ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ಮುಳಿಯ ಮಾನ್ಸೂನ್ ಧಮಾಕ ಇಂದೇ ಕೊನೆ

Posted by Vidyamaana on 2023-08-31 06:39:36 |

Share: | | | | |


ಮುಳಿಯ ಮಾನ್ಸೂನ್ ಧಮಾಕ ಇಂದೇ ಕೊನೆ

ಪುತ್ತೂರು: ಮುಂಗಾರಿನ ಸಿಂಚನದೊಂದಿಗೆ ಆರಂಭಗೊಂಡ ಮುಳಿಯ ಮಾನ್ಸೂನ್ ಧಮಾಕ ಇಂದು ಅಂದರೆ ಆಗಸ್ಟ್ 31ರಂದು ಕೊನೆಯಾಗಲಿದೆ.

ಮುಂಗಾರು ಮಳೆಯ ಸಂಭ್ರಮವನ್ನು ಇಮ್ಮಡಿಗೊಳಿಸಿ ಮುಳಿಯ ಜ್ಯುವೆಲ್ಸ್’ನೊಂದಿಗೆ ಎನ್ನುವ ಸಾಲಿನೊಂದಿಗೆ ಗ್ರಾಹಕರ ಮುಂದೆ ಬಂದ ಹಬ್ಬಕ್ಕೆ ಉತ್ತಮ ಸ್ಪಂದನೆ ದೊರಕಿದೆ. ಪುತ್ತೂರು ಹಾಗೂ ಬೆಳ್ತಂಗಡಿಯ ಮುಳಿಯ ಶೋರೂಂಗೆ ಆಗಮಿಸಿದ ಗ್ರಾಹಕರು, ಮುಳಿಯ ಮಾನ್ಸೂನ್ ಧಮಾಕದ ವಿಶೇಷ ಆಫರ್’ಗಳಿಗೆ ಮನಸೋತ ನಿದರ್ಶನ ಇದೆ.

ಆಯ್ದ ಆಭರಣಗಳ ಮೇಲೆ ಕಾಸ್ಟ್ ಪ್ರೈಸ್ ಸೇಲ್, ನಿಮ್ಮ ಹಳೆಯ ಚಿನ್ನಾಭರಣಗಳನ್ನು ಹೊಸ 916 ಆಭರಣಗಳೊಂದಿಗೆ ವಿನಿಮಯ ಮಾಡಿಕೊಳ್ಳುವ ಅವಕಾಶವಿದ್ದು ಪ್ರತಿ ಗ್ರಾಂ ಮೇಲೆ 100 ರೂ.ಗೂ ಅಧಿಕ ಮೊತ್ತವನ್ನು ಪಡೆಯಬಹುದು. ಇದಲ್ಲದೇ, ವಿಎ ಚಾರ್ಜಸ್ ಮೇಲೆ ಶೇ. 50ರವರೆಗೆ, ವಜ್ರದ ಮೌಲ್ಯದ ಮೇಲೆ ಶೇ, 10ರವರೆಗೆ, ಬೆಳ್ಳಿ ಆಭರಣಗಳ ಮೇಲೆ ಶೇ. 5ರವರೆಗೆ ರಿಯಾಯಿತಿ ಇದೆ ಎಂದು ಪ್ರಕಟಣೆ ತಿಳಿಸಿದೆ.

ಅಂದಹಾಗೇ, ಈ ಎಲ್ಲಾ ಆಫರ್’ಗಳು ಇಂದು ಸಂಜೆಯವರೆಗೆ ಮಾತ್ರ ಲಭ್ಯವಿದೆ.

ಸಂಪ್ಯ ಆನಂದಾಶ್ರಮ ಸೇವಾ ಟ್ರಸ್ಟ್ ಬೆಳ್ಳಿ ಹಬ್ಬ ಸಮಾರಂಭ

Posted by Vidyamaana on 2023-12-25 08:50:42 |

Share: | | | | |


ಸಂಪ್ಯ ಆನಂದಾಶ್ರಮ ಸೇವಾ ಟ್ರಸ್ಟ್  ಬೆಳ್ಳಿ ಹಬ್ಬ ಸಮಾರಂಭ

ಪುತ್ತೂರು:  ಮಕ್ಕಳಿಗೆ ಕೇವಲ ಲೌಕಿಕ ಶಿಕ್ಷಣವನ್ನು ಮಾತ್ರ ಕೊಡಬೇಡಿ ಅದರ ಜೊತೆಗೆ ನಮ್ಮ ಸಂಸ್ಕಾರ ಶಿಕ್ಷಣವನ್ನು ಕೊಡಿಸಿ, ಮನುಷ್ಯ ಜೀವವನ್ನು ಪ್ರೀತಿಸಲು ಇಲ್ಲದೇ ಇದ್ದರೆ ಮುದಿ ಪ್ರಾಯದಲ್ಲಿ ಆಶ್ರಮದಲ್ಲಿ ದಿನ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.


ಅವರು ಜೈನರಭವನದಲ್ಲಿ ನಡೆದ ಸಂಪ್ಯ ಆನಂದಾಶ್ರಮ ಇದರ ಬೆಳ್ಳಿ ಹಬ್ಬ ಸಮಾರಂಭದಲ್ಲಿ ಮಾತನಾಡಿದರು.


ಒಂದು ದೇಶದಲ್ಲಿ ಆಶ್ರಮದ ಸಂಖ್ಯೆ ಅಧಿಕವಾಗುತ್ತಲೇ ಇದ್ದರೆ ಅಲ್ಲಿ ಸಂಸ್ಕಾರ ಇರುವ ಮಕ್ಕಳಿಲ್ಲ ಎಂದು ನಾವು ಭಾವಿಸಬೇಕು. ಹೆತ್ತು ಹೊತ್ತು , ಕಷ್ಟಪಟ್ಟು ಸಾಕಿದ ಮಕ್ಕಳು ಒಂದು ಹಂತಕ್ಕೆ ಬೆಳೆದಾಗ ತಂದೆ ತಾಯಿಯನ್ನು ಆಶ್ರಮಕ್ಕೆ ಸೇರಿಸಿ ಯಾವುದೋ ದೇಶದಲ್ಲಿ ಸೆಟ್ಲ್ ಆಗಿ ಬಿಡುತ್ತಾರೆ. ಮುದಿ ಪ್ರಾಯದಲ್ಲಿ ಮಕ್ಕಳು, ಮೊಮ್ಮಕ್ಕಳ ಜೊತೆ ಕಾಲ ಕಳೆಯಬೇಕಾದ ಹಿರಿಯ ಜೀವಗಳು ಆಶ್ರಮದ ಕಿಟಕಿಯ ಸರಳುಗಳನ್ನು ಎಣಿಸಿ ದಿನ ದೂಡಬೇಕಾದ ಅನಿವಾರ್ಯತೆ ಯಾವ ತಂದೆ ತಾಯಿಗಳಿಗೂ ಬಾರದಿರಲಿ. ನಾವು ನಮ್ಮ ದೇಹದ ಶಕ್ತಿ ಕಳೆದುಕೊಂಡಾಗ ನಮಗೆ ಮಕ್ಕಳು ಆಶ್ರಯ ಕೊಡಬೇಕಾದರೆ ನಮ್ಮ ದೇಶದ ಸಂಸ್ಕೃತಿ, ಸಂಸ್ಕಾರ, ಆಚಾರ , ವಿಚಾರ , ಕುಟುಂಬ ಸಂಬಂದಗಳನ್ನು ಕಲಿಸಿಕೊಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಕಷ್ಟವನ್ನು ಎದುರಿಸಬೇಕಾಗಿ ಬರಬಹುದು. ಸಂಪತ್ತು ಶಾಸ್ವತವಲ್ಲ, ಸಂಪತ್ತಿನಿಂದ ಎಲ್ಲವೂ ದೊರೆಯುವುದಿಲ್ಲ. ವಯಸ್ಸಾಗುವ ಕಾಲದಲ್ಲಿ ಮಕ್ಕಳು ನಮ್ಮ ಬಳಿ ಇದ್ದರೆ ಅದುವೇ ನಮಗೆ ದೊಡ್ಡ ಸಂಪತ್ತು ಎಂದು ನಾವು ಪ್ರತೀಯೊಬ್ಬರೂ ತಿಳಿದುಕೊಳ್ಳಬೇಕಿದೆ ಎಂದು ಮಾರ್ಮಿಕವಾಗಿ ಹೇಳಿದರು.

ರೈಲ್ವೆ ಮಂಡಳಿಯ CEO ಆಗಿ ಜಯ ವರ್ಮಾ ಸಿನ್ಹಾ ನೇಮಕ

Posted by Vidyamaana on 2023-09-01 01:56:48 |

Share: | | | | |


ರೈಲ್ವೆ ಮಂಡಳಿಯ CEO ಆಗಿ ಜಯ ವರ್ಮಾ ಸಿನ್ಹಾ ನೇಮಕ

ಹೊಸದಿಲ್ಲಿ: ಭಾರತೀಯ ರೈಲ್ವೇ ಮಂಡಳಿಯ ನೂತನ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (CEO) ಜಯ ವರ್ಮಾ ಸಿನ್ಹಾ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.


ರೈಲ್ವೆ ಇತಿಹಾಸದಲ್ಲಿ ಈ ಹುದ್ದೆಗೇರಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೂ ಇವರು ಪಾತ್ರರಾಗಿದ್ದಾರೆ. ಆಗಸ್ಟ್ 31 ರ ದಿನಾಂಕದ ಆದೇಶದಲ್ಲಿ, ಜಯ ಸಿನ್ಹಾ ಅವರು ಸೆಪ್ಟೆಂಬರ್ 1ರಂದು ಅಥವಾ ನಂತರ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ಸರ್ಕಾರ ಹೇಳಿದೆ. ಅವರ ಅಧಿಕಾರಾವಧಿಯು ಆಗಸ್ಟ್ 31, 2024 ರಂದು ಕೊನೆಗೊಳ್ಳಲಿದೆ. ಈ ಹಿಂದೆ ಅಧ್ಯಕ್ಷರು ಮತ್ತು ಸಿಇಒ ಆಗಿದ್ದ ಅನಿಲ್ ಕುಮಾರ್ ಲಹೋಟಿ ಅಧಿಕಾರವಧಿಯ ನಂತರ ಸಿನ್ಹಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ.


ಜಯ ವರ್ಮಾ ಸಿನ್ಹಾ ಅವರು ಭಾರತೀಯ ರೈಲ್ವೆ ಸಂಚಾರ ಸೇವೆಯ 1986 ರ ಬ್ಯಾಚ್ ಅಧಿಕಾರಿ. ಅವರು ಪ್ರಸ್ತುತ ರೈಲ್ವೆ ಮಂಡಳಿಯಲ್ಲಿ ಸದಸ್ಯ (ಕಾರ್ಯಾಚರಣೆ ಮತ್ತು ವ್ಯವಹಾರ ಅಭಿವೃದ್ಧಿ) ಸ್ಥಾನವನ್ನು ಹೊಂದಿದ್ದಾರೆ. ಸಿನ್ಹಾ ಅವರು ರೈಲ್ವೇ ಮಂಡಳಿಯ (ಸಂಚಾರ ಸಾರಿಗೆ) ಹೆಚ್ಚುವರಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.


ಅಲಹಾಬಾದ್ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರುವ ಸಿನ್ಹಾ 35 ವರ್ಷಗಳಿಂದ ರೈಲ್ವೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ವಿಜಿಲೆನ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಭಾರತೀಯ ರೈಲ್ವೆಯ ಕಾರ್ಯಾಚರಣೆಯ ಅಂಶಗಳನ್ನು ಒಳಗೊಂಡಂತೆ ರೈಲ್ವೆಯ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.


ಬಾಲಸೋರ್ ರೈಲು ಅಪಘಾತದ ನಂತರ ಜಯಾ ಅವರು ಸದಸ್ಯರಾಗಿ (ಕಾರ್ಯಾಚರಣೆಗಳು ಮತ್ತು ವ್ಯವಹಾರ ಅಭಿವೃದ್ಧಿ) ರೈಲ್ವೆಯ ಮಾಧ್ಯಮ ತೊಡಗಿಸಿಕೊಳ್ಳುವಿಕೆಗಳಲ್ಲಿ ಮುಂಚೂಣಿಯಲ್ಲಿದ್ದರು. ಸುಮಾರು 300 ಜನರ ಸಾವಿಗೆ ಕಾರಣವಾದ ರೈಲು ಅಪಘಾತದ ನಂತರದ ಸಂಕೀರ್ಣ ಸಿಗ್ನಲಿಂಗ್ ವ್ಯವಸ್ಥೆಯನ್ನು ಅವರು ವಿವರಿಸಿದ್ದರು.


ಸಿನ್ಹಾ ಅವರು ಬಾಂಗ್ಲಾದೇಶದ ಢಾಕಾದಲ್ಲಿರುವ ಭಾರತದ ಹೈ ಕಮಿಷನ್‌ನಲ್ಲಿ ರೈಲ್ವೇ ಸಲಹೆಗಾರರ ಪಾತ್ರವನ್ನು ವಹಿಸಿಕೊಂಡು ಅಲ್ಲಿ ಅವರು ನಾಲ್ಕು ವರ್ಷಗಳ ಕಾಲ ಕೆಲಸ ಮಾಡಿದರು. ಕೋಲ್ಕತ್ತಾ ಮತ್ತು ಢಾಕಾ ನಡುವೆ ಕಾರ್ಯನಿರ್ವಹಿಸುವ ಮೈತ್ರೀ ಎಕ್ಸ್‌ಪ್ರೆಸ್‌ನ ಉದ್ಘಾಟನೆಯು ಬಾಂಗ್ಲಾದೇಶದಲ್ಲಿ ಅವರ ಅಧಿಕಾರಾವಧಿಯಲ್ಲಿ ನಡೆಯಿತು. ಹೆಚ್ಚುವರಿಯಾಗಿ, ಅವರು ಪೂರ್ವ ರೈಲ್ವೆಯೊಳಗಿನ ಸೀಲ್ದಾ ವಿಭಾಗಕ್ಕೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಸ್ಥಾನವನ್ನು ಹೊಂದಿದ್ದರು.


2017 ರಲ್ಲಿ, ಜಯ ವರ್ಮ ಸಿನ್ಹಾ ಅವರು ಆಗ್ನೇಯ ರೈಲ್ವೆಯ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕರಾಗಿ ಅಧಿಕಾರ ವಹಿಸಿಕೊಂಡರು. ಇದಕ್ಕೂ ಮೊದಲು, ಅವರು ಆಗ್ನೇಯ ರೈಲ್ವೆಯ ಹಿರಿಯ ಉಪ ಜನರಲ್ ಮ್ಯಾನೇಜರ್ ಮತ್ತು ಮುಖ್ಯ ವಿಜಿಲೆನ್ಸ್ ಅಧಿಕಾರಿಯಾಗಿದ್ದರು.

ಶಾಸಕರ ಇಂದಿನ ಕಾರ್ಯಕ್ರಮ ಆ 13

Posted by Vidyamaana on 2023-08-13 00:43:48 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 13

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಆಗಸ್ಟ್ 13 ರಂದು

ಬೆಳ್ಳಗ್ಗೆ  10:00 ಆಟಿಡೊಂಜಿ ದಿನ ಕರ್ನಾಟಕ ರಾಜ್ಯ ದೇವಾಡಿಗರ ಸಂಘ,ಮಣ್ಣ ಗುಡ್ಡ ಮಂಗಳೂರು 

ಬೆಳ್ಳಗ್ಗೆ  11

ಆಟಿದ ಕೂಟ ಬಂಟರ ಭವನ  ಸುರತ್ಕಲ್ 

ಮದ್ಯಾಹ್ನ  1:00 ಆಟಿದ ಕೂಟ  ಬಂಟರ ಭವನ  ಪುತ್ತೂರು 

ಮದ್ಯಾಹ್ನ  2:00 ವಿಟ್ಲ ವಲಯ ಬಂಟರ ಸಂಘದ ಆಟಿದ ಕೂಟ ಪುಣಚ ಬೈಲು ಗುತ್ತು 


ಮದ್ಯಾಹ್ನ 2:30 ಕೆಸರು ಗದ್ದೆ ವಿಟ್ಲ 


ಮದ್ಯಾಹ್ನ  3:30 ಕೆಸರು ಗದ್ದೆ  ಬಿಳಿಯೂರು 


ಮದ್ಯಾಹ್ನ  4:00 ಕೆಸರು ಗದ್ದೆ  ಪುಳಿತ್ತಡಿ ಉಪ್ಪಿನಂಗಡಿ 


ಸಂಜೆ 5:30 ಕೆಸರು ಗದ್ದೆ ಕೈಕಾರ

ಕಾರ್ಯಕ್ರಮದ ಲ್ಲಿ ಭಾಗವಹಿಸಲಿದ್ದಾರೆ

ಮಣಿಪಾಲ ; ಪರೀಕ್ಷೆ ಭಯದಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಸುಮನ್ ಆತ್ಮಹತ್ಯೆ

Posted by Vidyamaana on 2024-02-17 21:20:23 |

Share: | | | | |


ಮಣಿಪಾಲ ; ಪರೀಕ್ಷೆ ಭಯದಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಸುಮನ್ ಆತ್ಮಹತ್ಯೆ

ಉಡುಪಿ, ಫೆ.17: ಪರೀಕ್ಷೆ ನಡೆಯುತ್ತಿದ್ದಾಗಲೇ ಫಲಿತಾಂಶದ ಬಗ್ಗೆ ಭೀತಿಗೊಳಗಾಗಿ ಕಾಲೇಜು ಕಟ್ಟಡದಿಂದ ಹೊರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ. 


ಮಣಿಪಾಲ್ ಯುನಿವರ್ಸಿಟಿಯ ಎಂಸಿಎಚ್ ಪಿ ವಿಭಾಗದಲ್ಲಿ ಕಲಿಯುತ್ತಿದ್ದ ಬಿಹಾರ ಮೂಲದ ವಿದ್ಯಾರ್ಥಿ ಸತ್ಯಂ ಸುಮನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇತರೇ ವಿದ್ಯಾರ್ಥಿಗಳು ನೋಡುತ್ತಿದ್ದಂತೆಯೇ ಸುಮನ್ ಕಟ್ಟಡದಿಂದ ಹೊರಕ್ಕೆ ಹಾರಿದ್ದಾನೆ. ಆನಂತರ, ವಿದ್ಯಾರ್ಥಿಯ ರಕ್ಷಣೆಗಾಗಿ ಪರೀಕ್ಷೆ ಬಿಟ್ಟು ಅತ್ತಿತ್ತ ಓಡಾಡಿದ್ದಾರೆ. 


ಯುವಕ ಪರೀಕ್ಷೆ ಬರೆಯಲೆಂದು ಕೋಣೆಗೆ ಬಂದಿದ್ದ. ಆದರೆ ಪ್ರಶ್ನೆ ಪತ್ರಿಕೆ ನೋಡಿದ ಮೇಲೆ ಆತಂಕಗೊಂಡವನಂತೆ ಕಂಡಿದ್ದು ಹೊರಗೆ ಬಂದು ಕಟ್ಟಡದಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ. ಆತ ಕಟ್ಟಡದಿಂದ ಜಿಗಿಯುತ್ತಿದ್ದಂತೆಯೇ ಇತರ ವಿದ್ಯಾರ್ಥಿಗಳು ಗಾಬರಿಯಾಗಿ ಓಡುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಬೆಳ್ತಂಗಡಿ : ಆಟವಾಡುತ್ತಾ ತೋಟದಲ್ಲಿದ್ದ ಕೆರೆ ಬಿದ್ದು ಮಗು ಮೃತ್ಯು

Posted by Vidyamaana on 2024-01-22 15:19:23 |

Share: | | | | |


ಬೆಳ್ತಂಗಡಿ : ಆಟವಾಡುತ್ತಾ ತೋಟದಲ್ಲಿದ್ದ ಕೆರೆ ಬಿದ್ದು   ಮಗು ಮೃತ್ಯು

ಬೆಳ್ತಂಗಡಿಯಲ್ಲಿ(Belthang

non

y) ಮನೆಯಲ್ಲಿದ್ದ ಮಗು ಆಟವಾಡುತ್ತಾ ತೋಟದಲ್ಲಿದ್ದ ಕೆರೆ ಬಳಿ ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ(Death)ಘಟನೆ ವರದಿಯಾಗಿದೆ.


ಮೃತ ದುರ್ದೈವಿಯನ್ನು nಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕನ್ನಾಜೆ ನಿವಾಸಿ ರೋಷನ್ ಡಿಸೋಜಾ ಮತ್ತು ಉಷಾ ಡಿಸೋಜಾ ದಂಪತಿಗಳ ಮಗ ರೇಯನ್ ಡಿಸೋಜಾ(1ವರ್ಷ 11 ತಿಂಗಳು) ಎಂದು ಗುರುತಿಸಲಾಗಿದೆ.


ಬೆಳ್ತಂಗಡಿ ಮನೆಯ ತೋಟದಲ್ಲಿರುವ ಕೆರೆಗೆ ಇಂದು ಬಿದ್ದಿದ್ದು, ಮಗು ಬಿದ್ದ ವಿಚಾರ ತಿಳಿಯುತ್ತಿದ್ದಂತೆ ಕೂಡಲೇ ಮನೆಯವರು ಮತ್ತು ಸ್ಥಳೀಯರ ನೆರವಿನಿಂದ ಲಾಯಿಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದರೂ ಕೂಡ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ತಂದೆ ರೋಷನ್ ದೂರು ನೀಡಿದ್ದು, ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ



Leave a Comment: