ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ಹಾಡಹಗಲೇ ವಕೀಲರೊಬ್ಬರ ಬರ್ಬರ ಹತ್ಯೆ

Posted by Vidyamaana on 2023-12-07 13:25:48 |

Share: | | | | |


ಹಾಡಹಗಲೇ ವಕೀಲರೊಬ್ಬರ ಬರ್ಬರ ಹತ್ಯೆ

ಕಲಬುರಗಿ: ನಗರದ ಸಾಯಿ ಮಂದಿರ ಬಳಿಯಿರುವ ಗಂಗಾ ಅಪಾರ್ಟ್ಮೆಂಟ್ ಬಳಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ವಕೀಲರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಹತ್ಯೆಯಾದ ವಕೀಲನನ್ನು ಈರಣ್ಣಗೌಡ ಪಾಟೀಲ್ (40) ಎಂದು ಗುರುತಿಸಲಾಗಿದೆ.

ಜಮೀನು ವಿವಾದ ಸಂಬಂಧಿಸಿದಂತೆ ಸಂಬಧಿಕರಿಂದಲೇ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ವಿವಿ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ಮಾಡಿದ್ದಾರೆ.

ಭಾರತಕ್ಕೆ 302 ರನ್ ಗಳ ಗೆಲುವು: ಶಮಿ ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಲಂಕಾ

Posted by Vidyamaana on 2023-11-02 21:07:57 |

Share: | | | | |


ಭಾರತಕ್ಕೆ 302 ರನ್ ಗಳ  ಗೆಲುವು: ಶಮಿ ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಲಂಕಾ

ಮುಂಬೈ : ಇಲ್ಲಿನ ವಾಂಖೆಡೆ ಸ್ಟೇಡಿಯಂ ನಲ್ಲಿ ಗುರುವಾರ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡದ ಬ್ಯಾಟಿಂಗ್ ಮತ್ತು ಬೌಲಿಂಗ್ ಅಬ್ಬರಕ್ಕೆ ನಲುಗಿ ಹೋದ ಶ್ರೀಲಂಕಾ ವಿಶ್ವಕಪ್ ಆಸೆ ಕೈಬಿಟ್ಟಿತು. 302 ರನ್‌ಗಳ ದಾಖಲೆಯ ಜಯ ಸಾಧಿಸಿದ ಭಾರತ ಅಜೇಯ ಯಾತ್ರೆ ಮುಂದುವರಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಮತ್ತೆ ವಿರಾಜಮಾನವಾಗಿದೆ. ಲಂಕಾ ಆಡಿದ 7 ಪಂದ್ಯಗಳಲ್ಲಿ 5 ನೇ ಸೋಲು ಅನುಭವಿಸಿತು.

ಭಾರತ ತಂಡ ನೀಡಿದ 358 ರನ್ ಗಳ ದೊಡ್ಡ ಮೊತ್ತ ಬೆನ್ನಟ್ಟಿದ್ದ ಲಂಕಾ ಆರಂಭದಿಂದಲೇ ಭಾರತದ ವೇಗಿಗಳ ದಾಳಿ ತಡೆಯಲಾಗದೆ ನಡುಗಿತು. ಒಬ್ಬರಾದ ಬಳಿಕ ಒಬ್ಬರು ಪೆವಿಲಿಯನ್ ಪರೇಡ್ ನಡೆಸಿದರು. 14ಕ್ಕೆ 6 ವಿಕೆಟ್ ಕಳೆದುಕೊಂಡ ಲಂಕಾ ಕೊನೆಗೂ 55 ರನ್ ಗಳಿಸುವಲ್ಲಿ ಯಶಸ್ವಿಯಾಗಿ ಏಷ್ಯಾ ಕಪ್ ಫೈನಲ್ ನಲ್ಲಿ ಅನುಭವಿಸಿದ ಸೋಲಿನ ಕೆಟ್ಟ ದಾಖಲೆಯಿಂದ ದೂರವಾಯಿತು. ಏಷ್ಯಾ ಕಪ್ ನಲ್ಲಿ ಸಿರಾಜ್ ದಾಳಿಗೆ ನಲುಗಿ 50 ಕ್ಕೆ ಆಲೌಟಾಗಿ ಹೀನಾಯ ಸೋಲು ಅನುಭವಿಸಿತ್ತು. 19.4 ಓವರ್ ಗಳಲ್ಲಿ 55 ರನ್ ಗಳಿಗೆ ಆಲೌಟಾಯಿತು.


