ಯು ಕೆ ಎಲೆಕ್ಷನ್ ನಲ್ಲಿ ಹೀನಾಯ ಸೋಲು; ರಿಶಿ ಸುನಕ್ ಫಸ್ಟ್ ರಿಯಾಕ್ಷನ್

ಸುದ್ದಿಗಳು News

Posted by vidyamaana on 2024-07-05 12:01:03 |

Share: | | | | |


ಯು ಕೆ ಎಲೆಕ್ಷನ್ ನಲ್ಲಿ ಹೀನಾಯ ಸೋಲು; ರಿಶಿ ಸುನಕ್ ಫಸ್ಟ್ ರಿಯಾಕ್ಷನ್

ಲಂಡನ್ : ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ(UK Election) ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್‌ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್‌ ನಂಬರ್‌ 320 ಅನ್ನು ದಾಟುವ ಮೂಲಕ ಸರ್ಕಾರ ರಚನೆಗೆ ಮುಂದಾಗಿದೆ.

ಹಾಲಿ ಪ್ರಧಾನಿ ರಿಷಿ ಸುನಕ್‌(Rishi Sunak) ಅವರ ಪಕ್ಷ ಕನ್ಸರ್ವೇಟಿವ್‌ ಪಕ್ಷ ಭಾರೀ ಹಿನ್ನಡೆ ಅನುಭವಿಸಿದ್ದು, ಲೇಬರ್‌ ಪಕ್ಷದ ಕೀರ್‌ ಸ್ಟಾರ್ಮರ್‌(Keir Starmer) ಅವರಿಗೆ ಪ್ರಧಾನಿ ಗಿಟ್ಟಿದೆ. ಇನ್ನು


ಫಲಿತಾಂಶ ಹೊರ ಬೀಳುತ್ತಿದ್ದಂತೆ ರಿಶಿ ಸುನಕ್‌ ಪ್ರತಿಕ್ರಿಯಿಸಿದ್ದು, ಈ ಸೋಲಿನ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೇ ಲೇಬರ್‌ ಪಕ್ಷದ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲೇಬರ್ ಪಕ್ಷವು ಈ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದಿದೆ ಮತ್ತು ಅವರ ವಿಜಯಕ್ಕಾಗಿ ಅಭಿನಂದಿಸಲು ನಾನು ಸರ್ ಕೀರ್ ಸ್ಟಾರ್ಮರ್‌ಗೆ ಕರೆ ಮಾಡಿದ್ದೇನೆ. ಇಂದು, ಅಧಿಕಾರವು ಶಾಂತಿಯುತವಾಗಿ ಮತ್ತು ಕ್ರಮಬದ್ಧವಾಗಿ ಅಧಿಕಾರ ಹಸ್ತಾಂತರಗೊಂಡಿದೆ. ಎಲ್ಲಾ ಕಡೆಯಿಂದಲೂ ಸದ್ಭಾವನೆ ಇರುತ್ತದೆ. ಇದು ನಮ್ಮ ದೇಶದ ಸ್ಥಿರತೆ ಮತ್ತು ಭವಿಷ್ಯದ ಬಗ್ಗೆ ನಮಗೆಲ್ಲರಿಗೂ ವಿಶ್ವಾಸವನ್ನು ನೀಡುವ ವಿಷಯವಾಗಿದೆ ಎಂದು ಹೇಳಿದ್ದಾರೆ.

ಪಕ್ಷಗಳ ಬಲಾಬಲ ಹೇಗಿದೆ?

ಇನ್ನು ಕಣದಲ್ಲಿರುವ ಪಕ್ಷಗಳ ಬಲಾಬಲ ಹೇಗಿದೆ ಎಂದು ನೋಡುವುದಾದರೆ,

ಕನ್ಸರ್ವೇಟಿವ್‌ ಪಕ್ಷ ಕೇವಲ – 81

ಲೇಬರ್ ಪಾರ್ಟಿ - 360

ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP) - 3

ಲಿಬರಲ್ ಡೆಮೋಕ್ರಾಟ್‌ಗಳು - 49

ರಿಫಾರ್ಮ್‌ ಯುಕೆ - 3

ಇತರೆ - 1

ಎಕ್ಸಿಟ್‌ ಪೋಲ್‌ ಭವಿಷ್ಯ ಏನು?


ಇನ್ನು ಚುನಾವಣಾ ಪೂರ್ವ ಸಮೀಕ್ಷೆಗಳು ಕನ್ಸರ್ವೇಟಿವ್‌ ಪಕ್ಷ ಈ ಬಾರಿ ಸೋಲುವುದು ಖಚಿತ ಎಂಬ ಭವಿಷ್ಯ ನುಡಿದಿತ್ತು. ಈ ಬಾರಿ ಕನ್ಸರ್ವೇಟಿಕವ್‌ ಪಕ್ದ್ ಸ್ಥಾನ 131ಕ್ಕೆ ಇಳಿಯಲಿದ್ದು, ಲೇಬರ್‌ ಪಕ್ಷ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾಕ್ಕೆ ಬರಲಿದೆ ಎಂದು ಹೇಳಿದೆ. ಹಾಗಿದ್ದರೆ ಎಕ್ಸಿಟ್‌ ಪೋಲ್‌ ಪ್ರಕಾರ ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ದೊರೆಯಲಿದೆ ನೋಡೋಣ.


ಕನ್ಸರ್ವೇಟಿವ್‌: 131

ಲೇಬರ್ ಪಕ್ಷ: 410

ಲಿಬರಲ್ ಡೆಮೋಕ್ರಾಟ್‌ಗಳು: 61

ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP): 10

ರಿಫಾರ್ಮ್ ಯುಕೆ: 13

ಪ್ಲೈಡ್ ಸಿಮ್ರು: 4

ಗ್ರೀನ್ಸ್: 2

ರಿಷಿ ಸುನಕ್‌ಗೆ ಆಡಳಿತ ವಿರೋಧಿ ಅಲೆ

44 ವರ್ಷದ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು, 61 ವರ್ಷದ ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಾರ್ಟಿಗಿಂತ ಕಳೆದ 6 ವಾರಗಳ ಪ್ರಚಾರದಲ್ಲಿ ಅತ್ಯಂತ ಹಿಂದುಳಿದಿದ್ದಾರೆ. ಇಂಗ್ಲೆಂಡ್, ಸ್ಕಾಟ್‌ಲ್ಯಾಂಡ್, ವೇಲ್ಸ್ ಮತ್ತು ಉತ್ತರ ಐರ್ಲೆಂಡ್‌ನಾದ್ಯಂತ 650 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ, ಮೊದಲ ಬಾರಿಗೆ ಪೋಸ್ಟ್ ಸಿಸ್ಟಮ್‌ನಲ್ಲಿ ಬಹುಮತಕ್ಕೆ 326 ಮತಗಳ ಅಗತ್ಯವಿದೆ.

 Share: | | | | |


ಎಸ್.ಡಿ.ಪಿ.ಐ ಉಪ್ಪಿನಂಗಡಿ ಇಳಂತಿಳ ಬ್ಲಾಕ್ ಸಮಿತಿ ವತಿಯಿಂದ ಪಕ್ಷದ ಸಮಾವೇಶ

Posted by Vidyamaana on 2023-10-23 12:02:52 |

Share: | | | | |


ಎಸ್.ಡಿ.ಪಿ.ಐ ಉಪ್ಪಿನಂಗಡಿ  ಇಳಂತಿಳ ಬ್ಲಾಕ್ ಸಮಿತಿ ವತಿಯಿಂದ ಪಕ್ಷದ ಸಮಾವೇಶ

ಊಪ್ಪಿನಂಗಡಿ: ಎಸ್.ಡಿ.ಪಿ.ಐ ಉಪ್ಪಿನಂಗಡಿ ಬ್ಲಾಕ್  ಮತ್ತು ಇಳಂತಿಳ ಜಂಟಿ ಸಮಿತಿಗಳ ವತಿಯಿಂದ ಕಾರ್ಯಕರ್ತರೊಂದಿಗೆ ಪಕ್ಷದ ಸಮಾವೇಶವು ಅ 22 ರಂದು ಎಚ್.ಎಂ ಆಡಿಟೋರಿಯಂ ನಲ್ಲಿ ನಡೆಯಿತು.


ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಮಾತನಾಡಿ ಪಕ್ಷದ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿ ವಿಚಾರಗಳ ವಿನಿಮಯ ಮಾಡಿದರು.ಪಕ್ಷವು ಹಲವಾರು ಕ್ಲಿಷ್ಟಕರ ಪರಿಸ್ಥಿತಿಯನ್ನು ಎದುರಿಸಿದರೂ ಕೂಡ ಇಷ್ಟು ಬಲಿಷ್ಟ ವಾಗಿರಲು ಕಾರಣ ನಾಯಕರುಗಳ ಮತ್ತು ಬೂತ್ ಮಟ್ಟದ ಕ್ಯಾಡರ್ ಗಳ ತ್ಯಾಗ ಬಲಿದಾನವಾಗಿದೆ  ಎಂದರು. 

ಎಸ್.ಡಿ‌.ಪಿ.ಐ ದ.ಕ ಜಿಲ್ಲಾ ಅಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಸಾಂದರ್ಭಿಕವಾಗಿ  ಮಾತನಾಡಿದರು.

ವೇದಿಕೆಯಲ್ಲಿ ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಹಮೀದ್ ಸಾಲ್ಮರ, ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಉಸ್ಮಾನ್ ಎಕೆ,ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಸದಸ್ಯರಾದ ಅಡ್ವೊಕೇಟ್ ಅಬ್ದುಲ್ ರಹಿಮಾನ್,ಎಸ್.ಡಿ.ಪಿ.ಐ ಉಪ್ಪಿನಂಗಡಿ ಬ್ಲಾಕ್ ಸಮಿತಿಯ ಅಧ್ಯಕ್ಷರಾದ ಮುಸ್ತಫಾ ಲತೀಫಿ,ಎಸ್.ಡಿ.ಪಿ.ಐ ಬೆಳ್ತಂಗಡಿ ತಾಲ್ಲೂಕು ಸಮಿತಿಯ ಕಾರ್ಯದರ್ಶಿ ನಿಸಾರ್ ಕುದ್ರಡ್ಕ,ಎಸ್.ಡಿ.ಪಿ.ಐ ಇಳಂತಿಳ ಬ್ಲಾಕ್ ಸಮಿತಿಯ ಅಧ್ಯಕ್ಷರಾದ ಪೈಸಲ್ ಮುರುಗೋಳಿ ಸೇರಿದಂತೆ ನಾಯಕರು,ಪಕ್ಷದ ಕ್ಯಾಡರ್ ಗಳು ಉಪಸ್ಥಿತರಿದ್ದರು.

ಕಾಪು : ಪಿಲಿ ಕೋಲ ಸಂಪನ್ನ ಓರ್ವನನ್ನು ಸ್ಪರ್ಶಿಸಿದ ಪಿಲಿ!

Posted by Vidyamaana on 2024-05-05 17:20:58 |

Share: | | | | |


ಕಾಪು : ಪಿಲಿ ಕೋಲ ಸಂಪನ್ನ ಓರ್ವನನ್ನು ಸ್ಪರ್ಶಿಸಿದ ಪಿಲಿ!

ಕಾಪು: ತುಳುನಾಡಿನ ಸಪ್ತ ಜಾತ್ರೆಗಳಲ್ಲಿ ಒಂದಾಗಿರುವ ಕಾಪು ಶ್ರೀ ಬ್ರಹ್ಮ ಮುಗ್ಗೇರ್ಕಳ-ಪಿಲಿಚಂಡಿ ದೈವಸ್ಥಾನದಲ್ಲಿ ದ್ವೈ ವಾರ್ಷಿಕವಾಗಿ ನಡೆಯುವ ಪಿಲಿ ಕೋಲವು ವಿಶೇಷ ಜನಾಕರ್ಷಣೆಯೊಂದಿಗೆ ಮೇ 4ರಂದು ಸಂಪನ್ನಗೊಂಡಿತು.2 ಗಂಟೆಯ ಬಣ್ಣಗಾರಿಕೆಯ ಬಳಿಕ ಅಬ್ಬರದೊಂದಿಗೆ ಪಂಜರದೊಳಗಿಂದ ಹೊರಗೆ ಬಂದ ಹುಲಿಚಂಡಿ ದೈವವು ಬ್ರಹ್ಮರ ಗುಂಡಕ್ಕೆ ಮೂರು ಸುತ್ತು ಬಂದು, ಮಾರಿಯಮ್ಮ ಗುಡಿಯ ಮುಂಭಾಗದಲ್ಲಿ ನೆಡಲಾಗಿದ್ದ ಬಂಟ ಕಂಬವನ್ನೇರಿ ಜೀವಂತ ಕೋಳಿಯನ್ನು ಬಲಿಯಾಗಿ ಸ್ವೀಕರಿಸಿ ಮುಂದೆ ಗ್ರಾಮ ಭೇಟಿಗೆ ತೆರಳುವುದು ಸಂಪ್ರದಾಯವಾಗಿದೆ.

ಏಳೇ ತಿಂಗಳ್ಡ್ ಶೆಟ್ಟರ್ ಗ್ ಕಾಂಗ್ರೆಸ್ ಬೊಡಿಂಡ್ - ಶೆಟ್ಟರ್ ಮೂಲಗ್ ಬತ್ತೆರ್..!

Posted by Vidyamaana on 2024-01-25 15:54:27 |

Share: | | | | |


ಏಳೇ ತಿಂಗಳ್ಡ್ ಶೆಟ್ಟರ್ ಗ್ ಕಾಂಗ್ರೆಸ್ ಬೊಡಿಂಡ್ - ಶೆಟ್ಟರ್ ಮೂಲಗ್ ಬತ್ತೆರ್..!

ನವದೆಹಲಿ, ಜ.25: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್ 

 ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa), ಬಿವೈ ವಿಜಯೇಂದ್ರ (BY Vijayendra), ಕೇಂದ್ರ ಸಚಿವ ಭುಪೇಂದ್ರ ಯಾದವ್​, ರಾಜೀವ್​ ಚಂದ್ರಶೇಖರ್​ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.ಪಕ್ಷ ಸೇರ್ಪಡೆಗೂ ಮುನ್ನ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ​ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದರು.


ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್


ಪಕ್ಷ ಸೇರ್ಪಡೆಗೂ ಮುನ್ನ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜೀನಾಮೆಗೂ ಮುನ್ನ ಶೆಟ್ಟರ್ ಅವರು ಹೊರಟ್ಟಿಗೆ ಕರೆ ಮಾಡಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದರು. ಈ ವೇಳೆ ಪತ್ರದ ಮೂಲಕ ಬೇಡ, ನೇರವಾಗಿ ಬಂದು ರಾಜೀನಾಮೆ ನೀಡುವಂತೆ ಸೂಚಿಸಿದ್ದರು.

ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ: ಶೆಟ್ಟರ್

ಪಕ್ಷ ಸೇರ್ಪಡೆ ನಂತರ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಶೆಟ್ಟರ್, ನಾನು ಪಕ್ಷಕ್ಕೆ ವಾಪಸಾಗಬೇಕೆಂದು ನಾಯಕರ ಅಪೇಕ್ಷೆ ಇತ್ತು. ಅಮಿತ್​ ಶಾ ಅವರು ಅತ್ಯಂತ ಗೌರವದಿಂದ ಬರಮಾಡಿಕೊಂಡರು. ನಾನು ಬಿಜೆಪಿ ಮರು ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸ ಆಗಿದೆ. ನಾನು ಪರಿಷತ್​ ಸ್ಥಾನಕ್ಕೆ ರಾಜೀನಾಮೆಯನ್ನೂ ಸಲ್ಲಿಸಿದ್ದೇನೆ. ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದೇನೆ. ಇ-ಮೇಲ್​ ಮೂಲಕ ರಾಜೀನಾಮೆಯನ್ನ ನೀಡಿದ್ದೇನೆ ಎಂದರು.


ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು. ನಾನು ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ. ಕಾಂಗ್ರೆಸ್​ನವರು ಕೂಡ ಒಳ್ಳೇ ಗೌರವ, ಸ್ಥಾನಮಾನ ನೀಡಿದ್ದರು. ಕಾಂಗ್ರೆಸ್​ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಸೆ.14 : ನಮ್ಮ ಎಂಪಿ ಪುತ್ತೂರ್ ಗ್ ಬರ್ಪೆರ್ – ಒಲ್ಪ ತಿಕ್ಕುವೆರ್?

Posted by Vidyamaana on 2023-09-13 09:38:17 |

Share: | | | | |


ಸೆ.14 : ನಮ್ಮ ಎಂಪಿ  ಪುತ್ತೂರ್ ಗ್ ಬರ್ಪೆರ್ – ಒಲ್ಪ ತಿಕ್ಕುವೆರ್?

ಪುತ್ತೂರು:ದ.ಕ.ಸಂಸದ ನಳಿನ್ ಕುಮಾರ್ ಕಟೀಲ್‌ ಅವರು ಸೆ.14ರಂದು ಪುತ್ತೂರಿಗೆ ಆಗಮಿಸಲಿದ್ದು, ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಮಾಡಲಿದ್ದಾರೆ. ಬಳಿಕ ಕೇಂದ್ರದ ವಿವಿಧ ಕಾಮಗಾರಿಗಳ ವೀಕ್ಷಣೆ ಮಾಡಲಿದ್ದಾರೆ.


ಬೆಳಿಗ್ಗೆ ಗಂಟೆ 10ರಿಂದ ಮಧ್ಯಾಹ್ನದ ತನಕ ಅವರು ಸಾರ್ವಜನಿಕ ಅಹವಾಲು ಸ್ವೀಕಾರ ಮಾಡಲಿದ್ದು, ಬಳಿಕ ಕೇಂದ್ರ ಸರಕಾರದಿಂದ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ನಡೆಸಲಿದ್ದಾರೆ ಎಂದು ಬಿಜೆಪಿ ಕಚೇರಿ ಪ್ರಕಟಣೆ ತಿಳಿಸಿದೆ.

ಬೆಳ್ತಂಗಡಿ : ಉಯ್ಯಾಲೆಯಲ್ಲಿ ಆಡುವಾಗ ಕುತ್ತಿಗೆ ಸಿಲುಕಿ ವಿದ್ಯಾರ್ಥಿ ಶ್ರೀಷಾ ಮೃತ್ಯು

Posted by Vidyamaana on 2023-07-16 15:26:15 |

Share: | | | | |


ಬೆಳ್ತಂಗಡಿ : ಉಯ್ಯಾಲೆಯಲ್ಲಿ ಆಡುವಾಗ ಕುತ್ತಿಗೆ ಸಿಲುಕಿ ವಿದ್ಯಾರ್ಥಿ ಶ್ರೀಷಾ  ಮೃತ್ಯು

ಬೆಳ್ತಂಗಡಿ : ರಜೆ ಇದ್ದ ಕಾರಣ ಮನೆಯಲ್ಲಿ ಸಾರಿಯಲ್ಲಿ ಮಾಡಿದ್ದ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವನ್ನಪ್ಪಿದ ಘಟನೆ ದಿಡುಪೆಯಲ್ಲಿ ನಡೆದಿದೆ.


ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಮೊದಲ ಮಗ 8 ನೇ ತರಗತಿ ವಿದ್ಯಾರ್ಥಿ ಶ್ರೀಷಾ (14)  ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ನೆಲಕ್ಕೆ ಬಿದ್ದಿದ್ದು ತಂಗಿ ನೋಡಿ ತಂದೆಗೆ ಮಾಹಿತಿ ನೀಡಿದ್ದು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ ಘಟನೆ ಜುಲೈ 16 ರಂದು ಸಂಜೆ ನಡೆದಿದೆ.

ಬಾಲಕನ ಶವ ಶವಪರೀಕ್ಷೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು. ಘಟನೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಧನರಾಜ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

ಮಲಯಾಳಂ ಹಿರಿಯ ನಟ ಮಾಮುಕೋಯ ನಿಧನ

Posted by Vidyamaana on 2023-04-26 09:07:29 |

Share: | | | | |


ಮಲಯಾಳಂ ಹಿರಿಯ ನಟ ಮಾಮುಕೋಯ ನಿಧನ

ಕೋಝಿಕೋಡ್: ಹೃದಯಾಘಾತದಿಂದ ಕೋಝಿಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಲಯಾಳಂ ಖ್ಯಾತ ನಟ ಮಾಮುಕೋಯ ಬುಧವಾರ ನಿಧನರಾದರು. 

ಸೋಮವಾರ ಮಲಪ್ಪುರಂನ ವಂಡೂರಿನಲ್ಲಿ ಫುಟ್ಬಾಲ್ ಪಂದ್ಯಾವಳಿಯ ವೇಳೆ ಮಾಮುಕೋಯ ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನುಕೋಝಿಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು



Leave a Comment: