ಪರೀಕ್ಷೆಯಲ್ಲಿ ಗೈಡ್ ಇಟ್ಟುಕೊಂಡು ಸಾಮೂಹಿಕ ನಕಲು ಮಾಡಿದ ವಿದ್ಯಾರ್ಥಿಗಳು, ವಿಡಿಯೋ ವೈರಲ್

ಸುದ್ದಿಗಳು News

Posted by vidyamaana on 2024-07-08 08:41:02 |

Share: | | | | |


ಪರೀಕ್ಷೆಯಲ್ಲಿ ಗೈಡ್ ಇಟ್ಟುಕೊಂಡು ಸಾಮೂಹಿಕ ನಕಲು ಮಾಡಿದ ವಿದ್ಯಾರ್ಥಿಗಳು, ವಿಡಿಯೋ ವೈರಲ್

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗೈಡ್​ ಹಾಗೂ ಪುಸ್ತಕಗಳನ್ನಿಟ್ಟುಕೊಂಡು ಸಾಮೂಹಿಕ ನಕಲು ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕೇವಲ ಮಕ್ಕಳಲ್ಲ ಶಿಕ್ಷಕರೂ ಅವರಿಗೆ ನೆರವಾಗುತ್ತಿರುವುದು ಸಿಸಿಟಿವಿ ದೃಶ್ಯದಲ್ಲಿ ಕಂಡುಬಂದಿದೆ. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗೈಡ್​ ಇಟ್ಟುಕೊಂಡು ಸಾಮೂಹಿಕ ನಕಲು(Mass Cheating) ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಘಟನೆ ಸಿಸಿಟಿವಿಯಲ್ಲಿ ಬಯಲಾಗಿದೆ. ಜುಲೈ 5 ರಂದು ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು ಎಂದು ಎಸ್ ಡಿಎಂ ವಿಜಯ್ ಸಿಂಗ್ ಮಾಹಿತಿ ನೀಡಿದ್ದಾರೆ. ಅವರು ತನಿಖೆಗಾಗಿ ಸ್ಥಳಕ್ಕೆ ಬಂದರು ಆದರೆ ಅಲ್ಲಿ ಎಲ್ಲವೂ ಸಾಮಾನ್ಯವಾಗಿತ್ತು. ಇದಾದ ಬಳಿಕ ವಿಡಿಯೋವೊಂದು ಹೊರಬಿದ್ದಿದ್ದು, ನಂತರ ವಿಷಯ ಬೆಳಕಿಗೆ ಬಂದಿದೆ.

ಪರೀಕ್ಷಾ ಪತ್ರಿಕೆಗಳಲ್ಲಿನ ಅಕ್ರಮಗಳು ಮತ್ತು ಸೋರಿಕೆಗಳ ಬಗ್ಗೆ ದೇಶದಲ್ಲಿ ಕೋಲಾಹಲವಿದೆ, ಈ ನಡುವೆ ಈ ಘಟನೆ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ತರಗತಿ ಕೊಠಡಿಯಲ್ಲಿ ಪರೀಕ್ಷೆ ನಡೆಯುವಾಗ ಹಲವು ಮಕ್ಕಳು ಗುಂಪು ಕಟ್ಟಿಕೊಂಡು ಬಹಿರಂಗವಾಗಿ ನಕಲು ಮಾಡುತ್ತಿದ್ದರು. ಅಲ್ಲಿ ಶಿಕ್ಷಕರೂ ಇದ್ದರು. ಆದರೆ ನಕಲು ನಿಲ್ಲಿಸುವ ಬದಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಬಿಎ ಮತ್ತು ಬಿಎಸ್ಸಿ ಪರೀಕ್ಷೆಗಳು ಅಲ್ಲಿ ನಡೆಯುತ್ತಿತ್ತು, ಈ ಪರೀಕ್ಷೆಗಳ ಕೇಂದ್ರವನ್ನು ದಾಮೋಹ್ ಪ್ರದೇಶದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಸಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳು ಅದೇ ಶಾಲೆಯ ತರಗತಿ ಕೊಠಡಿಯಲ್ಲಿದೆ ಎಂದು ಹೇಳಲಾಗಿದೆ.

ವಿದ್ಯಾರ್ಥಿಗಳು ಗೈಡ್​ ಹಾಗೂ ಪುಸ್ತಕಗಳನ್ನು ತೆರೆದು ನಕಲು ಮಾಡುತ್ತಿರುವುದನ್ನು ಕಾಣಬಹುದು. ಈ ಬಗ್ಗೆ ಎಸ್‌ಡಿಎಂ ಭಿಂಡ್ ಕಲೆಕ್ಟರ್ ಸಂದೀಪ್ ಶ್ರೀವಾಸ್ತವ ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರದ ಅಧ್ಯಕ್ಷರು ಹಾಗೂ ಪ್ರಾಂಶುಪಾಲರ ಶಾಮೀಲಾಗಿರುವುದನ್ನು ಇದರಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆಯೂ ಮಾತನಾಡಿದರು. ಇದೀಗ ಆಲಂಪುರದ ಹೈಯರ್ ಸೆಕೆಂಡರಿ ಶಾಲೆಯನ್ನು ಪರೀಕ್ಷಾ ಕೇಂದ್ರವನ್ನಾಗಿ ಮಾಡಲಾಗಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ದುರ್ಗಾಪ್ರಸಾದ್ ಸರಾಫ್, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸ್ವಯಂ ಪ್ರಭಾ ಕಾಲೇಜಿನ ವಿದ್ಯಾರ್ಥಿಗಳೂ ದಾಮೋಹ್ ಕೇಂದ್ರದಲ್ಲಿ ನಕಲು ಮಾಡುತ್ತಿದ್ದು ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದೆ.

 Share: | | | | |


ಫಿಲೋಮಿನಾ ಕಾಲೇಜು 4 ನೇ ಗಣೇಶೋತ್ಸವ ಸಂಭ್ರಮ

Posted by Vidyamaana on 2023-09-20 14:02:54 |

Share: | | | | |


ಫಿಲೋಮಿನಾ ಕಾಲೇಜು 4 ನೇ ಗಣೇಶೋತ್ಸವ ಸಂಭ್ರಮ

ಪುತ್ತೂರು: ಕೇಸರಿ ಶಾಲು ಧರ್ಮದ ಸಂಕೇತವಾಗಿದೆ ವಿನಾ ಯಾವುದೇ ರಾಜಕೀಯ ಪಕ್ಷದ ಸೊತ್ತಲ್ಲ, ಕೆಲವರು ಅದು ನಮ್ಮದೇ ಎಂದು ಹೇಳುತ್ತಿದ್ದಾರೆ, ಧರ್ಮದ ಹಾದಿಯಲ್ಲಿ ನಡೆಯುವ ಪ್ರತೀಯೊಬ್ಬ ವ್ಯಕ್ತಿಯೂ ತನ್ನ ಧರ್ಮವನ್ನು ಆಚರಣೆ ಮಾಡುವುದರ ಜೊತೆ ಸಹೋದರ ಧರ್ಮವನ್ನು ಗೌರವಿಸುತ್ತಾನೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು ಬಳಿ ಸಂತಫಿಲೋಮಿನಾ ವಿದ್ಯಾ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಗಣೇಶೋತ್ಸವ ಸೇವಾ ಟ್ರಸ್ಟ್ , ಫಿಲೋಮಿನ ಕಾಲೇಜು ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಲ್ಲಿ ಪ್ರತೀಯೊಬ್ಬರೂ ಪರಸ್ಪರ ಸಹೋದರರಂತೆ ಬಾಳಬೇಕು, ಇಲ್ಲಿ ಯಾರೂ ಮೇಲೂ ಇಲ್ಲ ಕೀಳೂ ಇಲ್ಲ, ನಮ್ಮ ದೇಹದಲ್ಲಿ ಹರಿಯುವ ರಕ್ತ ಒಂದೇ, ಉಸಿರಾಡುವ ಗಾಳಿಯೂ ಒಂದೇ, ಕುಡಿಯುವ ನೀರೂ ಒಂದೇ ಹೀಗಿರುವಾಗ ನಮ್ಮಲ್ಲಿ ಧರ್ಮದ ಹೆಸರಲ್ಲಿ ಬೇದ ಭಾವ ಯರೂ ಮಾಡಬಾರದು. ಪರಸ್ಪರ ಶಾಂತಿ ಸೌಹಾರ್ಧತೆಯಿಂದ ಬಾಳಿ ಬದುಕಿದರೆ ಸಮಾಜದಲ್ಲಿ ನೆಮ್ಮದಿ ಕಾಣಲು ಸಾಧ್ಯವಾಗುತ್ತದೆ. ಹಿಂಸೆಗೆ ನಾವು ಎಂದೂ ಪ್ರಚೋಧನೆ ಕೊಡಬಾರದು, ಹಿಂಸೆಯಿಂಸ ಸಾಧಿಸಿದ್ದು ಏನೂ ಇಲ್ಲ. ಒಂದೇ ತಾಯಿ ಮಕ್ಕಳಂತೆ ಬಾಳಿ ಬದಕುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ನಾವು ಕಾರಣ ಕರ್ತರಾಗಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿರುವ ಬಹುತೇಕ ದೇವಸ್ಥಾನ, ದೈವಸ್ಥಾಮ ಮಸೀದಿ, ಚರ್ಚುಗಳು ಸರಕಾರಿ ಜಾಗದಲ್ಲಿದೆ. ಸರಕಾರ ಜಾದಲ್ಲಿರುವ ಆರಾಧನಾ ಸ್ಥಳಗಳನ್ನು ಸಕ್ರಮ ಮಾಡಲು ಅಥವಾ ಮಂದಿರದ ಹೆಸರಿನಲ್ಲಿ ಮಾಡಲು ಇದುವರೆಗೂ ಯಾರೂ ಮುಂದಾಗಿಲ್ಲ. ವಿಧಾನಸಭಾ ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿದ್ದೇನೆ ಮುಂದಿನ ದಿನಗಳಲ್ಲಿ ಅದು ಕಾನೂನಾಗಿ ಕಾರ್ಯರೂಪಕ್ಕೆ ಬರುವ ವಿಶ್ವಾಸ ಇದೆ ಎಂದು ಹೇಳಿದರು.

ವೇದಿಕೆಯಲ್ಲಿ ಫಿಲೋಮಿನಾ ಪದವಿ ಕಾಲೇಜು ಪ್ರಾಂಶುಪಾಲರಾದ ಆಂಟನಿ ಪ್ರಕಾಶ್ ಮೊಂತೆರೋ, ಪಿಯು ಕಾಲೇಜು ಪ್ರಾಂಶುಪಾಲರಾದ ಅಶೋಕ್ ರಾಯನ್ ಕ್ರಾಸ್ತಾ, ಕಾಲೇಜು ವಾರ್ಡನ್ ರುಪೇಶ್ ತಾವ್ರೋ,  ಕಾರ್ಯದರ್ಶಿ ಹೃದಯ್ ಎಸ್, ಜೊತೆ ಕಾರ್ಯದರ್ಶಿ ರಕ್ಷಾ ಅಂಚನ್, ಟ್ರಸ್ಟ್ ಗೌರವಾಧ್ಯಕ್ಷ ಪ್ರಕಾಶ್ ಮುಕ್ರಂಪಾಡಿ ಉಪಸ್ಥಿತರಿದ್ದರು.ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಕ್ರಂ ಆಳ್ವ ಸ್ವಾಗತಿಸಿದರು.ವರ್ಷಾ ಕಾರ್ಯಕ್ರಮ ನಿರೂಪಿಸಿದರು.

ಮಾಡಾವು :ಈಜಲು ತೆರಳಿ ನಾಪತ್ತೆಯಾಗಿದ್ದ ತಸ್ಲೀಮ್ ನ ಮೃತದೇಹ ಪತ್ತೆ

Posted by Vidyamaana on 2023-10-16 07:56:47 |

Share: | | | | |


ಮಾಡಾವು :ಈಜಲು ತೆರಳಿ ನಾಪತ್ತೆಯಾಗಿದ್ದ ತಸ್ಲೀಮ್ ನ ಮೃತದೇಹ ಪತ್ತೆ

ಪುತ್ತೂರು: ಈಜಲು ಹೊಳೆಗೆ ಹೋಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.

ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17ವ) ಮೃತಪಟ್ಟವರು. ತಸಗಲೀಮ್ ಅ. 15ರಂದು ಸಂಜೆ ಗೆಳೆಯರ ಜೊತೆಗೂಡಿ ಅರಿಕ್ಕಿಲ ಸಮೀಪದ ಎರಕ್ಕಲ ಎಂಬಲ್ಲಿ ಹೊಳೆಗೆ ಈಜಲು ತೆರಳಿದ್ದ ವೇಳೆ ಘಟನೆ ಸಂಭವಿಸಿತ್ತು. ಯುವಕ ನಾಪತ್ತೆಯಾಗುತ್ತಿದ್ದಂತೆ ಸ್ನೇಹಿತರು ಮನೆಯವರಿಗೆ, ಸ್ಥಳೀಯರಿಗೆ ವಿಷಯ ತಲುಪಿಸಿದ್ದರು.

ತಕ್ಷಣ ಸ್ಥಳೀಯರು ಹೊಳೆಯಲ್ಲಿ ಹುಡುಕಾಟ ನಡೆಸಿದರಾದರೂ ಮೃತದೇಹ ಪತ್ತೆಯಾಗಿರಲಿಲ್ಲ. ಬಳಿಕ ಮುಳುಗು ತಜ್ಞರು ಕಾರ್ಯಾಚರಣೆ ಮುಂದುವರಿಸಿದ್ದರು. ಅದರೂ, ಮೃತದೇಹ ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಿಗ್ಗೆ ಹುಡುಕಾಟ ಮುಂದುವರಿಸಿದಾಗ ಈಜಲು ತೆರಳಿದ್ದ ಸ್ಥಳದ ಆಸುಪಾಸೇ ಮೃತದೇಹ ಪತ್ತೆಯಾಗಿದೆ.

ಕುಂದಾಪುರ; ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಕಾಲು ಜಾರಿ ಬಿದ್ದು ಮಹಿಳೆ ಸಾವು

Posted by Vidyamaana on 2024-03-26 09:13:48 |

Share: | | | | |


ಕುಂದಾಪುರ; ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಕಾಲು ಜಾರಿ ಬಿದ್ದು ಮಹಿಳೆ ಸಾವು

ಕುಂದಾಪುರ; ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಕಾಲು ಜಾರಿ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಹಳೇ ಗೀತಾಂಜಲಿ ಟಾಕೀಸ್ ಸಮೀಪ ನಡೆದಿದೆ.

ಲಕ್ಷ್ಮೀ ಪ್ರತಾಪ್‌ ನಾಯಕ್ (41) ಮೃತ ದುರ್ದೈವಿ. ನಿನ್ನೆ ಸಂಜೆ ಲಕ್ಷ್ಮೀಳೆ ಫ್ಲ್ಯಾಟಿನ ಮಹಡಿಯ ಮೇಲೆ ಒಣಗಿಸಲು ಹಾಕಿದ್ದ ತೆಂಗಿನಕಾಯಿ ತರಲು ಹೋಗಿದ್ದಾಗ ಆಕಸ್ಮಿಕವಾಗಿ ಮಹಡಿಗೆ ಅಳವಡಿಸಲಾಗಿದ್ದ ಫೈಬರ್ ಶೀಟ್ ಮೇಲೆ ಕಾಲಿಟ್ಟಿದ್ದರಿಂದ ಅದು ತುಂಡಾಗಿ ಎರಡನೇ ಮಹಡಿಯ ಫ್ಲೋರಿಗೆ ಬಿದ್ದರೆನ್ನಲಾಗಿದೆ. ಇದರಿಂದ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಪತಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಘಟನೆಯ ಬಗ್ಗೆ ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಂದ್ರಯಾನ 3: ಮೊಬೈಲ್​​ನಲ್ಲೇ ಚಂದ್ರಯಾನ 3 ವೀಕ್ಷಿಸಲು ಇಲ್ಲಿದೆ ನೇರ ಲಿಂಕ್​

Posted by Vidyamaana on 2023-07-14 09:08:26 |

Share: | | | | |


ಚಂದ್ರಯಾನ 3: ಮೊಬೈಲ್​​ನಲ್ಲೇ ಚಂದ್ರಯಾನ 3 ವೀಕ್ಷಿಸಲು ಇಲ್ಲಿದೆ ನೇರ ಲಿಂಕ್​

Chandrayaan 3: ದೇಶದ ಜನತೆ ಕಾತುರದಿಂದ ಕಾಯುವ ಕ್ಷಣ ಇನ್ನಷ್ಟು ಸಮೀಪಿಸುತ್ತಿದೆ. ಚಂದ್ರನ ಅಂಗಳಲದಲ್ಲಿ ಅಧ್ಯಯನ ನಡೆಸುವ ಸಲುವಾಗಿ ಭಾರತವು ಮೂರನೇ ಬಾರಿಗೆ ಉಪಗ್ರಹಗಳನ್ನು ಕಳುಹಿಸಿಕೊಡ್ತಿದೆ. ಹೀಗಾಗಿ ಇಡೀ ವಿಶ್ವದ ಚಿತ್ತ ಆಂಧ್ರದ ಶ್ರೀಹರಿಕೋಟದ ಮೇಲೆ ನೆಟ್ಟಿದೆ.ಚಂದ್ರನ ಅಂಗಳಕ್ಕೆ ರಾಕೆಟ್​ ಉಡಾವಣೆ ಮಾಡುವ ಇಸ್ರೋದ ಪ್ರಯತ್ನ ವಿಫಲವಾಗಿತ್ತು. ಅಂದು ಇಸ್ರೋ ಮುಖ್ಯಸ್ಥ ಶಿವನ್​ ಜೊತೆಯಲ್ಲಿ ಇಡಿ ದೇಶವೇ ಭಾವುಕವಾಗಿತ್ತು. ಆದರೆ ಇಂದು ಚಂದ್ರಯಾನ 3 ಖಂಡಿತವಾಗಿಯೂ ಯಶಸ್ವಿಯಾಗುತ್ತೆ ಎಂಬ ನಂಬಿಕೆಯಲ್ಲಿ ಇಸ್ರೋ ಇದೆ.



ಇನ್ನು ಚಂದ್ರಯಾನ 3ರ ಉಡಾವಣೆಯನ್ನು ನೀವು ಮೊಬೈಲ್​ನಲ್ಲಿಯೇ ವೀಕ್ಷಿಸಬಹುದಾಗಿದೆ. The launch can be http://isro.gov.in ಹಾಗೂ https://facebook.com/ISRO ಮತ್ತು https://youtube.com/watch?v=q2ueCg9bvvQ ನಲ್ಲಿ ನೇರವಾಗಿ ಚಂದ್ರಯಾನವನ್ನು ವೀಕ್ಷಣೆ ಮಾಡಬಹುದಾಗಿದೆ .ಸರಿಯಾಗಿ 2:35ಕ್ಕೆ ಶ್ರೀಹರಿಕೋಟದಿಂದ ರಾಕೆಟ್ ಉಡಾವಣೆಯಾಗಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮತ್ತೆ ಕರಾವಳಿ ಪಾಲಾಗುವ ಸಾಧ್ಯತೆ

Posted by Vidyamaana on 2023-07-04 21:46:28 |

Share: | | | | |


ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮತ್ತೆ ಕರಾವಳಿ ಪಾಲಾಗುವ ಸಾಧ್ಯತೆ

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮತ್ತೆ ಕರಾವಳಿ ಪಾಲಾಗುವ ಸಾ


ಬೆಂಗಳೂರು: ವಿಧಾನ ಸಭಾ ಚುನಾವಣೆಯ ಸೋಲಿನ ಬಳಿಕ ರಾಜಕೀಯದ ಸುಳಿಗಾಳಿಯಲ್ಲಿ ಓಲಾಡುತ್ತಿರುವ ರಾಜ್ಯ ಬಿಜೆಪಿ ಎಂಬ ನಾವೆಯ ಚುಕ್ಕಾಣಿಯನ್ನು ಮತ್ತೆ ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ಪ್ರಭಾವಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ತನ್ನ ಕೈಗೆ ತೆಗೆದುಕೊಂಡಿದ್ದಾರೆ. ಪ್ರಬಲ ಕಾಂಗ್ರೆಸ್ ಪಕ್ಷವನನ್ನು ಸದನದ ಹೊರಗೆ ಮತ್ತು ಒಳಗೆ ಸಮರ್ಥವಾಗಿ ಎದುರಿಸಲು ಮತ್ತು ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಮರ್ಥವಾಗಿ ಸಂಘಟಿಸಿ ಹೆಚ್ಚಿನ ಲೋಕಸಭಾ ಸ್ಥಾನಗಳನ್ನು ಗೆಲ್ಲುವಂತಾಗಲು ಬಿಜೆಪಿಗೆ ಸದ್ಯಕ್ಕೆ ಸಮರ್ಥ ವಿಪಕ್ಷ ನಾಯಕ ಮತ್ತು ರಾಜ್ಯಾಧ್ಯಕ್ಷರು ಬೇಕಾಗಿದ್ದಾರೆ.


ಈ ಕಾರಣದಿಂದ ಕಮಲ ಪಕ್ಷದ ಕೇಂದ್ರ ಪ್ರಮುಖರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ತುರ್ತಾಗಿ ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬಿಎಸ್.ವೈ ವಿಪಕ್ಷ ನಾಯಕನ ಸ್ಥಾನಕ್ಕೆ ಮತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಚಿಸಿರುವ ಎರಡು ಹೆಸರುಗಳು ಸ್ವತಃ ಕೇಂದ್ರ ಬಿಜೆಪಿ ನಾಯಕರನ್ನೇ ಅಚ್ಚರಿಯಲ್ಲಿ ಕೆಡವಿದೆ.


ಪಕ್ಷ ಮತ್ತೆ ರಾಜ್ಯದಲ್ಲಿ ಸಮರ್ಥವಾಗಿ ಬೆಳೆಯಬೇಕಾದ್ರೆ ಇವರನ್ನೇ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎಂದು ಬಿಎಸ್.ವೈ ಕೆಂದ್ರ ನಾಯಕರ ಮನ ಒಲಿಸಿದ್ದಾರೆ ಎಂಬ ಮಾಹಿತಿ ಲಭಿಸಿದ್ದು, ವಿಪಕ್ಷ ನಾಯಕನ ಸ್ಥಾನಕ್ಕೆ ಆರಗ ಜ್ಞಾನೇಂದ್ರ ಮತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರುಗಳನ್ನು ಬಿ.ಎಸ್.ವೈ ಸೂಚಿಸಿದ್ದು ಈ ಕುರಿತು ಕೇಂದ್ರ ಬಿಜೆಪಿ ನಾಯಕರು ಗಂಭೀರವಾಗಿ ಆಲೋಚಿಸುತ್ತಿದ್ದು ಇವತ್ತು ಅಥವಾ ನಾಳೆಯೊಳಗೆ ಈ ಕುರಿತಾಗಿ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ.


ಈ ಹಿಂದೆ ಬಿ.ಎಸ್.ವೈ ಮುಖ್ಯಮಂತ್ರಿಯಾಗಿದ್ದಾಗ ಅವರ ಸಚಿವ ಸಂಪುಟದಲ್ಲಿ ಪ್ರಭಾವಿ ಸಚಿವರಾಗಿದ್ದ ಶೋಭಾ ಕರಂದ್ಲಾಜೆ ಅವರು ಬಳಿಕ ನಮೋ 2.0 ಸಂಪುಟದಲ್ಲಿ ಕೇಂದ್ರ ಸಚಿವೆಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ವಿಪಕ್ಷಗಳನ್ನು ಎದುರಿಸಲು ಮತ್ತು ರಾಜ್ಯಾದ್ಯಂತ ಬಿಜೆಪಿಯನ್ನು ಮರು ಸಂಘಟಿಸಲು ಶೋಭಾ ಅವರ ರಾಜಕೀಯ ಅನುಭವ ಪ್ರಯೋಜವಾಗುತ್ತದೆ ಎಂಬ ವಾದವನ್ನು ಬಿಎಸ್ ವೈ ಬಣ ಮಂಡಿಸುತ್ತಿದೆ. ಇನ್ನು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರರೂ ಸಹ ಬಿ.ಎಸ್.ವೈ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದು ಇವರಿಬ್ಬರಿಗೆ ಕೇಂದ್ರ ನಾಯಕರು ಓಕೆ ಅಂದ್ರೆ ರಾಜ್ಯ ಬಿಜೆಪಿಯಲ್ಲಿ ಬಿ.ಎಸ್.ವೈ ಬಣದ ಹಿಡಿತ ಮತ್ತೆ ಬಿಗಿಯಾಗಲಿದೆ.

6ನೇ ಬಾರಿ ವಿಶ್ವಕಪ್ ಗೆ ಮುತ್ತಿಟ್ಟ ಆಸ್ಟ್ರೇಲಿಯ

Posted by Vidyamaana on 2023-11-19 21:31:00 |

Share: | | | | |


6ನೇ ಬಾರಿ ವಿಶ್ವಕಪ್ ಗೆ ಮುತ್ತಿಟ್ಟ ಆಸ್ಟ್ರೇಲಿಯ

ಅಹ್ಮದಾಬಾದ್‌: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಅಮೋಘ ನಿರ್ವಹಣೆ ನೀಡಿದ ಆಸ್ಟ್ರೇಲಿಯ ತಂಡ ಭಾರತದ ಬ್ಯಾಟಿಂಗ್ ಮತ್ತು ಬೌಲಿಂಗ್ ಸಾಮರ್ಥ್ಯಕ್ಕೆ ಸವಾಲೊಡ್ಡಿ ನಿಂತು ಆರನೇ ಬಾರಿ ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಇದು ಭಾರತ ಎರಡನೇ ಬಾರಿ ವಿಶ್ವಕಪ್ ಫೈನಲ್ ನಲ್ಲಿ ಆಸ್ಟ್ರೇಲಿಯದ ಎದುರು ಸೋಲಿಗೆ ಶರಣಾಗಿರುವುದು.



ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಅಮೋಘ ನಿರ್ವಹಣೆ ತೋರಿದ ಆಸೀಸ್ ಟಾಸ್ ಗೆದ್ದು ಭಾರತವನ್ನು 240 ರನ್ ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿತ್ತು. ಭಾರತದ ಬೌಲರ್ ಗಳ ಮೇಲೆ ಇಟ್ಟಿದ್ದ ಭರವಸೆಯೂ ಹುಸಿಯಾಯಿತು. ಗುರಿ ಬೆನ್ನಟ್ಟಿದ್ದ ಆಸೀಸ್ ತನ್ನ ಸಾಮರ್ಥ್ಯ ಮೆರೆದು 43 ಓವರ್ ಗಳಲ್ಲಿ 4ವಿಕೆಟ್ ನಷ್ಟಕ್ಕೆ 241 ರನ್ ಗಳಿಸಿ ವಿಶ್ವಕಪ್ ಮುಡಿಗೇರಿಸಿಕೊಂಡಿತು. 


ಆಸ್ಟ್ರೇಲಿಯದ ಆರಂಭಿಕ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ ಅತ್ಯಮೋಘ ಶತಕ ಸಿಡಿಸಿದರು. ವಿಶ್ವಕಪ್ ಫೈನಲ್ ನಲ್ಲಿ ಶತಕ ಸಿಡಿಸಿದ ಏಳನೇ ಬ್ಯಾಟರ್ ಎನಿಸಿಕೊಂಡರು. ಅವರು 95 ಎಸೆತಗಳಲ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಸ್ಮರಣೀಯ ಆಟವಾಡಿದ ಹೆಡ್, ಕಪ್ ಗೆಲ್ಲಲು ಕೇವಲ ಎರಡೇ ರನ್ ಬಾಕಿ ಇದ್ದಾಗ 137 ರನ್ ಗಳಿಸಿದ್ದ ವೇಳೆ ಸಿರಾಜ್ ಎಸೆದ ಚೆಂಡನ್ನು ಗಿಲ್ ಕೈಗಿತ್ತು ನಿರ್ಗಮಿಸಿದರು. 120 ಎಸೆತಗಳಲ್ಲಿ ಅದ್ಭುತ ಇನ್ನಿಂಗ್ಸ್ ಕಟ್ಟಿದ ಹೆಡ್ 15 ಬೌಂಡರಿ ಮತ್ತು 4 ಭರ್ಜರಿ ಸಿಕ್ಸರ್ ಸಿಡಿಸಿದರು. ಲಬುಶೇನ್  ಔಟಾಗದೆ 58 ರನ್ ಗಳಿಸಿದರು.


ಭೋರ್ಗರೆಯುತ್ತಿರುವ ಅಹ್ಮದಾಬಾದ್‌ ಕ್ರೀಡಾಂಗಣವನ್ನು ನಿಶ್ಯಬ್ದಗೊಳಿಸುವುದೇ ನಮ್ಮ ಗುರಿ ಎಂದು ಆಸ್ಟ್ರೇಲಿಯ ತಂಡದ ನಾಯಕ ಪ್ಯಾಟ್‌ ಕಮಿನ್ಸ್ ಪಂದ್ಯಕ್ಕೂ ಮುನ್ನ ಹೇಳಿಕೆ ನೀಡಿದ್ದರು. ಅದನ್ನು ಆಸೀಸ್ ತಂಡ ನಿಜವಾಗಿಸಿದೆ. ಸತತ 10 ಗೆಲುವಿನೊಂದಿಗೆ ಕಪ್ ಎತ್ತುವ ವಿಶ್ವಾಸ ಹೊಂದಿದ್ದ ರೋಹಿತ್ ಬಳಗ ಗೆಲುವಿನ ಶಿಖರದಿಂದ ಜಾರಿತು. ಕ್ರೀಡಾಂಗಣದಲ್ಲಿ ಸೇರಿದ್ದ ಲಕ್ಷಾಂತರ ಭಾರತದ ಅಭಿಮಾನಿಗಳು ಮೌನಕ್ಕೆ ಶರಣಾಗಿ ಹೋದರು. ಹಲವರ ಕಣ್ಣಗಳಿಂದ ಧಾರಾಕಾರವಾಗಿ ನೀರು ಸುರಿಯಿತು.ಗುರಿ ಬೆನ್ನಟ್ಟಿದ ಆಸೀಸ್ ಆರಂಭದಿಂದಲೇ ಅಬ್ಬರಿಸುತ್ತಾ ಸಾಗಿತು. ಆದರೆ 7 ರನ್ ಗಳಿಸಿದ್ದ ಡೇವಿಡ್ ವಾರ್ನರ್ ಅವರು ಶಮಿ ಎಸೆದ ಚೆಂಡನ್ನು ಕೊಹ್ಲಿ ಕೈಗಿತ್ತು ನಿರ್ಗಮಿಸಿದರು. ಇದು ಆರಂಭಿಕ ಆಘಾತವಾಯಿತು. 15 ರನ್ ಗಳಿಸಿದ್ದ ಮಿಚೆಲ್ ಮಾರ್ಷ್ ಬುಮ್ರಾ ಎಸೆದ ಚೆಂಡನ್ನು ರಾಹುಲ್ ಕೈಗಿತ್ತು ನಿರ್ಗಮಿಸಿದರು.ಆ ಬಳಿಕ ಸ್ಮಿತ್‌ ಎಲ್ಬಿಡಬ್ಲ್ಯೂ ಮೂಲಕ ಔಟಾಗಿದ್ದು ವಿಶ್ವಕಪ್ ಫೈನಲ್ ನಂತಹ ಮಹತ್ವದ ಪಂದ್ಯದಲ್ಲಿ ತೀವ್ರ ಚರ್ಚೆಗೆ ಗುರಿಯಾಗಿದೆ.ಆಸೀಸ್ ಅಮೋಘ ಗೆಲುವು ಸಾಧಿಸಿದ ಕಾರಣ ಆ ವಿಚಾರ ಇಲ್ಲೇ ಮರೆತುಹೋಗಲಿದೆ.



ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಭಾರತದ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿ ವಿಶ್ವಕಪ್ ಹೀರೋ ಎನಿಸಿಕೊಂಡರು. ನಾಲ್ಕನೇ ವಿಕೆಟ್ ಗೆ ಹೆಡ್ ಅವರಿಗೆ ಸಾಥ್ ನೀಡಿ ಅದ್ಭುತ ಜತೆಯಾಟವಾಡಿದ ಮಾರ್ನಸ್ ಲಬುಶೇನ್ ಅವರು ಗೆಲುವನ್ನು ಖಚಿತ ಪಡಿಸಿದರು.


ಆರಂಭದಲ್ಲಿ ನಾಯಕ ರೋಹಿತ್ ಶರ್ಮ ಅವರು ಅಬ್ಬರಿಸುತ್ತಿದ್ದ ವೇಳೆ ಶುಭಮಂ ಗಿಲ್ ಅವರು ತಂಡ 4.2 ಓವರ್ ಗಳಲ್ಲಿ 30 ರನ್ ಗಳಿಸಿದ್ದ ವೇಳೆ ಔಟಾಗಿ ಆಘಾತ ಅನುಭವಿಸಿತು. 4 ರನ್ ಗೆ ಗಿಲ್ ನಿರ್ಗಮಿಸಿದರು. ಆ ಬಳಿಕ ಶರ್ಮ 47 ರನ್ ಗಳಿಸಿ ವಿಶ್ವಾಸ ಮೂಡಿಸಿದ್ದ ವೇಳೆ ಆಘಾತಕಾರಿಯಾಗಿ ಔಟಾದರು. 4 ಬೌಂಡರಿ ಮತ್ತು 3 ಸಿಕ್ಸರ್ ಬಾರಿಸಿದ್ದರು. ಮ್ಯಾಕ್ಸ್‌ವೆಲ್ ಎಸೆದ ಚೆಂಡನ್ನು ರೋಹಿತ್ ದೊಡ್ಡ ಹೊಡೆತಕ್ಕೆ ಮುಂದಾದರು ಈ ವೇಳೆ ಹೆಡ್ ಅದ್ಬುತ ಕ್ಯಾಚ್ ಹಿಡಿದರು.


ಅದ್ಬುತ ಫಾರ್ಮ್ ನಲ್ಲಿದ್ದ ಶ್ರೇಯಸ್ ಅಯ್ಯರ್ 4 ರನ್ ಗೆ ಔಟಾಗಿ ನಿರಾಶರಾದರು. ಆಬಳಿಕ ತಾಳ್ಮೆಯ ಆಟವಾಡಿದ ಕೊಹ್ಲಿ 63 ಎಸೆತಗಳಲ್ಲಿ 54 ರನ್ ಗಳಿಸಿದ್ದ ವೇಳೆ ದುರದೃಷ್ಟವೆಂಬಂತೆ ಔಟಾದರು. ಅವರು 4 ಬೌಂಡರಿಗಳನ್ನು ಬಾರಿಸಿದ್ದರು. ನಾಯಕ ಕಮ್ಮಿನ್ಸ್ ಎಸೆದ ಚೆಂಡು ಕೊಹ್ಲಿ ಅವರ ಬ್ಯಾಟ್ ಗೆ ತಗುಲಿ ವಿಕೆಟ್ ಗೆ ಅಪ್ಪಳಿಸಿತು.


ತಾಳ್ಮೆಯ ಆಟವಾಡಿದ ಕೆಎಲ್ ರಾಹುಲ್ 107 ಎಸೆತಗಳಲ್ಲಿ 66 ರನ್ ಗಳಿಸಿ ಭರವಸೆ ಮೂಡಿಸಿದರು. ಆದರೆ ಸ್ಟಾರ್ಕ್ ಅವರು ಎಸೆದ ಚೆಂಡು ಕೀಪರ್ ಜೋಶ್ ಇಂಗ್ಲಿಸ್ ಅವರ ಕೈ ಸೇರಿ ನಿರ್ಗಮಿಸಿದರು. ರವೀಂದ್ರ ಜಡೇಜಾ ಕೂಡ ದೊಡ್ಡ ಮೊತ್ತ ದಾಖಲಿಸಲು ಸಾಧ್ಯವಾಗಲಿಲ್ಲ.22 ಎಸೆತಗಳಲ್ಲಿ 9 ರನ್ ಗಳಿಸಿ ಔಟಾದರು. ಶಮಿ 6 ರನ್ ಗಳಿಸಿ ಔಟಾದರು.


ಸೂರ್ಯಕುಮಾರ್ ಯಾದವ್ 28 ಎಸೆತಗಳಲ್ಲಿ 18 ರನ್ ಗಳಿಸಿ ಔಟಾದರು. ಬುಮ್ರಾ 1 ರನ್ ಗೆ ಔಟಾದರು. ಕೊನೆಯ ಎಸೆತದಲ್ಲಿ ಕುಲದೀಪ್ ಯಾದವ್ 10 ರನ್ ಗಳಿಸಿದ್ದ ವೇಳೆ ರನ್ ಔಟಾದರು. ಮತ್ತು ಸಿರಾಜ್ 8 ರನ್ ಗಳಿಸಿ ಔಟಾಗದೆ ಉಳಿದರು. ಆಸೀಸ್ ಬಿಗಿ ದಾಳಿಯ ನಡುವೆಯೂ 50 ಓವರ್ ಗಳಲ್ಲಿ 240 ರನ್ ಗಳಿಗೆ ಆಲೌಟಾಯಿತು.ಆಸೀಸ್ ಪರ ಬಿಗಿ ದಾಳಿ ಸಂಘಟಿಸಿದ ಮಿಚೆಲ್ ಸ್ಟಾರ್ಕ್3, ಜೋಶ್ ಹ್ಯಾಜಲ್ವುಡ್2 , ಗ್ಲೆನ್ ಮ್ಯಾಕ್ಸ್ವೆಲ್ 1, ಪ್ಯಾಟ್ ಕಮ್ಮಿನ್ಸ್2 , ಆಡಮ್ ಝಂಪಾ 1 ವಿಕೆಟ್ ಪಡೆದರು.

Recent News


Leave a Comment: