ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸುದ್ದಿಗಳು News

Posted by vidyamaana on 2024-07-25 16:43:22 |

Share: | | | | |


ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

 ಮುಂಬೈ: ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.

ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ. ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ. ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

ಬಿಟೆಕ್ ಮಾಡಿದ್ದ ಶ್ರೀನಿವಾಸ್ ಮುಂಬೈನ ಲೋಧಾದಲ್ಲಿ 2023ರಲ್ಲಿ ಕೆಲ ಕಾಲ ಕೆಲಸ ಮಾಡಿದ್ದರು. ಇದಕ್ಕೂ ಮೊದಲು ಅರಬ್ ರಾಷ್ಟ್ರ ಕುವೈತ್‌ನಲ್ಲಿ ಕೆಲಸ ಮಾಡಿದ್ದರು. 2023ರಲ್ಲಿ ಮುಂಬೈಗೆ ವಾಪಸಾದ ಅವರು ಲೋಧಾ ಗ್ರೂಪ್‌ಗೆ ಕೆಲಸಕ್ಕೆ ಸೇರಿದ್ದರು. ಇದಾದ ನಂತರ ಇವರು ತಮ್ಮ ಪಾಲುದಾರರ ಜೊತೆಗೂಡಿ ಇಲೆಕ್ಟ್ರಿಕ್ ಕಂಟ್ರಾಕ್ಟ್ ಕೆಲಸ ಶುರು ಮಾಡಿದ್ದರು. ಶ್ರೀನಿವಾಸ್ ಪತ್ನಿಯಿಂದಲೂ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದು, ಶ್ರೀನಿವಾಸ್ ಈ ಹಿಂದೆಯೂ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಜೀವ ಕಳೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಸಮಯಕ್ಕೆ ಸರಿಯಾಗಿ ಯಾರೋ ಪಾರು ಮಾಡಿದ್ದರಿಂದ ಅವರ ಜೀವ ಉಳಿದಿತ್ತು ಎಂದು ಪತ್ನಿ ಹೇಳಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಶ್ರೀನಿವಾಸ್ ಕಡೆಯದಾಗಿ ಸಂಬಂಧಿಕರೊಬ್ಬರ ಜೊತೆ ಮಾತನಾಡಿದ್ದು, ಈ ವೇಳೆ ಅವರು ಸಹಜವಾಗಿ ಮಾತನಾಡಿದ್ದರು ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಇದುವರೆಗೂ ನೀರಿಗೆ ಹಾರಿದ ಶ್ರೀನಿವಾಸ್ ಅವರನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಇದು ಮೊದಲ ಪ್ರಕರಣ ಅಲ್ಲ ಈ ಹಿಂದೆ ಮಹಿಳಾ ವೈದ್ಯರೊಬ್ಬರು ಅಟಲ್ ಸೇತುವಿನಿಂದ ಕೆಳಗೆ ಹಾರಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದರು.

 Share: | | | | |


ಪುತ್ತೂರು ಜಾತ್ರೆ:ಇಂದು ವಾಹನ ಸಂಚಾರದಲ್ಲಿ ಬದಲಾವಣೆ ಹಲವೆಡೆ ಪಾರ್ಕಿಂಗ್‌ಗೆ ವ್ಯವಸ್ಥೆ-ಸಾರ್ವಜನಿಕರ ಸಹಕಾರಕ್ಕೆ ಪೊಲೀಸ್‌ ಮನವಿ

Posted by Vidyamaana on 2024-04-17 16:12:10 |

Share: | | | | |


ಪುತ್ತೂರು ಜಾತ್ರೆ:ಇಂದು ವಾಹನ ಸಂಚಾರದಲ್ಲಿ ಬದಲಾವಣೆ  ಹಲವೆಡೆ ಪಾರ್ಕಿಂಗ್‌ಗೆ ವ್ಯವಸ್ಥೆ-ಸಾರ್ವಜನಿಕರ ಸಹಕಾರಕ್ಕೆ ಪೊಲೀಸ್‌ ಮನವಿ

ಪುತ್ತೂರು:ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಹಿನ್ನೆಲೆಯಲ್ಲಿ  ಏ .17ರಂದು ವಾಹನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.

 ಏ.17ರಂದು ಮಹಾಲಿಂಗೇಶ್ವರ ದೇವರ ದರ್ಶನ ಬಲಿ ಮತ್ತು ರಾತ್ರಿ ನಡೆಯುವ ಬ್ರಹ್ಮರಥೋತ್ಸವದ ಅಂಗವಾಗಿ ಪುತ್ತೂರು ಪೇಟೆಯಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗುವುದು ಮತ್ತು ವಾಹನ ಪಾರ್ಕಿಂಗ್‌ಗೂ ಸೂಕ್ತ ಸ್ಥಳ ಗುರುತಿಸುವ ಕುರಿತು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಿಗೆ ಪೊಲೀಸ್ ಇಲಾಖೆ ವರದಿ ನೀಡಿದೆ.ಸಹಾಯಕ ಆಯುಕ್ತರ ಪ್ರಸ್ತಾವನೆಗೆ ಜಿಲ್ಲಾಧಿಕಾರಿಯವರು ಈ ಕುರಿತು ಅಧಿಕೃತ ಆದೇಶ ಹೊರಡಿಸಲಿದ್ದಾರೆ.

 ಬದಲಾದ ವಾಹನ ಸಂಚಾರ:

ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್‌ಗಳು ಎಂ.ಟಿ.ರಸ್ತೆಯ ಮೂಲಕ ತೆರಳಿ, ಮುಂದೆ ಎಡಕ್ಕೆ ತಿರುಗಿ ಪರ್ಲಡ್ಕ ಬೈಪಾಸ್ ಮೂಲಕ ತೆರಳುವುದು.


ಕಬಕ-ಮಂಗಳೂರು ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್‌ಗಳು ಲಿನೆಟ್‌(ಉದಯಗಿರಿ)ಬೊಳುವಾರು ಪಡೀಲ್‌- ಕೊಟೇಚಾ ಹಾಲ್ ಕ್ರಾಸ್ ಸಾಲ್ಮರ ಎಪಿಎಂಸಿ ಮೂಲಕ ಬಸ್ ನಿಲ್ದಾಣಕ್ಕೆ ಬರುವುದು. ಉಪ್ಪಿನಂಗಡಿ ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್‌ಗಳು ಪಡೀಲ್ ಕೊಟೇಚಾ ಹಾಲ್ ಕ್ರಾಸ್ ಸಾಲ್ಮರ ಎಪಿಎಂಸಿಯಾಗಿ ಬಸ್‌ನಿಲ್ದಾಣಕ್ಕೆ ಬರುವುದು.


ಮಡಿಕೇರಿ,ಸುಳ್ಯ,ಸಂಪ್ಯ ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್‌ಗಳು ಅಶ್ವಿನಿ ಜಂಕ್ಷನ್ ದರ್ಬೆ-ಅರುಣಾ ಕಲಾ ಮಂದಿರದ ಎದುರು ರಸ್ತೆ ಮೂಲಕ ಬಸ್ ನಿಲ್ದಾಣಕ್ಕೆ ಬರುವುದು.

 

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ರಾಷ್ಟ್ರ ಭಕ್ತರ ಮೇಲೆ ಕೇಸ್ ದಾಖಲು ಹೆಚ್ಚಳ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪ

Posted by Vidyamaana on 2023-10-28 16:29:10 |

Share: | | | | |


ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ರಾಷ್ಟ್ರ ಭಕ್ತರ ಮೇಲೆ ಕೇಸ್ ದಾಖಲು ಹೆಚ್ಚಳ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪ

ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ಗಳನ್ನು ದಾಖಲಿಸಲಾಗುತ್ತಿದ್ದು, ಹಿಂದೂ ಕಾರ್ಯಕರ್ತರ ಮೇಲೆ ಕೂಡಾ ಕೇಸ್ ಹಾಕಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.


ಮಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ನಳೀನ್ ಕುಮಾರ್ ಕಟೀಲ್, ಜನಪ್ರತಿನಿಧಿಗಳ ಮೇಲೆ ಕೂಡಾ ಕೇಸ್ ಹಾಕಿ ಅವರ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಹೇಳಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರ ಪರ ಧ್ವನಿ ಎತ್ತಿದ ಶಾಸಕರ ಮೇಲೆ ಕೇಸ್ ಹಾಕಲಾಗಿದ್ದು, ಪೊಲೀಸ್ ಇಲಾಖೆಯ ಮೂಲಕ ಸರ್ಕಾರ ಎಫ್ ಐ ಆರ್ ದಾಖಲಿಸಿದೆ ಎಂದು ನಳೀನ್ ಕುಮಾರ್ ಕಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಶಾಸಕ ಹರೀಶ್ ಪೂಂಜಾ ಮೇಲೆ ಒಂದೇ ತಿಂಗಳಿನಲ್ಲಿ ಎರಡನೇ ಎಫ್‌ಐ ಆರ್ ದಾಖಲಿಸಲಾಗಿದ್ದು, ಸಿಎಂ ಸಿದ್ಧರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ರಾಷ್ಟ್ರ ಭಕ್ತರ ಮೇಲೆ ಕೇಸ್ ಗಳನ್ನು ದಾಖಲಿಸುತ್ತಿರುವುದು ಹೆಚ್ಚಾಗುತ್ತಿದ್ದು,ರಾಷ್ಟ್ರ ವಿರೋಧಿಗಳ ಮೇಲೆ ಒಂದೂ ಕೇಸ್ ದಾಖಲಾಗುತ್ತಿಲ್ಲ ಎಂದು ಕಟೀಲ್  ಟೀಕಿಸಿದಾರೆ

ಮುಕ್ರಂಪಾಡಿ: ಮಹಿಳಾ ಪ ಪೂ ಕಾಲೇಜಿನ ಅಭಿವೃದ್ದಿ ಸಮಿತಿ ಸಭೆ

Posted by Vidyamaana on 2024-05-11 20:03:17 |

Share: | | | | |


ಮುಕ್ರಂಪಾಡಿ: ಮಹಿಳಾ ಪ ಪೂ ಕಾಲೇಜಿನ ಅಭಿವೃದ್ದಿ ಸಮಿತಿ ಸಭೆ

ಪುತ್ತೂರು: ಮುಕ್ರಂಪಾಡಿಯಲ್ಲಿರುವ ಮಹಿಳಾ ಪ ಪೂ ಕಾಲೇಜಿನ ಅಭಿವೃದ್ದಿ ಸಮಿತಿ ಸಭೆಯು ಅಧ್ಯಕ್ಷರಾದ ಶಾಸಕರಾದ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಕಾಲೇಜಿನಲ್ಲಿ ನಡೆಯಿತು.

ಕಾಲೇಜಿಗೆ ಈ ಬಾರಿ ಪಿಯು ಪರೀಕ್ಷೆಯಲ್ಲಿ ಶೇ. ೧೦೦ ಪಲಿತಾಂಶ ಬಂದಿದ್ದು ಇದಕ್ಕಾಗಿ ಶಿಕ್ಷಕ ವೃಂದವನ್ನು , ಅಭಿವೃದ್ದಿ ಸಮಿತಿಯವರನ್ನು ಶಾಸಕರು ಅಭಿನಂದಿಸಿದರು. ಕಾಲೇಜಿನಲ್ಲಿ ಮೂಲಭೂತ ಸೌಕರ್ಯದ ಕೊರತೆ ಇರುವ ಬಗ್ಗೆ ಪ್ರಾಂಶುಪಾಲರು ಶಾಸಕರ ಗಮನಕ್ಕೆ ತಂದರು.

ಶಾಸಕರ ಇಂದಿನ ಕಾರ್ಯಕ್ರಮ ಆ 23

Posted by Vidyamaana on 2023-08-23 01:24:41 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 23

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಆಗಸ್ಟ್ 23 ರಂದು

ಬೆಳಿಗ್ಗೆ 10 ಗಂಟೆಗೆ ಕೋಡಿಂಬಾಡಿ ಗ್ರಾಪಂ ನೂತನ ಆಡಳಿತ ಪದಗ್ರಹಣ ಸಮಾರಂಭ

11 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕಂದಾಯ ಇಲಾಖಾ ಅಧಿಕಾರಿಗಳ ಸಭೆ

ಸಂಜೆ 4 ಗಂಟೆಗೆ ಮಂಗಳೂರಿನಲ್ಲಿ ಸಭೆ

ಪತ್ನಿ ಕೊಂದು ಪೊಲೀಸ್​ ಠಾಣೆಗೆ ಶರಣಾಗಲು ತೆರಳುತ್ತಿದ್ದ ಪತಿ ಅಪಘಾತಕ್ಕೆ ಬಲಿ

Posted by Vidyamaana on 2023-09-02 05:48:16 |

Share: | | | | |


ಪತ್ನಿ ಕೊಂದು ಪೊಲೀಸ್​ ಠಾಣೆಗೆ ಶರಣಾಗಲು ತೆರಳುತ್ತಿದ್ದ ಪತಿ ಅಪಘಾತಕ್ಕೆ ಬಲಿ

ಆದಿಲಾಬಾದ್​: ಮದುವೆಯಾದ ಮೂರ್ನಾಲ್ಕು ತಿಂಗಳಲ್ಲೇ ಪತ್ನಿಯನ್ನು ಬರ್ಬರವಾಗಿ ಕೊಂದು ಪೊಲೀಸ್​ ಠಾಣೆಗೆ ಶರಣಾಗಲು ತೆರಳುತ್ತಿದ್ದ ವೇಳೆ ಆತನು ಸಹ ಅನಿರೀಕ್ಷಿತವಾಗಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಆದಿಲಾಬಾದ್’ನಲ್ಲಿ ನಡೆದಿದೆ.


ಪತ್ನಿ ದೀಪಾಳನ್ನು ಕೊಲೆಗೈದು ಬೈಕಿನಲ್ಲಿ ಠಾಣೆಗೆ ತೆರಳಿದ ಅರುಣ್ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಅರುಣ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಈ ಘಟನೆ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಪೊಲೀಸ್​ ಅಧಿಕಾರಿ ಎಂ.ಅಶೋಕ್ ಹಾಗೂ ಸ್ಥಳೀಯರ ಪ್ರಕಾರ, ಮೇ 11ರಂದು ನಿಜಾಮಾಬಾದ್ ಜಿಲ್ಲೆಯ ಬಾಲ್ಕೊಂಡದ ಚೌಹಾಣ್ ಲಕ್ಷ್ಮಿ ಮತ್ತು ಗೋಪಿಚಂದ್ ಅವರ ಕಿರಿಯ ಪುತ್ರಿ ದೀಪಾ ಅವರು ಆದಿಲಾಬಾದ್ ಉಪನಗರ ಬಂಗಾರಗುಡ್ಡದ ಮೋಹಿತೆ ಅರುಣ್ ಅವರೊಂದಿಗೆ ವಿವಾಹವಾಗಿದ್ದರು. ಮದುವೆಯಾಗಿ ಒಂದು ವಾರದ ಬಳಿಕ ಅರುಣ್ ಪತ್ನಿಗೆ ಅನುಮಾನದಿಂದ ಕಿರುಕುಳ ನೀಡಲಾರಂಭಿಸಿದ್ದ. ಆಗಾಗ ಜಗಳ ಮಾಡುತ್ತಿದ್ದರು. ದೀಪಾ ತನ್ನ ತಂದೆಗೆ ಕರೆ ಮಾಡಿ ಪತಿ ಕಿರುಕುಳ ನೀಡುತ್ತಿದ್ದಾನೆ ಎಂದು ಹೇಳಿದ್ದರು. ಹೀಗಾಗಿ ಅವರ ತಂದೆ ತಮ್ಮ ಮಗಳನ್ನು ಮನೆಗೆ ಕರೆದುಕೊಂಡು ಹೋಗಿದ್ದರು. ಆಗಸ್ಟ್​ 28ರಂದು ಅರುಣ್ ತನ್ನ ಅತ್ತೆ ಮನೆಗೆ ತೆರಳಿ ಪತ್ನಿಯನ್ನು ಸರಿಯಾಗಿ ನೋಡಿಕೊಳ್ಳುವುದಾಗಿ ಭರವಸೆ ನೀಡಿ ಆದಿಲಾಬಾದ್‌ಗೆ ಕರೆತಂದಿದ್ದ.ಶುಕ್ರವಾರ ಬೆಳಗ್ಗೆ ಅರುಣ್ ತನ್ನ ಪತ್ನಿಯೊಂದಿಗೆ ಮತ್ತೆ ಜಗಳವಾಡಿದ್ದಾನೆ. ಆಕೆಯ ಕುತ್ತಿಗೆ ಕೊಯ್ದು, ತಲೆಯನ್ನು ಮಂಚಕ್ಕೆ ಜಜ್ಜಿದ್ದರಿಂದ ಗೃಹಿಣಿ ಸಾವನ್ನಪ್ಪಿದ್ದಾಳೆ. ಬಳಿಕ ಅರುಣ್​ ಅದಿಲಾಬಾದ್ ಗ್ರಾಮಾಂತರ ಪೊಲೀಸರಿಗೆ ಶರಣಾಗಲು ತೆರಳಿದ್ದನು. ಅರುಣ್​ ತಂದೆ ಜೈವಂತ್ ರಾವ್ ತನ್ನ ಮಗನ ಬೈಕ್ ಪತ್ತೆಯಾಗದ ಕಾರಣ ಮಗನಿಗೆ ಕರೆ ಮಾಡಿದ್ದಾರೆ. ಆಗ ಅರುಣ್​ ನಾನು ನನ್ನ ಪತ್ನಿಯನ್ನು ಕೊಂದಿದ್ದು, ಪೊಲೀಸ್ ಠಾಣೆಗೆ ತೆರಳುತ್ತಿದ್ದೇನೆ ಎಂದು ತಂದೆ ಜೈವಂತ್ ರಾವ್​ಗೆ ತಿಳಿಸಿದ್ದಾನೆ. ಕೂಡಲೇ ನೀನು ಮನೆಗೆ ಬರುವಂತೆ ಜೈವಂತ್ ರಾವ್ ಮಗನಿಗೆ ಸೂಚಿಸಿದ್ದಾರೆ. ಅಪ್ಪನ ಮಾತಿನಂತೆ ಮಗ ಅರುಣ್​ ಮನೆಗೆ ಹಿಂತಿರುಗುವಾಗ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಅರುಣ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳೀಯರು ಈ ವಿಷಯವನ್ನು ಅರುಣ್​ ತಂದೆ ಜೈವಂತ್​ ರಾವ್​ಗೆ ತಿಳಿಸಿದ್ದಾರೆ. ನಂತರ ಜೈವಂತ್ ರಾವ್ ತನ್ನ ಸೊಸೆಯನ್ನು ನನ್ನ ಮಗನೇ ಕೊಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಮೃತ ಗೃಹಿಣಿ ದೀಪಾ ಅವರ ತಾಯಿ ಲಕ್ಷ್ಮಿ ಅವರ ದೂರಿನ ಮೇರೆಗೆ ಗ್ರಾಮಾಂತರ ಪೊಲೀಸರು ಮೃತ ಅರುಣ್ ಅವರ ತಂದೆ ಜೈವಂತ್ ರಾವ್ ಮತ್ತು ತಾಯಿ ಪದ್ಮಾ ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಅದಿಲಾಬಾದ್ ಎರಡನೇ ನಗರ ಪೊಲೀಸರು ರಸ್ತೆ ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಸ್ತೆಯಲ್ಲಿ ನಿಲ್ಲಿಸಿದ್ದ ಲಾರಿ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಈ ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಅಪಘಾತದಲ್ಲಿ ಯುವತಿ ಸಾವು:ತಂದೆಯ ಬರುವಿಕೆಗೆ ಕಾದಿದೆ ಕುಟುಂಬ

Posted by Vidyamaana on 2024-08-05 22:17:25 |

Share: | | | | |


ಅಪಘಾತದಲ್ಲಿ ಯುವತಿ ಸಾವು:ತಂದೆಯ ಬರುವಿಕೆಗೆ ಕಾದಿದೆ ಕುಟುಂಬ

ಮೈಸೂರು,ಆ.5: ಸ್ನೇಹಿತರ ಜೊತೆ ಸ್ಕೂಟರ್ ನಲ್ಲಿ ಹೋಗುವಾಗ ಡಿವೈಡರ್ ಗೆ ಡಿಕ್ಕಿ ಹೊಡೆದು ಯುವತಿ ಮೃತಪಟ್ಟಿದ್ದು,ಶವ ಸಂಸ್ಕಾರ‌ ಮಾಡದೆ ಮನೆಬಿಟ್ಟು ಹೋಗಿರುವ ಆಕೆಯ‌ ತಂದೆಗಾಗಿ ಕುಟುಂಬ ಕಾಯುತ್ತಿರುವ ಮನಕರಗುವ ಘಟನೆ ನಗರದಲ್ಲಿ ನಡೆದಿದೆ.ಮೈಸೂರಿನ ಕನಕಗಿರಿ ನಿವಾಸಿ ನಾಗರಾಜ್- ಇಂದಿರಮ್ಮ ದಂಪತಿಯ ಪುತ್ರಿ ಕವನ ಮೃತಪಟ್ಟ ದುರ್ದೈವಿ, ಮೃತ ಯುವತಿಯ ಮೃತದೇಹವನ್ನ ಇಟ್ಟುಕೊಂಡ ಕುಟುಂಬ ಹೆತ್ತ ತಂದೆಯ ಬರುವಿಕೆಗಾಗಿ ಕಾದಿದ್ದು ಅಂತ್ಯಕ್ರಿಯೆಯನ್ನ ಒಂದು ದಿನ ಮುಂದೂಡಿದೆ.

Recent News


Leave a Comment: