ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಬಜ್ಪೆ: ಫಲ್ಗುಣಿ ನದಿಗೆ ಬಿದ್ದು ನೀರು ಪಾಲಾಗಿದ್ದ ಯುವಕನ ಮೃತದೇಹ ಪತ್ತೆ

Posted by Vidyamaana on 2023-11-23 12:49:32 |

Share: | | | | |


ಬಜ್ಪೆ: ಫಲ್ಗುಣಿ ನದಿಗೆ ಬಿದ್ದು ನೀರು ಪಾಲಾಗಿದ್ದ ಯುವಕನ ಮೃತದೇಹ ಪತ್ತೆ

ಬಜ್ಪೆ: ಫಲ್ಗುಣಿ ನದಿಗೆ ಬಿದ್ದು ನೀರು ಪಾಲಾಗಿದ್ದ ಕಾವೂರು ಆಕಾಶಭವನ ನಿವಾಸಿ ಪ್ರಭಾಕರ ಆಚಾರಿ ಎಂಬವರ ಪುತ್ರ ಪ್ರಶಾಂತ್ ಕುಮಾರ್ ಅವರ ಮೃತದೇಹ ಇಂದು ಮಧ್ಯಾಹ್ನ ಪತ್ತೆಯಾಗಿದೆ.ಮಂಗಳವಾರ ಬೆಳಗ್ಗೆ ತನ್ನ ಗೆಳೆಯರೊಂದಿಗೆ ಪೊಳಲಿ ದೇವಸ್ಥಾನಕ್ಕೆ ತೆರಳಿದ್ದ ಪ್ರಶಾಂತ್‌ ಆಚಾರಿ, ಮಧ್ಯಾಹ್ನ 12 ಗಂಟೆಯ ಸುಮಾರಿಗೆ ನದಿಗೆ ಇಳಿದು ಸ್ನಾನ ಮಾಡಿದ್ದರು.ಬಳಿಕ ಅವರ ಶೂವೊಂದರ ದಾರ ನೀರಿನಲ್ಲಿ ಹೋಗಿದೆ ಎಂದು ಅದನ್ನು ಹುಡುಕಿ ನೀರಿಗೆ ಇಳಿದಿದ್ದ ವೇಳೆ ಅವರು ನದಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು ಎಂದು ಅವರ ಸ್ನೇಹಿತರು ನೀಡಿದ್ದ ದೂರಿನಲ್ಲಿ ತಿಳಿಸಿದ್ದಾರೆ.


ನಾಪತ್ತೆಯಾದ ಕುರಿತು ಮಾಹಿತಿ ತಿಳಿದೊಡನೆ ಬಜ್ಪೆ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪ್ರಶಾಂತ್‌ ಆಚಾರಿ ಅವರಿಗಾಗಿ ಶೋಧಕಾರ್ಯ ಆರಂಭಿಸಿದ್ದರು.


ಬುಧವಾರ ಸಂಜೆ 3 ಗಂಟೆಯ ಸುಮಾರಿಗೆ ಪ್ರಶಾಂತ್‌ ಆಚಾರಿ ಅವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ರಕರ್ತೆಯ ಮೃತದೇಹ ಕೆರೆಯಲ್ಲಿ ಪತ್ತೆ

Posted by Vidyamaana on 2024-08-29 06:24:03 |

Share: | | | | |


ಪತ್ರಕರ್ತೆಯ ಮೃತದೇಹ ಕೆರೆಯಲ್ಲಿ ಪತ್ತೆ

ಬಾಂಗ್ಲಾದೇಶದ ಪತ್ರಕರ್ತೆ ಸಾರಾ ರಹನುಮಾ ಅವರ ಮೃತದೇಹ ಬುಧವಾರ ಢಾಕಾದ ಹತಿರ್ಜೀಲ್ ಕೆರೆಯಲ್ಲಿ ಪತ್ತೆಯಾಗಿದೆ.33 ವರ್ಷದ ಸಾರಾ ಬಂಗಾಳಿ ಭಾಷೆಯ ಸುದ್ದಿವಾಹಿನಿಯ ನ್ಯೂಸ್‍ರೂಂ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಕ್ರಿಕೆಟರ್ ಕಾರಿಯಪ್ಪ ಪ್ರೇಮ ಪುರಾಣದಲ್ಲಿ ಬಿಗ್ ಟ್ವಿಸ್ಟ್: ಸ್ಪಿನ್ನರ್ ಗೆ ಎದುರಾಗುವ ಹೊಸ ಸಂಕಷ್ಟ ಯಾವುದು?

Posted by Vidyamaana on 2023-12-26 12:34:18 |

Share: | | | | |


ಕ್ರಿಕೆಟರ್ ಕಾರಿಯಪ್ಪ ಪ್ರೇಮ ಪುರಾಣದಲ್ಲಿ ಬಿಗ್ ಟ್ವಿಸ್ಟ್: ಸ್ಪಿನ್ನರ್ ಗೆ ಎದುರಾಗುವ ಹೊಸ ಸಂಕಷ್ಟ ಯಾವುದು?

ಬೆಂಗಳೂರು : ಕೆಲ ಸೆಲೆಬ್ರೆಟಿಗಳು ಬದುಕಲ್ಲಿ ಲವ್ , ಸೆಕ್ಸ್, ದೋಖಾ ಅನ್ನೊದು ಕಾಮನ್ ಏನೂ ಅನ್ನೋಷ್ಟರ ಮಟ್ಟಿಗೆ ಆಗಿಬಿಟ್ಟಿದೆ. ಹೌದು. ಇದೀಗ ಕರ್ನಾಟಕದ ಕ್ರಿಕೆಟಿಗರೊಬ್ಬರ ಮೇಲೆ ಇಂತಹದೇ ಆರೋಪ ಕೇಳಿ ಬಂದಿದೆ.. ಸದ್ಯ ಕ್ರಿಕೆಟರ್ ನ ಪ್ರೇಮ ಪುರಾಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಮಾಜಿ ಸೈನಿಕರೊಬ್ಬರ ಪುತ್ರಿ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಆ ಕುರಿತ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ….


ಕೊಡಗು ಮೂಲದ ಕ್ರಿಕೆಟಿಗ ಕೆ.ಸಿ.‌ಕಾರಿಯಪ್ಪ ವಿರುದ್ದ ಗಂಭೀರ ಆರೋಪ ಕೇಳಿ‌ ಬಂದಿದೆ.‌ಇನ್ಸ್ಟಾ ಗ್ರಾಮ್ ನಲ್ಲಿ ಪರಿಚಯವಾಗಿದ್ದ ಯುವತಿಯನ್ನ ಮದ್ವೆಯಾಗೋದಾಗಿ ನಂಬಿಸಿ ವಂಚಿಸಿದ್ದಾರಂತೆ. ಇನ್ನು ಕಾರಿಯಪ್ಪನಿಂದ ವಂಚನೆಗೊಳಗಾದ ಯುವತಿಯೂ ಕೊಡಗು ಮೂಲದವರಾಗಿದ್ದು, ಎರಡು ವರ್ಷಗಳ‌ ಹಿಂದೆ ಇಬ್ಬರಿಗೂ ಇನ್ಸ್ಟಾ ದಲ್ಲಿ‌ ಪರಿಚಯವಾಗಿತ್ತಂತೆ. ನಂತರ ಪರಿಚಯ ಪ್ರೇಮಕ್ಕೆ ತಿರುಗಿದ್ದು, ದೈಹಿಕ‌ ಸಂಪರ್ಕವೂ ಬೆಳೆಸಿ ಕೊನೆಗೆ ಸದ್ಯಕ್ಕೆ ಮಗು ಬೇಡ ಅಂತ ಅಬಾರ್ಷನ್ ಮಾಡಿಸಲು ಕಾರಿಯಪ್ಪನೇ ಬಲವಂತವಾಗಿ ಯುವತಿಗೆ ಮಾತ್ರೆ ನುಂಗಿಸಿದ್ದ ಎಂದು ಆರೋಪಿಸಲಾಗಿದೆ..


ಅದಾದ ಬಳಿಕ ಕಾರಿಯಪ್ಪ ಯುವತಿಯನ್ನ ಅವೈಡ್ ಮಾಡೋದಕ್ಕೆ ಶುರು ಮಾಡಿದ್ದಾನಂತೆ. ಅದೇ ವೇಳೆ ಕಾರಿಯಪ್ಪನ ಮತ್ತೊಬ್ಬ ಗರ್ಲ್ ಫ್ರೆಂಡ್ ಈ ಯುವತಿಗೆ ಕರೆ ಮಾಡಿ ವಿಚಾರಿಸಿದ್ದಾಳೆ‌.ಈ ವೇಳೆ ನನಗೆ ಮೋಸ ಮಾಡ್ತಿದ್ದೀಯ ನನ್ನನ್ನ ಮದ್ವೆಯಾಗು ಅಂತ ಒತ್ತಾಯಿಸಿದ್ದು, ಅದಕ್ಕೆ ಕಾರಿಯಪ್ಪ ವಿರೋಧ ವ್ಯಕ್ತಪಡಿಸಿದನಂತೆ. ಈ ಸಂಬಂಧ ನೊಂದ ಯುವತಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.


ಬಳಿಕ ಡ್ರಾಮ‌ ಶುರು ಮಾಡಿದ ಕಾರಿಯಪ್ಪ ಐಪಿಎಲ್ ಮುಗಿದ ಬಳಿಕ ಮದುವೆ ಆಗೋದಾಗಿ ನಂಬಿಸಿ ಕೇಸ್ ವಾಪಸ್ಸು ತೆಗೆಸಿಕೊಳ್ಳುವಂತೆ ಮಾಡಿದ್ದಾನಂತೆ.‌ನಂತರ ಮನೆಗೆ ಬಂದು ಮದ್ವೆಯಾಗೋದಾಗಿ ಮಾತುಕತೆ ಮಾಡಿ, ಟೂರ್ನಮೆಂಟ್ ಅದು ಇದು ಅಂತ ಅವೈಡ್ ಮಾಡಿದ್ದಾನಂತೆ. ಹೀಗಾಗಿ ಇದೀಗ ನನಗೆ ಮೋಸ ಮಾಡಿದ್ದಾನೆಂದು ಆರ್.ಟಿ. ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಾಳೆ. ಅತ್ತ ಕಾರಿಯಪ್ಪ ಸಹ ಯುವತಿ ವಿರುದ್ದ ಕೌಂಟರ್ ಕಂಪ್ಲೈಂಟ್ ದಾಖಲಿಸಿದ್ದು, ಯುವತಿ ನಡೆತೆ ಸರಿ ಇಲ್ಲ. ನನ್ನ ಮನೆ ಬಳಿ‌ಬಂದು ಗಲಾಟೆ ಮಾಡಿ, ಪೋಷಕರಿಗೆ ಬೆದರಿಕೆ ಹಾಕ್ತಾಳೆ ಅಂತ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಸದ್ಯ ಇಬ್ಬರು ಒಬ್ಬರಿಗೋಬ್ಬರು ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದು, ಇಬ್ಬರ ಜಗಳ ಪೊಲೀಸ್ ಠಾಣೆ ಮೆಟ್ಟಿಲೆರಿದ್ದು, ಮುಂದೆ ಇಬ್ಬರ ಪ್ರೇಮ ಪುರಾಣ ಎಲ್ಲಿಗೆ ಹೋಗಿ ನಿಲ್ಲುತ್ತೆ ಕಾದು ನೋಡಬೇಕು. ಕೆಲ ಸೆಲೆಬ್ರೆಟಿಗಳು ಬದುಕಲ್ಲಿ ಲವ್ , ಸೆಕ್ಸ್, ದೋಖಾ ಅನ್ನೊದು ಕಾಮನ್ ಏನೂ ಅನ್ನೋಷ್ಟರ ಮಟ್ಟಿಗೆ ಆಗಿಬಿಟ್ಟಿದೆ. ಹೌದು. ಇದೀಗ ಕರ್ನಾಟಕದ ಕ್ರಿಕೆಟಿಗರೊಬ್ಬರ ಮೇಲೆ ಇಂತಹದೇ ಆರೋಪ ಕೇಳಿ ಬಂದಿದೆ.. ಸದ್ಯ ಕ್ರಿಕೆಟರ್ ನ ಪ್ರೇಮ ಪುರಾಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಮಾಜಿ ಸೈನಿಕರೊಬ್ಬರ ಪುತ್ರಿ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆ ಕುರಿತ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ…


ಸದ್ಯ ಇಬ್ಬರು ಒಬ್ಬರಿಗೋಬ್ಬರು ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದು, ಇಬ್ಬರ ಜಗಳ ಪೊಲೀಸ್ ಠಾಣೆ ಮೆಟ್ಟಿಲೆರಿದ್ದು, ಮುಂದೆ ಇಬ್ಬರ ಪ್ರೇಮ ಪುರಾಣ ಎಲ್ಲಿಗೆ ಹೋಗಿ ನಿಲ್ಲುತ್ತೆ ಕಾದು ನೋಡಬೇಕು.

ಮಂಗಳಮುಖಿ ಸ್ನೇಹದಿಂದ ಲಿಂಗ ಪರಿವರ್ತನೆಗೆ ಮುಂದಾದ 3 ಮಕ್ಕಳ ತಾಯಿ

Posted by Vidyamaana on 2023-10-07 12:45:59 |

Share: | | | | |


ಮಂಗಳಮುಖಿ ಸ್ನೇಹದಿಂದ ಲಿಂಗ ಪರಿವರ್ತನೆಗೆ ಮುಂದಾದ 3 ಮಕ್ಕಳ ತಾಯಿ

ಹಾವೇರಿ, ಅಕ್ಟೋಬರ್​ 4: ಮೂರು ಮಕ್ಕಳ ತಾಯಿಯೊಬ್ಬರು (Mother) ಲಿಂಗ ಪರಿವರ್ತನೆಗೆ ಮುಂದಾಗಿದ್ದಾರೆ. ಮಂಗಳಮುಖಿಯ (Transgender) ಸ್ನೇಹದಿಂದಾಗಿ ಸದರಿ ಮಹಿಳೆಯು ಈ ಪರಿವರ್ತನೆ ಬಯಸಿದ್ದಾರೆ. ಇದು ಹಾವೇರಿ ಜಿಲ್ಲೆ ರಾಣೇಬೆನ್ನೂರಿನ ಮಹಿಳೆಯೊಬ್ಬರ ಕಥೆ. ಈ ಮಧ್ಯೆ, ಇದೇ ವಿಷಯವಾಗಿ ರಾಣೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸದರಿ ಮಹಿಳೆಯು ಮೂಲತಃ ವಿಜಯಪುರ ಜಿಲ್ಲೆಯವರು. ಸುಮಾರು 40 ವರ್ಷಗಳಿಂದ ರಾಣೇಬೆನ್ನೂರಿನಲ್ಲಿ (Ranebennur, Haveri district) ವಾಸವಿದ್ದಾರೆ. ಮಂಗಳಮುಖಿಯ ಜೊತೆಗೆ ಸ್ನೇಹದಿಂದಾಗಿ ಗಂಡನಿಗೆ ವಿಚ್ಚೇದನ ನೀಡಿ, ಲಿಂಗ ಪರಿವರ್ತನೆಗೆ ಮುಂದಾಗಿದ್ದಾರೆ. ಈ ಮಧ್ಯೆ, ಮಂಗಳಮುಖಿ ಜೊತೆಗಿನ ಸಹವಾಸದಿಂದಾಗಿ ಮಹಿಳೆಗೆ ಡ್ರಗ್ಸ್ ಚಟ ಹತ್ತಿದೆ.ಈ ಬೆಳವಣಿಗಳಿಂದಾಗಿ ಆ ಮಹಿಳೆಯು ಮಂಗಳಮುಖಿಯ ಜೊತೆಗೆ ಜೀವನ ನಡೆಸುವ ಪ್ಲ್ಯಾನ್ ಹಾಕಿಕೊಂಡಿದ್ದಾರೆ. ಆದರೆ ಮಹಿಳೆ ಲಿಂಗ ಪರಿವರ್ತನೆ ಬಯಸಿದ್ದರಾದರೂ, ತಾಂತ್ರಿಕ ದೋಷದಿಂದ ಅದು ಸಾಧ್ಯವಾಗಿಲ್ಲ.


ಹಾವೇರಿ ಇಡಾರಿ ಸಂಸ್ಥೆಯ ಮೂಲಕ ಸಮಾಲೋಚನೆ ನಡೆಸಿ ಲಿಂಗ‌ ಪರಿವರ್ತನೆಗೆ ಸದ್ಯ ತಡೆಯೊಡ್ಡಲಾಗಿದೆ. ಸದರಿ ಮಹಿಳೆಯು ತನ್ನ ಜೊತೆಗೆ ತನ್ನ ಎರಡು ಮಕ್ಕಳಿಗೂ ಲಿಂಗ ಪರಿವರ್ತನೆ ಮಾಡಿಸಲು ಮುಂದಾಗಿದ್ದರು ಎಂಬ ಆತಂಕಕಾರಿ ಮಾಹಿತಿ ದೊರೆತಿದೆ.

ನನ್ನ ಕಾರಿಗೆ ಮುತ್ತಿಗೆ ಹಾಕಿಲ್ಲ, ಬೇರೆ ಯಾರಿಗೋ ಹಾಕಿರಬಹುದು ; ಯುವಮೋರ್ಚಾ ಮುತ್ತಿಗೆ ಯತ್ನದ ಬಗ್ಗೆ ಸಿದ್ದರಾಮಯ್ಯ ಲೇವಡಿ

Posted by Vidyamaana on 2024-02-17 22:09:09 |

Share: | | | | |


ನನ್ನ ಕಾರಿಗೆ ಮುತ್ತಿಗೆ ಹಾಕಿಲ್ಲ, ಬೇರೆ ಯಾರಿಗೋ ಹಾಕಿರಬಹುದು ; ಯುವಮೋರ್ಚಾ ಮುತ್ತಿಗೆ ಯತ್ನದ ಬಗ್ಗೆ ಸಿದ್ದರಾಮಯ್ಯ ಲೇವಡಿ

ಮಂಗಳೂರು, ಫೆ.17: ನಾನು ಮುತ್ತಿಗೆ ಹಾಕಿದವರನ್ನು ನೋಡಿಲ್ಲ. ನಾನು ಬರೋದಕ್ಕೆ  ಮೊದಲೇ ಪ್ರತಿಭಟನೆ ನಡೆಸಿದ್ದಾರೆ.‌ ಹಾಗಾಗಿ ಆ ಮುತ್ತಿಗೆ ನನಗೆ ಆಗಿರೋದಲ್ಲ.‌ ಅವರು ಬೇರೆ ಯಾರಿಗೋ ಮುತ್ತಿಗೆ ಹಾಕಿರಬಹುದು. ನನಗೇ ಆಗುತ್ತಿದರೆ ನನ್ನ ಕಾರಿಗೆ ಮುತ್ತಿಗೆ ಹಾಕುತ್ತಿದ್ರು.. ಹೀಗೆಂದು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರ ಮುತ್ತಿಗೆ ಯತ್ನವನ್ನು ಸಿಎಂ ಸಿದ್ದರಾಮಯ್ಯ ಛೇಡಿಸಿದ್ದಾರೆ. 


ಕಾಂಗ್ರೆಸ್ ಸಮಾವೇಶದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ಕೇಳಿದಾಗ ಸಿದ್ದರಾಮಯ್ಯ ಮೇಲಿನಂತೆ ಉತ್ತರಿಸಿದರು. ಬಜೆಟಲ್ಲಿ ಮುಸ್ಲಿಮರಿಗೆ ಹೆಚ್ಚು ನೀಡಿದ್ದೀರಂತೆ ಎಂದು ಕೇಳಿದ್ದಕ್ಕೆ, ಅಲ್ಪಸಂಖ್ಯಾತರಿಗೆ ಬಜೆಟ್ ನಲ್ಲಿ ಪಾಯಿಂಟ್ ಎಂಟರಷ್ಟು ಮಾತ್ರ ನೀಡಿದ್ದೇವೆ. ಬಿಜೆಪಿಯವರಿಗೆ ಮುಸ್ಲಿಮರನ್ನು ಕಂಡ್ರೆ ಆಗೋದಿಲ್ಲ.‌ ಹಾಗಾಗಿ ಅವರಿಗೆ ಏನು ಕೊಟ್ರೂ ಆಗೋದಿಲ್ಲ. ಅಲ್ಪಸಂಖ್ಯಾತರು ಒಟ್ಟು ಜನಸಂಖ್ಯೆಯ ಎಷ್ಟಿದ್ದಾರೆ ?ಅವರಿಗೆ ನೀಡಿದ ಅನುದಾನ ಏನು ಎಂದು ಲೆಕ್ಕ ಹಾಕಿ ಅಂತ ಹೇಳಿದ್ದಾರೆ.ಮಂಗಳೂರು, ಫೆ.17: ನಾನು ಮುತ್ತಿಗೆ ಹಾಕಿದವರನ್ನು ನೋಡಿಲ್ಲ. ನಾನು ಬರೋದಕ್ಕೆ  ಮೊದಲೇ ಪ್ರತಿಭಟನೆ ನಡೆಸಿದ್ದಾರೆ.‌ ಹಾಗಾಗಿ ಆ ಮುತ್ತಿಗೆ ನನಗೆ ಆಗಿರೋದಲ್ಲ.‌ ಅವರು ಬೇರೆ ಯಾರಿಗೋ ಮುತ್ತಿಗೆ ಹಾಕಿರಬಹುದು. ನನಗೇ ಆಗುತ್ತಿದರೆ ನನ್ನ ಕಾರಿಗೆ ಮುತ್ತಿಗೆ ಹಾಕುತ್ತಿದ್ರು.. ಹೀಗೆಂದು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರ ಮುತ್ತಿಗೆ ಯತ್ನವನ್ನು ಸಿಎಂ ಸಿದ್ದರಾಮಯ್ಯ ಛೇಡಿಸಿದ್ದಾರೆ. 


ಕಾಂಗ್ರೆಸ್ ಸಮಾವೇಶದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ಕೇಳಿದಾಗ ಸಿದ್ದರಾಮಯ್ಯ ಮೇಲಿನಂತೆ ಉತ್ತರಿಸಿದರು. ಬಜೆಟಲ್ಲಿ ಮುಸ್ಲಿಮರಿಗೆ ಹೆಚ್ಚು ನೀಡಿದ್ದೀರಂತೆ ಎಂದು ಕೇಳಿದ್ದಕ್ಕೆ, ಅಲ್ಪಸಂಖ್ಯಾತರಿಗೆ ಬಜೆಟ್ ನಲ್ಲಿ ಪಾಯಿಂಟ್ ಎಂಟರಷ್ಟು ಮಾತ್ರ ನೀಡಿದ್ದೇವೆ. ಬಿಜೆಪಿಯವರಿಗೆ ಮುಸ್ಲಿಮರನ್ನು ಕಂಡ್ರೆ ಆಗೋದಿಲ್ಲ.‌ ಹಾಗಾಗಿ ಅವರಿಗೆ ಏನು ಕೊಟ್ರೂ ಆಗೋದಿಲ್ಲ. ಅಲ್ಪಸಂಖ್ಯಾತರು ಒಟ್ಟು ಜನಸಂಖ್ಯೆಯ ಎಷ್ಟಿದ್ದಾರೆ ?ಅವರಿಗೆ ನೀಡಿದ ಅನುದಾನ ಏನು ಎಂದು ಲೆಕ್ಕ ಹಾಕಿ ಅಂತ ಹೇಳಿದ್ದಾರೆ

ಬೆಳ್ತಂಗಡಿ : ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ : ಯುವ ಮೋರ್ಚಾ ಪ್ರತಿಭಟನೆಗೆ ನಿರ್ಬಂಧ

Posted by Vidyamaana on 2024-05-20 14:32:53 |

Share: | | | | |


ಬೆಳ್ತಂಗಡಿ : ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ : ಯುವ ಮೋರ್ಚಾ ಪ್ರತಿಭಟನೆಗೆ ನಿರ್ಬಂಧ

ಬೆಳ್ತಂಗಡಿ : ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಪೊಲೀಸರು ನಿರ್ಬಂಧ ಹೇರಿದ್ದಾರೆ ಎಂದು ವರದಿಯಾಗಿದೆ.

ಅಕ್ರಮ ಕಲ್ಲು ಗಣಿಗಾರಿಕೆ ಆರೋಪದಡಿಯಲ್ಲಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರನ್ನು ಪೊಲೀಸರು ಬಂಧಿಸಿದ್ದು, ಇದರ ವಿರುದ್ಧ ಮೇ.20 ರಂದು ಬೆಳಗ್ಗೆ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಸಲು ಯುವ ಮೋರ್ಚಾ ಸಿದ್ಧತೆ ನಡೆಸಿತ್ತು

Recent News


Leave a Comment: