ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕ ಆರಂಭ: ಸಿಎಂ ಸಿದ್ದರಾಮಯ್ಯ

ಸುದ್ದಿಗಳು News

Posted by vidyamaana on 2024-07-01 19:16:06 |

Share: | | | | |


ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕ ಆರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.

ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

 Share: | | | | |


ರಶ್ಯನ್ ತೈಲ ಖರೀದಿಯಲ್ಲಿ ಹೆಚ್ಚುಳ

Posted by Vidyamaana on 2023-01-19 09:02:36 |

Share: | | | | |


ರಶ್ಯನ್ ತೈಲ ಖರೀದಿಯಲ್ಲಿ ಹೆಚ್ಚುಳ

   ಭಾರತ ಕಳೆದ ವರ್ಷಕ್ಕಿಂತ 33 ಪಟ್ಟು ಹೆಚ್ಚು ರಶ್ಯನ್ ತೈಲವನ್ನು ಖರೀದಿಸುತ್ತಿದೆ. ವಿಶ್ವದ ಮೂರನೇ ಅತಿದೊಡ್ಡ ಕಚ್ಚಾ ತೈಲ ಆಮದುದಾರ ದೇಶವಾಗಿ ಭಾರತ ಕಳೆದ ಡಿಸೆಂಬರ್ನಲ್ಲಿ ರಶ್ಯದಿಂದ ದಿನಕ್ಕೆ ಸರಾಸರಿ 12 ಲಕ್ಷ ಬ್ಯಾರೆಲ್ಗಳನ್ನು ಖರೀದಿಸಿದೆ ಎನ್ನುತ್ತಿವೆ ವರದಿಗಳು. ಇದು ದಾಖಲೆ ಪ್ರಮಾಣದ ತೈಲ ಖರೀದಿಯಾಗಿದೆ. ಹಿಂದಿನ ವರ್ಷಕ್ಕಿಂತ ಭಾರೀ ದೊಡ್ಡ ಮೊತ್ತದ ಆಮದು ಇದಾಗಿದೆ. ಈ ಪ್ರಮಾಣ ನವೆಂಬರ್ನಲ್ಲಿ ಖರೀದಿಸಿದ್ದಕ್ಕಿಂತ ಶೇ.29ರಷ್ಟು ಜಾಸ್ತಿ.

ಹಲವು ತಿಂಗಳುಗಳ ಹಿಂದೆ ಇರಾಕ್ ಮತ್ತು ಸೌದಿ ಅರೇಬಿಯವನ್ನು ಹಿಂದಿಕ್ಕಿದ ನಂತರ ರಶ್ಯವು ಈಗ ಸುಲಭವಾಗಿ ಭಾರತದ ಅತಿದೊಡ್ಡ ತೈಲ ಮೂಲವಾಗಿದೆ. ಉಕ್ರೇನ್ ಆಕ್ರಮಣದಿಂದ ಅನೇಕ ಖರೀದಿದಾರರು ರಶ್ಯದಿಂದ ತೈಲ ಖರೀದಿಸುವುದಕ್ಕೆ ಹಿಂದೇಟು ಹಾಕಿರುವ ಹೊತ್ತಲ್ಲಿ ಭಾರತೀಯ ಸಂಸ್ಕರಣಾಗಾರಗಳು ಅಗ್ಗದ ರಶ್ಯದ ಕಚ್ಚಾ ತೈಲವನ್ನು ದೊಡ್ಡ ಮಟ್ಟದಲ್ಲಿ ಆಮದು ಮಾಡಿಕೊಳ್ಳುತ್ತಿವೆ. ರಶ್ಯ ತನ್ನ ಕಚ್ಚಾ ತೈಲವನ್ನು ಭಾರತೀಯ ಸಂಸ್ಕರಣಾಗಾರಗಳಿಗೆ ಆಕರ್ಷಕ ರಿಯಾಯಿತಿಯಲ್ಲಿ ನೀಡಿದೆ. ಇದರ ಪರಿಣಾಮವಾಗಿ ರಶ್ಯದ ಕಚ್ಚಾ ತೈಲದ ಅತಿದೊಡ್ಡ ಆಮದುದಾರ ದೇಶವಾಗಿ ಭಾರತ ಚೀನಾವನ್ನು ಮೀರಿಸಿದೆ.

ಭಾರತವು ತನ್ನ ತೈಲ ಬೇಡಿಕೆಯ ಶೇ. 85ಕ್ಕಿಂತ ಹೆಚ್ಚಿನ ಪ್ರಮಾಣದ ಆಮದು ಮಾಡಿಕೊಳ್ಳುತ್ತಿದೆ. ಮೇ ತಿಂಗಳಿನಿಂದ ಡೀಸೆಲ್ ಮತ್ತು ಗ್ಯಾಸೋಲಿನ್ನ ಪಂಪ್ ಬೆಲೆಗಳನ್ನು ಹೆಚ್ಚಿಸದಂತೆ ಸರಕಾರದಿಂದ ತಡೆಯಲ್ಪಟ್ಟ ಸರಕಾರಿ ಸ್ವಾಮ್ಯದ ಸಂಸ್ಕರಣಾಗಾರಗಳು ಅಗ್ಗದ ರಶ್ಯದ ಆಮದುಗಳಿಗೆ ಹೆಚ್ಚು ಒಲವು ತೋರಿವೆ.

ಭಾರತಕ್ಕೆ ತೈಲ ಪೂರೈಸುವ ಇತರ ಎರಡು ಪ್ರಮುಖ ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುವ ಪ್ರಮಾಣ ಕೂಡ ಕಳೆದ ತಿಂಗಳು ಹೆಚ್ಚಾಗಿದೆ. ಇರಾಕ್ನಿಂದ ದಿನಕ್ಕೆ 8,86,000 ಬ್ಯಾರೆಲ್ಗಳು ಅಂದರೆ ಶೇ. 7ರಷ್ಟು ಏರಿಕೆಯಾಗಿದ್ದರೆ, ಸೌದಿ ಅರೇಬಿಯದಿಂದ ದಿನಕ್ಕೆ 7,48,000 ಬ್ಯಾರೆಲ್ಗಳು ಅಂದರೆ ಶೇ. 12ರಷ್ಟು ಹೆಚ್ಚಿದೆ ಎಂದು ವರದಿಗಳು ಹೇಳುತ್ತಿವೆ.

ಉಕ್ರೇನ್ ಮೇಲೆ ರಶ್ಯ ಯುದ್ಧ ಆರಂಭಿಸಿದಾಗಿನಿಂದ ರಶ್ಯ ಮತ್ತು ಭಾರತದ ಮಧ್ಯೆ ತೈಲ ವ್ಯವಹಾರ ಸಾಕಷ್ಟು ಹೆಚ್ಚಿದೆ. ಎಪ್ರಿಲ್ ತಿಂಗಳಿನಿಂದೀಚೆ ರಶ್ಯದಿಂದ ಭಾರತ ಆಮದು ಮಾಡಿಕೊಂಡ ಕಚ್ಚಾ ತೈಲದ ಪ್ರಮಾಣ ಐವತ್ತು ಪಟ್ಟು ಹೆಚ್ಚಾಗಿದೆ. ಉಕ್ರೇನ್ ಯುದ್ಧಕ್ಕೆ ಮುನ್ನ ರಶ್ಯದಿಂದ ಭಾರತ ಆಮದು ಮಾಡಿಕೊಳ್ಳುತ್ತಿದ್ದ ತೈಲದ ಪ್ರಮಾಣ ಶೇ. 0.2 ಮಾತ್ರ. ಈಗ ವಿದೇಶಗಳಿಂದ ಭಾರತ ಆಮದು ಮಾಡಿಕೊಳ್ಳುವ ತೈಲದಲ್ಲಿ ರಶ್ಯದ ಪಾಲು ಶೇ. 10ಕ್ಕೆ ಹೆಚ್ಚಿದೆ.

ಮೇ ತಿಂಗಳಲ್ಲಿ ಭಾರತೀಯ ಕಂಪೆನಿಗಳು ರಶ್ಯನ್ ತೈಲ ಕಂಪೆನಿಗಳಿಂದ 25 ಮಿಲಿಯನ್ ಬ್ಯಾರಲ್ ಕಚ್ಚಾ ತೈಲವನ್ನು ಖರೀದಿ ಮಾಡಿದ್ದವು. ಇದರೊಂದಿಗೆ ಭಾರತಕ್ಕೆ ತೈಲ ಸರಬರಾಜು ಮಾಡುವ ದೇಶಗಳ ಪೈಕಿ ರಶ್ಯ ಸೌದಿ ಅರೇಬಿಯವನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿತ್ತು. ಇರಾಕ್ ಭಾರತಕ್ಕೆ ಈಗಲೂ ಅತಿದೊಡ್ಡ ತೈಲ ಸರಬರಾಜುದಾರ ದೇಶವಾಗಿ ಮುಂದುವರಿದಿದೆ.

ಎಲ್ಲವೂ ಉಕ್ರೇನ್ ಯುದ್ಧದ ಪರಿಣಾಮ. ಉಕ್ರೇನ್ ಯುದ್ಧ ಶುರುವಾದಾಗಿನಿಂದ ರಶ್ಯ ಮೇಲೆ ವಿವಿಧ ರೀತಿಯ ಅಂತರ್ರಾಷ್ಟ್ರೀಯ ನಿಷೇಧಗಳನ್ನು ಹೇರಲಾಗಿದೆ. ತತ್ಪರಿಣಾಮವಾಗಿ ರಶ್ಯದಿಂದ ಅತಿ ಕಡಿಮೆ ಬೆಲೆಗೆ ತೈಲ ಬಿಕರಿಯಾಗುತ್ತಿದೆ. ಭಾರತ ಈ ಅವಕಾಶವನ್ನು ಸದುಪಯೋಗಿಸಿಕೊಳ್ಳುತ್ತಿದ್ದು, ಭಾರತೀಯ ತೈಲ ಸಂಸ್ಕರಣ ಸಂಸ್ಥೆಗಳು ಕಡಿಮೆ ಬೆಲೆಗೆ ರಶ್ಯ ತೈಲವನ್ನು ಖರೀದಿ ಮಾಡುತ್ತಿವೆ. ಹೀಗಾಗಿಯೇ ಎಪ್ರಿಲ್ ನಂತರದ ಅವಧಿಯಲ್ಲಿ ರಶ್ಯದಿಂದ ಭಾರತ ಆಮದು ಮಾಡಿಕೊಳ್ಳುವ ತೈಲ ಪ್ರಮಾಣ ಹೆಚ್ಚುತ್ತಿರುವುದು.

ಉಕ್ರೇನ್ ಮೇಲೆ ಯುದ್ಧ ಮಾಡುತ್ತಿರುವ ರಶ್ಯ ಮೇಲೆ ಅಮೆರಿಕ ಹಾಗೂ ಅನೇಕ ಯುರೋಪಿಯನ್ ದೇಶಗಳು ನಿರ್ಬಂಧಗಳನ್ನು ಹೇರಿವೆ. ರಶ್ಯ ಜೊತೆ ಯಾವುದೇ ವ್ಯವಹಾರ ಮಾಡದಂತೆ ಇತರ ಹಲವು ದೇಶಗಳಿಗೆ ತಾಕೀತು ಮಾಡುತ್ತಿವೆ. ಹೀಗಿದ್ದರೂ ಭಾರತ ರಶ್ಯ ಜೊತೆ ಮಿಲಿಟರಿ ಶಸ್ತ್ರಾಸ್ತ್ರ ಖರೀದಿ ಮುಂದುವರಿಸುತ್ತಿದೆ, ಈಗ ತೈಲ ಖರೀದಿ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸುತ್ತಿದೆ. ರಶ್ಯದೊಂದಿಗಿನ ತಾನು ಹೊಂದಿರುವ ವ್ಯವಹಾರವನ್ನು ಭಾರತ ಸಮರ್ಥಿಸಿಕೊಳ್ಳುತ್ತಿದೆ. ತನ್ನ ಹಿತಾಸಕ್ತಿಗೆ ತಕ್ಕಂತೆ ನಡೆ ಇಡುವುದಾಗಿ ಭಾರತ ಸ್ಪಷ್ಟಪಡಿಸಿದೆ.

ಈಗ ಅತಿ ಹೆಚ್ಚು ತೈಲ ಆಮದು ಮಾಡಿಕೊಳ್ಳುವ ಮತ್ತು ಬಳಕೆ ಮಾಡುವ ದೇಶಗಳಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಅಮೆರಿಕ ಮತ್ತು ಚೀನಾ ಬಿಟ್ಟರೆ ಭಾರತವೇ ಅತಿಹೆಚ್ಚು ತೈಲ ಆಮದು ಮಾಡಿಕೊಳ್ಳುವುದು. ಭಾರತದಲ್ಲಿ ಬಳಕೆಯಾಗುವ ತೈಲದಲ್ಲಿ ಶೇ. 85ರಷ್ಟು ಪ್ರಮಾಣವು ಬೇರೆ ದೇಶಗಳಿಂದ ಆಮದಾಗಿರುವಂಥವೇ. ಇರಾಕ್ ಮತ್ತು ಸೌದಿ ಅರೇಬಿಯ ಸಾಂಪ್ರದಾಯಿಕವಾಗಿ ಭಾರತಕ್ಕೆ ಅತಿ ಹೆಚ್ಚು ತೈಲ ಸರಬರಾಜು ಮಾಡುತ್ತಿದ್ದ ದೇಶಗಳು. ಈಗ ರಶ್ಯ ಪ್ರವೇಶವಾಗಿದೆ.

ಉಕ್ರೇನ್ ಮತ್ತು ರಶ್ಯ ಯುದ್ಧದ ಪರಿಣಾಮ ಬೇರೆ ತೈಲ ಮಾರುಕಟ್ಟೆಗಳಲ್ಲಿ ಬೆಲೆ ಸಿಕ್ಕಾಪಟ್ಟೆ ಹೆಚ್ಚುತ್ತಿದೆ. ಅಮೆರಿಕ ಮತ್ತಿತರ ದೇಶಗಳ ಒತ್ತಡದಿಂದಾಗಿ ರಶ್ಯದಿಂದ ತೈಲ ಖರೀದಿಸಲು ಹಲವು ದೇಶಗಳು ಹಿಂದೇಟು ಹಾಕಿವೆ. ಹೀಗಾಗಿ, ರಶ್ಯದ ಉರಲ್ನಲ್ಲಿರುವ ಕಚ್ಚಾ ತೈಲವನ್ನು ಖರೀದಿಸಲು ಮುಂದಾಗಿರುವ ದೇಶಗಳು ಕಡಿಮೆಯೇ. ಹೀಗಾಗಿ, ರಶ್ಯದ ತೈಲ ಕಡಿಮೆ ಬೆಲೆಗೆ ಸಿಗುತ್ತಿದೆ. ಭಾರತದ ತೈಲ ಸಂಸ್ಕರಣ ಕಂಪೆನಿಗಳು ರಶ್ಯದಿಂದ ಒಂದು ಬ್ಯಾರಲ್ಗೆ 30 ಡಾಲರ್ ರಿಯಾ ಯಿತಿ ದರದಲ್ಲಿ ಕಚ್ಚಾ ತೈಲ ಖರೀದಿ ಮಾಡುತ್ತಿವೆ.

ರಶ್ಯ ತೈಲ ಖರೀದಿ ಸಮರ್ಥಿಸಿದ ಭಾರತ

ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳು, ಪರಸ್ಪರರ ಹಿತಾಸಕ್ತಿ ಹಾಗೂ ದ್ವಿಪಕ್ಷೀಯ ಸಹಕಾರ ಬಲಪಡಿಸುವ ಸಂಬಂಧ ಭಾರತ ಮತ್ತು ರಷ್ಯಾ ಮಂಗಳವಾರ ಮಾಸ್ಕೊದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದವು.

ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಷ್ಯಾ ವಿದೇಶಾಂಗ ಸಚಿವ ಸೆರ್ಗಿ ಲಾವ್ರೊವ್ ಅವರು ಮಾತುಕತೆಯಲ್ಲಿ ಭಾಗಿಯಾಗಿದ್ದರು.

ಫೆಬ್ರುವರಿಯಲ್ಲಿ ರಷ್ಯಾ ಮತ್ತು ಉಕ್ರೇನ್ ಸಂಘರ್ಷ ಶುರುವಾದ ನಂತರ ಉಭಯ ಸಚಿವರು ಈಗಾಗಲೇ ನಾಲ್ಕು ಬಾರಿ ಪರಸ್ಪರ ಭೇಟಿಯಾಗಿ ಪರಸ್ಪರ ಮಾತುಕತೆ ನಡೆಸಿದ್ದರು.

ಭಾರತ ಮತ್ತು ರಷ್ಯಾ ನಡುವಿನ ಹಿತಾಸಕ್ತಿಗಳ ಬಗ್ಗೆ ಸಹಜ ಚರ್ಚೆ ನಡೆಸಿದ್ದೇವೆ. ಅಸ್ಥಿರತೆಯ ಈ ಕಾಲದಲ್ಲಿ, ನಾವು ನಿಜವಾಗಿಯೂ ಜಾಗತಿಕ ಆರ್ಥಿಕತೆಯ ಸ್ಥಿರತೆಗೆ ನೆರವಾಗುವ ಒಳ್ಳೆಯ ಕೆಲಸ ಮಾಡುತ್ತಿದ್ದೇವೆ. ತೈಲ ಮತ್ತು ಅನಿಲ ಖರೀದಿಯಲ್ಲಿ ಮೂರನೇ ಅತಿದೊಡ್ಡ ಗ್ರಾಹಕ ಎನಿಸಿರುವ ನಮ್ಮ ದೇಶದ ಆದಾಯವು ಹೆಚ್ಚಿಲ್ಲದ ಕಾರಣ, ನಾವು ಕೈಗೆಟಕುವ ದರದಲ್ಲಿ ಇಂಧನ ಪಡೆಯಬೇಕಾಗಿದೆ. ಈ ಹಿನ್ನೆಲೆಯಲ್ಲಿ ರಷ್ಯಾ ಜತೆಗಿನ ಸಂಬಂಧ ಭಾರತಕ್ಕೆ ಪ್ರಯೋಜನಕಾರಿಯಾಗಿದೆ. ರಷ್ಯಾ ಜತೆಗೆ ನಮ್ಮ ಬಾಂಧವ್ಯವನ್ನು ಮುಂದುವರಿಸುತ್ತೇವೆ’ ಎಂದು ಜೈಶಂಕರ್, ರಷ್ಯಾದಿಂದ ತೈಲ ಖರೀದಿ ಸಮರ್ಥಿಸಿಕೊಂಡರು.

ಇದು ಯುದ್ಧ ಕಾಲವಲ್ಲ’ವೆಂದು ಪುಟಿನ್ ಅವರಿಗೆ ಮೋದಿ ಹೇಳಿದ್ದ ಕಿವಿ ಮಾತನ್ನು ನೆನಪಿಸಿದ ಅವರು, ಉಕ್ರೇನ್ ಮೇಲೆ ಆಗುತ್ತಿರುವ ಪರಿಣಾಮಗಳನ್ನು ಗಮನಿಸಿಯೇ ಉಭಯ ರಾಷ್ಟ್ರಗಳಿಗೂ ಮಾತುಕತೆಗೆ ಮರಳುವಂತೆ ಭಾರತ ಬಲವಾಗಿ ಒತ್ತಾಯಿಸುತ್ತಲೇ ಇದೆ’ ಎಂದು ಎಸ್. ಜೈಶಂಕರ್ ಹೇಳಿರುವುದಾಗಿ ‘ಎನ್ಡಿಟಿವಿ’ ವರದಿ ಮಾಡಿದೆ.

ಉಕ್ರೇನ್ ಮೇಲಿನ ರಷ್ಯಾ ಆಕ್ರಮಣವನ್ನು ಭಾರತ ಈವರೆಗೆ ಖಂಡಿಸಿಲ್ಲ. ರಾಜತಾಂತ್ರಿಕತೆ ಮತ್ತು ಮಾತುಕತೆ ಮೂಲಕವೇ ಬಿಕ್ಕಟ್ಟು ಶಮನಕ್ಕೆ ಭಾರತ ಉಭಯತ್ರರನ್ನು ಒತ್ತಾಯಿಸುತ್ತಲೇ ಇದೆ.  


ಪುಟಿನ್ ಜತೆ ಮಾತುಕತೆಗೆ ಝೆಲೆನ್ಸ್ಕಿ ಒಲವು

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಲು ನಿರಾಕರಿಸಿದ್ದ ಉಕ್ರೇನ್ ನಿಲುವಿನಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಶಾಂತಿ ಮಾತುಕತೆ ಸಾಧ್ಯತೆಯತ್ತ ಸಾಗುವ ಸುಳಿವು ನೀಡಿದೆ. 

       ಅಮೆರಿಕದಲ್ಲಿ ನಡೆಯಲಿರುವ ಪ್ರಮುಖ ಚುನಾವಣೆಯ ಹಿನ್ನೆಲೆಯಲ್ಲಿ ಉಕ್ರೇನ್ ನಿಲುವು ಬದಲಿಸಿಕೊಂಡಿದ್ದು, ಪುಟಿನ್ ಜತೆಗೆ ಶಾಂತಿ ಮಾತುಕತೆ ನಡೆಸುವ ಸಾಧ್ಯತೆಯ ಬಗ್ಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸುಳಿವು ನೀಡಿದ್ದಾರೆ.

       ಸೋಮವಾರ ತಡವಾಗಿ ವಿಶ್ವ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಝೆಲೆನ್ಸ್ಕಿ ಅವರು ‘ರಷ್ಯಾವನ್ನು ನಿಜವಾದ ಶಾಂತಿ ಮಾತುಕತೆಗಳಿಗೆ ಮರಳುವಂತೆ ಒತ್ತಡ ಹೇರಬೇಕು’ ಎಂದು ಒತ್ತಾಯಿಸಿದರು.

        ಉಕ್ರೇನ್ನ ಎಲ್ಲ ಆಕ್ರಮಿತ ಭೂಮಿಯನ್ನು ಹಿಂದಿರುಗಿಸಬೇಕು, ಯುದ್ಧದಿಂದ ಉಂಟಾದ ಹಾನಿ ಮತ್ತು ಯುದ್ಧ ಅಪರಾಧಗಳ ವಿಚಾರಣೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ಝೆಲೆನ್ಸ್ಕಿ ಅವರು ಪುಟಿನ್ ಜತೆಗಿನ ಶಾಂತಿ ಮಾತುಕತೆಗೆ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ರಿಪಬ್ಲಿಕನ್ ಪಕ್ಷದ ಸಂಸದರು ಹೆಚ್ಚಿನ ಸಂಖ್ಯೆಯಲ್ಲಿ ಆರಿಸಿ ಬಂದರೆ ಬೈಡನ್ ಸರ್ಕಾರ ಉಕ್ರೇನ್ಗೆ ಮಿಲಿಟರಿ ಮತ್ತು ಆರ್ಥಿಕ ನೆರವಿನ ಪ್ಯಾಕೇಜ್ ಮುಂದುವರಿಸುವುದು ಕಷ್ಟವಾಗಬಹುದು ಎನ್ನುವ ಕಾರಣಕ್ಕೆ ಝೆಲೆನ್ಸ್ಕಿ ಅವರು, ಪುಟಿನ್ ಜತೆಗೆ ಮಾತುಕತೆ ಅಸಾಧ್ಯವೆಂದಿದ್ದ ರಾಗವನ್ನು ಈಗ ಬದಲಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

      ರಷ್ಯಾದ ವಿದೇಶಾಂಗ ಉಪ ಸಚಿವ ಆಂಡ್ರೀ ರುದೆನ್ಕೊ ಅವರು, ಮಾತುಕತೆಗೆ ಪುನಾ ಮರಳಲು ರಷ್ಯಾ ಯಾವುದೇ ಷರತ್ತುಗಳನ್ನು ಮುಂದಿಟ್ಟಿಲ್ಲ. ಆದರೆ, ಮಾತುಕತೆ ನಡೆಸಲು ಉಕ್ರೇನ್ಗೆ ಇಚ್ಛಾಶಕ್ತಿಯ ಕೊರತೆ ಇದೆ ಎಂದು ಆರೋಪಿಸಿದರು.

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್

Posted by Vidyamaana on 2024-03-01 12:20:35 |

Share: | | | | |


ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್

ಬೆಂಗಳೂರು : ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್ ಲೀಸ್ಗೆ ಪಡೆದಿದ್ದರು. ಮೂರು ತಿಂಗಳು ಕಳೆಯುತ್ತಿದ್ದಂತೆ ಅವ್ರಿಗೆ ಕಾದಿತ್ತು ಮುಂದೆ ಶಾಕ್. ಬಾಗಿಲಿಗೆ ಬಂದ ಬ್ಯಾಂಕಿ ನೋಟಿಸ್ ನೋಡಿ ಶಾಕ್ ಆಗಿದ್ರು.ಏಕಾಏಕಿ ಬ್ಯಾಂಕಿನವರು ಮನೆಗೆ ಬೀಗ ಜಡಿದಿದ್ದು, ಪ್ಲಾಟ್ ಲೀಸ್ಗೆ ಪಡೆದವರು ಅತ್ತ ಇರಲು ಮನೆ ಇಲ್ಲದೆ, ಇತ್ತ ಕೊಟ್ಟ ಹಣವು ಇಲ್ಲದ ಬೀದಿ ಪಾಲಾಗಿದ್ದಾರೆ.. ಅಷ್ಟಕ್ಕೂ ಈ ಘಟನೆ ನಡೆದಿದಾದ್ರು ಎಲ್ಲಿ ಅಂತೀರಾ ನೋಡಿ ಈ ರಿಪೋರ್ಟ್ ನಲ್ಲಿ..


ಹೀಗೆ ಫೋಟೋದಲ್ಲಿ ಪೋಸ್ ಕೋಡುತ್ತಿರುವ ಇವ್ರು ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ನಿವಾಸಿಗಳಾದ ಅಜಿತ್ ಕುಮಾರ್ ಮತ್ತು ಸುಜತಾ. ವಂಚನೆಯನ್ನೆ ಕಾಯಕ ಮಾಡಿಕೊಂಡಿರುವ ಇವ್ರು ಆನೇಕಲ್ ಪೊಲೀಸರ ಅತಿಥಿಯಾಗಿದ್ದಾರೆ. ಹೌದು ಚಂದಾಪುರ ರಸ್ತೆಯಲ್ಲಿನ ಯುಬಿಎಚ್ಸಿ ಅಪಾರ್ಟ್ಮೆಂಟ್ನಲ್ಲಿನ ತಮ್ಮ ಎರಡು ಪ್ಲಾಟ್ಗಳ ಮೇಲೆ ಬರೋಬ್ಬರಿ ಐವತ್ತು ಲಕ್ಷ ಲೋನ್ ಪಡೆದ ಅಸಾಮಿಗಳು ಅದೇ ಪ್ಲಾಟ್ ಗಳನ್ನು ಲೀಜ್ಗೆ ನೀಡಿ ಲಕ್ಷ ಲಕ್ಷ ವಸೂಲಿ ಮಾಡಿದ್ದಾರೆ. ಬಳಿಕ ಬ್ಯಾಂಕ್ ಲೋನ್ ಕಟ್ಟದೇ ಎಸ್ಕೇಪ್ ಆಗಿದ್ದಾರೆ. ಮೂರ್ನಾಲ್ಕು ನೋಟಿಸ್ ಕೊಟ್ಟ ಬ್ಯಾಂಕಿನವರು ಪ್ಲಾಟ್ ವಾಸಿಗಳನ್ನು ಉಟ್ಟಬಟ್ಟೆಯಲ್ಲಿ ಹೊರ ಹಾಕಿ ಬೀಗ ಜಡಿದಿದ್ದಾರೆ.ಇನ್ನೂ ರಿಯಲ್ ಎಸ್ಟೇಟ್ ಹೆಸರಲ್ಲಿ ರೀಲ್ ಬಿಟ್ಟು ಯಾಮಾರಿಸುವ ಅಜಿತ್ ಮತ್ತು ಸುಜತಾ ದಂಪತಿ ತಾವು ರಿಯಲ್ ಎಸ್ಟೇಟ್ ನಲ್ಲಿ ಒಳ್ಳೆಯ ಬಿಸಿನೆಸ್ ಮಾಡುತ್ತಿದ್ದೆವೆ. ತಮ್ಮದು ಸಾಕಷ್ಟು ಪ್ಲಾಟ್, ವಿಲ್ಲಾ ಮತ್ತು ನಿವೇಶನಗಳಿದ್ದು, ಕಡಿಮೆ ಬೆಲೆಗೆ ಲೀಜ್ ಮತ್ತು ಮಾರಾಟ ಮಾಡುತ್ತೆವೆ ಎಂದು ಜಾಹಿರಾತು ನೀಡುತ್ತಾರೆ. ಇವರ ಬಿಲ್ಡ್ ಅಪ್ ಕಂಡು ಇಂದು ಪ್ಲಾಟ್ ಲೀಜ್ ಪಡೆದವರು ಅಕ್ಷರಶಃ ಹಣ ಮತ್ತು ಮನೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಇನ್ನೂ ಸಾಕಷ್ಟು ಮಂದಿಗೆ ಅಜಿತ್ ದಂಪತಿ ಮಕ್ಮಲ್ ಟೋಪಿ ಹಾಕಿದ್ದು, ನಮಗೆ ನ್ಯಾಯ ಕೊಡಿಸಿ ಎಂದು ವಂಚನೆಗಳೊಗಾದ ಗ್ರಾಹಕರು ಆನೇಕಲ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.


ಇನ್ನೂ ಆನೇಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಂಚಕ ದಂಪತಿಯನ್ನ ಬಂಧಿಸಿ ಜೈಲಿಗೆ ಕಳುಹಿಸಿದ್ದು, ಲಕ್ಷಾಂತರ ರೂಪಾಯಿ ಹಣ ನೀಡಿ ಮನೆ ಲೀಸ್ಗೆ ಪಡೆದಿದ್ದ ಗ್ರಾಹಕರು ಅತ್ತ ನೀಡಿದ ಹಣವೂ ಕೈ ಸೇರದೆ ಇತ್ತ ಇರಲು ಮನೆಯು ಸಹ ಇಲ್ಲದೆ ಬೀದಿಗೆ ಬೀಳುವಂತಾಗಿದ್ದು ಮಾತ್ರ ವಿಪರ್ಯಾಸ ಸಂಗತಿ.

ಪತ್ನಿ ಶೀಲ ಶಂಕಿಸಿದ ಪತಿ; ಎದೆಗೆ ಇರಿದು ಕೊಲೆ ಮಾಡಿದ ಪತ್ನಿ

Posted by Vidyamaana on 2023-12-21 16:33:16 |

Share: | | | | |


ಪತ್ನಿ ಶೀಲ ಶಂಕಿಸಿದ ಪತಿ; ಎದೆಗೆ ಇರಿದು ಕೊಲೆ ಮಾಡಿದ ಪತ್ನಿ

ಬೆಂಗಳೂರು ; ರಾತ್ರಿ ವೇಳೆ ಫೋನ್‌ ನಲ್ಲಿ ಯಾರ ಜೊತೆಯೋ ಹರಟೆ ಹೊಡೆಯುತ್ತಿದ್ದ ಪತ್ನಿಯ ಬಗ್ಗೆ ಕುಡುಕ ಪತಿ ಅನುಮಾನ ಪಟ್ಟಿದ್ದಾನೆ. ಯಾರ ಜೊತೆಯೋ ನಿನಗೆ ಅನೈತಿಕ ಸಂಬಂಧ ಇದೆ ಎಂದು ಜಗಳ ತೆಗೆದಿದ್ದಾನೆ. ಈ ಜಗಳ ವಿಕೋಪಕ್ಕೆ ತಿರುಗಿ ರೋಸಿಹೋದ ಪತ್ನಿ, ಪತಿಯ ಎದೆಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾಳೆ.ಬೆಂಗಳೂರಿನ ಹುಳಿಮಾವಿನ ಕಾಲೇಜೊಂದರಲ್ಲಿ ಈ ಘಟನೆ ನಡೆದಿದೆ.


ಈ ಕಾಲೇಜಿನಲ್ಲಿ ದಂಪತಿ ಸೆಕ್ಯೂರಿಟಿ ಗಾರ್ಡ್‌ ಹಾಗೂ ಹೌಸ್‌ ಕೀಪಿಂಗ್‌ ಕೆಲಸ ಮಾಡುತ್ತಾರೆ. ನಿನ್ನೆ ಸಂಜೆ ಮನೆಯಿಂದ ಹೊರಹೋಗಿದ್ದ ಪತ್ನಿ ಉಮೇಶ್‌ ದಾಳಿ ಕಂಠಪೂರ್ತಿ ಕುಡಿದು ಮಧ್ಯರಾತ್ರಿ ಬಂದಿದ್ದ. ಈ ವೇಳೆ ಪತ್ನಿ ಮನಿಷಾ ದಾಮಿ ಮೊಬೈಲ್‌ನಲ್ಲಿ ಯಾರ ಜೊತೆಯೂ ಮಾತನಾಡುತ್ತಿದ್ದಳು. ಇದರಿಂದ ಅನುಮಾನಗೊಂಡು ಪತಿ ಉಮೇಶ್‌ ದಾಮಿ ಜಗಳ ತೆಗೆದಿದ್ದಾನೆ.


ಆರೋಪಿ ಮನಿಷಾಳನ್ನು ಹುಳಿಮಾವು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ಧಾರೆ.

ಸಿಎಂ ವಿರುದ್ಧ ಸುಳ್ಳು ಸುದ್ದಿ: 7 ಮಂದಿ ವಿರುದ್ಧ FIR

Posted by Vidyamaana on 2024-04-10 22:03:09 |

Share: | | | | |


ಸಿಎಂ ವಿರುದ್ಧ ಸುಳ್ಳು ಸುದ್ದಿ: 7 ಮಂದಿ ವಿರುದ್ಧ FIR

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಗಳ ಮತ ಬೇಡ, ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಹೇಳಿದ್ದಾರೆಂದು ಸುದ್ದಿಪತ್ರಿಕೆಯ ವರದಿ ರೀತಿಯಲ್ಲಿ ಸುಳ್ಳು ಸುದ್ದಿ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದ 7 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.


ಹಿಂದುಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂಬ ರೀತಿಯಲ್ಲಿ ಸುಳ್ಳು ಸುದ್ದಿಯನ್ನು ಬಗ್ಗೆ ಹರೀಶ್‌ ನಾಗರಾಜು ಎಂಬವರು ಪೊಲೀಸರಿಗೆ ದೂರು ನೀಡಿದ್ದರು.


ಅವರ ದೂರಿನ ಆಧಾರದ ಮೇಲೆ ಬೆಂಗಳೂರು ಪಶ್ಚಿಮ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66, 66ಸಿ ಮತ್ತು 66ಡಿ ಹಾಗೂ ಐಪಿಸಿ ಸೆಕ್ಷನ್‌ 153ಎ, 120ಬಿ, 419, 469, 471, 505(2) ಮತ್ತು 468ರ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಉಪ್ಪಳ: ಮನೆಯ ಬಾಗಿಲು ಮುರಿದು ಕಳವು: 8 ಪವನ್ ಚಿನ್ನ, 45 ಸಾವಿರ ರೂ.ನಗದು ಕದ್ದು ಪರಾರಿ

Posted by Vidyamaana on 2023-02-04 04:20:01 |

Share: | | | | |


ಉಪ್ಪಳ: ಮನೆಯ ಬಾಗಿಲು ಮುರಿದು ಕಳವು: 8 ಪವನ್ ಚಿನ್ನ, 45 ಸಾವಿರ ರೂ.ನಗದು ಕದ್ದು ಪರಾರಿ

ಉಪ್ಪಳ: ಮನೆಯ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಸುಮಾರು 8 ಪವನ್ ಚಿನ್ನಾಭರಣ ಮತ್ತು 45 ಸಾವಿರ ರೂ. ನಗದು ಕಳವು ಮಾಡಿರುವ ಘಟನೆ ಉಪ್ಪಳದಲ್ಲಿ ನಡೆದಿದೆ.

     ಹಿದಾಯತ್ ಬಜಾ‌ರ್ ನ ಮುಹಮ್ಮದ್ ಸಲೀಂ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.ಸಲೀಂ ಗಲ್ಸ್‌ನಲ್ಲಿದ್ದು, ತಾಯಿ ಸಫಿಯಾ ಮನೆಗೆ ಬೀಗ ಹಾಕಿ ಸಾಲೆತ್ತೂರಿನ ಸಂಬಂಧಿಕರ ಮನೆಗೆ ತೆರಳಿದ್ದರು. ಗಲ್ಫ್ನಲ್ಲಿರುವ ಸಲೀಂ ಮೊಬೈಲ್ ಫೋನ್ ಮೂಲಕ ಮನೆಯಲ್ಲಿರುವ ಸಿಸಿ ಟಿವಿ ದೃಶ್ಯಗಳನ್ನು ಗಮನಿಸಿದಾಗ ತಡರಾತ್ರಿ ಮನೆಯೊಳಗೆ ಓರ್ವ ಮುಸುಕುಧಾರಿಯಾಗಿ ತೆರಳುತ್ತಿರುವುದು ಗಮನಕ್ಕೆ ಬಂದಿದೆ.ಇನ್ನು ತಕ್ಷಣ ಸಂಬಂಧಿಕರಿಗೆ ಮಾಹಿತಿ ನೀಡಿದ್ದು, ಮನೆಗೆ ಬಂದು ಗಮನಿಸಿದಾಗ ಮುಂಭಾಗದ ಬಾಗಿಲು ಮುರಿದಿರುವುದು ಕಂಡು ಬಂದಿದೆ. ಮೇಲಂತಸ್ತಿನಲ್ಲಿದ್ದ ಒಂದು ಮತ್ತು ಕೆಳಗಡೆ ಇದ್ದ ಮೂರು ಕಪಾಟುಗಳನ್ನು ಒಡೆದು ವಸ್ತ್ರಗಳನ್ನು ಎಸೆದಿರುವುದು ಕಂಡು ಬಂದಿದೆ.

ಹುಬ್ಬಳ್ಳಿಯ ಯುವತಿ ಅಂಜಲಿ ಹತ್ಯೆಗೈದ ಗಿರೀಶನಿಗೆ ಕೊಲೆಗಾರ ಸ್ನೇಹಿತ ಶೇಷ್ಯಾನೇ ರೋಲ್ ಮಾಡೆಲ್!

Posted by Vidyamaana on 2024-05-16 07:12:58 |

Share: | | | | |


ಹುಬ್ಬಳ್ಳಿಯ ಯುವತಿ ಅಂಜಲಿ ಹತ್ಯೆಗೈದ ಗಿರೀಶನಿಗೆ ಕೊಲೆಗಾರ ಸ್ನೇಹಿತ ಶೇಷ್ಯಾನೇ ರೋಲ್ ಮಾಡೆಲ್!

ಹುಬ್ಬಳ್ಳಿ: ಪ್ರೀತಿ ವಿಚಾರಕ್ಕೆ ಇಂದು ಮುಂಜಾನೆ ನಡೆದ ಅಂಜಲಿ(20) ಹತ್ಯೆ ಪ್ರಕರಣದ ಆರೋಪಿ ವಿಶ್ವನಿಗೆ ಕ್ರಿಮಿನಲ್‌ ಹಿನ್ನೆಲೆ ಇದೆ. ಕಳೆದ ಮೂರು ದಿನಗಳ ಹಿಂದೆಯಷ್ಟೇ ಈತನ ಸ್ನೇಹಿತ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ. ಇದೀಗ ವಿಶ್ವ ಕೂಡ ಕೊಲೆ ಮಾಡಿದ್ದಾನೆ.ಈತ ಕೊಲೆ ಮಾಡಲು ಸ್ನೇಹಿತನಿಂದ ಪ್ರೇರಣೆ ಪಡೆದಿದ್ನಾ ಎನ್ನುವ ಸಂಶಯ ಮೂಡಿದೆ.

ಹಂತಕ ವಿಶ್ವನ ಸ್ನೇಹಿತ ಶೇಷ್ಯಾ ಹುಬ್ಬಳ್ಳಿ ತಾಲೂಕಿನ ಹಳ್ಳ್ಯಾಳದ ಸದ್ದಾಂ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾನೆ. ಶೇಷ್ಯಾ ಕೊಲೆ ಮಾಡಿದ ಬಳಿಕ ಅಂಜಲಿಯನ್ನ ಮುಗಿಸಲು ವಿಶ್ವ ಪ್ಲಾನ್ ಮಾಡಿರಬಹುದು ಎನ್ನಲಾಗುತ್ತಿದೆ.



Leave a Comment: