ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಸುದ್ದಿಗಳು News

Posted by vidyamaana on 2024-07-25 06:35:41 |

Share: | | | | |


ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ತ್ರಿಬಲ್ ರೈಡ್ ನಲ್ಲಿ ಬಂದ ಯುವಕರಿಗೆ ಪಿಎಸ್ ಐ ಬುದ್ದಿವಾದ ಹೇಳಿದ ಘಟನೆ ನಡೆದಿದೆ. ತ್ರಿಬಲ್ ರೈಡ್ ಮೂಲಕ ಕಾಲೇಜ್ ಅಡ್ಮಿಷನ್ ಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಇಳಕಲ್ ನಗರ ಠಾಣಾ ಮಹಿಳಾ ಪಿಎಸ್‌ಐ ಎಸ್.ಆರ್.ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.

ಆದ್ರೆ, ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ದುಡ್ಡು ಕೊಟ್ಟಿದ್ದಾನೆ.

ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್‌ಐ ಅಪ್ಪಿಕೊಂಡು ಸಾಂತ್ವನ ತಿಳಿಸಿ, ತಮ್ಮ ಬಳಿಯಿದ್ದ ದಂಡದ ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್, ಸ್ಕೂಟರ್ ಕೊಡುವ ಮುನ್ನ ಹತ್ತು ಬಾರಿ ಎಚ್ಚರ ವಹಿಸಿ ಎಂದು ಮಹಿಳಾ ಪಿಎಸ್‌ಐ ಹೇಳಿದ್ದಾರೆ.

 Share: | | | | |


ಬನ್ನೂರು : ಧರೆ ಕುಸಿತ ಮನೆ ಹಾನಿ ಘಟನಾ ಸ್ಥಳಕ್ಕೆ ಕಾಂಗ್ರೆಸ್ ಮುಖಂಡ ಪ್ರಸನ್ನ ಶೆಟ್ಟಿ ಸಿಝ್ಲರ್ ಭೇಟಿ

Posted by Vidyamaana on 2024-06-27 11:47:40 |

Share: | | | | |


ಬನ್ನೂರು : ಧರೆ ಕುಸಿತ ಮನೆ ಹಾನಿ ಘಟನಾ ಸ್ಥಳಕ್ಕೆ ಕಾಂಗ್ರೆಸ್ ಮುಖಂಡ ಪ್ರಸನ್ನ ಶೆಟ್ಟಿ ಸಿಝ್ಲರ್ ಭೇಟಿ

ಪುತ್ತೂರು; ಬನ್ನೂರು ಜೈನರ ಗುರಿಯಲ್ಲಿ ಧರೆ ಕುಸಿದು ಮನೆ ಹಾನಿಗೊಂಡು ಮನೆ ಮಂದಿ ಅಪಾಯದಿಂದ ಪಾರಾದ ಘಟನೆ ಗುರುವಾರ ನಡೆದಿದ್ದು ಘಟನಾ ಸ್ಥಳಕ್ಮೆ ಕಾಂಗ್ರೆಸ್ ಮುಖಂಡರಾದ ಪ್ರಸನ್ನ ಶೆಟ್ಟಿ ಸಿಝ್ಲರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಸಕರ ಸೂಚನೆಯ‌ಮೇರೆಗೆ ಪ್ರಸನ್ನ ಅವರು ಭೇಟಿ ನೀಡಿದ್ದು ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿದ್ದು ಶಾಸಕರು ಬೆಂಗಳೂರಿಂದ ಆಗಮಿಸಿದ ತಕ್ಷಣ



ಬೆಂಗಳೂರು: ಮನೆಯಲ್ಲಿದ್ದ ಮಹಿಳೆ ಬೆತ್ತಲೆ ಶವವಾಗಿ ಪತ್ತೆ

Posted by Vidyamaana on 2024-04-20 20:38:39 |

Share: | | | | |


ಬೆಂಗಳೂರು: ಮನೆಯಲ್ಲಿದ್ದ ಮಹಿಳೆ ಬೆತ್ತಲೆ ಶವವಾಗಿ ಪತ್ತೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮನೆಯಲ್ಲಿದ್ದ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟನಲ್ಲಿ ಘಟನೆ ನಡೆದಿದೆ.ಕೊಲೆಯಾದ ಮಹಿಳೆಯನ್ನು ಶೋಭಾ ಎಂದು ಗುರುತಿಸಲಾಗಿದೆ.

ಶೋಭಾ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಮದುವೆ ಮಾಡಿ ಕೊಟ್ಟಿದದ್ದ ಶೋಭಾ,ಭದ್ರಪ್ಪ ಲೇಔಟ್ ಮನೆಯಲ್ಲಿ ಕುಟುಂಬ ಸಮೇತ ವಾಸವಿದ್ದರು. ಮನೆಯಲ್ಲಿ ಆಗಾಗ್ಗೆ ಒಬ್ಬರೇ ಇರುತ್ತಿದ್ದರು

ಪುತ್ತೂರು ನಗರಸಭೆ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್

Posted by Vidyamaana on 2023-12-24 15:14:10 |

Share: | | | | |


ಪುತ್ತೂರು ನಗರಸಭೆ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ  ಪರ ಪ್ರಚಾರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್

ಪುತ್ತೂರು: ಪುತ್ತೂರು ನಗರಸಭೆಯ ಎರಡು ವಾರ್ಡ್ ಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಎರಡು ಕ್ಷೇತ್ರಗಳಲ್ಲಿ ಮೂರು ನಾಮ ಪತ್ರಗಳು ಸಲ್ಲಿಕೆಯಾಗಿದ್ದು ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ಕಾಂಗ್ರೆಸ್‌ ಮಧ್ಯೆ ಇದ್ದ ಸ್ಪರ್ಧೆ ಕಳೆದ ವಿಧಾನ ಸಭಾ ಚುನಾವಣೆ ಬಳಿಕ ಪಕ್ಷೇತರ ಅಭ್ಯರ್ಥಿ ಮತ್ತು ಕಾಂಗ್ರೆಸ್‌ ಮಧ್ಯೆ ಎಂಬಂತಾಗಿದೆ.


ಪುತ್ತೂರಿನಲ್ಲಿ ಈ ಹಿಂದಿನ ಪ್ರಾಬಲ್ಯ ಮರಳಿ ಪಡೆಯುವ ಸಲುವಾಗಿ ಬಿಜೆಪಿಗೆ ಈ ಚುನಾವಣೆ ಪ್ರತಿಷ್ಠೆಯಾಗಿದೆ. ಅದಕ್ಕಾಗಿ ಸ್ವತಃ ಸಂಸದ ನಳಿನ್ ಕುಮಾರ್ ಕಟೀಲ್ ಫೀಲ್ಡ್ ಗೆ ಧುಮುಕಿದ್ದಾರೆ.


ವಾರ್ಡ್ ನಂಬರ್ 11 ನೆಲ್ಲಿಕಟ್ಟೆ ಭಾಜಪಾ ಅಭ್ಯರ್ಥಿ ರಮೇಶ್ ನೆಲ್ಲಿಕಟ್ಟೆ ಅವರ ಗೆಲುವಿಗಾಗಿ ಬ್ರಹ್ಮನಗರ ದುರ್ಗಾ ಮಾರಿಯಮ್ಮ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಿದರು.ವಾರ್ಡ್ ನಂಬರ್ 1 ಕಬಕ ಭಾಜಪಾ ಅಭ್ಯರ್ಥಿ ಸುನೀತಾ ಅವರ ಗೆಲುವಿಗಾಗಿ ಕಲ್ಲೇಗ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ಮಂಗಳೂರು ಸಂಸದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಂಜೀವ ಮಠಂದೂರು ಸಹಿತ ಹಲವು ಮುಖಂಡರು ಭಾಗವಹಿಸಿದರು.

ಮಾಣಿ_ಪುತ್ತೂರು ರಾ. ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ

Posted by Vidyamaana on 2023-06-07 12:46:08 |

Share: | | | | |


ಮಾಣಿ_ಪುತ್ತೂರು ರಾ. ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ

ಪುತ್ತೂರು; ಮಾಣಿ-ಮೈಸೂರು ರಾ. ಹೆದ್ದಾರಿ ೨೫೭ರ ಮಾಣಿಯಿಂದ ಪುತ್ತೂರು ತನಕ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ರಾ. ಹೆದ್ದಾರಿ ವಿಭಾಗದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಅಧಿಕಾರಿಗಳ ಮೂಲಕ ಕೇಂದ್ರ ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ದಕ್ಷಿಣ ಭಾರತ ಪ್ರಾಂತೀಯ (ನ್ಯಾಷನಲ್ ಹೈವೇ ಸೌತ್ ಇಂಡಿಯಾ ಝೋನ್) ಅಧಿಕಾರಿ ಮಹೇಂದ್ರ ಶರ್ಮ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಾನಿಯಿಂದ ಪುತ್ತೂರು ತನಕ ಚತುಷ್ಪಥ ಕಾಮಗಾರಿ ಆರಂಭದಲ್ಲಿ ನಡೆಸುವಂತೆ ಮತ್ತು ಕಾಮಗಾರಿಯನ್ನು ಪ್ರಸಕ್ತ ಸಾಲಿನ ವಾರ್ಷಿಯ ಯೋಜನೆಯಲ್ಲಿ ಸೇರಿಸಿಕೊಳ್ಳುವಂತೆಯೂ ಮನವಿ ಮಾಡಿದ್ದಾರೆ. ಪ್ರಸಕ್ತ ಸಾಲಿನ ವಾರ್ಷಿಕ ಯೋಜನೆಯಲ್ಲಿ ಸೇರಿಸಿಕೊಂಡಲ್ಲಿ ಮಾತ್ರ ಮುಂದಿನ ಅವಧಿಗೆ ಈ ಕಾಮಗಾರಿಗೆ ಚಾಲನೆ ದೊರೆಯಬಹುದಾಗಿದ್ದು ಇಲ್ಲವಾದಲ್ಲಿ ಇನ್ನಷ್ಟು ದಿನ ಕಾಯಬೇಕಾದ ಅನಿವಾರ್ಯತೆ ಉಂಟಾಗಬಹುದು. ಈ ಕಾರಣಕ್ಕೆ ಪ್ರಸಕ್ತ ಸಾಲಿನಲ್ಲೇ ಈ ಬೇಡಿಕೆಯನ್ನು ಮಂಡಿಸುವಂತೆ ಶಾಸಕರು ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಶಾಸಕರ ಮನವಿಯನ್ನು ಸ್ವೀಕರಿಸಿದ ಅಧಿಕಾರಿ ಮಹೇಂದ್ರ ಶರ್ಮ ಅವರು ತಮ್ಮ ಬೇಡಿಕೆಯನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡುವುದಾಗಿಯೂ , ಕಾಮಗಾರಿಯ ಬೇಡಿಕೆಯ ಬಗ್ಗೆ ವಿವರಣೆ ನೀಡುವುದಾಗಿಯೂ ಶಾಸಕರಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕರು ಮಾಣಿಯಿಂದ ಪುತ್ತೂರು ತನಕ ಚತುಷ್ಪಥ ರಸ್ತೆ ನಿರ್ಮಾಣವಾದಲ್ಲಿ ಜನರಿಗೆ ಹೆಚ್ಚು ಪ್ರಯೋಜನಕಾರಿಯಾಗಲಿದೆ. ರಾ. ಹೆದ್ದಾರಿಯಾಗಿ ಮಾಣಿ ಮೈಸೂರು ರಸ್ತೆ ಮೇಲ್ದರ್ಜೆಗೇರಿದ್ದರಿಂದ ಚತುಷ್ಪಥ ರಸ್ತೆ ಕಾಮಗಾರಿ ಬೇಡಿಕೆಯನ್ನು ಕೇಂದ್ರ ಸರಕರ ಈಡೇರಿಸಲಿದೆ ಎಂಬ ನಂಬಿಕೆ ಇದೆ. ರಸ್ತೆ ನಿರ್ಮಾಣವಾದಲ್ಲಿ ಈ ಭಾಗದ ಬಹುಕಾಲದ ಬೇಡಿಕೆಯೂ ಈಡೇರಲಿದೆ. ರಸ್ತೆ ನಿರ್ಮಾಣ ಕುರಿತು ಅಧಿಕಾರಿಗಳ ಜೊತೆ ಮಾತನಾಡಿ ಮನವಿಯನ್ನು ನೀಡಿದ್ದೇನೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಅರ್ಜುನನ ಅಂತ್ಯಸಂಸ್ಕಾರ: ನನ್ನ ಆನೆಯನ್ನು ಬದುಕಿಸಿಕೊಡಿ ಕಣ್ಣೀರಿಟ್ಟು ಗೋಳಾಡಿದ ಮಾವುತ

Posted by Vidyamaana on 2023-12-05 13:54:01 |

Share: | | | | |


ಅರ್ಜುನನ ಅಂತ್ಯಸಂಸ್ಕಾರ: ನನ್ನ ಆನೆಯನ್ನು ಬದುಕಿಸಿಕೊಡಿ ಕಣ್ಣೀರಿಟ್ಟು ಗೋಳಾಡಿದ ಮಾವುತ

ಮೈಸೂರು: ಕಾಡಾನೆ ಕಾರ್ಯಾಚರಣೆ ವೇಳೆ ಕಾದಾಟದಲ್ಲಿ ಮೃತಪಟ್ಟ ಅರ್ಜುನ ಆನೆಯನ್ನು ನೆನೆದು ಮಾವುತ ವಿನು ಕಣ್ಣೀರಿಟ್ಟಿದ್ದಾರೆ.


ಅಂತಿಮ ದರ್ಶನದ ವೇಳೆ ಮಾವುತ ವಿನು ಅರ್ಜುನ ಆನೆಯನ್ನ ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದು, ನನ್ನ ಆನೆಯನ್ನ ಬದುಕಿಸಿಕೊಡಿ. ನನ್ನನ್ನೂ ಅರ್ಜುನನ ಜೊತೆ ಮಣ್ಣು ಮಾಡಿ. ನನ್ನ ಆನೆಯನ್ನ ಮೈಸೂರಿಗೆ ಕಳುಹಿಸಿಕೊಡಿ ಅರ್ಜುನ ಸತ್ತಿಲ್ಲ ಎಂದು ಹೆಂಡತಿ ಮಕ್ಕಳಿಗೆ ಹೇಳಿದ್ದೇನೆ ಎಂದು ಕಣ್ಣೀರಿಟ್ಟರು. ಸೋಮವಾರ ಕಾಡಾನೆ ಜೊತೆಗಿನ ಕಾಳಗದಲ್ಲಿ ಮೃತಪಟ್ಟ ಆನೆಯ ಅಂತ್ಯಸಂಸ್ಕಾರಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಜನರು ತಂಡೋಪತಂಡವಾಗಿ ಬಂದು ದರ್ಶನ ಪಡೆಯುತ್ತಿದ್ದಾರೆ.


ಉಕ್ಕಿ ಬರುತ್ತಿದ್ದ ದುಃಖವನ್ನು ತಡೆದುಕೊಳ್ಳಲು ಪ್ರಯತ್ನಿಸಿದರೂ ವಿನುವಿಗೆ ಅಳು ತಡೆಯಲು ಆಗುತ್ತಿಲ್ಲ. ಪದೇ ಪದೇ ಅರ್ಜುನ ಬಳಿ ಹೋಗಿ, ನನ್ನೊಂದಿಗೆ ಬಂದು ಬಿಡು ಎಂದು ಕೇಳಿಕೊಳ್ಳುತ್ತಿರುವುದು ಮನಕಲುಕುವಂತಿತ್ತು.


ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದಲೇ ನಮ್ಮ ಸಾಂಸ್ಕೃತಿಕ ರಾಯಭಾರಿಯಾಗಿದ್ದ ಅರ್ಜುನ ಮೃತಪಟ್ಟಿದ್ದಾನೆ. ಅರಣ್ಯ ಅಧಿಕಾರಿಗಳ ಮೇಲೆ ಕೂಡಲೇ ಕ್ರಮ ಕೈಗೊಳ್ಳಬೇಕು. ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ತುರ್ತು ಚರ್ಚೆ ಮಾಡಬೇಕು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಹೃದಯಾಘಾತದಿಂದ ಭಾರತೀಯ ನೌಕಾಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ನಿಧನ

Posted by Vidyamaana on 2024-08-18 22:06:05 |

Share: | | | | |


ಹೃದಯಾಘಾತದಿಂದ ಭಾರತೀಯ ನೌಕಾಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ನಿಧನ

ನವದೆಹಲಿ: ಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಅವರು ಭಾನುವಾರ ಚೆನ್ನೈನಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಲ್ ಅವರು ಕಳೆದ ವರ್ಷ ಜುಲೈ 19 ರಂದು ಭಾರತೀಯ ಕೋಸ್ಟ್ ಗಾರ್ಡ್ನ 25 ನೇ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಪಾಲ್ ಅವರನ್ನು ಚೆನ್ನೈನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಕೋಸ್ಟ್ ಗಾರ್ಡ್ ಮಹಾನಿರ್ದೇಶಕರು ಚೆನ್ನೈನಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅವರ ಪಾರ್ಥಿವ ಶರೀರವನ್ನು ದೆಹಲಿಗೆ ತರಲು ವ್ಯವಸ್ಥೆ ಮಾಡಲಾಗುತ್ತಿದೆ.

ಪಾಲ್ ಅವರ ನಿಧನವು ಅಕಾಲಿಕ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ ಮತ್ತು ಅವರ ನಾಯಕತ್ವದಲ್ಲಿ ಭಾರತೀಯ ಕರಾವಳಿ ಕಾವಲು ಪಡೆ ಭಾರತದ ಕಡಲ ಭದ್ರತೆಯನ್ನು ಬಲಪಡಿಸುವಲ್ಲಿ ದೊಡ್ಡ ದಾಪುಗಾಲು ಹಾಕಿದೆ ಎಂದು ಹೇಳಿದರು.

Recent News


Leave a Comment: