Posted by vidyamaana on 2024-07-06 04:30:03 |
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ
ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.
Posted by Vidyamaana on 2024-07-03 19:44:44 |
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.
ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕುಎಂಬುದು ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸುಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.
Posted by Vidyamaana on 2023-06-30 04:42:52 |
ಉಪ್ಪಿನಂಗಡಿ: ಇತ್ತೀಚೆಗಷ್ಟೇ ನಿಧನರಾದ ಮುಸ್ತಫಾ ಕೆಂಪಿ ಹಾಜಿ ಅವರಿಗೆ ಶ್ರದ್ಧಾಂಜಲಿ ಕೋರಿ ಜೂನ್ 30ರಂದು ಸಂಜೆ 4.30ಕ್ಕೆ ಉಪ್ಪಿನಂಗಡಿ ಎಚ್.ಎಂ. ಹಾಲ್ ನಲ್ಲಿ ಹುಟ್ಟೂರ ಸಂತಾಪ ಆಯೋಜಿಸಲಾಗಿದೆ.
ನಾಡಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಅವಿಶ್ರಾಂತ ದುಡಿದ ಉಪ್ಪಿನಂಗಡಿಯ ಹೆಮ್ಮೆಯ ಪುತ್ರ ಮುಸ್ತಫಾ ಕೆಂಪಿ ಅವರಿಗೆ ಉಪ್ಪಿನಂಗಡಿ ನಾಗರಿಕರ ವತಿಯಿಂದ ಹುಟ್ಟೂರ ಸಂತಾಪ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Posted by Vidyamaana on 2023-11-17 16:07:02 |
ಪುತ್ತೂರು: ಮಾಜಿ ಶಾಸಕರಾದ ಸಂಜೀವ ಮಠಂದೂರು ರವರು ಹಾವು ಕಡಿತಕ್ಕೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ವಿಚಾರ ಗೊತ್ತಾದ ತಕ್ಷಣವೇ ಶಾಸಕರಾದ ಅಶೋಕ್ ರೈ ಯವರು ದೂರವಾಣಿ ಮೂಲಕ ಆರೋಗ್ಯ ವಿಚಾರಿಸಿ ಸಾಂತ್ವನ ತಿಳಿಸಿದ್ದಾರೆ. ಮುಂಬೈ ಪ್ರವಾಸದಲ್ಲಿರುವ ಶಾಸಕ ಅಶೋಕ್ ರೈ ಯವರು ಆಸ್ಪತ್ರೆಯಲ್ಲಿರುವ ಮಾಜಿ ಶಾಸಕರ ಪುತ್ರನ ಮೊಬೈಲ್ ಗೆ ಕರೆ ಮಾಡಿ ಮಟಂದೂರು ಜೊತೆ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ. ಶೀಘ್ರ ದೇವರ ದಯೆಯಿಂದ ಶೀಘ್ರಗುಣಮುಖರಾಗಿ ಎಂದು ಸಂತೈಸಿದ್ದಾರೆ.
Posted by Vidyamaana on 2023-12-19 20:47:58 |
ಅಯೋಧ್ಯೆ, ಡಿ.19: ರಾಮಮಂದಿರ ಚಳವಳಿಯ ಮುಂಚೂಣಿಯಲ್ಲಿದ್ದ ಬಿಜೆಪಿ ಪಾಲಿನ ಮುತ್ಸದ್ಧಿಗಳಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿಯವರು ವಯಸ್ಸು ಮತ್ತು ಆರೋಗ್ಯಸಮಸ್ಯೆ ಹಿನ್ನೆಲೆಯಲ್ಲಿ ಮುಂದಿನ ತಿಂಗಳು ನಡೆಯುವ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಗೈರುಹಾಜರಾಗುವ ಸಾಧ್ಯತೆಗಳಿವೆ ಎಂದು ರಾಮ ಮಂದಿರ ಟ್ರಸ್ಟ್ ಹೇಳಿದೆ.
"ಕುಟುಂಬದ ಅತ್ಯಂತ ಹಿರಿಯರಾಗಿರುವ ಇಬ್ಬರು ಮುಖಂಡರ ವಯಸ್ಸಿನ ಹಿನ್ನೆಲೆಯಲ್ಲಿ ಅವರು ಸಮಾರಂಭಕ್ಕೆ ಆಗಮಿಸದಂತೆ ಮನವಿ ಮಾಡಿಕೊಳ್ಳಲಾಗಿದ್ದು, ಇದಕ್ಕೆ ಇಬ್ಬರೂ ಒಪ್ಪಿಕೊಂಡಿದ್ದಾರೆ" ಎಂದು ರಾಮಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಅಡ್ವಾಣಿಗೆ 96 ವರ್ಷ ವಯಸ್ಸಾಗಿದ್ದು, ಮುರಳಿ ಮನೋಹರ ಜೋಶಿಯವರು ಮುಂದಿನ ತಿಂಗಳು 90ಕ್ಕೆ ಕಾಲಿಡಲಿದ್ದಾರೆ. ಜನವರಿ 22ರಂದು ನಡೆಯುವ ಪ್ರತಿಷ್ಠೆ ಕಾರ್ಯಕ್ಕೆ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಇದರಲ್ಲಿ ಭಾಗವಹಿಸುತ್ತಿದ್ದಾರೆ ಎಂದು ರಾಯ್ ಸ್ಪಷ್ಟಪಡಿಸಿದರು.
ಜನವರಿ 15ರ ವೇಳೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಳ್ಳಲಿದ್ದು, ಪ್ರಾಣ ಪ್ರತಿಷ್ಠೆಯ ಪೂಜಾ ವಿಧಿವಿಧಾನಗಳು ಜನವರಿ 16ರಂದು ಆರಂಭಗೊಂಡು 22ರ ವರೆಗೂ ಮುಂದುವರಿಯಲಿವೆ ಎಂದು ವಿವರಿಸಿದರು. ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಕರೆಸಲು ಮೂರು ಮಂದಿಯ ತಂಡವನ್ನು ನೇಮಕ ಮಾಡಲಾಗಿದೆ. ಇದಲ್ಲದೆ, ದೇಶದ ವಿವಿಧೆಡೆಯಿಂದ ನಾಲ್ಕು ಸಾವಿರ ಸಾಧು ಸಂತರು, 2200 ಅತಿಥಿಗಳು ಆಗಮಿಸಲಿದ್ದಾರೆ ಎಂದು ಚಂಪತ್ ರಾಯ್ ತಿಳಿಸಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದ ನಂತರ ಜನವರಿ 24ರಿಂದ 48 ದಿವಸಗಳ ಮಂಡಲ ಪೂಜೆ ಆರಂಭಗೊಳ್ಳಲಿದ್ದು ಜನವರಿ 23ರಿಂದಲೇ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದಿದ್ದಾರೆ.
Posted by Vidyamaana on 2024-01-26 18:40:39 |
ಪುತ್ತೂರು: ಜ.25 ರಂದು ಮೃತಪಟ್ಟ ಅರಿಯಡ್ಕ ಗ್ರಾಮದ ಕುಂಜೂರು ಪನೆಕ್ಕಲ್ ನಿವಾಸಿ ರವೀಂದ್ರ ಮಣಿಯಾಣಿಯವರ ಮನೆಗೆ ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ರವೀಂದ್ರ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕರು ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕ ನೆರವು ನೀಡಿ.ಮೃತ ಕಾರ್ಯ ಕರ್ತನ ಮಕ್ಕಳ ವಿದ್ಯಾಬ್ಯಾಸಕ್ಕೆ ನೆರವು ನೀಡುವುದಾಗಿ ಶಾಸಕರು ತಿಳಿಸಿದರು.