Posted by vidyamaana on 2024-07-03 19:44:44 |
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.
ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕುಎಂಬುದು ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸುಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.
ಕಾಲೇಜುನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.
ಹೆಚ್ಚುಅನುದಾನ ಕೊಡಿ
ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನುನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರುಮನವಿ ಸಲ್ಲಿಸಿದರು.
Posted by Vidyamaana on 2023-05-07 10:12:49 |
ಬೆಂಗಳೂರು: ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು ಮೇ.08ರಂದು (ಸೋಮವಾರ) ಬೆಳಗ್ಗೆ 10 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಣೆ ನೀಡಿದೆ. ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯೂ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆದಿತ್ತು. ಸೋಮವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, 11 ಗಂಟೆಯ ಬಳಿಕ ಜಾಲತಾಣದಲ್ಲಿ ವೀಕ್ಷಿಸಬಹುದು.
Posted by Vidyamaana on 2023-02-04 04:00:56 |
ಮಂಗಳೂರು.ಕ್ರಿಪ್ಟೋ ಕರೆನ್ಸಿ ವ್ಯವಹಾರಕ್ಕೆಂದು ಹೂಡಿಕೆ ಮಾಡಿಸಿಕೊಂಡು 3 ಕೋ.ರೂ. ವಂಚಿಸಿರುವ ಬಗ್ಗೆ ಕಣ್ಣೂರು ಬೋರುಗುಡ್ಡೆಯ ನಿವಾಸಿಯೊಬ್ಬರು ಮಂಗಳೂರಿನ ಸೆನ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಮುಹಮ್ಮದ್ ಶಫದ್ ಸಿ.ಕೆ. ಮತ್ತು ಮುಹಮ್ಮದ್ ಅಫೀದ್ ಸಿ.ಕೆ. ಆರೋಪಿಗಳು.
ದೂರುದಾರ ಕಣ್ಣೂರು ಬೋರುಗುಡ್ಡೆಯ ದೂರುದಾರ ವ್ಯಕ್ತಿಯ ಬಳಿ ಪರಿಚಯದ ಮುಹಮ್ಮದ್ ಶಫದ್ ಎಂಬಾತ 2020ರ ಜನವರಿಯ ಮೊದಲ ವಾರದಲ್ಲಿ ತಾನು ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ ಕೋಟ್ಯಂತರ ರೂ. ಸಂಪಾದಿಸಿದ್ದು, ಯಾರಾದರೂ ಒಳ್ಳೆಯ ಹೂಡಿಕೆದಾರರು ಇದ್ದರೆ ತಿಳಿಸಿ ಎಂದಿದ್ದ ಎನ್ನಲಾಗಿದೆ. ಅದರಂತೆ ದೂರುದಾರರು ಮುಹಮ್ಮದ್ ಶಫದ್ನನ್ನು ಭೇಟಿಯಾಗಿದ್ದು, ಆವಾಗ ಆತ ಲ್ಯಾಪ್ಟಾಪ್ನಲ್ಲಿ ಕ್ರಿಪ್ಟೋ ವ್ಯವಹಾರದ ಮಾಹಿತಿ ನೀಡುತ್ತಾ ತಿಂಗಳಿಗೆ ಶೇ.25 ಲಾಭಾಂಶ ನೀಡುವುದಾಗಿ ತಿಳಿಸಿದ್ದ ಎಂದು ಹೇಳಲಾಗಿದೆ.
ಜನವರಿ 3ನೇ ವಾರದಲ್ಲಿ ಮುಹಮ್ಮದ್ ಶಫದ್ ಮತ್ತು ಆತನ ತಮ್ಮ ಮುಹಮ್ಮದ್ ಅಫೀದ್ ದೂರುದಾರರ ಮನೆಗೆ ಭೇಟಿ ನೀಡಿದಾಗ ತಾನು 35 ಲಕ್ಷ ರೂ. ನಗದನ್ನು ಆರೋಪಿ ಸಹೋದರರಿಗೆ ನೀಡಿದ್ದೆ ಎಂದು ದೂರಿನಲ್ಲಿ ತಿಳಿಸಲಾಗಿದೆ
ಒಂದು ತಿಂಗಳ ಬಳಿಕ ಮುಹಮ್ಮದ್ ಶಫದ್ ವಾಟ್ಸಪ್ ಮೂಲಕ ದೂರುದಾರರಿಗೆ ಒಂದು ತಿಂಗಳ 8.75 ಲಕ್ಷ ರೂ. ಲಾಭಾಂಶ ಬಂದಿರುವುದಾಗಿ ಕ್ರಿಪ್ಟೋ ಕರೆನ್ಸಿಯ ಅಕೌಂಟ್ ತೋರಿಸಿದ್ದ. ಕೋವಿಡ್ ಕಾರಣದಿಂದ ಲಾಭಾಂಶ ವಿಳಂಬವಾಗಿದ್ದು ಮುಂದಿನ ಎರಡು ತಿಂಗಳಲ್ಲಿ ಅಪ್ಡೇಟ್ ಆಗುತ್ತದೆ ಎಂದು ನಂಬಿಸಿದ್ದ. ಬಳಿಕ ಮತ್ತೆ ಕರೆ ಮಾಡಿ ಲಾಭಾಂಶದ ಬಗ್ಗೆ ನಂಬಿಸಿದ್ದ ಎನ್ನಲಾಗಿದೆ.
ಜಾಸ್ಮಿನ್ ಹಂಝ ಎಂಬವರ ಹೆಸರು ಸೂಚಿಸಿ ಅವರ ಮೂಲಕ ದೂರುದಾರರಿಂದ 7 ಲ.ರೂ.ಗಳನ್ನು ವರ್ಗಾವಣೆ ಮಾಡಿಸಿಕೊಂಡಿದ್ದ. ದೂರುದಾರರು ತನ್ನ ಸ್ನೇಹಿತರಿಂದ ಸಂಗ್ರಹಿಸಿ ಆರೋಪಿಗಳಿಗೆ 3 ಕೋ.ರೂ. ನೀಡಿದ್ದು, ಬಳಿಕ ಆರೋಪಿಗಳು ಸಂಪರ್ಕಕ್ಕೆ ಸಿಕ್ಕಿರಲಿಲ್ಲ ಎಂದು ಆರೋಪಿಸಲಾಗಿದೆ.
2022ರಲ್ಲಿ ಬೆಂಗಳೂರಿನಲ್ಲಿ ಕ್ರಿಪ್ಟೋ ಕರೆನ್ಸಿ ವಂಚನೆ ಪ್ರಕರಣದಲ್ಲಿ ಮುಹಮ್ಮದ್ ಶಫದ್ ಮತ್ತು ಮುಹಮ್ಮದ್ ಅಫೀದ್ ಭಾಗಿಯಾಗಿರುವ ಮಾಹಿತಿ ತನಗೆ ಸಿಕ್ಕಿದ್ದು, ಆ ಹಿನ್ನೆಲೆಯಲ್ಲಿ ಆರೋಪಿಗಳಾದ ಮುಹಮ್ಮದ್ ಶಫದ್ ಸಿ.ಕೆ, ಮುಹಮ್ಮದ್ ಅಫೀದ್ ಸಿ.ಕೆ., ಸಾದಿಕ್, ಜಾಸ್ಮಿನ್, ಮುಹಮ್ಮದ್ ಬಶೀರ್ ವಿರುದ್ಧ ನೀಡಿದ್ದ ದೂರಿನಂತೆ ಸೆನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Posted by Vidyamaana on 2023-09-17 13:15:25 |
ಆಫ್-ರೋಡಿಂಗ್ ಚಾಲನೆಯನ್ನು ಇಷ್ಟಪಡುವವರಿಗೆ ನಿಮಿಷ್ಟದ ಕಾರು ಯಾವುದೇ ಎಂದು ಕೇಳಿದರೆ, ಅವರಿಂದ ಬರುವ ಒಂದೇ ಉತ್ತರ ಮಹೀಂದ್ರಾ ಥಾರ್ (Mahindra Thar) ಎಂದು. ಅಷ್ಟರಮಟ್ಟಿಗೆ ಜನಪ್ರಿಯವಾಗಿದೆ. ಸದ್ಯ, ಕಂಪನಿಯು ಈ ಎಸ್ಯುವಿಯನ್ನು 5 ಡೋರ್ ಆಯ್ಕೆಯಲ್ಲಿ ಅಭಿವೃದ್ಧಿಪಡಿಸುತ್ತಿದ್ದು, ಇತ್ತೀಚೆಗೆ ಪರೀಕ್ಷಾರ್ಥ ಸಂಚಾರ ನಡೆಸುವಾಗ ಕಂಡುಬಂದಿದೆ.ಈ ವೇಳೆ, ಸೆರೆಹಿಡದ ಸ್ಪೈ ಚಿತ್ರಗಳು ಇಂಟರ್ನೆಟ್ ನಲ್ಲಿ ಸೋರಿಕೆಯಾಗಿದ್ದು, ಅದರಲ್ಲಿ ಒಳಭಾಗದಲ್ಲಿ ವೈಶಿಷ್ಟ್ಯಗಳನ್ನು ನೋಡಬಹುದು. ಪ್ರಸ್ತುತ ಖರೀದಿಗೆ ದೊರೆಯುವ 3 ಡೋರ್ ಥಾರ್ ಎಸ್ಯುವಿಗೆ ಹೋಲಿಸಿದರೆ, 5 ಡೋರ್ ಥಾರ್ ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿದೆ. ಮುಖ್ಯವಾಗಿ, ದೊಡ್ಡದಾದ 12.3 - ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಅನ್ನು ಹೊಂದಿದೆ.
ಮುಂಬರುವ ಮಹೀಂದ್ರಾ ಥಾರ್ 5 - ಡೋರ್, ನವೀನ ಸ್ಟೀರಿಂಗ್ ವೀಲ್ ಪಡೆದಿದೆ. ಇದು, XUV700ಗೆ ಹೋಲಿಕೆಯಾಗುತ್ತದೆ. ಜೊತೆಗೆ ವೃತ್ತಾಕಾರದ ಎಸಿ ವೆಂಟ್ಸ್ ಅನ್ನು ಹೊಂದಿದೆ. ಇದರೊಟ್ಟಿಗೆ ಆರ್ಮ್ರೆಸ್ಟ್ ಇದ್ದು, ಹಳೆಯ ಕಾರುಗಳಂತೆ ಡೋರ್ ಪ್ಯಾಡ್ಗಳಲ್ಲಿ ವಿಂಡೋ ಸ್ವಿಚ್ಗಳನ್ನು ಅಳವಡಿಕೆ ಮಾಡಲಾಗಿದೆ. ಈ ಮೂಲಕ ಹೊಸ 5 - ಡೋರ್ ಎಸ್ಯುವಿ, ಕ್ಯಾಬಿನ್ ಒಳಭಾಗದಲ್ಲಿ ಅತ್ಯಾಧುನಿಕ ವಿನ್ಯಾಸವನ್ನು ಪಡೆದಿದೆ.ಹೊಸ ಥಾರ್ ಇನ್ನೂ ಯಾವ ವೈಶಿಷ್ಟ್ಯಗಳನ್ನು ಹೊಂದಿರಲಿದೆ ಎಂದು ನೋಡುವುದಾದರೆ, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಕನೆಕ್ಟಿವಿಟಿ, ವೈರ್ಲೆಸ್ ಚಾರ್ಜರ್, ಕ್ರೂಸ್ ಕಂಟ್ರೋಲ್, ರೇರ್ ಎಸಿ ವೆಂಟ್ಸ್, ಆಟೋ ಡಿಮ್ಮಿಂಗ್ ಐಆರ್ವಿಎಂ, ಆಟೋ ಹೆಡ್ಲ್ಯಾಂಪ್ಸ್ ಮತ್ತು ಸೆನ್ಸಿಂಗ್ ವೈಪರ್ಸ್ ಅನ್ನು ಪಡೆದಿರುವ ನೀರಿಕ್ಷೆಯಿದೆ.
ಹೊಸ ಮಹೀಂದ್ರಾ ಥಾರ್ 5 - ಡೋರ್, ಎರಡು ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ಸಿಗಬಹುದು. ಅವುಗಳೆಂದರೆ, 2.0 - ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 2.2 - ಲೀಟರ್ ಡೀಸೆಲ್ ಎಂಜಿನ್. ಕ್ರಮವಾಗಿ, 150 bhp ಪವರ್, 320 Nm ಪೀಕ್ ಟಾರ್ಕ್, 130 bhp ಗರಿಷ್ಠ ಪವರ್ 300 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿರಬಹುದು. ಕಂಪನಿಯು ಈವರೆಗೆ ಈ ಎಸ್ಯುವಿ ಬೆಲೆಯನ್ನು ಎಲ್ಲಿಯೂ ಬಹಿರಂಗಪಡಿಸಿಲ್ಲ.ಪ್ರಸ್ತುತ, ದೇಶದಲ್ಲಿ 3 - ಡೋರ್ ಆಯ್ಕೆಯಲ್ಲಿ ಸಿಗುವ ಮಹೀಂದ್ರಾ ಥಾರ್, ರೂ.10.54 ಲಕ್ಷದಿಂದ ರೂ.16.78 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ. ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆಯಲ್ಲಿ ದೊರೆಯಲಿದ್ದು, ಅದಕ್ಕೆ ತಕ್ಕಂತೆ ಕಾರ್ಯಕ್ಷಮತೆಯನ್ನು ಹೊಂದಿದೆ. 4WD (ಫೋರ್ ವೀಲ್ ಡ್ರೈವ್) ಹಾಗೂ RWD (ರೇರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ.
ಮಹೀಂದ್ರಾ ಥಾರ್ ಆಫ್-ರೋಡ್ ಎಸ್ಯುವಿಯಾಗಿರುವುದರಿಂದ ಕೊಂಚ ಕಡಿಮೆ ಇಂಧನ ದಕ್ಷತೆ ಹೊಂದಿದ್ದು, 15.2 kmpl ಮೈಲೇಜ್ ನೀಡುತ್ತದೆ. ಎವರೆಸ್ಟ್ ವೈಟ್, ರೆಡ್ ರೇಜ್, ನಪೋಲಿ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದ್ದು 7 - ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಮ್ಯಾನ್ಯುವಲ್ ಎಸಿ ಮತ್ತು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಸೇರಿದಂತೆ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ.
Posted by Vidyamaana on 2023-11-27 04:29:57 |
ಮಂಗಳೂರು, ನ.26: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆಗೈದ ಪ್ರಕರಣದಲ್ಲಿ ಪತ್ನಿ, ಮಕ್ಕಳನ್ನು ಕಳಕೊಂಡ ನೂರ್ ಮಹಮ್ಮದ್ ಮಂಗಳೂರಿನಲ್ಲಿ ಮಕ್ಕಳಾದ ಐನಾಝ್ ಮತ್ತು ಅಫ್ನಾನ್ ನೆಲೆಸಿದ್ದ ಬಾಡಿಗೆ ಮನೆಗೆ ಆಗಮಿಸಿದ್ದು, ಮನೆಯಲ್ಲಿ ಸಿಕ್ಕ ವಸ್ತುಗಳನ್ನು ನೋಡಿ ಕಣ್ಣೀರಿಟ್ಟಿದ್ದಾರೆ.
ಮಕ್ಕಳಿಬ್ಬರೂ ಒಂದೇ ಕೊಠಡಿಯಲ್ಲಿ ನೆಲೆಸಿದ್ದರು. ತಾವೇ ಅಡುಗೆಯನ್ನೂ ಮಾಡಿಕೊಳ್ಳುತ್ತಿದ್ದರು. ಆರಂಭದಲ್ಲಿ ಬಾಡಿಗೆ ಮನೆ ಹುಡುಕಿಕೊಡಲು ಪ್ರವೀಣ್ ಚೌಗುಲೆ ನೆರವಾಗಿದ್ದ. ಈ ಬಗ್ಗೆ ಮನೆ ಮಾಲೀಕರ ಜೊತೆಗೂ ಮಾತನಾಡಿದ್ದು, ಮನೆ ತೋರಿಸುವುದಕ್ಕೆ ಮಾತ್ರ ಪ್ರವೀಣ್ ಇಲ್ಲಿಗೆ ಬಂದಿದ್ದ ಎಂದು ಹೇಳಿದ್ದಾರೆ. ಈ ನಡುವೆ, ಪ್ರವೀಣ ಚೌಗುಲೆ ಹೊಸತಾಗಿ ಕಾರು ಖರೀದಿಸಿದ್ದು ತನ್ನಲ್ಲಿದ್ದ ಸ್ಕೂಟರನ್ನು ಐನಾಝ್ ಗೆ ನೀಡಿದ್ದ. ಇದನ್ನು ಐನಾಝ್ ಕೂಡ ತನಗೆ ಮಾಹಿತಿ ನೀಡಿದ್ದಳು. ಸ್ಕೂಟರಿಗೆ 28 ಸಾವಿರ ರೂಪಾಯಿ ನೀಡಿದ್ದೇನೆ ಎಂದು ತಿಳಿಸಿದ್ದಳು.
ಮನೆಯ ಹೊರಗಡೆ ಆ ಸ್ಕೂಟರ್ ಹಾಗೇ ಇದೆ. ಮನೆಯಲ್ಲಿ ಮಕ್ಕಳಿಬ್ಬರ ವಸ್ತುಗಳನ್ನು ನೋಡಿ ದುಃಖ ಉಕ್ಕಿ ಬಂದಿದೆ. ಹೆತ್ತವರು ಮುಸ್ಸಂಜೆಯಲ್ಲಿರುವಾಗ ಯೌವನಕ್ಕೆ ಬಂದ ಮಕ್ಕಳು ಈ ರೀತಿ ಕೊಲೆಯಾಗುತ್ತಾರೆಂದು ಯಾರೂ ಅಂದುಕೊಳ್ಳಲ್ಲ. ಮನೆಯಲ್ಲಿ ಐರನ್ ಬಾಕ್ಸ್, ಬಟ್ಟೆಗಳು, ಇದರ ನಡುವೆ ಖುರಾನ್ ಪುಸ್ತಕವೂ ಸಿಕ್ಕಿದೆ. ನನ್ನ ಹೆಣ್ಮಕ್ಕಳಿಬ್ಬರು ಇಸ್ಲಾಂ ಧರ್ಮದ ಚೌಕಟ್ಟಿನಲ್ಲಿ ಬದುಕುತ್ತಿದ್ದರು ಎಂದು ನೂರ್ ಮಹಮ್ಮದ್ ಹೇಳಿದ್ದಾರೆ.
ಉದ್ಯೋಗದಲ್ಲಿ ಸೀನಿಯರ್ ಆಗಿದ್ದರಿಂದ ಪ್ರವೀಣ್ ಚೌಗುಲೆಗೆ ಮಂಗಳೂರಿನಲ್ಲಿ ಪರಿಚಯ ಇದ್ದುದರಿಂದ ಬಾಡಿಗೆ ಮನೆ ಪಡೆಯುವಾಗ ಆತನ ನೆರವು ಕೇಳಿದ್ದಳು. ಈ ಬಗ್ಗೆ ತನ್ನಲ್ಲಿಯೂ ಐನಾಝ್ ಹೇಳಿಕೊಂಡಿದ್ದಳು. ಮನೆಯನ್ನೂ ನೋಡುವುದಕ್ಕೆ ನಾನು ಈ ಹಿಂದೆ ಬಂದಿದ್ದೆ. ಮನೆಯಲ್ಲಿ ಅಡುಗೆ ಇನ್ನಿತರ ಎಲ್ಲದಕ್ಕೂ ವ್ಯವಸ್ಥೆ ಮಾಡಿಕೊಂಡಿದ್ದರು. ಇಬ್ಬರೂ ಸೇರಿಕೊಂಡು ಮನೆ ನಡೆಸುತ್ತಿದ್ದರು. ಮನೆಯಲ್ಲಿ ಬುರ್ಖಾ, ಇನ್ನಿತರ ಎಲ್ಲ ಬಟ್ಟೆ ಬರೆಗಳೂ ಇವೆ ಎಂದು ಎಲ್ಲವನ್ನೂ ನೋಡುತ್ತಲೇ ಕಣ್ಣೀರು ಹಾಕಿದ್ದಾರೆ. ಆರೋಪಿ ಪ್ರವೀಣ್ ಚೌಗುಲೆಯನ್ನು ಬಂಧಿಸಿ ಜೈಲಿಗಟ್ಟಿದ ಬಳಿಕ ಮೊದಲ ಬಾರಿಗೆ ನೂರ್ ಮಹಮ್ಮದ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
Posted by Vidyamaana on 2024-04-14 07:59:23 |
ಮಂಗಳೂರು: ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ದೇಶದುದ್ದಕ್ಕೂ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಇಂದು (ಏ.14) ರಾಜ್ಯಕ್ಕೆ ಆಗಮಿಸಲಿದ್ದು, ಸಂಜೆ 4.30 ರಿಂದ 5.20ರವರೆಗೆ ಮೈಸೂರಿನಲ್ಲಿ ಸಮಾವೇಶ ನಡೆಸಿ ಹಳೇ ಮೈಸೂರು ಭಾಗದ NDA ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಈ ವೇಳೆ ಮಾಜಿ ಪ್ರಧಾನಿ ದೇವೇಗೌಡರು ಮೋದಿಗೆ ಸಾಥ್ ನೀಡಲಿದ್ದಾರೆ.
Posted by Vidyamaana on 2024-03-20 15:57:15 |
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಾ.20ರ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ (7) ಮೃತಪಟ್ಟ ವಿದ್ಯಾರ್ಥಿನಿ.
ಶಹಿಮಾ ಅವರು ಮೂರು ವಾರಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದಿದ್ದರು. ತಕ್ಷಣ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಮೂರು ದಿನ ಕೋಮ ವ್ಯವಸ್ಥೆಯಲ್ಲಿದ್ದರು. ನಂತರ ಹೆಚ್ಚಿನ ಚಿಕಿತ್ಸೆ ನೀಡಿದ್ದಾದ್ದರೂ ಸ್ವಲ್ಪ ಮಟ್ಟಿಗೆ ಸ್ಪಂದಿಸುತ್ತಿದ್ದರು ಎಂದು ಹೇಳುತ್ತಿದ್ದರೂ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯಿಸಿರೆಳೆದಿದ್ದಾರೆ.