Posted by vidyamaana on 2024-07-03 08:24:56 |
ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.
ವರ್ಗಾವಣೆಗೊಂಡ ಕೆಎಎಸ್ ಅಧಿಕಾರಿಗಳು
ಡಾ. ಜಗದೀಶ್ ಕೆ. ನಾಯಕ್
ರಘುನಂದನ್ ಎ.ಎನ್
ಪ್ರಸನ್ನ ಕುಮಾರ್ ವಿ.ಕೆ
ಹುಲ್ಲುಮನಿ ತಿಮ್ಮಣ್ಣ
ವರ್ಗಾವಣೆಗೊಂಡ ಐಪಿಎಸ್ ಅಧಿಕಾರಿಗಳು
ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ
ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ
ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ
ರೇಣುಕಾ ಸುಕುಮಾರ -ಎಐಜಿಪಿ ಬೆಂಗಳೂರು ಡಿಜಿ ಕಚೇರಿ
ಸಿ.ಕೆ. ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತರ
ಸುಮನ್ ಡಿ. ಪೆನ್ನೇಕರ್ -ಎಸ್ ಪಿ, ಬಿಎಂಟಿಎಫ್
ಸಿ.ಬಿ. ರಿಷ್ಯಂತ್ -ಎಸ್.ಪಿ
ಚನ್ನಬಸವಣ್ಣ - ಎಐಜಿಪಿ, ಆಡಳಿತ, ಡಿಜಿ ಕಚೇರಿ
ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ
ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು ಡಿಜಿ ಕಚೇರಿ
ಕೆ. ತ್ಯಾಗರಾಜನ್ -ಐಜಿಪಿ, ಐ.ಎಸ್.ಡಿ.
ಎನ್. ಶಶಿಕುಮಾರ್ -ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್
ಪ್ರದೀಪ್ ಗುಂಡಿ - ಎಸ್ ಪಿ. ಬೀದರ್ ಜಿಲ್ಲೆ
ಯತೀಶ್ ಎನ್. - ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ
ಮಲ್ಲಿಕಾರ್ಜುನ ಬಾಲದಂಡ ಎಸ್ ಪಿ ಮಂಡ್ಯ ಜಿಲ್ಲೆ
ಡಾ.ಟಿ. ಕವಿತಾ ಎಸ್.ಪಿ. ಚಾಮರಾಜನಗರ ಜಿಲ್ಲೆ
ಬಿ. ನಿಖಿಲ್ ಎಸ್ ಪಿ ಕೋಲಾರ ಜಿಲ್ಲೆ
Posted by Vidyamaana on 2024-06-19 21:04:57 |
ಬೋಪಾಲ್: ದೇಶದಲ್ಲಿ ಸಿ ದರ್ಜೆ, ಡಿ ದರ್ಜೆ ನೌಕರರನ್ನು ನೇಮಿಸಿಕೊಳ್ಳಲು ಕೂಡ ಮಾನದಂಡ ಇದೆ. ಕನಿಷ್ಠ ಇಷ್ಟೇ ಶಿಕ್ಷಣ ಪಡೆದಿರಬೇಕು ಎಂಬ ನಿಯಮವಿದೆ. ಆದರೆ, ದೇಶದ ಭವಿಷ್ಯ ರೂಪಿಸಬೇಕಾದ ರಾಜಕಾರಣಿಗಳಿಗೆ ಯಾವುದೇ ಶೈಕ್ಷಣಿಕ ಹಿನ್ನೆಲೆಯ ಕಟ್ಟುಪಾಡುಗಳಿಲ್ಲ. ಇದೇ ಕಾರಣಕ್ಕೆ, 10ನೇ ಕ್ಲಾಸು ಫೇಲಾದವರು ಗ್ರಂಥಾಲಯ ಸಚಿವರಾಗುತ್ತಾರೆ, ಓದಲು ಬರದವರೂ ಶಿಕ್ಷಣ ಸಚಿವರಾಗುತ್ತಾರೆ.
ಇದಕ್ಕೆ ನಿದರ್ಶನ ಎಂಬಂತೆ, ಕೇಂದ್ರ ಸಚಿವೆ ಸಾವಿತ್ರಿ ಠಾಕೂರ್ (Savitri Thakur) ಅವರು ಕೇಂದ್ರ ಸರ್ಕಾರದ ಬೇಟಿ ಬಚಾವೋ ಬೇಟಿ ಪಡಾವೋ (Beti Bachao Beti P
non
hao) ಅಭಿಯಾನವನ್ನು ಹಿಂದಿಯಲ್ಲಿ ಬರೆಯಲು ಪರದಾಡಿದ್ದಾರೆ. ಅವರು ಅಭಿಯಾನದ ಹೆಸರನ್ನು ತಪ್ಪಾಗಿ ಬರೆದ ವಿಡಿಯೊ ಈಗ ವೈರಲ್ (Viral Video) ಆಗಿದೆ.ಹೌದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಹಾಯಕ ಸಚಿವೆಯಾಗಿರುವ ಸಾವಿತ್ರಿ ಠಾಕೂರ್ ಅವರು ಮಧ್ಯಪ್ರದೇಶದ ಧಾರ್ನಲ್ಲಿರುವ ಸರ್ಕಾರಿ ಶಾಲೆಯೊಂದರಲ್ಲಿ ನಡೆದ ಸ್ಕೂಲ್ ಚಲೋ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಇದೇ ವೇಳೆ ಅವರು ಬೋರ್ಡ್ ಮೇಲೆ ಬೇಟಿ ಬಚಾವೋ ಬೇಟಿ ಪಡಾವೋ ಎಂಬುದಾಗಿ ಬರೆಯಲು ಮುಂದಾಗಿದ್ದಾರೆ. ಆದರೆ, ಅಭಿಯಾನದ ಹೆಸರು ಬರೆಯಲು ಅವರಿಗೆ ಬಂದಿಲ್ಲ. ಅವರು ಬೇಡಿ ಪಡಾವೋ ಬಚ್ಚಾವ್ ಎಂಬುದಾಗಿ ತಪ್ಪಾಗಿ ಬರೆದಿದ್ದಾರೆ.
Posted by Vidyamaana on 2024-03-09 12:58:01 |
ವಾಷಿಂಗ್ಟನ್: ಮಾಧ್ಯಮ ದೊರೆ ರೂಪರ್ಟ್ ಮುರ್ಡೋಕ್ ತಮ್ಮ 92ನೇ ವಯಸ್ಸಿನಲ್ಲಿ 5ನೇ ಮದುವೆಗೆ ಸಜ್ಜುಗೊಂಡಿದ್ದು, ತಮ್ಮ ಗೆಳತಿ ಎಲೆನಾ ಜುಕೋವಾ (67) ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕ್ಯಾಲಿಫೋರ್ನಿಯಾದ ಮೊರಗಾದಲ್ಲಿರುವ ಮುರ್ಡೋಕ್ ಅವರ ಎಸ್ಟೇಟ್ನಲ್ಲಿ ಇವರಿಬ್ಬರ ಮದುವೆ ಜೂನ್ ತಿಂಗಳಿನಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ವರದಿಯಾಗಿದೆ.
ಎಲೆನಾ ಜುಕೋವಾ ಅವರು ನಿವೃತ್ತ ಜೀವ ಶಾಸ್ತ್ರಜ್ಞೆಯಾಗಿದ್ದು, ಕಳೆದ ವರ್ಷ ಬೇಸಗೆಯಲ್ಲಿ ಇಬ್ಬರ ನಡುವೆ ಉಂಟಾದ ಪರಿಚಯ ಸ್ನೇಹಕ್ಕೆ ತಿರುಗಿ ಇದೀಗ ಮದುವೆಯ ಹಂತಕ್ಕೆ ತಲುಪಿದೆ. 2022ರಲ್ಲಿ ತಮ್ಮ 4ನೇ ಪತ್ನಿಯಾಗಿದ್ದ ರೂಪದರ್ಶಿ ಜೆರ್ರಿ ಹಾಲ್ಗೆ ಮುರ್ಡೋಕ್ ವಿಚ್ಛೇದನ ನೀಡಿದ್ದರು. ಇವರಲ್ಲದೇ ಪೆಟ್ರೀಷಿಯಾ ಬುಕರ್, ಅನ್ನಾ ಮನ್, ವೆಂಡಿ ಡೆಂಗ್ ಹಾಗೂ ಜೆರ್ರಿ ಮುಡೋìಕ್ ಅವರ ಮಾಜಿ ಪತ್ನಿಯರು.
ಅಮೆರಿಕದ ಖ್ಯಾತ ಮಾಧ್ಯಮ ಸಂಸ್ಥೆಗಳಾದ ವಾಲ್ಸ್ಟ್ರೀಟ್, ನ್ಯೂಯಾರ್ಕ್ ಪೋಸ್ಟ್, ಫಾಕ್ಸ್ ನ್ಯೂಸ್, ಭಾರತದ ಸ್ಟಾರ್ ಇಂಡಿಯಾ ಸೇರಿದಂತೆ ಬಹುತೇಕ ರಾಷ್ಟ್ರೀಯ- ಅಂತಾರಾಷ್ಟ್ರೀಯ ಮಾಧ್ಯಮಗಳು ಮುರ್ಡೋಕ್ ಅವರ ಒಡೆತನಕ್ಕೆ ಸೇರಿವೆ.
Posted by Vidyamaana on 2024-02-28 21:51:15 |
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 2023-24ರ ಋತುವಿಗಾಗಿ ‘ಕೇಂದ್ರ ಗುತ್ತಿಗೆ’ ಪಡೆದ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ.ಟೀಮ್ ಇಂಡಿಯಾದ ಯುವ ಬ್ಯಾಟರ್ ಗಳಾದ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರನ್ನು ಪಟ್ಟಿಯಿಂದ ಹೊರಗಿಡಲಾಗಿದೆ. ಬಿಸಿಸಿಐಯ ಸೂಚನೆಯ ಮೇರೆಗೂ ದೇಶಿಯ ಕ್ರಿಕೆಟ್ ನಲ್ಲಿ ಭಾಗಿಯಾಗದ ಇಶಾನ್ ಹಾಗೂ ಶ್ರೇಯಸ್ ಅವರನ್ನು ಗುತ್ತಿಗೆ ಪಟ್ಟಿಯಿಂದ ಹೊರಗಿಡಲಾಗಿದೆಸುತ್ತಿನ ಶಿಫಾರಸುಗಳಲ್ಲಿ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರನ್ನು ವಾರ್ಷಿಕ ಒಪ್ಪಂದಗಳಿಗೆ ಪರಿಗಣಿಸಲಾಗಿಲ್ಲ ಎಂಬುದನ್ನು ದಯವಿಟ್ಟು ಗಮನಿಸಿ” ಎಂದು ಬಿಸಿಸಿಐ ಹೇಳಿದೆ.
ಕಳೆದ ಬಾರಿಯಂತೆ ಈ ಬಾರಿಯೂ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ರವಿಂದ್ರ ಜಡೇಜಾ ಅವರನ್ನು ಎ+ ಗುತ್ತಿಗೆಯ ಪಟ್ಟಿಯಲ್ಲಿ ಪರಿಗಣಿಸಲಾಗಿದೆ. ಇನ್ನು ಕೆಎಲ್ ರಾಹುಲ್ ಮತ್ತು ಶುಭಮನ್ ಗಿಲ್ ಎ ಗ್ರೇಡ್ ಪಟ್ಟಿಗೆ ಭಡ್ತಿ ಹೊಂದಿದ್ದಾರೆ. ಇನ್ನು ಟೆಸ್ಟ್ ಕ್ರಿಕೆಟ್ಗೆ ಆಯ್ಕೆಯಾಗದಿದ್ದರೂ ಹಾರ್ದಿಕ್ ಪಾಂಡ್ಯ ಗ್ರೇಡ್ ಎ ಪಟ್ಟಿಯಲ್ಲಿ ತಮ್ಮ ಹೆಸರನ್ನು ಉಳಿಸಿಕೊಂಡಿದ್ದಾರೆ. ಹಾರ್ದಿಕ್ 2023 ರಲ್ಲಿ T20I ಕ್ರಿಕೆಟ್ನಲ್ಲಿ 11 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದರು.2023-24ರಲ್ಲಿ 8 ಟಿ20ಐಗಳಲ್ಲಿ ಭಾರತವನ್ನು ಮುನ್ನಡೆಸಿದ್ದ ಸೂರ್ಯಕುಮಾರ್ ಯಾದವ್ ಗ್ರೇಡ್ ಬಿಯಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಭಾರತದ ಸರಣಿ ಗೆಲುವಿನ ಹೀರೋ ಯಶಸ್ವಿ ಜೈಸ್ವಾಲ್ ಅವರು ಬಿ ಗ್ರೇಡ್ ನಲ್ಲಿ ಸ್ಥಾನ ಪಡೆದಿದ್ದಾರೆ.
ನಿಗದಿತ ಅವಧಿಯೊಳಗೆ ಕನಿಷ್ಠ 3 ಟೆಸ್ಟ್ಗಳು ಅಥವಾ 8 ODIಗಳು ಅಥವಾ 10 T20I ಗಳನ್ನು ಆಡುವ ಮಾನದಂಡವನ್ನು ಪೂರೈಸುವ ಕ್ರಿಕೆಟಿಗರನ್ನು ಸ್ವಯಂ ಆಗಿ ಗ್ರೇಡ್ ಸಿ ಗೆ ಸೇರುತ್ತಾರೆ. ಎಲ್ಲಾ ಆಟಗಾರರು ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸದ ಅವಧಿಯಲ್ಲಿ ದೇಶೀಯ ಕ್ರಿಕೆಟ್ನಲ್ಲಿ ಭಾಗವಹಿಸಲು ಆದ್ಯತೆ ನೀಡಬೇಕು ಎಂದು ಬಿಸಿಸಿಐ ಶಿಫಾರಸು ಮಾಡಿದೆ.
ಇಲ್ಲಿದೆ ಪಟ್ಟಿ..
ಗ್ರೇಡ್ A+ (4 ಆಟಗಾರರು): ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ.
ಗ್ರೇಡ್ A (6 ಆಟಗಾರರು): ಆರ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಶುಭಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ.
ಗ್ರೇಡ್ B (5 ಆಟಗಾರರು): ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್ ಮತ್ತು ಯಶಸ್ವಿ ಜೈಸ್ವಾಲ್.
ಗ್ರೇಡ್ C (15 ಆಟಗಾರರು): ರಿಂಕು ಸಿಂಗ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್, ಶಿವಂ ದುಬೆ, ರವಿ ಬಿಷ್ಣೋಯ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆಎಸ್ ಭರತ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್ ಮತ್ತು ರಜತ್ ಪಾಟಿದಾರ್.
ಆಯ್ಕೆ ಸಮಿತಿಯು ವೇಗದ ಬೌಲಿಂಗ್ ಒಪ್ಪಂದಗಳಿಗಾಗಿ ಆಕಾಶ್ ದೀಪ್, ವಿಜಯ್ ಕುಮಾರ್ ವೈಶಾಕ್, ಉಮ್ರಾನ್ ಮಲಿಕ್, ಯಶ್ ದಯಾಳ್ ಮತ್ತು ವಿದ್ವತ್ ಕಾವೇರಪ್ಪ ಅವರ ಹೆಸರನ್ನು ಶಿಫಾರಸು ಮಾಡಿದೆ.
Posted by Vidyamaana on 2024-03-19 21:42:20 |
ಮಂಗಳೂರು: ಒಂದೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಿದ್ದ ದಕ್ಷಿಣ ಕನ್ನಡ ಇದೀಗ ಬಿಜೆಪಿ ಭದ್ರ ಬಾಹುವಿನಲ್ಲಿ ಬಂಧಿಯಾಗಿದೆ. ಇದೀಗ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಸಮರ್ಥ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದೀಗ ಚೌಟಾ ಅವರಿಗೆ ಪ್ರತಿಸ್ಪರ್ಧಿಯಾಗಿ ಹಾಗೂ ಕಳೆದುಕೊಂಡ ಕ್ಷೇತ್ರವನ್ನು ಮರು ಸಂಪಾದಿಸಿಕೊಳ್ಳುವುದೇ ಕಾಂಗ್ರೆಸ್ ಮುಂದಿರುವ ಬಹುದೊಡ್ಡ ಸವಾಲು.
ವಿಧಾನಸಭಾ ಚುನಾವಣೆಯಂತೆ ಬಿಜೆಪಿ ಬಂಡಾಯ ಕಾಂಗ್ರೆಸಿಗೆ ವರದಾನ ಎಂಬ ಲೆಕ್ಕಾಚಾರ ಇದೀಗ ಉಲ್ಟಾ ಆಗಿದೆ. ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಹಾಗಾಗಿ ಕಾಂಗ್ರೆಸ್ ಗೆಲುವು ಅಷ್ಟು ಸುಲಭದ ಮಾತಲ್ಲ. ಹಾಗಾಗಿ ಅಭ್ಯರ್ಥಿ ಆಯ್ಕೆಯ ಬಗ್ಗೆ ಇನ್ನು ಅಧಿಕೃತ ಮಾಹಿತಿ ಹೊರಹಾಕಿಲ್ಲ.
ಜಾತಿ ಲೆಕ್ಕಾಚಾರ:
ಬಂಟ ಸಮುದಾಯದ ಕ್ಯಾ. ಚೌಟ ಅವರಿಗೆ ಬಿಜೆಪಿ ಟಿಕೇಟ್ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಲ್ಲವ ಮುಖಂಡನಿಗೆ ಟಿಕೇಟ್ ನೀಡಲು ಯೋಜನೆ ಸಿದ್ಧಪಡಿಸಿಕೊಂಡಿದೆ ಎಂಬ ವಿಶ್ಲೇಷಣೆ ಕೇಳಿಬಂದಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಂಟ ಸಮುದಾಯದ ನಳಿನ್ ಕುಮಾರ್ ಕಟೀಲ್ ಎದುರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅದೇ ಬಂಟ ಸಮುದಾಯದ ಮಿಥುನ್ ರೈ ಕಣಕ್ಕಿಳಿದಿದ್ದರು. ಆದರೆ ಮೋದಿ ಅಲೆಯ ಮುಂದೆ ಎಲ್ಲವೂ ಕೊಚ್ಚಿಕೊಂಡುಹೋಗಿತ್ತು. ಬಂಟ ಸಮುದಾಯದ ಕಾಂಗ್ರೆಸ್ ಲೆಕ್ಕಾಚಾರ ಬುಡಮೇಲಾಗಿತ್ತು.
ಕರಾವಳಿಯಲ್ಲಿ ಬಂಟ, ಬಿಲ್ಲವ ಸಮುದಾಯದ ಸಂಖ್ಯೆ ಹೆಚ್ಚಿದೆ. ಹಾಗಾಗಿ ಬಂಟ ಸಮುದಾಯದ ಪ್ರತಿಸ್ಪರ್ಧಿಯಾಗಿ ಬಿಲ್ಲವ ಸಮುದಾಯದ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂಬುದು ಸದ್ಯದ ಮಾಹಿತಿ.
ಜನಾರ್ದನ ಪೂಜಾರಿ ಆಪ್ತ!
ಗುರು ಬೆಳದಿಂಗಳು ಕಾರ್ಯಕ್ರಮದ ಮೂಲಕ ಫೇಮಸ್ ಆಗಿರುವ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಆಪ್ತ ಪದ್ಮರಾಜ್ ರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಎನ್ನುವ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಪದ್ಮರಾಜ್ ಹೆಸರನ್ನೇ ಅಂತಿಮ ಮಾಡಿದೆ ಎಂದು ತಿಳಿದುಬಂದಿದೆ.
Posted by Vidyamaana on 2023-12-05 07:11:18 |
ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ KA-03-NK-5 ನಂಬರಿನ ದುಬಾರಿ ಕಾರಿಗೆ ಸಾಲಿಗ್ರಾಮದ ಬಳಿ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದಿದ್ದ. ಈ ವೇಳೆ ಬೈಕ್ ಸವಾರನ ವಿರುದ್ಧ ಭವಾನಿ ರೇವಣ್ಣ ಗರಂ ಆದರು. ಈ ಸುದ್ದಿ ರಾಜ್ಯಾದ್ಯಂತ ಸದ್ದು ಮಾಡಿದೆ. ಈ ವೇಳೆ ಹೆಚ್ಚು ಚರ್ಚೆಗೆ ಬಂದಿರುವುದು ಅವರು ಪ್ರಯಾಣಿಸುತಿದ್ದ ಐಷಾರಾಮಿ ಟೊಯೊಟಾ ವೆಲ್ಫೈರ್ (Toyota Vellfire) ಕಾರ್ ಆಗಿದೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ಸೊಸೆ ಭವಾನಿ ರೇವಣ್ಣ (Bhavani Revanna) ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಬೈಕ್ವೊಂದು ಡಿಕ್ಕಿ ಹೊಡೆದಿದ್ದು, ಕಾರಿನ ಮುಂಭಾಗದ ನಂಬರ್ ಪ್ಲೇಟ್ ಮತ್ತು ಮುಂಭಾಗದಲ್ಲಿ ಬಂಪರ್ ಡ್ಯಾಮೇಜ್ ಆಗಿದೆ. ಈ ಕಾರು ಅಪಘಾತ ರಾಜ್ಯದಲ್ಲಿ ಭಾರೀ ಸದ್ದು ಮಾಡಿದೆ. ಹೀಗಾಗಿ ಇದು ಯಾವ ಕಾರು ಎಂಬ ಕುತೂಹಲ ಮೂಡಿದೆ. ಭವಾನಿ ರೇವಣ್ಣ ಅವರು ಪ್ರಯಾಣಿಸುತ್ತಿದ್ದ ಕಾರು ಯಾವುದು ಮತ್ತು ಇದರ ವಿಶೇಷತೆಗಳ ಬಗ್ಗೆ ಮಾಹಿತಿ ಇಲ್ಲಿದೆ.
ಭವಾನಿ ರೇವಣ್ಣ ಅವರು ಪ್ರಯಾಣಿಸುತ್ತಿದ್ದ ಕಾರು ಟೊಯೊಟಾ ವೆಲ್ಫೈರ್ ಆಗಿದೆ. ಈ ಕಾರಿಗೆ ಪ್ರಸ್ತುತ ಆನ್ ರೋಡ್ ಬೆಲೆಯು ರೂ.1,48,58,511 ಆಗಿದ್ದು, ಈ ಕಾರಿನ ಟಾಪ್ ವೆರಿಯೆಂಟ್ ಮಾದರಿಯ ಆನ್ ರೋಡ್ ಬೆಲೆಯು ರೂ.1.61 ಕೋಟಿಯಾಗಿದೆ. ಇದು ಸ್ಟ್ಯಾಂಡ್ ಹೈಬ್ರಿಡ್ ಎಲೆಕ್ಟ್ರಿಕ್ ವಾಹನವು 2.5-ಲೀಟರ್ ಇನ್ಲೈನ್ 4-ಸಿಲಿಂಡರ್ DOHC (ಡಬಲ್ ಓವರ್ಹೆಡ್ ಕ್ಯಾಮ್ಶಾಫ್ಟ್) ಎಂಜಿನ್ ಅನ್ನು ಹೊಂದಿದೆ.ಇದು 142 kW (@ 6000 rpm) ಮತ್ತು ಗರಿಷ್ಠ 240 Nm ಟಾರ್ಕ್ ಅನ್ನು ಹೊರಹಾಕುತ್ತದೆ. ಇದು ಎಲೆಕ್ಟ್ರಿಕ್ ಮೋಟಾರು ಮತ್ತು ಹೈಬ್ರಿಡ್ ಬ್ಯಾಟರಿಯೊಂದಿಗೆ ಕಡಿಮೆ ಕಾರ್ಬನ್ ಹೊರಸೂಸುವಿಕೆಯನ್ನು ಖಾತ್ರಿಪಡಿಸುತ್ತದೆ. ಟೊಯೊಟಾದ ಸ್ಟ್ರಾಂಗ್ ಹೈಬ್ರಿಡ್ ಎಲೆಕ್ಟ್ರಿಕ್ ವೆಹಿಕಲ್ ಸಿಸ್ಟಮ್ ಅತ್ಯುತ್ತಮ ಮೈಲೇಜ್ ಕೂಡ ಒದಗಿಸುತ್ತದೆ. ಕಂಪನಿಯ ಪ್ರಕಾರ ಹೊಸ ಕಾರು ಪ್ರತಿ ಲೀಟರ್ಗೆ 19.28 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.
ಇಂಟೀರಿಯರ್ ಬಗ್ಗೆ ಹೇಳುವುದಾದರೆ, ಹೆಚ್ಚಿದ ಆಸನ ಅಂತರದೊಂದಿಗೆ ಹೊಸ ಸುಧಾರಿತ ಆಂತರಿಕ ಸ್ಥಳವನ್ನು ಆಪ್ಟಿಮೈಸ್ ಮಾಡಲಾಗಿದೆ. ಡ್ರೈವರ್ ಸೀಟ್ ಮಾರ್ಪಾಡುಗಳ ಮಾಸ್ಟರ್ಫುಲ್ ಆರ್ಕೆಸ್ಟ್ರೇಶನ್ ಮತ್ತು ಎರಡನೇ ಸಾಲಿನ ಆಸನಗಳ ಅತ್ಯಾಧುನಿಕ ನಿರ್ಮಾಣದ ಮೂಲಕ, ಮುಂಭಾಗ ಮತ್ತು ಎರಡನೇ ಸಾಲಿನ ಆಸನಗಳ ನಡುವಿನ ಅಂತರವನ್ನು ಈಗ ಯಶಸ್ವಿಯಾಗಿ ಹೆಚ್ಚಿಸಲಾಗಿದೆ.ಹೊಸ ಸೂಪರ್-ಲಾಂಗ್ ಓವರ್ಹೆಡ್ ಕನ್ಸೋಲ್ ಸೀಲಿಂಗ್ನ ಮಧ್ಯದಲ್ಲಿ ಅಗತ್ಯ ವಸ್ತುಗಳನ್ನು ಕೇಂದ್ರೀಕರಿಸುತ್ತದೆ. ಕಂಫರ್ಟ್ ಝೋನ್ ಅನ್ನು ಕಸ್ಟಮೈಸ್ ಮಾಡಲು ಪವರ್ ಕಂಟ್ರೋಲ್ಗಳಂತಹ ಡಿಟ್ಯಾಚೇಬಲ್ ಸ್ಮಾರ್ಟ್ ಫೋನ್ ಅನ್ನು ಒದಗಿಸುವ ಮೂಲಕ ಸವಾರಿ ಸೌಕರ್ಯವನ್ನು ಮತ್ತಷ್ಟು ಹೆಚ್ಚಿಸಲಾಗಿದೆ. 2 ನೇ ಸಾಲಿನ ಸೀಟುಗಳು ಮಸಾಜ್ ಕಾರ್ಯವನ್ನು ಸಕ್ರಿಯಗೊಳಿಸಲಿವೆ.
ಟೊಯೋಟಾ ಕಾರುಗಳಲ್ಲಿ ಸುರಕ್ಷತೆಯು ಅತ್ಯುನ್ನತ ಪ್ರಾಮುಖ್ಯತೆಯನ್ನು ಪಡೆಯುತ್ತದೆ. ಟೊಯೋಟಾ ಸೇಫ್ಟಿ ಸೆನ್ಸ್ನೊಂದಿಗೆ, ಹೊಸ ವೆಲ್ಫೈರ್ ಪ್ರಯಾಣಿಕರಿಗೆ ಮತ್ತು ಪಾದಚಾರಿಗಳಿಗೆ ಸಮಗ್ರ ರಕ್ಷಣೆಯನ್ನು ಒದಗಿಸಲು ಅತ್ಯಾಧುನಿಕ ಸೇಫ್ಟಿ ಫೀಚರ್ಗಳನ್ನು ಹೊಂದಿದೆ. ಇದರಲ್ಲಿ ಪ್ರೀ-ಕೊಲಿಷನ್ ಸೇಫ್ಟಿ, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಲೇನ್ ಟ್ರೇಸ್ ಅಸಿಸ್ಟ್, ಅಡಾಪ್ಟಿವ್ ಹೈ ಬೀಮ್ ಎಲ್ಇಡಿ ಹೆಡ್ಲ್ಯಾಂಪ್ಗಳು ಮತ್ತು ಬ್ಲೈಂಡ್ ಸ್ಪಾಟ್ ಮಾನಿಟರ್ನಂತಹ ಪ್ರೊಆಕ್ಟಿವ್ ಡ್ರೈವಿಂಗ್ ಅಸಿಸ್ಟ್ ವೈಶಿಷ್ಟ್ಯಗಳು ಟೊಯೋಟಾ ಸೇಫ್ಟಿ ಸೆನ್ಸ್ ಭಾಗವಾಗಿ ವೆಲ್ಫೈರ್ನಲ್ಲಿ ಬರುತ್ತವೆ.
ಈ ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳು ಐಷಾರಾಮಿ ವಿಭಾಗದಲ್ಲಿ ಸುರಕ್ಷತೆ ಮತ್ತು ಚಾಲನಾ ಸಹಾಯದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಸುಧಾರಿತ ತಂತ್ರಜ್ಞಾನಕ್ಕೆ ಅನುಗುಣವಾಗಿ, ವೆಲ್ಫೈರ್ ಈಗ ರಿಮೋಟ್ ಡೋರ್ ಲಾಕ್/ಅನ್ಲಾಕ್, ಹವಾನಿಯಂತ್ರಣ, ತುರ್ತು ಸೇವೆಗಳು, ವೆಹಿಕಲ್ ಡಯಾಗ್ನೋಸ್ಟಿಕ್, ಚಾಲಕ ಮಾನಿಟರಿಂಗ್ ಎಚ್ಚರಿಕೆಗಳಂತಹ 60 ಕ್ಕೂ ಹೆಚ್ಚು ಸಂಪರ್ಕಿತ ಫಿಚರ್ಸ್ ಗಳನ್ನು ಹೊಂದಿವೆ.
ಡ್ರೈವ್ಸ್ಪಾರ್ಕ್ ಕನ್ನಡ ವೆಬ್ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಲು ಮರೆಯದಿರಿ.
Posted by Vidyamaana on 2024-01-02 14:16:13 |
ಉಳ್ಳಾಲ: ಮದುವೆಯಾಗುವುದಾಗಿ ನಂಬಿಸಿ ಉಳ್ಳಾಲ ತಾಲೂಕಿನ ಕುಂಪಲದ ಬಾಡಿಗೆ ಮನೆಯಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯನ್ನ ಕೂಡಿಹಾಕಿ, ನಾಲ್ಕು ತಿಂಗಳಿನಿಂದ ನಿರಂತರ ಅತ್ಯಾಚಾರಗೈದ ಮೂಡಿಗೆರೆಯ ಮುಸ್ಲಿಮ್ ಯುವಕನನ್ನ ಉಳ್ಳಾಲ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ, ಅಣಜೂರು ಗ್ರಾಮದ ನಿವಾಸಿ ಮೊಹಮ್ಮದ್ ರಝೀನ್(25) ಬಂಧಿತ ಆರೋಪಿ. ರಾಝೀನ್ 17 ವರ್ಷದ ಪರಿಶಿಷ್ಟ ಜಾತಿಯ ಅಪ್ರಾಪ್ತೆಯನ್ನ ಪ್ರೀತಿಸುವ ನಾಟಕವಾಡಿ ನಾಲ್ಕು ತಿಂಗಳ ಹಿಂದೆ ಆಕೆಯನ್ನ ಮಂಗಳೂರಿಗೆ ಕರೆದುಕೊಂಡು ಬಂದಿದ್ದ. ಅಲ್ಲಿಂದ ತನ್ನ ರಿಕ್ಷಾದಲ್ಲಿ ಕುಂಪಲದ ಬಾಡಿಗೆ ಮನೆಯೊಂದಕ್ಕೆ ಕರೆದೊಯ್ದು ಮದುವೆಯಾಗೋದಾಗಿ ನಂಬಿಸಿ ನಿರಂತರ ಅತ್ಯಾಚಾರಗೈದಿದ್ದಾನೆ.
ಊರಲ್ಲಿ ಅಜ್ಜಿಯ ಪಾಲನೆಯಲ್ಲಿದ್ದ ಅಪ್ರಾಪ್ತ ಬಾಲಕಿ, ರಾಝೀನ್ ಮಾತನ್ನ ನಂಬಿ ಕುಂಪಲದ ಬಾಡಿಗೆ ಮನೆಯಲ್ಲೇ ದಿಕ್ಕು ತೋಚದೆ ವಾಸಿಸುತ್ತಿದ್ದಳು. ಅನುಮಾನಗೊಂಡ ಬಜರಂಗದಳ ಕಾರ್ಯಕರ್ತರು ಜೋಡಿಯನ್ನ ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದರು. ಬಾಲಕಿಯರ ಬಾಲ ಮಂದಿರದಲ್ಲಿ ಅಪ್ರಾಪ್ತ ಬಾಲಕಿ ನೀಡಿರುವ ಹೇಳಿಕೆಯಿಂದ ಸತ್ಯಾಂಶ ಬೆಳಕಿಗೆ ಬಂದಿದೆ. ಆರೋಪಿ ರಾಝೀನ್ ನನ್ನು ಉಳ್ಳಾಲ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.