Posted by vidyamaana on 2024-07-01 19:16:06 |
ಬೆಂಗಳೂರು : ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.
ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.
ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.
Posted by Vidyamaana on 2023-12-07 13:41:00 |
ಹೈದರಾಬಾದ್: ಹೈದರಾಬಾದಿನ ಎಲ್ಬಿ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಅದ್ದೂರಿ ಕಾರ್ಯಕ್ರಮದಲ್ಲಿ ರೇವಂತ್ ರೆಡ್ಡಿ ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಹಾಗೂ ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತರಿದ್ದರು.
ಸುಮಾರು ಒಂದು ಲಕ್ಷ ಮಂದಿ ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
Posted by Vidyamaana on 2023-07-15 16:43:18 |
ಪುತ್ತೂರು: ಗೆಳೆಯರ ಬಳಗ ಬಪ್ಪಳಿಗೆ ಹಾಗೂ ಮೆಸ್ಕಾ ಸಿಬ್ಬಂದಿ ವರ್ಗದ ವತಿಯಿಂದ ನಮ್ಮ ಊರು ನಮ್ಮರಕ್ಷಣೆ ಧ್ಯೇಯದಡಿ ನಗರದ ಬಪ್ಪಳಿಗೆಯಿಂದ ಬಲ್ನಾಡುವರೆಗೆ ರಸ್ತೆ ಬದಿ ಇರುವ ಅಪಾಯಕಾರಿ ಮರದ ಕೊಂಬೆ ಹಾಗೂ ರಸ್ತೆ ಬದಿಯನ್ನು ಸ್ವಚ್ಛ ಮಾಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್ ಚಾಲನೆ ನೀಡಿದ್ರು. ಬಳಿಕ ಮಾತನಾಡಿದ ಅವರು, ರಸ್ತೆ ಬದಿಗಳಲ್ಲಿ ಹಲವಾರು ಅಪಾಯಕಾರಿ ಮರಗಳು ಇರುತ್ತವೆ. ಕೆಲವೊಮ್ಮೆ ಆ ಮರದ ಕೊಂಬೆಗಳು ಮಳೆಯ ಸಂದರ್ಭ ಅಪಾಯವನ್ನ ತಂದೊಡ್ಡುತ್ತವೆ. ಹೀಗಿರುವಾಗ ಅದನ್ನ ತೆರವುಗೊಳಿಸುವ ಕೆಲಸ ನಗರಸಭೆಯದ್ದಾಗಿದೆ. ಆದ್ರೆ ಇಲ್ಲಿ ಗೆಳೆಯರ ಬಳಗದ ತಂಡದವರು ನಗರಸಭೆ ಹಾಗೂ ಮೆಸ್ಕಾಂ ಸಿಬ್ಬಂದಿಗಳನ್ನ ಸೇರಿಸಿಕೊಂಡು ಇಂತಹ ಒಂದು ಉತ್ತಮ ಕಾರ್ಯಕ್ಕೆ ಕೈಹಾಕಿರುವುದು ಮೆಚ್ಚುವಂತದ್ದು ಎಂದು ಹೇಳಿದರು. ಇಂತಹ ಅನೇಕ ಕಾರ್ಯ ವೈಖರಿಗಳು ನಡೆಯಬೇಕು. ಜೊತೆಗೆ ಅಪಾಯನ್ನರಿತು ಇನ್ನೊಬ್ಬರಿಗೆ ತೊಂದರೆ ಆಗದಿರಲಿ ಎಂಬ ದೃಷ್ಟಿಯಿಂದ ಇಂತಹ ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸುವಂತ ಕೆಲಸ ಉತ್ತಮವಾದುದು ಎಂದು ಈ ಸಂದರ್ಭ ತಿಳಿಸಿದರು. ಇನ್ನು ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಮುಂದಾಳು ರಝಾಕ್ ಬಿ.ಎಚ್, ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್, ಮೆಸ್ಕಾಂ ಅಧಿಕಾರಿಗೆ ಗೆಳೆಯರ ಬಳಗದ ವತಿಯಿಂದ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಗೆಳೆಯರ ಬಳಗದ ಮೋನು ಬಪ್ಪಳಿಗೆ ರಝಾಕ್ ಬಿ.ಎಚ್, ರಮೀಝ್ ಬಪ್ಪಳಿಗೆ, ಶರೀಫ್ ಬಪ್ಪಳಿಗೆ, ಅಮನ್ ಬಪ್ಪಳಿಗೆ, ಉರೈಸ್ ಬಪ್ಪಳಿಗೆ, ಉಮ್ಮರ್ ಬಪ್ಪಳಿಗೆ, ಹುಸೈನ್ ಬಪ್ಪಳಿಗೆ, ಮಸೂದ್ ಬಪ್ಪಳಿಗೆ, ಹರೀಶ್ ಬಪ್ಪಳಿಗೆ, ಸುಭಾಷ್, ಅದ್ದು ಪಡೀಲ್, ಸಜಾಬ್ ಬಪ್ಪಳಿಗೆ, ಅಬ್ಬಾಸ್ ಬಪ್ಪಳಿಗೆ, ಅಲ್ತಾಫ್ ಎಸ್. ಕೆ...ಮೆಸ್ಕಾಂ ಸಿಬ್ಬಂದಿಗಳು, ನಗರಸಭೆ ಸಿಬ್ಬಂದಿಗಳು ಭಾಗಿಯಾದರು.
Posted by Vidyamaana on 2024-01-17 12:30:31 |
ಬೆಂಗಳೂರು : ಜನವರಿ 19 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಅಂದು 1:05 ಕ್ಕೆ ವಿಶೇಷ ವಿಮಾನದ ಮೂಲಕ ಕಲಬುರಗಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.ಅಂದು ಮಧ್ಯಾಹ್ನ 2:10 ಕ್ಕೆ ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ಗೆ ಆಗಮಿಸಲಿದ್ದಾರೆ.2:15 ಕ್ಕೆ ಕೆಐಎಎಲ್ ನಿಂದ ರಸ್ತೆ ಮಾರ್ಗವಾಗಿ ದೇವನಹಳ್ಳಿ ತಾಲೂಕಿನ ಭಟ್ಟರ ಮಾರನಹಳ್ಳಿಗೆ ಪ್ರಯಾಣ ಮಾಡಲಿದ್ದಾರೆ. 2:45 ಕ್ಕೆ ಭಟ್ಟರಮಾರನಹಳ್ಳಿಗೆ ತಲುಪಲಿದ್ದಾರೆ. ಬಿಐಇಟಿಸಿ ಉದ್ಘಾಟನೆ ಮತ್ತು ಬೋಯಿಂಗ್ ಸುಕನ್ಯಾ ಕಾರ್ಯಕ್ರಮ ಲೋಕಾರ್ಪಣೆ ಮಾಡಲಿದ್ದಾರೆ.
ಮಧ್ಯಾಹ್ನ 3:45 ಕ್ಕೆ ಭಟ್ಟರ ಮಾರನಹಳ್ಳಿಯಿಂದ ನಿರ್ಗಮಿಸಲಿದ್ದಾರೆ. 3:55 ಕ್ಕೆ ಕೆಐಎಎಲ್ಗೆ ತಲುಪಲಿದ್ದಾರೆ. ನಂತರ ಸಂಜೆ 4 ಗಂಟೆಗೆ ಕೆಐಎಎಲ್ನಿಂದ ಚೆನ್ನೆöÊಗೆ ನಿರ್ಗಮಿಸಲಿದ್ದಾರೆ.
Posted by Vidyamaana on 2023-10-10 15:33:54 |
ಮೂಡಬಿದಿರೆ : ಮೂಡಬಿದಿರೆಯ ಖಾಸಗಿ ಕಾಲೇಜಿನಲ್ಲಿ ಉದ್ಯೋಗಿಯಾಗಿರುವ ಯುವಕನೊಬ್ಬ ಹಾಸ್ಟೇಲ್ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಾಗಲಕೋಟೆಯ ನಿವಾಸಿ ಹನುಮಂತಪ್ಪ (24) ಎಂದು ಗುರುತಿಸಲಾಗಿದೆ.
ಯುವಕ ಜನವರಿಯಲ್ಲಿ ಖಾಸಗಿ ಕಾಲೇಜಿನಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಹನುಮಂತಪ್ಪನ ಹೆತ್ತವರು ಮೂಡುಬಿದಿರೆಗೆ ಬಂದ ನಂತರ ಮೃತದೇಹವನ್ನು ಅವರು ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಮೂಡಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
Posted by Vidyamaana on 2023-12-29 21:33:56 |
ಪುತ್ತೂರು :ಅಕ್ರಮವಾಗಿ ತಿಮಿಂಗಿಲದ ವಾಂತಿಯನ್ನು (ಅಂಬರ್ ಗ್ರೀಸ್) ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಎಂಬ ಪ್ರಕರಣದ ಆರೋಪಿ ಎನ್ನಲಾಗಿದ್ದ ಅಬೂಬಕ್ಕರ್ ಸಿದ್ದೀಕ್ ರವರಿಗೆ ಪುತ್ತೂರು ಹಿರಿಯ ವ್ಯವಹಾರಿಕ ನ್ಯಾಯಾಧೀಶರಾದ ಗೌಡ ಆರ್. ಪಿ ಅವರು ಜಾಮೀನು ಮಂಜೂರು ಮಾಡಿದ್ದಾರೆ.
ಪೋಲೀಸ್ ಸಿ.ಐ ಡಿ ಅರಣ್ಯ ಸಂಚಾರಿ ದಳ ಮಂಗಳೂರು ರವರು ತಮಗೆ ದೊರೆತ ಖಚಿತ ಮಾಹಿತಿಯ ಆಧಾರದಲ್ಲಿ ದಿನಾಂಕ 19 /12/2023 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುತ್ತೂರು ನಗರದ ಕೋರ್ಟ್ ರಸ್ತೆ ಬಳಿ ಅಂದರೆ ಪುತ್ತೂರು ಕೋರ್ಟ್ ನಿಂದ ಪುತ್ತೂರು ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣದ ಕಡೆಗೆ ಹೋಗುವ ಸಾರ್ವಜನಿಕರ ರಸ್ತೆಯಲ್ಲಿ ಸರ್ಕಾರದ ಪರವಾನಿಗೆ ಇಲ್ಲದೆ ಅಕ್ರಮವಾಗಿ K A.21 Z 3733 ನೇ ಮಾರುತಿ ಸುಜುಕಿ ಕಾರಿನಲ್ಲಿ ಅಕ್ರಮವಾಗಿ ಸುಮಾರು 3.5 ಕಿಲೋ ತೂಕದ ಕೋಟ್ಯಾಂತರ ಮೌಲ್ಯದ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಯನ್ನು ಬಂಧಿಸಿ ಹಾಗೂ ಕಾರನ್ನು ಮತ್ತು ಸೊತ್ತುಗಳನ್ನು ಪಂಚರ ಸಮಕ್ಷಮ ಮಹಜಾರು ಮೂಲಕ ವಶಪಡಿಸಿಕೊಂಡಿದ್ದು, ಆರೋಪಿಯ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯಿದೆ 1972 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು. ತದನಂತರ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿದಿಸಿತ್ತು. ಆರೋಪಿ ಅಬೂಬಕ್ಕರ್ ಸಿದ್ದೀಕ್ ತನ್ನ ಪರ ವಕೀಲರಾದ ಶ್ರೀ ಮಹೇಶ್ ಕಜೆಯವರ ಮುಖಾಂತರ ಮಾನ್ಯ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕರು ಆರೋಪಿ ಪರ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಅಕ್ಷೇಪವನ್ನು ಸಲ್ಲಿಸಿದ್ದರು. ವಾದ ವಿವಾದವನ್ನು ಆಲಿಸಿದ ಪುತ್ತೂರಿನ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯವು ಆರೋಪಿಗೆ ಶರ್ತಬದ್ಧ ಜಾಮೀನು ಮಂಜೂರು ಮಾಡಿದೆ.
Posted by Vidyamaana on 2023-09-01 16:21:30 |
ಮುಂಬಯಿ: ‘ನರೇಂದ್ರ ಮೋದಿ ಕೊಡುತ್ತೇನೆ ಎಂದು ಹೇಳಿದ 15 ಲಕ್ಷ ರೂ.ಗಾಗಿ ನಾನು, ನನ್ನ ಪತ್ನಿ,ಏಳು ಪುತ್ರಿಯರು ಸೇರಿ ಇಬ್ಬರು ಪುತ್ರರು 11 ಬ್ಯಾಂಕ್ ಖಾತೆಗಳನ್ನೂ ತೆರೆದೆವು’ ಎಂದು ಆರ್ ಜೆಡಿ ನಾಯಕ ಲಾಲು ಯಾದವ್ ತಮ್ಮ ಹಳೇ ಸ್ಟೈಲ್ ನಲ್ಲಿ ಹಾಸ್ಯ ಚಟಾಕಿ ಹಾರಿಸುವ ಮೂಲಕ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಗಮನ ಸೆಳೆದರು.
ಶುಕ್ರವಾರ ಇಂಡಿಯಾ ಮೈತ್ರಿಕೂಟದ ವೇದಿಕೆಯ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸರಕಾರ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ತಮ್ಮದೇ ಆದ ವಿಶಿಷ್ಟ ರೀತಿಯಲ್ಲಿ ಮಾತನಾಡಿದರು. ಈ ವೇಳೆ ಅಲ್ಲಿದ್ದ ನಾಯಕರು ನಗುತ್ತಿರುವುದು ಕಂಡು ಬಂತು. ತಮ್ಮ ಭಾಷಣದಲ್ಲಿ, ಮೈತ್ರಿಯಲ್ಲಿ ಭಾಗಿಯಾಗಿರುವ ಎಲ್ಲಾ ಪಕ್ಷಗಳು ಒಟ್ಟಾಗಿ ಹೋರಾಡುವ ಬಗ್ಗೆಯೂ ಲಾಲು ಹೇಳಿದರು.
‘ನನ್ನ ಹಾಗೂ ದೇಶದ ಇತರ ನಾಯಕರ ಹಣ ಸ್ವಿಸ್ ಬ್ಯಾಂಕ್ ನಲ್ಲಿದೆ ಎಂದು ಪ್ರಚಾರ ಮಾಡಿದ್ದರು. ನಾವು ಬರುತ್ತೇವೆ ಸ್ವಿಸ್ ಬ್ಯಾಂಕಿನಿಂದ ಹಣ ತಂದು ದೇಶದ ಎಲ್ಲ ಜನರಿಗೂ ಖಾತೆ ತೆರೆದು 15 ಲಕ್ಷ ರೂ.ರೂ.ಗಳನ್ನು ಠೇವಣಿ ಇಡುವುದಾಗಿ ಹೇಳಿದರು. ನಾವೂ ಬಲೆಗೆ ಬಿದ್ದೆವು’ ಎಂದರು.
‘ವಿರೋಧ ಪಕ್ಷಗಳು ಒಟ್ಟಿಗೆ ಇರದಿರುವ ಲಾಭವನ್ನು ಪ್ರಧಾನಿ ಮೋದಿ ಬಳಸಿಕೊಂಡಿದ್ದಾರೆ ಬೆಲೆಗಳು ನಿರಂತರವಾಗಿ ಏರುತ್ತಿವೆ’ ಎಂದು ಲಾಲು ಆರೋಪಿಸಿದರು