Posted by vidyamaana on 2024-07-01 19:31:51 |
ಮಳೆಗಾಲ ಆರಂಭವಾಗಿದ್ದು, ಈ ಋತುವಿನಲ್ಲಿ ಆರೋಗ್ಯದ ಕಡೆ ಗಮನಹರಿಸುವುದು ಅಗತ್ಯವಾಗಿದೆ. ಋತುಮಾನದ ಕಾಯಿಲೆಗಳ ಜೊತೆಗೆ ಡೆಂಗ್ಯೂ ಅಪಾಯವಿದೆ. ಡೆಂಗ್ಯೂ ವಾಸ್ತವವಾಗಿ ಹೆಣ್ಣು ಈಜಿಪ್ಟಿ (ಈಡಿಸ್ ಸೊಳ್ಳೆ) ಸೊಳ್ಳೆಗಳಿಂದ ಹರಡುತ್ತದೆ.
ಈ ಸೊಳ್ಳೆಗಳ ಜೀವಿತಾವಧಿ ಕೇವಲ ಒಂದು ತಿಂಗಳು ಮಾತ್ರ. ಆದ್ರೆ, ಈ ಅವಧಿಯಲ್ಲಿ ಅವು 500 ರಿಂದ 1000 ಸೊಳ್ಳೆಗಳಿಗೆ ಜನ್ಮ ನೀಡುತ್ತವೆ. ಈ ಸೊಳ್ಳೆಗಳು ಕೇವಲ ಮೂರು ಅಡಿ ಮಾತ್ರ ಹಾರಬಲ್ಲವು. ಈ ಕಾರಣಕ್ಕಾಗಿ ಅವು ಕೇವಲ ಮನುಷ್ಯನ ಕೆಳಗಿನ ಅಂಗಗಳನ್ನ ಗುರಿಯಾಗಿಸುತ್ತಾರೆ. ಈ ಸೊಳ್ಳೆಗಳು ಕಚ್ಚಿದರೆ ತೀವ್ರ ಜ್ವರದ ಜೊತೆಗೆ ಅನೇಕ ಸಮಸ್ಯೆಗಳು ಎದುರಾಗುತ್ತವೆ.
ಡೆಂಗ್ಯೂ ಸೊಳ್ಳೆಗಳು ಕೂಲರ್, ಹೂವಿನ ಕುಂಡಗಳು, ಹಳೆಯ ಪಾತ್ರೆಗಳು ಅಥವಾ ಮನೆಯ ಛಾವಣಿಗಳು, ಟೈರ್ಗಳು, ಗುಂಡಿಗಳು ಇತ್ಯಾದಿಗಳಲ್ಲಿ ತಮ್ಮ ಮೊಟ್ಟೆಗಳನ್ನ ಇಡುತ್ತವೆ. ಡೆಂಗ್ಯೂ ಸೊಳ್ಳೆಗಳು ಒಮ್ಮೆಗೆ 100 ರಿಂದ 300 ಮೊಟ್ಟೆಗಳನ್ನ ಇಡುತ್ತವೆ. 4 ದಿನಗಳ ನಂತರ ಅವು ಸೊಳ್ಳೆಗಳಾಗಿ ರೂಪಾಂತರಗೊಳ್ಳುತ್ತವೆ. ಸೊಳ್ಳೆಗಳು ಹುಟ್ಟಿದ 2 ದಿನಗಳಲ್ಲಿ ಹಾರಲು ಪ್ರಾರಂಭಿಸುತ್ತವೆ.
ಡೆಂಗ್ಯೂ ಸೊಳ್ಳೆ ಕಚ್ಚಿದ ತಕ್ಷಣ ಡೆಂಗ್ಯೂ ಲಕ್ಷಣಗಳು ಕಾಣಿಸುವುದಿಲ್ಲ. ಆದ್ರೆ, ಕೆಲವು ದಿನಗಳ ನಂತರ ಅದರ ಪರಿಣಾಮಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಈಡಿಸ್ ಸೊಳ್ಳೆಗಳು ಕಚ್ಚಿದ 3 ರಿಂದ 5 ದಿನಗಳ ನಂತರ ಡೆಂಗ್ಯೂ ಜ್ವರ ಬರುತ್ತದೆ. ಈ ಸೊಳ್ಳೆಗಳು ಬೆಳಗ್ಗೆ ಮತ್ತು ಸಂಜೆಯ ವೇಳೆಯಲ್ಲಿ ಮಾತ್ರ ಸಂಚರಿಸುತ್ತಿದ್ದು, ಡೆಂಗ್ಯೂ ಸೊಳ್ಳೆಗಳು ಮನೆಗಳ ಮೂಲೆಗಳಲ್ಲಿ ಪರದೆಯ ಹಿಂದೆ, ಸೊಳ್ಳೆಗಳು ಇರುವ ಸ್ಥಳಗಳಲ್ಲಿ ಅಡಗಿಕೊಳ್ಳುತ್ತವೆ.
ಡೆಂಗ್ಯೂ ಜ್ವರದ ಲಕ್ಷಣಗಳು.!
ಡೆಂಗ್ಯೂ ಈಡಿಸ್ ಸೊಳ್ಳೆಯ ಕಚ್ಚುವಿಕೆಯಿಂದ ಉಂಟಾಗುವ ಗಂಭೀರ ಕಾಯಿಲೆಯಾಗಿದ್ದು, ಇದರ ಲಕ್ಷಣಗಳು ಸಾಮಾನ್ಯವಾಗಿ ಜ್ವರದಂತಿರುತ್ತವೆ. ಆದ್ರೆ, ಇದು ತೀವ್ರವಾದ ಹೆಮರಾಜಿಕ್ ಜ್ವರಕ್ಕೆ ಕಾರಣವಾಗಬಹುದು. ಸಕಾಲದಲ್ಲಿ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಅಪಾಯವಿದೆ ಎನ್ನುತ್ತಾರೆ ವೈದ್ಯರು.
ಲಕ್ಷಣಗಳೇನು.?
ತೀವ್ರವಾದ ಜ್ವರ, ತಲೆನೋವು, ಸ್ನಾಯು ನೋವು, ಚರ್ಮದ ಮೇಲೆ ಕೆಂಪು ಗುಳ್ಳೆಗಳು, ಕಣ್ಣುಗಳ ಕೆಳಗೆ ನೋವು, ಮೊಣಕಾಲು ನೋವು, ಊತ, ಹಲ್ಲು, ಮೂಗು, ಒಸಡುಗಳಿಂದ ರಕ್ತಸ್ರಾವ ಇತ್ಯಾದಿಗಳನ್ನ ಗಮನಿಸಿದರೆ ತಕ್ಷಣವೇ ಎಚ್ಚರಗೊಳ್ಳಿ.
ಡೆಂಗ್ಯೂ ತಡೆಗಟ್ಟುವುದು ಹೇಗೆ.?
* ವಿಶೇಷವಾಗಿ ಮಳೆಗಾಲದಲ್ಲಿ ದೇಹವನ್ನ ಸಂಪೂರ್ಣವಾಗಿ ಮುಚ್ಚುವ ಬಟ್ಟೆಗಳನ್ನ ಧರಿಸಿ.
* ಮಲಗುವಾಗ ಸೊಳ್ಳೆ ಪರದೆಗಳನ್ನ ಬಳಸಿ.
* ಸೊಳ್ಳೆ ಕಡಿತವನ್ನು ತಡೆಯಲು ದೇಹಕ್ಕೆ ಎಣ್ಣೆ ಅಥವಾ ಕ್ರೀಮ್ ಹಚ್ಚಿ.
* ನಿಮ್ಮ ಮನೆ ಮತ್ತು ಸುತ್ತಮುತ್ತ ಕೊಳಕು ನೀರು ಬರುವುದನ್ನ ತಪ್ಪಿಸಿ.
* ಅನಗತ್ಯ ವಸ್ತುಗಳು ಹಾಗೂ ಕೂಲರ್ ಕಾಲಕಾಲಕ್ಕೆ ಸ್ವಚ್ಛಗೊಳಿಸುತ್ತಿರಬೇಕು.
* ಡೆಂಗ್ಯೂ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.
Posted by Vidyamaana on 2023-05-08 05:21:21 |
ಬೆಂಗಳೂರು; ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ 83.89 ಶೇಕಡಾ ಫಲಿತಾಂಶ ಬಂದಿದೆ. ನಾಲ್ಕು ವಿದ್ಯಾರ್ಥಿಗಳ 625ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ.ಈ ಬಾರಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಚಿತ್ರದುರ್ಗ ಫಲಿಂತಾಶದಲ್ಲಿ ಪ್ರಥಮ ಸ್ಥಾನ ಪಡೆದ್ರೆ ಮಂಡ್ಯ ಜಿಲ್ಲೆ ಎರಡನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ.
ಚಿತ್ರದುರ್ಗ ಜಿಲ್ಲೆ 96.80 ಶೇಕಡಾ ಫಲಿತಾಂಶ ಪಡೆದರೆ, ಮಂಡ್ಯ ಜಿಲ್ಲೆ 96.74 ಶೇಕಡಾ ಫಲಿತಾಂಶ ಪಡೆದಿದೆ.
Posted by Vidyamaana on 2023-10-21 15:47:39 |
ಪುತ್ತೂರು: ಕಾಂಕ್ರೀಟ್ ಉತ್ಪನ್ನಗಳ ಕ್ಷೇತ್ರದಲ್ಲಿ ಹೊಸ ಛಾಪು ಮೂಡಿಸಿರುವ ಆಕರ್ಷಣ್ ಇಂಡಸ್ಟ್ರೀಸ್ ತನ್ನ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಆಫರ್’ಗಳನ್ನು ಹೊರಬಿಟ್ಟಿದೆ.
ಈ ಆಫರ್’ಗಳು ಅಕ್ಟೋಬರ್ 21ರಿಂದ ಆರಂಭಗೊಂಡಿದ್ದು, 25ರವರೆಗೆ ಮಾತ್ರ ಲಭ್ಯವಿರಲಿದೆ. ಈ ಐದು ದಿನಗಳಲ್ಲಿ ಗ್ರಾಹಕರು ಸಂಸ್ಥೆಗೆ ಭೇಟಿ ನೀಡಿ, ಉತ್ಪನ್ನಗಳನ್ನು ಖರೀದಿಸಿದಲ್ಲಿ ವಿಶೇಷ ಕೊಡುಗೆಗಳನ್ನು ನೀಡಲು ಆಕರ್ಷಣ್ ಇಂಡಸ್ಟ್ರೀಸ್ ಮುಂದಾಗಿದೆ.
ಸ್ಪರ್ಧಾತ್ಮಕ ದರದಲ್ಲಿ ಉತ್ಪನ್ನಗಳನ್ನು ನೀಡುವುದು ಮಾತ್ರವಲ್ಲ, ಇದರೊಂದಿಗೆ ಡೆಲಿವರಿಯನ್ನು ಉಚಿತವಾಗಿ ನೀಡಲಾಗುವುದು. ಡ್ರ್ಯಾಗನ್ ಫ್ರುಟ್ ಕೃಷಿಗೆಂದೇ ಸಿದ್ಧಪಡಿಸಿದ ಸ್ಟ್ಯಾಂಡ್’ಗೆ ಉಚಿತ ಡೆಲಿವರಿ, ಜನರ ಅಗತ್ಯಕ್ಕೆ ತಕ್ಕಂತೆ ವಿವಿಧ ವಿನ್ಯಾಸದಲ್ಲಿ ಲಭ್ಯವಿರುವ ಹಾಗೂ ಎರಡೇ ದಿನದಲ್ಲಿ ನಿರ್ಮಿಸಬಹುದಾದ ಸದೃಢ, ಸುಂದರ ರೆಡಿವಾಲ್ ಅಥವಾ ಕಾಂಪೌಂಡ್ ವಾಲ್, ಬೇಲಿ ಕಂಬಗಳ ಖರೀದಿಗೆ ವಿಶೇಷ ಕೊಡುಗೆಗಳನ್ನು ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Posted by Vidyamaana on 2023-10-15 15:15:48 |
ಬಂಟ್ವಾಳ: ಪ್ರಯಾಣಿಕನೋರ್ವ ಚೀಲದಲ್ಲಿ ಕೋಳಿ ಮಾಂಸ ಹಿಡಿದುಕೊಂಡು ಬಸ್ ಹತ್ತಿದ ಕಾರಣಕ್ಕಾಗಿ ಆತನಿಗೆ ನಿರ್ವಾಹಕ ಅವ್ಯಾಚ್ಚ ಶಬ್ದದಿಂದ ಬೈದುದಲ್ಲದೆ, ಚಾಲಕ ಸೀದಾ ಪ್ರಯಾಣಿಕರನ್ನು ಕೂರಿಸಿಕೊಂಡು ಪೋಲಿಸ್ ಠಾಣೆಗೆ ತಂದ ಘಟನೆ ನಡೆದಿದೆ.ಸುರೇಶ್ ಎಂಬವರು ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ ಪುತ್ತೂರು ಕೆ.ಎಸ್.ಆರ್.ಟಿ.ಸಿ.ಬಸ್ ಹತ್ತಿದ್ದಾರೆ. ಈ ವೇಳೆ ವೇಳೆ ಬಸ್ ನಿರ್ವಾಹಕ ಟಿಕೆಟ್ ಪಡೆಯಲು ಬಂದಾಗ ಈತನ ಕೈಯಲ್ಲಿ ಚೀಲವೊಂದ್ದಿದ್ದು, ಇದರ ಬಗ್ಗೆ ವಿಚಾರಿಸಿದ್ದಾನೆ. ಪ್ರಯಾಣಿಕ ಕೋಳಿ ಮಾಂಸ ಎಂದು ತಿಳಿಸಿದ್ದಾನೆ, ಅಷ್ಟು ಕೇಳಿದ್ದೆ ತಡ ಪ್ರಯಾಣಿಕನನ್ನು ಬಸ್ ನಿಂದ ಇಳಿಯುವಂತೆ ಒತ್ತಾಯಿಸಿದ್ದಾನೆ. ಕೋಳಿ ಮಾಂಸ ಬಸ್ ನಲ್ಲಿ ತರಲು ಅವಕಾಶವಿಲ್ಲ ಎಂಬ ವಾದ ನಿರ್ವಾಹಕನದ್ದು, ಆದರೆ ಕೂಲಿ ಕಾರ್ಮಿಕನಿಗೆ ಇದರ ಅರಿವಿಲ್ಲದೆ , ಬಸ್ ನಿಂದ ಇಳಿಯಲು ಒಪ್ಪಲಿಲ್ಲ.ಇವರಿಬ್ಬರ ನಡುವೆ ಕೆಲ ಹೊತ್ತು ವಾಗ್ವಾದ ನಡೆದ ಬಳಿಕ ನಿರ್ವಾಹಕ ಪ್ರಯಾಣಿಕನಿಗೆ ಕೆಟ್ಟ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಹೇಳಲಾಗಿದೆ.
ಕಡೆಗೂ ಪ್ರಯಾಣಿಕ ಬಸ್ ನಿಂದ ಇಳಿಯದ ಕಾರಣಕ್ಕಾಗಿ ಚಾಲಕ ಪ್ರಯಾಣಿಕರು ತುಂಬಿದ್ದ ಬಸ್ಸನ್ನೇ ಪೋಲೀಸ್ ಠಾಣೆಗೆ ತಂದು ಪ್ರಯಾಣಿಕನನ್ನು ಎಳೆದು ಇಳಿಸಿದ್ದಾನೆ.
ಎಸ್.ಐ.ಬುದ್ದಿಮಾತು :
ಈ ವೇಳೆ ಠಾಣೆಯಲ್ಲಿದ್ದ ಎಸ್.ಐ.ರಾಮಕೃಷ್ಣ ಅವರು ಕೆ.ಎಸ್. ಆರ್.ಟಿ.ಸಿ.ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಬುದ್ದಿ ಮಾತು ಹೇಳಿದ್ದಾರೆ.
ಬಡವರ ಗೋಳು ಕೇಳುವವರು ಯಾರು?
ಕೂಲಿ ಕಾರ್ಮಿಕರು ಬಸ್ ನಲ್ಲಿ ಮಾಂಸ, ಮೀನು ಕೊಂಡುಹೋಗಲು ಅವಕಾಶ ವಿಲ್ಲ ಎಂದಾದರೆ ಮತ್ತೆ ಹೇಗೆ ಕೊಂಡುಹೋಗುವುದು ಎಂಬ ಪ್ರಶ್ನೆಯನ್ನು ಈತ ಮಾಡಿದ್ದಾನೆ.
ಒಂದು ಕೆ.ಜಿ.ಕೋಳಿಗೋಸ್ಕರ ಕಾರು ,ರಿಕ್ಷಾ ಬಾಡಿಗೆ ಮಾಡಿಕೊಂಡು ಹೋಗಬೇಕಾ ಎಂಬ ಪ್ರಶ್ನೆಯನ್ನು ಕೇಳಿದ್ದಾರೆ.
ಬಡವರು ಕೋಳಿ ಮಾಂಸ ಕೊಂಡು ಹೋದರೆ ಅವರನ್ನು ಪೋಲೀಸ್ ಠಾಣೆಗೆ ಕರೆದುಕೊಂಡು ಹೋಗುವುದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕರದ್ದು, ನಿರ್ವಾಹಕ ಚಾಲಕರ ಇಂತಹ ನಡೆಯ ಬಗ್ಗೆ ಅಕ್ರೋಶಗಳು ವ್ಯಕ್ತವಾಗಿದೆ.
ಕೋಳಿ,ಮೀನು ತರುವಂತಿಲ್ಲ:
ಬಸ್ ನಲ್ಲಿ ಕೋಳಿ, ಮೀನು ಮಾಂಸ ತರುವಂತಿಲ್ಲ, ಜೀವ ಇರುವ ವಸ್ತುಗಳನ್ನು ತರಬಹುದು, ಮಾಂಸವಾದರೆ ಇತರರಿಗೆ ವಾಸನೆ ಬರುತ್ತದೆ, ಇತರ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಎಂಬ ನಿಟ್ಟಿನಲ್ಲಿ ನಿಗಮ ಅದೇಶ ಮಾಡಿದೆ ಎಂದು ಕೆ.ಎಸ್. ಆರ್.ಟಿ.ಸಿ.ಬಂಟ್ವಾಳ ವಿಭಾಗದ ವಿಭಾಗೀಯ ಅಧಿಕಾರಿ ಶ್ರೀಶ ಭಟ್ ಅವರು ಮಾಹಿತಿ ನೀಡಿದ್ದಾರೆ.
Posted by Vidyamaana on 2024-05-15 20:45:39 |
ವಿಜಯಪುರ: ನಗರದ ಹೊರವಲಯದಲ್ಲಿರುವ ಶ್ರೀ ಸಿದ್ಧೇಶ್ವರ ಬಡಾವಣೆಯ ಮನೆಯೊಂದರಲ್ಲಿ ಬುಧವಾರ ನವದಂಪತಿ ನೇಣಿಗೆ ಶರಣಾಗಿದ್ದಾರೆ.
ಮನೋಜಕುಮಾರ ಪೋಳ (30) ಮತ್ತು ರಾಖಿ (23) ನೇಣಿಗೆ ಶರಣಾದ ಜೋಡಿ. ನಾಲ್ಕು ತಿಂಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಮಂಗಳವಾರ ತಡರಾತ್ರಿ ನೇಣಿ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Posted by Vidyamaana on 2023-10-11 16:09:52 |
ಪುತ್ತೂರು : ಕರ್ನಾಟಕದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರ ಅಸ್ತಿತ್ವಕ್ಕೆ ಬಂದು 6 ತಿಂಗಳಾಯಿತು ಕರ್ನಾಟಕದ ಜನತೆ ಬಹುಮತದ ಸರಕಾರ ಚುನಾಯಿಸಿ ಕಳುಹಿಸಿ ಜನಹಿತವನ್ನು ಕಾಪಾಡಬಹುದು ಎಂದು ನಂಬಿದ್ದರು. ಆದರೇ ಕಳೆದ 6 ತಿಂಗಳಿನಿಂದ ದೇಶದ ಬೆನ್ನೆಲುಬು ಎನ್ನುವ ರೈತರನ್ನು ಸಂಪೂರ್ಣ ಕಡೆಗಣಿಸುವ ಕೆಲಸ ಆಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು.
ರೈತರಿಗೆ ಪ್ರಣಾಳಿಕೆ ಹಾಗೂ ಸರಕಾರದ ಆದೇಶಗಳು ಮರಿಚಿಕೆಗಳಾಗಿದೆ. ರೈತರಿಗೆ ಬಡ್ಡಿ ರಹಿತ ಸಾಲ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಹಾಗೂ ಶೇ 3 ರ ಬಡ್ಡಿ ದರದಲ್ಲಿ, 10 ರಿಂದ 15 ಲಕ್ಷಕ್ಕೆ ಏರಿಕೆ ಮಾಡಿರುವ ಆದೇಶ ಬಂದು 2 ತಿಂಗಳು ಕಳೆದರೂ ಜಾರಿಯಾಗಿಲ್ಲ, ಹಾಲು ಉತ್ಪಾದಕರಿಗೆ ಪ್ರತೀ ಲೀಟರ್ ಗೆ 5 ರೂಪಾಯಿಂದ 7 ರೂಪಾಯಿಗೆ ಹೆಚ್ಚಳ., ಜಾನುವಾರು ಖರೀದಿಗೆ 3 ಲಕ್ಷದ ಶೂನ್ಯ ಬಡ್ಡಿದರದ ಸಾಲ, ಮೀನುಗಾರ ಮಹಿಳೆಯರಿಗೆ 3 ಲಕ್ಷ ಬಡ್ಡಿ ರಹಿತ ಸಾಲ ಘೋಷಣೆಯಾಗಿಯೇ ಉಳಿದಿದೆ.
ದ.ಕ ಜಿಲ್ಲೆಯಲ್ಲಿ 1,50,000 ರೈತರಿಗೆ ಕೇಂದ್ರ ಸರಕಾರ 6,000 ಕಿಸಾನ್ ಸಮ್ಮಾನ್ ನಿಧಿ ನೀಡುತ್ತಿದ್ದು, ಈ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರಕಾರ 4,000 ನೀಡುತ್ತಿತ್ತು, ಇದನ್ನು ಈಗಿನ ಸರಕಾರ ನಿಲ್ಲಿಸಿರುತ್ತದೆ. ಬಿಜೆಪಿ ಸರಕಾರ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ದ.ಕ ಜಿಲ್ಲೆಯಲ್ಲಿ ಸುಮಾರು 24,000 ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ರೈತ ವಿದ್ಯಾನಿಧಿ 4,000 ದಿಂದ 11,000 ತನಕ ಈ ಶೈಕ್ಷಣಿಕ ವರ್ಷದಲ್ಲಿ ಯಾವೊಬ್ಬ ರೈತರ ಮಕ್ಕಳಿಗೂ ಪಾವತಿಯಾಗಿಲ್ಲ.
ಕಳೆದ ವರ್ಷ ರೈತರ ನೀರಾವರಿ ಪಂಪ್ ಸೆಡ್ಗಳಿಗೆ ನಿರಂತರ ವಿದ್ಯುತ್ ನೀಡುತ್ತಿದ್ದರೆ., ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದ ಸರಕಾರ ದಿನದ 7 ಗಂಟೆ ವಿದ್ಯುತ್ ಕೊಡುತ್ತೇನೆ ಎಂದು ಭರವಸೆ ನೀಡಿ ಹಗಲು 3 ಗಂಟೆ ರಾತ್ರಿ 4 ಗಂಟೆ ಭರವಸೆಯೇ ಹೊರತು ರೈತ ಇಂದು ಕತ್ತಲೆಯಲ್ಲಿದ್ದಾನೆ ಎಂದರು.
ಕಾಂಗ್ರೆಸ್ ಸರಕಾರ ರೈತರಿಗೆ ಚಳ್ಳೆ ಹಣ್ಣು ತಿನ್ನಿಸಿ ರೈತರನ್ನು ಸಾಲದ ಕೂಪಕ್ಕೆ ತಳ್ಳುತ್ತಿದೆ. ಇವತ್ತು ಕರ್ನಾಟಕದಲ್ಲಿ ರೈತ ವಿರೋಧಿ ಸರಕಾರ ಆಡಳಿತ ಮಾಡುತ್ತಿದ್ದು, ಹಣದುಬ್ಬರ, ಬೆಲೆ ಏರಿಕೆ, ಬರ ಇದರಿಂದ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ಎಡೆ ಮಾಡಿಕೊಟ್ಟಿದೆ.
ರೈತರಿಗೆ ಘೋಷಣೆ ಮಾಡಿದ ಭರವಸೆಯನ್ನು ಈಡೇರಿಸದೇ ಹೋದರೆ ಮುಂದಿನ ದಿನಗಳಲ್ಲಿ ರೈತರು ಬೀದಿಗಿಳಿದು ಹೋರಾಡುವ ಅನಿವಾರ್ಯತೆ ಬರಬಹುದು ಎಂದು ರಾಜ್ಯಕ್ಕೆ ಎಚ್ಚರಿಕೆಯನ್ನು ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಶಶಿಕುಮಾರ್ ರೈ ಬಾಲ್ಯೊಟ್ಟು, ಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತು, ಪ್ರಸಾದ್ ಕೆ.ವಿ., ಉಪಸ್ಥಿತರಿದ್ದರು.
Posted by Vidyamaana on 2024-01-31 15:13:50 |
ವಿಟ್ಲ: ಮಂಗಳೂರು ರಸ್ತೆಯ ವಿಜಯ ಹೊಟೇಲ್ ಬಳಿಯಲ್ಲಿ ವ್ಯಕ್ತಿಯೋರ್ವರು ಕುಡಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ಪಟ್ಟ ವ್ಯಕ್ತಿ ಅಪ್ಪೇರಿಪಾದೆ ನಿವಾಸಿ ಸಂದೀಪ್ (45).
ಕೂಲಿ ಕೆಲಸ ಮಾಡುತ್ತಿದ್ದ ಸಂದೀಪ್ ರವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ವಿಪರೀತ ಕುಡಿತದ ಚಟವಿದ್ದು, ಇದರಿಂದಲೇ ಸಾವನ್ನಪ್ಪಿದ್ದಾರೆ ಎಂದು ಸಾರ್ವಜನಿಕರಿಂದ ತಿಳಿದು ಬಂದಿದೆ,