ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ವಿಶ್ವಕಪ್ ಗೆಲ್ಲುವ ಭಾರತದ ಕನಸು ಭಗ್ನ.. ಆಸೀಸ್​ಗೆ ಚಾಂಪಿಯನ್ ಕಿರೀಟ

Posted by Vidyamaana on 2024-02-11 21:38:49 |

Share: | | | | |


ವಿಶ್ವಕಪ್ ಗೆಲ್ಲುವ ಭಾರತದ ಕನಸು ಭಗ್ನ.. ಆಸೀಸ್​ಗೆ ಚಾಂಪಿಯನ್ ಕಿರೀಟ

ದಕ್ಷಿಣ ಆಫ್ರಿಕಾ: ಸಹಾರಾ ಪಾರ್ಕ್ ವಿಲೋಮೂರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 19 ವರ್ಷದೊಳಗಿನವರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಉದಯ್ ಸಹಾರನ್ ನಾಯಕತ್ವದ ಟೀಂ ಇಂಡಿಯಾವನ್ನು ಮಣಿಸಿದ ಆಸ್ಟ್ರೇಲಿಯಾ ಯುವ ಪಡೆ ನಾಲ್ಕನೇ ಬಾರಿಗೆ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.ದಕ್ಷಿಣ ಆಫ್ರಿಕಾದ ಸಹಾರಾ ಪಾರ್ಕ್ ವಿಲೋಮೂರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 19 ವರ್ಷದೊಳಗಿನವರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಉದಯ್ ಸಹಾರನ್ ನಾಯಕತ್ವದ ಟೀಂ ಇಂಡಿಯಾವನ್ನು ಮಣಿಸಿದ ಆಸ್ಟ್ರೇಲಿಯಾ ಯುವ ಪಡೆ ನಾಲ್ಕನೇ ಬಾರಿಗೆ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ನಿಗದಿತ 50 ಓವರ್​ಗಳಲ್ಲಿ 7 ವಿಕೆಟ್‌ಗಳನ್ನು ಕಳೆದುಕೊಂಡು 254 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಭಾರತ ತಂಡ ಮತ್ತೊಮ್ಮೆ ಫೈನಲ್ ಭಯಕ್ಕೆ ತುತ್ತಾಗಿ 174 ರನ್​ಗಳಿಗೆ ಆಲೌಟ್ ಆಗುವ ಮೂಲಕ 79 ರನ್​ಗಳ ಹೀನಾಯ ಸೋಲು ಅನುಭವಿಸಿತು. ಈ ಮೂಲಕ ದಾಖಲೆಯ 6ನೇ ಬಾರಿಗೆ ಚಾಂಪಿಯನ್ ಆಗುವ ಅವಕಾಶದಿಂದ ವಂಚಿತವಾಯಿತು.

ಬಾಡಿಗೆ ಆಸೆಗೆ ಬಿದ್ದು ಕೋಟ್ಯಾಂತರ ರೂ ವೆಚ್ಚದ ಮನೆ, ಫ್ಲಾಟ್ ಕಳೆದುಕೊಂಡ ಮಾಲೀಕರು: ವಂಚಿಸಿ ಪರಾರಿಯಾದ ಆಲಿ ಬೇಗ್

Posted by Vidyamaana on 2024-06-25 07:59:41 |

Share: | | | | |


ಬಾಡಿಗೆ ಆಸೆಗೆ ಬಿದ್ದು ಕೋಟ್ಯಾಂತರ ರೂ ವೆಚ್ಚದ ಮನೆ, ಫ್ಲಾಟ್ ಕಳೆದುಕೊಂಡ ಮಾಲೀಕರು: ವಂಚಿಸಿ ಪರಾರಿಯಾದ ಆಲಿ ಬೇಗ್

ಬೆಂಗಳೂರು, ಜೂನ್​ 24: ಬಾಡಿಗೆ ಆಸೆಗೆ ಬಿದ್ಧ ಮನೆ ಮಾಲೀಕರಿಗೆ ಬ್ರೋಕರ್ (broker) ಕಂಪನಿ ಹೆಸರಲ್ಲಿ ಕೋಟಿ ಕೋಟಿ ರೂ. ಪಂಗನಾಮ (cheated) ಹಾಕಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಜಿಯೂ ಹೋಮ್ಸ್ ಎಂಬ ಕಂಪನಿ ಹೆಸರಲ್ಲಿ ಮನೆಗಳು, ಫ್ಲಾಟ್​ಗಳನ್ನು ಡೀಲ್ ಮಾಡಲಾಗಿದೆ. ಬಾಡಿಗೆಗೆ ಕೊಡಿಸುತ್ತೇನೆ ಎಂದು ಮಧ್ಯಸ್ಥಿಕೆ ವಹಿಸಿದ್ದ ಆಸಾಮಿ ಅಹಮದ್ ಆಲಿ ಬೇಗ್, ಮಾಲೀಕರಿಂದ ಮನೆ ಪಡೆದು ನನ್ನದೇ ಅಂತ ನಂಬಿಸಿ ಲಕ್ಷ ಲಕ್ಷ ರೂ. ಹಣ ಪಡೆದು ಲೀಸ್​ಗೆ ಕೊಟ್ಟಿದ್ದಾರೆ.

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ಬಿದ್ದು ಮಹಿಳೆ ಮೃತ್ಯು

Posted by Vidyamaana on 2023-12-07 04:27:34 |

Share: | | | | |


ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ಬಿದ್ದು ಮಹಿಳೆ ಮೃತ್ಯು

ವಿಟ್ಲ: ಸಾಲೆತ್ತೂರಿನ ತೋಟವೊಂದರಲ್ಲಿ ಮಹಿಳೆಯೊಬ್ಬರು ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ಅಡಿಕೆ ಮರ ಮುರಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.


ಗುಲಾಬಿ(48) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.


ಇವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರವೊಂದು ಆಕಸ್ಮಿಕವಾಗಿ ಮುರಿದು ಬಿದಿದ್ದು, ಇದರಿಂದ ತಲೆಗೆ ತೀವ್ರ ಪೆಟ್ಟಾಗಿದೆ. ಮಹಿಳೆಯನ್ನು ಕೂಡಲೇ ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆಯೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.


ಪ್ರಕರಣದ ಕುರಿತು ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

ಶಾಸಕರ ಇಂದಿನ ಕಾರ್ಯಕ್ರಮ ಜು 30

Posted by Vidyamaana on 2023-07-29 23:18:55 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 30

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜುಲೈ 30 ರಂದು

💥 ಬೆಳಿಗ್ಗೆ 9 ಗಂಟೆಗಡ ಅಜ್ಜಿನಡ್ಕದಲ್ಲಿ ರಕ್ತದಾನ‌ ಶಿಬಿರ

💥10 ಗಂಟೆಗೆ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಟೈಲರ್ಸ್ ಅಸೋಸಿಯೇಶನ್ ಮಹಾಸಭೆ,ಪ್ರತಿಭಾ ಪುರಸ್ಕಾರ

💥12 ಕ್ಕೆ ಮರಾಟಿ ಯುವ ವೇದಿಕೆ ಕೊಂಬೆಟ್ಟು ಇದರ ವತಿಯಿಂದ ಆರ್ಯಾಪು ಮೇಲ್ಮಜಲು ನಲ್ಲಿ ಕೆಸರುಗದ್ದೆ ಕ್ರೀಡಾ ಕೂಟ ಕಾರ್ಯಕ್ರಮ

💥2 ಗಂಟೆಗೆ ಕೋಡಿಂಬಾಡಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸನ್ಮಾನ ಕಾರ್ಯಕ್ರಮ

💥ಸಂಜೆ ಸಾಜದಲ್ಲಿ ಕೆಸರುಡೊಂಜಿ ದಿನ

💥ಸಂಜೆ 6 ಕ್ಕೆ ಪಾಣಾಜೆ ರಣಮಂಗಳ ದೇವಸ್ಥಾನದಲ್ಲಿ ಕಾರ್ತಿಕ ಪೂಜೆಯ ಕಾರ್ಯಕ್ರಮ ದಲ್ಲಿಭಾಗವಹಿಸಲಿದ್ದಾರೆ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಪ್ರಜ್ಞಾನಂದ

Posted by Vidyamaana on 2023-08-31 23:17:17 |

Share: | | | | |


ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಪ್ರಜ್ಞಾನಂದ

ಹೊಸದಿಲ್ಲಿ: ಚೆಸ್ ವಿಶ್ವಕಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಗ್ರ್ಯಾಂಡ್ ಮಾಸ್ಟರ್ ಆರ್​. ಪ್ರಜ್ಞಾನಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿಯ ಲೋಕ ಕಲ್ಯಾಣ್ ಮಾರ್ಗ್​ನಲ್ಲಿರುವ ಪ್ರಧಾನ ಮಂತ್ರಿಯ ನಿವಾಸಕ್ಕೆ ಕುಟುಂಬ ಸಮೇತ ಆಗಮಿಸಿದ ಪ್ರಜ್ಞಾನಂದ, ಮೋದಿ ಅವರೊಂದಿಗೆ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಜ್ಞಾನಂದ, ಸನ್ಮಾನ್ಯ ಪ್ರಧಾನಮಂತ್ರಿಗಳನ್ನು ಅವರ ನಿವಾಸದಲ್ಲಿ ಭೇಟಿಯಾಗಿರುವುದು ದೊಡ್ಡ ಗೌರವ. ನನಗೆ ಮತ್ತು ನನ್ನ ಪೋಷಕರಿಗೆ ಅವರು ನೀಡಿದ ಪ್ರೋತ್ಸಾಹದ ಎಲ್ಲಾ ಮಾತುಗಳಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.


ಈ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಇವತ್ತು ಲೋಕ ಕಲ್ಯಾಣ್ ಮಾರ್ಗ್​ನಲ್ಲಿರುವ ತಮ್ಮ ನಿವಾಸಕ್ಕೆ ವಿಶೇಷ ಅತಿಥಿಗಳು ಆಗಮಿಸಿದ್ದರು. ನಿಮ್ಮ ಕುಟುಂಬದ ಜೊತೆ ನಿಮ್ಮನ್ನು ಭೇಟಿಯಾಗಿದ್ದು ಸಂತೋಷವಾಯಿತು. ನಿಮ್ಮ ಉತ್ಸಾಹ ಮತ್ತು ಪರಿಶ್ರಮವನ್ನು ನೀವು ನಿರೂಪಿಸಿದ್ದೀರಿ. ಭಾರತದ ಯುವಕರು ಯಾವುದೇ ಡೊಮೇನ್ ಅನ್ನು ಹೇಗೆ ಜಯಿಸಬಹುದು ಎಂಬುದಕ್ಕೆ ನೀವು ಉದಾಹರಣೆಯಾಗಿದ್ದೀರಿ. ನಿಮ್ಮ ಬಗ್ಗೆ ಹೆಮ್ಮೆಯಿದೆ ಪ್ರಜ್ಞಾನಂದ ಎಂದು ಟ್ವೀಟ್ ಮಾಡಿದ್ದಾರೆ.ಅಝರ್​ಬೈಜಾನ್​ನಲ್ಲಿ ಆಗಸ್ಟ್ 24 ರಂದು, 18 ವರ್ಷ ವಯಸ್ಸಿನ ಪ್ರಜ್ಞಾನಂದ ಅವರು ಚೆಸ್ ವಿಶ್ವ ಕಪ್ ಫೈನಲ್‌ನಲ್ಲಿ ಪ್ರಸ್ತುತ ವಿಶ್ವದ ನಂಬರ್ ಒನ್ ಮ್ಯಾಗ್ನಸ್ ಕಾರ್ಲ್‌ಸೆನ್‌ ವಿರುದ್ಧ ಟೈಬ್ರೇಕರ್‌ನಲ್ಲಿ ಸೋತಿದ್ದರು. ಈ ಸೋಲಿನ ಬೆನ್ನಲ್ಲೇ ಟ್ವೀಟ್ ಮಾಡುವ ಮೂಲಕ ಪ್ರಧಾನಿ ಯುವ ಚೆಸ್ ತಾರೆಯನ್ನು ಹುರಿದುಂಬಿಸಿದ್ದರು.


FIDE ವಿಶ್ವಕಪ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿ ಪ್ರಜ್ಞಾನಂದನ ಬಗ್ಗೆ ನಾವೆಲ್ಲರೂ ಹೆಮ್ಮೆಪಡುತ್ತೇವೆ! ಅವರು ತಮ್ಮ ಅಸಾಧಾರಣ ಕೌಶಲ್ಯಗಳನ್ನು ಪ್ರದರ್ಶಿಸಿ ಫೈನಲ್‌ನಲ್ಲಿ ಮ್ಯಾಗ್ನಸ್ ಕಾರ್ಲ್‌ಸೆನ್‌ ಅವರಿಗೆ ಕಠಿಣ ಪೈಪೋಟಿ ನೀಡಿದರು. ಇದೇನು ಸಣ್ಣ ಸಾಧನೆಯಲ್ಲ. ಪ್ರಜ್ಞಾನಂದ ಅವರ ಮುಂಬರುವ ಪಂದ್ಯಾವಳಿಗಳಿಗೆ ಶುಭ ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು. ಇದೀಗ ಯುವ ಚೆಸ್ ತಾರೆಯನ್ನು ಪ್ರಧಾನಿ ನಿವಾಸಕ್ಕೆ ಕರೆಸಿ ಮೋದಿ ಕುಶಲೋಪರಿ ನಡೆಸಿದ್ದಾರೆ.

ರಾಜ್ಯಾಧ್ಯಂತ ಕಲರ್‌ ಕಾಟನ್‌ ಕ್ಯಾಂಡಿ ನಿಷೇಧ- ಸಚಿವ ದಿನೇಶ್ ಗುಂಡೂರಾವ್ ಘೋಷಣೆ

Posted by Vidyamaana on 2024-03-11 12:58:02 |

Share: | | | | |


ರಾಜ್ಯಾಧ್ಯಂತ ಕಲರ್‌ ಕಾಟನ್‌ ಕ್ಯಾಂಡಿ ನಿಷೇಧ- ಸಚಿವ ದಿನೇಶ್ ಗುಂಡೂರಾವ್ ಘೋಷಣೆ

ಗಳೂರು:ರಾಜ್ಯಾಧ್ಯಂತ ಕಾಟನ್‌ ಕ್ಯಾಂಡಿ ನಿಷೇಧ ಮಾಡಲಾಗಿದೆ ಅಂತ ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ಅವರು ಹೇಳಿದರು. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಅವರು ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ, ವಿವಿಧ ಕಡೆಗಳಲ್ಲಿ ಎರಡು ಪದಾರ್ಥಗಳಲ್ಲಿ ನ ಸ್ಯಾಂಪಲ್‌ಗಳನ್ನು ಸಂಗ್ರಹಿಸ ಮಾಡಲಾಯಿತು.ಗೋಬಿ ಮಂಚೂರಿಯ 121 ಮಾದರಿಯನ್ನು ಸಂಗ್ರಹ ಮಾಡಲಾಯಿತು. ಇದಲ್ಲದೇ ಇದರಲ್ಲಿ ಎರಡು ವಿಶಕಾರಿ ಅಂಶಗಳು ಪತ್ತೆಯಾಗಿದ್ದು, ಇದರಿಂದ ಇದರ ಸೇವನೆ ಮಾಡುವುದು ಯೋಗ್ಯವಲ್ಲ ಅಂತ ಹೇಳಿದರು. ಇದನ್ನು ದಿನ ನಿತ್ಯ ಸೇವನೆ ಮಾಡುವುದರಿಂದ ಕ್ಯಾನ್ಸರ್ ಬರುವ ಸಂಭವಿದೆ ಅಂಥ ಹೇಳಿದರು. ಇದನ್ನು ಬಳಕೆ ಮಾಡುವುದು ಕಾನೂನು ಬಾಹಿರ ಅಂಥ ಹೇಳಿದರು.


ಮಾದರಿಗಳನ್ನು ಬೇರೆ ಬೇರೆ ಕಡೆ ಸಂಗ್ರಹಿಸಲಾಗಿತ್ತು. 171 ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಲಾಗಿದೆ. ಅದರಲ್ಲಿ ಕೃತಕ ಬಣ್ಣಗಳ ಅಸುರಕ್ಷಿತ ಮಾದರಿಯನ್ನು ಪತ್ತೆ ಹಚ್ಚಿರೋದು 107 ಇದೆ. ಸೋ ಗೋಬಿ ಮಂಚೂರಿನೂ ಮಾಡಿದ್ದೇವೆ, ಕ್ಯಾಂಡಿಯನ್ನೂ ಮಾಡಿದ್ದೇವೆ ಎಂದರು.


ಒಂದು ರೋಡಮೈನ್ ಬೀ, ಇನ್ನೊಂದು ಟಾಟ್ರಾಸೈನ್ ಅಂತ ಅದು ಇವತ್ತು ನಾವು ಈ ಒಂದು ಪದಾರ್ಥಗಳಲ್ಲಿ, ನಮ್ಮ ಸ್ಯಾಂಪಲ್ಲಿನಲ್ಲಿ ಸಿಕ್ಕಿದೆ. ಇದು ನಮ್ಮ ಉಪಯೋಗಕ್ಕೆ ಅನ್ ಸೇಫ್. ರೋಡಮೈನ್ ಬೀ ಕ್ಯಾನ್ಸರ್ ಗೆ ಬರೋದಕ್ಕೆ ಒಂದು ರೀತಿ ಕಾರಣವಾಗುತ್ತದೆ. ಈ ಕೆಮಿಕಲ್ ಅವಕಾಶ ಮಾಡಿಕೊಡುತ್ತದೆ. ವಿಶೇಷವಾಗಿ ಈ ಬಣ್ಣವನ್ನು ಯೂಸ್ ಮಾಡುವ ಹಾಗೋ ಇಲ್ಲ. ಯಾವ ಪದಾರ್ಥಗಳಲ್ಲೂ ಯೂಸ್ ಮಾಡೋ ಹಾಗೇಇಲ್ಲ. ಹಾಗಿದ್ದರೂ ಅದನ್ನು ಸ್ಯಾಂಪಲ್ ಗಳಲ್ಲಿ ಪರೀಕ್ಷೆಯಲ್ಲಿ ಬಳಕೆ ಮಾಡಿರೋದು ಕಂಡು ಬಂದಿದೆ ಎಂದರು.


ಯಾಕೆ ರೋಡಮೈನ್ ಬೀ ಬಳಕೆ ಮಾಡುತ್ತಾರೆ ಅಂದರೇ ಪಿಂಕ್ ಕಲರ್ ಬರೋದಕ್ಕೆ ಬಳಕೆ ಮಾಡುತ್ತಾರೆ. ಈಗ ನಮ್ಮ ಆರೋಗ್ಯ ಇಲಾಖೆಯ ಆಯುಕ್ತರು ಕೂಡ ಸುತ್ತೋಲೆ ಹೊರಡಿಸುತ್ತಾರೆ. ಅದನ್ನು ಬಳಕೆ ಮಾಡುವಂತಿಲ್ಲ. ಬಳಕೆ ಮಾಡಿದ್ರೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.


ಗೋಬಿ ಮಂಚೂರಿ ಇದೊಂದು ಪುಡ್ ಐಟಂ. ಟಾಟ್ರಾಸೈನ್ ಏನಿದೆ ಅದು ಅಪ್ರೂವ್ಡ್ ಆರ್ಟಿಫಿಷಲ್ ಪುಡ್ ಕಲ್ಲರ್. ಕೆಮಿಕಲ್ ಬಳಕೆ ಮಾಡದಂತ ಗೋಬಿಮಂಚೂರಿಯನ್ನು ಬಳಕೆಗೆ ಅವಕಾಶ ನೀಡಲಾಗುತ್ತದೆ. ವಿತ್ ಔಟ್ ಕಲರ್ ಬಳಕೆ ಮಾಡಿರದ ಕ್ಯಾಂಡಿಯನ್ನು ಬಳಕೆ ಮಾಡೋದಕ್ಕೆ ಅವಕಾಶ ನೀಡಲಾಗುತ್ತದೆ. ಅದರ ಹೊರತಾಗಿ ಕಲರ್ ಬಳಕೆ ಮಾಡುವಂತ ಗೋಬಿಮಂಚೂರಿ, ಕ್ಯಾಂಡಿ ನಿಷೇಧ ಮಾಡಲಾಗುತ್ತಿದೆ ಎಂಬುದಾಗಿ ಘೋಷಣೆ ಮಾಡಿದರು



Leave a Comment: