Posted by vidyamaana on 2023-08-18 08:29:00 |
ಬೆಳ್ತಂಗಡಿ: ರೋಗಿಯೊಬ್ಬರನ್ನು ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.
ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
Posted by Vidyamaana on 2023-08-27 15:50:25 |
ಪುತ್ತೂರು : ಶಾಸಕರಾದ ಅಶೋಕ್ ಕುಮಾರ್ ರೈಯವರ ಬಹುನಿರೀಕ್ಷಿತ ಕಚೇರಿ ಆ.28ರಂದು ಉದ್ಘಾಟನೆಗೊಳ್ಳ ಲಿದೆ. ಶಾಸಕರ ಅಧಿಕೃತ ಕಚೇರಿ ಮಿನಿ ವಿಧಾನಸೌಧದ ಬಳಿ ಇರುವ ಹಳೆಯ ಪುರಸಭಾ ಕಚೇರಿ (ಪುಡಾಕಚೇರಿ)ಯಲ್ಲಿ ಉದ್ಘಾಟನೆ ಗೊಳ್ಳಲಿದ್ದು ಹಲವಾರು ಮಂದಿ ಗಣ್ಯರು ಭಾಗವಹಿಸಲಿ ದ್ದಾರೆ.
ವಿಶಾಲ ಸ್ಥಳಾವಕಾಶವನ್ನು ಹೊಂದಿರುವ ಕಚೇರಿಯಲ್ಲಿ ಶಾಸಕರನ್ನು ಭೇಟಿಯಾಗಲು ಬರುವವರಿಗೆ, ಅಥವಾ ಕ ಚೇರಿಗೆ ಬರುವ ಸಾರ್ವಜನಿಕರಿಗೆ ಎಲ್ಲಾ ಸೌಕರ್ಯಗಳ ನ್ನೊಳನ್ನು ಈ ಕಚೇರಿ ಹೊಂದಿದೆ. ಪಾರ್ಕಿಂಗ್ ವ್ಯವಸ್ಥೆ ಯೂ ಸಾಕಷ್ಟಿದೆ. ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್, ಮಾಜಿ ಸಚಿವ ಬಿ ರಮಾನಾಥ ರೈ, ಮಾಜಿ ಶಾ ಸಕಿ ಶಕುಂತಳಾ ಶೆಟ್ಟಿ ಸೇರಿದಂತೆ ಪ್ರಮುಖ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ. ಕಚೇರಿ ಉದ್ಘಾಟನೆ ಬಳಿಕ ಸುಮಾರು 160 ಕುಟುಂಬಗ ಳಿಗೆ ಶಾಸಕರು ಹಕ್ಕುಪತ್ರ ವಿತರಿಸಲಿದ್ದಾರೆ ಎಂದು ತಿಳಿ ದು ಬಂದಿದೆ.ಸಾರ್ವಜನಿಕರಿಗೆ ತ್ವರಿತಗತಿಯ ಸೇವೆ ನೀಡುವುದು ಈ ಕಚೇರಿಯ ಉದ್ದೇಶವಾಗಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರು ಈ ಕಚೇರಿಗೆ ಬಂದರೆ ಶಾಸಕರನ್ನು ಭೇಟಿಯಾಗಬಹುದು. ಕಚೇರಿಯಲ್ಲಿ ಸಾರ್ವಜನಿಕರಿಗೆ ಎಲ್ಲಾ ರೀತಿಯ ಅರ್ಜಿಗಳನ್ನು ಸ್ವೀಕರಿಸಲು ಪ್ರತ್ಯೇಕ ಕೌಂಟರ್ಗಳನ್ನು ತೆರೆಯಲಾಗಿದೆ. ಯಾವುದೇ ಇಲಾಖೆಗಳಿಗೆ ಅರ್ಜಿ ಸಲ್ಲಿಸಲು ಅಥವಾ ಯಾವುದೆ ಇಲಾಖೆಯಲ್ಲಿ ಕೆಲಸ ಕಾರ್ಯಗಳು ನಡೆಯದೆ ಇದ್ದಲ್ಲಿ ಶಾಸಕರ ಕಚೇರಿಯಲ್ಲಿರುವ ಆಯಾ ಇಲಾಖೆಗೆ ಸಂಬಂ ಧಿಸಿದ ಸಿಬಂದಿಗಳನ್ನು ಭೇಟಿಯಾಗಿ ಮಾತನಾಡಬಹುದಾಗಿದೆ.
ನನ್ನ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರಿಗೆ ಅನುಕೂ ಲವಾಗಲೆಂದು ಮಿನಿ ವಿಧಾನಸೌಧದ ಬಳಿಯೇ ಹೊಸ ಕಚೇರಿಯನ್ನು ತೆರೆದಿದ್ದು ಸಾರ್ವಜನಿಕರ ಸೇವೆಗೆ ಸಿಬಂ ದಿಗಳನ್ನು ನೇಮಕ ಮಾಡಿದ್ದೇನೆ. ಯಾವುದೇ ಸಮಸ್ಯೆಗ ಳಿದ್ದರೂ, ತೊಂದರೆಗೊಳಗಾದವರು ಶಾಸಕರ ಕಚೇರಿಗೆ ಬಂದು ತಿಳಿಸಬಹುದು. ದೂರು, ಮನವಿ ಇದ್ದರೂ ಕೊಡಬಹುದು. ಕ್ಷೇತ್ರದ ಎಲ್ಲರಿಗೂ ನನ್ನ ಕಚೇರಿಗೆ ಮುಕ್ತವಾಗಿ ಬರಲು ಅವಕಾಶ ಇದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
Posted by Vidyamaana on 2023-12-31 16:43:05 |
ದಾವಣಗೆರೆ (ಡಿ.31) : ಪ್ರೇಮಿಗಳು ಪ್ರೀತಿ ಮದುವೆಯಾಗಿದ್ದಕ್ಕೆ ಯುವಕನ ಪೋಷಕರ ಮೇಲೆ ಹುಡುಗಿಯ ಸಂಬಂಧಿಕರು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕಮಲಾಪುರ ಗ್ರಾಮದಲ್ಲಿ ನಡೆದಿದೆ.ಆರುಂಡಿ ಬಸಪ್ಪ ಹಾಗು ಪತ್ನಿ ಮಲ್ಲಮ್ಮನ ಮೇಲೆ ಮಾರಣಾಂತಿಕ ಹಲ್ಲೆ.ಹಲ್ಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಲೇಬೆನ್ನೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಏನಿದು ಘಟನೆ?
ಕಮಲಾಪುರದ ಸಿದ್ದಾರ್ಥ ಹಾಗು ಸೃಷ್ಟಿ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೇಮಿಗಳಿಗೆ ಮದುವೆಯಾಗಲು ಜಾರಿ ಅಡ್ಡಿಯಾಗಿದ್ದರಿಂದ ಯುವತಿಯ ಪೋಷಕರು ವಿರೋಧಿಸಿದ್ದರು. ಈ ಹಿನ್ನೆಲೆ ಕಳೆದ 20 ದಿನಗಳ ಹಿಂದೆ ದೇವಸ್ಥಾನದಲ್ಲಿ ಮದುವೆಯಾಗಿದ್ದ ಜೋಡಿ. ಬಳಿಕ ಸಬ್ ರಿಜಿಸ್ಟರ್ ನಲ್ಲಿ ಆಪೀಸ್ ನಲ್ಲಿ ನೋಂದಣಿ ಮಾಡಿಸಿದ್ದರು.ಮಗಳು ಬೇರೆ ಜಾತಿ ಯುವಕನೊಂದಿಗೆ ಮದುವೆಯಾಗಿರುವ ವಿಚಾರ ಗೊತ್ತಾಗಿ ನಿನ್ನೆ ಸಂಜೆ ಹುಡುಗನ ಮನೆಗೆ ನುಗ್ಗಿದ್ದ ಯುವತಿ ಪೋಷಕರು. ಸಿದ್ಧಾರ್ಥ ತಂದೆಯಾ ಆರುಂಡಿ ಬಸಪ್ಪ, ಪತ್ನಿ ಮಲ್ಲಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಜಾತಿ ಬೇರೆ ಬೇರೆ ಎಂಬ ಕಾರಣ ನೀಡಿ ಇವರೇ ಮದುವೆ ಮಾಡಿಸಿದ್ದಾರೆಂದು ಆರುಂಡಿ ಬಸಪ್ಪನ ಮೈಮೇಲಿನ ಬಟ್ಟೆ ಬಿಚ್ಚಿ ಅಮಾನುಷವಾಗಿ ಥಳಿಸಿರುವ ಹುಡುಗಿಯ ಮಾವಂದಿರು. ಹಲ್ಲೆಗೊಳಗಾಗಿ ತೀವ್ರ ಗಾಯಗೊಂಡಿರುವ ಬಸಪ್ಪನಿಗೆ ದಾವಣಗೆರೆ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಸದ್ಯ ಪ್ರಕರಣ ಸಂಬಂಧ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Posted by Vidyamaana on 2023-10-19 21:09:46 |
ವಿಟ್ಲ : ರಜಾ ಹಿನ್ನೆಲೆ ಬೀಚ್ ಗೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದು, ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ.
ವಿಟ್ಲ ಮೂಲದ ದಿಗಂತ (15) ದಿವ್ಯರಾಜ್ (15) ತೇಜಸ್ (14) ಕೀರ್ತನ್ (16) ಅಶ್ಮಿತಾ (15) ನಿಶಾ (15) ಇವರೆಲ್ಲರೂ ಕುಳಾಯಿ ಚಿತ್ರಾಪುರ ಬೀಚ್ ಗೆ ನೀರಲ್ಲಿ ಆಟ ಆಡಲು ತೆರಳಿದಾಗ ನೀರಿನ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಇವರನ್ನು ಹತ್ತಿರದ ಮೀನುಗಾರರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದು, ನಾಲ್ಕು ಜನ ಆರೋಗ್ಯವಾಗಿದ್ದು, ತೇಜಸ್ ಎಂಬ ಬಾಲಕನನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ನಿಶಾ ಎಂಬ ಬಾಲಕಿಯು ಮೃತಪಟ್ಟಿರುತ್ತಾರೆ.
ನಿಶಾ ಮತ್ತು ಅಶ್ವಿತಾ ನೇಪಾಳ ಮೂಲದವರು ಎಂದು ವರದಿಯಾಗಿದೆ.
Posted by Vidyamaana on 2023-08-10 14:07:05 |
ಪುತ್ತೂರು: ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಬಗ್ಗೆ ಜನರಿಗೆ ಸಂಶಯ ಮತ್ತು ಗೊಂದಲ ಈಗಲೂ ಇದೆ. ಕೊಲೆ ಆರೋಪದಲ್ಲಿ ಬಂಧಿತನಾಗಿರುವ ವ್ಯಕ್ತಿಯನ್ನು ನಿರ್ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದ ಬಳಿಕ ಪ್ರಕರಣ ಮಗದೊಮ್ಮೆ ಜೀವ ಪಡೆದುಕೊಂಡಿದೆ. ಅತ್ಯಾಚಾರ ನಡೆಸಿ ಸೌಜನ್ಯಳನ್ನು ಕೊಲೆ ಮಾಡಿರುವ ಬಗ್ಗೆ ಮರು ತನಿಖೆಯಾಗಬೇಕಿದೆ. ಈ ನಿಟ್ಟಿನಲ್ಲಿ ಪ್ರಕರಣವನ್ನು ಮರುತನಿಖೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖತ ಭೇಟಿಯಾಗಿ ಮನವಿಯನ್ನು ಮಾಡುತ್ತೇನೆ.ಈ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕು ಮತ್ತು ನೈಜ ಆರೋಪಿಗಳ ಬಂಧನವೂ ಆಗಬೇಕು, ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಬೇಕಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಎಲ್ಲೂ ಮರುಕಳಿಸಬಾರದು. ಪ್ರಕರಣದ ಬಗ್ಗೆ ಕೂಲಂಕುಶವಾಗಿ ಮರುತನಿಖೆಯಾಗಲೇಬೇಕಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಆಗ್ರಹಿಸಿದ್ದಾರೆ. ಈ ಪ್ರಕರಣದ ಬಗ್ಗೆ ಜನರಲ್ಲಿ ಇನ್ನೂ ಸಂಶಯ ಹಾಗೇ ಉಳಿದುಕೊಂಡಿದ್ದು ಅದನ್ನು ಕೂಡಾ ನಿಷ್ಪಕ್ಷಪಾತ ತನಿಖೆ ನಡೆಸುವ ಮೂಲಕ ಜನರಿಗೆ ಸತ್ಯವನ್ನು ತಿಳಿಸುವ ಕೆಲಸವನ್ನು ಸರಕಾರ ಮಾಡಬೇಕಿದೆ ಎಂದು ಹೇಳಿದರು.
Posted by Vidyamaana on 2024-03-27 12:26:28 |
ಬೆಳ್ತಂಗಡಿ: ಕಾಂಗ್ರೆಸ್ನ ಲೋಕಸಭಾ ಚುನಾವಣಾ ಕಚೇರಿಯನ್ನು ಬೆಳ್ತಂಗಡಿ ಹೇರಾಜೆ ಕಾಂಪ್ಲೆಕ್ಸ್ನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಮಾನಾಥ ರೈ ಉದ್ಘಾಟಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಬೆಳ್ತಂಗಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಪೀತಾಂಬರ ಹೇರಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಕೊಕ್ಕಡ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್, ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.
Posted by Vidyamaana on 2024-06-15 08:51:29 |
ಬೆಂಗಳೂರು : ರಾಜ್ಯ ಸರ್ಕಾರದಿಂದ ಲೋಕಸಭಾ ಚುನಾವಣಾ ನೀತಿ ಸಂಹಿತೆ ತೆರವಿನ ಕೆಲ ದಿನಗಳ ನಂತ್ರ, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ಐವರು ಐಎಎಸ್ ಅಧಿಕಾರಿ ಹಾಗೂ ಓರ್ವ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ಇಂದು ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಟಿ.ಕೆ., ಐಎಎಸ್ (ಕೆಎನ್: 1995) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ) ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿ ಆದೇಶಿಸಿದೆ.
ಇನ್ನೂ ಹರ್ಷ ಗುಪ್ತಾ, ಐಎಎಸ್ (ಕೆಎನ್: 1997) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.