Posted by vidyamaana on 2024-07-03 16:20:08 |
ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು
ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್ಡಿಆರ್ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.
ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್ ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.
Posted by Vidyamaana on 2024-06-05 15:54:31 |
ಶಿವಮೊಗ್ಗ (ಜೂ.5) : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಬಂಡೆದ್ದು, ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ, ಬಿಜೆಪಿ ಅಭ್ಯರ್ಥಿ ಬಿ. ವೈ.ರಾಘವೇಂದ್ರ ಅವರ ವಿರುದ್ಧ ಸ್ಪರ್ಧಿಸಿ ಆತಂಕ ಮೂಡಿಸಿದ್ದ ಕೆ. ಎಸ್.ಈಶ್ವರಪ್ಪ ಅವರು ಚುನಾವಣೆಯಲ್ಲಿ ನಿರೀಕ್ಷಿತ ಮತ ಪಡೆಯದೆ ಠೇವಣಿ ಕಳೆದುಕೊಳ್ಳುವ ಮೂಲಕ ಹೀನಾಯ ಸೋಲು ಅನುಭವಿಸಿದ್ದಾರೆ.
ರಾಘವೇಂದ್ರ 778721 ಮತಗಳನ್ನು ಪಡೆದು ಜಯಭೇರಿ ಬಾರಿಸಿದರೆ, ಈಶ್ವರಪ್ಪ ಪರ ಕೇವಲ 30050 ಮತಗಳು ಚಲಾವಣೆಯಾಗಿವೆ.
Posted by Vidyamaana on 2024-04-07 18:00:09 |
ಪುತ್ತೂರು: ಹಲವಾರು ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಪುತ್ತೂರಿನ ಜೈನ ಭವನದಲ್ಲಿ ಏ.9 ರಂದು ಬಿಜೆಪಿ ಮಹಿಳಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಸುಲೋಚನಾ ಜಿ.ಕೆ.ಭಟ್ ತಿಳಿಸಿದ್ದಾರೆ.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಪ್ರಧಾನಿಯವರ ಯೋಜನೆ ಕುರಿತು ತಿಳಿಸಲು ಮನೆ ಮನೆ ಭೇಟಿ, ಪ್ರತೀ ಬೂತ್ಗಳಲ್ಲಿ ಮಹಿಳಾ ಸಭೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತ್ರಿವಳಿ ತಲಾಖ್, ಮಹಿಳಾ ಮೀಸಲಾತಿ, ಮಹಿಳಾ ದೌರ್ಜನ್ಯಕ್ಕೆ ಕಠಿಣ ಶಿಕ್ಷೆ, ಉಜ್ವಲ ಯೋಜನೆ, ಮನೆ ನಿರ್ಮಾಣ ಮುಂತಾದ ಹಲವಾರು ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕಾಗಿ ಪ್ರಧಾನಿಯವರು ಕಾನೂನಾತ್ಮಕವಾಗಿ ಒತ್ತು ನೀಡಿದ್ದಾರೆ ಎಂದು ತಿಳಿಸಿದರು.
Posted by Vidyamaana on 2024-01-22 21:11:36 |
ಪುತ್ತೂರು: ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಪುತ್ತೂರಿನ ರಾಧಿಕ ಪ್ಲಾಜ್ಹಾ ಹಾಗೂ ರಾಘವೇಂದ್ರ ಕಾಂಪ್ಲೆಕ್ಸ್ ನಲ್ಲಿ
ಲಘು ಉಪಹಾರ, ಸಿಹಿತಿಂಡಿ ಹಾಗೂ ತಂಪು ಪಾನೀಯದ ವ್ಯವಸ್ಥೆ ಮಾಡಲಾಗಿತ್ತು.
ಈ ಸಂದರ್ಭ ಆರ್ . ಭಾನುಪ್ರಕಾಶ್,ಜಗದೀಶ್ ಆಚಾರ್ಯ,ಕೃಷ್ಣಪ್ಪ ಗೌಡ,ರೋಹಿತ್,ನಾಗೇಶ್ ಆಚಾರ್ಯ,ಸಂತೋಷ ಬಂಬಿಲ ,ಪದ್ಮನಾಭ,ಅಭಿಷೇಕ್,ರಾಜೇಶ್ ಆಚಾರ್ಯ,ವಿನೋದ್,ಕೇಶವ ಅಭಿರಾ,ವೆಂಕಟೇಶ್,ಗಣೇಶ್ ಕೊಡಿಯಾಡಿ,ದೀಕ್ಷಿತ್,ಹರ್ಷಿತ್
ಹರೀಶ್ ಸಾವಿತ್ರಿ ಜ್ಯುವೆಲರಿ,ಕೃಷ್ಣಯ್ಯಾ ಆಚಾರ್ಯ,ಪ್ರಸಾದ್ ಸುಬ್ರಮಣ್ಯ,ಗಣೇಶ್ ವಿಟ್ಲ,ರಾಮಣ್ಣ ನಿಡ್ದ್ಪಳಿ,ಚಂದ್ರ ಸುಳ್ಯ ಉಪಸ್ಥಿತರಿದ್ದರು
Posted by Vidyamaana on 2023-10-29 16:05:52 |
ಕೊಚ್ಚಿ: ಸಭಾಂಗಣವೊಂದರಲ್ಲಿ ನಡೆದ ಅವಳಿ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದರಲ್ಲೂ ಹಲವರ ಸ್ಥಿತಿ ಗಂಭೀರವಾಗಿದೆ. ಪ್ರಕರಣವನ್ನು ರಾಜ್ಯ ಮತ್ತು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಈ ಮಧ್ಯೆ “ನಾನೇ ಬಾಂಬ್ ಇಟ್ಟಿದ್ದು” ಎಂದು ವ್ಯಕ್ತಿಯೊಬ್ಬ ಕೊಡಕಾರ ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದಾನೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.
ಸುಮಾರು 1:30ರ ವೇಳೆಗೆ ಠಾಣೆಗೆ ಶರಣಾದ ವ್ಯಕ್ತಿ, ತಾನು ಕೊಚ್ಚಿ ಮೂಲದವನು ಎಂದು ತಿಳಿಸಿದ್ದಾನೆ. ಪೊಲೀಸರು ಆತನನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಇದೇ ವೇಳೆ ಕಣ್ಣೂರು ರೈಲು ನಿಲ್ದಾಣದಲ್ಲೂ ಶಂಕಿತ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿರುವ ಮಾಹಿತಿ ಹೊರಬಂದಿದ್ದು, ಪೊಲೀಸ್ ಮತ್ತು ಆರ್ಪಿಎಫ್ ಜಂಟಿಯಾಗಿ ನಡೆಸಿದ ಶೋಧದಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದೆ.
ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಇಂದು ಬೆಳಗ್ಗೆ 9.45ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸ್ಫೋಟದ ವೇಳೆ ಸುಮಾರು 2500 ಮಂದಿ ಸಮಾವೇಶ ಕೇಂದ್ರದಲ್ಲಿದ್ದರು. ಮಹಿಳೆಯೊಬ್ಬರು ಸಾವನ್ನಪ್ಪಿದರೆ. 40 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಮೂರು ದಿನಗಳ ಪ್ರಾರ್ಥನೆ ಇಂದು ಮುಗಿಯುವ ಹಂತದಲ್ಲಿದ್ದಾಗ ಸರಣಿ ಸ್ಫೋಟ ಸಂಭವಿಸಿದೆ.
ಕರ್ನಾಟಕ ಮತ್ತು ಕೇರಳ ಗಡಿ ಭಾಗಗಳಲ್ಲೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪೊಲೀಸರು ವಿಶೇಷ ನಿಗಾ ವಹಿಸಿರುವುದಾಗಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಸ್ಪೋಟದ ಬಳಿಕ ದೆಹಲಿ ಸೇರಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
Posted by Vidyamaana on 2024-01-26 03:36:13 |
ಮಂಡ್ಯ: ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ, ರೀಲ್ಸ್ ಮೂಲಕ ಗಮನ ಸೆಳೆಯುತ್ತಿದ್ದ ಮಾಣಿಕ್ಯನ ಹಳ್ಳಿಯ ದೀಪಿಕಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹಂತಕನನ್ನು ಪೊಲೀಸರು ಬಂಧಿಸಿದ್ದಾರೆ.
ಎಲ್ಲರ ಊಹೆಯಂತೆ ಕಳೆದ ಎರಡು ವರ್ಷಗಳಿಂದ ದೀಪಿಕಾ ಅವರಿಗೆ ಅತ್ಮೀಯನಾಗಿದ್ದು, ಆಕೆಯನ್ನು ʻಅಕ್ಕ ಅಕ್ಕʼ ಎಂದೇ ಕರೆಯುತ್ತಿದ್ದ ನಿತೇಶ್ ಎಂಬ ಯುವಕನೇ ಕೊಲೆಗಾರ ಎನ್ನುವುದು ಪೊಲೀಸರಿಗೆ ಸ್ಪಷ್ಟವಾಗಿದೆ.
ಮೇಲುಕೋಟೆ ಯೋಗನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಶನಿವಾರ ಸಂಜೆಯ ಹೊತ್ತಿಗೆ ಟೀಚರ್ ದೀಪಿಕಾ ಅವರನ್ನು ಕೊಂದು ಕೊಂದು ಮಣ್ಣಲ್ಲಿ ಹೂತು ಹಾಕಿದ್ದ ಅದೇ ಗ್ರಾಮದ ನಿತೇಶ್ʼ ಅಂದಿನಿಂದಲೇ ನಾಪತ್ತೆಯಾಗಿದ್ದ. ಮೇಲುಕೋಟೆ ಪೊಲೀಸರು ನಿತೇಶ್ನನ್ನು ಹೊಸಪೇಟೆ ಬಳಿ ವಶಕ್ಕೆ ಪಡೆದು ಕರೆದುಕೊಂಡು ಬಂದಿದ್ದಾರೆ. ಆತ ತಾನೇ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಜತೆಗೆ ಕೊಲೆಗೆ ಕಾರಣವಾದ ಅಂಶಗಳನ್ನು ಬಿಚ್ಚಿಟ್ಟಿದ್ದಾನೆ.
ಎಲ್ಲರಿಗೂ ತಿಳಿದಿರುವಂತೆ ದೀಪಿಕಾ ಅವರು ವಿವಾಹಿತೆ. ಈಗ ಅವರಿಗೆ 28 ವರ್ಷ. ಒಂಬತ್ತು ವರ್ಷಗಳ ಹಿಂದೆ ಅವರಿಗೆ ಲೋಕೇಶ್ ಎಂಬವರೊಂದಿಗೆ ಮದುವೆಯಾಗಿತ್ತು. ಇವರಿಗೆ ಎಂಟು ವರ್ಷದ ಒಬ್ಬ ಮಗನಿದ್ದಾನೆ. ದೀಪಿಕಾ ಅವರಿಗೆ ವಿಡಿಯೋ ರೀಲ್ಸ್ ಮಾಡುವುದು ಭಾರಿ ಖುಷಿಯ ವಿಷಯ. ಅದಕ್ಕೆ ಪೂರಕವಾದ ಸೌಂದರ್ಯ ಮತ್ತು ಬುದ್ಧಿವಂತಿಕೆ, ವಿಷಯ ಜ್ಞಾನವೂ ಅವರಿಗೆ ಇತ್ತು.
ದೀಪಿಕಾ ಅವರು ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿದ್ದರು. ಅವರು ಪ್ರತಿ ದಿನವೂ ಬಸ್ಸಿನಲ್ಲಿ ಅಲ್ಲಿಗೆ ಹೋಗಿಬರುತ್ತಿದ್ದರು. ಮಾಣಿಕ್ಯನ ಹಳ್ಳಿಯ ಮನೆಯಿಂದ ಹೆದ್ದಾರಿವರೆಗೆ ದ್ವಿಚಕ್ರ ವಾಹನದಲ್ಲಿ ಬಂದು ಮುಂದೆ ಮೇಲುಕೋಟೆವರೆಗೆ ಬಸ್ಸಿನಲ್ಲಿ ಹೋಗುತ್ತಿದ್ದರು. ಕಳೆದ ಜನವರಿ 20ರಂದು ಶನಿವಾರ ಅವರು ಶಾಲೆಗೆ ಹೊರಟು ಮಾರ್ಗದ ಬಳಿ ಬಂದಾಗ ಬಸ್ ಹೋಗಿ ಆಗಿತ್ತು. ಹಾಗಾಗಿ ಅವರು ದ್ವಿಚಕ್ರ ವಾಹನದಲ್ಲೇ ಶಾಲೆಗೆ ಹೋಗಿದ್ದರು. ಮಧ್ಯಾಹ್ನ 12.30ಕ್ಕೆ ಶಾಲೆಯಿಂದ ಹೊರಟಿದ್ದ ಅವರು ಮನೆಗೆ ಬರಲೇ ಇಲ್ಲ.
ಮನೆಯವರು ಸಂಜೆಯಾದದರೂ ದೀಪಿಕಾ ಬಂದಿಲ್ಲ ಎಂದು ಹುಡುಕಲು ಶುರು ಮಾಡಿದಾಗ ಆಕೆಯ ಸ್ಕೂಟರ್ ಮೇಲುಕೋಟೆ ಯೋಗನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಪತ್ತೆಯಾಗಿತ್ತು. ಜತೆಗೆ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಪತಿ ಲೋಕೇಶ್ ಅವರು ಪತ್ನಿ ನಾಪತ್ತೆಯಾದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಆದರೆ, ಪೊಲೀಸರು ಇದರ ಬಗ್ಗೆ ಹೆಚ್ಚು ಗಮನ ಕೊಟ್ಟಿರಲಿಲ್ಲ.
ಈ ನಡುವೆ ಮನೆಯವರೇ ಈ ಸ್ಕೂಟರ್ ಸಿಕ್ಕಿದ ಆಸುಪಾಸಿನಲ್ಲಿ ಏನಾದರೂ ಕುರುಹುಗಳು ಸಿಗಬಹುದೇ ಎಂದು ಹುಡುಕಿದ್ದರು. ಆಗ ಒಂದು ಕಡೆ ಹಸಿ ಮಣ್ಣು ಕಂಡಿತ್ತು. ಅದನ್ನು ಸ್ವಲ್ಪ ಸರಿಸಿದಾಗ ದೀಪಿಕಾ ಅವರ ಶವ ಪತ್ತೆಯಾಗಿತ್ತು. ಅಲ್ಲಿಗೆ ಶಾಲೆಯಿಂದ ಹೊರಟ ದೀಪಿಕಾ ಅವರನ್ನು ಯಾರೋ ಕೊಲೆ ಮಾಡಿ ಹೂತು ಹಾಕಿದ್ದು ಸ್ಪಷ್ಟವಾಗಿತ್ತು. ಅದಕ್ಕೆ ಪೂರಕವಾಗಿ ಯೋಗ ನಾರಸಿಂಹ ಬೆಟ್ಟಕ್ಕೆ ಹೋಗಿ ಯುವಕರ ತಂಡವೊಂದು ಬೆಟ್ಟದ ಭಾಗದಲ್ಲಿ ನಡೆದ ಒಂದು ಘಟನೆಯ ವಿಡಿಯೊವನ್ನು ಪೊಲೀಸರಿಗೆ ಒಪ್ಪಿಸಿತ್ತು. ಅದರಲ್ಲಿ ತಪ್ಪಲಿನಲ್ಲಿ ಮಹಿಳೆ ಮತ್ತು ಯುವಕರಿಬ್ಬರು ಕಿತ್ತಾಡುತ್ತಿರುವುದು ಕಂಡುಬಂದಿತ್ತು.
ನಿಜವೆಂದರೆ ದೀಪಿಕಾ ಕೊಲೆಯಾಗಿದ್ದಾರೆ ಎಂಬ ಸುದ್ದಿ ತಿಳಿಯುತ್ತಲೇ ಹಂತಕ ಯಾರು ಎಂಬ ವಿಚಾರದಲ್ಲಿ ಆ ಭಾಗದ ಜನರಿಗೆ ಸ್ಪಷ್ಟತೆ ಇತ್ತು. ಆತನೇ ಆ ಭಾಗದ ಪ್ರಭಾವಿ ವ್ಯಕ್ತಿಯೊಬ್ಬರ ಮಗ ನಿತೇಶ್! ಹೌದು, ನಿತೇಶ್ ಮತ್ತು ದೀಪಿಕಾ ಕಳೆದ ಎರಡು ವರ್ಷಗಳಿಂದ ಆತ್ಮೀಯರಾಗಿಯೇ ಇದ್ದರು. ಅದು ದೀಪಿಕಾ ಪತಿ ಲೋಕೇಶ್ಗೆ ಕೂಡಾ ಗೊತ್ತಿತ್ತು.
ಹಾಗಂತ ಅದೇನೂ ಕೆಟ್ಟ ಸಂಬಂಧವಾಗಿರಲಿಲ್ಲ. 22 ವರ್ಷದ ನಿತೇಶ್ ದೀಪಿಕಾರನ್ನು ಅಕ್ಕ ಅಕ್ಕ ಎಂದೇ ಕರೆಯುತ್ತಿದ್ದ. ಆಕೆಗೆ ಹಲವು ರೀತಿಯಲ್ಲಿ ನೆರವಾಗುತ್ತಿದ್ದ. ಆಕೆಯ ರೀಲ್ಸ್ಗೆ ಕೂಡಾ ನೆರವಾಗುತ್ತಿದ್ದ ಎನ್ನಲಾಗಿದೆ. ಆದರೆ, ಇತ್ತೀಚೆಗೆ ಅವರಿಬ್ಬರ ನಡುವಿನ ಸಂಬಂಧದ ಬಗ್ಗೆ ಗಾಸಿಪ್ ಗಳು ಹರಿದಾಡುತ್ತಿದ್ದವು. ನಿತೇಶ್ ಅಕ್ಕನೆಂದು ಕರೆಯುತ್ತಿದ್ದ ದೀಪಿಕಾ ಅವರ ವಿಚಾರದಲ್ಲಿ ಬೇರೆ ಭಾವನೆಗಳನ್ನು ವ್ಯಕ್ತಪಡಿಸಲು ಶುರು ಮಾಡಿದ್ದ ಎನ್ನಲಾಗಿದೆ. ಅದಕ್ಕಿಂತಲೂ ಹೆಚ್ಚಾಗಿ ಜನರ ಬಾಯಿಗೆ ಅವರು ಆಹಾರವಾಗಿದ್ದರು.
ಇದೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದ ದೀಪಿಕಾ ಆತನಿಂದ ಅಂತರ ಕಾಯ್ದುಕೊಂಡಿದ್ದರು. ಮೊದಲಿನಷ್ಟು ಮಾತುಕತೆ, ಭೇಟಿ ಮಾಡುತ್ತಿರಲಿಲ್ಲ ಎನ್ನಲಾಗಿದೆ. ಇದು ದೀಪಿಕಾಳನ್ನು ಅತಿಯಾಗಿ ಹಚ್ಚಿಕೊಂಡಿದ್ದ ನಿತೇಶ್ಗೆ ಭಾರಿ ಆಕ್ರೋಶವನ್ನು ಉಂಟು ಮಾಡಿತ್ತು ಎನ್ನಲಾಗಿದೆ.
ಹುಟ್ಟುಹಬ್ಬದ ನೆಪದಲ್ಲಿ ಕರೆಸಿಕೊಂಡಿದ್ದ ನಿತೇಶ್
ಕಳೆದ ಶನಿವಾರ ನಿತೇಶ್ ಹುಟ್ಟುಹಬ್ಬವಿತ್ತು. ಹಿಂದೆಲ್ಲ ನಿತೇಶ್ ಹುಟ್ಟುಹಬ್ಬವನ್ನು ದೀಪಿಕಾ ಸಂಭ್ರಮಿಸುತ್ತಿದ್ದರು. ಈ ಬಾರಿ ಆಕೆ ವಿಷ್ ಮಾಡಿಲ್ಲ ಎಂದು ಹೇಳಲಾಗುತ್ತಿದೆ. ಅದಕ್ಕಾಗಿ ಆತನೇ ಮಧ್ಯಾಹ್ನದ ಹೊತ್ತಿಗೆ ಶಾಲೆಯಲ್ಲಿದ್ದ ದೀಪಿಕಾ ಅವರಿಗೆ ಕರೆ ಮಾಡಿದ್ದ ಎನ್ನಲಾಗಿದೆ. ಸುಮಾರು ಒಂದು ಗಂಟೆ ಕಾಲ ಶತಪಥ ತಿರುಗುತ್ತಾ ಫೋನಿನಲ್ಲಿ ಮಾತನಾಡಿದ್ದ ದೀಪಿಕಾ ಅಲ್ಲಿಂದ ಹೊರಟಿದ್ದರು.
ಹಾಗೆ ಹೊರಟ ದೀಪಿಕಾ ಬಂದಿದ್ದೇ ಯೋಗನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿಗೆ. ಅಲ್ಲಿ ಅವರ ಮಧ್ಯೆ ಮಾತುಕತೆ ನಡೆದಿದೆ. ಎರಡು ವರ್ಷಗಳಿಂದ ಜತೆಯಾಗಿದ್ದು ಈಗ ಏಕಾಏಕಿಯಾಗಿ ದೂರ ಮಾಡಿದ್ದನ್ನು ಪ್ರಶ್ನಿಸಿ ದೂರ ಮಾಡಬೇಡಿ ಎಂದು ಕೇಳಿಕೊಂಡಿದ್ದಾನೆ ಎನ್ನಲಾಗಿದೆ. ಆಗ ಅವರಿಬ್ಬರ ನಡುವೆ ಜಗಳ ನಡೆದು ಅಂತಿಮವಾಗಿ ಶಾಲಿನಿಂದ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಕೆಳಗೆ ಎಳೆದುಕೊಂಡು ಹೋಗಿ ಮಣ್ಣಲ್ಲೇ ಹೂತು ಹಾಕಿದ್ದಾನೆ.
ಶನಿವಾರದಿಂದಲೇ ನಾಪತ್ತೆಯಾಗಿದ್ದ ನಿತೇಶ್
ನಿಜವೆಂದರೆ ಕಳೆದ ಜನವರಿ 23ರಂದು ನಿತೇಶ್ ಮೇಲೆ ಸಂಶಯ ಬರಲು ಕಾರಣವಾಗಿದ್ದು ಆತನ ನಾಪತ್ತೆ ಪ್ರಕರಣ. ಆವತ್ತು ದೀಪಿಕಾ ಮೃತದೇಹ ಸಿಕ್ಕಿದ ದಿನದಿಂದಲೇ ಇವನೂ ನಾಪತ್ತೆಯಾಗಿದ್ದ. ಅಂದು ಆತ ನನ್ನ ಹುಡುಕಬೇಡಿ ಅಕ್ಕನಿಗೆ ಒಳ್ಳೆ ಕಡೆ ಮದುವೆ ಮಾಡಿ ಎಂದು ತಂದೆಗೆ ಹೇಳಿದ್ದನಂತೆ. ಇತ್ತ ದೀಪಿಕಾಗೆ ಕೊನೆಯದಾಗಿ ಕರೆ ಮಾಡಿ ಅಷ್ಟು ಹೊತ್ತು ಮಾತನಾಡಿದ್ದು ಕೂಡಾ ಇವನೇ ಎನ್ನುವುದು ಕರೆಗಳಿಂದ ಸ್ಪಷ್ಟವಾಗಿದೆ.
ತಪ್ಪೊಪ್ಪಿಕೊಂಡನಾ ಕೊಲೆಗಾರ ನಿತೇಶ್ ?
ಅಂದು ಮೇಲುಕೋಟೆಯಿಂದ ತಪ್ಪಿಸಿಕೊಂಡಿದ್ದ ಆರೋಪಿ ನಿತೇಶ್ ಊರು ಬಿಟ್ಟಿದ್ದ. ಆತನ ಮೊಬೈಲ್ ಲೋಕೇಶನ್ ಆಧಾರದಲ್ಲಿ ಆತನನ್ನು ಹೊಸಪೇಟೆಯಲ್ಲಿ ಬಂಧಿಸಲಾಗಿದೆ. ಆತನನ್ನು ವಿಚಾರಣೆ ನಡೆಸಿದಾಗ ಕೊಲೆ ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮೀಯವಾಗಿದ್ದ ಟೀಚರ್ ಸಂಗವನ್ನು ತೊರೆದುದೇ ಕೊಲೆಗೆ ಕಾರಣ ಎಂದು ಆತ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.