ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಪುತ್ತೂರು ಮುಸ್ಲಿಂ ಯುವಕನ ಮೇಲೆ ಹಲ್ಲೆ ಕಠಿಣ ಕ್ರಮಕ್ಕೆ -ಎಸ್‌ಡಿಪಿಐ ಒತ್ತಾಯ

Posted by Vidyamaana on 2023-05-03 23:14:26 |

Share: | | | | |


ಪುತ್ತೂರು  ಮುಸ್ಲಿಂ ಯುವಕನ ಮೇಲೆ ಹಲ್ಲೆ  ಕಠಿಣ ಕ್ರಮಕ್ಕೆ -ಎಸ್‌ಡಿಪಿಐ ಒತ್ತಾಯ

ಪುತ್ತೂರು: ಸಹಪಾಠಿ ವಿಧ್ಯಾರ್ಥಿನಿಯೊಂದಿಗೆ ಮಾತನಾಡಿದ ಎಂಬ ಕ್ಷುಲ್ಲಕ ಕಾರಣವಿಟ್ಟು ಮಹಮ್ಮದ್ ಫಾರಿಸ್ ಎಂಬ ಮುಸ್ಲಿಂ ಯುವಕನ ಮೇಲೆ ಸಂಘಪರಿವಾರದ ಕಾರ್ಯಕರ್ತರು ಪಂಚವಟಿ ಎಂಬಲ್ಲಿಗೆ ಬಲವಂತವಾಗಿ ಕರೆದುಕೊಂಡು ಹೋಗಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿದ  ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಗೊಳಿಸಿರುವ ಅವರು ಚುನಾವಣೆಗೆ ಇನ್ನೇನು ಬೆರಳೆಣಿಕೆಯಷ್ಟು ದಿನಗಳು ಮಾತ್ರ ಬಾಕಿ ಇರುವ ಸಮಯದಲ್ಲಿ ಪುತ್ತೂರು ತಾಲ್ಲೂಕಿನಲ್ಲಿ ಸಂಘಪರಿವಾರ ಕೋಮು ಗಲಭೆ ನಡೆಸಿ ರಾಜಕೀಯ ದುರ್ಲಾಭವನ್ನು ಪಡೆಯಲು ಯತ್ನಿಸುತ್ತಿದೆ.ಅದರ  ಭಾಗವಾಗಿ ಮುಸ್ಲಿಂ ವಿಧ್ಯಾರ್ಥಿಯ ಮೇಲೆ ಸಹಪಾಠಿನಿಯೊಂದಿಗೆ ಮಾತನಾಡಿದ ಎಂಬ ಕ್ಷುಲ್ಲಕ ಕಾರಣ ಇಟ್ಟುಕೊಂಡು ಸಂಘಪರಿವಾರದ ಕಾರ್ಯಕರ್ತರಿಗೆ ಕೋಮು ವಿಷ ಬೀಜ ಬಿತ್ತುವ ಕೇಂದ್ರವಾದ ಪಂಚವಟಿ ಎಂಬಲ್ಲಿಗೆ ಬಲವಂತವಾಗಿ ಕರೆದುಕೊಂಡು ಹೋಗಿ ಮನಬಂದಂತೆ ಥಳಿಸಿ ಕೊಲೆಗೆ ಯತ್ನ ನಡೆಸಲಾಗಿದೆ.

ಪುತ್ತೂರಿನಲ್ಲಿ ಬಿಜೆಪಿ ಒಡೆದ ಮನೆಯಂತಾಗಿ ಸೋಲು ಗ್ಯಾರಂಟಿ ಎಂಬಂತಾಗಿದೆ,ಹಾಗಾಗಿ ತಾಲ್ಲೂಕಿನಲ್ಲಿ ಇಂತಹ ದುಷ್ಕೃತ್ಯ ನಡೆಸಿ ಜನರನ್ನು ಭಾವನಾತ್ಮಕವಾಗಿ ಪ್ರಚೋದಿಸಿ ಮತ ಪಡೆಯುವ ಹುನ್ನಾರವಾಗಿದೆ.

ಕೆಲವು ವರ್ಷಗಳ ಹಿಂದೆ ಎಬಿವಿಪಿ ಕಾರ್ಯಕರ್ತರು ಹಿಂದು ವಿಧ್ಯಾರ್ಥಿನಿಯೋರ್ವಳನ್ನು ಅತ್ಯಾಚಾರ ನಡೆಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಾಗ ಸುಮ್ಮನಾಗಿದ್ದಾವರು ಇಂದು ಅನ್ಯ ಧರ್ಮದ ಸಹಪಾಠಿ ವಿಧ್ಯಾರ್ಥಿನಿಯೊಂದಿಗೆ ಮಾತನಾಡಿದ ಎಂಬ ಕಾರಣಕ್ಕಾಗಿ ಗೂಂಡಾಗಿರಿ ನಡೆಸುವುದಾದರೆ ಇದರ ಒಳಗುಟ್ಟು ಪುತ್ತೂರಿನ ಜನತೆಗೆ ಅರ್ಥವಾಗದ ವಿಚಾರವಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಹಾಗಾಗಿ ವಿಧ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿದ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಪೋಲಿಸ್ ಇಲಾಖೆ ಕಠಿಣ ಕಾನೂನು ಕ್ರಮ ಕೈಗೊಂಡು ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಜೈಲಿಗಟ್ಟಬೇಕೆಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಪುತ್ತೂರು ಮುಳಿಯ ಜ್ಯುವೆಲ್ಸ್ ನಲ್ಲಿ ರುದ್ರಾಕ್ಷಿ ಕಲೆಕ್ಷನ್ಸ್ ಅನಾವರಣ

Posted by Vidyamaana on 2024-05-17 14:22:09 |

Share: | | | | |


ಪುತ್ತೂರು ಮುಳಿಯ ಜ್ಯುವೆಲ್ಸ್ ನಲ್ಲಿ ರುದ್ರಾಕ್ಷಿ ಕಲೆಕ್ಷನ್ಸ್ ಅನಾವರಣ


ಪುತ್ತೂರು: ಶಿವನಿಗೆ ಸಂಬಂಧಿಸಿದ ರುದ್ರಾಕ್ಷ ಕಂಕಣವು ಜನಸಾಮಾನ್ಯರಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಹಿಂದೂ ಧರ್ಮದಲ್ಲಿ, ರುದ್ರಾಕ್ಷ ಕಂಕಣವನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ, ಇದು ಜೀವನಕ್ಕೆ ಸಂಬಂಧಿಸಿದ ಕಷ್ಟಗಳು ಮತ್ತು ಸಮಸ್ಯೆಗಳನ್ನು ನ್ಯಾವಿಗೇಟ್ ಮಾಡಲು ಸಹಾಯ ಮಾಡುತ್ತದೆ. ಅಂತಹ ರುದ್ರಾಕ್ಷಿಗಳನ್ನು ಇತ್ತೀಚಿಗಿನ ದಿನದಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ ರುದ್ರಾಕ್ಷಿ ಕಲೆಕ್ಷನ್ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಅನಾವರಣಗೊಂಡಿದೆ.

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ರುದ್ರಾಕ್ಷಿ ಹೊಸ ವಿನ್ಯಾಸದ ಸಂಗ್ರಹವನ್ನು ಅನಾವರಣಗೊಳಿಸಿದರು. ಆರಂಭದಲ್ಲಿ ದೀಪ ಪ್ರಜ್ವಲಿಸಿ, ಬಳಿಕ ರುದ್ರಾಕ್ಷಿ ಕಲೆಕ್ಷನ್ ಅನಾವರಣಗೊಳಿಸಿದರು. ಇದೇ ಸಂದರ್ಭ ಶ್ರೀ ಮಹಾಲಿಂಗೇಶ್ವರ ದೇವರ ಪ್ರಸಾದವನ್ನು ಮುಳಿಯ ಜ್ಯುವೆಲ್ಸ್‌ನ ಪ್ರಧಾನ ಆಡಳಿತ ನಿರ್ದೇಶಕ ಕೇಶವಪ್ರಸಾದ್ ಮುಳಿಯ ಅವರಿಗೆ ನೀಡಿ ಸಂಸ್ಥೆಗೆ ಶ್ರೀ ದೇವರ ಅನುಗ್ರಹಕ್ಕೆ ಪ್ರಾರ್ಥಿಸಿದರು.


ಬೆಳ್ತಂಗಡಿ : ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆ

Posted by Vidyamaana on 2023-10-11 14:36:06 |

Share: | | | | |


ಬೆಳ್ತಂಗಡಿ : ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆ

ಬೆಳ್ತಂಗಡಿ: ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಪರಿಸರದಲ್ಲಿ ಆಕ್ಟೋಬರ್ 10 ರಂದು ಸಂಜೆ ಮಹಾಮಸ್ತಕಾಭಿಷೇಕದ ಪ್ರಯುಕ್ತ ಜಿನ ಭಜನಾ ಸ್ಪರ್ಧೆಗೆ ತರಬೇತಿ ಪಡೆಯುತ್ತಿದ್ದಾಗ ವ್ಯಕ್ತಿಯೊರ್ವ ಸ್ಥಳಕ್ಕೆ ತೆರಳಿ ಅವಾಚ್ಯ ಶಬ್ದಗಳಿಂದ ಬೈದಿರುವುದಲ್ಲದೆ, ಮಚ್ಚು ತೋರಿಸಿ ಜೀವ ಬೆದರಿಕೆ ಹಾಕಿರುವುದಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬೆಳ್ತಂಗಡಿ ತಾಲೂಕಿನ ಮುಂಡೂರಿನ ಆನಂದ ಆಚಾರ್ಯ (38) ಎಂಬಾತನು ಅಕ್ಟೋಬರ್ 10 ರಂದು ಸಂಜೆ ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ವಲಯ ಮಟ್ಟದ ಜಿನ ಭಜನಾ ಸ್ಪರ್ದೆಗೆ ಮಹಿಳೆಯರು,ಮಕ್ಕಳು ಸೇರಿ ಸುಮಾರು 70 ಮಂದಿ ಅಭ್ಯಾಸ ನಡೆಸುತ್ತಿದ್ದರು,ಪ್ರವಾಸಿಗರು ಕೂಡ ಇದ್ದರು. ಈ ಸಂದರ್ಭ ಅಲ್ಲಿಗೆ ತೆರಳಿ ಮಚ್ಚು ತೋರಿಸಿ, ಬೊಬ್ಬೆ ಹಾಕಿ ಬೆದರಿಕೆ ಹಾಕಿದ್ದು ಕೂಡಲೇ ಸ್ಥಳಿಯರು ವೇಣೂರು ಪೋಲಿಸ್ ಠಾಣೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಪೋಲೀಸರು ಆಗಮಿಸಿ ಮಚ್ಚನ್ನು ವಶಪಡಿಸಿಕೊಂಡು.ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪುತ್ತೂರಿನಲ್ಲಿ ಯುವತಿಗೆ ಚೂರಿ ಇರಿತ : ಆರೋಪಿ ಪದ್ಮರಾಜ್ ಪೊಲೀಸ್ ವಶಕ್ಕೆ

Posted by Vidyamaana on 2023-08-24 10:08:51 |

Share: | | | | |


ಪುತ್ತೂರಿನಲ್ಲಿ ಯುವತಿಗೆ ಚೂರಿ ಇರಿತ :  ಆರೋಪಿ ಪದ್ಮರಾಜ್ ಪೊಲೀಸ್ ವಶಕ್ಕೆ

ಪುತ್ತೂರು: ಇಲ್ಲಿನ ಪೊಲೀಸ್ ಠಾಣಾ ಬಳಿ ನಡೆದ ಚೂರಿ ಇರಿತ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.


ಯುವಕನನ್ನು ಪದ್ಮರಾಜ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಯುವತಿಯನ್ನು ಅಳಿಕೆ ಮೂಲದ ಗೌರಿ (20 ವ.) ಎಂದು ಗುರುತಿಸಲಾಗಿದೆ.


ಯುವತಿ ಗಂಭೀರ ಗಾಯಗೊಂಡಿದ್ದು, ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ತುಳಸಿಕಟ್ಟೆ ಪ್ರತಿಷ್ಠೆ

Posted by Vidyamaana on 2024-02-24 18:28:18 |

Share: | | | | |


ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ತುಳಸಿಕಟ್ಟೆ ಪ್ರತಿಷ್ಠೆ

ಪುತ್ತೂರು: ಬೊಳುವಾರು ವಿಶ್ವಕರ್ಮ ಸಭಾಭವನಕ್ಕೆ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಸುಮಾರು 1.5 ಲಕ್ಷ ರೂ. ವೆಚ್ಚದಲ್ಲಿ ಕೊಡುಗೆಯಾಗಿ ನೀಡಿದ ಸ್ಟೈನ್ಲೆಸ್ ಸ್ಟೀಲ್ ಸಿಂಕ್ನ ಉದ್ಘಾಟನೆ ಹಾಗೂ ಸ್ಥಳಾಂತರಗೊಂಡ ತುಳಸಿ ಕಟ್ಟೆಯ ಪ್ರತಿಷ್ಠಾಪನಾ ಕಾರ್ಯಕ್ರಮ ಫೆ. 24ರಂದು ನಡೆಯಿತು.


ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಆನಂದ ಆಚಾರ್ಯ ಅಜ್ಜಿನಡ್ಕ ಮಾತನಾಡಿ, ಸೊಸೈಟಿ ಇಂದು ವಜ್ರ ಮಹೋತ್ಸವದ ಸಂಭ್ರಮದಲ್ಲಿದೆ. ಹಾಗಾಗಿ ಈ ವರ್ಷ ವಿಶೇಷವಾಗಿ 60 ಕಾರ್ಯಕ್ರಮ ಮಾಡಬೇಕು ಎಂಬ ಯೋಜನೆ ಇದೆ. ಅದರಲ್ಲಿ ಗ್ರಾಹಕರ ಸಮಾವೇಶ ಏರ್ಪಡಿಸಬೇಕು ಎಂಬ ಆಲೋಚನೆ ಅಧ್ಯಕ್ಷರಾದ ಪಿ. ಉಪೇಂದ್ರ ಆಚಾರ್ಯ ಅವರದ್ದು. ಸಾಮಾಜಿಕ ಕಳಕಳಿಯ ಕಾರಣಕ್ಕೆ ಫಾಲ್ಕೆ ಬಾಬುರಾವ್ ಆಚಾರ್ಯ ಅವರು 1964ರಲ್ಲಿ ಸೊಸೈಟಿ ಹುಟ್ಟಿಕೊಂಡಿತು. ಇಂತಹ ಸಂಸ್ಥೆ ಇಂದು ಸಾವಿರಾರು ಮಂದಿಗೆ ಉದ್ಯೋಗ ನೀಡುತ್ತಿದೆ. ಇಂದು ವಿಶ್ವಬ್ರಾಹ್ಮಣ ಸೇವಾ ಸಂಘದ ಮನವಿ ಮೇರೆಗೆ ಸ್ಟೈನ್ಲೆಸ್ ಸ್ಟೀಲ್ ಸಿಂಕ್ ಅನ್ನು ಕೊಡುಗೆಯಾಗಿ ನೀಡಿದ್ದೇವೆ ಎಂದರು.


ಅಧ್ಯಕ್ಷತೆ ವಹಿಸಿದ್ದ ವಿಶ್ವಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಶ್ರೀಧರ್ ಕೆ. ಮಾತನಾಡಿ, ಸಮಿತಿ ಸದಸ್ಯರ ಸಹಕಾರದಿಂದ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮುಂದುವರಿಯುತ್ತಿದ್ದೇವೆ. ಮಾಜಿ ಶಾಸಕ ಸಂಜೀವ ಮಠಂದೂರು ನೀಡಿದ ಅನುದಾನದಲ್ಲಿ ಪಾಕಶಾಲೆ, ಕಚೇರಿ ಮೊದಲಾದ ಕೆಲಸಗಳು ಈಗಾಗಲೇ ಪೂರ್ಣಗೊಂಡಿದೆ. ಇದೀಗ ವಾಸ್ತುಪ್ರಕಾರವಾಗಿ ತುಳಸಿಕಟ್ಟೆಯನ್ನು ಸ್ಥಳಾಂತರಿಸಿ, ಪ್ರತಿಷ್ಠಾಪನೆ ಮಾಡಲಾಗಿದೆ. 1.5 ಲಕ್ಷ ರೂ.ನಲ್ಲಿ ಸ್ಟೈನ್ಲೆಸ್ ಸ್ಟೀಲ್ ಸಿಂಕ್ ಅನ್ನು ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಕೊಡುಗೆಯಾಗಿ ನೀಡಿದ್ದು, ಇಂದು ಉದ್ಘಾಟನೆಗೊಂಡಿದೆ. ಮುಂದೆ ವೇದಿಕೆ ನವೀಕರಣ, ಪಾರ್ಕಿಂಗ್ ವ್ಯವಸ್ಥೆಗಳು ಆಗಬೇಕಿದೆ ಎಂದರು.


ವಿಶ್ವಬ್ರಾಹ್ಮಣ ಸೇವಾ ಸಂಘದ ಉಪಾಧ್ಯಕ್ಷ ಅಣ್ಣಿ ಆಚಾರ್ಯ, ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕ ಶಶಿಕಾಂತ ಆಚಾರ್ಯ ಶುಭ ಹಾರೈಸಿದರು.


ಸಂಸ್ಥೆಯ ಪರವಾಗಿ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಆನಂದ ಆಚಾರ್ಯ ಅಜ್ಜಿನಡ್ಕ ಅವರನ್ನು ಸನ್ಮಾನಿಸಲಾಯಿತು.


ವಿಶ್ವಕರ್ಮ ಯುವ ಸಮಾಜ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಆನೆಗುಂದಿ ಗುರುಸೇವಾ ಪರಿಷತ್ ಪುತ್ತೂರು ವಲಯ ಅಧ್ಯಕ್ಷ ವಿ. ಪುರುಷೋತ್ತಮ್ ಆಚಾರ್ಯ, ಎಸ್.ಕೆ.ಜಿ.ಐ. ಸೊಸೈಟಿಯ ಪುತ್ತೂರು ಶಾಖಾ ಪ್ರಬಂಧಕಿ ಉಷಾ ಆಚಾರ್ಯ, ವಿಶ್ವಕರ್ಮ ಮಹಿಳಾ ಮಂಡಳಿ ಅಧ್ಯಕ್ಷೆ, ನಗರಸಭೆ ಸದಸ್ಯೆ ಇಂದಿರಾ ಪುರುಷೋತ್ತಮ್ ಉಪಸ್ಥಿತರಿದ್ದರು.


ಶ್ರೀನಿವಾಸ ಆಚಾರ್ಯ ಪ್ರಾರ್ಥಿಸಿ, ವಿಶ್ವಬ್ರಾಹ್ಮಣ ಸೇವಾ ಸಂಘದ ಉಪಾಧ್ಯಕ್ಷ ಭುಜಂಗ ಆಚಾರ್ಯ ಸ್ವಾಗತಿಸಿದರು. ಕಿಶನ್ ಬಿ.ವಿ. ವಂದಿಸಿ, ನಿಕಟಪೂರ್ವ ಅಧ್ಯಕ್ಷ ಜಗದೀಶ್ ಎಸ್.ಎನ್. ಕಾರ್ಯಕ್ರಮ ನಿರೂಪಿಸಿದರು.



ತುಳಸಿ ಕಟ್ಟೆ ಪ್ರತಿಷ್ಠೆ:

ಸ್ಥಳಾಂತರಗೊಂಡು ಪ್ರತಿಷ್ಠಾಪನೆಗೊಂಡ ತುಳಸಿ ಕಟ್ಟೆಯ ಧಾರ್ಮಿಕ ಕಾರ್ಯಕ್ರಮವನ್ನು ಗೇರುಕಟ್ಟೆ ರಮೇಶ್ ಪುರೋಹಿತ್ ನಡೆಸಿಕೊಟ್ಟರು. ಕೆ. ಕೃಷ್ಣ ಆಚಾರ್ಯ ಹಾಗೂ ಬೇಬಿ ಕೆ. ಆಚಾರ್ಯ ದಂಪತಿ ನೇತೃತ್ವ ವಹಿಸಿದ್ದರು.


ನಕಲಿ ದಾಖಲೆ ಪತ್ರ ಜಾಲ ಪತ್ತೆ: ಪುತ್ತೂರು ಮೂಲದ ಆರೋಪಿ ಸಿಸಿಬಿ ಬಲೆಗೆ

Posted by Vidyamaana on 2023-10-06 20:36:38 |

Share: | | | | |


ನಕಲಿ ದಾಖಲೆ ಪತ್ರ ಜಾಲ ಪತ್ತೆ: ಪುತ್ತೂರು ಮೂಲದ ಆರೋಪಿ ಸಿಸಿಬಿ ಬಲೆಗೆ

ಮಂಗಳೂರು, ಅ.6: ಆಧಾರ್, ರೇಶನ್ ಕಾರ್ಡ್, ಅಂಕಪಟ್ಟಿ ಮತ್ತಿತರ ಅತ್ಯಮೂಲ್ಯ ದಾಖಲೆ ಪತ್ರಗಳನ್ನೇ ಸೃಷ್ಟಿಸಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?



ಮಂಗಳೂರು ನಗರದ ಕಂಕನಾಡಿ– ಪಂಪ್ವೆಲ್ ಹಳೆ ರಸ್ತೆಯ ವಿಶ್ವಾಸ್ ಕ್ರೌನ್ ಅಪಾರ್ಟ್ಮೆಂಟಿನ ನೆಲ ಅಂತಸ್ತಿನಲ್ಲಿ ‘’ಹೆಲ್ಪ್ ಲೈನ್ ಮಂಗಳೂರು” ಎಂಬ ಹೆಸರಿನ ಶಾಪ್ ಇಟ್ಟುಕೊಂಡು ನಕಲಿ ದಾಖಲಾತಿಗಳನ್ನು ತಯಾರಿಸಿಕೊಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಕರ್ನಕಟ್ಟೆ ನಿವಾಸಿ ಬರ್ನಾಡ್ ರೋಶನ್ ಮೆಸ್ಕರೇನಸ್ (41) ಮೂಲತ ಪುತ್ತೂರು ತಾಲೂಕಿನ ದರ್ಬೆ ಕಾವೇರಿ ಕಟ್ಟೆ ನಿವಾಸಿ 

 ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?


ಈತನ ಕಚೇರಿಯಲ್ಲಿ ಆಧಾರ್ ಕಾರ್ಡ್, ಪಡಿತರ ಚೀಟಿ, ನಕಲಿ ಶೈಕ್ಷಣಿಕ ದಾಖಲೆ ಪತ್ರಗಳು, ಜನನ ಪ್ರಮಾಣಪತ್ರ ಇತ್ಯಾದಿ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ ಅವುಗಳನ್ನು ಬಳಸಿಕೊಂಡು ಇತರೇ ದಾಖಲಾತಿಗಳನ್ನು ಮಾಡಿಕೊಡುತ್ತಿದ್ದ. ಅವನ್ನೇ ನೈಜ ದಾಖಲಾತಿಗಳೆಂದು ನಂಬಿಸಿ ಸಾರ್ವಜನಿಕರಿಗೆ ಮತ್ತು ಸರಕಾರಕ್ಕೆ ವಂಚಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ  ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.

 

ದಾಳಿ ಸಂದರ್ಭದಲ್ಲಿ ವಿವಿಧ ಹೆಸರುಗಳಲ್ಲಿ ತಯಾರಿಸಿಟ್ಟಿದ್ದ ನಕಲಿ ಆಧಾರ್ ಕಾರ್ಡ್ ಗಳು, ನಕಲಿ ರೇಷನ್ ಕಾರ್ಡ್, ನಕಲಿ ಉದ್ದಿಮೆ ಪರವಾನಿಗೆ ಪತ್ರ, ನಕಲಿ ಎಸ್ಎಸ್ಎಲ್ಸಿ ಅಂಕಪಟ್ಟಿ, ನಕಲಿ ಜನನ ಪ್ರಮಾಣ ಪತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ಮೂರು ವರ್ಷಗಳಿಂದ ಈತನಿಂದ ನಕಲಿ ದಾಖಲಾತಿಗಳನ್ನು ಪಡೆದವರು ಬ್ಯಾಂಕ್ ಇನ್ನಿತರ ಕಚೇರಿಗಳಿಗೆ ಸಾಲ ಸೌಲಭ್ಯಕ್ಕಾಗಿ ಮತ್ತು ಸರಕಾರಿ ಸೌಲಭ್ಯಗಳನ್ನು ಪಡೆಯಲು ಉಪಯೋಗಿಸಿದ್ದಾರೆ. ಆಮೂಲಕ ಸರಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ನಷ್ಟ ಉಂಟು ಮಾಡಿದ್ದಾನೆ.

 ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?


ನಕಲಿ ಪ್ರಮಾಣ ಪತ್ರಗಳನ್ನು ತಯಾರಿಸಲು ಬಳಸುತ್ತಿದ್ದ ಲ್ಯಾಪ್ ಟಾಪ್, ಕಲರ್ ಪ್ರಿಂಟರ್, ಲ್ಯಾಮಿನೇಟರ್ ಮೆಶಿನ್, ಬಯೋಮೆಟ್ರಿಕ್ ಡಿವೈಸ್ ಗಳನ್ನು ವಶಪಡಿಸಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಕಲಿ ದಾಖಲೆ ಪತ್ರ ತಯಾರಿ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ. 


ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಸಿಸಿಬಿ ಎಸಿಪಿ ಪಿಎ ಹೆಗಡೆ ಮಾರ್ಗದರ್ಶನದಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮಸುಂದರ್, ತಂಡದ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.



Leave a Comment: