ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ದಶಕದ ನಂತರ ಐಪಿಎಲ್‌ ಟ್ರೋಫಿಗೆ ಮುತ್ತಿಕ್ಕಿದ ಕೆಕೆಆ‌ರ್! ಕೋಲ್ಕತ್ತಾ ಮಡಿಲು ಸೇರಿದ 3ನೇ ಟ್ರೋಫಿ

Posted by Vidyamaana on 2024-05-26 22:38:18 |

Share: | | | | |


ದಶಕದ ನಂತರ ಐಪಿಎಲ್‌ ಟ್ರೋಫಿಗೆ ಮುತ್ತಿಕ್ಕಿದ ಕೆಕೆಆ‌ರ್! ಕೋಲ್ಕತ್ತಾ ಮಡಿಲು ಸೇರಿದ 3ನೇ ಟ್ರೋಫಿ

ಇಂಡಿಯನ್ ಪ್ರಿಮಿಯರ್ ಲೀಗ್ (IPL 2024) 17ನೇ ಸೀಸನ್‌ನ ಅಂತಿಮ ಪಂದ್ಯವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH vs KKR) ನಡುವೆ ನಡೆಯಿತು. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ಭರ್ಜರಿಯಾಗಿ ಗೆಲ್ಲುವ ಮೂಲಕ 3ನೇ ಬಾರಿಗೆ ಐಪಿಎಲ್‌ ಟ್ರೋಫಿಗೆ ಮುತ್ತಿಕ್ಕಿದೆ.ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಇದಾದ ಬಳಿಕ ಎಸ್‌ಆರ್‌ಎಚ್ ತಂಡ 18.3 ಓವರ್‌ಗೆ 10 ವಿಕೆಟ್ 10 ವಿಕೆಟ್ ನಷ್ಟಕ್ಕೆ 113 ರನ್‌ ಗಳಿಸಿತು. ಈ ಸುಲಭ ಗುರಿ ಬೆನ್ನಟ್ಟಿದ ಕೆಕೆಆರ್ ತಂಡವು 10.3 ಓವರ್‌ಗೆ 2 ವಿಕೆಟ್ ನಷ್ಟಕ್ಕೆ 114 ರನ್‌ ಗಳಿಸುವ ಮೂಲಕ ಭರ್ಜರಿ 8 ವಿಕೆಟ್‌ಗಳ ಗೆಲುವು ದಾಖಲಿಸಿತು.

ವೇಶ್ಯಾವಾಟಿಕೆ ಕೂಲ್ ಪ್ರೊಫೆಶನ್ಎಂದ ಹಾಸ್ಯನಟಿ ವಿದುಷಿ ಸ್ವರೂಪ್ ನೆಟ್ಟಿಗರ ತರಾಟೆ

Posted by Vidyamaana on 2023-10-24 16:56:01 |

Share: | | | | |


ವೇಶ್ಯಾವಾಟಿಕೆ ಕೂಲ್ ಪ್ರೊಫೆಶನ್ಎಂದ ಹಾಸ್ಯನಟಿ ವಿದುಷಿ ಸ್ವರೂಪ್ ನೆಟ್ಟಿಗರ ತರಾಟೆ

ಸ್ಟಾಂಡ್ -ಅಪ್ ಕಾಮಿಡಿಯನ್ ವಿದುಷಿ ಸ್ವರೂಪ್ ವೇಶ್ಯಾವಾಟಿಕೆಯನ್ನು "ಕೂಲ್ ಪ್ರೊಫೆಷನ್" ಎಂದು ಕರೆಯುವ ವೀಡಿಯೊ ವೈರಲ್ ಆದ ನಂತರ ಭಾರಿ ಟ್ರೋಲ್ ಗೆ ಗುರಿಯಾಗಿದ್ದು, ನೆಟ್ಟಿಗರು ಆಕೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಟ್ಯಾಂಡ್-ಅಪ್ ಕಾಮಿಡಿಯನ್ ವಿದುಷಿ ಸ್ವರೂಪ್ ವೇಶ್ಯಾವಾಟಿಕೆಯನ್ನು "ಕೂಲ್ ಪ್ರೊಫೆಶನ್" ಎಂದು ಕರೆಯುವ ವೀಡಿಯೊ ವೈರಲ್ ಆದ ನಂತರ ಭಾರಿ ಟ್ರೋಲ್ ಗೆ ಗುರಿಯಾಗಿದ್ದು, ನೆಟ್ಟಿಗರು ಆಕೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ವಿಡಿಯೋ ಕ್ಲಿಪ್ನಲ್ಲಿ ವಿದುಷಿ ಸ್ವರೂಪ್ ವೇಶ್ಯಾವಾಟಿಕೆಯನ್ನು ಕೂಲ್ ಪ್ರೊಫೆಶನ್ ಎಂದು ಕರೆಯುವ ಮೂಲಕ ತಮ್ಮ ಹಾಸ್ಯ ಕಾರ್ಯಕ್ರಮ ಪ್ರಾರಂಭಿಸಿದ್ದಾರೆ. ಆನಂತರ ವೃತ್ತಿಯಲ್ಲಿನ ಅನುಭವ ಮತ್ತು ಅದು ಉಳಿದವುಗಳಿಂದ ಹೇಗೆ ಭಿನ್ನವಾಗಿದೆ ಎಂಬುದನ್ನು ಹೇಳಿದ್ದಾರೆ. ಇದಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಾನಾ ರೀತಿಯಲ್ಲಿ ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಕೆಲವರು ಆಕೆಯನ್ನು ಬೆಂಬಲಿಸಿದ್ದಾರೆ.

ಸಿಟಿ ಬಸ್ ಚಾಲಕನ ಧಾವಂತ ; ಬಸ್ಸಿನ ಬಾಗಿಲಲ್ಲಿದ್ದ ಕಂಡಕ್ಟರ್ ಹೊರಕ್ಕೆ ಎಸೆಯಲ್ಪಟ್ಟು ಸಾವು !

Posted by Vidyamaana on 2023-08-30 06:28:04 |

Share: | | | | |


ಸಿಟಿ ಬಸ್ ಚಾಲಕನ ಧಾವಂತ ; ಬಸ್ಸಿನ ಬಾಗಿಲಲ್ಲಿದ್ದ ಕಂಡಕ್ಟರ್ ಹೊರಕ್ಕೆ ಎಸೆಯಲ್ಪಟ್ಟು ಸಾವು !

ಮಂಗಳೂರು: ಖಾಸಗಿ ಬಸ್ಸಿನ ಬಾಗಿಲಿನಲ್ಲಿ ನೇತಾಡುತ್ತಿದ್ದ ಬಸ್ ಕಂಡಕ್ಟರ್ ಹೊರಕ್ಕೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಗರದ ನಂತೂರು ವೃತ್ತದಲ್ಲಿ ನಡೆದಿದೆ. 


ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದ್ದು 15 ನಂಬರಿನ ಬಸ್ ಕದ್ರಿ ಕೆಪಿಟಿಯಿಂದ ಬಂದು ನಂತೂರು ವೃತ್ತದಲ್ಲಿ ಸಡನ್ ತಿರುವು ಪಡೆದಿದ್ದು ಎದುರಿನ ಬಾಗಿಲಲ್ಲಿ ನಿಂತಿದ್ದ ಕಂಡಕ್ಟರ್ ಕೆಳಕ್ಕೆ ಎಸೆಯಲ್ಪಟ್ಟಿದ್ದಾನೆ. ಬಸ್ ನಿರ್ವಾಹಕನಾಗಿದ್ದ ಮೂಲತಃ ಬಾಗಲಕೋಟ ಜಿಲ್ಲೆಯ ನಿವಾಸಿ, ಸದ್ಯ ಸುರತ್ಕಲ್ ತಡಂಬೈಲ್ ನಲ್ಲಿ ವಾಸವಿದ್ದ ಈರಯ್ಯ (23) ನೇರವಾಗಿ ರಸ್ತೆಗೆ ಎಸೆಯಲ್ಪಟ್ಟಿದ್ದು ಕೂಡಲೇ ಅಲ್ಲಿದ್ದ ಸ್ಥಳೀಯ ಪೊಲೀಸರು ಮತ್ತು ಸಾರ್ವಜನಿಕರು ಸೇರಿ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.ತಲೆಯ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಕಾರಣ ರಾತ್ರಿ 8 ಗಂಟೆ ಸುಮಾರಿಗೆ ಯುವಕ ಸಾವನ್ನಪ್ಪಿದ್ದಾನೆ. ಇದರ ವಿಡಿಯೋ ಎದುರಿನ ವಾಹನದಲ್ಲಿದ್ದ ಫ್ರಂಟ್ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು ಅದೀಗ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ ವೇಗವಾಗಿ ಚಲಿಸಿದ್ದರಿಂದಲೇ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕಲೆಕ್ಷನ್ ಮಾಡುವ ಮತ್ತು ಟೈಮ್ ಕೀಪಿಂಗ್ ಭರದಲ್ಲಿ ನಗರದ ಖಾಸಗಿ ಬಸ್ ನಿರ್ವಾಹಕರು, ಚಾಲಕರು ಎರ್ರಾಬಿರ್ರಿಯಾಗಿ ವರ್ತಿಸುತ್ತಿದ್ದು ಬಸ್ಸಿನಲ್ಲಿ ಸಿಬಂದಿಯಾಗಿದ್ದ ಯುವಕನೊಬ್ಬ ಬಲಿಯಾಗಿದ್ದಾನೆ.

ಇಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋ ಸ್ಕ್ಯಾನ್ ಲಿವ‌ರ್ ಫಂಕ್ಷನ್ ಟೆಸ್ಟ್ ತಪಾಸಣೆ

Posted by Vidyamaana on 2024-04-03 06:51:43 |

Share: | | | | |


ಇಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋ ಸ್ಕ್ಯಾನ್ ಲಿವ‌ರ್ ಫಂಕ್ಷನ್ ಟೆಸ್ಟ್ ತಪಾಸಣೆ

ಪುತ್ತೂರು:ಇಲ್ಲಿನ ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಸಹಯೋಗದೊಂದಿಗೆ ಏ.3 ರಂದು ಫ್ಯಾಟಿ ಲಿವರ್ (ಲಿವರ್ ನ ಕೊಬ್ಬು) ಇರುವವರಿಗೆ ವಿಶೇಷ ಫೈಬ್ರೋ ಸ್ಕಾನ್ ಹಾಗೂ ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆಯನ್ನು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಮಾಡಲಾಗುವುದು.

ಏ.4 : ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Posted by Vidyamaana on 2024-03-28 14:00:58 |

Share: | | | | |


ಏ.4 : ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಏ.4 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಈವರೆಗೆ ಯಾವ ಪಕ್ಷದಿಂದಲೂ ನಾಮಪತ್ರ ಸಲ್ಲಿಕೆಯಾಗಿಲ್ಲ.

ನಾಮಪತ್ರಗಳನ್ನು ಸಲ್ಲಿಸಲು ಗುರುವಾರ (ಏಪ್ರಿಲ್​ 4) ಕೊನೆಯ ದಿನವಾಗಿದೆ.

ಶುಕ್ರವಾರ (ಏಪ್ರಿಲ್​ 5) ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು.

ನಾಮಪತ್ರಗಳನ್ನು ಹಿಂಪಡೆಯಲು ಸೋಮವಾರ (ಏಪ್ರಿಲ್​ 8) ಕೊನೆಯ ದಿನವಾಗಿದೆ.

ದಕ್ಷಿಣ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್​ 26 ರಂದು ಮತದಾನ ನಡೆಯಲಿದೆ.

ಉತ್ತರ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ

ಮತಗಳ ಎಣಿಕೆ ಮತ್ತು ಫಲಿತಾಂಶ ಜೂನ್​ 4 ರಂದು ಪ್ರಕಟವಾಗಲಿದೆ.

ಮದುವೆ ಒಲ್ಲೆ ಎಂದ ಪ್ರಿಯಕರ - ಬಿಲ್ಡಿಂಗ್ ಏರಿದ ಪ್ರಿಯತಮೆ

Posted by Vidyamaana on 2024-03-19 16:11:46 |

Share: | | | | |


ಮದುವೆ ಒಲ್ಲೆ ಎಂದ ಪ್ರಿಯಕರ - ಬಿಲ್ಡಿಂಗ್ ಏರಿದ ಪ್ರಿಯತಮೆ

ಮೈಸೂರು : ಇನ್‌ಸ್ಟಾಗ್ರಾಂನಲ್ಲಿ(Instagram love) ಲವ್ ಮಾಡಿ ಮದುವೆ ವಿಚಾರ ಬಂದಾಗ ಭಿನ್ನಾಭಿಪ್ರಾಯ ಮೂಡಿದ್ದು ಮಹಿಳೆ ಬಿಲ್ಡಿಂಗ್‌ ಏರಿ ಆತ್ಮಹತ್ಯೆಗೆ(Suicide attempt) ಯತ್ನಿಸಿದ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.ಬಿಹಾರ ಮೂಲದ ವಿವಾಹಿತ ಮಹಿಳೆ ನಾಸೀಂ ಬೇಗಂ (31 ಹಾಗೂ ಅದೇ ರಾಜ್ಯದ ಸದ್ಯ ಹಿಮ್ಮಾವು ಗ್ರಾಮದಲ್ಲಿ ವಾಸವಿರುವ ಅಸಿಬೂರ್ ರೆಹಮಾನ್‌ ನಡುವೆ ಸಾಮಾಜಿಕ ಜಾಲತಾಣದಲ್ಲಿ ಲವ್‌ ಆಗಿದ್ದು , ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಮಹಿಳೆ ರೆಹಮಾನ್‌ನನ್ನು ಭೇಟಿಯಾಗಲಲು ಸೀದಾ ಮೈಸೂರಿಗೆ ಬಂದಿದ್ದಾಳೆ. ಮಹಿಳೆಯನ್ನು ನೋಡುತ್ತಲೇ ಆಸಿಬೂರ್‌ ರೆಹಮಾನ್‌ ವಯಸ್ಸಿನ ಅಂತರ ಹೆಚ್ಚು ಎಂಬ ಕಾರಣ ನೀಡಿ ಮದುವೆಗೆ ಒಲ್ಲೆ ಎಂದಿದ್ದಾನೆ.


ಇದರಿಂದ ಸಿಟ್ಟಾದ ನಾಸೀಂ ಬೇಗಂ ಖಾಸಗಿ ಹೊಟೇಲ್‌ ಬಿಲ್ಡಿಂಗ್ ಏರಿ ಮದುವೆ ಮಾಡಿಕೊಳ್ಳದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ. ಸದ್ಯ ಆಕೆಯನ್ನು ಕೆಳಗೆ ಇಳಿಸಿ ನಂಜನಗೂಡು ಪೊಲೀಸರು ವಶಕ್ಕೆ ಪಡೆದಿದ್ದಾರೆ.



Leave a Comment: