Posted by vidyamaana on 2024-07-03 10:25:40 |
ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.
ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.
Posted by Vidyamaana on 2024-06-14 17:55:32 |
ಬೆಂಗಳೂರು: ತಮ್ಮ ವಿರುದ್ಧದ ಪೊಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಿಗ್ ರಿಲೀಫ್ ಸಿಕ್ಕಿದೆ.
ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. 17ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಉತ್ತರಿಸಿದ್ದಾರೆ. ಅವರಿಗೆ ವಯಸ್ಸಾಗಿದ್ದು ಸಹಜವಾಗಿಯೇ ಅನಾರೋಗ್ಯ ಸಮಸ್ಯೆಗಳಿರುತ್ತವೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.
Posted by Vidyamaana on 2024-06-12 17:22:09 |
ವಿಟ್ಲ: The Knowledge Hub ಟ್ಯೂಷನ್ ಸೆಂಟರ್ ಜೂನ್ 13 ರಂದು ಗುರುವಾರ 10 ಘಂಟೆಗೆ ವಿಟ್ಲದ ಶಾಲಾ ರಸ್ತೆಯ ಮೋತಿ ಸಿಟಿ ಬಿಲ್ಡಿಂಗ್ ನಲ್ಲಿ ಶುಭಾರಂಭಗೊಳ್ಳಲಿದೆ.
ಇಲ್ಲಿ ಎಲ್ ಕೆ ಜಿ ಯಿಂದ ಪಿಯುಸಿ ವರೆಗಿನ ಮಕ್ಕಳಿಗೆ ಎಲ್ಲಾ ವಿಷಯದ ಬಗ್ಗೆ ಟ್ಯೂಶನ್ ನೀಡಲಾಗುತ್ತದೆ. ಸಂಜೆ 5 ಗಂಟೆಯಿಂದ 7.30 ವರೆಗೆ ಟ್ಯೂಶನ್ ನೀಡಲಾಗುತ್ತದೆ. ವಿವಿಧ ಕಾಲೇಜ್ ಗಳಲ್ಲಿ ವ್ಯಾಸಂಗ ಮಾಡಿ ಅನುಭವ ಇರುವ ಶಿಕ್ಷಕರು ತರಬೇತಿ ನೀಡಲಿದ್ದಾರೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಜ್ಞಾನ, ಗಣಿತ, ವಿಶೇಷ ಹೆಚ್ಚಿನ ಶಿಕ್ಷಕರನ್ನು ನಿಯೋಜಿಸಿ ತರಬೇತಿ ನೀಡಲಾಗುತ್ತದೆ. ಟ್ಯೂಶನ್ ಜತೆಯಲ್ಲಿ ಸ್ಕಿಲ್ ಡೆವಲಂಪ್ ಮೆಂಟ್ ಸೇರಿದಂತೆ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾಗುವ ವಿಷಯಗಳನ್ನು ತಿಳಿಸಿ ಕೊಡಲಾಗುತ್ತದೆ.
Posted by Vidyamaana on 2024-02-06 18:07:40 |
ಪುತ್ತೂರು: ಫೆ. ೭ ಮತ್ತು ೮ ರಂದು ನಡೆಯಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಹಸಿರು ಹೊರೆ ಕಾಣಿಕೆ ಸಮರ್ಪಣೆಯು ಫೆ ೬ ರಂದು ಸವಣೂರು ಶ್ರೀ ಪದ್ಮಾವತೀ ದೇವಿಯ ಬಸದಿ ವಠಾರದಿಂದ ಹೊರಟು ಸವಣೂರು ಮುಖ್ಯ ರಸ್ತೆಯಾಗಿ ಪರಣೆ ಮಾರ್ಗವಾಗಿ ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ತಲುಪಿತು.
ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸವಣೂರುಗುತ್ತು ವೆಂಕಪ್ಪ ಶೆಟ್ಟಿಯವರು ತೆಂಗಿನಕಾಯಿ ಒಡೆಯುವ ಮೂಲಕ ಹಸಿರುಹೊರೆ ಕಾಣಿಕೆ ಸಮರ್ಪಣೆಗೆ ಚಾಲನೆಗೈದರು. ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ಅರ್ಚಕ ನಾರಾಯಣ ಬಡೆಕಿಲ್ಲಾಯರವರು ದೇವಾಲಯದ ವಠಾರದಲ್ಲಿ ಹಸಿರುಹೊರೆ ಕಾಣಿಕೆಗೆ ಆರತಿ ಬೆಳಗಿ, ಸ್ವಾಗತಿಸಿದರು. ಸವಣೂರಿನ ಹಿರಿಯ ಉದ್ಯಮಿ ಸವಣೂರು ಎನ್.ಸುಂದರ ರೈ, ಜಾತ್ರೋತ್ಸವ ಸಮಿತಿಯ ಕೋಶಾಧಿಕಾರಿ ರವೀಂದ್ರನಾಥ ರೈ ನೋಲ್ಮೆ, ಕಾರ್ಯದರ್ಶಿ ಬೆಳಿಯಪ್ಪ ಗೌಡ ಚೌಕಿಮಠ, ಸವಣೂರು ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷ ಶ್ರೀಧರ್ ಸುಣ್ಣಾಜೆ, ನಿಕಟಪೂರ್ವಧ್ಯಕ್ಷ ಉಮಾಪ್ರಸಾದ್ ರೈ ನಡುಬೈಲು, ಕಾರ್ಯದರ್ಶಿ ರಾಘವ ಗೌಡ ಸವಣೂರು, ಉಪಾಧ್ಯಕ್ಷ ಗಂಗಾಧರ್ ಸುಣ್ಣಾಜೆ, ಪುರಂದರ ಬಾರಿಕೆ, ಸತೀಶ್ ಬಲ್ಯಾಯ ಕನಡಕುಮೇರು, ನಾರಾಯಣ ಪೂಜಾರಿ ಕೆಯ್ಯೂರು, ಜಯರಾಮ ರೈ ಮೂಡಂಬೈಲು ಕನಡಕುಮೇರು, ಜಯಪ್ಪ ಗೌಡ ಸವಣೂರು, ಭಾಸ್ಕರ ಗೌಡ ಅಡೀಲು, ರುಕ್ಮಯ್ಯ ಗೌಡ ಹೊಸವೊಕ್ಲು, ರಾಮಚಂದ್ರ ಕೊಡಂಕೀರಿ, ನಾರಾಯಣ ಪೂಜಾರಿ ಮಾಲೆತ್ತಾರು, ಅಂಗಾರ ಸವಣೂರು, ಕಿರಣ್ ಕೋಡಿಬೈಲು, ವೆಂಕಪ್ಪ ಗೌಡ ಮಾಲೆತ್ತಾರು, ಪ್ರವೀಣ್ ಬಾರಿಕೆ ಸಹಿತ ನೂರಾರು ಮಂದಿ ಭಾಗವಹಿಸಿದರು.
ಫೆ ೭-೮ ಜಾತ್ರೋತ್ಸವ
ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ಜಾತ್ರೋತ್ಸವ ಫೆ. ೭ ಮತ್ತು ೮ ರಂದು ಜರಗಲಿದೆ. ಫೆ ೭ ರಂದು ಬೆಳಿಗ್ಗೆ ತಂತ್ರಿಗಳ ಆಗಮನದ ಬಳಿಕ ವಿವಿಧ ವೈದಿಕ ಕಾರ್ಯಕ್ರಮಗಳು, ಮಧ್ಯಾಹ್ನನ ಪ್ರತಿಷ್ಠಾ ದಿನದ ಪೂಜೆಯ ಬಳಿಕ ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈಯವರ ಸೇವಾರ್ಥ ಅನ್ನಸಂತರ್ಪಣೆ ನಡೆಯಲಿದೆ ಬಳಿಕ ರಾತ್ರಿ ರಂಗಪೂಜೆ , ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಭೂತಬಲಿ, ವಸಂತಕಟ್ಟೆ ಪೂಜೆ ಸುಡುಮದ್ದು ಪ್ರದರ್ಶನ ನಡೆಯಲಿದೆ. ರಾತ್ರಿಯ ಅನ್ನದಾನ ಸೇವಾಕರ್ತರಾಗಿ ಗ್ರಾಮಸ್ಥರು ಮತ್ತು ಪರವೂರದಾನಿಗಳು ಸಹಕರಿಸಲಿದ್ದಾರೆ. ಫೆ. ೮ ರಂದು ಬೆಳಿಗ್ಗೆ ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮದ್ಯಾಹ್ನ ಅನ್ನಸಂತರ್ಪಣೆಯು ಸವಣೂರುಗುತ್ತು ಕುಟುಂಬಸ್ಥರ ಸೇವಾರ್ಥ ನಡೆಯಲಿದೆ. ರಾತ್ರಿ ೮ ರಿಂದ ಶ್ರೀ ಉಳ್ಳಾಲ್ತಿ ದೈವದ ನೇಮೋತ್ಸವ ನಡೆದ ಬಳಿಕ ಅದೇ ದಿನ ಶ್ರೀಮತಿ ವಿಸ್ಮಿತಾ ಸಾಜನ್ ಹೆಗ್ಡೆರವರ ಸೇವಾರ್ಥ ಶ್ರೀ ಉಳ್ಳಾಲ್ತಿ ದೈವದ ಹರಿಕೆ ನೇಮೋತ್ಸವ ನಡೆಯಲಿದೆ. ರಾತ್ರಿಯ ಅನ್ನಸಂತರ್ಪಣೆಯು ಶ್ರೀಮತಿ ಕವಿತಾ ವಿ.ಶೆಟ್ಟಿ ಮತ್ತು ಕು.ದೇಷ್ನಾ ಶೆಟ್ಟಿ ಬೆಂಗಳೂರುರವರ ಸೇವಾರ್ಥ ನಡೆಯಲಿದೆ ಎಂದು ದೇವಾಲಯದ ಆಡಳಿತದಾರ ಸವಣೂರುಗುತ್ತು ಡಾ.ರತ್ನಾಕರ ಶೆಟ್ಟಿ, ಆಡಳಿತ ಸಮಿತಿಯ ಅಧ್ಯಕ್ಷ ಸವಣೂರುಗುತ್ತು ವೆಂಕಪ್ಪ ಶೆಟ್ಟಿ, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಸವಣೂರು ಸೀತಾರಾಮ ರೈ, ಕಾರ್ಯದರ್ಶಿ ಬೆಳಿಯಪ್ಪ ಗೌಡ ಚೌಕಿಮಠ, ಕೋಶಾಧಿಕಾರಿ ರವೀಂದ್ರನಾಥ ರೈ ನೋಲ್ಮೆ, ದೇವಾಲಯದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಬಡೆಕಿಲ್ಲಾಯ ಹಾಗೂ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷ ಶ್ರೀಧರ್ ಸುಣ್ಣಾಜೆರವರು ತಿಳಿಸಿದ್ದಾರೆ.
Posted by Vidyamaana on 2024-02-07 14:56:48 |
ಬೆಂಗಳೂರು: ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಬಿಜೆಪಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದರು. ‘ರೈತರಿಗೆ ಬರ ಪರಿಹಾರ ನೀಡದ, ಅಭಿವೃದ್ಧಿ ವಿರೋಧಿ, ಜನ ವಿರೋಧಿ ರಾಜ್ಯ ಸರ್ಕಾರವಿದು. ಶಾಸಕರಿಗೆ ಅನುದಾನ ನೀಡುವ ವಿಚಾರದಲ್ಲೂ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದರು.
Posted by Vidyamaana on 2023-11-15 18:00:55 |
ಉಡುಪಿ: ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ ಒಂದೇ ಕುಟುಂಬದ ನಾಲ್ವರ ಹತ್ಯೆಗೆ ಏಕಮುಖ ಪ್ರೇಮವೇ ಕಾರಣ ಎಂದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಕ್ಯಾಬಿನ್ ಸಿಬ್ಬಂದಿಯಾಗಿದ್ದ ಪ್ರವೀಣ್ ಅರುಣ್ ಚೌಗಲೆ(35) ಅದೇ ವಿಭಾಗದಲ್ಲಿ ಕೆಲಸ ನಿರ್ವಹಿಸುವ ಕೊಲೆಯಾದ ಐನಾಝಳೊಂದಿಗೆ ಪ್ರೇಮವಾಗಿತ್ತು. ಆದರೆ ಐನಾರ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಳು ಎನ್ನಲಾಗಿದೆ.
ನ.12ರಂದು 36 ಬಾರಿ ಫೋನ್ ಮಾಡಿದ್ದ ಹಂತಕ ಕಳೆದ ಕೆಲವು ದಿನಗಳ ಹಿಂದೆ ಐನಾಝ್ ಹುಟ್ಟು ಹಬ್ಬಕ್ಕೆ ನೇಜಾರು ಮನೆಗೆ ಬಂದಿದ್ದ ಹಂತಕ ಆಕೆಗೆ ಉಂಗುರವನ್ನು ಎಲ್ಲರ ಮುಂದೆ ಹಾಕಿದ್ದ
ಇದರಿಂದ ಐನಾಝ್ ಮನೆಯವರ ಮುಂದೆ ಗಲಿಬಿಲಿಗೊಂಡಿದ್ದಳು. ಆ ಬಳಿಕ ಪ್ರವೀಣ್ನನ್ನು ದೂರ ಮಾಡಲು ಯತ್ನಿಸಿದ್ದಳು. ಇದರಿಂದ ಖಿನ್ನತೆಗೆ ಒಳಗಾದ ಪ್ರವೀಣ್ ಐನಾಝ್ಗೆ ನಿರಂತರ ಫೋನ್ ಮಾಡುತ್ತಿದ್ದ. ಐನಾಝ್ ಕೊಲೆಯಾದ ದಿನವೇ ಬೆಳಿಗ್ಗೆ 11 ಗಂಟೆಗೆ ದುಬೈಗೆ ಏರ್ಇಂಡಿಯಾ ವಿಮಾನದಲ್ಲಿ ಗಗನ ಸಖಿಯಾಗಿ ಕಾರ್ಯನಿರ್ವಹಿಸಲು ಹೋಗಬೇಕಿತ್ತು. ಆದರೆ ಅಂದೇ ಬೆಳಿಗ್ಗೆ ಯಮರೂಪಿಯಾಗಿ ಬಂದ ಪ್ರವೀಣ್ ಮನೆಯಲ್ಲಿದ್ದ ನಾಲ್ವರನ್ನು ಹತ್ಯೆಗೈದು ಪರಾರಿಯಾಗಿದ್ದ.
ನಾಲ್ವರನ್ನು ಹತ್ಯೆಗೈದು ಬಸ್ ಮೂಲಕ ಮಂಗಳೂರಿಗೆ ಹೋಗಿ ಅಲ್ಲಿಂದ ತನ್ನ ಹೆಕ್ಟರ್ ಕಾರಿನಲ್ಲಿ ಬೆಳಗಾವಿಗೆ ಹೋಗಿ ಪರಿಚಯದ ನೀರಾವರಿ ಇಲಾಖೆಯ ಅಧಿಕಾರಿ ಮನೆಯಲ್ಲಿ ಒಂದು ದಿನ ಅಡಗಿದ್ದ. ಅಲ್ಲಿಂದ ನೇರ ತನ್ನೂರು ಸಾಂಗ್ಲಿಗೆ ಹೋಗಿ ಅವಿತುಕೊಳ್ಳುವ ಪ್ಲಾನ್ ರೂಪಿಸಿದ್ದ ಹಂತಕ,
ಕೊಲೆಯಾದ ತಕ್ಷಣ ಎಲರ್ಟ್ ಆದ ಪೊಲೀಸರು ಐನಾಝ್ ದುಡಿಯುತ್ತಿದ್ದ ಏರ್ಪೋರ್ಟ್ಗೆ ಭೇಟಿ
ನೀಡಿ ಉದ್ಯೋಗಿಗಳ ಮಾಹಿತಿ ಕಲೆ ಹಾಕಿದ್ದಾರೆ ಅಲ್ಲಿ ರಜೆ ಹಾಕಿದ್ದ ಪ್ರವೀಣ್ ಮಾಹಿತಿ ಕಲೆ ಹಾಕಿ ಫೋನ್ ಟ್ಯಾಕ್ ಮಾಡಿದ್ದರು.
ಅದರಂತೆ ಬ್ರಹ್ಮಾವರ ಇಸ್ಪೆಕ್ಟರ್ ದಿವಾಕರ್ ಪಿ.ಎಂ ನೇತೃತ್ವದ ತಂಡ ಕುಡುಚಿ ಪೊಲೀಸರ ಸಹಾಯದಿಂದ ಹಂತಕನನ್ನು ವಶಕ್ಕೆ ಪಡೆದು ಉಡುಪಿಗೆ ಕರೆತಂದಿದ್ದಾರೆ.
ಆಂಧ್ರಪ್ರದೇಶಕ್ಕೆ ಸಾರಲು ಸಂಚು ರೂಪಿಸಿದ ಹಂತಕ
ಆರೋಪಿ ಪ್ರವೀಣ್ ಅರುಣ್ ಚೌಗಲೆ ಕುಡಚಿ ಮೂಲಕ ಮಹಾರಾಷ್ಟ್ರ ಅಥವಾ ಆಂಧ್ರಪ್ರದೇಶಕ್ಕೆ ಪರಾರಿಯಾಗಲು ಹೊಂಚು ಹಾಕಿದ್ದ ಎನ್ನುವುದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಈ ಹಿಂದೆ CISF ಸಿಬ್ಬಂದಿಯಾಗಿಯೂ ಕೆಲಸ ಮಾಡಿದ್ದ ಎಂದು ಹೇಳಲಾಗಿದೆ. ಬಳಿಕ ಏಪೋರ್ಟ್ ನ ಭದ್ರತಾ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ.
ತನಿಖೆಗೆ ನೆರವಾದ ಆರೋಪಿಯ ನಡಿಗೆಯ ಶೈಲಿ : ಮಾಹಿತಿಗಳ ಪ್ರಕಾರ, ಘಟನೆಯ ಬಳಿಕ
ಲಭ್ಯವಿದ್ದ ಸಿಸಿಟಿವಿ ಸಾಕ್ಷ್ಯಗಳನ್ನು ಪರಿಶೀಲಿಸಿದ್ದ ಪೊಲೀಸರು ಆರೋಪಿಯ ನಡಿಗೆ ಶೈಲಿಯನ್ನು ಸೂಕ್ಷ್ಮವಾಗಿ ಗಮನಿಸಿದ್ದರು ಎನ್ನಲಾಗಿದೆ. ಇದು ಆರೋಪಿಯು ರಕ್ಷಣಾ ಇಲಾಖೆಗಳಿಗೆ ಸಂಬಂಧಿಸಿದ ವ್ಯಕ್ತಿ ಎಂಬ ಸುಳಿವು ನೀಡಿತ್ತು. ಬಳಿಕ ಆರೋಪಿ, ಅರುಣ್ ಚೌಗಲೆ ಬೆನ್ನುಬಿದ್ದ ಪೊಲೀಸರು, ಆತನನ್ನು ಬೆಳಗಾವಿಯ ಕುಡಚಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾದರು.
Posted by Vidyamaana on 2023-06-03 10:52:32 |
ಪುತ್ತೂರು: ಕಾಸರಗೋಡಿನ ಪೈವಳಿಕೆಯಲ್ಲಿ ತಮ್ಮನನ್ನು ಇರಿದು ಕೊಂದ ಅಣ್ಣ ಪುತ್ತೂರಿನಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ.
ಸಹೋದರರ ನಡುವಿನ ವೈಷಮ್ಯದ ಕಾರಣದಿಂದ ಅಣ್ಣ ಜಯರಾಮ, ತಮ್ಮ ಪ್ರಭಾಕರ ನೋಂಡಾ (40) ಎಂಬವರನ್ನು ಇರಿದು ಹತ್ಯೆ ಮಾಡಿದ್ದ ಘಟನೆ ಶನಿವಾರ ಬೆಳಿಗ್ಗೆ ಪೈವಳಿಕೆಯಲ್ಲಿ ನಡೆದಿತ್ತು.
ಕೇರಳದ ಪೈವಳಿಕೆಯಲ್ಲಿ ಕೊಲೆ ಮಾಡಿ ಪುತ್ತೂರಿನಲ್ಲಿ ಬಂದು ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೇರಳ ಪೊಲೀಸರು ಪುತ್ತೂರಿನ ಕೊಂಬೆಟ್ಟಿನಿಂದ ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಯನ್ನು ಬಂಧಿಸುವಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ಸಹಕರಿಸಿದ್ದಾರೆ. ಪ್ರಭಾಕರ ವಿರುದ್ಧ ಹಲವು ಪ್ರಕರಣಗಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.