ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಸುದ್ದಿಗಳು News

Posted by vidyamaana on 2024-07-03 19:23:39 |

Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.

 Share: | | | | |


ನೂರಾರು ವಿಶೇಷ ಚೇತನ ಮಕ್ಕಳ ಪಾಲಿಗೆ ಬೆಳಕಾದ ಡಾ.ಧನಂಜಯ ಸರ್ಜಿ

Posted by Vidyamaana on 2024-05-31 05:56:04 |

Share: | | | | |


ನೂರಾರು ವಿಶೇಷ ಚೇತನ ಮಕ್ಕಳ ಪಾಲಿಗೆ ಬೆಳಕಾದ ಡಾ.ಧನಂಜಯ ಸರ್ಜಿ

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ಡಾ.ಧನಂಜಯ ಸರ್ಜಿಯವರ ಮಾನವೀಯ ಕಳಕಳಿಯಲ್ಲಿ ಅತೀ ಪ್ರಮುಖ ಸ್ಥಾನ ಪಡೆಯುವುದು ಸರ್ಜಿ ಫೌಂಡೇಶನ್ ನ ವಿಶೇಷಚೇತನ ಮಕ್ಕಳ ಶಾಲೆ.

ಸಾಮಾಜಿಕ ಕಳಕಳಿ ಹೊಂದಿರುವ ಡಾ.ಧನಂಜಯ ಸರ್ಜಿ ಅವರು 2016 ರಲ್ಲಿಮಕ್ಕಳ ದಿನಾಚರಣೆ ಸಂದರ್ಭ 160 ವಿಶೇಷಚೇತನ ಹಾಗೂ ಅನಾಥ ಮಕ್ಕಳನ್ನು ಆರೋಗ್ಯಕ್ಕೆ ಸಂಬಂಧಿಸಿದಂತೆ ದತ್ತು ಪಡೆದಿದ್ದಾರೆ. ಇತ್ತೀಚೆಗೆ ಸರ್ಜಿ ಫೌಂಡೇಷನ್ ಅಡಿಯಲ್ಲಿ ಆ ಎಲ್ಲಾ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ವಿಶೇಷ ಕಾಳಜಿ ವಹಿಸಿರುವುದು ಸರ್ಜಿ ಅವರ ಮಾನವೀಯ ಮೌಲ್ಯಕ್ಕೆ ನಿದರ್ಶನವಾಗಿದೆ.

 ವಿಶೇಷಚೇತನ ಮಕ್ಕಳ ಬಾಳಿಗೆ ಹಾಗೂ ಆ ಕುಟುಂಬದ ಪಾಲಿಗೆ ಬೆಳಕಾಗಿದ್ದು ಸರ್ಜಿ ಇನ್‌ಸ್ಟಿಟೂಟ್

   ಇದು ವಿಶೇಷ ಚೇತನ ಮಕ್ಕಳ ತರಬೇತಿ ಕೇಂದ್ರ. ಡಾ.ಧನಂಜಯ ಸರ್ಜಿಯವರ ಈ ಮಾನವೀಯ ಕಳಕಳಿಯಿಂದ ಅಲ್ಲಿ ಸೇರ್ಪಡೆಗೊಂಡ ಮಕ್ಕಳು ಎಲ್ಲರಂತೆ ತಿರುಗಾಡಬಲ್ಲ, ಓಡಾಡಬಲ್ಲ ಹಾಗೆ ಮಾತೂ ಆಡಬಲ್ಲ ಶಕ್ತಿಯನ್ನು ಪಡೆದಿದ್ದಾರೆ. ಈ ಸಂಸ್ಥೆ  ನನ್ನಂತಹ ನೂರಾರು ಕುಟಂಬಗಳ ಬಾಳಿನ ಹೊಸ ಆಶಾಕಿರಣ ಎಂದರೆ ತಪ್ಪಿಲ್ಲ ಎನ್ನುತ್ತಾರೆ ಆ ಮಕ್ಕಳ ಹೆತ್ತವರು.

ಶಿವಮೊಗ್ಗದ ತರಂಗ ವಿಶೇಷಚೇತನ ಮಕ್ಕಳ ಶಾಲೆಗೆ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಯಂತ್ರೋಪಕರಣ ಹಾಗೂ ಕೊಠಡಿಯನ್ನು ಸರ್ಜಿ ಫೌಂಡೇಷನ್ ವತಿಯಿಂದ ನಿರ್ಮಾಣ ಮಾಡಿಕೊಡಲಾಗಿದೆ. ರವಿ ಡಿ. ಚನ್ನಣ್ಣನವರು ಶಿವಮೊಗ್ಗದಲ್ಲಿ ಜಿಲ್ಲಾ ರಕ್ಷಣಾಧಿಕಾರಿಯಾಗಿದ್ದ ಸಂದರ್ಭ ಈ ವಿಶೇಷ ಚೇತನ ಮಕ್ಕಳ ಸಶಕ್ತರನ್ನಾಗಿಸಲು ಅರಿವು ಜಾಥಾ ಹಮ್ಮಿಕೊಳ್ಳಲಾಗಿತ್ತು.

ಪುತ್ತೂರಿಗೆ ಬಂತುMost Expected ಹ್ಯುಂಡೈ ಎಕ್ಸ್ ಟರ್

Posted by Vidyamaana on 2023-07-14 06:18:39 |

Share: | | | | |


ಪುತ್ತೂರಿಗೆ ಬಂತುMost Expected  ಹ್ಯುಂಡೈ ಎಕ್ಸ್ ಟರ್

ಪುತ್ತೂರು: ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (HMIL) ತನ್ನ ಬಹುನಿರೀಕ್ಷಿತ ಹ್ಯುಂಡೈ ಎಕ್ಸ್‌ಟರ್ (Hyundai Exter) ಮೈಕ್ರೋ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಕಾರನ್ನು ಪುತ್ತೂರಿನ ಜನರಿಗೆ ಪರಿಚಯಿಸುವ ಹಿನ್ನೆಲೆಯಲ್ಲಿ ಜುಲೈ 14 ಶುಕ್ರವಾರ ಸಂಜೆ  4 ಗಂಟೆಗೆ ದರ್ಬೆಯಲ್ಲಿರುವ ಕಾಂಚನ‌ ಹುಂಡೈ ಶೋರೂಂನಲ್ಲಿ ಖ್ಯಾತ ಯೂಟ್ಯೂಬರ್ ಧನ್ರಾಜ್ ಆಚಾರ್ ಬಿಡುಗಡೆಗೊಳಿಸಲಿದ್ದಾರೆ.

ಈ ಹೊಸ ಹ್ಯುಂಡೈ ಎಕ್ಸ್‌ಟರ್ ಮೈಕ್ರೋ ಎಸ್‌ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.5,99,900 ಆಗಿದೆ. ಈ ಹೊಸ ಹ್ಯುಂಡೈ ಎಕ್ಸ್‌ಟರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಪಂಚ್, ಸಿಟ್ರನ್ ಸಿ3 ಮತ್ತು ಮಾರುತಿ ಇಗ್ನಿಸ್ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಇತ್ತೀಚೆಗೆ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಹ್ಯುಂಡೈನ ಘಟಕದಲ್ಲಿ ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಲಾಗಿದೆ. ಹೊಸದಾಗಿ ಬಿಡುಗಡೆಯಾದ ಹ್ಯುಂಡೈ ಎಕ್ಸ್‌ಟರ್ ಎಸ್‌ಯುವಿ ಕುರಿತು ನೀವು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿಗಳು ಇಲ್ಲಿದೆ.


ಬೆಲೆ ರೂಪಾಂತರಗಳು: ಹೊಸ ಹ್ಯುಂಡೈ ಎಕ್ಸ್‌ಟರ್ ಮೈಕ್ರೋ-ಎಸ್‌ಯುವಿಯು EX , EX(O) , S , S (O) , SX , SX(O), ಮತ್ತು SX(O) Connect ಎಂಬ 7  ಟ್ರಿಮ್ ಹಂತಗಳಲ್ಲಿ ಹೊಸ ಹ್ಯುಂಡೈ ಎಕ್ಸ್‌ಟರ್ ಮೈಕ್ರೋ ಎಸ್‌ಯುವಿಯ ಆರಂಭಿಕ ಬೆಲೆಯು ರೂ.5,99,900 ಆದರೆ, ಇದರ ಟಾಪ್ ಸ್ಪೆಕ್ ಮಾದರಿಗೆ ರೂ.9.31,990 ಲಕ್ಷವಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ.ಎಂಜಿನ್: ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನಲ್ಲಿ 1.2-ಲೀಟರ್, 4-ಸಿಲಿಂಡರ್ ಎಂಜಿನ್‌ನೊಂದಿಗೆ ಬಂದಿದೆ. ಇದು ಪೆಟ್ರೋಲ್ ಮತ್ತು ಸಿಎನ್‌ಜಿ ಎರಡರಲ್ಲೂ ಕಾರ್ಯನಿರ್ವಹಿಸುತ್ತದೆ. ಪೆಟ್ರೋಲ್ ರೂಪದಲ್ಲಿ, ಹುಂಡೈ ಎಕ್ಸ್‌ಟರ್‌ನ ಎಂಜಿನ್ 83 bhp ಪವರ್ ಮತ್ತು 114 Nm ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.ಎಕ್ಸ್‌ಟರ್ ಕಾರಿನ CNG ಆವೃತ್ತಿಯು 69bhp ಪವರ್ ಮತ್ತು 95 Nm ನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಎಕ್ಸ್‌ಟರ್ ಪೆಟ್ರೋಲ್ ಅನ್ನು 5-ಸ್ಪೀಡ್ ಮ್ಯಾನುವಲ್ ಅಥವಾ ಎಎಮ್‌ಟಿ ಗೇರ್‌ಬಾಕ್ಸ್‌ನೊಂದಿಗೆ ನೀಡಲಾಗುತ್ತದೆ. ಆದರೆ ಸಿಎನ್‌ಜಿ ಆವೃತ್ತಿಯಲ್ಲಿ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಮಾತ್ರ ನೀಡಲಾಗಿದೆ. ಎಕ್ಸ್‌ಟರ್ ಪೆಟ್ರೋಲ್ ಮಾದರಿಯು 19.4 ಕಿ.ಮೀ ಮೈಲೇಜ್ ನೀಡಿದರೆ, AMT ಮಾದರಿ 19.2 ಕಿ.ಮೀ ಮೈಲೇಜ್ ನೀಡುತ್ತದೆ.ಇನ್ನು CNG ಆವೃತ್ತಿಯು 27.1 ಕಿ.ಮೀ ಮೈಲೇಜ್ ನೀಡುತ್ತದೆ.


ವಿನ್ಯಾಸ:ಈ ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಕಾರಿನ ಮುಂಭಾಗ ಪ್ಯಾರಾಮೆಟ್ರಿಕ್ ಫ್ರಂಟ್ ಗ್ರಿಲ್, ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಕ್ಲಾಮ್‌ಶೆಲ್ ಬಾನೆಟ್ ಮತ್ತು ಎಚ್ ಆಕಾರದ ಎಲ್‌ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿವೆ. ಇನ್ನು ಈ ಮೈಕ್ರೋ ಎಸ್‍ಯುವಿಗೆ ಸುಲಭವಾಗಿ ಪ್ರವೇಶಿಸಲು ಮತ್ತು ಹೊರಬರಲು ಡೋರುಗಳು ವಿಶಾಲವಾಗಿ ತೆರೆದುಕೊಳ್ಳುತ್ತವೆ.ಬಣ್ಣಗಳ ಆಯ್ಕೆ: ಹ್ಯುಂಡೈ ಎಕ್ಸ್‌ಟರ್ ಕಾರ 6 ಮೊನೊಟೋನ್ ಮತ್ತು 3 ಡ್ಯುಯಲ್-ಟೋನ್ ಬಾಹ್ಯ ಬಣ್ಣ ಆಯ್ಕೆಗಳಲ್ಲಿ ನೀಡುತ್ತಿದೆ. ಈ ಬಣ್ಣದ ಆಯ್ಕೆಗಳಲ್ಲಿ, ರೇಂಜ್ ಕಾಫಿ ಮತ್ತು ಕಾಸ್ಮಿಕ್ ಬ್ಲೂ ಬಣ್ಣದ ಆಯ್ಕೆಗಳು ಹೊಸದಾಗಿ ಪರಿಚಯಿಸಲಾಗಿವೆ. ಗ್ರಾಹಕರು ತಮ್ಮ ಮೆಚ್ಚಿನ ಬಣ್ಣದ ಮಾದರಿಯನ್ನು ಆಯ್ಕೆ ಮಾಡಿಕೊಳ್ಳಬಹುದು.


ಫಿಚರ್ಸ್: ಈ ಎಕ್ಸ್‌ಟರ್ ಕಾರಿನಲ್ಲಿ ಕೆಲವು ವಿಭಾಗ-ಮೊದಲ ಫೀಚರ್ಸ್ ಗಳಲ್ಲಿ, ಅಂತರ್ನಿರ್ಮಿತ ಡ್ಯಾಶ್‌ಕ್ಯಾಮ್, ಶಾರ್ಕ್ ಫಿನ್ ಆಂಟೆನಾ, ಫುಟ್‌ವೆಲ್ ಲೈಟಿಂಗ್, ಪ್ಯಾಡಲ್ ಶಿಫ್ಟರ್‌ಗಳು, ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್, ಆನ್‌ಬೋರ್ಡ್ ನ್ಯಾವಿಗೇಷನ್ ಮತ್ತು ಹೆಚ್ಚಿನವು ಸೇರಿವೆ. ಇತರ ಗಮನಾರ್ಹ ವೈಶಿಷ್ಟ್ಯಗಳೆಂದರೆ 4.2-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, Apple CarPlay ಮತ್ತು Android Auto ಜೊತೆಗಿನ 8-ಇಂಚಿನ ಇನ್ಫೋಟೈನ್‌ಮೆಂಟ್ ಯೂನಿಟ್ ಅನ್ನು ಹೊಂದಿದೆ.


ಇದರೊಂದಿಗೆ ಪುಶ್-ಬಟನ್ ಸ್ಟಾರ್ಟ್, ಕೂಲ್ಡ್ ಗ್ಲೋವ್‌ಬಾಕ್ಸ್, ಹಿಂಭಾಗದ AC ವೆಂಟ್‌ಗಳು ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಅನ್ನು ಹೊಂದಿದೆ. ಈ ಮಾದರಿಯು ಡ್ರೈವರ್, ಪ್ಯಾಸೆಂಜರ್, ಕರ್ಟನ್ ಮತ್ತು ಸೈಡ್ ಏರ್‌ಬ್ಯಾಗ್‌ಗಳು ಸೇರಿದಂತೆ ಆರು ಏರ್‌ಬ್ಯಾಗ್‌ಗಳನ್ನು ಹೊಂದಿರುವ ದೇಶದ ಮೊದಲ ಸಬ್-ಫೋರ್-ಮೀಟರ್ ಎಸ್‌ಯುವಿ ಆಗಲಿದೆ. ಒಟ್ಟಾರೆಯಾಗಿ, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), VSM ಮತ್ತು HAC (ಹಿಲ್ ಅಸಿಸ್ಟ್ ಕಂಟ್ರೋಲ್) ಸೇರಿದಂತೆ 26 ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುತ್ತದೆ.

ಹೆಚ್ಚಿನ ವಿವರ /ಮಾಹಿತಿಗಾಗಿ ಸಂಪರ್ಕಿಸಿ.....

RANJITH

Branch Manager

+91 97408 73450

Afwan

Sales Consultant M +91 9480389310

Kanchana Automobiles Private Limited. Opp St. Philomena School, Darbe, Puttur-574201 www.kanchana.hyundaimotor.in Hyundai Helpline :1800-1024645, 1800-114645

ಮಂಗಳೂರು: ಲೋಕಾಯಯಕ್ತ ಪೊಲೀಸರ ಭರ್ಜರಿ ಬೇಟೆ

Posted by Vidyamaana on 2023-07-07 13:11:28 |

Share: | | | | |


ಮಂಗಳೂರು: ಲೋಕಾಯಯಕ್ತ ಪೊಲೀಸರ ಭರ್ಜರಿ ಬೇಟೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಲೋಕಾಯಯಕ್ತ ಪೊಲೀಸರು ಇಂದು ದೊಡ್ಡ ಬೇಟೆಯಾಡಿದ್ದು. ಶಾಲಾ ಸಂಚಾಲಕಿ ತನ್ನ ಶಾಲೆಯ ನಿವೃತ್ತಿಯಾಗುತ್ತಿರುವ ಶಿಕ್ಷಕಿಯೊಬ್ಬರಿಂದ ಪೆಂಕ್ಷನ್ ಸಿಗುವ ದಾಖಲೆಗೆ ಸಹಿ ಹಾಕಲು 20 ಲಕ್ಷ ಹಣ ಲಂಚಕ್ಕೆ ಬೇಡಿಕೆಯಿಟ್ಟಿದ್ದು. ಈ ಬಗ್ಗೆ ಶಾಲಾ ಶಿಕ್ಷಕಿ ಲೋಕಾಯಯಕ್ತಕ್ಕೆ ದೂರು ನೀಡಿದ್ದರು. ಜುಲೈ 7 ರಂದು (ಇಂದು) 5 ಲಕ್ಷ ಹಣ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಸ್ವೀಕಾರಿಸುತ್ತಿದ್ದಾಗ ಲೋಕಾಯಯಕ್ತ ಪೊಲೀಸರು ಬೇಟೆಯಾಡಿ ಆರೋಪಿ ಜ್ಯೋತಿ ಪೂಜಾರಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮಂಗಳೂರು ಹೊರವಲಯದ ಬಜಪೆ ಶ್ರೀ ನಿರಂಜನ ಸ್ವಾಮಿ ಅನುದಾನಿಕ ಹಿರಿಯ ಪ್ರಾಥಮಿಕ ಶಾಲೆ ಸುಂಕದಕಟ್ಟೆಯ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯಯಕ್ತ ಬಲೆಗೆ ಬಿದ್ದ ಆರೋಪಿ. ಅದೆ ಶಾಲೆಯ ಶಿಕ್ಷಕಿ ಶೋಭಾರಾಣಿ ನಿವೃತ್ತಿ ಪೆಂಕ್ಷನ್ ಹಣ ಸಿಗುವ ದಾಖಲೆಗೆ ಶಾಲಾ ಸಂಚಾಲಕರು ಸಹಿ ಮಾಡಿ ಅದನ್ನು ಕ್ಷೇತ್ರ ಶಿಕ್ಷಣಾಧಿಕಾರಿಗೆ ನೀಡಬೇಕಾಗಿತ್ತು. ಅದೆ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿಯ ಸಹಿ ಬೇಕಾಗಿತ್ತು. ಈ ದಾಖಲೆಗೆ ಸಹಿ ಹಾಕಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟು ಇದೀಗ ಬಂಧನವಾಗಿದ್ದಾಳೆ.


ಲೋಕಾಯಯಕ್ತ ಎಸ್ಪಿ ಸೈಮನ್, ಡಿವೈಎಸ್ಪಿ ಚೆಲುವರಾಜ್, ಡಿವೈಎಸ್ಪಿ ಕಲಾವತಿ, ಇನ್ಸ್ಪೆಕ್ಟರ್ ವಿನಾಯಕ ಬಿಲ್ಲವ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು

ಸುಳ್ಯ : ಅಟೋ ರಿಕ್ಷಾಕ್ಕೆ ಓಮ್ಮಿ ಢಿಕ್ಕಿ: ರಿಕ್ಷಾ ಚಾಲಕ ಬಾಬು ಪಾಟಾಲಿ ಮೃತ್ಯು

Posted by Vidyamaana on 2023-11-06 07:11:18 |

Share: | | | | |


ಸುಳ್ಯ : ಅಟೋ ರಿಕ್ಷಾಕ್ಕೆ ಓಮ್ಮಿ ಢಿಕ್ಕಿ: ರಿಕ್ಷಾ ಚಾಲಕ ಬಾಬು ಪಾಟಾಲಿ ಮೃತ್ಯು

ಸುಳ್ಯ: ಅಟೋ ರಿಕ್ಷಾಕ್ಕೆ ಓಮ್ಮಿ ಢಿಕ್ಕಿ ಹೊಡೆದು ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನ.5ರಂದು ರಾತ್ರಿ ಸಂಭವಿಸಿದೆ.


ಜಾಲ್ಲೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು

ಬಿಟ್ಟು ಹಿಂತಿರುಗುತ್ತಿದ್ದ ಜಾಲ್ಲೂರು ಗ್ರಾಮದ ಅರಿಯಡ್ಕದ ಬಾಬು ಪಾಟಾಳಿ ಎಂಬವರು ಚಲಾಯಿಸುತ್ತಿದ್ದ ಅಟೋರಿಕ್ಷಾ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಮುಂಭಾಗದಿಂದ ಬರುತ್ತಿದ್ದ ಓಮ್ಮಿಗೆ ಢಿಕ್ಕಿ ಹೊಡೆದಿದ್ದು, ಚಾಲಕ ಬಾಬು ಪಾಟಾಳಿ ಅವರುಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸಹ ಪ್ರಯಾಣಿಕ ಗಾಯಗೊಂಡಿದ್ದು,ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ!!

Posted by Vidyamaana on 2024-02-29 12:28:33 |

Share: | | | | |


ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ!!

ಪುತ್ತೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಅವರ ಮುಂದಿನ ನಡೆಯನ್ನು ಬಿಚ್ಚಿಟ್ಟಿದ್ದಾರೆ.

ಬಿಜೆಪಿಯ ಟಿಕೇಟ್ ಆಕಾಂಕ್ಷಿಯಾಗಿರುವ ಅರುಣ್ ಕುಮಾರ್ ಪುತ್ತಿಲ ಅವರು ವಿಧಾನಸಭಾ ಚುನಾವಣೆಯಲ್ಲಿ ಸಣ್ಣ ಮತಗಳ ಅಂತರದಿಂದ ಪರಾಭವ ಹೊಂದಿದರೂ, ರಾಜ್ಯ ರಾಜಕಾರಣವೇ ಹಿಂದಿರುಗಿ ನೋಡುವಂತೆ ಮಾಡಿದ್ದರು. ಇದೀಗ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೊಮ್ಮೆ ಪುತ್ತಿಲ ಸ್ಪರ್ಧೆಯ ವಿಚಾರ ಮುನ್ನೆಲೆಗೆ ಬಂದಿದೆ.

ಪತ್ರಿಕಾಗೋಷ್ಠಿಯಲ್ಲಿ ಪುತ್ತಿಲ ಪರಿವಾರದ ಪ್ರಸನ್ನ ಮಾರ್ತಾ, ಶ್ರೀಕೃಷ್ಣ ಉಪಾಧ್ಯಾಯ, ಉಮೇಶ್ ಗೌಡ ಕೋಡಿಬೈಲು, ಅನಿಲ್ ತೆಂಕಿಲ, ಮಹೇಂದ್ರ ವರ್ಮಾ ಮಾತನಾಡಿ, ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧಿಸಲಿದೆ ಎಂದು ತಿಳಿಸಿದರು.

ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರು ಸ್ಪರ್ಧಿಸುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಉಡುಪಿಯ ಗ್ಯಾಂಗ್‌ವಾರ್ ಪ್ರಕರಣ; ಗಾಯಾಳು ಆರೋಪಿಗೆ ಚಿಕಿತ್ಸೆ ನೀಡಿದ ವೈದ್ಯರ ವಿರುದ್ಧ FIR

Posted by Vidyamaana on 2024-05-29 05:40:08 |

Share: | | | | |


ಉಡುಪಿಯ ಗ್ಯಾಂಗ್‌ವಾರ್ ಪ್ರಕರಣ; ಗಾಯಾಳು ಆರೋಪಿಗೆ ಚಿಕಿತ್ಸೆ ನೀಡಿದ ವೈದ್ಯರ ವಿರುದ್ಧ FIR

ಉಡುಪಿಯ ಗ್ಯಾಂಗ್‌ವಾ‌ರ್ ಪ್ರಕರಣದಲ್ಲಿ ಗಾಯಗೊಂಡ ಗಾಯಾಳು ಆರೋಪಿಗೆ ಚಿಕಿತ್ಸೆ ನೀಡಿದ ಡಾಕ್ಟರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಮೇ 18ರಂದು ನಸುಕಿನ ವೇಳೆ ನಡೆದ ಗ್ಯಾಂಗ್‌ವಾರ್‌ನಲ್ಲಿ ಕಾರು ಢಿಕ್ಕಿ ಹೊಡೆದು ರಸ್ತೆಗೆ ಬಿದ್ದ ಶರೀಫ್‌ನ ಮೇಲೆ ದುಷ್ಕರ್ಮಿಗಳು ತಲವಾರಿನಿಂದ ದಾಳಿ ನಡೆಸಿದ್ದರು.ಇದರಿಂದ ಶರೀಫ್‌ನ ಎಡಕಾಲು, ಬಲ ಕಿವಿ ಹಿಂಬದಿ, ಬಲಕೈಗೆ ಗಾಯವಾಗಿತ್ತು.ನಂತರ ಶರೀಫ್‌ನನ್ನು ಇತರೆ ಆರೋಪಿಗಳಾದ ಅಲ್ಪಾಝ್, ಮಜೀದ್ ಚಿಕಿತ್ಸೆಗಾಗಿ ಪಡುಬಿದ್ರಿಯಲ್ಲಿರುವ ಸಿದ್ದಿ ವಿನಾಯಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.



Leave a Comment: