Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10
ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.
ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.
ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.
ಕೊಲೆಗೆ ಕಾರಣವೇನು?
ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.
Posted by Vidyamaana on 2023-03-09 13:27:52 |
ಚಿಕ್ಕಮಗಳೂರು: ಹೃದಯ ಹಾಗೂ ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಚಿಕ್ಕಮಗಳೂರಿನ ಉಪ್ಪಳ್ಳಿಯ ಬಾಲಕ ನುಹ್ಮಾನ್ ಅವರ ಕುಟುಂಬ, ಚಿಕಿತ್ಸೆಯ ಖರ್ಚಿಗಾಗಿ ದಾನಿಗಳ ನೆರವಿಗಾಗಿ ಎದುರು ನೋಡುತ್ತಿದ್ದಾರೆ.
ಬಾಲಕ ನುಹ್ಮಾನ್ ಚುರುಕು ಹಾಗೂ ಪ್ರತಿಭಾವಂತ. ಇದ್ದಕ್ಕಿದ್ದಂತೆ ಒಂದು ದಿನ ಅನಾರೋಗ್ಯ ಕಾಡುತ್ತದೆ. ಅನಾರೋಗ್ಯ ತೀವ್ರಗೊಳ್ಳುತ್ತಿದ್ದಂತೆ, ಆಸ್ಪತ್ರೆಯ ಹಾದಿ ಹಿಡಿಯುತ್ತಾರೆ ಮನೆಯವರು. ವೈದ್ಯರು ಹೇಳಿದ ವಿಷಯ ಕೇಳಿ ದಂಗಾಗಿ ಬಿಡುತ್ತಾರೆ. ಕಾರಣ, ನುಹ್ಮಾನ್ ಏಕಕಾಲದಲ್ಲಿ ಮೆದುಳು ಹಾಗೂ ಹೃದಯದ ಕಾಯಿಲೆಗೆ ತುತ್ತಾಗಿದ್ದ. ಸದ್ಯ ನುಹ್ಮಾನ್ ಬೆಂಗಳೂರಿನ ನಿಮ್ಹಾನ್ಸಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮಗನನ್ನೇನೋ ಆಸ್ಪತ್ರೆಗೆ ಸೇರಿಸಿದರು ಹೆತ್ತವರು. ಆದರೆ ವೈದ್ಯರು ಹೇಳಿದ 15 ಲಕ್ಷ ರೂ.ವನ್ನು ಹೊಂದಿಸಿಕೊಳ್ಳಲು ಹೆತ್ತವರ ಕೈಯಿಂದ ಆಗುತ್ತಿಲ್ಲ. ಆದ್ದರಿಂದ ದಾನಿಗಳ ನೆರವಿಗಾಗಿ ಮನವಿ ಮಾಡಿದ್ದಾರೆ. ಸಂಪರ್ಕಕ್ಕಾಗಿ 7892938854,
Posted by Vidyamaana on 2024-01-12 21:51:53 |
ಲೈಮಾ: ವಯಸ್ಕರ ಚಲನಚಿತ್ರ ಉದ್ಯಮದಲ್ಲಿ ತಾನು ಎದುರಿಸಿದ ಲೈಂಗಿಕ ಕಿರುಕುಳದ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ್ದ ಪೆರುವಿನ ನೀಲಿ ಚಿತ್ರತಾರೆ ಥೈನಾ ಫೀಲ್ಡ್ಸ್(24) (Thaina Fields) ಅದಾದ ಒಂದೇ ತಿಂಗಳಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.ಆಕೆಯ ಆಪ್ತ ಸ್ನೇಹಿತ ಅಲೆಜಾಂಡ್ರಾ ಸ್ವೀಟ್ (Alejandra Sweet) ಅವರು ಸಂದರ್ಶನವೊಂದರಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ನನ್ನ ಸ್ನೇಹಿತೆಯ ಸಾವಿನಿಂದ ದುಃಖಿತನಾಗಿದ್ದೇನೆ, ಸದ್ಯಕ್ಕೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ. ಆಕೆಯನ್ನು ಪ್ರೀತಿಸುವವರೆಲ್ಲರೂ ಅವಳ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿ ಎಂದು ಹೇಳಿದ್ದಾರೆ.ಫೀಲ್ಡ್ ನೊಂದಿಗೆ ಕೆಲಸ ಮಾಡಿದ ಉತ್ಪಾದನಾ ಕಂಪನಿಗಳಲ್ಲಿ ಒಂದಾದ ಮಿಲ್ಕಿ ಪೆರು, ಥೈನಾ ಫೀಲ್ಡ್ಸ್ಗೆ ಸಂತಾಪ ಸೂಚಿಸಿದೆ. ವಯಸ್ಕ ಉದ್ಯಮದಲ್ಲಿ (Film Industry) ತಾನು ಎದುರಿಸಿದ ಲೈಂಗಿಕ ಕಿರುಕುಳದ ಬಗ್ಗೆ ಥೈನಾ ಫೀಲ್ಡ್ಸ್ ಇತ್ತೀಚೆಗೆ ಹೇಳಿಕೊಂಡಿದ್ದಳು. ಅಡಲ್ಟ್ಸ್ ಕಂಟೆಂಟ್ನಲ್ಲಿ ನಟಿಸಲು ಪ್ರಾರಂಭಿಸಿದ ನಂತರ ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದೆ. ತನ್ನನ್ನು ನೇಮಿಸಿಕೊಂಡವರು ತಮಗೆ ಬೇಕಾದುದ್ದನ್ನು ಮಾಡಬೇಕು ಎಂದು ಬಯಸುತ್ತಾರೆ. ಮಹಿಳೆಯರು ವಯಸ್ಕರ ಚಿತ್ರಗಳಲ್ಲಿ ನಟಿಸುವುದು ತುಂಬಾ ಕಷ್ಟಕರವಾಗಿತ್ತು. ಈ ಆರೋಪಗಳನ್ನು ಮಾಡಿದ ಕೆಲ ತಿಂಗಳ ನಂತರ, ಥೈನಾ ಫೀಲ್ಡ್ಸ್ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಾವಿನ ಕಾರಣ ಇನ್ನಷ್ಟೇ ಹೊರಬರಬೇಕಿದೆ.ಸದ್ಯ ಬೆಳಕಿಗೆ ಬಂದಿರುವ ಆಘಾತಕಾರಿ ಘಟನೆಯಲ್ಲಿ, ಪೆರುವಿಯನ್ ವಯಸ್ಕ ಚಲನಚಿತ್ರ ತಾರೆ- ಥೈನಾ ಫೀಲ್ಡ್ ಎಂಬ ಹೆಸರಿನಿಂದ ಕೆಲಸ ಮಾಡುತ್ತಿದ್ದು, ನಿಗೂಢ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೂಲಗಳ ಪ್ರಕಾರ 24 ವರ್ಷದ ನಟಿಯ ದೇಹವು ಟ್ರುಜಿಲ್ಲೊದಲ್ಲಿನ ಅವರ ಮನೆಯಲ್ಲಿ ಪತ್ತೆಯಾಗಿದೆ. ಲೈಂಗಿಕ ಉದ್ಯಮದಲ್ಲಿ ಲೈಂಗಿಕ ಕಿರುಕುಳದ ಬಗ್ಗೆ ಆರೋಪ ಮಾಡಿದ ಒಂದು ತಿಂಗಳ ನಂತರ ಈ ಘಟನೆ ವರದಿಯಾಗಿದೆ. ಆಕೆಯ ಉದ್ಯಮದಲ್ಲಿ ತೊಡಗಿದ್ದ ಮಿಲ್ಕಿ ಪೆರು ಕಂಪನಿಯೂ ನಟಿಯ ಸಾವಿಗೆ ಸಂತಾಪ ಸೂಚಿಸಿದೆ
Posted by Vidyamaana on 2023-06-19 02:09:24 |
ಪುತ್ತೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು ( 6 ರಿಂದ 10 ನೇ ತರಗತಿ) ಗಳಿಗೆ ವಾರ್ಷಿಕ ರೂ.*ಹತ್ತು ಸಾವಿರದಂತೆ* ದಂತೆ ಪ್ರೊತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು.
ಅರ್ಜಿದಾರರು 2022-23 ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು 6 ನೇ ರಿಂದ 10 ನೇ ತರಗತಿಯಲ್ಲಿ ಓದುತ್ತಿರಬೇಕು.ರಾಜ್ಯ ಕ್ರೀಡಾ ಪ್ರಾಧಿಕಾರದಿಂದ ನೊಂದಯಿತವಾದ ಕ್ರೀಡಾ ಸಂಸ್ಥೆಗಳು ದಿನಾಂಕ 1-04-2022 ರಿಂದ 31-03-2023 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಅಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸರಬೇಕು.ಅಂದರೆ ದಿನಾಂಕ 1-04-2022 ರಿಂದ 31-03-2023 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿ ವೇತನ ಮೊತ್ತಕ್ಕೆ ಮಾತ್ರ ಅರ್ಹರಾಗಿರುತ್ತಾರೆ.ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಹರು ಇರುವ ಕ್ರೀಡಾಪಟುಗಳು http://sevasindhuservices.karnataka.gov in ಮೂಲಕ ಆನ್ ಲೈನ್ ನಲ್ಲಿ ದಿನಾಂಕ 31-07-2023 ಅರ್ಜಿಗಳನ್ನು ಸಲ್ಲಿಸುವಂತೆ ಪುತ್ತೂರು ತಾಲ್ಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೇಲ್ವಿಚಾರಕರಾದ ಶ್ರೀಕಾಂತ್ ಪೂಜಾರಿ ಬಿರಾವು ಪ್ರಕಟಣೆ ನೀಡಿದ್ದಾರೆ ಹೆಚ್ಚಿನ ಮಾಹಿತಿಗಾಗಿ 9164502107 ನಂಬರನ್ನು ಸಂಪರ್ಕಿಸಬಹುದಾಗಿದೆ.
Posted by Vidyamaana on 2023-03-03 15:43:23 |
ರಮಾನಾಥ ರೈ ಸಾರಥ್ಯದಲ್ಲಿ 12ನೇ ವರ್ಷದ ಬಯಲು ಕಂಬಳ
ಬಂಟ್ವಾಳ: ಇಲ್ಲಿನ ಮೂಡೂರು – ಪಡೂರು ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ 12ನೇ ವರ್ಷದ ಹೊನಲು ಬೆಳಕಿನ ಮೂಡೂರು – ಪಡೂರು ಜೋಡುಕರೆ ಬಯಲು ಕಂಬಳ ಮಾರ್ಚ್ 4ರಂದು ಬೆಳಿಗ್ಗೆ 8.45ಕ್ಕೆ ನಾವೂರು ಗ್ರಾಮದ ಕೋಡಿಬೈಲಿನಲ್ಲಿ ಉದ್ಘಾಟನೆಗೊಳ್ಳಲಿದೆ.
ಸೋಲೂರು ಕರ್ನಾಟಕ ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶ್ರೀ ಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಅಲ್ಲಿಪಾದೆ ಸಂತ ಅಂತೋನಿ ಚರ್ಚ್ ಧರ್ಮಗುರು ವಂ. ಫೆಡ್ರಿಕ್ ಮೊಂತೆರೊ, ಕಾವಳಕಟ್ಟೆ ಹಝ್ರತ್ ಡಾ. ಮುಹಮ್ಮದ್ ಫಾಝಿಲ್ ರಿಝ್ಜಿ ಕಂಬಳವನ್ನು ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಅಧ್ಯಕ್ಷತೆ ವಹಿಸುವರು.
ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಮಾಜಿ ಸಚಿವರಾದ ಯು.ಟಿ. ಖಾದರ್, ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ ಮೊದಲಾದವರು ಅತಿಥಿಗಳಾಗಿರುವರು ಎಂದು ಪ್ರಕಟಣೆ ತಿಳಿಸಿದೆ.
Posted by Vidyamaana on 2024-02-29 16:05:29 |
ಕೆಲವು ವರದಿಗಳ ಪ್ರಕಾರ ಪುಷ್ಪ 2 ಚಿತ್ರದಲ್ಲಿ ಇಂಟರ್ವಲ್ಗೂ ಮೊದಲು 30 ನಿಮಿಷಗಳ ದೃಶ್ಯವೊಂದು ಬರಲಿದೆ. ಇದಕ್ಕಾಗಿ ಬರೋಬ್ಬರಿ 35 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ. ಈ ದೃಶ್ಯ ಸೆರೆಹಿಡಿಯಲು ಬರೋಬ್ಬರಿ 50 ಕೋಟಿ ರೂಪಾಯಿ ಖರ್ಚಾಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ಪುಷ್ಪ 2 ಚಿತ್ರಕ್ಕೆ ಶೂಟಿಂಗ್ ನಡೆಯುತ್ತಿದೆ. ಈ ಸಿನಿಮಾನ ಅಂದುಕೊಂಡ ದಿನಾಂಕದಂದು ರಿಲೀಸ್ ಮಾಡಬೇಕು ಎಂಬ ನಿಟ್ಟಿನಲ್ಲಿ ನಿರ್ದೇಶಕ ಸುಕುಮಾರ್ ಅವರು ಕೆಲಸ ಮಾಡುತ್ತಿದ್ದಾರೆ. ಈ ಚಿತ್ರ ಆಗಸ್ಟ್ 15ರಂದು ಬಿಡುಗಡೆ ಆಗಲಿದೆ. ಈಗ ಸಿನಿಮಾ ಬಗ್ಗೆ ಭರ್ಜರಿ ಅಪ್ಡೇಟ್ ಒಂದು ಸಿಕ್ಕಿದೆ. ಈ ಚಿತ್ರದ ಒಂದು ಪ್ರಮುಖ ದೃಶ್ಯಕ್ಕೆ ತಂಡ ಬರೋಬ್ಬರಿ 50 ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ.
ಪುಷ್ಪ ಸಿನಿಮಾ 2021ರ ಡಿಸೆಂಬರ್ ತಿಂಗಳಲ್ಲಿ ರಿಲೀಸ್ ಆಗಿ ಬರೋಬ್ಬರಿ 300 ಕೋಟಿ ರೂಪಾಯಿ ಬಿಸ್ನೆಸ್ ಮಾಡಿತು. ಈ ಹಿನ್ನೆಲೆಯಲ್ಲಿ ಎರಡನೇ ಪಾರ್ಟ್ ಬಗ್ಗೆ ಪ್ರೇಕ್ಷಕರು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಕೂಡ ಒಳ್ಳೆಯ ಬಿಸ್ನೆಸ್ ಮಾಡುವ ಬಗ್ಗೆ ತಂಡಕ್ಕೆ ನಿರೀಕ್ಷೆ ಇದೆ. ಬಜೆಟ್ ವಿಚಾರದಲ್ಲಿ ಮೈತ್ರಿ ಮೂವೀ ಮೇಕರ್ಸ್ ಯಾವುದೇ ರಾಜಿ ಮಾಡಿಕೊಳ್ಳುತ್ತಿಲ್ಲ.ನಿರ್ದೇಶಕರು ಕೇಳಿದಷ್ಟು ಹಣವನ್ನು ಚೆಲ್ಲುತ್ತಿದ್ದಾರೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ.
ಕೆಲವು ವರದಿಗಳ ಪ್ರಕಾರ ಪುಷ್ಪ 2 ಸಿನಿಮಾದಲ್ಲಿ ಇಂಟರ್ವಲ್ಗೂ ಮೊದಲು 30 ನಿಮಿಷಗಳ ದೃಶ್ಯವೊಂದು ಬರಲಿದೆ. ಇದಕ್ಕಾಗಿ ಬರೋಬ್ಬರಿ 35 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ. ಈ ದೃಶ್ಯ ಸೆರೆಹಿಡಿಯಲು ಬರೋಬ್ಬರಿ 50 ಕೋಟಿ ರೂಪಾಯಿ ಖರ್ಚಾಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ 30 ನಿಮಿಷಗಳು ಕಥೆಗೆ ಪ್ರಮುಖ ಟ್ವಿಸ್ಟ್ ನೀಡಲಿವೆಯಂತೆ.ಪುಷ್ಪ ಕಥೆ ತಿರುಪತಿಯಲ್ಲಿ ಸಾಗಿತ್ತು. ಈ ಕಾಡಿನಲ್ಲಿ ಸಿಗುವ ರಕ್ತಚಂದನದ ಕಳ್ಳ ಸಾಗಣೆ ಬಗ್ಗೆ ಹೇಳಲಾಗಿತ್ತು. ಎರಡನೇ ಭಾಗದಲ್ಲಿ ತಿರುಪತಿಯ ಗಂಗಮ್ಮ ಜಾತ್ರೆಯೂ ಇರಲಿದೆಯಂತೆ. ಮಧ್ಯಂತರಕ್ಕೂ ಮೊದಲ 30 ನಿಮಿಷಗಳ ಕಥೆ ಇದೇ ಜಾತ್ರೆಯಲ್ಲಿ ಸಾಗಲಿದೆ ಎನ್ನಲಾಗಿದೆ. ಇದಕ್ಕಾಗಿ ದೊಡ್ಡ ದೊಡ್ಡ ಸೆಟ್ಗಳನ್ನು ಹಾಕಲಾಗಿದೆ.
ಏನೆಲ್ಲ ಇರಲಿದೆ?
30 ನಿಮಿಷಗಳಲ್ಲಿ ಒಂದು ಸಾಂಗ್, ಫೈಟ್ ಹಾಗೂ ಭಾವನಾತ್ಮಕ ದೃಶ್ಯಗಳು ಇರಲಿವೆ. ಈ ಚಿತ್ರದ ಬಜೆಟ್ 500 ಕೋಟಿ ರೂಪಾಯಿ ಎನ್ನಲಾಗಿದೆ. ಸದ್ಯದ ಮಟ್ಟಿಗೆ ಇವೆಲ್ಲವೂ ಅಂತೆ-ಕಂತೆ ಹಂತದಲ್ಲಿದೆ. ಸಿನಿಮಾ ನೋಡಿದ ಬಳಿಕವೇ ಇದಕ್ಕೆ ಉತ್ತರ ಸಿಗಲಿದೆ.
ಮೊದಲ ಭಾಗದಲ್ಲಿ
ಸಾಮಾನ್ಯ ಕೂಲಿಯವನಾಗಿದ್ದ ಪುಷ್ಪರಾಜ್ (ಅಲ್ಲು ಅರ್ಜುನ್) ರಕ್ತಚಂದನದ ಕಳ್ಳ ಸಾಗಣೆ ದಂಧೆ ಸೇರಿಕೊಳ್ಳುತ್ತಾನೆ. ಅಲ್ಲಿಂದ ಆತ ಬೆಳೆಯುತ್ತಾ ಹೋಗುತ್ತಾನೆ. ಮೊದಲ ಭಾಗದ ಕೊನೆಯಲ್ಲಿ ಆತ ಡಾನ್ ಆಗಿ ನಿಲ್ಲುತ್ತಾನೆ. ಸಂಪೂರ್ಣ ದಂಧೆಯನ್ನು ತನ್ನ ವಶಕ್ಕೆ ಪಡೆಯುತ್ತಾನೆ. ಎರಡನೇ ಭಾಗದಲ್ಲಿ ಆತ ಏನು ಮಾಡುತ್ತಾನೇ ಅನ್ನೋದೆ ಕಥೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಜೊತೆಗೆ ಫಹಾದ್ ಫಾಸಿಲ್, ಕನ್ನಡದ ಡಾಲಿ ಧನಂಜಯ್ ಮೊದಲಾದವರು ನಟಿಸಿದ್ದಾರೆ.
Posted by Vidyamaana on 2023-09-21 09:49:36 |
ನವದೆಹಲಿ:ಹೊಸ ಸಂಸತ್ತಿನ ಕಟ್ಟಡಕ್ಕಾಗಿ ಸರ್ಕಾರ ತಂದ ಹೊಸ ಬಟ್ಟೆಗಳನ್ನು ಸಂಸತ್ತಿನ ಭದ್ರತಾ ವಿಭಾಗವು ಇನ್ನು ಮುಂದೆ ಧರಿಸುವುದಿಲ್ಲ, ಹಲವಾರು ಭದ್ರತಾ ಸಿಬ್ಬಂದಿಗಳು ಬಟ್ಟೆಗಳ ವಸ್ತುವು ಸಿಂಥೆಟಿಕ್ ಮತ್ತು ಶಾಖವನ್ನು ಉಂಟುಮಾಡುತ್ತದೆ ಎಂದು ದೂರಿದರು.ಬುಧವಾರ ಬೆಳಿಗ್ಗೆ ತುರ್ತು ಸಭೆಯ ನಂತರ, ಹಳೆಯ ನೇವಿ ಬ್ಲೂ ಸಫಾರಿ ಸೂಟ್ಗಳನ್ನು ಧರಿಸಲು ನಿರ್ಧಾರ ತೆಗೆದುಕೊಳ್ಳಲಾಯಿತು.ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿಯ ವಿನ್ಯಾಸಗಳೊಂದಿಗೆ ಟೇಬಲ್ ಆಫೀಸ್, ನೋಟಿಸ್ ಆಫೀಸ್ ಮತ್ತು ಪಾರ್ಲಿಮೆಂಟರಿ ರಿಪೋರ್ಟಿಂಗ್ ವಿಭಾಗಗಳಲ್ಲಿನ ಸಿಬ್ಬಂದಿ ಸದಸ್ಯರು ಮತ್ತು ಭದ್ರತಾ ಸಿಬ್ಬಂದಿಯ ಬಟ್ಟೆಗಳನ್ನು ಸರ್ಕಾರ ಬದಲಾಯಿಸಿದೆ. ಟೇಬಲ್, ನೋಟಿಸ್ ಮತ್ತು ಸಂಸದೀಯ ವರದಿ ವಿಭಾಗಗಳ ಅಧಿಕಾರಿಗಳ ಶರ್ಟ್ಗಳ ಮೇಲೆ ಕಮಲದ ಚಿತ್ರಗಳು ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿವೆ.
ಭದ್ರತಾ ಸಿಬ್ಬಂದಿಯ ಸದಸ್ಯರಿಗೆ ಅವರು ಧರಿಸಿದ್ದ ನೇವಿ ಬ್ಲೂ ಸಫಾರಿ ಸೂಟ್ಗಳ ಬದಲಿಗೆ ಮಿಲಿಟರಿ ಶೈಲಿಯ ಮರೆಮಾಚುವ ಉಡುಪುಗಳನ್ನು ನೀಡಲಾಯಿತು. ಆದಾಗ್ಯೂ, ಹಲವಾರು ಸಿಬ್ಬಂದಿಗಳಿಂದ ದೂರುಗಳ ನಂತರ, ಮುಂದಿನ ಸೂಚನೆಯವರೆಗೆ ಸಫಾರಿ ಸೂಟ್ಗಳಿಗೆ ಹಿಂತಿರುಗಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸೆಕ್ರೆಟರಿಯಟ್ ನೌಕರರು, ಮೊದಲು ಬಂಧಗಳಧರಿಸುತ್ತಾರೆ, ಈಗ ಮೆಜೆಂಟಾ ಬಣ್ಣದ ನೆಹರೂ ಜಾಕೆಟ್ಗಳು, ಕಮಲದ ಮೋಟಿಫ್ಗಳ ಕೆನೆ ಬಣ್ಣದ ಶರ್ಟ್ಗಳು ಮತ್ತು ಖಾಕಿ ಪ್ಯಾಂಟ್ಗಳನ್ನು ನೀಡಲಾಗುತ್ತದೆ. ಸದನದ ಮಹಡಿಯಲ್ಲಿದ್ದ ಮಾರ್ಷಲ್ಗಳಿಗೆ ಮಣಿಪುರಿ ಪೇಟಗಳನ್ನು ನೀಡಲಾಯಿತು.
ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡ ಬಳಿಕವೂ ಸಮವಸ್ತ್ರ ಬದಲಾವಣೆ ಬಗ್ಗೆ ಲೋಕಸಭೆಯ ಕೆಲ ಸದಸ್ಯರು ದೂರಿದರು ಎಂದು ಮೂಲಗಳು ತಿಳಿಸಿವೆ. "ಲೋಕಸಭೆಯ ಹಲವಾರು ಸದಸ್ಯರು ತಮ್ಮ ಆಸನ ವ್ಯವಸ್ಥೆಗಳ ಬಗ್ಗೆ ಆಕ್ಷೇಪಣೆಗಳನ್ನು ಎತ್ತಿದ್ದಾರೆ, ಏಕೆಂದರೆ ಕೆಲವರು ಮುಂಭಾಗಕ್ಕೆ ತೆರಳಿದರು ಮತ್ತು ಅನೇಕರು ಹಿಂದೆ ಸರಿಯಬೇಕಾಯಿತು" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಶುಕ್ರವಾರ ಮುಕ್ತಾಯಗೊಳ್ಳಲಿರುವ ಐದು ದಿನಗಳ ಅಧಿವೇಶನವು ಮಂಗಳವಾರ ಹೊಸ ಕಟ್ಟಡಕ್ಕೆ ಪರಿವರ್ತನೆಯನ್ನು ಕಂಡಿದೆ. ಕೆಲವು ಕಾಮಗಾರಿಗಳು ಇನ್ನೂ ಹಳೆಯ ಕಟ್ಟಡದ ಹಿನ್ನಲೆಯಲ್ಲಿ ಬಾಕಿ ಇವೆ ಎಂದು ಸಚಿವರೊಬ್ಬರ ಸಿಬ್ಬಂದಿ ತಿಳಿಸಿದರು