ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಪ್ರಜ್ವಲ್‌ ರೇವಣ್ಣ ರಾಸಲೀಲೆ ಪ್ರಕರಣದ ಬಗ್ಗೆ ಕೊನೆಗೂ ಮೌನ ಮುರಿದ ಮೋದಿ, ಹೇಳಿದ್ದೇನು?

Posted by Vidyamaana on 2024-05-07 06:51:24 |

Share: | | | | |


ಪ್ರಜ್ವಲ್‌ ರೇವಣ್ಣ ರಾಸಲೀಲೆ ಪ್ರಕರಣದ ಬಗ್ಗೆ ಕೊನೆಗೂ ಮೌನ ಮುರಿದ ಮೋದಿ, ಹೇಳಿದ್ದೇನು?

ನವದೆಹಲಿ: ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಾತನಾಡಿದ್ದು, ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ ಎಂದು ಸೋಮವಾರ ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಪ್ರಜ್ವಲ್ ರೇವಣ್ಣ ಅವರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಆದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರವೇ ಜೆಡಿಎಸ್ ಸಂಸದ ದೇಶದಿಂದ ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿದ್ದಾರೆ.

ಸುರತ್ಕಲ್ : ಖಾಸಗಿ ಬಸ್ ಅತಿವೇಗಕ್ಕೆ ಇಬ್ಬರು ಯುವಕರು ಗಂಭೀರ ವಿಡಿಯೋ ವೈರಲ್

Posted by Vidyamaana on 2023-09-17 20:06:36 |

Share: | | | | |


ಸುರತ್ಕಲ್ : ಖಾಸಗಿ ಬಸ್ ಅತಿವೇಗಕ್ಕೆ ಇಬ್ಬರು ಯುವಕರು ಗಂಭೀರ ವಿಡಿಯೋ ವೈರಲ್

ಸುರತ್ಕಲ್: ಖಾಸಗಿ ಎಕ್ಸ್ ಪ್ರೆಸ್ ಬಸ್ಸನ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಬೆಟ್ಟು ಎಂಬಲ್ಲಿ ರವಿವಾರ ನಡೆದಿದೆ.



ಗಾಯಗೊಂಡವರನ್ನು ಹಳೆಯಂಗಡಿ ಇಂದಿರಾ ನಗರ ನಿವಾಸಿ ಪುತ್ತುಮೋನು ಎಂಬವರಮಗ ಮುಹಮ್ಮದ್ ಸಾಹಿಲ್ ಮತ್ತು ಪಕ್ಷಿಕೆರೆ ಹೊಸಕಾಡು ನಿವಾಸಿ ಇಮ್ಮಿಯಾಝ್ ಎಂಬವರ ಮಗ ಅರಾಫತ್ ಎಂದು ತಿಳಿದು ಬಂದಿದೆ.


ಘಟನೆಯ ವಿವರ

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಎಂಬಲ್ಲಿ ಮಂಗಳೂರಿಂದ ಉಡುಪಿ ಕಡೆಗೆ ಬರುತ್ತಿದ್ದ ಎಕ್ಸ್ ಪ್ರೆಸ್ ಬಸ್ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ರಸ್ತೆ ಬದಿ ಬೈಕ್ ನೊಂದಿಗೆ ನಿಂತಿದ್ದ ಯುವಕರಿಗೆ ಡಿಕ್ಕಿ

ಹೊಡೆಯಿತೆನ್ನಲಾಗಿದೆ.


ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದೇ ಸಂಸ್ಥೆಗೆ ಸೇರಿದ ಬಸ್ಸಿನ ಚಾಲಕ ನಿರ್ವಾಹಕ ಇತ್ತೀಚಿಗೆ ಹೊಸಬೆಟ್ಟು ಸಮೀಪ ಬೈಕ್ ಸವಾರರ ಜೊತೆಗೆ ಹೊಡೆದಾಟಕ್ಕಿಳಿದಿದ್ದು ವೈರಲ್ ಆಗಿತ್ತು. ಪೊಲೀಸ್ ಇಲಾಖೆ ಈ ಬಸ್ಸಿನ ಸಿಬ್ಬಂದಿಯ ಆಟಾಟೋಪ ನಿಲ್ಲಿಸಲು ವಿಫಲವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ವೇಶ್ಯಾವಾಟಿಕೆ ಜಾಲದಲ್ಲಿ ಮಂಡ್ಯ ಮೂಲದ ವ್ಯಕ್ತಿ ಲಕ್ಕಪ್ಪ ಅರೆಸ್ಟ್ ಮತ್ತೊಬ್ಬ ಪರಾರಿ

Posted by Vidyamaana on 2023-06-24 11:18:56 |

Share: | | | | |


ಮಂಗಳೂರಿನಲ್ಲಿ ವೇಶ್ಯಾವಾಟಿಕೆ ಜಾಲದಲ್ಲಿ ಮಂಡ್ಯ ಮೂಲದ ವ್ಯಕ್ತಿ ಲಕ್ಕಪ್ಪ ಅರೆಸ್ಟ್ ಮತ್ತೊಬ್ಬ ಪರಾರಿ

ಮಂಗಳೂರು : ಮಂಗಳೂರು ನಗರದ ಕುಲಶೇಖರದ ಕಾಂಪ್ಲೆಕ್ಸ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಮಂಗಳೂರು ನಗರ ಪೊಲೀಸರು ದಾಳಿ ನಡೆಸಿದ್ದಾರೆ.

ಈ ಸಂದರ್ಭ ಅಲ್ಲಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಲಶೇಖರದ ಬಳಿ ಇರುವ ಅಬ್ಬಿ ಕಾಂಪ್ಲೆಕ್ಸ್ ನಲ್ಲಿ ಕೃಷ್ಣ ಎಂಬಾತನು ಫ್ಲಾಟ್ ಬಾಡಿಗೆಗೆ ಪಡೆದು ಮಂಡ್ಯ ನಿವಾಸಿ ಲಕ್ಕಪ್ಪ ಎಂಬಾತನ ಜೊತೆ ಸೇರಿ ಈ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎಂದು ಪೊಲಿಸರು ಮಾಹಿತಿ ನೀಡಿದ್ದಾರೆ.ಈ ಸಂದರ್ಭ ಅಲ್ಲಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ಮಂಡ್ಯ ಮೂಲದ ಲಕ್ಕಪ್ಪ(25 ವರ್ಷ),ಎಂಬಾತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ವಿಶ್ವಕಪ್ ಫೈನಲ್:ಸ್ಮಿತ್ ಎಲ್ಬಿಡಬ್ಲ್ಯೂ ಔಟ್ ಆಗಿ ಮರಳಿದ್ದು ಚರ್ಚೆಗೆ ಗುರಿ

Posted by Vidyamaana on 2023-11-19 20:09:24 |

Share: | | | | |


ವಿಶ್ವಕಪ್ ಫೈನಲ್:ಸ್ಮಿತ್ ಎಲ್ಬಿಡಬ್ಲ್ಯೂ ಔಟ್ ಆಗಿ ಮರಳಿದ್ದು ಚರ್ಚೆಗೆ ಗುರಿ

ಅಹಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರೋಚಕವಾಗಿ ಸಾಗುತ್ತಿರುವ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನೀಡಿದ 241 ರನ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯ ಆರಂಭದಲ್ಲಿ ಅಬ್ಬರಿಸಿದರೂ 3 ವಿಕೆಟ್ ಕಳೆದುಕೊಂಡಿದೆ.7 ರನ್ ಗಳಿಸಿದ್ದ ಡೇವಿಡ್ ವಾರ್ನರ್ ಅವರು ಶಮಿ ಎಸೆದ ಚೆಂಡನ್ನು ಕೊಹ್ಲಿ ಕೈಗಿತ್ತು ನಿರ್ಗಮಿಸಿದರು. 15 ರನ್ ಗಳಿಸಿದ್ದ ಮಿಚೆಲ್ ಮಾರ್ಷ್ ಬುಮ್ರಾ ಎಸೆದ ಚೆಂಡನ್ನು ರಾಹುಲ್ ಕೈಗಿತ್ತು ನಿರ್ಗಮಿಸಿದರು. ಬಳಿಕ ಸ್ಮಿತ್‌ ಎಲ್ಬಿಡಬ್ಲ್ಯೂ ಮೂಲಕ ಔಟಾಗಿದ್ದು ವಿಶ್ವಕಪ್ ಫೈನಲ್ ನಂತಹ ಮಹತ್ವದ ಪಂದ್ಯದಲ್ಲಿ ತೀವ್ರ ಚರ್ಚೆಗೆ ಗುರಿಯಾಗಿದೆ.


ಬುಮ್ರಾ ಎಸೆದ  ಆಫ್-ಕಟ್ಟಿಂಗ್ ನಿಧಾನಗತಿಯ ಚೆಂಡು  ಲೆಗ್ ಸೈಡ್ ಆಡಲು ಬಯಸದ ಸ್ಮಿತ್ ಅವರ ಪ್ಯಾಡ್ ಗೆ ತಾಗಿತು. ಅಂಪಾಯರ್ ಔಟ್ ನೀಡಿದರು. ಆಸಕ್ತಿದಾಯಕರಾಗಿ ಸ್ಮಿತ್ ಅದನ್ನು ಪರಿಶೀಲಿಸಲಿಲ್ಲ. ಇನ್ನೊಂದು ಬದಿಯಲ್ಲಿದ್ದ ಹೆಡ್ ಜತೆ ಮಾತನಾಡಿ ಹೊರನಡೆದರು. ಬಾಲ್ ಎತ್ತರವು ನಿಜವಾಗಿಯೂ ಒಂದು ಪ್ರಶ್ನೆಯಾಗಿತ್ತು. ಆದರೆ ರಿಪ್ಲೇ ಇಂಪ್ಯಾಕ್ಟ್ ನಲ್ಲಿ ಔಟ್ ಆಫ್ ಸ್ಟಂಪ್ ಎಂದು ಕಂಡು ಬಂದಿತು.ಅನುಭವಿ ಆಟಗಾರ ಸ್ಮಿತ್ ಅದನ್ನು ಏಕೆ ಸರಿಯಾಗಿ ಏಕೆ ಪರಿಶೀಲಿಸಲಿಲ್ಲ? ಎಂದು ಹಲವರು ಪ್ರಶ್ನಿಸಿದ್ದಾರೆ.ಆಸ್ಟ್ರೇಲಿಯ 22 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 122 ರನ್ ಗಳಿಸಿದೆ.

ಪುತ್ತಿಲ ಪರಿವಾರ ಆಯೋಜನೆಯ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಸನಾತನ ಸಮಾಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Posted by Vidyamaana on 2023-11-29 11:45:47 |

Share: | | | | |


ಪುತ್ತಿಲ ಪರಿವಾರ ಆಯೋಜನೆಯ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಸನಾತನ ಸಮಾಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಪುತ್ತಿಲ ಪರಿವಾರದ ವತಿಯಿಂದ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಡಿ.24-25 ರಂದು ಪ್ರಪ್ರಥಮ ಬಾರಿಗೆ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರಿಕೆ ಬಿಡುಗಡೆ ಪುತ್ತೂರು ಶ್ರೀ  ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.29ರಂದು ಬೆಳಿಗ್ಗೆ ನಡೆಯಿತು.


ಪ್ರಧಾನ ಅರ್ಚಕರಾದ ವಿಎಸ್ ಭಟ್ ಪ್ರಾರ್ಥನೆ ನೆರವೇರಿಸಿದರು. ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. 


ಅರುಣ್ ಕುಮಾರ್ ಪುತ್ತಿಲ,  ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ಶಶಾಂಕ್ ಕೋಟೇಚಾ, ಗೌರವಾಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ಸ್ವಾಗತ ಸಮಿತಿ ಅಧ್ಯಕ್ಷರು ಕಿರಣ್ ಗೌಡ, ಉಪಾಧ್ಯಕ್ಷರುಗಳಾದ ಪ್ರವೀಣ್ ಶೆಟ್ಟಿ ತಿಂಗಳಾಡಿ, ಕೃಷ್ಣ ಪ್ರಸಾದ್ ಶೆಟ್ಟಿ,ಸ್ವಾಗತ ಸಮಿತಿ ಸಂಚಾಲಕರಾದ  ಗಣೇಶ್ ಭಟ್ ಮಕರಂದ, ಮಹಿಳಾ ಘಟಕದ ಅಧ್ಯಕ್ಷರಾದ  ಮಲ್ಲಿಕಾ ಪ್ರಸಾದ್, ಜಯಲಕ್ಷ್ಮೀ, ಅಶ್ವಿನಿ ಸಂಪ್ಯ, ಕಲ್ಯಾಣೋತ್ಸವ ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್, ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ರವಿ ರೈ ಕೆದಂಬಾಡಿ ಮಠ,  ಆರ್ಯಾಪು ಗ್ರಾ ಪಂ ಸದಸ್ಯ ಸುಬ್ರಹ್ಮಣ್ಯ ಬಲ್ಯಾಯ, ದಿನೇಶ್ ಅಡ್ಕಾರ್

ಸುಧಾಕರ್ ಸುಳ್ಯ, ಗೋಪಾಲಕೃಷ್ಣ ಭಟ್,ಮಹೇಂದ್ರ ವರ್ಮ, ಲಕ್ಷ್ಮಣ ಬೈಲಾಡಿ, ಪ್ರಶಾಂತ್ ನೆಕ್ಕಿಲಾಡಿ , ಚಿನ್ಮಯ್ ರೈ ಈಶ್ವರಮಂಗಲ,ಗೀತೇಶ್ ರ್,ಚಂದ್ರಹಾಸ ಈಶ್ವರಮಂಗಲ, ಕಿಶೋರ್ ಜೋಗಿ, ಮಹೇಂದ್ರ ವರ್ಮ, ಅರುಣ್ ಭಟ್, ರಾಜೇಶ್  ಭಟ್ ಕುಳ, ರವಿಕೃಷ್ಣ ನಗರ, ಗೋಕುಲ್ ದಾಸ್ ಪ್ರಗತಿ, ಭೀಮಯ್ಯ ಭಟ್, ಪ್ರವೀಣ್ ಭಂಡಾರಿ, ಅನಿಲ್ ಮುಂಡೂರು, ಅಶೋಕ್ ಪುತ್ತಿಲ,ಪುರುಷೋತ್ತಮ ಕೋಲ್ಪೆ , ಜಯಪ್ರಕಾಶ್ , ರತ್ನಾಕರ್ ನಾಯಕ್ ಸಹಿತ ನೂರಾರು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮೆಂಟಲಿ ಟಾರ್ಚರ್‌ ಕೊಡುತ್ತಿದ್ದ ಬಾವನನ್ನೇ ಮುಗಿಸಿದ ನಾದಿನಿ

Posted by Vidyamaana on 2024-01-11 11:30:00 |

Share: | | | | |


ಮೆಂಟಲಿ ಟಾರ್ಚರ್‌ ಕೊಡುತ್ತಿದ್ದ ಬಾವನನ್ನೇ ಮುಗಿಸಿದ ನಾದಿನಿ

ಕಲಬುರಗಿ: ದೈಹಿಕ ಸಂಬಂದ ಬೆಳೆಸು ಅಂತ ಕಿರುಕುಳ ನೀಡ್ತಿದ್ದ ಭಾವನನ್ನ ಖುದ್ದು ನಾದನಿಯೇ ಖಲಾಸ್ ಮಾಡಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.ಅಂಬಿಕಾ ಎಂಬಾಕೆ ಇದೀಗ ಪ್ರಿಯಕರ ರಾಜು ಎಂಬಾತನ ಜೊತೆ ಲಾಕ್ ಆಗಿದ್ದಾಳೆ.ಅಂದಹಾಗೆ ಪೋಲೀಸರ ಅತಿಥಿಯಾಗಿರುವ ಅಂಬಿಕಾಳ ಅಕ್ಕನ ಗಂಡ ಅಂಬಾರಾಯ ಜನೆವರಿ 2ರಂದು ಕಮಲಾಪುರ ಬಳಿ ಕೊಲೆಯಾಗಿದ್ದ.ಪ್ರಕರಣ ದಾಖಲಿಸಿಕೊಂಡಿದ್ದ ಪೋಲೀಸರು ಅಂಬಾರಾಯನ ನಾದನಿಯನ್ನ ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಎಲ್ಲ ವಿಷ್ಯ ಬಟಾಬಯಲಾಗಿದೆ.


ದೈಹಿಕ ಸಂಪರ್ಕ ಹೊಂದುವಂತೆ ತನಗೆ ನಿತ್ಯವೂ ಟಾರ್ಚರ್ ಮಾಡ್ತಿದ್ದ ಕಾರಣಕ್ಕೆ ಕೊಲೆ ಮಾಡಿಸಿದ್ದೇನೆ ಅಂತ ಆರೋಪಿ ಬಾಯಿಬಿಟ್ಟಿದ್ದಾಳೆ..ಒಟ್ಟಾರೆ ಅಂಬಿಕಾ ಸೇರಿ 7 ಜನ ಇದೀಗ ಅರೆಸ್ಟಾಗಿದ್ದಾರೆ



Leave a Comment: