Posted by vidyamaana on 2024-07-03 16:20:08 |
ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು
ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್ಡಿಆರ್ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.
ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್ ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.
Posted by Vidyamaana on 2024-03-06 21:40:11 |
ಪುತ್ತೂರು: ನಯಾ ಚಪ್ಪಲ್ ಬಜಾರ್ನ ನವೀಕೃತ ಮಳಿಗೆಯ ಉದ್ಘಾಟನೆ ಮಾರ್ಚ್ 7ರಂದು ಬೆಳಿಗ್ಗೆ 10ಕ್ಕೆ ದರ್ಬೆ ಬುಶ್ರಾ ಟವರ್ನಲ್ಲಿ ನಡೆಯಲಿದೆ.
1998ರಲ್ಲಿ ಆಗಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಎದುರುಗಡೆ ಇದ್ದ ಎ.ಎಂ. ಕಾಂಪ್ಲೆಕ್ಸ್ನಲ್ಲಿ ನಯಾ ಚಪ್ಪಲ್ ಬಜಾರ್ ಕಾರ್ಯಾಚರಣೆ ಆರಂಭಿಸಿತು. ಬಳಿಕ ದರ್ಬೆಯ ಬುಶ್ರಾ ಟವರ್ಗೆ ಸ್ಥಳಾಂತರಗೊಂಡಿತು. ಸುಮಾರು 26 ವರ್ಷಗಳ ಸುದೀರ್ಘ ಪಯಣದಲ್ಲಿ ಗ್ರಾಹಕರ ಮನಸೂರೆಗೊಂಡಿರುವ ರಫೀಕ್ ಎಂ.ಜಿ. ಮಾಲಕತ್ವದ ನಯಾ ಚಪ್ಪಲ್ ಬಜಾರ್ ಇದೀಗ ಆಧುನಿಕತೆಗೆ ತಕ್ಕಂತೆ ನವೀಕೃತಗೊಂಡು ಶುಭಾರಂಭಗೊಳ್ಳುತ್ತಿದೆ.
ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಬ್ಬ ಅವರು ನವೀಕೃತ ಮಳಿಗೆಯನ್ನು ಉದ್ಘಾಟಿಸುವರು. ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿರುವರು. ದರ್ಬೆ ಬುಶ್ರಾ ಟವರ್ನ ಮಾಲಕ ಅಬ್ದುಲ್ ಅಜೀಜ್ ಅವರು ಪ್ರಥಮ ಗ್ರಾಹಕರಾಗಿ ಉಪಸ್ಥಿತರಿರುವರು.
ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ವಾಮನ್ ಪೈ, ಪುತ್ತೂರು ಸಂಯುಕ್ತ ಜಮಾಅತ್ ಕಮಿಟಿ ಅಧ್ಯಕ್ಷ ಮೊಹಮ್ಮದ್ ಹಾಜಿ ಕೆ.ಪಿ., ಮಹಾವೀರ ಮೆಡಿಕಲ್ ಸೆಂಟರಿನ ಡಾ. ಅಶೋಕ್ ಪಡಿವಾಳ್, ದರ್ಬೆ ಬಿಓಬಿಯ ಸೀನಿಯರ್ ಮ್ಯಾನೇಜರ್ ಸಾದೀಕ್ ಎಸ್.ಎಂ., ಲಿಯೋ ಜಿಲ್ಲಾ ಅಧ್ಯಕ್ಷೆ ಡಾ. ರಂಜಿತಾ ಎಚ್. ಶೆಟ್ಟಿ, ಕ್ರಿಸ್ಟೋಫರ್ ಕಾಂಪ್ಲೆಕ್ಸಿನ ವಲೇರಿಯನ್ ಡಯಾಸ್, ಡಾ. ಜಸ್ಪ್ರಿತ್ ಸಿಂಗ್ ದಿಲ್, ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಜಯರಾಜ್ ಭಂಡಾರಿ, ಪುತ್ತೂರು ಅಗ್ರಝೋನ್, ಸಿಝ್ಲರ್ನ ಪಿ.ಎನ್. ಪ್ರಸನ್ನ ಕುಮಾರ್ ಶೆಟ್ಟಿ, ಮದರ್ ಇಂಡಿಯಾದ ಎಂ.ಜಿ. ರಜಾಕ್ ಅತಿಥಿಗಳಾಗಿರುವರು ಎಂದು ಪ್ರಕಟಣೆ ತಿಳಿಸಿದೆ.
Posted by Vidyamaana on 2024-01-25 06:28:39 |
ಪುತ್ತೂರು: ಸ್ಕರಿಯ ಎಂ.ಎ., ಫಾರೂಕ್ ಶೇಖ್ ಮುಕ್ವೆ ಹಾಗೂ ಪ್ರಶಾಂತ್ ರೈ ಸಾರಥ್ಯದ ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 7ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಜ. 21ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಿತು.
ಈ ಪಂದ್ಯಾಟದಲ್ಲಿ ಲಾಯರ್ಸ್ ಇಲೆವೆನ್ ತಂಡವನ್ನು ಸೋಲಿಸಿ ಪಿ ಇ ಟಿ ಇಲೆವೆನ್ ತಂಡವು ಚಾಂಪಿಯನ್ನಾಗಿ ಹೊರಹೊಮ್ಮಿತ್ತು. ಲಾಯರ್ಸ್ ಇಲೆವೆನ್ ತಂಡ ರನ್ನರ್ ಪ್ರಶಸ್ತಿ ಪಡೆದುಕೊಂಡರೆ ಮೂರನೇ ಸ್ಥಾನವನ್ನು ವಿವೇಕಾನಂದ ತಂಡ ಮತ್ತು ನಾಲ್ಕನೇ ಸ್ಥಾನವನ್ನು ಸುದ್ದಿ ಇಲೆವೆನ್ ತಂಡ ತಮ್ಮದಾಗಿಸಿಕೊಂಡಿತು. ಪೊಲೀಸ್ ಇಲೆವನ್ ಮತ್ತು ವಿವೇಕಾನಂದ ಕಾಲೇಜು ಇಲೆವನ್ ಮಹಿಳಾ ತಂಡಗಳ ನಡುವೆ ನಡೆದ ಪ್ರದರ್ಶನ ಪಂದ್ಯಾಟದಲ್ಲಿ ವಿವೇಕಾನಂದ ಕಾಲೇಜು ಇಲೆವನ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿ, ಪೊಲೀಸ್ ಇಲೆವೆನ್ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು.
ಪಂದ್ಯಾಟ ಉದ್ಘಾಟಿಸಿ ಮಾತನಾಡಿದ ಡಿವೈಎಸ್ಪಿ ಅರುಣ್ ನಾಗೇಗೌಡ, ಸಂಘಟಕರಿಗೂ ಆಟಗಾರರಿಗೂ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ವಿವಿಧ ಇಲಾಖೆಗಳು ಸಂಘ ಸಂಸ್ಥೆಗಳು ಒಟ್ಟು ಸೇರಿ ಇಂತಹ ಕಾರ್ಯಕ್ರಮ ಆಯೋಜನೆ ಮಾಡಿದರೆ ಇಲಾಖೆಗಳ ಮಧ್ಯ ಬಾಂಧವ್ಯ ಮೂಡಿಸಲು ಸಾಧ್ಯ. ಕ್ರಿಕೆಟ್ ಪಂದ್ಯಾಟದ ಮೂಲಕ ಸಂಘಟಕರು ಒಳ್ಳೆಯ ಕಾರ್ಯಕ್ರಮ ಆಯೋಜನೆ ಮಾಡಿದ್ದೀರಿ. ಇಂತಹ ಕಾರ್ಯಕ್ರಮಗಳು ಇಂದಿನ ಅಗತ್ಯ. ಸಾರ್ವಜನಿಕರಿಗೂ ಇಲಾಖೆಗಳ ಮತ್ತು ಅಧಿಕಾರಿಗಳ ಪರಿಚಯಕ್ಕೆ ಇದು ಸುಲಭ ಎಂದು ಹೇಳಿ ಶುಭ ಹಾರೈಸಿದರು
ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ ಕೃಷ್ಣ ಭಟ್ ಮಾತನಾಡಿ, ಬಾಂಧವ್ಯ ಟ್ರೋಫಿ ವಿವಿಧ ಇಲಾಖೆಗಳೊಂದಿಗೆ ಬಾಂಧವ್ಯವನ್ನು ಬೆಳೆಸಲು ಹಮ್ಮಿಕೊಂಡಿರುವಂತಹ ವಿಶೇಷ ಕಾರ್ಯಕ್ರಮ. ಅದಕ್ಕೆ ಸಂಘಟಕರಿಗೆ ನಾನು ಅಭಿನಂದಿಸುತ್ತೇನೆ ಎಂದು ಹೇಳಿ ಶುಭ ಹಾರೈಸಿದರು.
ನಗರಸಭೆ ಮಾಜಿ ಅಧ್ಯಕ್ಷ ಜೀವಂಧರ್ ಜೈನ್ ಮಾತನಾಡಿ, ಇಲಾಖೆಗಳು ಸೌಹಾರ್ದತೆಯಿಂದ ಕೆಲಸಗಳು ಮಾಡಬೇಕು. ಸರಕಾರಿ ಅಧಿಕಾರಿಗಳು ದಿನನಿತ್ಯದ ಕೆಲಸದ ಒತ್ತಡದ ನಡುವೆ ಒಂದು ದಿನ ಎಲ್ಲಾ ಇಲಾಖೆಗಳು ಒಟ್ಟು ಸೇರಿ ಆಟ ಆಡುವುದು ಉತ್ತಮ ಬೆಳವಣಿಗೆ. ಮುಂದಿನ ಸಮಾಜಮುಖಿ ಕೆಲಸ ಕಾರ್ಯಗಳ ಚಿಂತನೆ ಇಟ್ಟುಕೊಂಡು ಈ ಬಾಂಧವ್ಯ ಟ್ರೋಪಿ ನಡೆಯುತ್ತಿದೆ. ಮುಂದಿನ ವರ್ಷ ವಿಜೃಂಭಣೆಯಿಂದ ನಡೆಯಲಿ ಎಂದು ಹೇಳಿ ಶುಭ ಹಾರೈಸಿದರು.
ಡಾ.ಸುರೇಶ್ ಪುತ್ತೂರಾಯ ಮಾತನಾಡಿ, ಗೆಲುವಿಗಿಂತ ಭಾಗವಹಿಸುವುದೇ ಮುಖ್ಯ ಎಂಬ ಧ್ಯೇಯದೊಂದಿಗೆ ಎಲ್ಲಾ ತಂಡಗಳು ಆಡುತ್ತಿರುವುದು ತುಂಬಾ ಸಂತೋಷದ ವಿಷಯ ಎಂದು ಶುಭ ಹಾರೈಸಿದರು.
ಉದ್ಯಮಿ ಸಹಜ್ ರೈ ಮಾತನಾಡಿ, ಪುತ್ತೂರಿನ ಇತಿಹಾಸದಲ್ಲಿ ವಿವಿಧ ಇಲಾಖೆಗಳನ್ನು ಒಂದೇ ಕಡೆ ಸೇರಿಸಿ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸುವ ಕಾರ್ಯಕ್ರಮ ಇದ್ರೆ ಬಾಂಧವ್ಯ ಟೋಪಿ ಮಾತ್ರ ಎಂದು ಹೇಳಿ ಶುಭ ಹಾರೈಸಿದರು.
ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಪೊಲೀಸ್ ನಿರೀಕ್ಷಕ ಸುನಿಲ್ ಕುಮಾರ್, ಪೊಲೀಸ್ ಉಪನಿರೀಕ್ಷಕಿ ಸೇಸಮ್ಮ, ಸುದ್ದಿ ಸಮೂಹ ಸಂಸ್ಥೆಗಳ ಸಿಇಓ ಸೃಜನ್ ಊರುಬೈಲ್, ಮೆಸ್ಕಾಂ ಇಂಜಿನಿಯರ್ ರಾಮಚಂದ್ರ, ಉದ್ಯಮಿಗಳಾದ ಶಿವರಾಮ ಆಳ್ವ ಮುಖ್ಯ ಅತಿಥಿಗಳಾಗಿ ಆಗಮಸಿ ಶುಭ ಹಾರೈಸಿದರು.
ಸಮಾರೋಪ:
ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದ್ ಮಾತನಾಡಿ, ಪಂದ್ಯಾಟದ ಯಶಸ್ಸಿನ ಹಿಂದಿರುವ ಫಾರೂಕ್ ನಮ್ಮ ಸುದ್ದಿಯ ಭಾಗ. ಸ್ಕರಿಯ ಹಾಗೂ ಪ್ರಶಾಂತ್ 7 ವರ್ಷಗಳ ಹಿಂದೆ ಕಾರ್ಯಕ್ರಮದ ಬಗ್ಗೆ ಪ್ರಸ್ತಾಪಿಸಿದಾಗ ಇದು ಸಾಧ್ಯವೇ ಎಂದು ಯೋಚನೆ ಮಾಡಿದ್ದೆವು. ಈ 7 ವರ್ಷಗಳಿಂದ ಪಂದ್ಯ ಅತ್ಯದ್ಭುತವಾಗಿ ನಡೆದುಕೊಂಡು ಬಂದಿದೆ. ಜನರಲ್ಲಿ ಬಾಂಧವ್ಯ ಮೂಡಿಸುವ ಇಂತಹ ಚಿಂತನೆಗೆ ಅಭಿನಂದನೆ ಸಲ್ಲಿಸಬೇಕು. ಪುರುಸೋತಿಲ್ಲದ ಜನರನ್ನು ಮತ್ತು ಸಮಾಜಕ್ಕೆ ಕೊಡುಗೆ ನೀಡುವವರನ್ನು ಕ್ರೀಡೆಯೊಳಗೆ ತಂದು ಬೆರೆಯುವಂತೆ ಮಾಡುವುದು ಅತ್ಯಂತ ಒಳ್ಳೆಯ ಕೆಲಸವಾಗಿದೆ. ಕ್ರೀಡೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು ಎಂದು ಹೇಳಿ ಶುಭ ಹಾರೈಸಿದರು
ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಕ್ರೀಡೆ ಎಂದರೆ ಮೊದಲು ನೆನಪಾಗುವುದು ಒಲಿಂಪಿಕ್ಸ್. ಇದು ದೇಶ ದೇಶಗಳನ್ನು ಒಂದುಗೂಡಿಸುವ ಕೆಲಸ ಮಾಡಿದೆ. ಒಟ್ಟು ಜನಸಂಖ್ಯೆಯ 60 ಶೇ. ಜನ 40ಕ್ಕಿಂತ ಕೆಳಗಿನವರು. ನಾವು ಕ್ರೀಡೆಯಲ್ಲಿ ತೊಡಗಿಸಿಕೊಂಡು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಲು ಅವಕಾಶ ಇದೆ. ಜೊತೆಗೆ ಪ್ರೀತಿ ವಿಶ್ವಾಸದ, ಬಾಂಧವ್ಯದ ಜೀವನ ನಡೆಸಲು ಕೂಡ ಈ ಕ್ರೀಡೆ ಸಹಕಾರಿಯಾಗಿದೆ. ನಾನು ಕಳೆದ 7 ವರ್ಷಗಳಿಂದಲೂ ಬಾಂಧವ್ಯ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದೇನೆ. ಶಾಸಕನಾಗಿ, ಮಾಜಿ ಶಾಸಕನಾಗಿಯೂ ಬಂದಿದ್ದೇನೆ. ಇಂತಹ ಉತ್ತಮ ಕ್ರೀಡಾಕೂಟ ಆಯೋಜನೆ ಮಾಡಿದ ಸ್ಕರೀಯ, ಫಾರೂಕ್ ಶೇಖ್ ಮತ್ತು ಪ್ರಶಾಂತ್ ಅವರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ಮೂವರು ಮೊದಲಿಗೆ ಸೇರಿದಾಗ ಇವರು ಏನು ಮಾಡಬಹುದು ಎಂದು ಸ್ವಲ್ಪ ಅಪಸ್ವರ ಇತ್ತು. ಆದರೆ ಇಂದು ಇವರು ಏನು ಮಾಡಬಹುದು ಎನ್ನುವುದು ಗೊತ್ತಾಗಿದೆ ಎಂದು ಹೇಳಿ ಶುಭ ಹಾರೈಸಿದರು.
ಪೊಲೀಸ್ ಉಪನಿರೀಕ್ಷಕರಾದ ಆಂಜನೇಯ ರೆಡ್ಡಿ, ಜಂಬೂರಾಜ್ ಮಹಾಜನ್, ರಾಜೇಶ್, ಉದಯ ರವಿ, ಪ್ರೇಮ ಬೇಕರಿ ಮಾಲಕ ವಿನೋದ್ ಅವರ ಪುತ್ರಿಯರಾದ ಅಮೃತ ಅದ್ಯಾತ, ಬಿಕೆ ಬಿಲ್ಡ್ ಮಾರ್ಟ್ ಮಾಲಕ ಮೊಯ್ದೀನ್, ಮಂಗಳೂರು ಕಟೀಲ್ ಲಾಜಿಸ್ಟಿಕಿನ ಜನಾರ್ದನ ಪೂಜಾರಿ ಅತಿಥಿಯಾಗಿ ಭಾಗವಹಿಸಿದರು.
ಇದೇ ಸಂದರ್ಭ ಶಾಸಕ ಅಶೋಕ್ ಕುಮಾರ್ ರೈ ಹಾಗೂ 400 ಮೀಟರ್ ಹರ್ಡಲ್ಸ್ ನ ರಾಷ್ಟ್ರೀಯ ಕ್ರೀಡಾಪಟು ಅನಘ ಕೆ.ಎ., ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಜುವೆನ್ನಾ ಡ್ಯಾಝಲ್ ಕುಟಿನ್ಹಾ, ರಾಷ್ಟ್ರಮಟ್ಟದ ತ್ರೋಬಾಲ್ ಆಟಗಾರ ಮಹಮ್ಮದ್ ಶಾನ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಪಂದ್ಯಾಟದ್ದುದಕ್ಕೂ ಉಪಾಹಾರ, ಊಟ, ಪಾನೀಯದ ವ್ಯವಸ್ಥೆಯನ್ನು ಉಚಿತವಾಗಿ ಮಾಡಲಾಗಿತ್ತು.
ಬಾಂದವ್ಯ ಟ್ರೋಫಿ ಯ ಸಂಘಟಕ ಸ್ಕರಿಯ ಯಂ ಎ ಸ್ವಾಗತಿಸಿ, ಪ್ರಶಾಂತ್ ರೈ ವಂದಿಸಿದರು. ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು.
Posted by Vidyamaana on 2024-05-11 22:08:40 |
ಮೈಸೂರು: ಸುಲ್ತಾನ್ ಗೋಲ್ಡ್ ಅಂಡ್ ಡೈಮಂಡ್ ಸಂಸ್ಥೆಯು ತನ್ನ 11ನೇ ಶಾಖೆಯನ್ನು ನಗರದ ಮೀನಾ ಬಜಾರ್ ವೃತ್ತದ ಸಮೀಪ ಸಂತ ಫಿಲೋಮಿನಾ ಚರ್ಚ್ ರಸ್ತೆಯಲ್ಲಿ ತೆರೆಯುತ್ತಿದ್ದು, ಮೇ 12ರಂದು ಬಾಲಿವುಡ್ ನಟಿ ರವೀನಾ ಟಂಡನ್ ಅವರು ಮಳಿಗೆ ಉದ್ಘಾಟಿಸಲಿದ್ದಾರೆ.
ಶಾಸಕರಾದ ತನ್ನೀರ್ ಸೇರ್, ಜಿ.ಟಿ.ದೇವೇಗೌಡ, ಕೆ.ಹರೀಶ್ ಗೌಡ, ಸಂತ ಫಿಲೋಮಿನಾ ಚರ್ಚ್ನ ಧರ್ಮದರ್ಶಿ ಸ್ಪ್ಯಾನಿ ಅಡಾ, ಮಿಸ್ ಇಂಡಿಯಾ ಯುನಿವರ್ಸ್ ಖ್ಯಾತಿಯ ಡಾ.ಹೇಮಾಮಾಲಿನಿ ಲಕ್ಷ್ಮಣ್, ವೆಲ್ವಿನ್ ಇಂಡಸ್ಟ್ರೀಸ್ನ ಗೌರ್ ನಾಜ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನೂತನ ಮಳಿಗೆಯ ಉದ್ಘಾಟನೆಯ ಅಂಗವಾಗಿ ಮೇ 31ರವರೆಗೆ ಪ್ರತಿದಿನ
Posted by Vidyamaana on 2023-10-25 07:20:53 |
ಶೂನ್ಯದಿಂದ ಪ್ರಾರಂಭಿಸಿ ದೈತ್ಯಾಕಾರದ ಕನಸುಗಳನ್ನು ನಂಬಲಾಗದಂತೆ ನನಸಾಗಿಸಿದ ಓರ್ವ ವ್ಯಕ್ತಿಯೇ ಮೂತೇದತ್ ಪಂಜನ್ ರಾಮಚಂದ್ರನ್. ಇವರು 14,000 ಕೋಟಿ ರೂಪಾಯಿ ಮೌಲ್ಯದ ಕಂಪನಿಯಾಗಿ ಬೆಳೆದು ನಿಂತ ಜ್ಯೋತಿ ಲ್ಯಾಬೋರೇಟರೀಸ್ ಲಿಮಿಟೆಡ್ನ ಸಂಸ್ಥಾಪಕ ಮತ್ತು ಅಧ್ಯಕ್ಷರಾಗಿದ್ದಾರೆ.ಬಹುಶಃ ನಿಮಗೆ ಪಂಜನ್ ರಾಮಚಂದ್ರನ್ ಅಂದರೆ ಯಾರು ಎಂದು ತಿಳಿದಿರಲಿಕ್ಕಿಲ್ಲ.
ಆದರೆ ಬಿಳಿ ಬಣ್ಣದ ಉಡುಪುಗಳಲ್ಲಿ ನಿಷ್ಕಳಂಕ ಹೊಳಪು ಮತ್ತು ಬಿಳುಪನ್ನು ನೀಡುವ "ಉಜಾಲಾ ಬ್ಲೂ" ಅಂದರೆ ಥಟ್ಟನೆ ನೀಲಿ ಬಣ್ಣ ಪುಟ್ಟ ಬಾಟಲಿ ನಮ್ಮ ಕಣ್ಣಮುಂದೆ ಹಾದುಹೋಗುತ್ತದೆ. ಇದಲ್ಲದೇ ಜ್ಯೋತಿ ಲ್ಯಾಬೋರೇಟರೀಸ್ ಲಿಮಿಟೆಡ್ ನ ಹಲವು ಉತ್ಪನ್ನಗಳು ಜನಪ್ರಿಯವಾಗಿದೆ.
ಲಕ್ಷಾಂತರ ಯುವ ಉದ್ಯಮಿಗಳಿಗೆ ಉದಾಹರಣೆ
ಜ್ಯೋತಿ ಲ್ಯಾಬೋರೇಟರೀಸ್ ಲಿಮಿಟೆಡ್ ಹುಟ್ಟು ಹಾಕಿದ ರಾಮಚಂದ್ರನ್ ಲಕ್ಷಾಂತರ ಯುವ ಉದ್ಯಮಿಗಳಿಗೆ ಉದಾಹರಣೆಯಾಗಿದ್ದಾರೆ. ಎಂ ಪಿ ರಾಮಚಂದ್ರನ್ ಅವರು ಕೇವಲ 5000 ರೂ ಸಾಲ ಪಡೆದು ವ್ಯವಹಾರ ಪ್ರಾರಂಭಿಸಿ, ತಮ್ಮ ಕಠಿಣ ಪರಿಶ್ರಮ ಮತ್ತು ತೀಕ್ಷ್ಣವಾದ ವ್ಯವಹಾರದ ಚಾತುರ್ಯದಿಂದ ಇಂದು ಬಹುಕೋಟಿ ಕಂಪನಿಯನ್ನು ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.ಜ್ಯೋತಿ ಲ್ಯಾಬೋರೇಟರೀಸ್ ಲಿಮಿಟೆಡ್ ಇಂದು ಉಜಾಲಾ ಲಿಕ್ವಿಡ್ ಕ್ಲೋತ್ ವೈಟ್ನರ್ ಮತ್ತು ಮ್ಯಾಕ್ಸೋ(Maxo) ಸೊಳ್ಳೆ ನಿವಾರಕ ಲಿಕ್ವಿಡ್, ಎಕ್ಸೋ, ಟಿ-ಶೈನ್ ಹೀಗೆ ಹತ್ತು ಹಲವು ಉತ್ಪನಗಳನ್ನು ಉತ್ಪದಿಸುತ್ತಿದ್ದು, ಅಂದು ತಮ್ಮ ಸ್ವಂತ ತಾತ್ಕಾಲಿಕ ಕಾರ್ಖಾನೆಯನ್ನು ಸ್ಥಾಪಿಸಲು ರಾಮಚಂದ್ರನ್ ಅವರು ತನ್ನ ಸಹೋದರನಿಂದ 5000 ರೂ ಸಾಲವನ್ನು ಪಡೆದು, ಇಂದು ಅದನ್ನು 13,583 ಕೋಟಿ ರೂಪಾಯಿ ಮಾರುಕಟ್ಟೆ ಬಂಡವಾಳವನ್ನು ಹೊಂದಿರುವ ಕಂಪನಿಯನ್ನಾಗಿ ಪರಿವರ್ತಿಸಿದ್ದಾರೆ.
ಕೇರಳದವರಾದ ರಾಮಚಂದ್ರನ್ ಅವರು ಬಡ ಕುಟುಂಬದಲ್ಲಿ ಹುಟ್ಟಿ ಬೆಳೆದರು. ಶಾಲಾ ಶಿಕ್ಷಣದ ಬಳಿಕ ತ್ರಿಶೂರ್ನ ಸೇಂಟ್ ಥಾಮಸ್ ಕಾಲೇಜಿನಲ್ಲಿ ತಮ್ಮ ಬಿ.ಕಾಂ ಪದವಿ ಪಡೆದುಕೊಂಡರು. ಮುಂದೆ ಓದಬೇಕೆಂಬ ಅತಿಯಾಸೆ ಇದ್ದರೂ ಆರ್ಥಿಕ ಸಮಸ್ಯೆಯಿಂದಾಗಿ ರಾಮಚಂದ್ರನ್ ಅವರು ಅಕೌಂಟೆಂಟ್ ಆಗಿ ಕೆಲಸ ಮಾಡಲು ಪ್ರಾರಂಭಿಸಿದರು.ಕೆಲ ವರ್ಷಗಳ ಕಾಲ ಅಲ್ಲಿ ಕೆಲಸ ಮಾಡಿದರೂ ಆ ಸಂಸ್ಥೆ ಸ್ಥಗಿತಗೊಂಡ ಕಾರಣ ಹೊಸ ಉದ್ಯೋಗವನ್ನು ಹುಡುಕುವ ಬದಲು ಹೊಸದಾಗಿರುವ ಮತ್ತು ಸ್ವಂತವಾಗಿರುವ ವ್ಯಾಪಾರ ಪ್ರಾರಂಭಿಸಬೇಕು ಅಂದುಕೊಂಡರು. ರಾಮಚಂದ್ರನ್ ಬಟ್ಟೆಗಾಗಿ ವೈಟ್ನರ್ ತಯಾರಿ ಮಾಡಲು ನಿರ್ಧರಿಸಿ ಇದಕ್ಕಾಗಿ ಅವರು ತಮ್ಮ ಅಡುಗೆಮನೆಯಲ್ಲಿ ಪ್ರಯೋಗವನ್ನು ಪ್ರಾರಂಭಿಸಿದರು, ಆದರೆ ಅವರಿಗೆ ಯಶಸ್ಸು ಸಿಗಲಿಲ್ಲ.
ಹೀಗಿರುವ ಒಂದು ದಿನ ರಾಮಚಂದ್ರನ್ ಅವರು ಕೆಮಿಕಲ್ ಇಂಡಸ್ಟ್ರಿ ಮ್ಯಾಗಜೀನ್ ಓದುತ್ತಿರುವಾಗ, ಅದರಲ್ಲಿ ಪರ್ಪಲ್ ಡೈ ಯಿಂದ ಜವಳಿ ತಯಾರಕರು ಸಾಧ್ಯವಾದಷ್ಟು ಬಿಳಿ ಮತ್ತು ಬ್ರೈಟ್ ಕಲರ್ ಪಡೆಯಬಹುದು ಎಂದು ಬರೆದಿತ್ತು. ಇದಾದ ನಂತರ, ರಾಮಚಂದ್ರನ್ ಒಂದು ವರ್ಷ ನೇರಳೆ ಬಣ್ಣಗಳ ಪ್ರಯೋಗವನ್ನು ಮುಂದುವರೆಸಿದರು.
ಜೀವನ ಬದಲಾಯಿಸಿದ ಉಜಾಲಾ
"ಉಜಾಲಾ" ಅವರ ಜೀವನವನ್ನು ಬದಲಾಯಿಸುವ ಈ ಕಥೆಯು 1983 ರಲ್ಲಿ ಪ್ರಾರಂಭವಾಯಿತು. ಅದೇ ವರ್ಷ ರಾಮಚಂದ್ರನ್ ಅವರು ಕೇರಳದ ತ್ರಿಶೂರ್ನಲ್ಲಿ ತಮ್ಮ ಕುಟುಂಬದ ಜಮೀನಿನ ಸ್ವಲ್ಪ ಭಾಗದಲ್ಲಿ ತಾತ್ಕಾಲಿಕ ಕಾರ್ಖಾನೆಯೊಂದು ಸ್ಥಾಪಿಸಿದರು. ತಮ್ಮ ಕಂಪನಿಗೆ ಜ್ಯೋತಿ ಲ್ಯಾಬೋರೇಟರೀಸ್ ಎಂದು ತಮ್ಮ ಮಗಳು ಜ್ಯೋತಿಯ ಹೆಸರಿರಿಸಿದರು.
ಉಜಾಲಾ ನಿಜಕ್ಕೂ ನವೀನ ಪರಿಕಲ್ಪನೆಯಾಗಿ ಬಡವರಿಂದ ಸಿರಿವಂತರವರೆಗೆ ಇದು ಆಕರ್ಷಿಸಿತು. ಮೊದಲು 5 ಮಾರಾಟ ಮಹಿಳೆಯರ ಮೂಲಕ ಮನೆಯಿಂದ ಮನೆಗೆ ಮಾರಾಟ ಆರಂಭಿಸಿ ಉಜಾಲಾವನ್ನು ಹಲವು ಪ್ರಯತ್ನದ ಬಳಿಕ ಅಂಗಡಿಗಳಲ್ಲಿ ಮಾರಾಟಕ್ಕೆ ಸ್ವೀಕರಿಸಲಾಯಿತು ಮತ್ತು ವಾಣಿಜ್ಯಿಕವಾಗಿ ವಿಸ್ತರಿಸಲಾಯಿತು. ಉಳಿದ ಕಥೆ ಇತಿಹಾಸವಾಯಿತು!
Posted by Vidyamaana on 2024-06-21 12:18:56 |
ಪುತ್ತೂರು : ರಾಜ್ಯದ ಎಲ್ಲ ಶಾಲೆಗಳಲ್ಲಿ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಬೇಕು ಮತ್ತು ಶನಿವಾರ (ಜೂ.22) ಪೂರ್ಣ ತರಗತಿಗಳನ್ನು ನಡೆಸುವಂತೆ ಶಾಲಾ ಶಿಕ್ಷಣ ಇಲಾಖೆಯು ನಿರ್ದೇಶನ ನೀಡಿದೆ.