ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ವೈರಲ್ ವಿಡಿಯೋ : ಮದುವೆಗೆ ತಿಂಗಳಿರುವಾಗ ಕೋಮಾಗೆ ಜಾರಿದ ವರ ಮುಂದೇನಾಯಿತು

Posted by Vidyamaana on 2023-09-27 17:15:13 |

Share: | | | | |


ವೈರಲ್ ವಿಡಿಯೋ : ಮದುವೆಗೆ ತಿಂಗಳಿರುವಾಗ ಕೋಮಾಗೆ ಜಾರಿದ ವರ ಮುಂದೇನಾಯಿತು

Love Marriage: ವ್ರೀನಿ ಖನ್ನಾ ಮತ್ತು ಹಿತೇನ್​ ಎಂಟು ವರ್ಷ ಪ್ರೀತಿಸಿದ ನಂತರ ಮದುವೆ ತಯಾರಿ ನಡೆಸಿದರು. ಮದುವೆ ಇನ್ನೇನು ಒಂದು ತಿಂಗಳಿದೆ ಎನ್ನುವಾಗ ಹಿತೇನ್​ ಭೀಕರ ರಸ್ತೆ ಅಪಘಾತಕ್ಕೆ ಒಳಗಾದ. ಮೆದುಳು ತೀವ್ರವಾಗಿ ಗಾಯಗೊಂಡಿದ್ದರಿಂದ ಕೋಮಾಗೆ (Coma) ಜಾರಿಬಿಟ್ಟ. ವೈದ್ಯರು ಬದುಕುಳಿಯುವುದು ಕಷ್ಟ ಎಂದರು. ಆದರೂ ಅದೃಷ್ಟವಶಾತ್ ವೈದ್ಯೋಪಚಾರ ಮತ್ತು ವ್ರೀನಿಯ ಸತತ ಪ್ರೀತಿ, ಆರೈಕೆಯಲ್ಲಿ 3 ತಿಂಗಳುಗಳ ನಂತರ ಕೋಮಾದಿಂದ ಹೊರಬಂದ. ಈ ವೇಳೆಗೆ ಬರೋಬ್ಬರಿ 30 ಕಿ. ಗ್ರಾಂ ತೂಕ ಕಳೆದುಕೊಂಡಿದ್ದ. ಆದರೆ ಇವನನ್ನೇ ಮದುವೆಯಾಗುವುದು ಎಂದು ವ್ರೀನಿ ಹಠ ತೊಟ್ಟಿದ್ದಳು. ಇವನೊಂದಿಗೆ ಮದುವೆ ಬೇಡ ಎಂದು ಆಕೆಯ ಮನೆಯವರೆಲ್ಲ ಬುದ್ಧಿ ಹೇಳಿದರು. ನಂತರ 2022ರ ಜು. 6ರಂದು ಇವರಿಬ್ಬರ ಮದುವೆ ನಡೆಯಿತು.ನಾಲ್ಕು ಗಂಟೆಗಳ ಹಿಂದೆಯಷ್ಟೇ officialpeopleofindia ಎಂಬ ಇನ್​ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ ಈ ವಿಡಿಯೋವನ್ನು ಈತನಕ ಸುಮಾರು 1.7 ಲಕ್ಷ ಜನರು ಲೈಕ್ ಮಾಡಿದ್ದಾರೆ. ಸಾವಿರಾರು ಜನರು ವ್ರೀನಿ ಮತ್ತು ಹಿತೇನ್​ ದಂಪತಿಯನ್ನು ಅಭಿನಂದಿಸಿದ್ದಾರೆ. ವ್ರಿನಿಯ ತಾಳ್ಮೆ ಮತ್ತು ಪ್ರೀತಿಯನ್ನು ಶ್ಲಾಘಿಸಿದ್ದಾರೆ.


ವ್ರೀನಿ ಹಿತೇನ್ ಪಯಣ

ವಿಡಿಯೋ ನೋಡಲು ಕ್ಲಿಕ್ ಮಾಡಿ 

ವೈರಲ್ ವಿಡಿಯೋ : ಮದುವೆಗೆ ತಿಂಗಳಿರುವಾಗ ಕೋಮಾಗೆ ಜಾರಿದ ವರ


ತನ್ನ ಹುಡುಗ/ಗಂಡನಿಗಾಗಿ ಹೆಣ್ಣುಮಕ್ಕಳು ಯಾವಾಗಲೂ ಟೊಂಕ ಕಟ್ಟಿ ನಿಲ್ಲುತ್ತಾರೆ ಎಂದಿದ್ದಾರೆ ಒಬ್ಬರು. ಜಗತ್ತಿನಲ್ಲಿ ಪ್ರೀತಿಯೇ ಎಲ್ಲದಕ್ಕಿಂತ ದೊಡ್ಡ ಶಕ್ತಿ. ವೈದ್ಯರೂ ಕೈಚೆಲ್ಲಿದಾಗ ನೀವು ಅವರನ್ನು ಬದುಕಿಸಿಕೊಂಡಿರಿ ಎಂದಿದ್ದಾರೆ ಇನ್ನೊಬ್ಬರು. ಈ ವಿಡಿಯೋ ನೋಡಿ ನಾನು ಅಳುತ್ತಿದ್ದೇನೆ, ಸ್ವಾರ್ಥ ಬಯಸುವ ಅನೇಕರನ್ನು ನೋಡಿದ್ದೇನೆ. ಆದರೆ ನಿಮ್ಮಂಥ ಹೆಣ್ಣುಮಗಳು ನಿಜಕ್ಕೂ ಅಪರೂಪ, ನಿಮಗಿಬ್ಬರಿಗೂ ಒಳಿತಾಗಲಿ ಎಂದಿದ್ದಾರೆ ಮತ್ತೊಬ್ಬರು.ನಿಮ್ಮ ಜಾಗದಲ್ಲಿ ನನ್ನನ್ನು ನಾನು ನಿಲ್ಲಿಸಿಕೊಂಡು ನೋಡಿದೆ, ನನಗರಿವಿಲ್ಲದೇ ನನ್ನ ಕಣ್ಣಿಂದ ನೀರು ಇಳಿಯುತ್ತಿವೆ ಎಂದಿದ್ಧಾರೆ ಒಬ್ಬರು. ನಿಮ್ಮ ಈ ವಿಡಿಯೋ ನೋಡಿ ಮೈನವಿರೆದ್ದಿತು, ತುಂಬಾ ಅಪರೂಪದ ಜೋಡಿ ನಿಮ್ಮದು, ನಿಮ್ಮ ಆರೋಗ್ಯ ಸುಧಾರಿಸಲಿ ಎಂದಿದ್ದಾರೆ ಅನೇಕರು.

ನೆಲ್ಯಾಡಿ : ದ.ಕ. ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ 9ನೇ ಶಾಖೆ ಉದ್ಘಾಟನೆ

Posted by Vidyamaana on 2023-09-18 15:36:23 |

Share: | | | | |


ನೆಲ್ಯಾಡಿ : ದ.ಕ. ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ 9ನೇ ಶಾಖೆ ಉದ್ಘಾಟನೆ

ನೆಲ್ಯಾಡಿ : ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ 9ನೇ ಶಾಖೆಯು ನೆಲ್ಯಾಡಿ ರಬ್ಬರ್ ಸೊಸೈಟಿ ಬಳಿ ಸೈಂಟ್ ಮೇರೀಸ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು.



ಉದನೆ ಸಂತ ಅಂತೋನೀಸ್ ವಿದ್ಯಾಸಂಸ್ಥೆಯ ಸಂಚಾಲಕರಾದ ರೆ.ಫಾ. ಹನಿ ಜೇಕಬ್ ರವರು ಶಾಖೆಯ ಕಚೇರಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.



ಸಭಾ ಕಾರ್ಯಕ್ರಮವನ್ನು ಬೆಳಾಲು ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.



ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಾಲಕೃಷ್ಣ ಬಾಣಜಾಲು, ಕೌಕ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೋಕೇಶ್ ಬಾಣಜಾಲು, ನೆಲ್ಯಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಲಾಂ ಬಿಲಾಲ್, ಸಂಘದ ಅಧ್ಯಕ್ಷರಾದ ಕುಸುಮಾಧರ್ ಎಸ್.ಕೆ., ಸಂಘದ ಉಪಾಧ್ಯಕ್ಷರಾದ ಗಿರಿಧರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಎ. ಉಪಸ್ಥಿತರಿದ್ದರು.


ನವ್ಯ ಸ್ವಾಗತಿಸಿದರು. ಚೇತನ್ ಎ. ಪ್ರಾಸ್ತಾವಿಕವಾಗಿ ಮಾತನಾಡಿದರು. ಅರ್ಪಣಾ ವಂದಿಸಿದರು. ಡಾ. ರಾಜೇಶ್ ಬೆಜ್ಜಂಗಳ ನಿರೂಪಿಸಿದರು.

ಯುವ ಕ್ರಿಕೆಟಿಗ ಮಂಜು ನಾಯ್ಕಾಪು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!!! ಎದೆ ಮೇಲೆ ಬ್ಯಾಟ್ ಇಟ್ಟು ಚಿತೆಗೆ ಅಗ್ನಿಸ್ಪರ್ಶ!!

Posted by Vidyamaana on 2024-06-09 11:35:00 |

Share: | | | | |


ಯುವ ಕ್ರಿಕೆಟಿಗ ಮಂಜು ನಾಯ್ಕಾಪು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!!! ಎದೆ ಮೇಲೆ ಬ್ಯಾಟ್ ಇಟ್ಟು ಚಿತೆಗೆ ಅಗ್ನಿಸ್ಪರ್ಶ!!

ದಕ್ಷಿಣ ಕನ್ನಡ, ಕಾಸರಗೋಡಿನಲ್ಲಿ ಉತ್ತಮ ಕ್ರಿಕೆಟ್ ಆಟಗಾರ ಎಂದೇ ಗುರುತಿಸಿಕೊಂಡಿದ್ದ, ಕುಂಬ್ಳೆಯ ನಾಯ್ಕಾಪು ನಿವಾಸಿ ಮಂಜು (24 ವ.) ಶನಿವಾರ ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ ಬೆಳಿಗ್ಗೆ ಕಂಡುಬಂದಿದ್ದಾರೆ.

ಲಂಚ ಕೇಳಿದ್ದಕ್ಕೂ, ಪಡೆದಿದ್ದಕ್ಕೂ ಸಾಕ್ಷ್ಯ ಬೇಕು: ಹೈಕೋರ್ಟ್‌

Posted by Vidyamaana on 2024-01-03 07:33:20 |

Share: | | | | |


ಲಂಚ ಕೇಳಿದ್ದಕ್ಕೂ, ಪಡೆದಿದ್ದಕ್ಕೂ ಸಾಕ್ಷ್ಯ ಬೇಕು: ಹೈಕೋರ್ಟ್‌

ಬೆಂಗಳೂರು : ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸುವ ಸಂದರ್ಭದಲ್ಲಿ ಬೇಡಿಕೆ ಮತ್ತು ಸ್ವೀಕಾರ ಕುರಿತು ಸ್ಪಷ್ಟ ಪುರಾವೆಗಳಿರಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಗದಗದ ನಿವೃತ್ತ ಸಬ್ ರಿಜಿಸ್ಟ್ರಾರ್ ಶ್ರೀಕಾಂತ್‌ ವಿರುದ್ಧ ಎಸಿಬಿ ಪೊಲೀಸರು ದಾಖಲಿಸಿದ್ದ ಲಂಚ ಪ್ರಕರಣವನ್ನು ರದ್ದುಪಡಿಸಿದೆ.ಲಂಚ ಸ್ವೀಕಾರ ಆರೋಪದ ಮೇಲೆ ತಮ್ಮ ವಿರುದ್ಧ ಎಸಿಬಿ ಪೊಲೀಸರು ದಾಖಲಿಸಿದ್ದ ಪ್ರಕರಣ ರದ್ದುಪಡಿಸುವಂತೆ ಕೋರಿ ಶ್ರೀಕಾಂತ್ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸೆಕ್ಷನ್ 7(ಎ) ಪ್ರಕಾರ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ದಾಳಿ ನಡೆಸುವಂತಹ ಸಂದರ್ಭದಲ್ಲಿ ಆರೋಪಿ ಸರ್ಕಾರಿ ಅಧಿಕಾರಿ ಮುಂದೆ ಕೆಲಸ ಬಾಕಿಯಿದ್ದು, ಅದನ್ನು ನಿರ್ವಹಿಸಲು ಅವರು ಲಂಚಕ್ಕಾಗಿ ಬೇಡಿಕೆ ಇಟ್ಟಿರಬೇಕಾಗುತ್ತದೆ ಹಾಗೂ ಲಂಚ ಸ್ವೀಕರಿಸಿರಬೇಕಾಗುತ್ತದೆ. ಆಗಷ್ಟೇ ಆರೋಪ ಸಾಬೀತುಪಡಿಸಲು ಸಾಧ್ಯವಿದೆ ಎಂದು ಪೀಠ ಹೇಳಿದೆ.


ಈ ಪ್ರಕರಣದಲ್ಲಿ ಸಬ್‌ ರಿಜಿಸ್ಟ್ರಾರ್‌ ಕಚೇರಿಯ ಶೋಧನೆ ನಡೆಸಿದ್ದ ಎಸಿಬಿ ತನಿಖಾಧಿಕಾರಿಗಳು ಅರ್ಜಿದಾರರ ಕೈಯಲ್ಲಿದ್ದ 9,390 ರು. ಮತ್ತು ಅವರ ಜೇಬಿನಿಂದ 50 ರು. ವಶಕ್ಕೆ ಪಡೆದುಕೊಂಡಿದ್ದರು. ಆ ಮೊತ್ತವನ್ನು ಕಚೇರಿಯಲ್ಲಿ ದಾಖಲೆಗಳ ನೋಂದಣಿಗಾಗಿ ಶುಲ್ಕ ಸ್ವೀಕರಿಸಲಾಗಿದೆ ಎಂದು ಅರ್ಜಿದಾರರು ವಿವರಿಸಿದ್ದಾರೆ. ಹೀಗಿರುವಾಗ ಅರ್ಜಿದಾರರು ಬೇಡಿಕೆಯಿಟ್ಟು ಲಂಚ ಸ್ವೀಕರಿಸಿದ್ದಾರೆ ಎಂಬ ಅಂಶ ನಿಗೂಢವಾಗಿದೆ.ಮೇಲಾಗಿ ಎಸಿಬಿ ಅಧಿಕಾರಿಗಳು ಶೋಧನೆ ವೇಳೆ ಅರ್ಜಿದಾರರು ಬೇಡಿಕೆಯಿಟ್ಟ ಲಂಚ ಸ್ವೀಕರಿಸಿದ ಘಟನೆಯ ಪಂಚನಾಮೆ ಮಾಡಿಲ್ಲ. ಆದ್ದರಿಂದ ಪ್ರಕರಣ ವಿಚಾರಣೆಗೆ ಮುಂದುವರೆಸಿದರೆ ಕಾನೂನಿನ ದುರ್ಬಳಕೆಯಾಗಲಿದೆ ಎಂದು ಅಭಿಪ್ರಾಯಪಟ್ಟು ಅರ್ಜಿದಾರರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದೆ. ಪ್ರಕರಣದ ವಿವರ:


ಗದಗ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸಿಬ್ಬಂದಿ ಸಾರ್ವಜನಿಕರ ಕೆಲಸ ನಿರ್ವಹಣೆಗಾಗಿ ಲಂಚಕ್ಕೆ ಬೇಡಿಕೆಯಿಡುತ್ತಿದ್ದಾರೆ. ಹೀಗಾಗಿ, ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಸತ್ಯಾಂಶ ಪರಿಶೀಲಿಸಬೇಕು ಹಾಗೂ ಅಗತ್ಯ ಕ್ರಮ ಜರುಗಿಸಬೇಕು ಎಂದು ಕೋರಿ 2019ರಲ್ಲಿ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಡಿವೈಎಸ್‌ಪಿಗೆ ಅನಾಮಧೇಯ ದೂರು ಸಲ್ಲಿಕೆಯಾಗಿತ್ತು. ಈ ಸಂಬಂಧ ಕ್ರಿಮಿನಲ್‌ ಪ್ರಕರಣ ದಾಖಲಿಸಿಕೊಂಡಿದ್ದ ಎಸಿಬಿ ಪೊಲೀಸರು, ಗದಗ ಸಬ್‌ ರಿಜಿಸ್ಟ್ರಾರ್‌ ಕಚೇರಿಗೆ ಭೇಟಿ ನೀಡಿ ಶೋಧಿಸಿದ್ದರು. ಈ ವೇಳೆ ಅರ್ಜಿದಾರರ ಕೈಯಲ್ಲಿ 9,390 ರು. ಇದ್ದವು. ಆ ಹಣ ವಶಪಡಿಸಿಕೊಂಡಿದ್ದ ಎಸಿಬಿ ಪೊಲೀಸರು, ಶ್ರೀಕಾಂತ್‌ ವಿರುದ್ಧ ಲಂಚಕ್ಕೆ ಬೇಡಿಕೆಯಿಟ್ಟ ಹಾಗೂ ಲಂಚ ಸ್ವೀಕರಿಸಿದ ಆರೋಪದ ಮೇಲೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯ ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿತ್ತು. ಅದನ್ನು ಪ್ರಶ್ನಿಸಿ ಶ್ರೀಕಾಂತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು

ಮೋದಿ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ ಪ್ರಿಯಾಂಕಾ ಗಾಂಧಿ ಎಂಟ್ರಿ: ಯಾವಾಗ, ಎಲ್ಲಿ ಪ್ರಚಾರ?

Posted by Vidyamaana on 2024-04-16 21:44:15 |

Share: | | | | |


ಮೋದಿ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ  ಪ್ರಿಯಾಂಕಾ ಗಾಂಧಿ ಎಂಟ್ರಿ: ಯಾವಾಗ, ಎಲ್ಲಿ ಪ್ರಚಾರ?

ಬೆಂಗಳೂರು : ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಕರ್ನಾಟಕಕ್ಕೆ ಆಗಮಿಸಲಿದ್ದು, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ

ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ರಾಜ್ಯಕ್ಕೆ ಮೊದಲ ಬಾರಿ ಭೇಟಿ ನೀಡುತ್ತಿದ್ದಾರೆ.

ಮಹಿಳೆಯರೇ ಗಮನಿಸಿ: ಗೃಹಲಕ್ಷ್ಮಿ ಯೋಜನೆಯ ಮತ್ತೊಂದು ಅಪ್ಡೇಟ್ : ಮಿಸ್‌ ಮಾಡ್ದೇ ಓದಿ!

Posted by Vidyamaana on 2024-03-08 12:49:54 |

Share: | | | | |


ಮಹಿಳೆಯರೇ ಗಮನಿಸಿ: ಗೃಹಲಕ್ಷ್ಮಿ ಯೋಜನೆಯ ಮತ್ತೊಂದು ಅಪ್ಡೇಟ್ : ಮಿಸ್‌ ಮಾಡ್ದೇ ಓದಿ!

ಬೆಂಗಳೂರು : ಮಹಿಳೆಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಗೃಹಲಕ್ಷ್ಮಿ ಯೋಜನೆಯ ಇನ್ನೊಂದು ಬಿಗ್ ಅಪ್ಡೇಟ್ ಸುದ್ದಿ ಮಿಸ್ ಏನಾಪ್ಪಾ ಅಂದ್ರೆ ಗೃಹ ಲಕ್ಷ್ಮಿ ಯೋಜನೆಯ ಹಣ ಯಾರ ಖಾತೆಗೆ ಜಮಾ ಆಗುತ್ತಿಲ್ಲವೋ ಅವರ ಸಮಸ್ಯೆಯನ್ನು ಪರಿಹರಿಸಲು ಅಧಿಕಾರಿಗಳು ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.ಬ್ಯಾಂಕ್ ಖಾತೆಯಲ್ಲಿ ಸಮಸ್ಯೆ ಇದ್ದರೆ ಅಂತವರಿಗೆ ಅಂಚೆ ಇಲಾಖೆಯಲ್ಲಿ ಖಾತೆ ತೆರೆಸಿ ಆ ಖಾತೆಗೆ ಹಣ ಜಮಾ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಇನ್ನು ಗೃಹಿಣಿಯ ಸಮಸ್ಯೆಯ ಪರಿಹಾರಕ್ಕೆ ಅಧಿಕಾರಿಗಳನ್ನು ನೇಮಿಸಿರುವುದರ ಜೊತೆಗೆ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರು ಗೃಹಿಣಿಯರ ಜೊತೆ ನಿಂತು ಅವರ ಸಮಸ್ಯೆ ನಿವಾರಿಸಿ ಹಣ ಜಮಾ ಮಾಡಿಕೊಡುವಂತೆ ಸರ್ಕಾರ ಸೂಚಿಸಿದೆ. ಆಯಾ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಮಸ್ಯೆ ಇದ್ದವರ ಜೊತೆಗೆ ಹೋಗಿ ಸಮಸ್ಯೆ ಪರಿಹರಿಸಲಿದ್ದಾರೆ.

ಆದಷ್ಟು ಬೇಗ ಗೃಹ ಲಕ್ಷ್ಮಿ ಯೋಜನೆಯ ಎಲ್ಲ ಲೋಪದೋಷಗಳು ನಿವಾರಣೆ ಆಗಲಿದೆ. ಫಲಾನುಭವಿಗಳ ಸಮಸ್ಯೆಯನ್ನು ಪರಿಹರಿಸಲು ಸದ್ಯ ಸರ್ಕಾರವೇ ಮುಂದೆ ಬಂದಿದೆ. ಫಲಾನುಭವಿಗಳ ಸಮಸ್ಯೆ ಪರಿಹಾರವಾದ ಎಲ್ಲ ಕಂತುಗಳ ಹಣವನ್ನು ಸರ್ಕಾರ ಒಂದೇ ಬಾರಿಗೆ ಜಮಾ ಮಾಡಲಿದೆ ಎನ್ನಲಾಗುತ್ತಿದೆ.



Leave a Comment: