಾ 31ರಂದು ಪಡೀಲ್ ನಲ್ಲಿ ನಡೆಯಿತ್ತು. ಅಬ್ದುಲ್ ರಝಾಕ್ ಖಾಸಿಮಿ ಕೂರ್ನಡ್ಕ ದುವಾ ನೆರವೇರಿಸಿದರು.
Posted by Vidyamaana on 2023-05-08 05:21:21 |
ಬೆಂಗಳೂರು; ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ 83.89 ಶೇಕಡಾ ಫಲಿತಾಂಶ ಬಂದಿದೆ. ನಾಲ್ಕು ವಿದ್ಯಾರ್ಥಿಗಳ 625ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ.ಈ ಬಾರಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಚಿತ್ರದುರ್ಗ ಫಲಿಂತಾಶದಲ್ಲಿ ಪ್ರಥಮ ಸ್ಥಾನ ಪಡೆದ್ರೆ ಮಂಡ್ಯ ಜಿಲ್ಲೆ ಎರಡನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ.
ಚಿತ್ರದುರ್ಗ ಜಿಲ್ಲೆ 96.80 ಶೇಕಡಾ ಫಲಿತಾಂಶ ಪಡೆದರೆ, ಮಂಡ್ಯ ಜಿಲ್ಲೆ 96.74 ಶೇಕಡಾ ಫಲಿತಾಂಶ ಪಡೆದಿದೆ.
Posted by Vidyamaana on 2023-02-03 04:11:25 |
ಪುತ್ತೂರು: ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ದಿ. ಕಾರ್ತಿಕ್ ಮೇರ್ಲ ರವರ ತಂದೆ ಆರ್ಯಾಪು ಮೇರ್ಲದ ರಮೇಶ್ ಸುವರ್ಣ ರವರು ನಿಧನರಾದರು.ರಮೇಶ್ ಸುವರ್ಣ ರವರು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಮ್ಯಾನೇಜರ್ ಆಗಿ ಕಾರ್ಯಾ ನಿರ್ವಹಿಸುತ್ತಿದ್ದು, ಕೆಲ ವರುಷಗಳ ಹಿಂದೆ ನಿವೃತ್ತರಾಗಿದ್ದರು.ಮೃತರು ಮನೆಯವರು ಮತ್ತು ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವು ಇಂದು ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
2019ರಲ್ಲಿ ಸೆ.3 ರಂದು ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ನಡೆಯುತ್ತಿದ್ದ ಯಕ್ಷಗಾನವನ್ನು ವೀಕ್ಷಿಸುತ್ತಿದ್ದ ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ ರನ್ನು ಹತ್ಯೆ ಮಾಡಲಾಗಿತ್ತು.
Posted by Vidyamaana on 2024-04-18 13:21:16 |
ಬಂಟ್ವಾಳ: ಬಂಟ್ವಾಳ ಬಡ್ಡಕಟ್ಟೆ ಯಲ್ಲಿ ವ್ಯಕ್ತಿಯೋರ್ವರಿಗೆ ಚೂರಿ ಇರಿದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ರವಿ ನಾವೂರು ಬಂಧಿತ ಆರೋಪಿ. ಆತ ಎ. 14ರ ರಾತ್ರಿ ಜಕ್ರಿಬೆಟ್ಟು ನಿವಾಸಿ ಪುಷ್ಪರಾಜ್ ಅವರ ಕುತ್ತಿಗೆಯ ಭಾಗಕ್ಕೆ ಚೂರಿಯಿಂದ ಇರಿದು ಪರಾರಿಯಾಗಿದ್ದ.
Posted by Vidyamaana on 2023-12-13 11:23:22 |
ಮಂಗಳೂರು : ಈಜುಕೊಳದಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳೂರು ಮಹಾನಗರಪಾಲಿಕೆಯ ಈಜುಕೊಳದಲ್ಲಿ ನಡೆದಿದೆ.ಮಂಗಳವಾರ ಸಂಜೆ 4 ರ ಸುಮಾರಿಗೆ ಘಟನೆ ನಡೆದಿದೆ. ಹರಿಯಾಣ ಮೂಲದ ಅಭಿಷೇಕ್ (35) ಮೃತ ವ್ಯಕ್ತಿ. ಮಂಗಳೂರು ಮಹಾನಗರ ಪಾಲಿಕೆ ನಿರ್ವಹಣೆ ಮಾಡುವ ಈಜುಕೊಳದಲ್ಲಿ ಈಜುವಾಗ ಘಟನೆ ನಡೆದಿದೆ ಎನ್ನಲಾಗಿದೆ.
15 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದ ಅಭಿಷೇಕರನ್ನು ಈಜುಕೊಳದ ಜೀವರಕ್ಷಕರಾದ ರಾಜೇಂದ್ರ ಮತ್ತು ಪುಂಡಲಿಕ್ ಅವರು ಕೂಡಲೇ ಮೇಲಕ್ಕೆ ತಂದಿದ್ದಾರೆ. ಸ್ಥಳದಲ್ಲಿದ್ದ ಪ್ರೊ. ನರೇಂದ್ರ ನಾಯಕ್ ಮತ್ತು ಇತರರು ಸಿಪಿಆರ್ ಮಾಡಿ ಉಸಿರಾಡುವಂತೆ ಮಾಡಿದರೂ ಪ್ರಯೋಜನವಾಗಿಲ್ಲ. ಅಭಿಷೇಕ್ ಸಾವು ನೀರಲ್ಲಿ ಉಸಿರುಗಟ್ಟಿ ಸಂಭವಿಸಿದೆಯೇ ಅಥವಾ ಹೃದಯಾಘಾತದಿಂದ ಸಂಭವಿಸಿದೆಯೆ ಎಂದು ತನಿಖೆಯಿಂದ ತಿಳಿದುಬರಬೇಕಿದೆ.