Posted by vidyamaana on 2024-07-03 20:52:26 |
ಮಂಗಳೂರು : ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಸಂಭವಿಸಿ ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ನಗರದ ಬಲ್ಮಠ ಬಳಿ ಬುಧವಾರ ಸಂಭವಿಸಿದೆ.ಮೃತ ಕಾರ್ಮಿಕನನ್ನು ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ (30) ಎಂದು ತಿಳಿದು ಬಂದಿದೆ.ಮಧ್ಯಾಹ್ನ ಕಟ್ಟಡದ ಕಾಮಗಾರಿ ನಡೆಯುತಿದ್ದ ವೇಳೆ ಭೂಕುಸಿತ ಸಂಭವಿಸಿ ಮಣ್ಣಿನಡಿ ಇಬ್ಬರು ಕಾರ್ಮಿಕರು ಸಿಲುಕಿದ್ದರು.
ಘಟನೆ ನಡೆದ ವಿಚಾರ ತಿಳುಯುತ್ತಲೇ ಸ್ಥಳಕ್ಕೆ ಅಗ್ನಿಶಾಮಕ ದಳ , ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ತಂಡ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದಾರೆ ಇದಾದ ಕೆಲವು ಗಂಟೆಗಳ ಬಳಿಕ ಓರ್ವ ಕಾರ್ಮಿಕನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ನಡುವೆ ಮಣ್ಣಿನಡಿ ಸಿಲುಕಿದ್ದ ಚಂದನ್ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿತ್ತು.
ರಿಟೇನಿಂಗ್ ವಾಲ್ ಮತ್ತು ಶೀಟ್ ಗಳ ಮಧ್ಯೆ ಸಿಲುಕಿದ್ದ ಕಾರ್ಮಿಕನ ರಕ್ಷಣೆಗಾಗಿ ರಾತ್ರಿಯ ವರೆಗೂ ಕಾರ್ಯಾಚರಣೆ ನಡೆಸಿದರೂ ಕಾರ್ಮಿಕನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಸುಮಾರು ಏಳು ಗಂಟೆಯ ವೇಳೆಗೆ ಮೃತದೇಹವನ್ನು ಎನ್ ಡಿ ಆರ್ ಎಫ್ ತಂಡ ಹೊರತೆಗೆದಿದೆ.
Posted by Vidyamaana on 2023-10-22 15:18:42 |
ಮಂಗಳೂರು: ಪಣಂಬೂರು ಎನ್ಎಂಪಿಟಿ ಬಂದರಿನಲ್ಲಿ ಭದ್ರತೆ ನೋಡಿಕೊಳ್ಳುವ ಸಿಐಎಸ್ಎಫ್ ವಿಭಾಗದಲ್ಲಿ ಪಿಎಸ್ಐ ಆಗಿದ್ದ ಜಾಕೀರ್ ಹುಸೇನ್ (58) ತನ್ನ ಸರ್ವಿಸ್ ರಿವಾಲ್ವರ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಾಕೀರ್ ಹುಸೇನ್ ಮೂಲತಃ ರಾಯಚೂರು ಜಿಲ್ಲೆಯ ನಿವಾಸಿಯಾಗಿದ್ದು ನಿನ್ನೆ ರಾತ್ರಿ ಎನ್ಎಂಪಿಟಿ ಮೈನ್ ಗೇಟ್ ನಲ್ಲಿ ನೈಟ್ ಶಿಫ್ಟ್ ನಲ್ಲಿ ನಿಯೋಜಿತರಾಗಿದ್ದರು. ಇಂದು ಬೆಳಗ್ಗೆ 6.30ಕ್ಕೆ ತನ್ನ ನೈಟ್ ಶಿಫ್ಟ್ ಮುಗಿಸಿ ಬೇರೊಬ್ಬರಿಗೆ ಕೆಲಸ ವಹಿಸಿ ವಾಶ್ ರೂಮ್ ತೆರಳಿದ್ದರು. ಅಲ್ಲಿ ಇರುವಾಗಲೇ ತನ್ನ ಸರ್ವಿಸ್ ರಿವಾಲ್ವರ್ ನಲ್ಲಿ ತಲೆಗೆ ಗುರಿ ಇರಿಸಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಣಂಬೂರು ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Posted by Vidyamaana on 2023-07-27 10:37:01 |
ಪುತ್ತೂರು: ಬೆನ್ನುಮೂಲೆ ಮುರಿತಕ್ಕೊಳಗಾಗಿ ಬೆಡ್ ನಲ್ಲೇ ಕಾಲ ಕಳೆಯುತ್ತಿರುವವರ ನೋವನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಡಿದ್ದೀರಿ, ಇದೇ ವಿಚಾರವನ್ನು ವಿಧಾನಸಭೆಯಲ್ಲಿ ಮಾತನಾಡಿ ಎಂದು ನಮ್ಮ ಸಂಸ್ಥೆಯ ವತಿಯಿಂದ ೪೦ ಶಾಸಕರಲ್ಲಿ ವಿನಂತಿ ಮಾಡಿದ್ದೆವು ಆದರೆ ಯಾರೂ ಇವರ ಪರ ಧ್ವನಿ ಎತ್ತಿರಲಿಲ್ಲ, ಯಾರೂ ಹೇಳದೆ ಸ್ವಯಂ ಆಗಿ ಬಡವರ ಪರ ಮಾತನಾಡಿದ್ದೀರಿ ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರನ್ನು ಕನ್ಯಾಡಿಯ ಸೇವಾ ಭಾರತಿ ಸಂಸ್ಥೆಯವರು ಕಚೇರಿಗೆ ಆಗಮಿಸಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಪುತ್ತೂರಿನಲ್ಲಿರುವ ಶಾಸಕರ ಚುನಾವಣಾ ಕಚೇರಿಗೆ ಭೇಟಿ ನೀಡಿದ ಸಂಸ್ಥೆಯ ಪ್ರಮುಖರು ಬೆನ್ನುಮುಲೆ ಮುರಿತಕ್ಕೊಳಗಾದವರ ಜೀವನದ ಸಂಕಷ್ಟ ಅರಿತು ಅವರಿಗೆ ತಿಂಗಳಿಗೆ ೫ ಸಾವಿರ ಮಾಸಾಶನ ನೀಡಬೇಕೆಂದು ವಿಧನಸಭೆಯಲ್ಲಿ ಮೊದಲ ಬಾರಿಗೆ ಪ್ರಸ್ತಾಪ ಮಾಡಲಾಗಿದೆ. ಈ ಪ್ರಸ್ತಾಪವನ್ನು ಸರಕಾರ ಬೆಂಬಲಿಸಿ ಅವರಿಗೆ ಮಾಸಾಶನ ಬಂದಲ್ಲಿ ಅವರಿಗೊಂದು ಉತ್ತಮ ಜೀವನ ದೊರೆಯಲಿದೆ ಎಂದು ಸಂಸ್ಥೆಯ ಪ್ರಮುಖರು ಶಾಸಕರಲ್ಲಿ ಹೇಳಿಕೊಂಡರು. ಈ ಸಂದರ್ಭದಲ್ಲಿ ಸೇವಾ ಭಾರತಿ ಸಂಸ್ಥೆಯ ಸ್ಥಾಪಕಾಧ್ಯಕ್ಷ ವಿನಾಯಕ ರಾವ್, ಕಾರ್ಯದರ್ಶಿಬಾಲಕೃಷ್ಣ, ವ್ಯವಸ್ಥಾಪಕ ಚರಣ್ಕುಮಾರ್ ಉಪಸ್ಥಿತರಿದ್ದರು.
Posted by Vidyamaana on 2024-04-23 16:20:35 |
ವಿಟ್ಲ: ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ.
ಮೃತ ಕಾರ್ಮಿಕರನ್ನು ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40) ಮತ್ತು ಮಲಾರ್ ನಿವಾಸಿ ಆಲಿ(24) ಎಂದು ಗುರುತಿಸಲಾಗಿದೆ.
Posted by Vidyamaana on 2023-06-02 09:17:05 |
ಪುತ್ತೂರು: ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರು ಗೆದ್ದು ಶಾಸಕರಾಗಿ ಆಯ್ಕೆಯಾಗಿರುವುದರಿಂದ ಪಕ್ಷದ ವತಿಯಿಂದ ಸಂಭ್ರಮದ ವಿಜಯೋತ್ಸವ ಆಚರಿಸಬೇಕೆಂದು ಕಾರ್ಯಕರ್ತರ ಬಯಕೆ ಸಹಜವಾಗಿರುತ್ತದೆ.
ಕಳೆದ ಸೋಮವಾರ ನಡೆದ ಕಾಂಗ್ರೆಸ್ ಪ್ರಮುಖರ ಸಭೆಯಲ್ಲಿ ಬೊಲ್ವಾರ್ ನಿಂದ - ದರ್ಬೆಯವರೆಗೆ ವಿಜಯೋತ್ಸವದ ಮೆರವಣಿಗೆ ನಡೆಸುವುದೆಂದು ತೀರ್ಮಾನಕ್ಕೆ ಬರಲಾಗಿತ್ತು ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ತಿಳಿಸಿದ್ದಾರೆ.
ಜೂನ್ 3ರಂದು ಶನಿವಾರ ನಡೆಯಲಿರುವ ವಿಜಯೋತ್ಸವ ಕಾರ್ಯಕ್ರಮದ ಬಗ್ಗೆ ನಡೆದ ಪೂರ್ವಬಾವಿ ಸಭೆಯಲ್ಲಿ ಹವಾಮಾನ ವರದಿಯಂತೆ ಶುಕ್ರವಾರವೇ ಮುಂಗಾರು ಮಳೆ ಪ್ರಾರಂಭವಾಗುವ ಮುನ್ಸೂಚನೆ ಇರುವುದರಿಂದ ವಿಜಯೋತ್ಸವದ ಮೆರವಣಿಗೆಗೆ ಮಳೆ ಅಡ್ಡಿಯಾದೀತು ಎಂಬ ಸಂಶಯ ಹಾಗೂ ಈಗಾಗಲೇ ನಾಮಪತ್ರ ಸಲ್ಲಿಸುವ ದಿನ ದರ್ಬೆಯಿಂದ - ಕಿಲ್ಲೆ ಮೈದಾನವರೆಗೆ ಮೆರವಣಿಗೆ ನಡೆಸಲಾಗಿದೆ,
ಬಹಿರಂಗ ಪ್ರಚಾರದ ಅಂತಿಮ ದಿನ ಬೊಲ್ವಾರ್ ನಿಂದ - ದರ್ಬೆಯವರೆಗೆ ಭ್ರಹತ್ ರೋಡ್ ಶೋ,ನಡೆಸಲಾಗಿದೆ,
ಚುನಾವಣ ಪಲಿತಾಂಶದ ದಿನ ಅಶೋಕ್ ಕುಮಾರ್ ರೈ ಯವರು ಶಾಸಕರಾಗಿ ಆಯ್ಕೆಯಾಗಿ ಬಂದ ಸಂದರ್ಭದಲ್ಲಿ ಮಾಣಿಯಿಂದ - ಪುತ್ತೂರಿನ ದರ್ಬೆಯ ಚುನಾವಣ ಕಚೇರಿ ತನಕ ಬ್ರಹತ್ ಮೆರವಣಿಗೆ ನಡೆಸಿ ವಿಜಯೋತ್ಸವ ಆಚರಿಸಲಾಗಿದೆ,
ಪುನ್ಹ ಮೆರವಣಿಗೆ ಮಾಡಿ ವಿಜಯೋತ್ಸವ ಆಚರಿಸುವುದು ಅಬಾಸವಾಗಿ ಕಾಣುತ್ತದೆ, ಮೆರವಣಿಗೆ ನಡೆಸಿದಾಗ ಟ್ರಾಫಿಕ್ ಜಾಮ್ ಆಗಿ ಜನರಿಗೆ ತೊಂದರೆ ಆಗುತ್ತದೆ,
ಮೆರವಣಿಗೆ ನಡೆಸಿ ದರ್ಬೆಯಲ್ಲಿ ಕೊನೆಗೊಳಿಸಿದರೆ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲು ಅವಕಾಶವಾಗುವುದಿಲ್ಲ, ಹಾಲ್ ನಲ್ಲಿ ಸಭೆ ನಡೆಸಿದರೆ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿ ಒಳ್ಳೆಯ ಭೋಜನ ನೀಡಬಹುದು ಎಂಬ ಕಾರಣಕ್ಕಾಗಿ ವಿಜಯೋತ್ಸವ ಮೆರವಣಿಗೆ ಕಾರ್ಯಕ್ರಮ ರದ್ದುಪಡಿಸಿ, ಪುತ್ತೂರು ಪುರಭವನದಲ್ಲಿ ಶಾಸಕರಿಗೆ ಅಭಿನಂದನೆ, ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಕೃತಜ್ಞತ ಸಮರ್ಪಣೆ ಕಾರ್ಯಕ್ರಮ ನಡೆಸುವ ತೀರ್ಮಾನವು ಪಕ್ಷದ ಪ್ರಮುಖರ ತೀರ್ಮಾನವೇ ಹೊರತು ಶಾಸಕ ಅಶೋಕ್ ಕುಮಾರ್ ರೈ ಯವರ ಒಬ್ಬರ ತೀರ್ಮಾನವಲ್ಲ ಎಂಬುದರ ಬಗ್ಗೆ ಕಾರ್ಯಕರ್ತರಿಗೆ ಅರಿಕೆ ಮಾಡಿಕೊಳ್ಳುತ್ತಾ ಶನಿವಾರ ನಡೆಯುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕಾಗಿ ವಿನಂತಿಸುತ್ತಿದ್ದೇನೆ.
Posted by Vidyamaana on 2023-10-23 13:14:43 |
ಪುತ್ತೂರು: ಮುಕ್ವೆ ನಿವಾಸಿ ಮುಕ್ವೆ ರಹ್ಮಾನಿಯಾ ಜುಮಾ ಮಸೀದಿಯ ಜಮಾಅತ್ ಸದಸ್ಯಎ.ಕೆ.ಮಮ್ಮುಂಞ (70 ವ.) ಅಲ್ಪಕಾಲದ ಅನಾರೋಗ್ಯದಿಂದ ಅ. 23ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಮುಕ್ವೆ ನಿವಾಸಿ ರೋಯಲ್ ಉಮ್ಮರ್ ಹಾಜಿ ಮತ್ತು M A ಅಬೂಬಕ್ಕರ್ ಹಾಜಿ ಪುರುಷರ ಕಟ್ಟೆ ಅವರ ಸಹೋದರಿಯ ಗಂಡ.
ಮೃತರು ಪತ್ನಿ, ಮಕ್ಕಳಾದ ನಾಸೀರ್, ಸಲೀಮ್, ಮನ್ಸೂರ್ ಮತ್ತು ರಿಯಾಝ್ ಅವರನ್ನು ಅಗಲಿದ್ದಾರೆ.