Posted by vidyamaana on 2024-06-30 19:31:43 |
ಕೋಟ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ವಯೋಸಹಜ ಅಸೌಖ್ಯದಿಂದ
ಜೂ.30ರಂದು ನಿಧನ ಹೊಂದಿದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ
Posted by Vidyamaana on 2024-01-17 21:00:50 |
ಪುತ್ತೂರು, ಜ.17: ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿ ಶುಭಲಕ್ಷ್ಮಿ(50) ಅಸಹಜ ರೀತಿಯಲ್ಲಿ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಒಳಮೊಗ್ರು ಗ್ರಾಮದ ಕೈಕಾರದಲ್ಲಿ ಇವರ ಮನೆಯಿದ್ದು ಬುಧವಾರ ಮಧ್ಯಾಹ್ನ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮನೆಯ ಗುಡ್ಡದ ಮೇಲೆ ಮಣ್ಣಿನ ಟ್ಯಾಂಕಿ ನಿರ್ಮಿಸಿದ್ದು ಅದಕ್ಕೆ ಟಾರ್ಪಾಲು ಹಾಕಿ ನೀರು ನಿಲ್ಲಿಸಲಾಗಿತ್ತು. ಬೆಳಗ್ಗೆ ಹನ್ನೊಂದು ಗಂಟೆ ವರೆಗೆ ಪ್ರಕಾಶ್ಚಂದ್ರ ರೈ ಮನೆಯಲ್ಲಿದ್ದು ಆನಂತರ ಹೊರಗೆ ತೆರಳಿದ್ದರು. ಮಧ್ಯಾಹ್ನ ಒಂದೂವರೆ ಗಂಟೆ ವೇಳೆಗೆ ಹೋಗಿ ನೋಡಿದಾಗ ಪತ್ನಿ ಇರಲಿಲ್ಲ. ಹುಡುಕಾಟದ ವೇಳೆ ತೊಟ್ಟಿಯಲ್ಲಿ ಶವ ಪತ್ತೆಯಾಗಿದೆ. ಮಗಳು ಕಾಲೇಜಿಗೆ ಹೋಗಿದ್ದು ಮನೆಯಲ್ಲಿ ಕೆಲಸದವರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಕಾಲುಜಾರಿ ನೀರಿನ ತೊಟ್ಟಿಗೆ ಬಿದ್ದಿದ್ದು, ಆ ಸಂದರ್ಭದಲ್ಲಿ ಯಾರೂ ಇಲ್ಲದ ಕಾರಣ ಅಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪತಿ ಪ್ರಕಾಶ್ಚಂದ್ರ ರೈ ಗ್ರಾಮಾಂತರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಗೋಪಾಲಕೃಷ್ಣ ಹೇರಳೆ, ಸಾಜ ರಾಧಾಕೃಷ್ಣ ಆಳ್ವ, ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತಿತರರು ಭೇಟಿ ನೀಡಿದ್ದರು.
Posted by Vidyamaana on 2023-11-22 22:05:09 |
ಬೆಳ್ತಂಗಡಿ : ನಕ್ಸಲ್ ಪೀಡಿತ ಪ್ರದೇಶದಲ್ಲಿ ರಾತ್ರಿ ಐದು ಜನ ಅಪರಿಚಿತರ ತಂಡವೊಂದು ಬಾಗಿಲು ಬಡಿದು ವಿಚಾರಿಸಿರುವ ಘಟನೆ ನ. 21 ರಂದು ರಾತ್ರಿ ಕುತ್ಲೂರಿನಲ್ಲಿ ನಡೆದಿರುವ ಘಟನೆಗೆ ಇದೀಗ ರೋಚಕ ಟ್ವಿಸ್ಟ್ ಸಿಕ್ಕಿದೆ. ಮನೆಗೆ ಬಂದಿರುವುದು ನಕ್ಸಲ್ ಅಲ್ಲ ವಂಚನೆ ಪ್ರಕರಣದಲ್ಲಿ ಹಗಲು ಹೊತ್ತು ಜೋಸಿ ಆಂಟೋನಿ ಸಿಕ್ಕಿಲ್ಲ ಎಂದು ರಾತ್ರಿ ಹೊತ್ತು ಮಂಗಳೂರು ಕಮೀಷನರ್ ರೇಟ್ ವ್ಯಾಪ್ತಿಯ ಮೂಡಬಿದರೆ ಪೊಲೀಸ್ ಠಾಣೆಯ ಪೊಲೀಸರು ಹೋಗಿದ್ದರು ಈ ಬಗ್ಗೆ ವೇಣೂರು ಮತ್ತು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ಇರಲ್ಲಿಲ್ಲ ಎಂದು ನ.22 ರಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ರಿಷ್ಯಂತ್ ಸ್ವಷ್ಟಪಡಿಸಿದ್ದಾರೆ.
*ಘಟನೆ ವಿವರ:* ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಪೂಂಕಾಜೆ ಮನೆಗೆ ನ.21 ರಂದು ರಾತ್ರಿ ಅಪರಿಚಿತರ ಐದು ಜನರ ತಂಡವೊಂದು ಎಂಟ್ರಿಯಾಗಿ ಬಾಗಿಲು ಓಪನ್ ಮಾಡಲು ಪ್ರಯತ್ನ ಪಟ್ಟಿದ್ದು ಬಾಗಿಲು ತೆರೆಯದೆ ಇದ್ದಾಗ ರಾಡ್ ನಿಂದ ಬಾಗಿಲು ತೆರೆಯಲು ಬಡಿದ್ದಾರೆ ತಕ್ಷಣ 112 ಕಂಟ್ರೋಲ್ ರೂಂ ಹಾಗೂ ವೇಣೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ,ವೇಣೂರು ಪೊಲೀಸರು, 112 ಸಿಬ್ಬಂದಿಗಳು ಮನೆಗೆ ದೌಡಾಯಿಸಿ ಮಾಹಿತಿ ಪಡೆದುಕೊಂಡು ಹೋಗಿದ್ದರು.
*ಪೊಲೀಸರ ಬಗ್ಗೆ ನಾಟಕವಾಡಿದ್ದ ಜೋಸಿ:* ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮ ಪೂಂಜಾಜೆ ಮನೆಯ ನಿವಾಸಿ ಜೋಸಿ ಆಂಟೋನಿ ಮತ್ತು ಮಂಜುಳಾ ದಂಪತಿಗಳ ಮನೆಗೆ ನ.21 ರಂದು ರಾತ್ರಿ 9:30 ರ ಸಮಯಕ್ಕೆ ಬ್ಲೂ ಬಣ್ಣದ ಡ್ರೆಸ್ ಹಾಕಿದ ನಾಲ್ಕು ಮಂದಿ ಪುರುಷರು ಮತ್ತು ಪೊಲೀಸ್ ಡ್ರೆಸ್ ಹಾಕಿದ ಒಬ್ಬರು ಮಹಿಳೆ ಮನೆಗೆ ಎಂಟ್ರಿಯಾಗಿ ಬಾಗಿಲು ಬಡಿದ್ದಾರೆ. ಯಾರು ಅಂತ ಕೇಳಿದಾಗ ವೇಣೂರು ಪೊಲೀಸರು ಜೋಸಿ ಬಾಗಿಲು ತೆಗೆಯಿರಿ ಮಾತನಾಡಲು ಇದೆ ಅಂದಿದ್ದಾರೆ. ಆದ್ರೆ ದಂಪತಿಗಳು ಬಾಗಿಲು ತೆಗೆಯದೆ ವೇಣೂರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ಕೇಳಿದ್ದಾರೆ ಆಗ ವೇಣೂರು ಪೊಲೀಸರು ನಮ್ಮ ಪೊಲೀಸರು ಬಂದಿಲ್ಲ ಎಂದಿದ್ದಾರೆ. ತಕ್ಷಣ 112 ಕಂಟ್ರೋಲ್ ರೂಂಗೆ ಕರೆ ಮಾಹಿತಿ ವಿಚಾರ ತಿಳಿಸಿದ್ದಾರೆ. ಕರೆ ಮಾಡುವ ಬಗ್ಗೆ ಐದು ಜನರಿಗೆ ಕೇಳಿಸಿದ್ದು. ತಕ್ಷಣ ಸ್ಥಳದಿಂದ ವಾಪಸ್ ಹೋಗಿದ್ದಾರೆ ನಂತರ 112 ಸಿಬ್ಬಂದಿಗಳು ,ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಹಾಗೂ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀ ಶೈಲಾ ಮತ್ತು ತಂಡದ ಪೊಲೀಸರು ಮನೆಗೆ ಬಂದು ಮಾಹಿತಿ ಪಡೆದುಕೊಂಡು ರಾತ್ರಿ 2 ಗಂಟೆಗೆ ವಾಪಸ್ ಹೋಗಿದ್ದಾರೆ. ಐದು ಜನ ಮನೆಗೆ ಬಂದವರು ಪೊಲೀಸ್ ರೀತಿಯಲ್ಲಿ ಇರಲ್ಲಿಲ್ಲ ನಮಗೆ ಅನುಮಾನ ಇದೆ ಈ ಐದು ಜನರ ವಿಚಾರದಲ್ಲಿ ,ಅದಲ್ಲದೆ ನಕ್ಸಲ್ ಬಂದಿರುವ ಅನುಮಾನ ಕೂಡ ಇದೆ ಎಂದು ಮನೆಯ ಯಜಮಾನ ಜೋಸಿ ಆಂಟೋನಿ ಸುಳ್ಳು ಮಾಹಿತಿಯನ್ನು ಮಾಧ್ಯಮಗಳಿಗೆ ನೀಡಿದ್ದರು.
*ಜಾಗದ ವಿಚಾರದಲ್ಲಿ ದೂರು ಅರ್ಜಿ:* ಜೋಸಿ ಆಂಟೋನಿ ಒಂದೇ ಜಾಗವನ್ನು ಬೆಂಗಳೂರಿನ ಸುಹನಾ ಎಂಬವರು 45 ಲಕ್ಷಕ್ಕೆ ಅಗ್ರಿಮೆಂಟ್ ಮಾಡಿದ್ದು ಇದರಲ್ಲಿ 24 ಲಕ್ಷ ಚೆಕ್ ನೀಡಿದ್ದರು ಹಾಗೂ ಬೆಂಗಳೂರಿನ ಶರತ್ ಎಂಬವರಿಗೆ 48 ಲಕ್ಷಕ್ಕೆ ಅಗ್ರಿಮೆಂಟ್ ಮಾಡಿ 19 ಲಕ್ಷದ ಚೆಕ್ ನೀಡಿದ್ದರು ಇಬ್ಬರಿಗೂ ಜೋಸಿ ಆಂಟೋನಿ ವಂಚನೆ ಮಾಡಿದ್ದ ಈ ಪ್ರಕರಣದ ಬಗ್ಗೆ ಎರಡು ನೊಂದ ವ್ಯಕ್ತಿಗಳು ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಗೆ ದೂರು ಅರ್ಜಿ ನೀಡಿದ್ದರು ಈ ಸಂಬಂಧ ಕಳ್ಳಾಟ ಮಾಡಿದ್ದರಿಂದ ತಪ್ಪಿಸಿಕೊಳ್ಳಲು ಮೂಡಬಿದರೆ ಪೊಲೀಸರನ್ನು ನಕ್ಸಲರು ಎಂದು ಬಿಂಬಿಸಿ ವೇಣೂರು, 112 ಪೊಲೀಸರಿಗೆ ಕರೆ ಮಾಡಿ ನಾಟಕವಾಡಿರುವುದು ಇದೀಗ ಬೆಳಕಿಗೆ ಬಂದಿದೆ. ಈ ಪ್ರಕರಣದ ಬಗ್ಗೆ ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಕೂಡ ಸ್ವಷ್ಟಪಡಿಸಿದ್ದಾರೆ.
Posted by Vidyamaana on 2023-09-23 07:45:36 |
ಉಳ್ಳಾಲ: ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜ್ವರಕ್ಕೆ ಚಿಕಿತ್ಸೆಗೆಂದು ತೆರಳಿದ್ದ ತಾಯಿ, ಮಗಳಿಗೆ ಶಿಲೀಂದ್ರ ಲೇಪಿತ ಮಾತ್ರೆಗಳನ್ನು ನೀಡಿದ ಘಟನೆ ನಡೆದಿದ್ದು, ದೂರಿಗೆ ಸ್ಪಂದಿಸಿದ ಜಿಲ್ಲಾ ಆರೋಗ್ಯಾಧಿಕಾರಿ ತಕ್ಷಣ ಅಲ್ಲಿಗೆ ನೀಡಿರುವ ಪ್ಯಾರಾ ಸಿಟಮಾಲ್ ಮಾತ್ರೆಗಳನ್ನ ಹಿಂಪಡೆದಿದ್ದಾರೆ.
ಕೋಟೆಕಾರು, ಬೀರಿ ಬಳಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಿನ್ನೆ ಮಧ್ಯಾಹ್ನ ಕೆ.ಸಿ ನಗರ ನಿವಾಸಿ ಮಹಿಳೆಯೊಬ್ಬರು ತನ್ನ ಆರನೇ ತರಗತಿಯ ಮಗಳು ರಾಫಿಯಾ ಜೊತೆ ಜ್ವರಕ್ಕೆ ಚಿಕಿತ್ಸೆ ಪಡೆಯಲು ತೆರಳಿದ್ದರು. ಇಬ್ಬರನ್ನೂ ಪರೀಕ್ಷೆ ನಡೆಸಿದ ವೈದ್ಯರು ಎರಡು ದಿವಸಗಳ ಔಷಧಿಗಳನ್ನ ನೀಡಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದೊಳಗೆ ಔಷಧಿ ಸೇವಿಸಲು ಮುಂದಾದಾಗ ಪ್ಯಾರಾ ಸಿಟಮಾಲ್ ಮಾತ್ರೆಯ ಬಣ್ಣ ಬದಲಾಗಿ ಶಿಲೀಂದ್ರ ಆವರಿಸಿತ್ತು. ಈ ಬಗ್ಗೆ ವಿಚಾರಿಸಿದಾಗ ಆರೋಗ್ಯ ಕೇಂದ್ರದ ಸಿಬ್ಬಂದಿ ಎಲ್ಲಾ ಮಾತ್ರೆಗಳು ಹೀಗೇ ಇವೆ, ಏನಾಗುವುದಿಲ್ಲವೆಂದು ಬಾಲಿಶ ಉತ್ತರ ನೀಡಿದ್ದರಂತೆ.
ಆನಂತರ ಮಾಜಿ ಗ್ರಾಮ ಪಂಚಾಯತ್ ಸದಸ್ಯರೋರ್ವರು ಶಿಲೀಂದ್ರ ಆವರಿಸಿದ್ದ ಮಾತ್ರೆಯ ವೀಡಿಯೋ ತೆಗೆದು ಜಿಲ್ಲಾ ಆರೋಗ್ಯಾಧಿಕಾರಿಯ ವಾಟ್ಸಪ್ ಕಳಿಸಿದ್ದಾರೆ. ತಕ್ಷಣ ಸ್ಪಂದನೆ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಎಚ್.ಆರ್ ತಿಮ್ಮಯ್ಯ, ಕೋಟೆಕಾರು ಆರೋಗ್ಯ ಕೇಂದ್ರಕ್ಕೆ ನೀಡಿರುವ ಪ್ಯಾರಸೆಟಮೋಲ್ ಮಾತ್ರೆಗಳನ್ನು ಹಿಂದಕ್ಕೆ ತರಿಸಿಕೊಂಡಿದ್ದಾರೆ.
ಹೆಡ್ ಲೈನ್ ಕರ್ನಾಟಕಕ್ಕೆ ಪ್ರತಿಕ್ರಿಯೆ ನೀಡಿದ ಅವರು ಎರಡು ಬ್ಯಾಚ್ ನ ಪ್ಯಾರಾಸೆಟಮೋಲ್ ಮಾತ್ರೆಗಳಲ್ಲಿ ಕೆಲವು ಸ್ಟ್ರಿಪ್ ಗಳ ಮಾತ್ರೆಗಳಿಗೆ ಶಿಲೀಂದ್ರ ಆವರಿಸಿದೆ. 2025 ರ ಜನವರಿ ತಿಂಗಳ ವರೆಗೆ ಮಾತ್ರೆಗಳು ಬಳಕೆಗೆ ಯೋಗ್ಯವಾಗಿದ್ದರೂ ಮಾತ್ರೆಗಳ ವಿತರಣೆಯನ್ನ ನಿಲ್ಲಿಸಿ ಎಲ್ಲವನ್ನು ಹಿಂಪಡೆದಿದ್ದು ಅದನ್ನ ಬೆಂಗಳೂರಿಗೆ ಪರೀಕ್ಷೆಗೆ ಕಳಿಸಲಾಗುವುದು. ಜಿಲ್ಲೆಯ ಉಳಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ಯಾರ ಸೆಟಮೋಲ್ ಮಾತ್ರೆಗಳನ್ನ ಹಿಂಪಡೆದು ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
Posted by Vidyamaana on 2023-02-05 03:16:52 |
ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಭರ್ಜರಿಯಾಗಿ ಎಲ್ಲಾ ಪಕ್ಷಗಳು ತಯಾರಿ ನಡೆಸುತ್ತಿರುವ ಬೆನ್ನಲೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯಾಗಿ ಅಣ್ಣಾಮಲೈ ಅವರನ್ನು ನೇಮಕ ಮಾಡಲಾಗಿದೆ.
ಧರ್ಮೇಂದ್ರ ಪ್ರಧಾನ್ ಅವರನ್ನು ಉಸ್ತುವಾರಿಯಾಗಿ ಹಾಗೂ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಅಣ್ಣಾಮಲೈ ಅವರನ್ನು ಸಹ-ಪ್ರಭಾರಿಯಾಗಿ ಬಿಜೆಪಿ ನೇಮಕ ಮಾಡಲಾಗಿದೆ.
ಕೆ.ಅಣ್ಣಾಮಲೈ ಕರ್ನಾಟಕದಲ್ಲಿ ಪೊಲೀಸ್ಅಧಿಕಾರಿಯಾಗಿ ಕೆಲಸ ಮಾಡಿದ್ದರು. ಇದರಿಂದ ಅವರಿಗೆ ಕರ್ನಾಟಕದ ಬಗ್ಗೆ ಸರಿಯಾಗಿ xತಿಳಿದಿರುವುದರಿಂದ ಅವರನ್ನು ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ.
Posted by Vidyamaana on 2024-04-03 15:32:17 |
ಮಂಗಳೂರು : ದ.ಕ. ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ನಾಮಪತ್ರ ಸಲ್ಲಿಸುವ ಮುನ್ನ ಬೆಳಗ್ಗೆ 9:30ಕ್ಕೆ ಕುದ್ರೋಳಿ ದೇವಸ್ಥಾನದಿಂದ ಮೆರವಣಿಗೆಯ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪದ್ಮರಾಜ್ ಅವರು ನಾಮಪತ್ರ ಸಲ್ಲಿಸಿದ್ದಾರೆ.
Posted by Vidyamaana on 2023-09-29 11:28:59 |
ಪುತ್ತೂರು : ತೋಡಾರು ಶಂಸುಲ್ ಉಲಮಾ ಅರಬಿಕ್ ಕಾಲೇಜಿನ ಸಂತತಿ ಬಪ್ಪಳಿಗೆ ನೂರುಲ್ ಹುದಾ ಮದ್ರಸದ ಹಳೆ ವಿದ್ಯಾರ್ಥಿ ಪಟ್ಟಿಕ್ಕಾಡ್ ಜಾಮಿಆಃ ನೂರಿಯದಲ್ಲಿ 2022 ನೇ ಸಾಲಿನ ಫಿಕ್ಹ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಫೈಝಿ ಅಲ್ ಮಅಬರಿ ಪದವಿ ಪಡೆದ ಮುಹಮ್ಮದ್ ಶಫೀಕ್ ರನ್ನು ಬಪ್ಪಳಿಗೆಯಲ್ಲಿ ನಡೆದ ಮೀಲಾದ್ ಸಮಾರಂಭದಲ್ಲಿ ಅದ್ದೂರಿಯಾಗಿ ಸನ್ಮಾನಿಸಲಾಯಿತು.
ಸ್ಥಳೀಯ ಸಾಮಾಜಿಕ ಸೇವಾ ಸಂಘಟನೆಯಾದ *BGF ಬಪ್ಪಳಿಗೆ ಗ್ಲೋಬಲ್ ಫ್ರೆಂಡ್ಸ್* ಈ ಸನ್ಮಾನವನ್ನು ಜಮಾಅತರ ಪರವಾಗಿ, ಮಸೀದಿ ವಠಾರದಲ್ಲಿ ನಡೆದ ಮೀಲಾದ್ ಕಾರ್ಯಕ್ರಮದಲ್ಲಿ ಹಮ್ಮಿಕೊಂಡಿತ್ತು.
ಶಾಲು ಹೊದಿಸಿ,ಐದು ಸಾವಿರ ರೂಪಾಯಿಯನ್ನೊಳಗೊಂಡ ನಗದು, ಸನ್ಮಾನ ಫಲಕ ಹಾಗೂ ಅಮೂಲ್ಯ ಗ್ರಂಥಗಳನ್ನು ನೀಡಿ ಯುವ ವಿದ್ವಾಂಸನನ್ನು ಸಂಘಟಕರು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಜಮಾಅತ್ ಸಮಿತಿ ಪದಾಧಿಕಾರಿಗಳು, ಅನ್ಸಾರುಲ್ ಇಸ್ಲಾಂ ಯುವಕ ಸಮಿತಿ ಕಾರ್ಯಕರ್ತರು, ಬಪ್ಪಳಿಗೆ ಈದ್ ಮಿಲಾದ್ ಸಮಿತಿಯ ಸಾರಥಿಗಳು, ಮಸೀದಿ ಮದ್ರಸದ ಉಸ್ತಾದರು ಹಾಗೂ ಜಮಾಅತ್ ಬಾಂಧವರು ಉಪಸ್ಥಿತರಿದ್ದರು.
ಹಿರಿಯ ವಿದ್ವಾಂಸರಾಗಿದ್ದ ಮರ್ಹೂಂ ಅಬ್ದುಲ್ ಖಾದಿರ್ ಫೈಝಿ ಬಪ್ಪಳಿಗೆ ಹಾಗೂ ಝೈನಬ ದಂಪತಿಗಳ ಗಂಡು ಮಕ್ಕಳಲ್ಲಿ ಕಿರಿಯವರೇ ಮುಹಮ್ಮದ್ ಶಫೀಕ್.
ಮಕ್ಕಳಿಗೆ ಬೇಕಾದ ಧಾರ್ಮಿಕ ಮತ್ತು ಲೌಕಿಕ ವಿದ್ಯಾಭ್ಯಾಸಗಳೆರಡನ್ನೂ ನೀಡಿ ಜೀವನದ ಉತ್ತಮ ದಾರಿಯನ್ನು ಕಂಡುಕೊಳ್ಳುವಲ್ಲಿ ಮಕ್ಕಳಿಗೆ ಸರಿಯಾದ ದಾರಿ ತೋರುವಲ್ಲಿ ಮರ್ಹೂಂ ಅಬ್ದುಲ್ ಖಾದರ್ ಫೈಝಿ ಉಸ್ತಾದರು ಯಶಸ್ವಿಯಾಗಿದ್ದಾರೆ.ಗಂಡು ಮಕ್ಕಳ ಪೈಕಿ ಮೂರು ಮಂದಿ ವಿದೇಶ ಉದ್ಯೋಗದಲ್ಲಿದ್ದು ಕಿರಿಯ ಮಗನಾದ ಶಫೀಕ್ ನನ್ನು ಓರ್ವ ಧಾರ್ಮಿಕ ವಿದ್ವಾಂಸ(ಆಲಿಂ)ನನ್ನಾಗಿ ಮಾಡಬೇಕೆಂದು ನನ್ನ ಆಸೆ ಎಂದು ಬಪ್ಪಳಿಗೆ ಮದ್ರಸದ ಒಂದನೇ ತರಗತಿಗೆ ದಾಖಲು ಮಾಡುವಾಗ ಹೇಳಿದ್ದರು.
ಮದ್ರಸದ ಒಂದನೇ ತರಗತಿಯಲ್ಲಿ ಆತೂರು ಕುದ್ಲೂರಿನ ನಝೀರ್ ಮದನಿ ಉಸ್ತಾದರು ಅಧ್ಯಾಪಕರಾಗಿದ್ದು, ಒಂದನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ
ತ್ರಪ್ತಿ ದಾಯಕ ಅಂಕಗಳು ಶಫೀಕ್ ಪಡೆದಿಲ್ಲ ಎಂಬ ಮಾಹಿತಿಯನ್ನು ಅವರು ಅಂದು ಮದ್ರಸಾ ಮುಖ್ಯೋಪಾಧ್ಯಾಯರಾಗಿದ್ದ ನನ್ನ ಗಮನಕ್ಕೆ ತಂದಾಗ ಮರ್ಹೂಂ ಫೈಝಿ ಉಸ್ತಾದರಿಗೆ ಈ ಮಾಹಿತಿಯನ್ನು ನಾನು ತಿಳಿಸಿ,ಇನ್ನೊಂದು ವರ್ಷ ಒಂದನೇ ತರಗತಿಯಲ್ಲೇ ಕಲಿಯುವುದಾದರೆ ಮುಂದಿನ ಭವಿಷ್ಯ ಒಳ್ಳೆಯ ದಾಗಲಿದೆ ಎಂದಾಗ ,ಅವನ ಹಿತಕ್ಕಾಗಿ ನೀವು ಕೈಗೊಳ್ಳುವ ಎಲ್ಲಾ ಕ್ರಮಗಳಿಗೆ ನಾನು ಬದ್ಧ ಎಂದರು.
ಅಲ್ಲಿಂದ ಮತ್ತೆ ಪ್ರಾರಂಭವಾಯಿತು,ಶಫೀಕನ ಕಲಿಕೆಯ ಛಲ.ಮುಂದಿನ ಎಲ್ಲಾ ತರಗತಿಗಳಲ್ಲೂ ಪ್ರಥಮನಾಗಿ,ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ರೇಂಜ್ ಮಟ್ಟದಲ್ಲಿಯೇ ಉನ್ನತ ಸಾಧನೆಗೈದು, ಉತ್ತಮ ನಡವಳಿಕೆಯ ವಿದ್ಯಾರ್ಥಿ ಯಾಗಿ ಗುರುಹಿರಿಯರ ಸಂಪೂರ್ಣ ತೃಪ್ತಿ ಗಳಿಸಿದ್ದ.
ಹತ್ತನೇ ತರಗತಿಯ ಬಳಿಕ ತಂದೆಯ ಅಭಿಲಾಷೆಯಂತೆ ಜಾಮಿಆಃ ನೂರಿಯಾದ ಸಂತತಿಯಾಗಿ ,ಧರ್ಮ ಪ್ರಬೋಧನೆಯ ಕುಡಿಯಾಗಬೇಕೆಂದು ಪ್ರತಿಷ್ಠಿತ ತೋಡಾರು ಶಂಸುಲ್ ಉಲಮಾ ಅರಬಿಕ್ ಕಾಲೇಜಿನಲ್ಲಿ ಪ್ರವೇಶಾತಿ ಪಡೆದ.(ವಿದ್ಯಾರ್ಥಿಯಾಗಿದ್ದ ಈ ಮಗನೇ ತಂದೆಯ ಜನಾಝ ನಮಾಝಿಗೆ ನೇತ್ರತ್ವವನ್ನು ನೀಡಿದ್ದರು.)ಕಾಲೇಜಿನ ಅಧ್ಯಯನ ವರ್ಷಗಳನ್ನು
ಪ್ರತಿಭಾನ್ವಿತನಾಗಿ ಪೂರೈಸಿ, ಜಾಮಿಆಃ ನೂರಿಯಾದಲ್ಲಿ ಸೇರಿ, ಅಧ್ಯಯನಕ್ಕೆ ಫಿಖ್ಹ್ ವಿಭಾಗವನ್ನು ಆಯ್ಕೆ ಮಾಡಿ,ಅಂತಿಮ ಪರೀಕ್ಷೆಯಲ್ಲಿ ಘಟಾನುಘಟಿ ವಿದ್ಯಾರ್ಥಿ ಗಳೆಡೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಮಹ್ಬರಿ ಫೈಝಿ ಪಟ್ಟ ಅಲಂಕರಿಸಿ ಬಪ್ಪಳಿಗೆಗೆ ಕೀರ್ತಿ ತಂದ ಶಫೀಕ ರನ್ನು ಅಭಿನಂದಿಸಿ ಈ ಸನ್ಮಾನವನ್ನು ನೀಡಲಾಯಿತು.
ಪ್ರಸ್ತುತ ಶಫೀಕ್ ಫೈಝಿಯವರು ಕಿನ್ಯದ ವಾದೀ ತೈಬ ಅಕಾಡೆಮಿಯಲ್ಲಿ ಮುದರ್ರಿಸರಾಗಿ ಸೇವೆ ಸಲ್ಲಿಸುತ್ತಿದ್ದು,ಮುಂದಿನ ಜೀವನ ಇನ್ನಷ್ಟು ಬೆಳಗಿ ಅವರ ವಿದ್ವತ್ ಸಂಪತ್ತು ಸಮುದಾಯಕ್ಕೆ ಬೆಳಕಾಗಲಿ...ಆಮೀನ್