Posted by vidyamaana on 2024-07-03 19:23:39 |
ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್ನಲ್ಲಿ ಸದಸ್ಯರಾಗಿರುತ್ತಾರೆ.
ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.
Posted by Vidyamaana on 2023-09-16 08:21:20 |
ದುಬೈ: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಸೆ 15 ರಂದು ದುಬೈಗೆ ಭೇಟಿ ನೀಡಿದ್ದು, ಈ ಸಂದರ್ಭ ಅಲ್ಲಿರುವ ಪುತ್ತೂರಿನವರನ್ನು ಭೇಟಿಯಾದರು.
ದುಬೈಯ ಜುಮೈರಾ ತಾಜ್ ಹೊಟೇಲಿನಲ್ಲಿ ಶಾಸಕರಿಗೆ ಆತ್ಮೀಯ ಸ್ವಾಗತ ನೀಡಿ, ಅಭಿನಂದಿಸಿದರು.
ಬಳಿಕ ನಡೆದ ಸೌಹಾರ್ದ ಭೇಟಿಯಲ್ಲಿ ಮಾತನಾಡಿದ ಅಶೋಕ್ ರೈ, ಚುನಾವಣೆ ಸಂದರ್ಭ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ದುಬೈನಲ್ಲಿ ನೆಲೆಸಿರುವ ನಮ್ಮೂರಿನ ಯುವಕರ ಸಹಕಾರ ಅವಿಸ್ಮರಣೀಯ. ನಮ್ಮೂರಿನ ಜನಪರ ಕೆಲಸಗಳಿಗೆ ಸದಾ ನಿಮ್ಮ ಬೆಂಬಲ ಮುಂದೆಯೂ ಬೇಕು ಎಂದ ಅವರು, ದುಬೈಯ ಪುತ್ತೂರಿಗರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಸ್ತಾಫಾ ಕೋಡಿಂಬಾಡಿ, ಖಲೀಲ್ ಬಿ.ಎಚ್., ಅಜಿತ್ ಕೋಡಿಂಬಾಡಿ, ಅನ್ಸಾರ್ ಬಿ.ಎಚ್., ಸಿನಾನ್ ಮೊದಲಾದವರು ಉಪಸ್ಥಿತರಿದ್ದರು.
Posted by Vidyamaana on 2023-09-27 20:54:00 |
ಉಳ್ಳಾಲ, ಸೆ.27: ಆಟೋ ಟೆಂಪೊ ಚಾಲಕರೋರ್ವರು ತಾನು ಟೆಂಪೋ ಇರಿಸುತ್ತಿದ್ದ ಹೊಟೇಲ್ ಮಾಲಕರ ಮನೆಯಂಗಳದ ಬಾವಿಗೆ ಬಿದ್ದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ ಚರ್ಚ್ ಬಳಿ ನಡೆದಿದೆ.
ತೊಕ್ಕೊಟ್ಟು, ಕೃಷ್ಣ ನಗರ, ಲಚ್ಚಿಲ್ ನಿವಾಸಿ ನಾಗೇಶ್ (62) ಆತ್ಮಹತ್ಯೆಗೈದ ದುರ್ದೈವಿ. ನಾಗೇಶ್ ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು. ಟೆಂಪೋವನ್ನ ನಾಗೇಶ್ ಅವರು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು. ಇಂದು ಬೆಳಗ್ಗೆ ನಾಗೇಶ್ ಅವರು ಟೆಂಪೋ ತೆಗೆಯದೆ ನಾಪತ್ತೆಯಾಗಿದ್ದು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಮನೆಯಂಗಳದಲ್ಲಿ ನಿಲ್ಲಿಸಿದ್ದ ಟೆಂಪೋ ಸೀಟಲ್ಲಿ ನಾಗೇಶ್ ಅವರ ಮೊಬೈಲ್, ನಗದು , ಫೋಟೊ, ಚಪ್ಪಲಿ ದೊರಕಿದ್ದು ಅನುಮಾನಗೊಂಡ ಮನೆ ಮಂದಿ, ಸ್ಥಳೀಯರು ಬಾವಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬಾವಿಯಲ್ಲಿ ನಾಗೇಶ್ ದೇಹವಿರುವುದನ್ನು ಪತ್ತೆ ಮಾಡಿದ್ದು ಮೃತದೇಹವನ್ನ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ನಾಗೇಶ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಅನಾರೋಗ್ಯದ ಬಗ್ಗೆ ಚಿಂತಿತರಾಗಿದ್ದರು. ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ತೊಕ್ಕೊಟ್ಟಿನ ನಿತ್ಯಾನಂದ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನ ಅಗಲಿದ್ದಾರೆ
Posted by Vidyamaana on 2024-07-02 22:10:24 |
ವಿಟ್ಲ: ಮೆಹಂದಿಗೆ ಪ್ರಾಚೀನ ಕಾಲದ ಇತಿಹಾಸ ಇದ್ದು ಅದೊಂದು ಕೈಯಿಂದ ಕೈಯಲ್ಲಿ ಅರಳುವ ಅದ್ಬುತ ಕಲೆಯಾಗಿದೆ. ವಿದ್ಯಾರ್ಥಿನಿಯರು, ಯುವತಿಯರು ಹಾಗೂ ಗೃಹಣಿಯರು ಮೆಹಂದಿ ಬಿಡಿಸುವುದು ಕಲಿಯುವ ಮೂಲಕ ಕುಟುಂಬಕ್ಕೆ ಆರ್ಥಿಕ ನೆರವಾಗಬಹುದು ಎಂದು ವಿಟ್ಲದ ದಂತ ವೈದ್ಯೆ ಡಾ. ಕೌಲತ್ ಬಿ.ಎಂ. ಹೇಳಿದರು.
ವಿಟ್ಲ ಸ್ಕೂಲ್ ರೋಡಿನ ಮೋತಿ ಸಿಟಿ ಕಟ್ಟಡದಲ್ಲಿ ಇತ್ತೀಚಿಗೆ ಆರಂಭಗೊಂಡ ದಿ ನ್ವಾಲೇಜ್ ಹಬ್ ಟ್ಯೂಷನ್ ಆ್ಯಂಡ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ಮೆಹಂದಿ ತರಗತಿಯನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
Posted by Vidyamaana on 2023-05-24 15:27:22 |
ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇ.22 ರಂದು ಬೆಳ್ತಂಗಡಿಯ ಕಿನ್ಯಮ್ಮಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನ ಕಾರ್ಯಕ್ರಮದ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರ ವಿರುದ್ಧ ಪ್ರಕರಣ ದಾಖಲಾಗಿದೆ.ಪೂಂಜಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಇಂದು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ನೀಡಿದರು.ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಶ್ರೀಮತಿ ನಮಿತ ಕೆ ಪೂಜಾರಿ ನೀಡಿದ ದೂರಿನ ಮೇರೆಗೆ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್ ವಿರುದ್ಧ ಐಪಿಸಿ ಸೆಕ್ಷನ್ 153, 153ಎ, 505 ರಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Posted by Vidyamaana on 2023-07-24 06:57:08 |
ನವದೆಹಲಿ :(ಜು.24) ಮೆಟಾ ಮಾಲೀಕತ್ವದ ಮೆಸೇಜಿಂಗ್ ಪ್ಲಾಟ್ಫಾರ್ಮ್ ವ್ಯಾಟ್ಸ್ಆಯಪ್ ಇದೀಗ ಹೊಸ ಫೀಚರ್ಸ್ ಬಿಡುಗಡೆ ಮಾಡಿದೆ. ಪ್ರಮುಖವಾಗಿ ಬಳಕೆದಾರರ ಬಹುದಿನಗಳ ಬೇಡಿಕೆಯನ್ನು ವ್ಯಾಟ್ಸ್ಆಯಪ್ ಈಡೇರಿಸಿದೆ. ಇದೀಗ ವ್ಯಾಟ್ಸ್ಆಯಪ್ ವಿಡಿಯೋ ಕಾಲ್ ವೇಳೆ ಲ್ಯಾಂಡ್ಸ್ಕೇಪ್ ಮೂಡ್ ಪ್ರವರ್ತಿಸಲಿದೆಇಷ್ಟು ದಿನ ವಿಡಿಯೋ ಕಾಲ್ ಮಾಡುವಾಗ ಕೇವಲ ಪೋರ್ಟ್ರೈಟ್ ಮೂಡ್ ಮಾತ್ರ ಅನಮತಿ ನೀಡುತ್ತಿತ್ತು. ಆದರೆ ಹೊಸ ಫೀಚರ್ನಿಂದ ವಿಡಿಯೋ ಕಾಲ್ ಮಾಡುಲ ಬಳಕೆದಾರರು ಮೊಬೈಲ್ನ್ನು ಪೋರ್ಟ್ರೈಟ್ ಅಥವಾ ಲ್ಯಾಂಡ್ಸ್ಕೇಪ್ ಯಾವುದೇ ಮೂಡ್ನಲ್ಲೂ ಕರೆ ಮಾಡಿ ಸಂಭಾಷಣೆ ನಡೆಸಬಹುದು. ಹೊಸ ಫೀಚರ್ ಇದಕ್ಕೆ ಅನುಮತಿ ನೀಡಲಿದೆ.ವಿಡಿಯೋ ಕಾಲ್ ವೇಳೆ ಲ್ಯಾಂಡ್ಸ್ಕೇಪ್ ಮೂಡ್ನಲ್ಲಿ ಮೊಬೈಲ್ ಇಟ್ಟು ಸಂಭಾಷಣೆ ನಡೆಸಲು ಅಥವಾ ಇನ್ನಿತರ ಕಾರಣಗಳಿಗೆ ಬಳಕೆದಾರರು ಬಹುದಿನಗಳಿಂದ ಬೇಡಿಕೆ ಇಟ್ಟಿದ್ದರು. ಇದೀಗ ಬಳಕೆದಾರರು ಮೊಬೈಲ್ನ್ನು ಲ್ಯಾಂಡ್ಸ್ಕೇಪ್ ಮೂಡ್ನತ್ತ ತಿರುಗಿಸಿದರೆ ವಿಡಿಯೋ ಕಾಲ್ಗೆ ಯಾವುದೇ ಸಮಸ್ಯೆ ಇಲ್ಲ. ಕರೆಯಲ್ಲಿರುವ ವ್ಯಕ್ತಿ ಅಥವಾ ಚಿತ್ರಗಳು ಉಲ್ಟಾ ಕಾಣುವುದಿಲ್ಲ. ಬಳಕೆದಾರರ ಮುಂದಿದ್ದ ಸಮಸ್ಯೆಯೊಂದನ್ನು ವ್ಯಾಟ್ಸ್ಆಯಪ್ ಬಗೆಹರಿಸಿದೆ.ಲ್ಯಾಂಡ್ಸ್ಕೋಪ್ ಮೂಡ್ ವಿಡಿಯೋ ಕಾಲ್ ಜೊತೆಗೆ ಕಾಲ್ ಸೈಲೆಂಟ್ ಫೀಚರನ್ನು ವ್ಯಾಟ್ಸ್ಆಯಪ್ ಪರಿಚಯಿಸಿದೆ. ಈ ಮೂಲಕ ಅನಗತ್ಯ, ಸ್ಪ್ಯಾಮ್ ಕಾಲ್, ಅಪರಿಚಿತ ಕರೆಗಳನ್ನು ನಿರ್ಬಂಧಿಸಲು ಸಾಧ್ಯವಿದೆ. ವ್ಯಾಟ್ಸ್ಆಯಪ್ ಸೆಟ್ಟಿಂಗ್ ಮೂಲಕ ಪ್ರೈವೈಸ್ ಕಾಲ್ ಆಯ್ಕೆ ಮಾಡಿದರೆ ಕಿರಿಕಿರಿಯಿಂದ ದೂರ ಉಳಿಯಲು ಸಾಧ್ಯವಿದೆ. ಅಪರಿಚಿತ ಮತ್ತು ಸ್ಪಾಯಮ್ ಕರೆಗಳ ಕಿರಿಕಿರಿಯಿಂದ ಬಳಕೆದಾರರಿಗೆ ಮುಕ್ತಿ ನೀಡಲು ಫೋನ್ನಲ್ಲಿ ಸೇವ್ ಆಗಿಲ್ಲದ ನಂಬರ್ಗಳಿಂದ ಬರುವ ಫೋನ್ ಕರೆಗಳನ್ನು ಸ್ವಯಂಚಾಲಿತವಾಗಿ ಸೈಲೆಂಟ್ ಮಾಡುವ ಹೊಸ ಫೀಚರನ್ನು ವಾಟ್ಸಾಪ್ ಬಿಡುಗಡೆ ಮಾಡಿದೆ. ಇದಕ್ಕಾಗಿ ವಾಟ್ಸಾಪ್ ಸೆಟ್ಟಿಂಗ್ನಲ್ಲಿ ಸೈಲೆಂಟ್ ಅನ್ನೋನ್ ನಂಬರ್ಸ್ ಆಯ್ಕೆಯನ್ನು ಎನೇಬಲ್ ಮಾಡಿದರೆ ಸಾಕು. ಗೊತ್ತಿಲ್ಲದ ನಂಬರ್ಗಳಿಂದ ಬರುವ ಕರೆಗಳನ್ನು ವಾಟ್ಸಾಪ್ ಸೈಲೆಂಟ್ ಮಾಡಲಿದೆ. ಈ ಹೊಸ ಫೀಚರನ್ನು ಮಂಗಳವಾರ ಘೋಷಿಸಿದ ಮೆಟಾ ಸಿಇಒ ಮಾರ್ಕ್ ಜ್ಯೂಕರ್ ಬಗ್ರ್, ಈಗ ವಾಟ್ಸಾಪ್ ಅನ್ನೋನ್ ಕಾಲ್ಗಳನ್ನು ಸೈಲೆಂಟ್ ಮಾಡಲಿದೆ.ಆಯಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರು ಈಗ ಈ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.
ಇಷ್ಟಕ್ಕೇ ವ್ಯಾಟ್ಸ್ಆಯಪ್ ಹೊಸ ಫೀಚರ್ ಕತೆ ಮುಗಿದಿಲ್ಲ. ಇದೀಗ ವ್ಯಾಟ್ಸ್ಆಯಪ್ ಚಾಟ್ ಟ್ರಾನ್ಸ್ಫರ್ ಆಯ್ಕೆಯನ್ನು ನೀಡಿದೆ. ಒಂದು ಫೋನ್ನಿಂದ ಮತ್ತೊಂದು ಫೋನ್ಗೆ ವ್ಯಾಟ್ಸ್ಆಯಪ್ನ ಚಾಟ್ಗಳನ್ನು ಯಾವುದೇ ಅಡೆ ತಡೆ ಇಲ್ಲದೆ ಟ್ರಾನ್ಸ್ಫರ್ ಮಾಡಲು ಈ ಫೀಚರ್ನಿಂದ ಸಾಧ್ಯವಿದೆ. ಹಳೇ ಫೋನ್ನಿಂದ ಹೊಸ ಫೋನ್ಗೆ ಚಾಟ್ ಟ್ರಾನ್ಸ್ಫರ್ ಸುಲಭವಾಗಿ ಮಾಡಲು ಸಾಧ್ಯವಿದೆ. ಹೊಸ ಫೀಚರ್ನಿಂದ ಐಫೋನ್ಗೂ ಚಾಟ್ ಟ್ರಾನ್ಸ್ಫರ್ ಮಾಡಲು ಸಾಧ್ಯವಿದೆ. ಇದರ ಜೊತೆಗೆ ವ್ಯಾಟ್ಸ್ಆಯಪ್ ಹೊಸ ಹೊಸ ಸ್ಟಿಕ್ಕರ್ ಬಿಡುಗಡೆ ಮಾಡಿದೆ
Posted by Vidyamaana on 2024-05-25 20:01:21 |
ಬೆಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ನೈಋತ್ಯ ಪದವೀಧರರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ರಘುಪತಿ ಭಟ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಉಚ್ಚಾಟನೆ ಆದೇಶದಲ್ಲಿ ಏನಿದೇ?: ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ.