Posted by vidyamaana on 2023-06-29 12:19:28 |
ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು, ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು. ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು.
ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು.
ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ ಮುಸ್ಲಿಂ ಮಗುವೊಂದು ಮೃತಪಟ್ಟಿದೆ.
ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.
Posted by Vidyamaana on 2023-09-28 13:09:39 |
ಬಂಟ್ವಾಳ: ಇಂದು ನಾಡಿನೆಲ್ಲೆಡೆ ಈದ್-ಮಿಲಾದ್ ಸಂಭ್ರಮ ಮನೆಮಾಡಿದೆ. ಪ್ರವಾದಿ ಮಹಮ್ಮದ್ ಅವರ ಜನ್ಮದಿನವನ್ನು ಮುಸ್ಲಿಂ ಬಾಂಧವರು ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದಾರೆ.
ಈ ನಡುವೆ, ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಬೇಂಕ್ಯದಲ್ಲಿ ಈದ್ ಮಿಲಾದ್ ಸಂಭ್ರಮದ ಮೆರವಣಿಗೆ ಸಾಗಿ ಬಂದ ಸಂದರ್ಭದಲ್ಲಿ ಸಜೀಪ ಮೂಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿರುವ ದೇವಿ ಪ್ರಸಾದ್ ಪೂಂಜ (ಶೋಭಿತ್ ಪೂಂಜ) ಅವರು ಮುಸ್ಲಿಂ ಬಾಂಧವರಿಗೆ ಈದ್ ಮಿಲಾದ್ ಹಬ್ಬದ ಶುಭಾಶಯಗಳನ್ನು ತಿಳಿಸುತ್ತಾ ಸಿಹಿ ವಿತರಿಸಿ ಗಮನಸೆಳೆದಿದ್ದಾರೆ ಮತ್ತು ಈ ಮೂಲಕ ಕೋಮು ಸಾಮರಸ್ಯಕ್ಕೊಂದು ಹೊಸ ಭಾಷ್ಯ ಬರೆದಿದ್ದಾರೆ.
ಈ ಸಂದರ್ಭದಲ್ಲಿ ಸಜೀಪಮೂಡ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸಿದ್ದಿಕ್, ಚೆನ್ನಪ್ಪ ಪೂಜಾರಿ ಯೋಗಿಶ್ ಸಾಲ್ಯಾನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು
ದೇವಿ ಪ್ರಸಾದ್ ಪೂಂಜ ಅವರು ಪ್ರತೀ ವರ್ಷವೂ ಈದ್ ಮಿಲಾದ್ ಸಂದರ್ಭದಲ್ಲಿ ಮುಸ್ಲಿಂ ಬಾಂಧವರಿಗೆ ಸಿಹಿ ಹಂಚುವ ಮೂಲಕ ಈ ಭಾಗದಲ್ಲಿ ಹಿಂದು-ಮುಸ್ಲಿಂ ಸೌಹಾರ್ದಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಾ ಮಾದರಿ ಜನಪ್ರತಿನಿಧಿ ಎಣಿಸಿಕೊಂಡಿದ್ದಾರೆ.
Posted by Vidyamaana on 2023-10-20 12:28:22 |
ವಿಟ್ಲ : ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ.
ಪುಣಚ ಗ್ರಾಮದ ಕೊಲ್ಲಪದವು ಸಮೀಪ ಚೆಕ್ಕುತ್ತಿ
ನಿವಾಸಿ ಶ್ರೀ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ.
ಶ್ರೀ ಕೃಷ್ಣ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತರು ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Posted by Vidyamaana on 2024-04-08 17:47:57 |
ಬೆಂಗಳೂರು : ಇಲ್ಲಿನ ಬೊಮ್ಮನಹಳ್ಳಿ ಸಮೀಪ ಕಳೆದ ಬುಧವಾರ ಟ್ರಕ್ವೊಂದರಲ್ಲಿ ಗೋಮಾಂಸ ತ್ಯಾಜ್ಯವನ್ನು (cow waste) ಸಾಗಿಸಿದ್ದ ಬಗ್ಗೆ ಶಂಕೆ ಇದೆ. ಆದರೆ ಬೊಮ್ಮನಹಳ್ಳಿ ಪೊಲೀಸರು (bomanahalli police) ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ನಿರಾಕರಿಸುತ್ತಿದ್ದಾರೆ. ಗೋಹತ್ಯೆ ಕಾನೂನು ಬಾಹಿರವಾಗಿದ್ದು, ಸಂಬಂಧಪಟ್ಟವರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕೆಂದು ನಟಿ ಐಂದ್ರಿತಾ ರೈ (Aindrita Ray) ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದರು.ಗೋಮಾಂಸವನ್ನು ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದೆ ಎಂದು ಕೆಲವು ವ್ಯಕ್ತಿಗಳು ತ್ಯಾಜ್ಯ ಸಾಗಿಸುತ್ತಿದ್ದ ಟ್ರಕ್ ಅಡ್ಡಗಟ್ಟಿ ವಿಡಿಯೊ ಮಾಡಿಕೊಂಡಿದ್ದರು. ಈ ವಿಡಿಯೊವನ್ನು ನಟಿ ಐಂದ್ರಿತಾ ರೈ ಪೊಲೀಸ್ ಕಮೀಷನರ್, ಬೆಂಗಳೂರು ಪೊಲೀಸ್ ಹಾಗೂ ಆಗ್ನೇಯ ವಿಭಾಗ ಡಿಸಿಪಿಗೆ ಟ್ಯಾಗ್ ಮಾಡಿ, ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದರು.
Posted by Vidyamaana on 2023-12-22 12:52:06 |
ಪುತ್ತೂರು: ಮಾಣಿ - ಮೈಸೂರು ರಾ. ಹೆದ್ದಾರಿ ಯ ಕೊಯಿಲತ್ತಡ್ಕದಲ್ಲಿರುವ ತಟ್ಟಿಯಂಗಡಿಯಲ್ಲಿ ಪೈನಾಪಲ್ ತಿನ್ನುವ ಮೂಲಕ ಸಭಾಪತಿ ಯು ಟಿ ಖಾದರ್ ಸಿಂಪ್ಲಿಸಿಟಿ ಮೆರೆದಿದ್ದಾರೆ. ಕುಂಬ್ರದ ಕರ್ನಾಟಕ ಇಸ್ಲಾಮಿಕ್ ಸೆಂಟರ್ ಗೆ ಭೇಟಿ ನೀಢೀ ವಾಪಸ್ಸಾಗುವ ವೇಳೆ ಕೊಯಿಲತ್ತಡ್ಕದ ಅದ್ದು ಎಂಬವರ ಅಂಗಡಿಗೆ ತೆರಳಿದ ಅವರು ಪೈನಾಪಲ್, ಮಾವುತಿಂದು ತೆರಳಿದ್ದಾರೆ. ಖಾದರ್ ಅವರು ಬಂದ ಸುದ್ದಿ ತಿಳಿದು ಸ್ಥಳಿಯರು ಜಮಾಯಿಸಿದರು.
Posted by Vidyamaana on 2024-01-25 15:54:27 |
ನವದೆಹಲಿ, ಜ.25: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್
ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa), ಬಿವೈ ವಿಜಯೇಂದ್ರ (BY Vijayendra), ಕೇಂದ್ರ ಸಚಿವ ಭುಪೇಂದ್ರ ಯಾದವ್, ರಾಜೀವ್ ಚಂದ್ರಶೇಖರ್ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.ಪಕ್ಷ ಸೇರ್ಪಡೆಗೂ ಮುನ್ನ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದರು.
ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್
ಪಕ್ಷ ಸೇರ್ಪಡೆಗೂ ಮುನ್ನ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜೀನಾಮೆಗೂ ಮುನ್ನ ಶೆಟ್ಟರ್ ಅವರು ಹೊರಟ್ಟಿಗೆ ಕರೆ ಮಾಡಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದರು. ಈ ವೇಳೆ ಪತ್ರದ ಮೂಲಕ ಬೇಡ, ನೇರವಾಗಿ ಬಂದು ರಾಜೀನಾಮೆ ನೀಡುವಂತೆ ಸೂಚಿಸಿದ್ದರು.
ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ: ಶೆಟ್ಟರ್
ಪಕ್ಷ ಸೇರ್ಪಡೆ ನಂತರ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಶೆಟ್ಟರ್, ನಾನು ಪಕ್ಷಕ್ಕೆ ವಾಪಸಾಗಬೇಕೆಂದು ನಾಯಕರ ಅಪೇಕ್ಷೆ ಇತ್ತು. ಅಮಿತ್ ಶಾ ಅವರು ಅತ್ಯಂತ ಗೌರವದಿಂದ ಬರಮಾಡಿಕೊಂಡರು. ನಾನು ಬಿಜೆಪಿ ಮರು ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸ ಆಗಿದೆ. ನಾನು ಪರಿಷತ್ ಸ್ಥಾನಕ್ಕೆ ರಾಜೀನಾಮೆಯನ್ನೂ ಸಲ್ಲಿಸಿದ್ದೇನೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದೇನೆ. ಇ-ಮೇಲ್ ಮೂಲಕ ರಾಜೀನಾಮೆಯನ್ನ ನೀಡಿದ್ದೇನೆ ಎಂದರು.
ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು. ನಾನು ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ. ಕಾಂಗ್ರೆಸ್ನವರು ಕೂಡ ಒಳ್ಳೇ ಗೌರವ, ಸ್ಥಾನಮಾನ ನೀಡಿದ್ದರು. ಕಾಂಗ್ರೆಸ್ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಧನ್ಯವಾದ ತಿಳಿಸುತ್ತೇನೆ ಎಂದರು.