Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10
ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.
ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.
Posted by Vidyamaana on 2024-04-28 07:20:40 |
ಪುತ್ತೂರು : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮ ನಡಾವಳಿಯು ಏ.28 ರಂದು ನಡೆಯಲಿದೆ.
ಏ.28 ರಂದು ಬೆಳಿಗ್ಗೆ 6 ಗಂಟೆಯಿಂದ ಶ್ರೀ ದಂಡನಾಯಕ ದೈವದ ವಾಲಸರಿ ನೇಮ ನಡೆಯಲಿದೆ.
Posted by Vidyamaana on 2024-05-11 16:27:56 |
ಕೊಡಗು: ಮದುವೆ ರದ್ದಾಗಿದ್ದಕ್ಕೆ ಕೋಪಗೊಂಡ ಪಾಗಲ್ ಪ್ರೇಮಿಯೊಬ್ಬ ಬಾಲಕಿಯನ್ನು ಕೊಲೆ (Murder Case) ಮಾಡಿ ರುಂಡದೊಂದಿಗೆ ಪರಾರಿ ಆಗಿದ್ದ. ಕಾಡಿನಲ್ಲಿ ಬಚ್ಚಿಟ್ಟುಕೊಂಡಿದ್ದ ಆರೋಪಿ ಪ್ರಕಾಶ್ನನ್ನು ಸೋಮವಾರಪೇಟೆ ಪೊಲೀಸರು ಶನಿವಾರ ಬಂಧಿಸಿದ್ದರು. ಆದರೆ ಆರೋಪಿ ಸಿಕ್ಕರೂ ಬಾಲಕಿಯ ರುಂಡ ಪತ್ತೆಯಾಗಿರಲಿಲ್ಲ.ಇದೀಗ ಹತ್ಯೆ ನಡೆದ ಅನತಿ ದೂರದಲ್ಲೇ ಬಾಲಕಿಯ ತಲೆ ಪತ್ತೆಯಾಗಿದೆ. ಬಾಲಕಿಯ ತಲೆಯನ್ನು ಆರೋಪಿ ಪ್ರಕಾಶ್ ಮರದ ಮೇಲೆ ಇರಿಸಿದ್ದ. ಬಾಲಕಿಯ ತಲೆ ಹಾಗೂ ಆಕೆಯ ಚಪ್ಪಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Posted by Vidyamaana on 2023-11-02 15:53:12 |
ಪಾಟ್ನಾ: ಅಲ್ಲೊಂದು ಕಾರ್ ಅಪಘಾತಕ್ಕೀಡಾಗಿತ್ತು. ಕೆಲವರು ಏನಾಯಿತೆಂದು ರಕ್ಷಣೆಗೆ ದಾವಿಸಿ ಬಂದಿದ್ದರು. ಒಳಗೇನಿದೆ ಎಂದು ಹಲವರು ಇಣುಕಿ ನೋಡಿದರು. ಅಲ್ಲಿ ಅದೇನೋ ಕಾಣಿಸಿದೆ. ಕೂಡಲೇ ಜಾಗೃತರಾದಜನ ಕಾರ್ನ ಗ್ಲಾಸ್ ಹೊಡೆದು ಕೈಗೆ ಸಿಕ್ಕಿದಷ್ಟು ಬಾಚಿಕೊಂಡು ಹೋಗಿದ್ದಾರೆ.ಇಷ್ಟಕ್ಕೂ ಆ ಕಾರ್ನಲ್ಲಿ ಇದ್ದಿದ್ದಾದರೂ ಏನು?….ಮುಂದೆ ಓದಿ…
ಮಂಗಳವಾರ ಸಂಜೆ ಬಿಹಾರದ ಗಯಾ ಜಿಲ್ಲೆಯ ದೋಭಿ ಬಳಿ ಮದ್ಯ ತುಂಬಿದ್ದ ಕಾರ್ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅದರಲ್ಲಿದ್ದ ಮದ್ಯವನ್ನು ಕದಿಯಲು ಜನ ಮುಗಿಬಿದ್ದಿದ್ದರು. ಇದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಈಗ ವೈರಲ್ ಆಗಿದೆ.ಜನರು ಕಾರಿನ ಗಾಜು ಒಡೆದು ಮದ್ಯದ ಬಾಟಲಿಗಳೊಂದಿಗೆ ಓಡಿ ಹೋಗುತ್ತಿರುವುದು ವೀಡಿಯೋದಲ್ಲಿ ಕಂಡು ಬರುತ್ತಿದೆ. ಪೊಲೀಸರು ಅಲ್ಲಿಗೆ ತಲುಪುವಷ್ಟರಲ್ಲಿ ಜನರು ಕಾರಿನೊಳಗೆ ಇದ್ದ ಮದ್ಯವನ್ನು ಲೂಟಿ ಮಾಡಿದ್ದರು.
ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ಇದರ ವೀಡಿಯೊ ವೈರಲ್ ಆಗಿದ್ದು, ಇರುವೆಗಳು ಬೆಲ್ಲಕ್ಕೆ ಮುತ್ತಿಕೊಂಡಂತೆ ಜನರು ಕಾರ್ನಲ್ಲಿ ತುಂಬಿದ್ದ ಮದ್ಯಕ್ಕಾಗಿ ಸುತ್ತುವರಿದಿದ್ದಾರೆ.
ಬಿಹಾರದಲ್ಲಿ ಮದ್ಯವನ್ನು ನಿಷೇಧಿಸಿರುವುದರಿಂದ ಕಾರ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳು ಅಪಘಾತದ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ. ವಿಶಾಖಪಟ್ಟಣಂನಿಂದ ಅಕ್ರಮವಾಗಿ 1.5ಲಕ್ಷ ರೂ.ಮೌಲ್ಯದ ನಕಲಿ ಮದ್ಯವನ್ನು ತರಿಸಲಾಗುತ್ತಿತ್ತು. ಆದರೆ ಮದ್ಯ ಸಾಗಿಸುತ್ತಿದ್ದವರು ಪರಾರಿಯಾಗಿದ್ದೇ ತಡ, ಜನ ಸಿಕ್ಕಿದ್ದೇ ಚಾನ್ಸ್ ಎಂದು ಮದ್ಯದ ಬಾಟಲಿಗಳನ್ನು ಹೊತ್ತೊಯ್ದರು.
Posted by Vidyamaana on 2023-11-15 22:40:21 |
ಮುಂಬೈ: ಇಲ್ಲಿನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಭಾರತ ತಂಡ ನ್ಯೂಝಿಲ್ಯಾಂಡ್ ವಿರುದ್ಧ 70 ರನ್ ಗಳ ಗೆಲುವು ಸಾಧಿಸಿದೆ.
ಮುಹಮ್ಮದ್ ಶಮಿ ಶಿಸ್ತುಬದ್ಧ ಬೌಲಿಂಗ್ ದಾಳಿ ವಿರಾಟ್ ಮತ್ತು ಶ್ರೇಯಸ್ ಅಮೋಘ ಶತಕದ ನೆರವಿನಿಂದ ಭಾರತ ಸೆಮಿ ಫೈನಲ್ ನಲ್ಲಿ ನ್ಯೂಝಿಲ್ಯಾಂಡ್ ಮಣಿಸಿ ಕಳೆದ ಬಾರಿಯ ವಿಶ್ವಕಪ್ ಸೋಲಿನ ಸೇಡು ತೀರಿಸಿಕೊಂಡಿದೆ.
ವಿರಾಟ್ ಸಾರ್ವಕಾಲಿಕ ದಾಖಲೆಯ 50 ನೇ ಏಕದಿನ ಶತಕ ಹಾಗೂ ಮುಹಮ್ಮದ್ ಶಮಿ ಜೀವನ ಶ್ರೇಷ್ಠ ವಿಶ್ವಕಪ್ ನ 4 ಐದು ವಿಕೆಟ್ ಗೊಂಚಲು ನೆರವಿಂದ ಭಾರತ ಫೈನಲ್ ಪ್ರವೇಶಿಸಿದೆ.ಭಾರತ ನೀಡಿದ 398 ರನ್ ಗುರಿ ಬೆನ್ನತ್ತಿದ ಕಿವೀಸ್ ತೀವ್ರ ಹೋರಾಟ ನೀಡಿ ಸೋಲೊಪ್ಪಿಕೊಂಡಿದೆ.ಭಾರತದ ಕಠಿಣ ಗುರಿ ಬೆನ್ನತ್ತಲು ಸ್ಪೋಟಕ ಆರಂಭದ ನಿರೀಕ್ಷೆಯಲ್ಲಿ ಬ್ಯಾಟಿಂಗ್ ಗೆ ಬಂದಿದ್ದಕಿವೀಸ್ ಗೆ ಮುಹಮ್ಮದ್ ಶಮಿ ಆರಂಭಿಕ ಆಘಾತ ನೀಡಿದರು. ನ್ಯೂಝಿಲ್ಯಾಂಡ್ ಓಪನರ್ ಗಳಾದ ಡೆವೋನ್ ಕಾನ್ವೆ ಹಾಗೂ ರಚಿನ್ ರವೀಂದ್ರ ಕ್ರಮವಾಗಿ 13 ರನ್ ಗೆ ಮುಹಮ್ಮದ್ ಶಮಿ ಎಸೆತದಲ್ಲಿ ವಿಕೆಟ್ ಕೀಪರ್ ಕೆ ಎಲ್ ರಾಹುಲ್ ಗೆ ಕ್ಯಾಚಿತ್ತು ಔಟ್ ಆದರು. ಬಳಿಕ ಬ್ಯಾಟಿಂಗ್ ಬಂದ ನಾಯಕ ಕೇನ್ ವಿಲಿಯಮ್ಪನ್ ಹಾಗೂ ಡೆರಲ್ ಮಿಚೆಲ್ ಜೋಡಿ, ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಚೇತರಿಕೆ ನೀಡುವಲ್ಲಿ ಯಶಸ್ವಿ ಯಾದರು. ಭಾರತೀಯ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ವಿಲಿಯನ್ಸನ್ 69 ರನ್ ಗಳಿಸಿ ಶಮಿ ಎಸೆತದಲ್ಲಿ ವಿಕೆಟ್ ಒಪ್ಪಿಸಿದರೆ, ಡರೆಲ್ ಮಿಚೆಲ್ 119 ಎಸೆತಗಳಲ್ಲಿ 9 ಬೌಂಡರಿ 7 ಸಿಕ್ಸರ್ ನೆರವಿನಿಂದ ಸ್ಪೋಟಕ ಬ್ಯಾಟಿಂಗ್ ಮುಂದುವರಿಸಿ ಕಿವೀಸ್ ಪಾಳಯದಲ್ಲಿ ಗೆಲುವಿನ ಆಸೆ ಮೂಡಿಸಿದ್ದರು. ಆದರೆ ಶಮಿ ಬೌಲಿಂಗ್ ನಲ್ಲಿ ಜಡೇಜಾಗೆ ವಿಕೆಟ್ ನೀಡಿ ಪೆವಿಲಿಯನ್ ಸೇರಿಕೊಂಡರು.
Posted by Vidyamaana on 2023-05-17 16:29:23 |
ಮಂಗಳೂರು: ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಪ್ರಚೋದನಾತ್ಮಕ ಸಂದೇಶಗಳನ್ನು ಪೋಸ್ಟ್ ಮಾಡುತ್ತಿರುವುದು ಕಂಡು ಬಂದಿದ್ದು ಇಂತಹ ಪೋಸ್ಟ್ಗಳನ್ನು ಹಾಕುವ ಅಥವಾ ಫಾರ್ವರ್ಡ್ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಎಚ್ಚರಿಕೆ ನೀಡಿದ್ದಾರೆ.ಜಾತಿ, ಧರ್ಮ ಮತ್ತು ಪ್ರದೇಶ ಆಧಾರಿತವಾಗಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವಂತಹ ಮತ್ತು ವೈಯಕ್ತಿಕ ನಿಂದನೆ ಮಾಡುವಂತಹ ದ್ವೇಷಪೂರಿತ ಮತ್ತು ಪ್ರಚೋದನಾತ್ಮಕ ಪೋಸ್ಟ್ಗಳ ಮೇಲೆ ನಿಗಾ ಇಡಲು “ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್’ ರಚಿಸಲಾಗಿದೆ. ಇಂತಹ ಸಂದೇಶ ಪೋಸ್ಟ್ ಮಾಡುವುದು, ಫಾರ್ವರ್ಡ್ ಮಾಡುವುದು, ಲೈಕ್, ಕಮೆಂಟ್ ಮಾಡುವುದು ಅಪರಾಧವಾಗಿದ್ದು ಈ ರೀತಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಯಾವುದೇ ಸುಳ್ಳು ಸುದ್ದಿ ಮತ್ತು ದ್ವೇಷದ ಸಂದೇಶಗಳಿಗೆ ಕಿವಿಗೊಡಬಾರದು ಎಂದು ಪೊಲೀಸ್ ಆಯುಕ್ತರು ಮನವಿ ಹೇಳಿದ್ದಾರೆ.
Posted by Vidyamaana on 2024-05-17 21:46:48 |
ಮಂಗಳೂರು : ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು ವಾಹನದ ವೀಡಿಯೋ ಚಿತ್ರೀಕರಿಸಿದ ಸಾರ್ವಜನಿಕರೊಬ್ಬರು ಸದ್ರಿ ವಾಹನದ ವಿಮಾ ಅವಧಿಯು ಮುಕ್ತಾಯವಾಗಿರುವುದಾಗಿಯೂ, ಪೊಲೀಸ್ ಇಲಾಖೆಯು ವಿಮಾ ಕಂತು ಪಾವತಿಸದ ವಾಹನಗಳನ್ನು ಬಳಸುತ್ತಿರುವುದಾಗಿಯೂ ಸುಳ್ಳು ಸಂದೇಶವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.ಈ ಕುರಿತು ಸ್ಪಷ್ಠನೆ ನೀಡಿರುವ ಪೊಲೀಸ್ ಇಲಾಖೆ, ಪೊಲೀಸ್ ಇಲಾಖೆಯ ಎಲ್ಲಾ ವಾಹನಗಳೂ ಕರ್ನಾಟಕ ಗವರ್ನಮೆಂಟ್ ಇನ್ಯುರೆನ್ಸ್ ಡಿಪಾರ್ಟ್ಮೆಂಟ್ (ಕೆ.ಜಿ.ಐ.ಡಿ) ವಿಮೆಯನ್ನು ಕಡ್ಡಾಯವಾಗಿ ಹೊಂದಿರುತ್ತದೆ ಹಾಗೂ ಸದರಿ ವಿಮೆಯನ್ನು ಕಾಲ ಕಾಲಕ್ಕೆ ನವೀಕರಿಸಲಾಗಿದೆ.