ಶಮಿ ಮತ್ತೆ ಮೋಡಿ

ಹಾರ್ದಿಕ್ ಪಾಂಡ್ಯ ಗಾಯಾಳಾಗಿ ತಂಡದಿಂದ ಹೊರ ಬಿದ್ದ ಕಾರಣ ಆಡುವ ಬಳಗದಲ್ಲಿ ಕಾಣಿಸಿಕೊಂಡ ವೇಗಿ ಮೊಹಮ್ಮದ್ ಶಮಿ ವಿಶ್ವಕಪ್ ನಲ್ಲಿ ಮತ್ತೊಮ್ಮೆ ಐದು ವಿಕೆಟ್ ಸಾಧನೆ ಮಾಡಿದರು. 5 ಓವರ್ ಎಸೆದು 1 ಮೇಡನ್ ಸಹಿತ 18 ರನ್ ನೀಡಿ 5 ವಿಕೆಟ್ ಕಬಳಿಸಿ ತಂಡದಲ್ಲಿ ತನ್ನ ಸಾಮರ್ಥ್ಯ ಮೆರೆದರು.


ಶಮಿ ಏಕದಿನ ಇತಿಹಾಸದಲ್ಲಿ ಸತತ ಮೂರು ಬಾರಿ 4 ಪ್ಲಸ್ ವಿಕೆಟ್ ಪಡೆದ ಎರಡನೇ ಬೌಲರ್ ಎನಿಸಿಕೊಂಡರು. 2019 ರ ವಿಶ್ವಕಪ್‌ನಲ್ಲಿ ಸತತ ಮೂರು ಇನ್ನಿಂಗ್ಸ್‌ಗಳಲ್ಲಿ 4/40, 4/16 ಮತ್ತು 5/69 ರ ನಂತರ ಇದು ಅವರ ಎರಡನೇ ಸರಣಿಯಾಗಿದೆ. ವಕಾರ್ ಯೂನಿಸ್ ಮಾತ್ರ ಈ ಸಾಧನೆಯನ್ನು ಸಾಧಿಸಿದ್ದರು ಮೂರು ಬಾರಿ (1990 ರಲ್ಲಿ ಎರಡು ಬಾರಿ ಮತ್ತು 1994 ರಲ್ಲಿ ಒಮ್ಮೆ). ವಿಶ್ವಕಪ್‌ನಲ್ಲಿ ಭಾರತದ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಮೊಹಮ್ಮದ್ ಶಮಿ ಅವರ ಹೆಸರಿನಲ್ಲಿ ದಾಖಲಾಯಿತು. ಒಟ್ಟು 45 ವಿಕೆಟ್ ಪಡೆದಿದ್ದಾರೆ. ಜಹೀರ್ ಖಾನ್ 44 ವಿಕೆಟ್ ಪಡೆದಿದ್ದರು.

ವಿಕಸಿತ ಭಾರತದ 4 ಸ್ತಂಭಗಳನ್ನು ಸಶಕ್ತಗೊಳಿಸುವ ಸಕಾರಾತ್ಮಕ ಬಜೆಟ್ ಇದು

Posted by Vidyamaana on 2024-02-02 14:12:03 |

Share: | | | | |


ವಿಕಸಿತ ಭಾರತದ 4 ಸ್ತಂಭಗಳನ್ನು ಸಶಕ್ತಗೊಳಿಸುವ ಸಕಾರಾತ್ಮಕ ಬಜೆಟ್ ಇದು

ಮಂಗಳೂರು, ಫೆ.2: ನರೇಂದ್ರ ಮೋದಿಯವರ ವಿಕಸಿತ ಭಾರತದ ಪರಿಕಲ್ಪನೆಯನ್ನು ಮುಂದಿಟ್ಟುಕೊಂಡು 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸುವ ನಿಟ್ಟಿನಲ್ಲಿ ವಿತ್ತ ಮಂತ್ರಿಗಳಾದ ನಿರ್ಮಲಾ ಸೀತಾರಮನ್‌ ಮಂಡಿಸಿದ ದೂರದೃಷ್ಟಿಯ, ಪ್ರಗತಿಶೀಲ ಮತ್ತು ವಿತ್ತೀಯ ಶಿಸ್ತಿನ ಮಧ್ಯಂತರ ಬಜೆಟ್ 2024ನ್ನು ಅತ್ಯಂತ ಸಂತೋಷದಿಂದ ಸ್ವಾಗತಿಸುತ್ತೇನೆ. ವಿಕಸಿತ ಭಾರತದ 4 ಸ್ತಂಭಗಳಾದ ಯುವಜನತೆ, ಬಡವರು, ಮಹಿಳೆಯರು ಮತ್ತು ರೈತರನ್ನು ಸಶಕ್ತಗೊಳಿಸುವ ಮೂಲಕ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಭರವಸೆಯನ್ನು ಈ ಬಜೆಟ್ ನೀಡುತ್ತದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ. ಬೃಜೇಶ್ ಚೌಟ ಹೇಳಿದ್ದಾರೆ.‌




ಈ ಬಜೆಟ್‌ನಲ್ಲಿ ವಿತ್ತೀಯ ಕೊರತೆಯನ್ನು ನಿಯಂತ್ರಣದಲ್ಲಿಟ್ಟು ಬಂಡವಾಳ ವೆಚ್ಚಕ್ಕೆ ಐತಿಹಾಸಿಕ ಗರಿಷ್ಠ 11,11,111 ಕೋಟಿ ರೂಪಾಯಿಗಳನ್ನು ನೀಡುವ ಮೂಲಕ ಭಾರತದ ಆಧುನಿಕ ಮೂಲಸೌಕರ್ಯ ನಿರ್ಮಾಣದೊಂದಿಗೆ ಯುವಜನತೆಗೆ ಹೊಸ ಉದ್ಯೋಗಾವಕಾಶಗಳನ್ನು ಕಲ್ಪಿಸಲಿದೆ. ಸ್ಕಿಲ್ ಇಂಡಿಯಾ ಮಿಷನ್ ಯೋಜನೆಯಡಿ 1.4 ಕೋಟಿ ಯುವಕರಿಗೆ ತರಬೇತಿ ನೀಡಲಾಗಿದ್ದು, ಪುನರ್ ಕೌಶಲ್ಯ ಯೋಜನೆಯಡಿ 54 ಲಕ್ಷ ಯುವಕರಿಗೆ ತರಬೇತಿ ನೀಡಲಾಗಿದೆ. ದೇಶದಲ್ಲಿ 3,000 ಐಟಿಐ, 7 ಐಐಟಿ, 16 ಐಐಐಟಿಎಸ್, 7 ಐಐಎಂಎಸ್, 15 ಎಐಐಎಂಎಸ್ ಅನ್ನು ನಿರ್ಮಿಸಿರುವ ಕಾರ್ಯ ಶ್ಲಾಘನೀಯ.


ಮೀನುಗಾರಿಕೆಗೆ ಹೊಸ ಸಚಿವಾಲಯ ಸ್ಥಾಪನೆ, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮೂಲಕ ಬಡ, ಮಧ್ಯಮ ವರ್ಗದವರ ಅಭಿವೃದ್ಧಿ ಹಾಗೂ ಈ ಯೋಜನೆಯಡಿಯಲ್ಲಿ ಮೀನುಗಾರರ ಆರ್ಥಿಕತೆಯ ಅಭಿವೃದ್ಧಿ ಜೊತೆಗೆ 55 ಲಕ್ಷ ಉದ್ಯೋಗ ಸೃಷ್ಟಿಯಿಂದ ಕರಾವಳಿ ರಾಜ್ಯಗಳ ಅಭಿವೃದ್ಧಿಯ ಜೊತೆಗೆ ನಮ್ಮ ಕರಾವಳಿ ಕರ್ನಾಟಕಕ್ಕೆ ವಿಶೇಷ ಕೊಡುಗೆಯಾಗಲಿದೆ.


ರೂ. 6.21 ಲಕ್ಷ ಕೋಟಿಯ ರಕ್ಷಣಾ ಕ್ಷೇತ್ರದ ಅನುದಾನ ನಮ್ಮ ಸೇನೆಗೆ ಇನ್ನಷ್ಟು ಬಲ ನೀಡಲಿದ್ದು, ಗಡಿ ರಕ್ಷಣೆ ಹಾಗೂ ಸೇನೆಯ ಸೌಕರ್ಯಗಳ ಆಧುನೀಕರಣಕ್ಕೆ ನೆರವಾಗಲಿದೆ. ಇದು ಹೆಚ್ಚಿನ ಭದ್ರತೆಗೆ ಇನ್ನಷ್ಟು  ಪ್ರೋತ್ಸಾಹ ನೀಡಲಿದೆ. ಉತ್ಪಾದನೆಯ ವಿಷಯದಲ್ಲಿ ದೇಶವನ್ನು ಸ್ವತಂತ್ರಗೊಳಿಸುವ ಗುರಿಯೊಂದಿಗೆ ರಕ್ಷಣಾ ವಲಯದಲ್ಲಿ ಆತ್ಮ ನಿರ್ಭರತೆಯನ್ನು ಸಾಧಿಸಲಿದೆ.


ದೇಶದ ಹಲವು ನಗರಗಳಲ್ಲಿ ಮೆಟ್ರೋ ರೈಲು ಮಾರ್ಗ ವಿಸ್ತರಣೆಗೆ ಅನುದಾನ, ಭವಿಷ್ಯದ ಸಾರಿಗೆ ಎಂದೇ ಬಿಂಬಿತವಾಗಿರುವ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಹಾಗೂ ಚಾರ್ಜಿಂಗ್ ಸ್ಟೇಷನ್ ಹೆಚ್ಚಳಕ್ಕೆ ಆದ್ಯತೆ, 40 ಸಾವಿರ ಹಳೆಯ ರೀತಿಯ ರೈಲ್ವೆ ಬೋಗಿಗಳನ್ನು ವಂದೇ ಭಾರತ್ ಬೋಗಿಗಳಾಗಿ ಪರಿವರ್ತನೆ, ಉಡಾನ್ ಯೋಜನೆಗೆ 517 ಹೊಸ ಮಾರ್ಗ ರೂಪಿಸುವ ಮೂಲಕ ಸಣ್ಣ ನಗರಗಳಿಗೂ ವಿಮಾನಯಾನ ಸೇವೆ ಒದಗಿಸುವ ಯೋಜನೆ ಅತ್ಯಂತ ಸ್ವಾಗತಾರ್ಹ ಬೆಳವಣಿಗೆ.


ರಾಜ್ಯಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಬಡ್ಡಿರಹಿತ ಸಾಲ ನೀಡುವ ಮೂಲಕ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದಂತಾಗಿದೆ. ಡೈರಿ ಉದ್ಯಮದಲ್ಲಿ ತೊಡಗಿರುವ ಕೃಷಿಕರಿಗೆ ನೆರವು, ರಾಸುಗಳಲ್ಲಿ ಕಂಡು ಬರುವ ಕಾಲು ಬಾಯಿ ರೋಗ ತಡೆಗೆ ಕ್ರಮ, ಪಿಎಂ ಫಸಲ್ ಬೀಮಾ ಯೋಜನೆಯಡಿ 4 ಕೋಟಿ ಕೃಷಿಕರಿಗೆ ಬೆಳೆ ವಿಮೆ, ಕೊಯ್ಲಿನ ನಂತರ ಕೃಷಿ ಉತ್ಪನ್ನಗಳ ಮಾರಾಟ ಹಾಗೂ ಸಂಸ್ಕರಣೆಗೆ ಖಾಸಗಿ ಹಾಗೂ ಸಾರ್ವಜನಿಕ ವಲಯದ ಸಹಭಾಗಿತ್ವದ ಪರಿಕಲ್ಪನೆ ಶ್ಲಾಘನೀಯ ನಡೆ.


ದೇಶದ ಎಲ್ಲ ಜಿಲ್ಲೆಗಳಲ್ಲೂ ಆಸ್ಪತ್ರೆ ಸ್ಥಾಪನೆ, 9 ರಿಂದ 14 ವರ್ಷದೊಳಗಿನ ಬಾಲಕಿಯರಿಗೆ ಗರ್ಭಕಂಠದ ಕ್ಯಾನ್ಸರ್‌ಗೆ ಲಸಿಕೆ ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ವಿಸ್ತರಣೆಯ ಮೂಲಕ ಆರೋಗ್ಯ ರಕ್ಷೆ ಒದಗಿಸಲಾಗಿದೆ. ಮಧ್ಯಂತರ ಬಜೆಟ್ ಚುನಾವಣಾ ಪೂರ್ವ ಘೋಷಣೆಗಳ ಬಜೆಟ್ ಆಗದೆ ಜನಸಾಮಾನ್ಯರ ಜೀವನ ಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ “ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ಪ್ರಯಾಸ್, ಸಬ್ ಕಾ ವಿಶ್ವಾಸ್” ಎನ್ನುವ ದೂರ ದೃಷ್ಟಿಯ ಘೋಷಣೆಯನ್ನು ಸಕಾರಗೊಳಿಸುವ ವಿಕಸಿತ ಭಾರತಕ್ಕೆ ಮುನ್ನುಡಿ ಬರೆದ ಅತ್ಯಂತ ಸ್ವಾಗತರ್ಹ ಬಜೆಟ್ ಇದಾಗಿದೆ ಎಂದು ಕ್ಯಾ. ಬೃಜೇಶ್ ಚೌಟ ತಿಳಿಸಿದ್ದಾರೆ.

ಮಹಿಳೆಯ ಕುತ್ತಿಗೆ ಹಿಸುಕಿ ಹತ್ಯೆಗೈದು ವ್ಯಕ್ತಿ ಪರಾರಿ, ಕಾರಣ?

Posted by Vidyamaana on 2024-01-05 09:09:09 |

Share: | | | | |


ಮಹಿಳೆಯ ಕುತ್ತಿಗೆ ಹಿಸುಕಿ ಹತ್ಯೆಗೈದು ವ್ಯಕ್ತಿ ಪರಾರಿ, ಕಾರಣ?

ಬೆಂಗಳೂರು (ಜ.05): ಮನೆಯಲ್ಲಿ ಏಕಾಂಗಿಯಾಗಿದ್ದಾಗ ಹಾರ್ಡ್‌ವೇರ್ ಮಳಿಗೆ ಮಾಲಿಕರೊಬ್ಬರ ಪತ್ನಿಯನ್ನು ಕಿಡಿಗೇಡಿಯೊಬ್ಬ ಕುತ್ತಿಗೆ ಹಿಸುಕಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ಪ್ರಭಾಕರ ರೆಡ್ಡಿ ಲೇಔಟ್‌ ನಿವಾಸಿ ನೀಲಂ (30) ಕೊಲೆಯಾದ ದುರ್ದೈವಿ. ಈ ಕೃತ್ಯದಲ್ಲಿ ಮೃತರ ಪರಿಚಿತನ ಕೈವಾಡದ ಬಗ್ಗೆ ಪೊಲೀಸರು ಶಂಕಿಸಿದ್ದಾರೆ.ತಮ್ಮ ಪತಿ ಹಾಗೂ ಮಕ್ಕಳು ಹೊರಗೆ ಹೋದ ಬಳಿಕ ನೀಲಂ ಒಬ್ಬರೇ ಮನೆಯಲ್ಲಿದ್ದರು. ಆ ವೇಳೆ ಅವರ ಮನೆಯೊಳಗೆ ಪ್ರವೇಶಿಸಿರುವ ಕಿಡಿಗೇಡಿಯು ನೀಲಂ ಅವರನ್ನು ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಂದಿದ್ದಾನೆ. ಕೆಲ ಹೊತ್ತಿನ ಬಳಿಕ ಶಾಲೆಗೆ ಮುಗಿಸಿ ಮೃತರ ಕಿರಿಯ ಪುತ್ರ ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.ಹದಿಮೂರು ವರ್ಷಗಳ ಹಿಂದೆ ಉದ್ಯೋಗ ಅರಸಿ ನಗರಕ್ಕೆ ಬಂದ ಉತ್ತರಪ್ರದೇಶ ಮೂಲದ ಪ್ರದ್ಯುಮ್ನ ಅವರು, ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳ ಜತೆ ಪ್ರಭಾಕರ ರೆಡ್ಡಿ ಲೇಔಟ್‌ನಲ್ಲಿ ನೆಲೆಸಿದ್ದರು. ಮನೆ ಸಮೀಪದಲ್ಲೇ ಹಾರ್ಡ್ ವೇರ್‌ ಮಳಿಗೆ ನಡೆಸುತ್ತಿದ್ದ ಪ್ರದ್ಯುಮ್ನ, ಪೇಂಟರ್‌ ಗುತ್ತಿಗೆದಾರರೂ ಆಗಿದ್ದಾರೆ. ಎಂದಿನಂತೆ ಬೆಳಗ್ಗೆ 9 ಗಂಟೆಗೆ ಅಂಗಡಿಗೆ ಬಾಗಿಲು ತೆರೆಯಲು ಅವರು ಮನೆಯಿಂದ ಹೊರಟರೆ, ಮಕ್ಕಳು ಶಾಲೆಗೆ ತೆರಳಿದ್ದರು. ಆಗ ನೀಲಂ ಮಾತ್ರ ಮನೆಯಲ್ಲಿದ್ದಾಗ ಬೆಳಗ್ಗೆ 11.30ಕ್ಕೆ ಬಂದ ಆರೋಪಿ ಹತ್ಯೆ ಎಸಗಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಶಾಲೆಗೆ ಮುಗಿಸಿ ಮಧ್ಯಾಹ್ನ12 ಗಂಟೆಗೆ ಮೃತರ ಕಿರಿಯ ಪುತ್ರ ಮನೆಗೆ ಮರಳಿದ್ದಾನೆ. ಆ ವೇಳೆ ಬಾಗಿಲು ತೆರೆದಿದ್ದ ಮನೆಯೊಳಗೆ ಪ್ರವೇಶಿಸಿ ಬಾಲಕ, ಕೋಣೆಯಲ್ಲಿ ಪ್ರಜ್ಞಾಹೀನವಾಗಿ ಬಿದ್ದಿದ್ದ ತಾಯಿಯನ್ನು ಎಚ್ಚರಗೊಳಿಸಲು ಯತ್ನಿಸಿ ವಿಫಲವಾಗಿದ್ದಾನೆ. ಆಗ ಜೋರಾಗಿ ಬಾಲಕ ಅಳಲು ಕೇಳಿ ಆಗಮಿಸಿದ ನೆರೆಹೊರೆಯವರು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಹತ್ತೂರ ಒಡೆಯನ ಸನ್ನಿಧಾನಕ್ಕೆ ನವೀನ ಸ್ಪರ್ಶ

Posted by Vidyamaana on 2023-11-21 17:58:54 |

Share: | | | | |


ಹತ್ತೂರ ಒಡೆಯನ ಸನ್ನಿಧಾನಕ್ಕೆ ನವೀನ ಸ್ಪರ್ಶ

ಪುತ್ತೂರು: ಕರಾವಳಿ ಭಾಗ ಧಾರ್ಮಿಕತೆಗೆ ಹೆಚ್ಚಿನ ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ ಪುತ್ತೂರನ್ನು ಟೂರಿಸಂ ಪ್ರದೇಶ ಆಗುವ ನಿಟ್ಟಿನಲ್ಲಿ ಮಾನ್ಯತೆ ನೀಡಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳನ್ನು ಮಾಸ್ಟರ್ ಪ್ಲಾನ್ ಸಹಿತ ಮಾಡಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ನವೀಕೃತಗೊಂಡಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಸಭಾಭವನದ ಸಮರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.



ಈಗಾಗಲೇ ಅಭಿವೃದ್ಧಿ ಕಾರ್ಯಕ್ರಮಗಳಲ್ಲೊಂದಾದ ಸಭಾಭವನ ಸಮರ್ಪಣೆ ಕಾರ್ಯ ನಡೆದಿದೆ. ಮುಂದಿನ ದಿನಗಳಲ್ಲಿ ಕೆರೆಯಲ್ಲಿ ಕಾರಂಜಿ, ಕೆರೆಯ ಬಳಿ ಇರುವ ಮಹಿಳಾ ಠಾಣೆ ಸ್ಥಳಾಂತರ, ತೋಡಿಗೆ ತಡೆಗೋಡೆ, ಕಂಬಳ ಗದ್ದೆ ಸ್ಥಳಾಂತರ ಹೀಗೆ ಹಲವು ಮಾಸ್ಟರ್ ಪ್ಲಾನ್ ತಯಾರಿಸಿ ಸರಕಾರಕ್ಕೆ ಕಳುಹಿಸುವ ಕೆಲಸ ಆಗಲಿದೆ ಎಂದು ತಿಳಿಸಿದರು.

ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್.ಭಟ್ ದೀಪ ಬೆಳಗಿಸಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. 

ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ಈಗಾಗಲೇ ವ್ಯವಸ್ಥಾಪನಾ ಅಧ್ಯಕ್ಷರು ಮನವಿ ಮಾಡಿದಂತೆ ಬಿಎಸ್‍ ಎನ್‍ಎಲ್  ರಸ್ತೆಯ ಕುರಿತು ಮಾಹಿತಿ ಇಲ್ಲ. ಮಾಹಿತಿ ಪಡಕೊಂಡು ಸೂಕ್ತ ಸಹಕಾರ ನೀಡುತ್ತೇನೆ ಎಂದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಮಾತನಾಡಿ, ಈಗಾಗಲೇ ದೇವಸ್ಥಾನದ ಅಭಿವೃದ್ಧಿಯ ಕುರಿತ ಮಾಸ್ಟರ್ ಪ್ಲ್ಯಾನ್ ಮಾಡುವಲ್ಲಿ ಯಶಸ್ವಿಯಾಗಿದೆ. ಸಾರ್ವಜನಿಕ ಬಳಕೆಗೆ ಸಭಾಭವನ ಒಳ್ಳೆಯ ರೀತಿಯಲ್ಲಿ ಉಪಯೋಗವಾಗಲಿ ಎಂದರು. 

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ, ದೇವಸ್ಥಾನಕ್ಕೆ ಪ್ರವೇಶಿಸುವ ರಸ್ತೆ ಇಕ್ಕಟ್ಟಾಗಿದ್ದು, ಪಕ್ಕದಲ್ಲಿರುವ ಬಿಎಸ್‍ ಎನ್‍.ಎಲ್ ನವರಿಗೆ ಬಹಳ ವರ್ಷಗಳ ಹಿಂದೆ ಜಾಗ ಮಾರಾಟ ಮಾಡಲಾಗಿದೆ. ಅದನ್ನು ಪುನಃ ಪಡೆದುಕೊಳ್ಳುವ ಅವಕಾಶ ಇದೆ. ಈ ಕುರಿತು ಸಹಾಯಕ ಆಯುಕ್ತರಲ್ಲಿ ಪರಿಶೀಲಿಸುವಂತೆ ಮನವಿ ಮಾಡಿದರು. ಕುರಿಯದಲ್ಲಿ ದೇವಸ್ಥಾನದ ಹೆಸರಿಗೆ 19 ಎಕ್ರೆ ಜಾಗ ಆರ್ ಟಿಸಿ ಆಗಿದೆ. ಅಲ್ಲಿ ಗೋಲೋಕ ಉತ್ಸವ ಮಾಡುವ ಕುರಿತು ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಶುಭ ಹಾರೈಸಿದರು. ವೇದಿಕೆಯಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಿ.ಐತ್ತಪ್ಪ ನಾಯ್ಕ, ಶೇಖರ್ ನಾರಾವಿ, ರಾಮದಾಸ್ ಗೌಡ, ರವೀಂದ್ರನಾಥ ರೈ ಬಳ್ಳಮಜಲು, ರಾಮಚಂದ್ರ ಕಾಮತ್, ಡಾ.ಸುಧಾ ಎಸ್‍. ರಾವ್, ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ ಕೆ.ವಿ. ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ಕಾಮಗಾರಿಗೆ ದೇಣಿಗೆ ನೀಡಿದವರನ್ನು, ಇಂಜಿನಿಯರ್ ಗಳನ್ನು  ಗೌರವಿಸಲಾಯಿತು. 

ತನ್ವಿ ಈಶ್ವರ ಚಂದ್ರ ಪ್ರಾರ್ಥಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯೆ ವೀಣಾ ಬಿ.ಕೆ. ಸ್ವಾಗತಿಸಿದರು. ರಾಜೇಶ್ ಬನ್ನೂರು ಕಾರ್ಯಕ್ರಮ ನಿರೂಪಿಸಿದರು. 

ಸಭಾ ಕಾರ್ಯಕ್ರಮದ ಮೊದಲು ಶ್ರೀ ಮಹಾಲಿಂಗೇಶ್ವರ ದೇವರ ನಡೆಯಿಂದ ಭತ್ತ, ಅಕ್ಕಿ ಕಳಸದೊಂದಿಗೆ, ಹೂ, ಬಂಗಾರ, ಬೆಳ್ಳಿ, ಹಣ, ಅರಿಶಿನ ಕುಂಕುಮ/ ಕಲಶಗಳು , ತರಕಾರಿ, ತೆಂಗಿನ ಕಾಯಿ, ಅಡಿಕೆ ಗೊನೆ, ಕಾಫಿ, ಹಣ್ಣುಗಳು/ಧಾನ್ಯಗಳು, ತುಳಸಿ ಗಿಡ, ತುಪ್ಪ, ಹಾಲು, ಮಗು /ಶಿಶು, ಮುತ್ತೈದೆಯರು, ದಂಪತಿಗಳು,  ಸುವಸ್ತುಗಳೊಂದಿಗೆ ಮಂಗಳವಾದ್ಯ, ಪ್ರಾಜ್ವಲ್ಯಮಾನ ದೀಪ, ಕಲಶ ಹಿಡಿದ ಮಹಿಳೆಯರ ಸಹಿತ ಮೆರವಣಿಗೆ ಮೂಲಕ ತೆರಳಿ ಸಭಾಭವನ ಪ್ರವೇಶಿಸಲಾಯಿತು.

ಬೆಳ್ತಂಗಡಿ : ವಿದ್ಯುತ್ ತಂತಿ ಗೆ ಏಣಿ ತಾಗಿ ವ್ಯಕ್ತಿ ಸಾವು

Posted by Vidyamaana on 2023-11-25 11:06:48 |

Share: | | | | |


ಬೆಳ್ತಂಗಡಿ : ವಿದ್ಯುತ್ ತಂತಿ ಗೆ ಏಣಿ ತಾಗಿ ವ್ಯಕ್ತಿ ಸಾವು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ  ಮಲ್ಲರ್ಮಾಡಿ ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ,  ವಿದ್ಯುತ್‌ಶಾಕ್‌ಗೆ ಒಳಗಾಗಿ ಕಾರ್ಮಿಕ ಸಾವನ್ನಪ್ಪಿದ  ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

 ಧರ್ಮಸ್ಥಳ ಗ್ರಾಮದ ಮಲ್ಲರ್ಮಾಡಿ ನಿವಾಸಿ ಬಾಲಕೃಷ್ಣ ಶೆಟ್ಟಿ (46)  ಮೃತಪಟ್ಟವರಾಗಿದ್ದಾರೆ. ಅವರು ಇಂದು ಬೆಳಿಗ್ಗೆ ಸ್ಥಳೀಯ ಬೊಮ್ಮಣ್ಣ ಗೌಡ ಎಂಬವರ ಮನೆಗೆ ತೋಟದ ಕೆಲಸಕ್ಕೆ ಹೋಗಿದ್ದು, ತೋಟದಲ್ಲಿ ಸೊಪ್ಪು ಕಡಿಯಲು ಅಲ್ಯೂಮಿನಿಯಂ ಏಣಿಯನ್ನು ಎತ್ತಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ತೋಟದ ನಡುವಿನಲ್ಲಿ ಹಾದುಹೋಗಿದ್ದ ವಿದ್ಯುತ್‌ಲೈನ್‌ಗೆ ತಾಗಿ ವಿದ್ಯುತ್‌ಶಾಕ್ ತಗಲಿದೆ, ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದ ಅವರನ್ನು. ಕೂಡಲೇ  ಉಜಿರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದರೂ ಆವೇಳೆಗೆ ಅವರು ಮೃತಪಟ್ಟಿದ್ದರು. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೆಸ್ಕಾಂ ಇಲಾಖೆಯ ಅಧಿಕಾರಿಗಳೂ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.


*ವಿದ್ಯುತ್ ಲೈನ್ ಸಮಸ್ಯೆ:* ಕಳೆದ ಐದು ,ಆರು ವರ್ಷಗಳಿಂದ ತೋಟದ ಮಧ್ಯೆ ಹಾದು ಹೋಗಿರುವ ವಿದ್ಯುತ್ ಲೈನ್ ಬದಲಾಯಿಸಲು ಮೆಸ್ಕಾಂ , ಡಿಸಿಗೆ ಮನವಿ ಮಾಡಿದ್ದರು. ಇಲ್ಲಿವರೆಗೂ ಮೆಸ್ಕಾಂ ಇಲಾಖೆ ಇದರ ಬಗ್ಗೆ ಗಮನಹರಿಸಿಲ್ಲ. ಅದಲ್ಲದೆ ವಿದ್ಯುತ್ ಲೈನ್ ಹಾದುಹೋಗಿರುವ ತೆಂಗಿನ ಮರ , ಅಡಕೆ ಮರ ಸುಟ್ಟ ಹೋಗುತ್ತಿದೆ‌. ಇಲ್ಲಿಗೆ ಯಾವ ಮೆಸ್ಕಾಂ ಸಿಬ್ಬಂದಿ ಮರ ,ಗೆಲ್ಲು ಕಡಿಯಲು ಬರುವುದಿಲ್ಲ ಎಲ್ಲವನ್ನೂ ನಾವು ಸರಿಪಡಿಸಬೇಕಾದ ಪರಿಸ್ಥಿತಿ ಇದೆ‌‌‌. ಹಲವು ಮಂದಿಗೆ ವಿದ್ಯುತ್ ಶಾಕ್ ಹೊಡೆದು ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ ಎಂದು ಮೆಸ್ಕಾಂ ವಿರುದ್ದ ಊರವರು ಮಾಧ್ಯಮ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.



Leave a Comment: